HomeUncategorizedಇಸ್ರೇಲ್‌ ಯುದ್ಧ ಭೀಕರತೆ: ಮಕ್ಕಳ ಸ್ಮಶಾನವಾದ ಗಾಝಾ!

ಇಸ್ರೇಲ್‌ ಯುದ್ಧ ಭೀಕರತೆ: ಮಕ್ಕಳ ಸ್ಮಶಾನವಾದ ಗಾಝಾ!

- Advertisement -
- Advertisement -

ಇಸ್ರೇಲ್ ಬಾಂಬ್‌ ದಾಳಿಗೆ ಗಾಝಾದಲ್ಲಿ 24,00ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ. ಇದರಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರ ಮತ್ತು ಮಕ್ಕಳ ಹತ್ಯಾಕಾಂಡವನ್ನು ಇಸ್ರೇಲ್‌ ನಡೆಸಿದೆ. ಪದೇ ಪದೇ ಶಾಲೆಗಳನ್ನು, ನವಜಾತ ಶಿಶುಗಳ ಆರೈಕೆ ಕೇಂದ್ರಗಳನ್ನು ಕೇಂದ್ರೀಕರಿಸಿ ಇಸ್ರೇಲ್‌ ದಾಳಿ ನಡೆಸಿದ್ದು, ಈವರೆಗೆ 10,000ಕ್ಕೂ ಹೆಚ್ಚು ಪ್ಯಾಲೇಸ್ತೀನ್‌ನ ಅಮಾಯಕ ಮಕ್ಕಳು ಇಸ್ರೇಲ್‌ ದಾಳಿಯಿಂದ ಕೊಲ್ಲಲ್ಪಟ್ಟಿದ್ದಾರೆ.

ಯುರೋ-ಮೆಡ್ ಮಾನವ ಹಕ್ಕುಗಳ ಮಾನಿಟರ್ ಬಿಡುಗಡೆ ಮಾಡಿದ್ದ ವರದಿಯ ಪ್ರಕಾರ, ಇಸ್ರೇಲ್ 10,000 ಕ್ಕೂ ಹೆಚ್ಚು ಶಿಶುಗಳು ಮತ್ತು ಮಕ್ಕಳನ್ನು ಕೊಂದಿದೆ. ನೂರಾರು ಮಕ್ಕಳು ಪಾಳುಬಿದ್ದ ಕಟ್ಟಡಗಳ ಅವಶೇಷಗಳಡಿಯಲ್ಲಿ ಉಳಿದುಕೊಂಡಿರುವುದರಿಂದ ಬದುಕುಳಿಯುವ ಸಾಧ್ಯತೆ ಕಡಿಮೆ ಇದೆ. ಸುಮಾರು 7,00,000 ಮಕ್ಕಳು ಇಸ್ರೇಲ್‌ನ ಗಾಝಾ ನರಮೇಧದಿಂದ ಪ್ರಭಾವಿತರಾಗಿದ್ದಾರೆ, ಇದರಲ್ಲಿ ಕೊಲ್ಲಲ್ಪಟ್ಟವರು, ಗಾಯಗೊಂಡವರು ಮತ್ತು ಆಂತರಿಕವಾಗಿ ಸ್ಥಳಾಂತರಗೊಂಡವರು ಸೇರಿದ್ದಾರೆ.

ಇಸ್ರೇಲ್‌ ದಾಳಿಯಲ್ಲಿ 18,000 ಪ್ಯಾಲೆಸ್ತೀನ್ ಮಕ್ಕಳು ಗಾಯಗೊಂಡಿದ್ದಾರೆ. ಇದರಲ್ಲಿ ಅನೇಕ ಮಕ್ಕಳು ಗಂಭೀರವಾಗಿದ್ದಾರೆ. ಡಜನ್‌ಗಟ್ಟಲೆ ಮಕ್ಕಳು ಅಂಗಾಂಗಳನ್ನು ಕಳೆದುಕೊಂಡಿದ್ದಾರೆ ಮತ್ತು ನೂರಾರು ಮ್ಕಕಳು ತಮ್ಮ ದೇಹದ ವಿವಿಧ ಭಾಗಗಳಿಗೆ ತೀವ್ರ ಸುಟ್ಟಗಾಯಗಳನ್ನು ಅನುಭವಿಸಿದ್ದಾರೆ. ಸ್ಥಳಾಂತರಗೊಂಡ ಮಕ್ಕಳಲ್ಲಿ 50 ಪ್ರತಿಶತದಷ್ಟು ಮಕ್ಕಳು ನಿರ್ಜಲೀಕರಣ, ಅಪೌಷ್ಟಿಕತೆ, ಉಸಿರಾಟ ಮತ್ತು ಚರ್ಮ ರೋಗಗಳು, ತೀವ್ರ ಶೀತದಿಂದ ಅನಾರೋಗ್ಯಕ್ಕೆ ತುತ್ತಾಗಿದ್ದಾರೆ. ನವಜಾತ ಶಿಶುಗಳಿಗೆ ಲಸಿಕೆ ಸಿಗದೆ ಅಪಾಯದಲ್ಲಿದೆ.

ಗಾಝಾ ಪಟ್ಟಿಯಲ್ಲಿರುವ ಕನಿಷ್ಠ 25,000 ಮಕ್ಕಳು ಒಬ್ಬ ಅಥವಾ ಇಬ್ಬರ ಪೋಷಕರನ್ನು ಕಳೆದುಕೊಂಡಿದ್ದಾರೆ. ಸಾವಿರಾರು ಮಕ್ಕಳು ಭವಿಷ್ಯವನ್ನು ಕಳೆದುಕೊಂಡಿದ್ದಾರೆ. ಗಾಝಾ ಪಟ್ಟಿಯಲ್ಲಿರುವ 217 ಶಾಲೆಗಳು ಇಸ್ರೇಲ್‌ ದಾಳಿಯ ಸಮಯದಲ್ಲಿ ಹಾನಿಗೊಳಗಾಗಿವೆ.

ಸೇವ್ ದಿ ಚಿಲ್ಡ್ರನ್ ಡೇಟಾ ಪ್ರಕಾರ, ಗಾಝಾದಲ್ಲಿ ಪ್ರತಿ 10 ನಿಮಿಷಕ್ಕೆ ಒಂದು ಮಗುವನ್ನು ಕೊಲ್ಲಲಾಗುತ್ತಿದೆ. ಮಧ್ಯಪ್ರಾಚ್ಯ ಮತ್ತು ಉತ್ತರ ಆಫ್ರಿಕಾದ ಯುನಿಸೆಫ್ ಪ್ರಾದೇಶಿಕ ನಿರ್ದೇಶಕ ಅಡೆಲೆ ಖೋಡ್ರ್ ಶನಿವಾರ ಹೇಳಿಕೆಯೊಂದರಲ್ಲಿ, ಗಾಝಾವು ಮಕ್ಕಳಿಗೆ ಪ್ರಪಂಚದಲ್ಲೇ ಅತ್ಯಂತ ಅಪಾಯಕಾರಿ ಸ್ಥಳವಾಗಿದೆ. ವಿಶ್ವದೆಲ್ಲೆಡೆ ಮಕ್ಕಳು ಆಟವಾಡುತ್ತಿರುವಾಗ ಮತ್ತು ಶಾಲೆಗೆ ಹೋಗುತ್ತಿರುವಾಗ ಗಾಝಾ ಮಕ್ಕಳ ಅವಶೇಷಗಳ ರಾಶಿಯಾಗಿ ಮಾರ್ಪಟ್ಟಿದೆ ಎಂದು ಹೇಳಿದ್ದಾರೆ.

ಅ.7ರಂದು ಯುದ್ಧ ಪ್ರಾರಂಭವಾದಾಗಿನಿಂದ ಸುಮಾರು ಒಂದು ಮಿಲಿಯನ್ ಮಕ್ಕಳನ್ನು ಈಗ ಬಲವಂತವಾಗಿ ಸ್ಥಳಾಂತರಿಸಲಾಗಿದೆ ಎಂದು UN ಮಕ್ಕಳ ಏಜೆನ್ಸಿಯ ಹೇಳಿದೆ. ನೀರು, ಆಹಾರ, ಅಥವಾ ರಕ್ಷಣೆಯಿಲ್ಲದೆ, ಉಸಿರಾಟದ ಸೋಂಕುಗಳು ಮತ್ತು ನೀರಿನಿಂದ ಹರಡುವ ರೋಗಗಳ ಅಪಾಯಗಳು ಹೆಚ್ಚಿದ್ದು, ಗಾಝಾ ಮಕ್ಕಳ ಸ್ಮಶಾನವಾಗಿದೆ ಎಂದು ಹೇಳಿದೆ.

ಪ್ಯಾಲೆಸ್ತೀನಿಯನ್‌ ನರಮೇಧವನ್ನು ಸಂಭ್ರಮಿಸಿ ಹಾಡು ಹಾಡಿದ್ದ ಇಸ್ರೇಲ್ ಮಕ್ಕಳು:

ನವೆಂಬರ್‌ನಲ್ಲಿ ಇಸ್ರೇಲ್‌ನ ಸಾರ್ವಜನಿಕ ಬ್ರಾಡ್‌ಕಾಸ್ಟರ್ ಕಾನ್, ತನ್ನ ಅಧಿಕೃತ ಎಕ್ಸ್‌ಲ್ಲಿನ ಪೋಸ್ಟ್‌ನಲ್ಲಿ  ಇಸ್ರೇಲ್‌ ಮಕ್ಕಳು ಗಾಝಾದಲ್ಲಿ ಪ್ಯಾಲೆಸ್ತೀನಿಯನ್ನರು ನರಮೇಧವನ್ನು ಆಚರಿಸುವ ಹಾಡನ್ನು ಹಾಡುವ ವೀಡಿಯೊವನ್ನು ಅಪ್‌ಲೋಡ್ ಮಾಡಿದೆ. ಟೀಕೆಗೆ ಒಳಗಾದ ಬಳಿಕ ನಂತರ ವೀಡಿಯೊ ಕ್ಲಿಪ್‌ನ್ನು ಅಳಿಸಿದ್ದಾರೆ. ಸಾಮಾಜಿಕ ಮಾಧ್ಯಮದಿಂದ ವೀಡಿಯೊವನ್ನು ಅಳಿಸಿದ ನಂತರವೂ, ಹಾಡು ಚರ್ಚೆ ಮತ್ತು ವಿವಾದದ ವಿಷಯವಾಗಿ ಉಳಿದಿದೆ. ಒಂದು ವರ್ಷದೊಳಗೆ ಇಡೀ ಗಾಝಾದ ಜನರನ್ನು ನಿರ್ಮೂಲನೆ ಮಾಡುವ ಬಗ್ಗೆ ಮಕ್ಕಳು ಸಂತೋಷದಿಂದ ಹಾಡುವುದನ್ನು ನೋಡಿ ಪ್ರಪಂಚದಾದ್ಯಂತದ ಅನೇಕರು ಆಘಾತಕ್ಕೊಳಗಾಗಿದ್ದರು.

ರಾಫಾದಲ್ಲಿ ನಾಗರಿಕರ ಪರಿಸ್ಥಿತಿಗಳು ಗಂಭೀರ:

ದಕ್ಷಿಣ ಗಾಝಾ ಪಟ್ಟಿಯಲ್ಲಿರುವ ರಾಫಾದಲ್ಲಿ ನಾಗರಿಕರ ಪರಿಸ್ಥಿತಿಗಳು ಅತ್ಯಂತ ಭೀಕರವಾಗಿವೆ ಎಂದು ಇಂಟರ್ನ್ಯಾಷನಲ್ ಕಮಿಟಿ ಆಫ್ ದಿ ರೆಡ್ ಕ್ರಾಸ್ (ICRC) ಹೇಳಿಕೊಂಡಿದೆ. ರಾಫಾ ಈಜಿಪ್ಟ್‌ನ ಗಡಿಯ ಸಮೀಪದಲ್ಲಿದೆ ಮತ್ತು ಲಕ್ಷಾಂತರ ಮಂದಿ ಅಲ್ಲಿ ಆಶ್ರಯವನ್ನು ಪಡದುಕೊಂಡಿದ್ದಾರೆ.

ರಾಫಾದಲ್ಲಿ ನಿರಾಶ್ರಿತ ಜನರ ಅಗತ್ಯಗಳನ್ನು ಪೂರೈಸಲು ನಮ್ಮಲ್ಲಿ ಸಾಕಷ್ಟು ಪರಿಹಾರ ಸಾಮಗ್ರಿಗಳಿಲ್ಲ.ಸಾಕಷ್ಟು ನೀರು ಇಲ್ಲ, ಸಾಕಷ್ಟು ನೈರ್ಮಲ್ಯವಿಲ್ಲ, ಮತ್ತು ಜನರಿಗೆ ಆಹಾರ, ವೈದ್ಯಕೀಯ ಹಾರೈಕೆ ಸಿಗುತ್ತಿಲ್ಲ ಎಂದು ICRC ಕ್ಷಿಪ್ರ ನಿಯೋಜನೆ ಸಂಯೋಜಕ ಸ್ಟೀಫನ್ ರಯಾನ್ ತಿಳಿಸಿದ್ದಾರೆ.

ವಿಶ್ವ ಆರೋಗ್ಯ ಸಂಸ್ಥೆಯ ಮುಖ್ಯಸ್ಥ ಟೆಡ್ರೊಸ್ ಅಧಾನೊಮ್ ಘೆಬ್ರೆಯೆಸಸ್, ಗಾಝಾದ ಜನಸಂಖ್ಯೆಯನ್ನು ಎದುರಿಸುತ್ತಿರುವ ಗಂಭೀರ ಅಪಾಯವನ್ನು ನಿವಾರಿಸಲು ಮತ್ತು ಗಾಯಗಳು, ತೀವ್ರವಾದ ಹಸಿವಿನಿಂದ ಬಳಲುತ್ತಿರುವ ಜನರಿಗೆ ತುರ್ತು ಸಹಾಯ ಮಾಡುವಂತೆ ಅಂತರಾಷ್ಟ್ರೀಯ ಸಮುದಾಯಕ್ಕೆ ಕರೆ ನೀಡಿದ್ದಾರೆ.

ಆಸ್ಪತ್ರೆಗಳಿಗೆ ಔಷಧಗಳು, ವೈದ್ಯಕೀಯ ಸರಬರಾಜುಗಳು ಮತ್ತು ಇಂಧನವನ್ನು ಪೂರೈಸುವ ಸಾಮರ್ಥ್ಯವು ಸೀಮಿತವಾಗಿದೆ. ಇತ್ತೀಚಿನ WHO ಮೌಲ್ಯಮಾಪನಗಳ ಪ್ರಕಾರ ಗಾಝಾದಲ್ಲಿ 13 ಭಾಗಶಃ ಕಾರ್ಯನಿರ್ವಹಿಸುವ ಆಸ್ಪತ್ರೆಗಳನ್ನು ಹೊಂದಿದೆ ಮತ್ತು 21 ಆಸ್ಪತ್ರೆಗಳು ಕಾರ್ಯನಿರ್ವಹಿಸುತ್ತಿಲ್ಲ ಎಂದು ಹೇಳಿದೆ. ನಾಗರಿಕರನ್ನು ಮತ್ತಷ್ಟು ಹಿಂಸಾಚಾರದಿಂದ ರಕ್ಷಿಸಲು ಮತ್ತು ಮತ್ತು ಶಾಂತಿ ಸ್ಥಾಪನೆಗೆ ಕದನ ವಿರಾಮ ಒಂದೇ ದಾರಿಯಾಗಿದೆ ಎಂದು ಟೆಡ್ರೊಸ್ ಹೇಳಿದರು.

ಕಳೆದ 24 ಗಂಟೆಗಳ ಅವಧಿಯಲ್ಲಿ ಗಾಝಾದ ಮೇಲೆ ಇಸ್ರೇಲ್‌ ನಡೆಸಿದ ದಾಳಿಯಲ್ಲಿ ಸುಮಾರು 210 ಪ್ಯಾಲೆಸ್ತೀನಿಯನ್ನರು ಸಾವನ್ನಪ್ಪಿದ್ದಾರೆ ಮತ್ತು 325 ಮಂದಿ ಗಾಯಗೊಂಡಿದ್ದಾರೆ ಎಂದು ಪ್ಯಾಲೇಸ್ತೀನಿಯನ್ ಆರೋಗ್ಯ ಸಚಿವಾಲಯ ತಿಳಿಸಿದೆ. ಇಸ್ರೇಲ್‌ ಮಿಲಿಟರಿ ಕ್ಲಿಯರೆನ್ಸ್ ಆದೇಶಗಳ ನಂತರ ಕನಿಷ್ಠ 1,00,000 ಸ್ಥಳಾಂತರಗೊಂಡ ಜನರು ರಾಫಾದಲ್ಲಿ ಸೇರಿದ್ದಾರೆ.

ಇದನ್ನು ಓದಿ: ಲೋಕಸಭೆ ಚುನಾವಣೆಗೆ ಮುನ್ನ ಇವಿಎಂ ಸರಿಪಡಿಸದಿದ್ದರೆ ಬಿಜೆಪಿ 400 ಸ್ಥಾನಗಳನ್ನು ಗೆಲ್ಲಬಹುದು: ಸ್ಯಾಮ್ ಪಿತ್ರೋಡಾ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದೊಂದಿಗಿನ ಯುದ್ಧಕ್ಕೆ ಇರಾನ್ 40 ವರ್ಷಗಳಿಂದ ಸಿದ್ಧವಾಗಿತ್ತು: ನಿವೃತ್ತ ಲೆಫ್ಟಿನೆಂಟ್ ಜನರಲ್ ಧಿಲ್ಲೋನ್

"ತನ್ನ ಅತ್ಯುನ್ನತ ನಾಯಕತ್ವವನ್ನು ಕಳೆದುಕೊಳ್ಳುವಂತಹ ತುರ್ತು ಪರಿಸ್ಥಿತಿಗಳು ಸೇರಿದಂತೆ, ಅಮೆರಿಕದೊಂದಿಗಿನ ಸಂಭಾವ್ಯ ಯುದ್ಧಕ್ಕಾಗಿ ಇರಾನ್ ನಾಲ್ಕು ದಶಕಗಳಿಂದ ಸಿದ್ಧತೆ ನಡೆಸಿದೆ. ಹೀಗಾಗಿ ಎದುರಾಳಿಗಳಿಗೆ ಆ ದೇಶವನ್ನು ಸಂಪೂರ್ಣವಾಗಿ ನಾಶಪಡಿಸುವುದು ಕಷ್ಟಕರವಾಗಿದೆ" ಎಂದು ಭಾರತೀಯ...

ಸಚಿವ ಬಿ. ನಾಗೇಂದ್ರ ವಜಾಗೆ ಆಗ್ರಹಿಸಿ ಆಗಸ್ಟ್ 24ರಂದು ವಿಧಾನಸೌಧ ಮುತ್ತಿಗೆಗೆ ಕರೆ ನೀಡಿದ ಬಿಜೆಪಿ: ಉಲ್ಬಣಗೊಂಡ ರಾಜಕೀಯ ಸಂಘರ್ಷ

ಕರ್ನಾಟಕದ ರಾಜಕೀಯ ವಲಯದಲ್ಲಿ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣಕಾಸು ಅಕ್ರಮ ಪ್ರಕರಣವು ಭಾರಿ ಸಂಚಲನ ಮೂಡಿಸಿದ್ದು, ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಮತ್ತು ವಿರೋಧ ಪಕ್ಷಗಳ ನಡುವಿನ ಸಮರ...

ಕೇರಳ ವಿಶ್ವವಿದ್ಯಾಲಯದಲ್ಲಿ ಜಾತಿ ತಾರತಮ್ಯ; ದಲಿತ ಪಿಎಚ್‌ಡಿ ಸಂಶೋಧಕಿಯಿಂದ ಆರೋಪ

ತುಂಚತ್ ಎಝುತ್ತಚ್ಚನ್ ಮಲಯಾಳಂ ವಿಶ್ವವಿದ್ಯಾಲಯದ (ಟಿಇಎಂಯು) ದಲಿತ ಸಂಶೋಧಕಿಯೊಬ್ಬರು, "ಸಹಾಯಕ ಪ್ರಾಧ್ಯಾಪಕರೊಬ್ಬರು ತಮ್ಮ ವಿರುದ್ಧ ಜಾತಿ ಆಧಾರಿತ ತಾರತಮ್ಯ, ಕಿರುಕುಳ ಮತ್ತು ಪಿಎಚ್‌ಡಿ ಸಂಶೋಧನೆಗೆ ಅಡ್ಡಿಪಡಿಸುತ್ತಿದ್ದಾರೆ" ಎಂದು ಆರೋಪಿಸಿದ್ದಾರೆ. ಆಗಸ್ಟ್ 15 ರಿಂದ ತಿರೂರಿನ...

ಉತ್ತರ ಪ್ರದೇಶ| ಆಹಾರ ಸುರಕ್ಷತಾ ಅಧಿಕಾರಿಗಳ ದಾಳಿ; ತನ್ನದೇ ಅಂಗಡಿಯ ಸಿಹಿತಿಂಡಿ ತಿನ್ನಲು ನಿರಾಕರಿಸಿದ ಮಾಲೀಕ

ಆಹಾರ ಸುರಕ್ಷತಾ ದಾಳಿಯ ವೇಳೆ ಸಿಹಿ ತಿಂಡಿ ಅಂಗಡಿಯ ಮಾಲೀಕನೊಬ್ಬ ತನ್ನದೇ ಅಂಗಡಿಯಲ್ಲಿ ಮಾರಾಟಕ್ಕಿಟ್ಟಿದ್ದ ಸಿಹಿತಿಂಡಿಯನ್ನು ತಿನ್ನಲು ನಿರಾಕರಿಸಿ ಸುದ್ದಿಯಾಗಿರುವ ಘಟನೆ ಉತ್ತರ ಪ್ರದೇಶದ ಹಮೀರ್‌ಪುರದಲ್ಲಿ ನಡೆದಿದೆ. ಕಲಬೆರಕೆ ಹಾಗೂ ನಕಲಿ ಸಿಹಿತಿಂಡಿಗಳನ್ನು ಮಾರಾಟ...

ದೇಶದ ಅಭಿವೃದ್ಧಿಗೆ ಕೌಶಲ್ಯದ ಕೊರತೆ ಸವಾಲು: 8.7 ಕೋಟಿ ಯುವಜನರು ಶಿಕ್ಷಣ, ಉದ್ಯೋಗದಿಂದ ವಂಚಿತರಾಗಿದ್ದಾರೆ ಎಂದ ನೀತಿ ಆಯೋಗ

ಭಾರತದ ಆರ್ಥಿಕ ಪ್ರಗತಿ ಹಾಗೂ ಭವಿಷ್ಯದ ಅಭಿವೃದ್ಧಿಯ ಹಾದಿಯಲ್ಲಿ ದೇಶದ ಯುವಶಕ್ತಿಯನ್ನು ಬಳಸಿಕೊಳ್ಳುವುದು ಅತ್ಯಂತ ನಿರ್ಣಾಯಕವಾಗಿದೆ. ಆದರೆ ಪ್ರಸ್ತುತ ದೇಶದಲ್ಲಿ ಕೋಟ್ಯಂತರ ಯುವಜನರು ಯಾವುದೇ ರೀತಿಯ ಶಿಕ್ಷಣ, ಉದ್ಯೋಗ ಅಥವಾ ಕೌಶಲ್ಯ ತರಬೇತಿಯಲ್ಲಿ...

ಮೀಸಲಾತಿ ಭಿಕ್ಷೆಯಲ್ಲ, ಸಾಂವಿಧಾನಿಕ ಹಕ್ಕು: ಕೇಂದ್ರ ಸಚಿವ ಚಿರಾಗ್ ಪಾಸ್ವಾನ್

"ಯಾರದ್ದೋ ಬೇಡಿಕೆಗೆ ಮೀಸಲಾತಿಯನ್ನು ರದ್ದುಗೊಳಿಸಲು ಸಾಧ್ಯವಿಲ್ಲ. ಇದು ತಲೆಮಾರುಗಳಿಂದ ಸಾಮಾಜಿಕ ತಾರತಮ್ಯವನ್ನು ಎದುರಿಸಿದ ಸಮುದಾಯಗಳನ್ನು ಬೆಂಬಲಿಸಲು ಇರುವ ಸಾಂವಿಧಾನಿಕ ಹಕ್ಕು" ಎಂದು ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ಶುಕ್ರವಾರ ಹೇಳಿದ್ದಾರೆ. ದೆಹಲಿಗೆ ತೆರಳುವ...

ಸರ್ಕಾರಿ ಶಾಲೆಗೆ ಅತಿಕ್ರಮಣ ಮತ್ತು ಶಿಕ್ಷಕರಿಗೆ ಬೆದರಿಕೆ ಆರೋಪ: ಲಾತೂರ್‌ನಲ್ಲಿ ಸಿಜೆಪಿ ನಾಯಕ ಅಭಿಜೀತ್ ದೀಪ್ಕೆ ವಿರುದ್ಧ ಎಫ್‌ಐಆರ್ ದಾಖಲು

ಅನುಮತಿಯಿಲ್ಲದೆ ಸರ್ಕಾರಿ ಶಾಲೆಯ ತರಗತಿ ಕೊಠಡಿಗೆ ಪ್ರವೇಶಿಸಿ, ಶೈಕ್ಷಣಿಕ ಕಾರ್ಯಗಳಿಗೆ ಅಡ್ಡಿಪಡಿಸಿದ ಹಾಗೂ ಕರ್ತವ್ಯದಲ್ಲಿದ್ದ ಶಿಕ್ಷಕರಿಗೆ ಬೆದರಿಕೆಯೊಡ್ಡಿದ ಆರೋಪದ ಮೇಲೆ ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಚಾಲಕ ಅಭಿಜೀತ್ ದೀಪ್ಕೆ ಮತ್ತು ಅವರ...

ಸರ್ಕಾರಿ ಶಾಲೆಗೆ ಅತಿಕ್ರಮಣ ಮತ್ತು ಶಿಕ್ಷಕರಿಗೆ ಬೆದರಿಕೆ ಆರೋಪ: ಲಾತೂರ್‌ನಲ್ಲಿ ಸಿಜೆಪಿ ನಾಯಕ ಅಭಿಜೀತ್ ದೀಪ್ಕೆ ವಿರುದ್ಧ ಎಫ್‌ಐಆರ್ ದಾಖಲು

ಅನುಮತಿಯಿಲ್ಲದೆ ಸರ್ಕಾರಿ ಶಾಲೆಯ ತರಗತಿ ಕೊಠಡಿಗೆ ಪ್ರವೇಶಿಸಿ, ಶೈಕ್ಷಣಿಕ ಕಾರ್ಯಗಳಿಗೆ ಅಡ್ಡಿಪಡಿಸಿದ ಹಾಗೂ ಕರ್ತವ್ಯದಲ್ಲಿದ್ದ ಶಿಕ್ಷಕರಿಗೆ ಬೆದರಿಕೆಯೊಡ್ಡಿದ ಆರೋಪದ ಮೇಲೆ ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಚಾಲಕ ಅಭಿಜೀತ್ ದೀಪ್ಕೆ ಮತ್ತು ಅವರ...

ಶೇ.80 ರಷ್ಟು ಮಹಿಳೆಯರು ಕಿರುಕುಳ ಎದುರಿಸುತ್ತಿದ್ದಾರೆ; ಹಿಂಸಾಚಾರವು ಅವರ ಪ್ರಗತಿಗೆ ಅಡ್ಡಿಯಾಗಿದೆ: ರಾಹುಲ್ ಗಾಂಧಿ

ದೇಶದ ಅತಿದೊಡ್ಡ ಆಸ್ತಿಯಾಗಿರುವ ಮಹಿಳೆಯರು ಪ್ರಗತಿ ಸಾಧಿಸುವುದನ್ನು ತಡೆಯಲು ಸಮಾಜದಲ್ಲಿ ಹಿಂಸಾಚಾರವನ್ನು ಬಳಸಲಾಗುತ್ತಿದೆ. ಶೇಕಡಾ 80 ರಷ್ಟು ಜನರು ಕಿರುಕುಳ ಎದುರಿಸುತ್ತಿದ್ದಾರೆ ಎಂದು ಕಾಂಗ್ರೆಸ್‌ ನಾಯಕ, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ...

‘ಅಕ್ರಮ ವಲಸಿಗರ ಪರಿಶೀಲನೆ’ ನೆಪದಲ್ಲಿ ಬಂಗಾಳಿ ವಲಸೆ ಕಾರ್ಮಿಕರ ಮೇಲೆ ಬೆಂಗಳೂರು ಪೊಲೀಸರಿಂದ ದೌರ್ಜನ್ಯ: ಜಂಟಿ ಸತ್ಯಶೋಧನಾ ವರದಿ

ಬೆಂಗಳೂರು ನಗರದಲ್ಲಿ ನಡೆದ "ಅಕ್ರಮ ವಲಸಿಗರ ಪರಿಶೀಲನೆ" ಕಾರ್ಯಾಚರಣೆಯ ಹೆಸರಿನಲ್ಲಿ ಬಂಗಾಳಿ ಮಾತನಾಡುವ ವಲಸೆ ಕಾರ್ಮಿಕರನ್ನು ಭಾಷೆ ಮತ್ತು ವರ್ಗದ ಆಧಾರದ ಮೇಲೆ ಪ್ರೊಫೈಲಿಂಗ್ ಮಾಡಿ, ಅವರ ಮೇಲೆ ಅನಿಯಂತ್ರಿತ ಬಂಧನ, ಹಲ್ಲೆ...