Homeರಾಷ್ಟ್ರೀಯ‘ಪೊಲೀಸರಿಗೆ ಒಂದು ರಾಷ್ಟ್ರ, ಒಂದು ಸಮವಸ್ತ್ರ’ ಪ್ರಸ್ತಾಪ: ಇದು ಹೇರಿಕೆ ಅಲ್ಲ ಎಂದ ಪ್ರಧಾನಿ

‘ಪೊಲೀಸರಿಗೆ ಒಂದು ರಾಷ್ಟ್ರ, ಒಂದು ಸಮವಸ್ತ್ರ’ ಪ್ರಸ್ತಾಪ: ಇದು ಹೇರಿಕೆ ಅಲ್ಲ ಎಂದ ಪ್ರಧಾನಿ

ಹಳೆಯ ಕಾನೂನುಗಳನ್ನು ಪರಿಶೀಲಿಸಿ, ಪ್ರಸ್ತುತ ಸಂದರ್ಭಕ್ಕೆ ತಿದ್ದುಪಡಿ ಮಾಡಬೇಕು ಎಂದು ರಾಜ್ಯ ಸರ್ಕಾರಗಳನ್ನು ಒತ್ತಾಯಿಸಿದ್ದಾರೆ

- Advertisement -
- Advertisement -

ಪೊಲೀಸರಿಗೆ “ಒಂದು ರಾಷ್ಟ್ರ, ಒಂದು ಸಮವಸ್ತ್ರ” ಎಂಬ ಕಲ್ಪನೆಯನ್ನು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಪ್ರಸ್ತಾಪಿಸಿದ್ದಾರೆ. ಇದು “ಕೇವಲ ಕಲ್ಪನೆ”ಯಾಗಿದೆ ಹೊರತು ಹೇರಿಕೆ ಅಲ್ಲ ಎಂದು ಹೇಳಿದ ಅವರು, “ಇದನ್ನು ಕೇವಲ ಸಲಹೆಯಾಗಿ ಯೋಚಿಸುವಂತೆ ರಾಜ್ಯಗಳನ್ನು ಕೇಳಿದ್ದಾರೆ.

“ಪೊಲೀಸರಿಗೆ ‘ಒಂದು ರಾಷ್ಟ್ರ, ಒಂದು ಸಮವಸ್ತ್ರ’ ಎಂಬ ಕೇವಲ ಒಂದು ಕಲ್ಪನೆ. ನಾನು ಅದನ್ನು ನಿಮ್ಮ ಮೇಲೆ ಹೇರಲು ಪ್ರಯತ್ನಿಸುತ್ತಿಲ್ಲ. ಸುಮ್ಮನೆ ಯೋಚಿಸಿ; ಇದು ಸಾಧ್ಯವಿದೆ, ಐದು, 50, ಅಥವಾ 100 ವರ್ಷಗಳಲ್ಲಿ ಆಗಬಹುದು. ಆದರೆ ನಾವು ಸ್ವಲ್ಪ ಯೋಚಿಸಬೇಕು” ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ರಾಜ್ಯ ಗೃಹ ಮಂತ್ರಿಗಳ ‘ಚಿಂತನ್ ಶಿಬಿರ್’ ಅನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ, ದೇಶಾದ್ಯಂತ ಪೊಲೀಸರ ಗುರುತು ಒಂದೇ ಆಗಲಿ ಎಂದು ತಾನು ಭಾವಿಸುತ್ತಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಪ್ರಧಾನಿ ಮೋದಿ ಟಾಯ್ಲೆಟ್‌‌ಗೆ ಕೂಡಾ ಕ್ಯಾಮರಾಮ್ಯಾನನ್ನು ಕರೆದುಕೊಂಡು ಹೋದರೆ?

ಅಪರಾಧಗಳು ಮತ್ತು ಅಪರಾಧಿಗಳನ್ನು ನಿಭಾಯಿಸಲು ರಾಜ್ಯಗಳ ನಡುವೆ ನಿಕಟ ಸಹಕಾರವನ್ನು ಪ್ರಧಾನಿ ಮೋದಿ ಪ್ರತಿಪಾದಿಸಿದ್ದಾರೆ.

ಏಕರೂಪದ ಕಾನೂನು ಮತ್ತು ಸುವ್ಯವಸ್ಥೆ ನೀತಿಗಾಗಿ ಒಕ್ಕೂಟ ಸರ್ಕಾರದ ಗೃಹ ಸಚಿವ ಅಮಿತ್ ಶಾ ಅವರ ಕರೆಯನ್ನು ಅವರು ಬೆಂಬಲಿಸಿ,“ಸಹಕಾರಿ ಒಕ್ಕೂಟವು ಸಂವಿಧಾನದ ಭಾವನೆ ಮಾತ್ರವಲ್ಲದೆ ರಾಜ್ಯಗಳು ಮತ್ತು ಕೇಂದ್ರದ ಜವಾಬ್ದಾರಿಯಾಗಿದೆ” ಎಂದು ಹೇಳಿದ್ದಾರೆ.

ಸಂವಿಧಾನದ ಪ್ರಕಾರ ಕಾನೂನು ಮತ್ತು ಸುವ್ಯವಸ್ಥೆ ರಾಜ್ಯದ ವಿಷಯವಾಗಿದ್ದರೂ, ಅವು ದೇಶದ ಏಕತೆ ಮತ್ತು ಸಮಗ್ರತೆಯೊಂದಿಗೆ ಸಮಾನವಾಗಿ ಸಂಬಂಧ ಹೊಂದಿವೆ ಎಂದು ಪ್ರಧಾನಿ ಹೇಳಿದ್ದಾರೆ.

ಇದನ್ನೂ ಓದಿ: ಶತಮಾನಕ್ಕೊಮ್ಮೆ ಬರುವ ಸಾಂಕ್ರಾಮಿಕದ ಅಡ್ಡ ಪರಿಣಾಮ 100 ದಿನಗಳಲ್ಲಿ ಮಾಯವಾಗುವುದಿಲ್ಲ: ಉದ್ಯೋಗ ಮೇಳದಲ್ಲಿ ಪ್ರಧಾನಿ ಮೋದಿ

ಪ್ರತಿಯೊಂದು ರಾಜ್ಯವೂ ಕಲಿಯಬೇಕು, ಪರಸ್ಪರ ಸ್ಫೂರ್ತಿ ಪಡೆಯಬೇಕು ಮತ್ತು ಆಂತರಿಕ ಭದ್ರತೆಗಾಗಿ ಒಟ್ಟಾಗಿ ಕೆಲಸ ಮಾಡಬೇಕು ಎಂದು ಹೇಳಿದ್ದು,“ಆಂತರಿಕ ಭದ್ರತೆಗಾಗಿ ರಾಜ್ಯಗಳು ಒಟ್ಟಾಗಿ ಕೆಲಸ ಮಾಡುವುದು ಸಾಂವಿಧಾನಿಕ ಆದೇಶ ಮತ್ತು ರಾಷ್ಟ್ರದ ಬಗ್ಗೆಗಿನ ಜವಾಬ್ದಾರಿಯಾಗಿದೆ” ಎಂದು ಅವರು ಹೇಳಿದ್ದಾರೆ.

ಒಕ್ಕೂಟ ಸರ್ಕಾರ ಮತ್ತು ರಾಜ್ಯಗಳು ದಕ್ಷತೆ, ಉತ್ತಮ ಫಲಿತಾಂಶಗಳು ಮತ್ತು ಸಾಮಾನ್ಯ ಜನರಿಗೆ ರಕ್ಷಣೆಯನ್ನು ಖಚಿತಪಡಿಸಿಕೊಳ್ಳಲು ಪರಸ್ಪರ ಸಹಕರಿಸಬೇಕು ಎಂದು ಅವರು ಹೇಳಿದ್ದಾರೆ.

ಕಾನೂನು-ಸುವ್ಯವಸ್ಥೆ ಮತ್ತು ಭದ್ರತೆಯ ಸವಾಲುಗಳನ್ನು ಎದುರಿಸಲು ಎಲ್ಲಾ ಏಜೆನ್ಸಿಗಳ ಸಂಘಟಿತ ಕ್ರಮದ ಬಗ್ಗೆ ಮಾತನಾಡಿದ ಅವರು, ಹಳೆಯ ಕಾನೂನುಗಳನ್ನು ಪರಿಶೀಲಿಸಬೇಕು ಮತ್ತು ಪ್ರಸ್ತುತ ಸಂದರ್ಭಕ್ಕೆ ತಿದ್ದುಪಡಿ ಮಾಡಬೇಕೆಂದು ಅವರು ರಾಜ್ಯ ಸರ್ಕಾರಗಳನ್ನು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಬಿಲ್ಕಿಸ್‌ ಬಾನೋ ಅತ್ಯಾಚಾರಿಗಳ ಬಿಡುಗಡೆಗೆ ಒಪ್ಪಿದ ಮೋದಿ ಸರ್ಕಾರ; ಏನೇನಾಯ್ತು ಈ ವರೆಗೆ? | ಸಂಕ್ಷಿಪ್ತ ವರದಿ

ನಕಲಿ ಸುದ್ದಿಗಳ ಪ್ರಸಾರವನ್ನು ಉಲ್ಲೇಖಿಸಿದ ಪ್ರಧಾನಿ ಮೋದಿ, ನಕಲಿ ಸುದ್ದಿಗಳ ಬಗ್ಗೆ ಫ್ಯಾಕ್ಟ್‌‌ಚೆಕ್‌ ಮಾಡುವುದು ಅತ್ಯಗತ್ಯವಾಗಿದೆ ಮತ್ತು ತಂತ್ರಜ್ಞಾನವು ಇದರಲ್ಲಿ ದೊಡ್ಡ ಪಾತ್ರವನ್ನು ವಹಿಸುತ್ತದೆ ಎಂದು ಹೇಳಿದ್ದಾರೆ. “ಸಂದೇಶಗಳನ್ನು ಫಾರ್ವರ್ಡ್ ಮಾಡುವ ಮೊದಲು ಅವುಗಳನ್ನು ಪರಿಶೀಲಿಸುವ ಕಾರ್ಯವಿಧಾನಗಳ ಬಗ್ಗೆ ಜನರಿಗೆ ಅರಿವು ಮೂಡಿಸಬೇಕು” ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...