Homeರಾಷ್ಟ್ರೀಯ‘ಪೊಲೀಸರಿಗೆ ಒಂದು ರಾಷ್ಟ್ರ, ಒಂದು ಸಮವಸ್ತ್ರ’ ಪ್ರಸ್ತಾಪ: ಇದು ಹೇರಿಕೆ ಅಲ್ಲ ಎಂದ ಪ್ರಧಾನಿ

‘ಪೊಲೀಸರಿಗೆ ಒಂದು ರಾಷ್ಟ್ರ, ಒಂದು ಸಮವಸ್ತ್ರ’ ಪ್ರಸ್ತಾಪ: ಇದು ಹೇರಿಕೆ ಅಲ್ಲ ಎಂದ ಪ್ರಧಾನಿ

ಹಳೆಯ ಕಾನೂನುಗಳನ್ನು ಪರಿಶೀಲಿಸಿ, ಪ್ರಸ್ತುತ ಸಂದರ್ಭಕ್ಕೆ ತಿದ್ದುಪಡಿ ಮಾಡಬೇಕು ಎಂದು ರಾಜ್ಯ ಸರ್ಕಾರಗಳನ್ನು ಒತ್ತಾಯಿಸಿದ್ದಾರೆ

- Advertisement -
- Advertisement -

ಪೊಲೀಸರಿಗೆ “ಒಂದು ರಾಷ್ಟ್ರ, ಒಂದು ಸಮವಸ್ತ್ರ” ಎಂಬ ಕಲ್ಪನೆಯನ್ನು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಪ್ರಸ್ತಾಪಿಸಿದ್ದಾರೆ. ಇದು “ಕೇವಲ ಕಲ್ಪನೆ”ಯಾಗಿದೆ ಹೊರತು ಹೇರಿಕೆ ಅಲ್ಲ ಎಂದು ಹೇಳಿದ ಅವರು, “ಇದನ್ನು ಕೇವಲ ಸಲಹೆಯಾಗಿ ಯೋಚಿಸುವಂತೆ ರಾಜ್ಯಗಳನ್ನು ಕೇಳಿದ್ದಾರೆ.

“ಪೊಲೀಸರಿಗೆ ‘ಒಂದು ರಾಷ್ಟ್ರ, ಒಂದು ಸಮವಸ್ತ್ರ’ ಎಂಬ ಕೇವಲ ಒಂದು ಕಲ್ಪನೆ. ನಾನು ಅದನ್ನು ನಿಮ್ಮ ಮೇಲೆ ಹೇರಲು ಪ್ರಯತ್ನಿಸುತ್ತಿಲ್ಲ. ಸುಮ್ಮನೆ ಯೋಚಿಸಿ; ಇದು ಸಾಧ್ಯವಿದೆ, ಐದು, 50, ಅಥವಾ 100 ವರ್ಷಗಳಲ್ಲಿ ಆಗಬಹುದು. ಆದರೆ ನಾವು ಸ್ವಲ್ಪ ಯೋಚಿಸಬೇಕು” ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ರಾಜ್ಯ ಗೃಹ ಮಂತ್ರಿಗಳ ‘ಚಿಂತನ್ ಶಿಬಿರ್’ ಅನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ, ದೇಶಾದ್ಯಂತ ಪೊಲೀಸರ ಗುರುತು ಒಂದೇ ಆಗಲಿ ಎಂದು ತಾನು ಭಾವಿಸುತ್ತಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಪ್ರಧಾನಿ ಮೋದಿ ಟಾಯ್ಲೆಟ್‌‌ಗೆ ಕೂಡಾ ಕ್ಯಾಮರಾಮ್ಯಾನನ್ನು ಕರೆದುಕೊಂಡು ಹೋದರೆ?

ಅಪರಾಧಗಳು ಮತ್ತು ಅಪರಾಧಿಗಳನ್ನು ನಿಭಾಯಿಸಲು ರಾಜ್ಯಗಳ ನಡುವೆ ನಿಕಟ ಸಹಕಾರವನ್ನು ಪ್ರಧಾನಿ ಮೋದಿ ಪ್ರತಿಪಾದಿಸಿದ್ದಾರೆ.

ಏಕರೂಪದ ಕಾನೂನು ಮತ್ತು ಸುವ್ಯವಸ್ಥೆ ನೀತಿಗಾಗಿ ಒಕ್ಕೂಟ ಸರ್ಕಾರದ ಗೃಹ ಸಚಿವ ಅಮಿತ್ ಶಾ ಅವರ ಕರೆಯನ್ನು ಅವರು ಬೆಂಬಲಿಸಿ,“ಸಹಕಾರಿ ಒಕ್ಕೂಟವು ಸಂವಿಧಾನದ ಭಾವನೆ ಮಾತ್ರವಲ್ಲದೆ ರಾಜ್ಯಗಳು ಮತ್ತು ಕೇಂದ್ರದ ಜವಾಬ್ದಾರಿಯಾಗಿದೆ” ಎಂದು ಹೇಳಿದ್ದಾರೆ.

ಸಂವಿಧಾನದ ಪ್ರಕಾರ ಕಾನೂನು ಮತ್ತು ಸುವ್ಯವಸ್ಥೆ ರಾಜ್ಯದ ವಿಷಯವಾಗಿದ್ದರೂ, ಅವು ದೇಶದ ಏಕತೆ ಮತ್ತು ಸಮಗ್ರತೆಯೊಂದಿಗೆ ಸಮಾನವಾಗಿ ಸಂಬಂಧ ಹೊಂದಿವೆ ಎಂದು ಪ್ರಧಾನಿ ಹೇಳಿದ್ದಾರೆ.

ಇದನ್ನೂ ಓದಿ: ಶತಮಾನಕ್ಕೊಮ್ಮೆ ಬರುವ ಸಾಂಕ್ರಾಮಿಕದ ಅಡ್ಡ ಪರಿಣಾಮ 100 ದಿನಗಳಲ್ಲಿ ಮಾಯವಾಗುವುದಿಲ್ಲ: ಉದ್ಯೋಗ ಮೇಳದಲ್ಲಿ ಪ್ರಧಾನಿ ಮೋದಿ

ಪ್ರತಿಯೊಂದು ರಾಜ್ಯವೂ ಕಲಿಯಬೇಕು, ಪರಸ್ಪರ ಸ್ಫೂರ್ತಿ ಪಡೆಯಬೇಕು ಮತ್ತು ಆಂತರಿಕ ಭದ್ರತೆಗಾಗಿ ಒಟ್ಟಾಗಿ ಕೆಲಸ ಮಾಡಬೇಕು ಎಂದು ಹೇಳಿದ್ದು,“ಆಂತರಿಕ ಭದ್ರತೆಗಾಗಿ ರಾಜ್ಯಗಳು ಒಟ್ಟಾಗಿ ಕೆಲಸ ಮಾಡುವುದು ಸಾಂವಿಧಾನಿಕ ಆದೇಶ ಮತ್ತು ರಾಷ್ಟ್ರದ ಬಗ್ಗೆಗಿನ ಜವಾಬ್ದಾರಿಯಾಗಿದೆ” ಎಂದು ಅವರು ಹೇಳಿದ್ದಾರೆ.

ಒಕ್ಕೂಟ ಸರ್ಕಾರ ಮತ್ತು ರಾಜ್ಯಗಳು ದಕ್ಷತೆ, ಉತ್ತಮ ಫಲಿತಾಂಶಗಳು ಮತ್ತು ಸಾಮಾನ್ಯ ಜನರಿಗೆ ರಕ್ಷಣೆಯನ್ನು ಖಚಿತಪಡಿಸಿಕೊಳ್ಳಲು ಪರಸ್ಪರ ಸಹಕರಿಸಬೇಕು ಎಂದು ಅವರು ಹೇಳಿದ್ದಾರೆ.

ಕಾನೂನು-ಸುವ್ಯವಸ್ಥೆ ಮತ್ತು ಭದ್ರತೆಯ ಸವಾಲುಗಳನ್ನು ಎದುರಿಸಲು ಎಲ್ಲಾ ಏಜೆನ್ಸಿಗಳ ಸಂಘಟಿತ ಕ್ರಮದ ಬಗ್ಗೆ ಮಾತನಾಡಿದ ಅವರು, ಹಳೆಯ ಕಾನೂನುಗಳನ್ನು ಪರಿಶೀಲಿಸಬೇಕು ಮತ್ತು ಪ್ರಸ್ತುತ ಸಂದರ್ಭಕ್ಕೆ ತಿದ್ದುಪಡಿ ಮಾಡಬೇಕೆಂದು ಅವರು ರಾಜ್ಯ ಸರ್ಕಾರಗಳನ್ನು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಬಿಲ್ಕಿಸ್‌ ಬಾನೋ ಅತ್ಯಾಚಾರಿಗಳ ಬಿಡುಗಡೆಗೆ ಒಪ್ಪಿದ ಮೋದಿ ಸರ್ಕಾರ; ಏನೇನಾಯ್ತು ಈ ವರೆಗೆ? | ಸಂಕ್ಷಿಪ್ತ ವರದಿ

ನಕಲಿ ಸುದ್ದಿಗಳ ಪ್ರಸಾರವನ್ನು ಉಲ್ಲೇಖಿಸಿದ ಪ್ರಧಾನಿ ಮೋದಿ, ನಕಲಿ ಸುದ್ದಿಗಳ ಬಗ್ಗೆ ಫ್ಯಾಕ್ಟ್‌‌ಚೆಕ್‌ ಮಾಡುವುದು ಅತ್ಯಗತ್ಯವಾಗಿದೆ ಮತ್ತು ತಂತ್ರಜ್ಞಾನವು ಇದರಲ್ಲಿ ದೊಡ್ಡ ಪಾತ್ರವನ್ನು ವಹಿಸುತ್ತದೆ ಎಂದು ಹೇಳಿದ್ದಾರೆ. “ಸಂದೇಶಗಳನ್ನು ಫಾರ್ವರ್ಡ್ ಮಾಡುವ ಮೊದಲು ಅವುಗಳನ್ನು ಪರಿಶೀಲಿಸುವ ಕಾರ್ಯವಿಧಾನಗಳ ಬಗ್ಗೆ ಜನರಿಗೆ ಅರಿವು ಮೂಡಿಸಬೇಕು” ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...