Homeಅಂಕಣಗಳುಕಾನೂನು ಸಚಿವ ಮಾಧುಸ್ವಾಮಿಯವರಲ್ಲಿ ಒಂದು ಬಿನ್ನಹ

ಕಾನೂನು ಸಚಿವ ಮಾಧುಸ್ವಾಮಿಯವರಲ್ಲಿ ಒಂದು ಬಿನ್ನಹ

- Advertisement -
- Advertisement -

ಒಂದು ಎಕರೆ, ಎರಡು ಎಕರೆ ಜಮೀನು ಒತ್ತುವರಿ ಮಾಡಿಕೊಂಡಿರುವವರನ್ನು ವಿಶೇಷ ನ್ಯಾಯಾಲಯ ವಿಚಾರಣೆಗೆ ಒಳಪಡಿಸುವಂತಿಲ್ಲ. ಅಕ್ರಮ-ಸಕ್ರಮ ಕಾಯ್ದೆಯಡಿ ಈ ಕಬಳಿಕೆಯ ಪ್ರಶ್ನೆಯನ್ನು ಇತ್ಯಾರ್ಥಗೊಳಿಸಲಾಗುವುದು ಎಂದು ಸಂಪುಟ ಸಭೆ ತೀರ್ಮಾನಿಸಿ ಈ ಸುಗ್ರಿವಾಜ್ಞೆಗೆ ಅನುಮತಿಯನ್ನು ರಾಜ್ಯಪಾಲರಿಂದ ಪಡೆಯಲಾಗಿದೆ ಇದು ಸರಿಯಾದ ಕ್ರಮ.

ಒಂದು ಎಕರೆ, ಎರಡು ಎಕರೆ ಭೂಕಬಳಿಕೆ ಪ್ರಕರಣಗಳನ್ನು ವಿಶೇಷ ನ್ಯಾಯಾಲಯ ಹೇಗೆ ಕೈಗೆತ್ತಿಕೊಂಡಿತು? ವಿಶೇಷ ನ್ಯಾಯಾಲಯ ಸ್ಥಾಪನೆಯಾದದ್ದೇ ಎ.ಟಿ.ರಾಮಸ್ವಾಮಿ ಸಮಿತಿಯ ವರದಿಯ ಆಧಾರದ ಮೇಲೆ ಹೌಸ್ ಕಮಿಟಿಯ ಶಿಫಾರಸ್ಸನ್ನು ಆಧರಿಸಿ. ಎ.ಟಿ.ರಾಮಸ್ವಾಮಿ ಸಮಿತಿಯ ವರದಿಯ ರೀತ್ಯಾ ಮುಖ್ಯಮಂತ್ರಿಗಳು, ಶಾಸಕರು, ಮಂತ್ರಿಗಳು, ಸರ್ಕಾರಿ ಉನ್ನತಾಧಿಕಾರಿಗಳು, ಭೂಗಳ್ಳರು, ರಿಯಲ್ ಎಸ್ಟೇಟ್ ಏಜೆಂಟರ್‍ಗಳು, ಬಿಲ್ಡರ್‍ಗಳು ಎಲ್ಲರೂ ಸೇರಿ ಈ ಭೂಹಗರಣದಲ್ಲಿ ಭಾಗಿಗಳು. ಅವರ ಜೊತೆಗೆ ಕೆಲವರು ಜಮೀನಿರುವ ಪ್ರಭಾವಿ ರೈತರು, ಭೂಹೀನರೂ ಸೇರಿರಬಹುದು. ವಿಶೇಷ ನ್ಯಾಯಾಲಯ ಆರಂಭವಾಯಿತಾದರೂ ಒಂದು ವರ್ಷದವರೆಗೆ ಯಾವ ಜಿಲ್ಲಾಧಿಕಾರಿಯೂ ಈ ನ್ಯಾಯಾಲಯದಲ್ಲಿ ಎ.ಟಿ.ರಾಮಸ್ವಾಮಿ ವರದಿಯಲ್ಲಿ ನಮೂದಿಸಿದ್ದ ಯಾರೊಬ್ಬರ ಮೇಲೂ ಕೇಸು ದಾಖಲು ಮಾಡಲಿಲ್ಲ.

ಜಿಲ್ಲಾಧಿಕಾರಿಗಳ ಈ ಅಸಹಕಾರಕ್ಕೆ ಬೇಸರಿದ ವಿಶೇಷ ನ್ಯಾಯಾಲಯ ಪತ್ರಿಕೆಗಳಲ್ಲಿ ವರದಿಯಾದ ದೂರುಗಳನ್ನು ಆಧರಿಸಿ ಒಂದು ಎಕರೆ, ಎರಡು ಎಕರೆ ಕಬಳಿಸಿದ್ದ ಬಡ ರೈತರ ಬಗೆಗೆ ವಿಚಾರಣೆಯನ್ನು ಆರಂಭಿಸಿತು. ವಿಶೇಷ ನ್ಯಾಯಾಲಯ ಸ್ಥಾಪನೆಯಾದ ಸುದ್ದಿ ತಿಳಿದ ಮಾಜಿ ಮುಖ್ಯ ಮಂತ್ರಿ ಗುಂಡೂರಾಯರ ಮಗ ದಿನೇಶ್ ಗೂಂಡೂರಾವ್ ತನ್ನ ಪಾಲಿಗೆ ಅಕ್ರಮವಾಗಿ ಬಂದಿದ್ದ 11 ಎಕರೆ ಜಮೀನನ್ನು ಸರಕಾರಕ್ಕೆ ಹಿಂದಿರುಗಿಸಿದರು. ಮಂತ್ರಿಗಳಾಗಿದ್ದ ಲೇಔಟ್ ಕೃಷ್ಣಪ್ಪ ಎಂದೇ ಖ್ಯಾತನಾಮರಾಗಿರುವ ಮಗ ಪ್ರಿಯಾಕೃಷ್ಣ ಶ್ರೀರಂಗಪಟ್ಟಣದ ಶ್ರೀರಂಗನಾಥಸ್ವಾಮಿ ದೇವಾಲಯಕ್ಕೆ ಸೇರಿದ ನೂರಾರು ಎಕರೆ ಜಮೀನಿನ ಪೈಕಿ ಹತ್ತಾರು ಎಕರೆ ಜಮೀನನ್ನು ವಶಪಡಿಸಿಕೊಂಡು ಮಾರಾಟ ಮಾಡಿರುವುದಾಗಿ ಆರೋಪಣೆ ಮಾಡಿ ವಿಶೇಷ ನ್ಯಾಯಾಲಯದಲ್ಲಿ ಮಾಹಿತಿಹಕ್ಕು ಕಾಯ್ದೆ ಕಾರ್ಯಕರ್ತರೊಬ್ಬರು ಖಟ್ಲೆ ಹೂಡಿದರು. ವಿಚಾರಣೆಯಾಗಿ ಇನ್ನೇನು ತೀರ್ಪು ನೀಡುವ ಸನ್ನಿವೇಶದಲ್ಲಿ ಸುಪ್ರಸಿದ್ದ ನ್ಯಾಯವಾದಿಯೊಬ್ಬರು ಪೂವಯ್ಯ ಹೈಕೋರ್ಟಿಗೆ ಅರ್ಜಿಸಲ್ಲಿಸಿ ವಿಶೇಷ ನ್ಯಾಯಾಲಯ ತನಿಖೆ ಮುಂದುವರೆಸದಂತೆ ತಡೆಯಾಜ್ಞೆ ತಂದರು. ಇದು ಮಾತ್ರವಲ್ಲ. ವಿಶೇಷ ನ್ಯಾಯಾಲಯ ಇನ್ನೇನು ತೀರ್ಪು ನೀಡಲಿದ್ದಾರೆ ಎಂದು ತಿಳಿದ ಅನೇಕ ಪಟ್ಟಭದ್ರರು ಉಚ್ಚನ್ಯಾಯಾಲಯದ ಮೊರೆಹೊಕ್ಕು ತಡೆಯಾಜ್ಞೆ ತಂದಿದ್ದಾರೆ. ಮೊದಲನೇ ವರ್ಷ 80 ಮಂದಿ ತಡೆಯಾಜ್ಞೆ ಪಡೆದಿದ್ದರೆ, ಎರಡನೇ ವರ್ಷದ ಅವಧಿಯಲ್ಲಿ ಮತ್ತೆ ನೂರು ಮಂದಿ ತಡೆಯಾಜ್ಞೆ ಪಡೆದಿದ್ದಾರೆ. ಎರಡು ವರ್ಷ ಕಳೆದರೂ ಸ್ಟೇ ವೆಕೆಟ್ ಆಗದ್ದನ್ನು ಗಮನಿಸಿ ಅಂದಿನ ಕಂದಾಯ ಇಲಾಖೆಯ ಕಾರ್ಯದರ್ಶಿಗಳಿಗೆ ನಾನು ಪತ್ರ ಬರೆದರೂ ಅವರು ಕಾರ್ಯೋನ್ಮುಖರಾಗಲಿಲ್ಲ. ಇಂದಿಗೂ 180 ಕೇಸುಗಳ ಸ್ಟೇ ಹಾಗೇ ಉಳಿದಿದೆ. ಸರ್ಕಾರದ ಉನ್ನತಾಧಿಕಾರಿಗಳು ಜಮೀನ ಪಡೆಯುವಂತಿಲ್ಲ ಎಂಬ ಕಾನೂನಿದ್ದರೂ ಐಜಿಪಿ ಆಗಿದ್ದ ಸಮಯದಲ್ಲಿ ಸಾಂಗ್ಲಿಯಾನ ತನ್ನ ಹೆಂಡತಿ, ಮಕ್ಕಳು ಅಳಿಯನ ಹೆಸರಿನಲ್ಲಿ ಸರ್ಕಾರಿ ಜಮೀನು ಕಬಳಿಸಿದ್ದರು. ಅವರೂ ತಾವು ಅಕ್ರಮವಾಗಿ ಪಡೆದ ಜಮೀನನ್ನು ವಾಪಸು ಮಾಡಿರಬಹುದು.

ಇಷ್ಟೆಲ್ಲಾ ಹೇಳುವುದಕ್ಕೆ ಕಾರಣ ಏನೆಂದರೆ ಎ.ಟಿ.ರಾಮಸ್ವಾಮಿ ವರದಿಯಲ್ಲಿ ನಮೂದಾಗಿರುವ ಭಾರೀ ಭೂಗಳ್ಳರ ಮೇಲೆ ಮೊಕದ್ದಮೆ ಹೂಡಲು ಈ ಕೂಡಲೇ ಮಂತ್ರಿಮಂಡಲ ತೀರ್ಮಾನ ಮಾಡಬೇಕು. ಒಂದು ಎಕರೆ, ಎರಡು ಎಕರೆ ಕಬಳಿಸಿರುವ ಭೂಹೀನ ರೈತರಿಗೆ ನ್ಯಾಯ ಒದಗಿಸಬೇಕು.

ಆದರೆ ಹತ್ತಾರು ಎಕರೆ ಸ್ವಾಹಾನೂ ಮಾಡಿರುವ ಧೂರ್ತರ ಬಗ್ಗೆ ಸರ್ಕಾರ ಚಕಾರ ಶಬ್ದವನ್ನು ಎತ್ತದಿರುವ ಬಗೆಗೆ ನನ್ನ ಖಂಡನೆ ಇದೆ. ಕೂಡಲೇ ಮಂತ್ರಿ ಮಂಡಲ ಎ.ಟಿ.ರಾಮಸ್ವಾಮಿ ವರದಿಯಲ್ಲಿ ನಮೂದಿಸಿರುವ ಎಲ್ಲಾ ಪಟ್ಟಭದ್ರರ ಮೇಲೆ ಕೇಸು ಹೂಡಿ ಅವರು ಕಬಳಿಸಿರುವ ಜಮೀನುಗಳನ್ನು ವಾಪಸ್ ಪಡೆಯಬೇಕಲ್ಲದೆ ಅವರಿಗೆ ಶಿಕ್ಷೆಯೂ ಆಗಬೇಕು. ನ್ಯಾಯಾಂಗ ಖಾತೆಯ ಹೊಣೆಗಾರಿಕೆ ಹೊತ್ತಿರುವ ಮಾಧುಸ್ವಾಮಿವರು ಸತ್ಯನಿಷ್ಠುರರೂ ಎಂದು ತಿಳಿದಿದ್ದೇನೆ. ಅವರು ಭೂಕಬಳಿಕೆ ಮಾಡಿರುವ ಭೂಹೀನ ರೈತರ ಬಗೆಗೆ ತಳೆದಿರುವ ಭಾವನೆ ಮೆಚ್ಚತಕ್ಕದ್ದೇ. ಆದರೆ ಅಷ್ಟೇ ಅಲ್ಲ ಅವರ ಹೊಣೆಗಾರಿಕೆ. ವಿಶೇಷ ನ್ಯಾಯಾಲಯದ ಅಂತಿಮ ತೀರ್ಪು ಬರುವ ಸಂದರ್ಭದಲ್ಲಿ ‘ಬೀಸೋ ದೊಣ್ಣೆಯಿಂದ ಏಟು ಬೀಳದಿದ್ದರೆ, ನೂರು ವರ್ಷ ಆಯಸ್ಸು’ ಎಂದು ಭಾವಿಸಿ ಹೈಕೋರ್ಟ್‍ನಿಂದ ಸ್ಟೇ ತಂದಿರುವ 180ಕ್ಕೂ ಹೆಚ್ಚು ಅಪರಾಧಿಗಳ ಸ್ಟೇಯನ್ನು ಕೂಡಲೇ ಅವರು ತೆರವುಗೊಳಿಸಬೇಕು. ಅಲ್ಲದೆ ಸರ್ಕಾರಿ ಜಮೀನು ಸ್ವಾಹಾ ಮಾಡಿರುವವರ ಮೇಲೆ ವಿಶೇಷ ನ್ಯಾಯಾಲಯದಲ್ಲಿ ಖಟ್ಲೆ ಹೂಡಬೇಕು. ನನ್ನ ಸ್ನೇಹಿತರೂ, ನಿಷ್ಟೂರವಾದಿಗಳೂ ಆದ ಮಾಧುಸ್ವಾಮಿಯವರು ಎ.ಟಿ.ರಾಮಸ್ವಾಮಿಯವರಿಗೆ ಆ ಮೂಲಕ ಗೌರವ ಸಲ್ಲಿಸುವರೆಂದು ಭಾವಿಸುತ್ತೇನೆ.

ಮಾಧುಸ್ವಾಮಿಯವರಲ್ಲಿ ಮತ್ತೊಂದು ಬಿನ್ನಹ. ವಿಶೇಷ ಜಿಲ್ಲಾಧಿಕಾರಿಗಳನ್ನು ನೇಮಿಸುವ ಅಧಿಕಾರ ಸರ್ಕಾರಕ್ಕಿಲ್ಲದಿದ್ದರೂ ನಾಲ್ಕಾರು ಹುದ್ದೆಗಳನ್ನು ಸೃಷ್ಟಿಸಿ ಅವರು ಸಾವಿರಾರು ಜನರಿಗೆ ಹತ್ತಿರ ಹತ್ತಿರ 40 ಸಾವಿರ ಎಕರೆ ಜಮೀನನ್ನು 1, 2, 4 ಮತ್ತು 6 ಎಕರೆಯಂತೆ ಹಂಚಿರುವುದು ನ್ಯಾಯಭಾಹಿರವೆಂದು ಹೈಕೋರ್ಟಿನ ನ್ಯಾಮೂರ್ತಿಗಳಾಗಿದ್ದ ಶೈಲೆಂದ್ರಕುಮಾರ್ ತೀರ್ಪು ನೀಡಿದ್ದಾರೆ. ಅವರು ತಮ್ಮ ತೀರ್ಪಿನಲ್ಲಿ

“the post of special deputy commissinoner has now become synonym for corruption, nepotism and arbitrarininessof which fact this court can take judicial notice and it is high time a governance woth it is name having some sumbalnce of commitiment to maintenance of rule of law looks into suc anarchic exereise of power by these special deputy commissinoner and takes correctiv measures, instead of each and every affected person to seek for relief in right jurisdiction before thi high court”

ಈ ಆದೇಶದನ್ವಯ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳ ವಿಶೇಷ ಜಿಲ್ಲಾಧಿಕಾರಿಗಳ ಹುದ್ದೆಯನ್ನು ಆಗಿನ ಮುಖ್ಯ ಮಂತ್ರಿಗಳಾದ ಮಾನ್ಯ ಸಿದ್ದರಾಮಯ್ಯನವರ ಆಡಳಿತದ ಕಾಲದಲ್ಲಿ ರದ್ದು ಮಾಡಲಾಯಿತು. ಆದರೆ 40 ಸಾವಿರ ಎಕರೆ ಸರ್ಕಾರಿ ಜಮೀನನ್ನು ವಶಪಡಿಸಿಕೊಳ್ಳುವ ವಿಚಾರದಲ್ಲಿ ಜಿಲ್ಲಾಧಿಕಾರಿಗಳು ಕುಂಟುತ್ತಾ ನಡೆದಿದ್ದಾರೆ. ಇಲ್ಲಿಯವರೆಗೂ ಶೇ.25 ರಷ್ಟು ಜಮೀನು ಕೂಡ ಸರ್ಕಾರ ವಶಪಡಿಸಿಕೊಂಡಿಲ್ಲ.

ಈ ಜಮೀನು ಹಂಚಿಕೆಯ ಪ್ರಕ್ರಿಯೆಯೇ ಭ್ರಷ್ಟಾಚಾರ, ಸ್ವಜನ ಪಕ್ಷಪಾತ, ತಮಗೆ ತೋಚಿದಂತೆ ಇರುವುದರಿಂದಲೂ ಸರ್ಕಾರವೇ ನೇಮಿಸಿರುವ ವಿಶೇಷ ಜಿಲ್ಲಾಧಿಕಾರಿಗಳಿಗೆ, ಜಿಲ್ಲಾಧಿಕಾರಿಗೆ ಜಮೀನು ಹಂಚುವ ಜವಾಬ್ದಾರಿ ಇರುವುದಿಲ್ಲವೆಂದು ನ್ಯಾಯಾಲಯವೇ ಹೇಳಿರುವುದರಿಂದ ಈ 40 ಸಾವಿರ ಎಕರೆ ಜಮೀನನ್ನು ಒಂದು ordinance ಮುಖಾಂತರ ಸರ್ಕಾರ ಹಿಂಪಡೆಯಬಹುದೆಂಬುದು ನನ್ನ ಅನಿಸಿಕೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಇಂತಹ ಕೇಸುಗಳಿಗೆ ಹೊಂದಿಕೊಂಡತೆ, ಡೊಡ್ಡ ಪಟ್ಟಣಗಳಿಗೆ ಹೊಂದಿಕೊಂಡಂತಿರುವ ನೆಲವನ್ನು ಕಬಳಿಸಿರುವ,ಮಂಜೂರು ಮಾಡಿಸಿಕೊಂಡಿರುವುದನ್ನು ಆಳ್ವಿಕೆ ಹಿಂಪಡೆಯಲು ಮೊದಲು ಹೆಜ್ಜೆ ಇಡಬೇಕು. ತರುವಾಯ ಉಳಿಕೆ ಕೇಸುಗಳ ಬಗ್ಗೆ ಹೆಜ್ಜೆ ಇಡಬೇಕು. ಸಿಬ್ಬಂದಿ ಕೊರತೆ ನೆಪಹೇಳಿ ಎಲ್ಲವೂ ಆಮೆ ವೇಗದಲ್ಲಿ ಆಗುವುದನ್ನು ತಪ್ಪಿಸಲು ಮೊದಲು ರಿಯಲ್ ಎಸ್ಟೇಟ್ ವಹಿವಾಟಿಗೆ ಒಳಗಾಗಬಹುದಾದ ಕೇಸಗಳನ್ನು ಅಂದರೆ, ಡೊಡ್ಡ ಪಟ್ಟಣಗಳನ್ಮು ಗುರಿಮಾಡಿ ಕೆಲಸ ಮಾಡಬೇಕು.

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಪತ್ನಿಯ ಕತ್ತು ಹಿಸುಕಿ ಕೊಂದ ನಿವೃತ್ತ ಇಸ್ರೋ ಉದ್ಯೋಗಿ ಬಂಧನ

ಬೆಂಗಳೂರು: ಆಘಾತಕಾರಿ ಘಟನೆಯೊಂದರಲ್ಲಿ, 72 ವರ್ಷದ ನಿವೃತ್ತ ಇಸ್ರೋ ಉದ್ಯೋಗಿಯೊಬ್ಬರು ವೈಟ್‌ಫೀಲ್ಡ್ ವಿಭಾಗದ ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಬುಧವಾರ ಪತ್ನಿಯನ್ನು ಕತ್ತು ಹಿಸುಕಿ ಕೊಂದಿರುವುದಾಗಿ ವರದಿಯಾಗಿದೆ.  ಬೊಮ್ಮನಹಳ್ಳಿಯ ಅಪಾರ್ಟ್‌ಮೆಂಟ್‌ನಲ್ಲಿ ಬೆಳಿಗ್ಗೆ...

ಮಧ್ಯಪ್ರದೇಶದಲ್ಲಿ ಶಾಸಕ ರಾಜಾ ಸಿಂಗ್‌ನಿಂದ ದ್ವೇಷ ಭಾಷಣ; ಪ್ರಚೋದನಕಾರಿ ‘ಶಿರಚ್ಛೇದನ’ ಹೇಳಿಕೆಗೆ ವಿರೋಧ

ತಮ್ಮ ಪ್ರಚೋದನಕಾರಿ ಹೇಳಿಕೆಗಳಿಂದಲೇ ಕುಖ್ಯಾತರಾಗಿರುವ ಹೈದರಾಬಾದ್‌ನ ಗೋಶಮಹಲ್ ಶಾಸಕ ಟಿ ರಾಜಾ ಸಿಂಗ್ ಸಾರ್ವಜನಿಕ ರ‍್ಯಾಲಿಯಲ್ಲಿ ಮತ್ತೊಮ್ಮೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಮಧ್ಯಪ್ರದೇಶದಲ್ಲಿ ಅವರು ಆಡಿದ ಮಾತುಗಳು ವಿವಾದಕ್ಕೆ ಕಾರಣವಾಗಿದೆ. "ಪ್ರತಿಯೊಬ್ಬ ಬಜರಂಗಿಗಳು...

ಪಂಜಾಬ್ ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಆರೋಪ; ‘ಬಡ್ತಿ ವಿಳಂಬವಾಗಿದೆ..’; ಎಂದ ದಲಿತ ಪ್ರಾಧ್ಯಾಪಕ

ಪಂಜಾಬ್ ವಿಶ್ವವಿದ್ಯಾಲಯದ ದಲಿತ ಸಹಾಯಕ ಪ್ರಾಧ್ಯಾಪಕ ಹರ್‌ಪ್ರೀತ್ ಸಿಂಗ್ ಅವರು ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಇದೆ ಎಂದು ಸಾರ್ವಜನಿಕವಾಗಿ ಆರೋಪಿಸಿದ್ದಾರೆ. ತನ್ನ ಜಾತಿಯ ಕಾರಣದಿಂದಾಗಿ ಉದ್ದೇಶಪೂರ್ವಕವಾಗಿ ಬಡ್ತಿ ವಿಳಂಬ ಮಾಡಲಾಗಿದೆ...

ಮಹಾರಾಷ್ಟ್ರ: ತಾಯಿ, ಸಹೋದರನ ಕಣ್ಣಿಗೆ ಮೆಣಸಿನ ಪುಡಿ ಎರೆಚಿ ಮದುವೆ ಸಿದ್ಧತೆಯಲ್ಲಿದ್ದ 21 ವರ್ಷದ ಯುವತಿಯ ಅಪಹರಣ

ಮುಂಬೈ: ಆಘಾತಕಾರಿ ಘಟನೆಯೊಂದರಲ್ಲಿ, ಮಹಾರಾಷ್ಟ್ರದ ಪುಣೆ ಜಿಲ್ಲೆಯ ಇಂದಾಪುರ ತಹಸಿಲ್‌ನ ಭಿಗ್ವಾನ್‌ನಲ್ಲಿ 21 ವರ್ಷದ ಯುವತಿಯನ್ನು ಆಕೆಯ ತಾಯಿ ಮತ್ತು ಸಹೋದರನ ಮುಂದೆಯೇ ಇಬ್ಬರು ವ್ಯಕ್ತಿಗಳು ಅಪಹರಿಸಿದ್ದಾರೆ ಎಂದು ಆರೋಪಿಸಲಾಗಿದೆ.ಮದುವೆ ಸಿದ್ಧತೆಯಲ್ಲಿದ್ದ ಯುವತಿ...

KERALA SIR | ಬಿಜೆಪಿ ಮುಖಂಡನ ದೂರು: ಪೌರತ್ವ ಸಾಬೀತುಪಡಿಸುವಂತೆ ಮುಸ್ಲಿಂ ವ್ಯಕ್ತಿಗೆ ನೋಟಿಸ್!

ಬಿಜೆಪಿ ಕಾಸರಗೋಡು ಜಿಲ್ಲಾ ಕಾರ್ಯದರ್ಶಿ ಲೋಕೇಶ್ ನೋಂಡಾ ಎಂಬಾತನ ದೂರಿನ ಮೇರೆಗೆ ಹಿರಿಯ ವಯಸ್ಸಿನ ಮುಸ್ಲಿಂ ವ್ಯಕ್ತಿಯೊಬ್ಬರಿಗೆ ಭಾರತೀಯ ಪೌರತ್ವ ಸಾಬೀತುಪಡಿಸುವಂತೆ ಚುನಾವಣಾ ನೋಂದಣಿ ಅಧಿಕಾರಿ (ಇಆರ್‌ಒ) ನೋಟಿಸ್ ಜಾರಿ ಮಾಡಿದ್ದು, ಆ...

ಚೀನಾ ನಿರ್ಮಿತ ರೋಬೋ ಡಾಗ್ ತಾವೇ ಅಭಿವೃದ್ಧಿಪಡಿಸಿದ್ದಾಗಿ ಹೇಳಿಕೊಂಡಿದ್ದ ಗ್ಯಾಲ್ಗೋಟಿಯಾ ವಿವಿ AI ಸಮ್ಮಿಟ್ ಎಕ್ಸ್‌ಪೋದಿಂದ ತೆರವು

ನವದೆಹಲಿ: ಚೀನಾ ನಿರ್ಮಿತ ರೋಬೋ ಡಾಗ್ ತಮ್ಮದೇ ಎಂದು ಪ್ರದರ್ಶಿಸಿದ್ದಕ್ಕಾಗಿ ಟೀಕೆಗೆ ಗುರಿಯಾದ ನಂತರ ಮತ್ತು ಕೇಂದ್ರ ಸರ್ಕಾರವು ವಿರೋಧ ಪಕ್ಷಗಳಿಂದ ಟೀಕೆಗೆ ಗುರಿಯಾದ ನಂತರ ನೋಯ್ಡಾ ಮೂಲದ ಗ್ಯಾಲ್ಗೋಟಿಯಾಸ್ ವಿಶ್ವವಿದ್ಯಾಲಯವನ್ನು ಬುಧವಾರ...

ಉತ್ತರ ಪ್ರದೇಶ| ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಟಿಟಿಇಯಿಂದ ಸೇನಾ ಆಕಾಂಕ್ಷಿಯ ಮೇಲೆ ಅತ್ಯಾಚಾರ

ಉತ್ತರ ಪ್ರದೇಶದ ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಟಿಕೆಟ್ ಪರೀಕ್ಷಕನೊಬ್ಬ (ಟಿಟಿಇ) ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಸೇನಾ ನೇಮಕಾತಿಗೆ ತಯಾರಿ ನಡೆಸುತ್ತಿದ್ದ ಯುವತಿ ಆರೋಪಿಸಿದ್ದಾರೆ. ಇಂದಾರಾ ಮತ್ತು ಡಿಯೋರಿಯಾ ರೈಲು ನಿಲ್ದಾಣಗಳ ನಡುವೆ...

ನಾನು ಭಾರತಕ್ಕೆ ಯಾವಾಗ ಹಿಂತಿರುಗುತ್ತೇನೆಂದು ಹೇಳಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಗೆ ತಿಳಿಸಿದ ಮಲ್ಯ

ವಂಚನೆ ಮತ್ತು ಹಣ ವರ್ಗಾವಣೆಯ ಹಲವಾರು ಪ್ರಕರಣಗಳನ್ನು ಎದುರಿಸುತ್ತಿರುವ, ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಯುಕೆ ತೊರೆಯುವುದನ್ನು ನನಗೆ ಕಾನೂನುಬದ್ಧವಾಗಿ ನಿಷೇಧಿಸಲಾಗಿರುವುದರಿಂದ ಯಾವಾಗ ಭಾರತಕ್ಕೆ ಹಿಂತಿರುಗುತ್ತೇನೆ ಎಂದು ಹೇಳಲು ಸಾಧ್ಯವಿಲ್ಲ" ಎಂದು...

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿ ಆಗದಂತೆ ತಡೆದಿದ್ದು ರಾಹುಲ್ ಗಾಂಧಿ : ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿಯಾಗದಂತೆ ರಾಹುಲ್ ಗಾಂಧಿ ತಡೆದಿದ್ದಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮಂಗಳವಾರ (ಫೆ.17) ಆರೋಪಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "2014 ರಲ್ಲಿ ಅಂದಿನ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ...

ಮಮತಾ ಬ್ಯಾನರ್ಜಿ ವಿರುದ್ಧ ಇಡಿ ಅರ್ಜಿ: ಮಾರ್ಚ್ 18ಕ್ಕೆ ವಿಚಾರಣೆ ಮುಂದೂಡಿಕೆ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ಇತರರ ವಿರುದ್ಧದ ಐ-ಪ್ಯಾಕ್ ಕಚೇರಿ ಶೋಧಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಕೇಂದ್ರ ಜಾರಿ ನಿರ್ದೇಶನಾಲಯದ (ಇಡಿ) ಪರವಾಗಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್‌ವಿ...