Homeರಾಷ್ಟ್ರೀಯ‘ಪೊಲೀಸರಿಗೆ ಒಂದು ರಾಷ್ಟ್ರ, ಒಂದು ಸಮವಸ್ತ್ರ’ ಪ್ರಸ್ತಾಪ: ಇದು ಹೇರಿಕೆ ಅಲ್ಲ ಎಂದ ಪ್ರಧಾನಿ

‘ಪೊಲೀಸರಿಗೆ ಒಂದು ರಾಷ್ಟ್ರ, ಒಂದು ಸಮವಸ್ತ್ರ’ ಪ್ರಸ್ತಾಪ: ಇದು ಹೇರಿಕೆ ಅಲ್ಲ ಎಂದ ಪ್ರಧಾನಿ

ಹಳೆಯ ಕಾನೂನುಗಳನ್ನು ಪರಿಶೀಲಿಸಿ, ಪ್ರಸ್ತುತ ಸಂದರ್ಭಕ್ಕೆ ತಿದ್ದುಪಡಿ ಮಾಡಬೇಕು ಎಂದು ರಾಜ್ಯ ಸರ್ಕಾರಗಳನ್ನು ಒತ್ತಾಯಿಸಿದ್ದಾರೆ

- Advertisement -
- Advertisement -

ಪೊಲೀಸರಿಗೆ “ಒಂದು ರಾಷ್ಟ್ರ, ಒಂದು ಸಮವಸ್ತ್ರ” ಎಂಬ ಕಲ್ಪನೆಯನ್ನು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಪ್ರಸ್ತಾಪಿಸಿದ್ದಾರೆ. ಇದು “ಕೇವಲ ಕಲ್ಪನೆ”ಯಾಗಿದೆ ಹೊರತು ಹೇರಿಕೆ ಅಲ್ಲ ಎಂದು ಹೇಳಿದ ಅವರು, “ಇದನ್ನು ಕೇವಲ ಸಲಹೆಯಾಗಿ ಯೋಚಿಸುವಂತೆ ರಾಜ್ಯಗಳನ್ನು ಕೇಳಿದ್ದಾರೆ.

“ಪೊಲೀಸರಿಗೆ ‘ಒಂದು ರಾಷ್ಟ್ರ, ಒಂದು ಸಮವಸ್ತ್ರ’ ಎಂಬ ಕೇವಲ ಒಂದು ಕಲ್ಪನೆ. ನಾನು ಅದನ್ನು ನಿಮ್ಮ ಮೇಲೆ ಹೇರಲು ಪ್ರಯತ್ನಿಸುತ್ತಿಲ್ಲ. ಸುಮ್ಮನೆ ಯೋಚಿಸಿ; ಇದು ಸಾಧ್ಯವಿದೆ, ಐದು, 50, ಅಥವಾ 100 ವರ್ಷಗಳಲ್ಲಿ ಆಗಬಹುದು. ಆದರೆ ನಾವು ಸ್ವಲ್ಪ ಯೋಚಿಸಬೇಕು” ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ರಾಜ್ಯ ಗೃಹ ಮಂತ್ರಿಗಳ ‘ಚಿಂತನ್ ಶಿಬಿರ್’ ಅನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ, ದೇಶಾದ್ಯಂತ ಪೊಲೀಸರ ಗುರುತು ಒಂದೇ ಆಗಲಿ ಎಂದು ತಾನು ಭಾವಿಸುತ್ತಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಪ್ರಧಾನಿ ಮೋದಿ ಟಾಯ್ಲೆಟ್‌‌ಗೆ ಕೂಡಾ ಕ್ಯಾಮರಾಮ್ಯಾನನ್ನು ಕರೆದುಕೊಂಡು ಹೋದರೆ?

ಅಪರಾಧಗಳು ಮತ್ತು ಅಪರಾಧಿಗಳನ್ನು ನಿಭಾಯಿಸಲು ರಾಜ್ಯಗಳ ನಡುವೆ ನಿಕಟ ಸಹಕಾರವನ್ನು ಪ್ರಧಾನಿ ಮೋದಿ ಪ್ರತಿಪಾದಿಸಿದ್ದಾರೆ.

ಏಕರೂಪದ ಕಾನೂನು ಮತ್ತು ಸುವ್ಯವಸ್ಥೆ ನೀತಿಗಾಗಿ ಒಕ್ಕೂಟ ಸರ್ಕಾರದ ಗೃಹ ಸಚಿವ ಅಮಿತ್ ಶಾ ಅವರ ಕರೆಯನ್ನು ಅವರು ಬೆಂಬಲಿಸಿ,“ಸಹಕಾರಿ ಒಕ್ಕೂಟವು ಸಂವಿಧಾನದ ಭಾವನೆ ಮಾತ್ರವಲ್ಲದೆ ರಾಜ್ಯಗಳು ಮತ್ತು ಕೇಂದ್ರದ ಜವಾಬ್ದಾರಿಯಾಗಿದೆ” ಎಂದು ಹೇಳಿದ್ದಾರೆ.

ಸಂವಿಧಾನದ ಪ್ರಕಾರ ಕಾನೂನು ಮತ್ತು ಸುವ್ಯವಸ್ಥೆ ರಾಜ್ಯದ ವಿಷಯವಾಗಿದ್ದರೂ, ಅವು ದೇಶದ ಏಕತೆ ಮತ್ತು ಸಮಗ್ರತೆಯೊಂದಿಗೆ ಸಮಾನವಾಗಿ ಸಂಬಂಧ ಹೊಂದಿವೆ ಎಂದು ಪ್ರಧಾನಿ ಹೇಳಿದ್ದಾರೆ.

ಇದನ್ನೂ ಓದಿ: ಶತಮಾನಕ್ಕೊಮ್ಮೆ ಬರುವ ಸಾಂಕ್ರಾಮಿಕದ ಅಡ್ಡ ಪರಿಣಾಮ 100 ದಿನಗಳಲ್ಲಿ ಮಾಯವಾಗುವುದಿಲ್ಲ: ಉದ್ಯೋಗ ಮೇಳದಲ್ಲಿ ಪ್ರಧಾನಿ ಮೋದಿ

ಪ್ರತಿಯೊಂದು ರಾಜ್ಯವೂ ಕಲಿಯಬೇಕು, ಪರಸ್ಪರ ಸ್ಫೂರ್ತಿ ಪಡೆಯಬೇಕು ಮತ್ತು ಆಂತರಿಕ ಭದ್ರತೆಗಾಗಿ ಒಟ್ಟಾಗಿ ಕೆಲಸ ಮಾಡಬೇಕು ಎಂದು ಹೇಳಿದ್ದು,“ಆಂತರಿಕ ಭದ್ರತೆಗಾಗಿ ರಾಜ್ಯಗಳು ಒಟ್ಟಾಗಿ ಕೆಲಸ ಮಾಡುವುದು ಸಾಂವಿಧಾನಿಕ ಆದೇಶ ಮತ್ತು ರಾಷ್ಟ್ರದ ಬಗ್ಗೆಗಿನ ಜವಾಬ್ದಾರಿಯಾಗಿದೆ” ಎಂದು ಅವರು ಹೇಳಿದ್ದಾರೆ.

ಒಕ್ಕೂಟ ಸರ್ಕಾರ ಮತ್ತು ರಾಜ್ಯಗಳು ದಕ್ಷತೆ, ಉತ್ತಮ ಫಲಿತಾಂಶಗಳು ಮತ್ತು ಸಾಮಾನ್ಯ ಜನರಿಗೆ ರಕ್ಷಣೆಯನ್ನು ಖಚಿತಪಡಿಸಿಕೊಳ್ಳಲು ಪರಸ್ಪರ ಸಹಕರಿಸಬೇಕು ಎಂದು ಅವರು ಹೇಳಿದ್ದಾರೆ.

ಕಾನೂನು-ಸುವ್ಯವಸ್ಥೆ ಮತ್ತು ಭದ್ರತೆಯ ಸವಾಲುಗಳನ್ನು ಎದುರಿಸಲು ಎಲ್ಲಾ ಏಜೆನ್ಸಿಗಳ ಸಂಘಟಿತ ಕ್ರಮದ ಬಗ್ಗೆ ಮಾತನಾಡಿದ ಅವರು, ಹಳೆಯ ಕಾನೂನುಗಳನ್ನು ಪರಿಶೀಲಿಸಬೇಕು ಮತ್ತು ಪ್ರಸ್ತುತ ಸಂದರ್ಭಕ್ಕೆ ತಿದ್ದುಪಡಿ ಮಾಡಬೇಕೆಂದು ಅವರು ರಾಜ್ಯ ಸರ್ಕಾರಗಳನ್ನು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಬಿಲ್ಕಿಸ್‌ ಬಾನೋ ಅತ್ಯಾಚಾರಿಗಳ ಬಿಡುಗಡೆಗೆ ಒಪ್ಪಿದ ಮೋದಿ ಸರ್ಕಾರ; ಏನೇನಾಯ್ತು ಈ ವರೆಗೆ? | ಸಂಕ್ಷಿಪ್ತ ವರದಿ

ನಕಲಿ ಸುದ್ದಿಗಳ ಪ್ರಸಾರವನ್ನು ಉಲ್ಲೇಖಿಸಿದ ಪ್ರಧಾನಿ ಮೋದಿ, ನಕಲಿ ಸುದ್ದಿಗಳ ಬಗ್ಗೆ ಫ್ಯಾಕ್ಟ್‌‌ಚೆಕ್‌ ಮಾಡುವುದು ಅತ್ಯಗತ್ಯವಾಗಿದೆ ಮತ್ತು ತಂತ್ರಜ್ಞಾನವು ಇದರಲ್ಲಿ ದೊಡ್ಡ ಪಾತ್ರವನ್ನು ವಹಿಸುತ್ತದೆ ಎಂದು ಹೇಳಿದ್ದಾರೆ. “ಸಂದೇಶಗಳನ್ನು ಫಾರ್ವರ್ಡ್ ಮಾಡುವ ಮೊದಲು ಅವುಗಳನ್ನು ಪರಿಶೀಲಿಸುವ ಕಾರ್ಯವಿಧಾನಗಳ ಬಗ್ಗೆ ಜನರಿಗೆ ಅರಿವು ಮೂಡಿಸಬೇಕು” ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....