Homeಮುಖಪುಟಒಂದಿಬ್ಬರ ಅಹಂನಿಂದ ಕೃಷಿ ಕಾಯ್ದೆಗಳನ್ನು ಹಿಂಪಡೆಯುತ್ತಿಲ್ಲ: ಕೇಂದ್ರದ ವಿರುದ್ಧ ಕಿಡಿಕಾರಿದ ಮೇಘಾಲಯ ರಾಜ್ಯಪಾಲ

ಒಂದಿಬ್ಬರ ಅಹಂನಿಂದ ಕೃಷಿ ಕಾಯ್ದೆಗಳನ್ನು ಹಿಂಪಡೆಯುತ್ತಿಲ್ಲ: ಕೇಂದ್ರದ ವಿರುದ್ಧ ಕಿಡಿಕಾರಿದ ಮೇಘಾಲಯ ರಾಜ್ಯಪಾಲ

ದೆಹಲಿಯಲ್ಲಿ ಹೋರಾಡುತ್ತಿರುವ ರೈತರು ಖಾಲಿ ಕೈಯಲ್ಲಿ ಹಿಂದಿರುಗುವುದಿಲ್ಲ. ಅವರು ಹೋರಾಟದಲ್ಲಿ ಯಶಸ್ವಿಯಾಗಿಯೇ ಹಿಂದಿರುಗುತ್ತಾರೆ.

- Advertisement -
- Advertisement -

ಮತ್ತೆ ರೈತ ಹೋರಾಟವನ್ನು ಬೆಂಬಲಿಸಿ ಹೇಳಿಕೆ ನೀಡಿರುವ ಮೇಘಾಲಯ ರಾಜ್ಯಪಾಲರಾದ ಸತ್ಯಪಾಲ್ ಮಲ್ಲಿಕ್ “ನಾಯಿ ಕಚ್ಚಿ ಸತ್ತವರಿಗೂ ಸಂತಾಪ ಸೂಚಿಸುವವರಿಗೆ ಕೃಷಿ ಕಾಯ್ದೆಗಳ ವಿರುದ್ಧ ಹೋರಾಡಿ ಮಡಿದ 600ಕ್ಕೂ ಹೆಚ್ಚು ರೈತರು ಕಾಣದಿರುವುದು ದುರಂತ” ಎಂದು ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಜೈಪುರದಲ್ಲಿ ಜಾಟ್ ಸಮುದಾಯದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾತನಾಡಿದ ಅವರು, “ಕೇಂದ್ರ ಸರ್ಕಾರದಲ್ಲಿ ಬಹಳಷ್ಟು ಮಂದಿ ರೈತರ ಪರವಾಗಿದ್ದಾರೆ. ಆದರೆ ಒಂದಿಬ್ಬರ ಅಹಂನಿಂದಾಗಿ ಕೃಷಿ ಕಾಯ್ದೆಗಳನ್ನು ಹಿಂಪಡೆಯುತ್ತಿಲ್ಲ” ಎಂದಿದ್ದಾರೆ.

ನನ್ನನ್ನು ರಾಜ್ಯಪಾಲ ಹುದ್ದೆಯಿಂದ ಕೆಳಗಿಳಿದರೂ ಯೋಚಿಸುವುದಿಲ್ಲ. ನಾನು ಸತ್ಯದ ಪರ ಮಾತನಾಡುತ್ತೇನೆ. ಕೃಷಿ ಕಾಯ್ದೆಗಳನ್ನು ಹಿಂಪಡೆಯದೇ ಸಿಖ್ ಸಮುದಾಯವನ್ನು ಎದುರು ಹಾಕಿಕೊಂಡಿರುವವರು ಇಂದಿರಾ ಗಾಂಧಿಯವರ ಹತ್ಯೆಯನ್ನು ಮರೆಯಬಾರದು ಎಂದು ಎಚ್ಚರಿಕೆ ನೀಡಿದ್ದಾರೆ.

ದೆಹಲಿಯಲ್ಲಿ ಹೋರಾಡುತ್ತಿರುವ ರೈತರು ಖಾಲಿ ಕೈಯಲ್ಲಿ ಹಿಂದಿರುಗುವುದಿಲ್ಲ. ಅವರು ಹೋರಾಟದಲ್ಲಿ ಯಶಸ್ವಿಯಾಗಿಯೇ ಹಿಂದಿರುಗುತ್ತಾರೆ. ನಾನು ರೈತ ಹೋರಾಟವನ್ನು ಸಂಪೂರ್ಣವಾಗಿ ಬೆಂಬಲಿಸುತ್ತೇನೆ. ಅದಕ್ಕಾಗಿ ದೆಹಲಿ ನಾಯಕರು ನನ್ನನ್ನು ರಾಜ್ಯಪಾಲ ಹುದ್ದೆಯಿಂದ ಕೆಳಗಿಳಿಸಿದರೂ ಚಿಂತೆಯಿಲ್ಲ ಎಂದು ಸತ್ಯಪಾಲ್ ಮಲ್ಲಿಕ್ ಹೇಳಿದ್ದಾರೆ.

ರೈತ ಹೋರಾಟವು ಸೈನ್ಯದ ಮೇಲೂ ಭಾರೀ ಪ್ರಭಾವ ಬೀರಿದೆ. ರೈತರ ಮಕ್ಕಳು ಸೈನ್ಯದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಅನ್ಯಾಯ ನಡೆದಾಗ ಒಂದು ದಿನ ಜನರು ಅದಕ್ಕೆ ಪ್ರತಿಕ್ರಿಯೆ ನೀಡುತ್ತಾರೆ ಎಂದು ಸರ್ಕಾರಕ್ಕೆ ಗಂಭೀರ ಎಚ್ಚರಿಕೆ ನೀಡಿದ್ದಾರೆ.

ಹರಿಯಾಣದ ಮುಖ್ಯಮಂತ್ರಿ ಮನೋಹರ್ ಲಾಲ್ ಕಟ್ಟರ್‌ರವರ ಹೆಲಿಕ್ಯಾಪ್ಟರ್‌ ಎಲ್ಲಿಯೂ ಇಳಿಯಲು ಬಿಡುತ್ತಿಲ್ಲ ಎಂದರೆ ರೈತರ ಪ್ರತಿರೋಧವನ್ನು ಸರ್ಕಾರ ಅರ್ಥಮಾಡಿಕೊಳ್ಳಬೇಕು ಎಂದು ಅವರು ಹೇಳಿದ್ದಾರೆ.

ಕನಿಷ್ಟ ಬೆಂಬಲ ಬೆಲೆ ಖಾತ್ರಿ ನೀಡುವ ಮೂಲಕ ರೈತರ ಸಮಸ್ಯೆಯನ್ನು ಬಗೆಹರಿಸಬಹುದು. ಕೃಷಿ ಕಾಯ್ದೆಗಳು ಸಂಸತ್ತಿನಲ್ಲಿ ಜಾರಿಯಾಗುವ ಮೊದಲೇ ಹರಿಯಾಣದಲ್ಲಿ ಅದಾನಿ ಗೌಡೋನ್‌ಗಳು ಸ್ಥಾಪನೆಯಾಗಿವೆ ಎಂದು ಅವರು ಈ ಕಾಯ್ದೆಗಳ ಅಪಾಯದ ಕುರಿತು ಮಾತನಾಡಿದ್ದಾರೆ.

ಸೆಂಟ್ರಲ್ ವಿಸ್ತಾ ಯೋಜನೆಯನ್ನು ವಿರೋಧಿಸಿದ ಅವರು, ದೇಶದಲ್ಲಿ ಶಿಕ್ಷಣದ ಕೊರತೆಯಿದೆ. ಹಾಗಾಗಿ ಹೊಸ ಸಂಸತ್ ಭವನ ನಿರ್ಮಿಸುವ ಬದಲು ವಿಶ್ವದರ್ಜೆಯ ಕಾಲೇಜುಗಳನ್ನು ಸ್ಥಾಪಿಸಿದರೆ ಉಪಯೋಗ ಎಂದು ಸಲಹೆ ನೀಡಿದ್ದಾರೆ.


ಇದನ್ನೂ ಓದಿ: ಆರ್‌ಎಸ್‌ಎಸ್‌, ಬಿಜೆಪಿಯಲ್ಲಿ ಭಾರೀ ಭ್ರಷ್ಟಾಚಾರ: ಮೇಘಾಲಯ ರಾಜ್ಯಪಾಲರ ಗಂಭೀರ ಆರೋಪ


ಜಮ್ಮು ಕಾಶ್ಮೀರ ಮತ್ತು ಗೋವಾದ ಮಾಜಿ ರಾಜ್ಯಪಾಲರೂ ಆಗಿರುವ ಸತ್ಯಪಾಲ್ ಮಲ್ಲಿಕ್ ಕಳೆದ ಒಂದು ವರ್ಷದಿಂದ ನಿರಂತರವಾಗಿ ಕೇಂದ್ರ ಸರ್ಕಾರ ಮತ್ತು ಬಿಜೆಪಿ ವಿರುದ್ಧ ಟೀಕೆ ಮಾಡುತ್ತಿದ್ದಾರೆ.

ಗೋವಾದ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಹೆಜ್ಜೆ ಹೆಜ್ಜೆಗೂ ಭ್ರಷ್ಟಾಚಾರದಲ್ಲಿ ಮುಳುಗಿದ್ದಾರೆ. ಮೊದಲ ಲಾಕ್‌ಡೌನ್ ಸಂದರ್ಭದಲ್ಲಿ ಆಹಾರ ವಿತರಿಸುವ ವೇಳೆ ಕೋಟ್ಯಾಂತರ ರೂ ಗುಳುಂ ಮಾಡಿದ್ದಾರೆ ಎಂದು ಖಾಸಗಿ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಸತ್ಯ ಪಾಲ್ ಮಲ್ಲಿಕ್ ಆರೋಪಿಸಿದ್ದರು.

ನಾನು ಜಮ್ಮು ಮತ್ತು ಕಾಶ್ಮೀರದ ರಾಜ್ಯಪಾಲನಾಗಿದ್ದ ವೇಳೆ ಎರಡು ಕಡತಗಳು ನನ್ನ ಮುಂದೆ ಬಂದಿದ್ದವು. ಒಂದು ಮುಖೇಶ್ ಅಂಬಾನಿಗೆ ಸೇರಿದ್ದರೆ ಮತ್ತೊಂದು ಆರ್‌ಎಸ್‌ಎಸ್‌ ನಾಯಕನಿಗೆ ಸೇರಿತ್ತು. ಅದಕ್ಕೆ ಸಹಿ ಹಾಕಿದರೆ 300 ಕೋಟಿ ಲಂಚ ಕೊಡುವುದಾಗಿ ಆಮಿಷವೊಡ್ಡಿದ್ದರು. ಆದರೆ ನಾನು ಆ ಕೆಲಸ ಮಾಡಲಿಲ್ಲ ಬದಲಿಗೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಈ ವಿಷಯ ತಿಳಿಸಿದ್ದೆ ಎಂದು ಮಲ್ಲಿಕ್ ಹೇಳಿದ್ದರು.


ಇದನ್ನೂ ಓದಿ: ‘ನನ್ನನ್ನು ಕಿತ್ತು ಹಾಕಿದರೂ ನಾನು ಮಾತನಾಡುತ್ತೇನೆ’-ರೈತರನ್ನು ಮತ್ತೆ ಬೆಂಬಲಿಸಿದ ಮೇಘಾಲಯ ರಾಜ್ಯಪಾಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...