HomeUncategorizedಇಸ್ರೇಲ್‌ ಯುದ್ಧ ಭೀಕರತೆ: ಮಕ್ಕಳ ಸ್ಮಶಾನವಾದ ಗಾಝಾ!

ಇಸ್ರೇಲ್‌ ಯುದ್ಧ ಭೀಕರತೆ: ಮಕ್ಕಳ ಸ್ಮಶಾನವಾದ ಗಾಝಾ!

- Advertisement -
- Advertisement -

ಇಸ್ರೇಲ್ ಬಾಂಬ್‌ ದಾಳಿಗೆ ಗಾಝಾದಲ್ಲಿ 24,00ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ. ಇದರಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರ ಮತ್ತು ಮಕ್ಕಳ ಹತ್ಯಾಕಾಂಡವನ್ನು ಇಸ್ರೇಲ್‌ ನಡೆಸಿದೆ. ಪದೇ ಪದೇ ಶಾಲೆಗಳನ್ನು, ನವಜಾತ ಶಿಶುಗಳ ಆರೈಕೆ ಕೇಂದ್ರಗಳನ್ನು ಕೇಂದ್ರೀಕರಿಸಿ ಇಸ್ರೇಲ್‌ ದಾಳಿ ನಡೆಸಿದ್ದು, ಈವರೆಗೆ 10,000ಕ್ಕೂ ಹೆಚ್ಚು ಪ್ಯಾಲೇಸ್ತೀನ್‌ನ ಅಮಾಯಕ ಮಕ್ಕಳು ಇಸ್ರೇಲ್‌ ದಾಳಿಯಿಂದ ಕೊಲ್ಲಲ್ಪಟ್ಟಿದ್ದಾರೆ.

ಯುರೋ-ಮೆಡ್ ಮಾನವ ಹಕ್ಕುಗಳ ಮಾನಿಟರ್ ಬಿಡುಗಡೆ ಮಾಡಿದ್ದ ವರದಿಯ ಪ್ರಕಾರ, ಇಸ್ರೇಲ್ 10,000 ಕ್ಕೂ ಹೆಚ್ಚು ಶಿಶುಗಳು ಮತ್ತು ಮಕ್ಕಳನ್ನು ಕೊಂದಿದೆ. ನೂರಾರು ಮಕ್ಕಳು ಪಾಳುಬಿದ್ದ ಕಟ್ಟಡಗಳ ಅವಶೇಷಗಳಡಿಯಲ್ಲಿ ಉಳಿದುಕೊಂಡಿರುವುದರಿಂದ ಬದುಕುಳಿಯುವ ಸಾಧ್ಯತೆ ಕಡಿಮೆ ಇದೆ. ಸುಮಾರು 7,00,000 ಮಕ್ಕಳು ಇಸ್ರೇಲ್‌ನ ಗಾಝಾ ನರಮೇಧದಿಂದ ಪ್ರಭಾವಿತರಾಗಿದ್ದಾರೆ, ಇದರಲ್ಲಿ ಕೊಲ್ಲಲ್ಪಟ್ಟವರು, ಗಾಯಗೊಂಡವರು ಮತ್ತು ಆಂತರಿಕವಾಗಿ ಸ್ಥಳಾಂತರಗೊಂಡವರು ಸೇರಿದ್ದಾರೆ.

ಇಸ್ರೇಲ್‌ ದಾಳಿಯಲ್ಲಿ 18,000 ಪ್ಯಾಲೆಸ್ತೀನ್ ಮಕ್ಕಳು ಗಾಯಗೊಂಡಿದ್ದಾರೆ. ಇದರಲ್ಲಿ ಅನೇಕ ಮಕ್ಕಳು ಗಂಭೀರವಾಗಿದ್ದಾರೆ. ಡಜನ್‌ಗಟ್ಟಲೆ ಮಕ್ಕಳು ಅಂಗಾಂಗಳನ್ನು ಕಳೆದುಕೊಂಡಿದ್ದಾರೆ ಮತ್ತು ನೂರಾರು ಮ್ಕಕಳು ತಮ್ಮ ದೇಹದ ವಿವಿಧ ಭಾಗಗಳಿಗೆ ತೀವ್ರ ಸುಟ್ಟಗಾಯಗಳನ್ನು ಅನುಭವಿಸಿದ್ದಾರೆ. ಸ್ಥಳಾಂತರಗೊಂಡ ಮಕ್ಕಳಲ್ಲಿ 50 ಪ್ರತಿಶತದಷ್ಟು ಮಕ್ಕಳು ನಿರ್ಜಲೀಕರಣ, ಅಪೌಷ್ಟಿಕತೆ, ಉಸಿರಾಟ ಮತ್ತು ಚರ್ಮ ರೋಗಗಳು, ತೀವ್ರ ಶೀತದಿಂದ ಅನಾರೋಗ್ಯಕ್ಕೆ ತುತ್ತಾಗಿದ್ದಾರೆ. ನವಜಾತ ಶಿಶುಗಳಿಗೆ ಲಸಿಕೆ ಸಿಗದೆ ಅಪಾಯದಲ್ಲಿದೆ.

ಗಾಝಾ ಪಟ್ಟಿಯಲ್ಲಿರುವ ಕನಿಷ್ಠ 25,000 ಮಕ್ಕಳು ಒಬ್ಬ ಅಥವಾ ಇಬ್ಬರ ಪೋಷಕರನ್ನು ಕಳೆದುಕೊಂಡಿದ್ದಾರೆ. ಸಾವಿರಾರು ಮಕ್ಕಳು ಭವಿಷ್ಯವನ್ನು ಕಳೆದುಕೊಂಡಿದ್ದಾರೆ. ಗಾಝಾ ಪಟ್ಟಿಯಲ್ಲಿರುವ 217 ಶಾಲೆಗಳು ಇಸ್ರೇಲ್‌ ದಾಳಿಯ ಸಮಯದಲ್ಲಿ ಹಾನಿಗೊಳಗಾಗಿವೆ.

ಸೇವ್ ದಿ ಚಿಲ್ಡ್ರನ್ ಡೇಟಾ ಪ್ರಕಾರ, ಗಾಝಾದಲ್ಲಿ ಪ್ರತಿ 10 ನಿಮಿಷಕ್ಕೆ ಒಂದು ಮಗುವನ್ನು ಕೊಲ್ಲಲಾಗುತ್ತಿದೆ. ಮಧ್ಯಪ್ರಾಚ್ಯ ಮತ್ತು ಉತ್ತರ ಆಫ್ರಿಕಾದ ಯುನಿಸೆಫ್ ಪ್ರಾದೇಶಿಕ ನಿರ್ದೇಶಕ ಅಡೆಲೆ ಖೋಡ್ರ್ ಶನಿವಾರ ಹೇಳಿಕೆಯೊಂದರಲ್ಲಿ, ಗಾಝಾವು ಮಕ್ಕಳಿಗೆ ಪ್ರಪಂಚದಲ್ಲೇ ಅತ್ಯಂತ ಅಪಾಯಕಾರಿ ಸ್ಥಳವಾಗಿದೆ. ವಿಶ್ವದೆಲ್ಲೆಡೆ ಮಕ್ಕಳು ಆಟವಾಡುತ್ತಿರುವಾಗ ಮತ್ತು ಶಾಲೆಗೆ ಹೋಗುತ್ತಿರುವಾಗ ಗಾಝಾ ಮಕ್ಕಳ ಅವಶೇಷಗಳ ರಾಶಿಯಾಗಿ ಮಾರ್ಪಟ್ಟಿದೆ ಎಂದು ಹೇಳಿದ್ದಾರೆ.

ಅ.7ರಂದು ಯುದ್ಧ ಪ್ರಾರಂಭವಾದಾಗಿನಿಂದ ಸುಮಾರು ಒಂದು ಮಿಲಿಯನ್ ಮಕ್ಕಳನ್ನು ಈಗ ಬಲವಂತವಾಗಿ ಸ್ಥಳಾಂತರಿಸಲಾಗಿದೆ ಎಂದು UN ಮಕ್ಕಳ ಏಜೆನ್ಸಿಯ ಹೇಳಿದೆ. ನೀರು, ಆಹಾರ, ಅಥವಾ ರಕ್ಷಣೆಯಿಲ್ಲದೆ, ಉಸಿರಾಟದ ಸೋಂಕುಗಳು ಮತ್ತು ನೀರಿನಿಂದ ಹರಡುವ ರೋಗಗಳ ಅಪಾಯಗಳು ಹೆಚ್ಚಿದ್ದು, ಗಾಝಾ ಮಕ್ಕಳ ಸ್ಮಶಾನವಾಗಿದೆ ಎಂದು ಹೇಳಿದೆ.

ಪ್ಯಾಲೆಸ್ತೀನಿಯನ್‌ ನರಮೇಧವನ್ನು ಸಂಭ್ರಮಿಸಿ ಹಾಡು ಹಾಡಿದ್ದ ಇಸ್ರೇಲ್ ಮಕ್ಕಳು:

ನವೆಂಬರ್‌ನಲ್ಲಿ ಇಸ್ರೇಲ್‌ನ ಸಾರ್ವಜನಿಕ ಬ್ರಾಡ್‌ಕಾಸ್ಟರ್ ಕಾನ್, ತನ್ನ ಅಧಿಕೃತ ಎಕ್ಸ್‌ಲ್ಲಿನ ಪೋಸ್ಟ್‌ನಲ್ಲಿ  ಇಸ್ರೇಲ್‌ ಮಕ್ಕಳು ಗಾಝಾದಲ್ಲಿ ಪ್ಯಾಲೆಸ್ತೀನಿಯನ್ನರು ನರಮೇಧವನ್ನು ಆಚರಿಸುವ ಹಾಡನ್ನು ಹಾಡುವ ವೀಡಿಯೊವನ್ನು ಅಪ್‌ಲೋಡ್ ಮಾಡಿದೆ. ಟೀಕೆಗೆ ಒಳಗಾದ ಬಳಿಕ ನಂತರ ವೀಡಿಯೊ ಕ್ಲಿಪ್‌ನ್ನು ಅಳಿಸಿದ್ದಾರೆ. ಸಾಮಾಜಿಕ ಮಾಧ್ಯಮದಿಂದ ವೀಡಿಯೊವನ್ನು ಅಳಿಸಿದ ನಂತರವೂ, ಹಾಡು ಚರ್ಚೆ ಮತ್ತು ವಿವಾದದ ವಿಷಯವಾಗಿ ಉಳಿದಿದೆ. ಒಂದು ವರ್ಷದೊಳಗೆ ಇಡೀ ಗಾಝಾದ ಜನರನ್ನು ನಿರ್ಮೂಲನೆ ಮಾಡುವ ಬಗ್ಗೆ ಮಕ್ಕಳು ಸಂತೋಷದಿಂದ ಹಾಡುವುದನ್ನು ನೋಡಿ ಪ್ರಪಂಚದಾದ್ಯಂತದ ಅನೇಕರು ಆಘಾತಕ್ಕೊಳಗಾಗಿದ್ದರು.

ರಾಫಾದಲ್ಲಿ ನಾಗರಿಕರ ಪರಿಸ್ಥಿತಿಗಳು ಗಂಭೀರ:

ದಕ್ಷಿಣ ಗಾಝಾ ಪಟ್ಟಿಯಲ್ಲಿರುವ ರಾಫಾದಲ್ಲಿ ನಾಗರಿಕರ ಪರಿಸ್ಥಿತಿಗಳು ಅತ್ಯಂತ ಭೀಕರವಾಗಿವೆ ಎಂದು ಇಂಟರ್ನ್ಯಾಷನಲ್ ಕಮಿಟಿ ಆಫ್ ದಿ ರೆಡ್ ಕ್ರಾಸ್ (ICRC) ಹೇಳಿಕೊಂಡಿದೆ. ರಾಫಾ ಈಜಿಪ್ಟ್‌ನ ಗಡಿಯ ಸಮೀಪದಲ್ಲಿದೆ ಮತ್ತು ಲಕ್ಷಾಂತರ ಮಂದಿ ಅಲ್ಲಿ ಆಶ್ರಯವನ್ನು ಪಡದುಕೊಂಡಿದ್ದಾರೆ.

ರಾಫಾದಲ್ಲಿ ನಿರಾಶ್ರಿತ ಜನರ ಅಗತ್ಯಗಳನ್ನು ಪೂರೈಸಲು ನಮ್ಮಲ್ಲಿ ಸಾಕಷ್ಟು ಪರಿಹಾರ ಸಾಮಗ್ರಿಗಳಿಲ್ಲ.ಸಾಕಷ್ಟು ನೀರು ಇಲ್ಲ, ಸಾಕಷ್ಟು ನೈರ್ಮಲ್ಯವಿಲ್ಲ, ಮತ್ತು ಜನರಿಗೆ ಆಹಾರ, ವೈದ್ಯಕೀಯ ಹಾರೈಕೆ ಸಿಗುತ್ತಿಲ್ಲ ಎಂದು ICRC ಕ್ಷಿಪ್ರ ನಿಯೋಜನೆ ಸಂಯೋಜಕ ಸ್ಟೀಫನ್ ರಯಾನ್ ತಿಳಿಸಿದ್ದಾರೆ.

ವಿಶ್ವ ಆರೋಗ್ಯ ಸಂಸ್ಥೆಯ ಮುಖ್ಯಸ್ಥ ಟೆಡ್ರೊಸ್ ಅಧಾನೊಮ್ ಘೆಬ್ರೆಯೆಸಸ್, ಗಾಝಾದ ಜನಸಂಖ್ಯೆಯನ್ನು ಎದುರಿಸುತ್ತಿರುವ ಗಂಭೀರ ಅಪಾಯವನ್ನು ನಿವಾರಿಸಲು ಮತ್ತು ಗಾಯಗಳು, ತೀವ್ರವಾದ ಹಸಿವಿನಿಂದ ಬಳಲುತ್ತಿರುವ ಜನರಿಗೆ ತುರ್ತು ಸಹಾಯ ಮಾಡುವಂತೆ ಅಂತರಾಷ್ಟ್ರೀಯ ಸಮುದಾಯಕ್ಕೆ ಕರೆ ನೀಡಿದ್ದಾರೆ.

ಆಸ್ಪತ್ರೆಗಳಿಗೆ ಔಷಧಗಳು, ವೈದ್ಯಕೀಯ ಸರಬರಾಜುಗಳು ಮತ್ತು ಇಂಧನವನ್ನು ಪೂರೈಸುವ ಸಾಮರ್ಥ್ಯವು ಸೀಮಿತವಾಗಿದೆ. ಇತ್ತೀಚಿನ WHO ಮೌಲ್ಯಮಾಪನಗಳ ಪ್ರಕಾರ ಗಾಝಾದಲ್ಲಿ 13 ಭಾಗಶಃ ಕಾರ್ಯನಿರ್ವಹಿಸುವ ಆಸ್ಪತ್ರೆಗಳನ್ನು ಹೊಂದಿದೆ ಮತ್ತು 21 ಆಸ್ಪತ್ರೆಗಳು ಕಾರ್ಯನಿರ್ವಹಿಸುತ್ತಿಲ್ಲ ಎಂದು ಹೇಳಿದೆ. ನಾಗರಿಕರನ್ನು ಮತ್ತಷ್ಟು ಹಿಂಸಾಚಾರದಿಂದ ರಕ್ಷಿಸಲು ಮತ್ತು ಮತ್ತು ಶಾಂತಿ ಸ್ಥಾಪನೆಗೆ ಕದನ ವಿರಾಮ ಒಂದೇ ದಾರಿಯಾಗಿದೆ ಎಂದು ಟೆಡ್ರೊಸ್ ಹೇಳಿದರು.

ಕಳೆದ 24 ಗಂಟೆಗಳ ಅವಧಿಯಲ್ಲಿ ಗಾಝಾದ ಮೇಲೆ ಇಸ್ರೇಲ್‌ ನಡೆಸಿದ ದಾಳಿಯಲ್ಲಿ ಸುಮಾರು 210 ಪ್ಯಾಲೆಸ್ತೀನಿಯನ್ನರು ಸಾವನ್ನಪ್ಪಿದ್ದಾರೆ ಮತ್ತು 325 ಮಂದಿ ಗಾಯಗೊಂಡಿದ್ದಾರೆ ಎಂದು ಪ್ಯಾಲೇಸ್ತೀನಿಯನ್ ಆರೋಗ್ಯ ಸಚಿವಾಲಯ ತಿಳಿಸಿದೆ. ಇಸ್ರೇಲ್‌ ಮಿಲಿಟರಿ ಕ್ಲಿಯರೆನ್ಸ್ ಆದೇಶಗಳ ನಂತರ ಕನಿಷ್ಠ 1,00,000 ಸ್ಥಳಾಂತರಗೊಂಡ ಜನರು ರಾಫಾದಲ್ಲಿ ಸೇರಿದ್ದಾರೆ.

ಇದನ್ನು ಓದಿ: ಲೋಕಸಭೆ ಚುನಾವಣೆಗೆ ಮುನ್ನ ಇವಿಎಂ ಸರಿಪಡಿಸದಿದ್ದರೆ ಬಿಜೆಪಿ 400 ಸ್ಥಾನಗಳನ್ನು ಗೆಲ್ಲಬಹುದು: ಸ್ಯಾಮ್ ಪಿತ್ರೋಡಾ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಪ್ರಾಪ್ತ ಮಗುವಿನ ವಿಡಿಯೋಗೆ ವಿಕೃತವಾಗಿ ಕಮೆಂಟಿಸಿದ ನಟಿ ರೂಪಾಲಿ ಗಂಗೂಲಿ: ‘ಮೋದಿ ಸರ್ವಾಧಿಕಾರಿಯಾಗಿದ್ದರೆ ಚೆನ್ನಾಗಿತ್ತು’ ಎಂದ ನಟಿ ವಿರುದ್ಧ ಜನಾಕ್ರೋಶ

ಹಿಂದಿ ಕಿರುತೆರೆಯ ಜನಪ್ರಿಯ ನಟಿ ಹಾಗೂ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಸದಸ್ಯೆ ರೂಪಾಲಿ ಗಂಗೂಲಿ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಕುರಿತು ನೀಡಿದ ವಿವಾದಾತ್ಮಕ ಹೇಳಿಕೆಯೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ...

‘ಅಂಬೇಡ್ಕರ್ ಅವರನ್ನು ಆಚರಿಸುವ ಬಿಜೆಪಿ, ‘ಹಿಂದೂ ರಾಷ್ಟ್ರ’ದ ಕುರಿತ ಅವರ ಎಚ್ಚರಿಕೆಯನ್ನೂ ಓದಲಿ’: ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: ದೇಶದಲ್ಲಿ ‘ಹಿಂದೂ ರಾಷ್ಟ್ರ’ ನಿರ್ಮಾಣದ ಬೇಡಿಕೆಯನ್ನು ತೀವ್ರವಾಗಿ ಟೀಕಿಸಿರುವ ಕರ್ನಾಟಕದ ಸಚಿವ ಪ್ರಿಯಾಂಕ್ ಖರ್ಗೆ, ಬಿಜೆಪಿ ನಾಯಕರು ಡಾ. ಬಿ.ಆರ್. ಅಂಬೇಡ್ಕರ್ ಅವರು ನೀಡಿದ್ದ ಎಚ್ಚರಿಕೆಗಳನ್ನು ಓದಬೇಕೆಂದು ಒತ್ತಾಯಿಸಿದ್ದಾರೆ. ಬಿಜೆಪಿ ನಾಯಕರು ಭಾರತ...

‘ಪರಿಶೀಲನೆ ಮಾನವ ಘನತೆಯನ್ನು ಬಲಿಪಡೆಯಬಾರದು’: ನಾಗಪುರ ಜೈಲಿನ ಅಮಾನವೀಯ ವಿವಸ್ತ್ರ ಪರಿಶೀಲನೆ ವಿರುದ್ಧ ಜೈಲಿನಲ್ಲಿರುವ ಕೇರಳ ಕಾರ್ಯಕರ್ತ ಆರೋಪ

ಬಂಧನದಲ್ಲಿರುವ ವ್ಯಕ್ತಿಗಳು ಅಥವಾ ಕೈದಿಗಳು ಜೈಲಿನ ಬಾಗಿಲು ಪ್ರವೇಶಿಸಿದ ತಕ್ಷಣ ತಮ್ಮ ಸಾಂವಿಧಾನಿಕ ಹಕ್ಕುಗಳನ್ನು ಹಾಗೂ ಮಾನವ ಘನತೆಯನ್ನು ಕಳೆದುಕೊಳ್ಳುವುದಿಲ್ಲ. ಆದರೆ, ಮಹಾರಾಷ್ಟ್ರದ ನಾಗಪುರ ಕೇಂದ್ರ ಕಾರಾಗೃಹದ 'ಅಂಡಾ ಸೆಲ್'ನಲ್ಲಿ ಕಾನೂನುಬಾಹಿರ ಚಟುವಟಿಕೆಗಳ...

‘ಅದು ಪೊಲೀಸರೇ ನಡೆಸಿದ ಪೂರ್ವ ಯೋಜಿತ ಕೃತ್ಯ’: ಸಂಭಾಲ್ ಹಿಂಸಾಚಾರ ನ್ಯಾಯಾಂಗ ಆಯೋಗದ ವರದಿ ತಿರಸ್ಕರಿಸಿದ ಸಂಸದ ಜಿಯಾ-ಉರ್-ರೆಹಮಾನ್

ಉತ್ತರ ಪ್ರದೇಶದ ಸಂಭಾಲ್‌ನಲ್ಲಿ 2024ರ ನವೆಂಬರ್‌ನಲ್ಲಿ ನಡೆದಿದ್ದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಸಲ್ಲಿಕೆಯಾಗಿದ್ದ ನ್ಯಾಯಾಂಗ ಆಯೋಗದ ವರದಿಯನ್ನು ಸಮಾಜವಾದಿ ಪಕ್ಷದ (ಎಸ್‌ಪಿ) ಸಂಸದ ಜಿಯಾ-ಉರ್-ರೆಹಮಾನ್ ಬಾರ್ಕ್ ಸಂಪೂರ್ಣವಾಗಿ ತಿರಸ್ಕರಿಸಿದ್ದಾರೆ. ಘಟನೆಯಲ್ಲಿ ನಾಲ್ವರು...

24 ವರ್ಷಗಳ ಮೋದಿ ವರ್ಚಸ್ಸನ್ನು 2 ವಾರಗಳಲ್ಲಿ ಧೂಳೀಪಟ ಮಾಡಿದ ಸಿಜೆಪಿ: CJP ಆಂದೋಲನಕ್ಕೆ ಅರುಂಧತಿ ರಾಯ್ ಮೆಚ್ಚುಗೆ

ಪ್ರಧಾನಿ ನರೇಂದ್ರ ಮೋದಿ ಅವರ ಎರಡು ದಶಕಗಳಿಗೂ ಹೆಚ್ಚಿನ ಸುದೀರ್ಘ ರಾಜಕೀಯ ವರ್ಚಸ್ಸನ್ನು ಕಾಕ್ರೋಚ್ ಜನತಾ ಪಾರ್ಟಿ (CJP) ನಡೆಸಿದ ಪ್ರತಿಭಟನಾ ಆಂದೋಲನವು ಕೇವಲ ಎರಡು ವಾರಗಳಲ್ಲಿ ಬುಡಸಮೇತ ಅಲ್ಲಾಡಿಸಿದೆ. ಇದು ಯಾವುದೇ...

ಕ್ಯಾಬಿನೆಟ್‌ನಲ್ಲಿ ಮಹಿಳೆಯರಿಗಿಲ್ಲ ಸ್ಥಾನ: ಸಿಎಂ ಡಿ.ಕೆ. ಶಿವಕುಮಾರ್ ಗೆ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆಯಿಂದ ಬಹಿರಂಗ ಪತ್ರ

ಕರ್ನಾಟಕದ ನೂತನ ಸಚಿವ ಸಂಪುಟದಲ್ಲಿ ಒಬ್ಬರೇ ಒಬ್ಬರು ಮಹಿಳಾ ಶಾಸಕರಿಗೆ ಅವಕಾಶ ನೀಡದಿರುವುದನ್ನು ತೀವ್ರವಾಗಿ ಖಂಡಿಸಿರುವ ರಾಜ್ಯದ ಪ್ರಮುಖ ಮಹಿಳಾ ಹಾಗೂ ಜನಪರ ಸಂಘಟನೆಗಳ ಒಕ್ಕೂಟ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆ ಮುಖ್ಯಮಂತ್ರಿಗಳಿಗೆ ಬಹಿರಂಗ...

ಜಾರ್ಖಂಡ್ | ಜೆಪಿಎಸ್‌ಸಿ, ಜೆಎಸ್‌ಎಸ್‌ಸಿ ಪರೀಕ್ಷಾ ಅಕ್ರಮಗಳ ವಿರುದ್ಧ ತೀವ್ರಗೊಂಡ ಪ್ರತಿಭಟನೆ : ಆರು ಮಂದಿಯಿಂದ ಉಪವಾಸ ಸತ್ಯಾಗ್ರಹ

ಜಾರ್ಖಂಡ್ ಲೋಕ ಸೇವಾ ಆಯೋಗ (ಜೆಪಿಎಸ್‌ಸಿ) ಮತ್ತು ಜಾರ್ಖಂಡ್ ಸಿಬ್ಬಂದಿ ಆಯ್ಕೆ ಆಯೋಗ (ಜೆಎಸ್ಎಸ್‌ಸಿ) ನಡೆಸಿದ ವಿವಿಧ ನೇಮಕಾತಿ ಪರೀಕ್ಷೆಗಳಲ್ಲಿ ನಡೆದಿರುವ ಆಪಾದಿತ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮಗಳ ವಿರುದ್ಧದ ಪ್ರತಿಭಟನೆಯು ತೀವ್ರ...

ಸಚಿವ ಸ್ಥಾನ ಸಿಗದಿದ್ದಕ್ಕೆ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂಬುದು ಸುಳ್ಳು: ಶಾಸಕ ಬಿ. ಆರ್‌ ಪಾಟೀಲ್‌ ಸ್ಪಷ್ಟನೆ

ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ನಾನು ರಾಜೀನಾಮೆ ಸಲ್ಲಿಸಿರುವುದು ನಿಜ. ಆದರೆ, ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುತ್ತಿದ್ದೇನೆ ಎಂದು ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಸುದ್ದಿಗಳು...

ಪ್ರಧಾನಿ ಮೋದಿ ವಿಡಿಯೋ ತೆಗೆದುಹಾಕಿದ ಪ್ರಕರಣ: ಮಾರ್ಕ್ ಝುಕರ್‌ಬರ್ಗ್‌ ಕ್ಷಮೆಯಾಚಣೆಗೆ ಒತ್ತಾಯಿಸಿದ ಸಂಸದೀಯ ಸಮಿತಿ; 3 ದಿನಗಳ ಗಡುವು

ಪ್ರಧಾನಿ ನರೇಂದ್ರ ಮೋದಿಯವರ ವೀಡಿಯೊವನ್ನು ಫೇಸ್‌ಬುಕ್‌ನಿಂದ ತೆಗೆದುಹಾಕಿದ್ದಕ್ಕೆ ಸಂಬಂಧಿಸಿದಂತೆ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಬೇಕೆಂದು ಸಂಸದೀಯ ಸ್ಥಾಯಿ ಸಮಿತಿ ಒತ್ತಾಯಿಸಿದ್ದು, ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದೆ. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ...

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...