Homeಕರ್ನಾಟಕಒಂದು ರಾಷ್ಟ್ರ, ಒಂದು ಚುನಾವಣೆ: ಬಹುಮತ ಕಳೆದುಕೊಂಡಾಗ ಪರಿಹಾರವೇನು; ಸಿದ್ದರಾಮಯ್ಯ ಪ್ರಶ್ನೆ

ಒಂದು ರಾಷ್ಟ್ರ, ಒಂದು ಚುನಾವಣೆ: ಬಹುಮತ ಕಳೆದುಕೊಂಡಾಗ ಪರಿಹಾರವೇನು; ಸಿದ್ದರಾಮಯ್ಯ ಪ್ರಶ್ನೆ

- Advertisement -
- Advertisement -

ಬೆಂಗಳೂರು: ಒಂದು ರಾಷ್ಟ್ರ, ಒಂದು ಚುನಾವಣೆ (ಒಎನ್‌ಒಇ) ಮಸೂದೆಗೆ ಕೇಂದ್ರ ಸಚಿವ ಸಂಪುಟ ಅನುಮೋದಿಸಿರುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದು, ಈ ಕ್ರಮವು  ಪ್ರಜಾಪ್ರಭುತ್ವ ಮತ್ತು ಭಾರತದ ಒಕ್ಕೂಟ ರಚನೆಯ ಮೇಲಿನ ದಾಳಿ ಎಂದು ಬಣ್ಣಿಸಿದ್ದಾರೆ.

ತಮ್ಮ ಎಕ್ಸ್ ನಲ್ಲಿ ಪೋಸ್ಟ್ ಹಾಕಿರುವ ಅವರು, ಈ ನಿರ್ಧಾರವು ರಾಜ್ಯಗಳ ಹಕ್ಕುಗಳನ್ನು ತಡೆಯುವ ಕೆಟ್ಟ ಪಿತೂರಿಯಾಗಿದೆ. ಪ್ರಸ್ತುತ ಚುನಾವಣಾ ವ್ಯವಸ್ಥೆಗೆ ಸುಧಾರಣೆಗಳ ಅಗತ್ಯವಿರುವ ಸಮಯದಲ್ಲಿ, ಇಂತಹ ಮಸೂದೆಯು ಪ್ರಜಾಪ್ರಭುತ್ವದ ತಳಹದಿಯನ್ನು ಮತ್ತಷ್ಟು ದುರ್ಬಲಗೊಳಿಸುತ್ತದೆ. ಇಂತಹ ನಿರ್ಣಾಯಕ ಮಸೂದೆಯನ್ನು ಅನುಮೋದಿಸುವ ಮೊದಲು, ಮೋದಿ ಸರ್ಕಾರವು ವಿರೋಧ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳೊಂದಿಗೆ ಸಮಾಲೋಚಿಸಬೇಕಾಗಿತ್ತು.  ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ತನ್ನ ಸರ್ವಾಧಿಕಾರಿ ಧೋರಣೆಯಿಂದಾಗಿ ಈ ಪ್ರಜಾಪ್ರಭುತ್ವ ವಿರೋಧಿ ಪ್ರಸ್ತಾಪವನ್ನು ದೇಶದ ಮೇಲೆ ಹೇರಲು ಪ್ರಯತ್ನಿಸುತ್ತಿದೆ ಎಂದಿದ್ದಾರೆ.

ಲೋಕಸಭೆ ಅಥವಾ ರಾಜ್ಯ ವಿಧಾನಸಭೆಗಳಲ್ಲಿ ಆಡಳಿತ ಪಕ್ಷವು ತನ್ನ ಬಹುಮತವನ್ನು ಕಳೆದುಕೊಂಡಾಗ ಉದ್ಭವಿಸುವ ಬಿಕ್ಕಟ್ಟುಗಳಿಗೆ ಈ ಪ್ರಸ್ತಾವನೆಯು ಯಾವುದೇ ಪರಿಹಾರಗಳನ್ನು ಒದಗಿಸುವುದಿಲ್ಲ. ಅಂತಹ ಸಂದರ್ಭಗಳಲ್ಲಿ, ಹೊಸ ಚುನಾವಣೆಗಳನ್ನು ನಡೆಸುವುದು ಮಾತ್ರ ಪ್ರಜಾಪ್ರಭುತ್ವದ ಪರಿಹಾರವಾಗಿದೆ. ಇಲ್ಲಿ ಲೋಕಸಭೆ ಅಥವಾ ರಾಜ್ಯಸಭೆಯಲ್ಲಿ ವಿಶ್ವಾಸ ಕಳೆದುಕೊಂಡರೂ ಅಲ್ಪಸಂಖ್ಯಾತ ಸರ್ಕಾರ ಅಧಿಕಾರದಲ್ಲಿ ಮುಂದುವರಿಯಲು ಅವಕಾಶ ನೀಡುವುದು ಪ್ರಜಾಪ್ರಭುತ್ವದ ವಿರುದ್ಧದ ದ್ರೋಹವಾಗುತ್ತದೆ. ಇಂತಹ ದೋಷಪೂರಿತ ಚುನಾವಣಾ ವ್ಯವಸ್ಥೆಯನ್ನು ಜಾರಿಗೆ ತರಲು, ಪ್ರಜಾಪ್ರತಿನಿಧಿ ಕಾಯ್ದೆಗೆ ತಿದ್ದುಪಡಿಗಳು ಮತ್ತು ಸಂವಿಧಾನದ ಕನಿಷ್ಠ ಐದು ಪ್ರಮುಖ ನಿಬಂಧನೆಗಳ ಅಗತ್ಯವಿದೆ ಎಂದು ತಿಳಿಸಿದ್ದಾರೆ.

ಇದಲ್ಲದೆ, ಪ್ರಸ್ತುತ ಚುನಾವಣಾ ಆಯೋಗಕ್ಕೆ ಇಡೀ ದೇಶಾದ್ಯಂತ ಏಕಕಾಲದಲ್ಲಿ ಚುನಾವಣೆ ನಡೆಸುವ ಸಾಮರ್ಥ್ಯ ಮತ್ತು ಸಂಪನ್ಮೂಲಗಳ ಕೊರತೆಯಿದೆ. ಇದು ಕೇಂದ್ರವು ತನ್ನ ಬೃಹತ್ ವೈಫಲ್ಯಗಳಿಂದ ಗಮನವನ್ನು ಬೇರೆಡೆಗೆ ಸೆಳೆಯಲು ಅದರ ಮತ್ತೊಂದು ಹತಾಶ ಪ್ರಯತ್ನವಾಗಿದೆ. ಇದು ಚುನಾವಣಾ ಸುಧಾರಣೆಗಳ ಬಗ್ಗೆ ಅಲ್ಲ, ಆದರೆ ಅಧಿಕಾರವನ್ನು ಕ್ರೋಢೀಕರಿಸುವ ಮತ್ತು ನಮ್ಮ ರಾಷ್ಟ್ರದ ಪ್ರಜಾಪ್ರಭುತ್ವದ ಮನೋಭಾವವನ್ನು ದುರ್ಬಲಗೊಳಿಸುವ ಕುರಿತದ್ದಾಗಿದೆ ಎಂದು ಸಿಎಂ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಈ ಪ್ರಸ್ತಾವನೆಯನ್ನು ವಿರೋಧಿಸಿ ಕೇರಳ ಸರ್ಕಾರ ಈಗಾಗಲೇ ನಿರ್ಣಯವನ್ನು ಅಂಗೀಕರಿಸಿದೆ ಮತ್ತು ಕೇಂದ್ರಕ್ಕೆ ತನ್ನ ಅಸಮ್ಮತಿಯನ್ನು ತಿಳಿಸಿದೆ. ಅಗತ್ಯವಿದ್ದರೆ, ನಮ್ಮ ಸರ್ಕಾರವು ಕಾಂಗ್ರೆಸ್ ಹೈಕಮಾಂಡ್ ಜೊತೆ ಸಮಾಲೋಚಿಸಿ ಈ ಪ್ರಜಾಪ್ರಭುತ್ವ ವಿರೋಧಿ ಕ್ರಮದ ವಿರುದ್ಧ ಕೇಂದ್ರಕ್ಕೆ ಬಲವಾದ ಸಂದೇಶವನ್ನು ಕಳುಹಿಸುವ ಒಂದು ನಿರ್ಣಯವನ್ನು ಅಂಗೀಕರಿಸುತ್ತದೆ ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ…ಮೈಸೂರು: ದಶಕದ ಬಳಿಕ ದಲಿತರ ದೇವಸ್ಥಾನ ಪ್ರವೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಫ್ಘಾನಿಸ್ತಾನದ ಆಸ್ಪತ್ರೆ ಮೇಲೆ ಪಾಕಿಸ್ತಾನದಿಂದ ವಾಯುದಾಳಿ ; ಕನಿಷ್ಠ 400 ಸಾವು : ವರದಿ

ರಾಜಧಾನಿ ಕಾಬೂಲ್‌ನಲ್ಲಿ ಮಾದಕ ವ್ಯಸನಿಗಳಿಗೆ ಚಿಕಿತ್ಸೆ ನೀಡುತ್ತಿದ್ದ ಆಸ್ಪತ್ರೆಯ ಮೇಲೆ ಪಾಕಿಸ್ತಾನದ ಮಿಲಿಟರಿ ವಾಯು ದಾಳಿ ನಡೆಸಿದ್ದು, ಕನಿಷ್ಠ 400 ಜನರು ಸಾವನ್ನಪ್ಪಿದ್ದಾರೆ ಎಂದು ಅಫ್ಘಾನಿಸ್ತಾನ ಆರೋಪಿಸಿದೆ. ಅಲ್‌-ಜಝೀರಾ ವರದಿಯ ಪ್ರಕಾರ, ಅಫ್ಘಾನಿಸ್ತಾನದ ಆರೋಪವನ್ನು...

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...