HomeUncategorizedಇಸ್ರೇಲ್‌ ಯುದ್ಧ ಭೀಕರತೆ: ಮಕ್ಕಳ ಸ್ಮಶಾನವಾದ ಗಾಝಾ!

ಇಸ್ರೇಲ್‌ ಯುದ್ಧ ಭೀಕರತೆ: ಮಕ್ಕಳ ಸ್ಮಶಾನವಾದ ಗಾಝಾ!

- Advertisement -
- Advertisement -

ಇಸ್ರೇಲ್ ಬಾಂಬ್‌ ದಾಳಿಗೆ ಗಾಝಾದಲ್ಲಿ 24,00ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ. ಇದರಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರ ಮತ್ತು ಮಕ್ಕಳ ಹತ್ಯಾಕಾಂಡವನ್ನು ಇಸ್ರೇಲ್‌ ನಡೆಸಿದೆ. ಪದೇ ಪದೇ ಶಾಲೆಗಳನ್ನು, ನವಜಾತ ಶಿಶುಗಳ ಆರೈಕೆ ಕೇಂದ್ರಗಳನ್ನು ಕೇಂದ್ರೀಕರಿಸಿ ಇಸ್ರೇಲ್‌ ದಾಳಿ ನಡೆಸಿದ್ದು, ಈವರೆಗೆ 10,000ಕ್ಕೂ ಹೆಚ್ಚು ಪ್ಯಾಲೇಸ್ತೀನ್‌ನ ಅಮಾಯಕ ಮಕ್ಕಳು ಇಸ್ರೇಲ್‌ ದಾಳಿಯಿಂದ ಕೊಲ್ಲಲ್ಪಟ್ಟಿದ್ದಾರೆ.

ಯುರೋ-ಮೆಡ್ ಮಾನವ ಹಕ್ಕುಗಳ ಮಾನಿಟರ್ ಬಿಡುಗಡೆ ಮಾಡಿದ್ದ ವರದಿಯ ಪ್ರಕಾರ, ಇಸ್ರೇಲ್ 10,000 ಕ್ಕೂ ಹೆಚ್ಚು ಶಿಶುಗಳು ಮತ್ತು ಮಕ್ಕಳನ್ನು ಕೊಂದಿದೆ. ನೂರಾರು ಮಕ್ಕಳು ಪಾಳುಬಿದ್ದ ಕಟ್ಟಡಗಳ ಅವಶೇಷಗಳಡಿಯಲ್ಲಿ ಉಳಿದುಕೊಂಡಿರುವುದರಿಂದ ಬದುಕುಳಿಯುವ ಸಾಧ್ಯತೆ ಕಡಿಮೆ ಇದೆ. ಸುಮಾರು 7,00,000 ಮಕ್ಕಳು ಇಸ್ರೇಲ್‌ನ ಗಾಝಾ ನರಮೇಧದಿಂದ ಪ್ರಭಾವಿತರಾಗಿದ್ದಾರೆ, ಇದರಲ್ಲಿ ಕೊಲ್ಲಲ್ಪಟ್ಟವರು, ಗಾಯಗೊಂಡವರು ಮತ್ತು ಆಂತರಿಕವಾಗಿ ಸ್ಥಳಾಂತರಗೊಂಡವರು ಸೇರಿದ್ದಾರೆ.

ಇಸ್ರೇಲ್‌ ದಾಳಿಯಲ್ಲಿ 18,000 ಪ್ಯಾಲೆಸ್ತೀನ್ ಮಕ್ಕಳು ಗಾಯಗೊಂಡಿದ್ದಾರೆ. ಇದರಲ್ಲಿ ಅನೇಕ ಮಕ್ಕಳು ಗಂಭೀರವಾಗಿದ್ದಾರೆ. ಡಜನ್‌ಗಟ್ಟಲೆ ಮಕ್ಕಳು ಅಂಗಾಂಗಳನ್ನು ಕಳೆದುಕೊಂಡಿದ್ದಾರೆ ಮತ್ತು ನೂರಾರು ಮ್ಕಕಳು ತಮ್ಮ ದೇಹದ ವಿವಿಧ ಭಾಗಗಳಿಗೆ ತೀವ್ರ ಸುಟ್ಟಗಾಯಗಳನ್ನು ಅನುಭವಿಸಿದ್ದಾರೆ. ಸ್ಥಳಾಂತರಗೊಂಡ ಮಕ್ಕಳಲ್ಲಿ 50 ಪ್ರತಿಶತದಷ್ಟು ಮಕ್ಕಳು ನಿರ್ಜಲೀಕರಣ, ಅಪೌಷ್ಟಿಕತೆ, ಉಸಿರಾಟ ಮತ್ತು ಚರ್ಮ ರೋಗಗಳು, ತೀವ್ರ ಶೀತದಿಂದ ಅನಾರೋಗ್ಯಕ್ಕೆ ತುತ್ತಾಗಿದ್ದಾರೆ. ನವಜಾತ ಶಿಶುಗಳಿಗೆ ಲಸಿಕೆ ಸಿಗದೆ ಅಪಾಯದಲ್ಲಿದೆ.

ಗಾಝಾ ಪಟ್ಟಿಯಲ್ಲಿರುವ ಕನಿಷ್ಠ 25,000 ಮಕ್ಕಳು ಒಬ್ಬ ಅಥವಾ ಇಬ್ಬರ ಪೋಷಕರನ್ನು ಕಳೆದುಕೊಂಡಿದ್ದಾರೆ. ಸಾವಿರಾರು ಮಕ್ಕಳು ಭವಿಷ್ಯವನ್ನು ಕಳೆದುಕೊಂಡಿದ್ದಾರೆ. ಗಾಝಾ ಪಟ್ಟಿಯಲ್ಲಿರುವ 217 ಶಾಲೆಗಳು ಇಸ್ರೇಲ್‌ ದಾಳಿಯ ಸಮಯದಲ್ಲಿ ಹಾನಿಗೊಳಗಾಗಿವೆ.

ಸೇವ್ ದಿ ಚಿಲ್ಡ್ರನ್ ಡೇಟಾ ಪ್ರಕಾರ, ಗಾಝಾದಲ್ಲಿ ಪ್ರತಿ 10 ನಿಮಿಷಕ್ಕೆ ಒಂದು ಮಗುವನ್ನು ಕೊಲ್ಲಲಾಗುತ್ತಿದೆ. ಮಧ್ಯಪ್ರಾಚ್ಯ ಮತ್ತು ಉತ್ತರ ಆಫ್ರಿಕಾದ ಯುನಿಸೆಫ್ ಪ್ರಾದೇಶಿಕ ನಿರ್ದೇಶಕ ಅಡೆಲೆ ಖೋಡ್ರ್ ಶನಿವಾರ ಹೇಳಿಕೆಯೊಂದರಲ್ಲಿ, ಗಾಝಾವು ಮಕ್ಕಳಿಗೆ ಪ್ರಪಂಚದಲ್ಲೇ ಅತ್ಯಂತ ಅಪಾಯಕಾರಿ ಸ್ಥಳವಾಗಿದೆ. ವಿಶ್ವದೆಲ್ಲೆಡೆ ಮಕ್ಕಳು ಆಟವಾಡುತ್ತಿರುವಾಗ ಮತ್ತು ಶಾಲೆಗೆ ಹೋಗುತ್ತಿರುವಾಗ ಗಾಝಾ ಮಕ್ಕಳ ಅವಶೇಷಗಳ ರಾಶಿಯಾಗಿ ಮಾರ್ಪಟ್ಟಿದೆ ಎಂದು ಹೇಳಿದ್ದಾರೆ.

ಅ.7ರಂದು ಯುದ್ಧ ಪ್ರಾರಂಭವಾದಾಗಿನಿಂದ ಸುಮಾರು ಒಂದು ಮಿಲಿಯನ್ ಮಕ್ಕಳನ್ನು ಈಗ ಬಲವಂತವಾಗಿ ಸ್ಥಳಾಂತರಿಸಲಾಗಿದೆ ಎಂದು UN ಮಕ್ಕಳ ಏಜೆನ್ಸಿಯ ಹೇಳಿದೆ. ನೀರು, ಆಹಾರ, ಅಥವಾ ರಕ್ಷಣೆಯಿಲ್ಲದೆ, ಉಸಿರಾಟದ ಸೋಂಕುಗಳು ಮತ್ತು ನೀರಿನಿಂದ ಹರಡುವ ರೋಗಗಳ ಅಪಾಯಗಳು ಹೆಚ್ಚಿದ್ದು, ಗಾಝಾ ಮಕ್ಕಳ ಸ್ಮಶಾನವಾಗಿದೆ ಎಂದು ಹೇಳಿದೆ.

ಪ್ಯಾಲೆಸ್ತೀನಿಯನ್‌ ನರಮೇಧವನ್ನು ಸಂಭ್ರಮಿಸಿ ಹಾಡು ಹಾಡಿದ್ದ ಇಸ್ರೇಲ್ ಮಕ್ಕಳು:

ನವೆಂಬರ್‌ನಲ್ಲಿ ಇಸ್ರೇಲ್‌ನ ಸಾರ್ವಜನಿಕ ಬ್ರಾಡ್‌ಕಾಸ್ಟರ್ ಕಾನ್, ತನ್ನ ಅಧಿಕೃತ ಎಕ್ಸ್‌ಲ್ಲಿನ ಪೋಸ್ಟ್‌ನಲ್ಲಿ  ಇಸ್ರೇಲ್‌ ಮಕ್ಕಳು ಗಾಝಾದಲ್ಲಿ ಪ್ಯಾಲೆಸ್ತೀನಿಯನ್ನರು ನರಮೇಧವನ್ನು ಆಚರಿಸುವ ಹಾಡನ್ನು ಹಾಡುವ ವೀಡಿಯೊವನ್ನು ಅಪ್‌ಲೋಡ್ ಮಾಡಿದೆ. ಟೀಕೆಗೆ ಒಳಗಾದ ಬಳಿಕ ನಂತರ ವೀಡಿಯೊ ಕ್ಲಿಪ್‌ನ್ನು ಅಳಿಸಿದ್ದಾರೆ. ಸಾಮಾಜಿಕ ಮಾಧ್ಯಮದಿಂದ ವೀಡಿಯೊವನ್ನು ಅಳಿಸಿದ ನಂತರವೂ, ಹಾಡು ಚರ್ಚೆ ಮತ್ತು ವಿವಾದದ ವಿಷಯವಾಗಿ ಉಳಿದಿದೆ. ಒಂದು ವರ್ಷದೊಳಗೆ ಇಡೀ ಗಾಝಾದ ಜನರನ್ನು ನಿರ್ಮೂಲನೆ ಮಾಡುವ ಬಗ್ಗೆ ಮಕ್ಕಳು ಸಂತೋಷದಿಂದ ಹಾಡುವುದನ್ನು ನೋಡಿ ಪ್ರಪಂಚದಾದ್ಯಂತದ ಅನೇಕರು ಆಘಾತಕ್ಕೊಳಗಾಗಿದ್ದರು.

ರಾಫಾದಲ್ಲಿ ನಾಗರಿಕರ ಪರಿಸ್ಥಿತಿಗಳು ಗಂಭೀರ:

ದಕ್ಷಿಣ ಗಾಝಾ ಪಟ್ಟಿಯಲ್ಲಿರುವ ರಾಫಾದಲ್ಲಿ ನಾಗರಿಕರ ಪರಿಸ್ಥಿತಿಗಳು ಅತ್ಯಂತ ಭೀಕರವಾಗಿವೆ ಎಂದು ಇಂಟರ್ನ್ಯಾಷನಲ್ ಕಮಿಟಿ ಆಫ್ ದಿ ರೆಡ್ ಕ್ರಾಸ್ (ICRC) ಹೇಳಿಕೊಂಡಿದೆ. ರಾಫಾ ಈಜಿಪ್ಟ್‌ನ ಗಡಿಯ ಸಮೀಪದಲ್ಲಿದೆ ಮತ್ತು ಲಕ್ಷಾಂತರ ಮಂದಿ ಅಲ್ಲಿ ಆಶ್ರಯವನ್ನು ಪಡದುಕೊಂಡಿದ್ದಾರೆ.

ರಾಫಾದಲ್ಲಿ ನಿರಾಶ್ರಿತ ಜನರ ಅಗತ್ಯಗಳನ್ನು ಪೂರೈಸಲು ನಮ್ಮಲ್ಲಿ ಸಾಕಷ್ಟು ಪರಿಹಾರ ಸಾಮಗ್ರಿಗಳಿಲ್ಲ.ಸಾಕಷ್ಟು ನೀರು ಇಲ್ಲ, ಸಾಕಷ್ಟು ನೈರ್ಮಲ್ಯವಿಲ್ಲ, ಮತ್ತು ಜನರಿಗೆ ಆಹಾರ, ವೈದ್ಯಕೀಯ ಹಾರೈಕೆ ಸಿಗುತ್ತಿಲ್ಲ ಎಂದು ICRC ಕ್ಷಿಪ್ರ ನಿಯೋಜನೆ ಸಂಯೋಜಕ ಸ್ಟೀಫನ್ ರಯಾನ್ ತಿಳಿಸಿದ್ದಾರೆ.

ವಿಶ್ವ ಆರೋಗ್ಯ ಸಂಸ್ಥೆಯ ಮುಖ್ಯಸ್ಥ ಟೆಡ್ರೊಸ್ ಅಧಾನೊಮ್ ಘೆಬ್ರೆಯೆಸಸ್, ಗಾಝಾದ ಜನಸಂಖ್ಯೆಯನ್ನು ಎದುರಿಸುತ್ತಿರುವ ಗಂಭೀರ ಅಪಾಯವನ್ನು ನಿವಾರಿಸಲು ಮತ್ತು ಗಾಯಗಳು, ತೀವ್ರವಾದ ಹಸಿವಿನಿಂದ ಬಳಲುತ್ತಿರುವ ಜನರಿಗೆ ತುರ್ತು ಸಹಾಯ ಮಾಡುವಂತೆ ಅಂತರಾಷ್ಟ್ರೀಯ ಸಮುದಾಯಕ್ಕೆ ಕರೆ ನೀಡಿದ್ದಾರೆ.

ಆಸ್ಪತ್ರೆಗಳಿಗೆ ಔಷಧಗಳು, ವೈದ್ಯಕೀಯ ಸರಬರಾಜುಗಳು ಮತ್ತು ಇಂಧನವನ್ನು ಪೂರೈಸುವ ಸಾಮರ್ಥ್ಯವು ಸೀಮಿತವಾಗಿದೆ. ಇತ್ತೀಚಿನ WHO ಮೌಲ್ಯಮಾಪನಗಳ ಪ್ರಕಾರ ಗಾಝಾದಲ್ಲಿ 13 ಭಾಗಶಃ ಕಾರ್ಯನಿರ್ವಹಿಸುವ ಆಸ್ಪತ್ರೆಗಳನ್ನು ಹೊಂದಿದೆ ಮತ್ತು 21 ಆಸ್ಪತ್ರೆಗಳು ಕಾರ್ಯನಿರ್ವಹಿಸುತ್ತಿಲ್ಲ ಎಂದು ಹೇಳಿದೆ. ನಾಗರಿಕರನ್ನು ಮತ್ತಷ್ಟು ಹಿಂಸಾಚಾರದಿಂದ ರಕ್ಷಿಸಲು ಮತ್ತು ಮತ್ತು ಶಾಂತಿ ಸ್ಥಾಪನೆಗೆ ಕದನ ವಿರಾಮ ಒಂದೇ ದಾರಿಯಾಗಿದೆ ಎಂದು ಟೆಡ್ರೊಸ್ ಹೇಳಿದರು.

ಕಳೆದ 24 ಗಂಟೆಗಳ ಅವಧಿಯಲ್ಲಿ ಗಾಝಾದ ಮೇಲೆ ಇಸ್ರೇಲ್‌ ನಡೆಸಿದ ದಾಳಿಯಲ್ಲಿ ಸುಮಾರು 210 ಪ್ಯಾಲೆಸ್ತೀನಿಯನ್ನರು ಸಾವನ್ನಪ್ಪಿದ್ದಾರೆ ಮತ್ತು 325 ಮಂದಿ ಗಾಯಗೊಂಡಿದ್ದಾರೆ ಎಂದು ಪ್ಯಾಲೇಸ್ತೀನಿಯನ್ ಆರೋಗ್ಯ ಸಚಿವಾಲಯ ತಿಳಿಸಿದೆ. ಇಸ್ರೇಲ್‌ ಮಿಲಿಟರಿ ಕ್ಲಿಯರೆನ್ಸ್ ಆದೇಶಗಳ ನಂತರ ಕನಿಷ್ಠ 1,00,000 ಸ್ಥಳಾಂತರಗೊಂಡ ಜನರು ರಾಫಾದಲ್ಲಿ ಸೇರಿದ್ದಾರೆ.

ಇದನ್ನು ಓದಿ: ಲೋಕಸಭೆ ಚುನಾವಣೆಗೆ ಮುನ್ನ ಇವಿಎಂ ಸರಿಪಡಿಸದಿದ್ದರೆ ಬಿಜೆಪಿ 400 ಸ್ಥಾನಗಳನ್ನು ಗೆಲ್ಲಬಹುದು: ಸ್ಯಾಮ್ ಪಿತ್ರೋಡಾ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೊಲೀಸ್ ಕಾರ್ಯಾಚರಣೆ ತಡೆದು ಕೋಳಿ ಅಂಕ : ಪುತ್ತೂರು ಶಾಸಕ ಅಶೋಕ್ ರೈ ಸೇರಿ 17 ಮಂದಿ ವಿರುದ್ಧ ಪ್ರಕರಣ ದಾಖಲು

ಶಾಸಕರೇ ಮುಂದೆ ನಿಂತು ಕಾನೂನುಬಾಹಿರ ಚಟುವಟಿಕೆ ನಡೆಸಲು ಜನರನ್ನು ಪ್ರೋತ್ಸಾಹಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲ ಬಳಿ ಶನಿವಾರ (ಡಿ.20) ನಡೆದಿದೆ. ಕೇಪು ಶ್ರೀ ಉಳ್ಳಾಲ್ತಿ ದೈವಸ್ಥಾನದ ವಠಾರದಲ್ಲಿ ನಡೆಯುತ್ತಿದ್ದ...

ನಾಲ್ವರು ಬಾಲಕರಿಂದ ಬಾಲಕಿಗೆ ಕಿರುಕುಳ ಆರೋಪ : ‘ಉತ್ತಮ ಸಂಸ್ಕಾರ ಕಲಿಸಿಲ್ಲ’ ಎಂದು ತಾಯಂದಿರನ್ನು ಬಂಧಿಸಿದ ಪೊಲೀಸರು!

ಉತ್ತರ ಪ್ರದೇಶದ ಬದೌನ್ ಜಿಲ್ಲೆಯಲ್ಲಿ ನಾಲ್ವರು ಬಾಲಕರ ವಿರುದ್ಧ ಬಾಲಕಿಗೆ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದ್ದು, ಪೊಲೀಸರು ಬಾಲಕರ ತಾಯಂದಿರನ್ನು 'ಪ್ರಿವೆಂಟಿವ್ ಅರೆಸ್ಟ್' ಮಾಡಿದ್ದಾರೆ ಎಂದು indianexpress.com ಶನಿವಾರ (ಡಿ.20) ವರದಿ...

ಎಸ್‌ಐಆರ್‌: ಸ್ಟಾಲಿನ್ ಅವರ ಕೊಳತ್ತೂರು ಕ್ಷೇತ್ರದಲ್ಲಿ 1 ಲಕ್ಷ ಮತದಾರ ಹೆಸರು ಕರಡು ಮತದಾರರ ಪಟ್ಟಿಯಲ್ಲಿ ಡಿಲೀಟ್

ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ ಕೊಳತ್ತೂರು ಕ್ಷೇತ್ರದಿಂದ 1,03,812 ಕ್ಕೂ ಹೆಚ್ಚು ಮತದಾರರ ಹೆಸರು ತೆಗೆದುಹಾಕಲಾಗಿದೆ. ಇದು ತಮಿಳುನಾಡಿನಲ್ಲಿ ರಾಜ್ಯಾದ್ಯಂತ ನಡೆದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಮತದಾರರ ಪಟ್ಟಿಯಲ್ಲಿನ ಅತಿದೊಡ್ಡ ಮತದಾರರ...

ಅಸ್ಸಾಂ : 15 ಮಂದಿಗೆ 24 ಗಂಟೆಯೊಳಗೆ ದೇಶ ತೊರೆಯಲು ಆದೇಶ : ಮಾಧ್ಯಮಗಳ ಮೂಲಕ ವಿಷಯ ತಿಳಿದುಕೊಂಡ ಕುಟುಂಬಸ್ಥರು

ಅಸ್ಸಾಂನ ನಾಗಾಂವ್ ಜಿಲ್ಲಾಡಳಿತವು 15 ಘೋಷಿತ ವಿದೇಶಿಯರಿಗೆ 24 ಗಂಟೆಗಳ ಒಳಗೆ ರಾಜ್ಯ ತೊರೆಯುವಂತೆ ಆದೇಶಿಸಿದ ಬಗ್ಗೆ ವರದಿಯಾಗಿದೆ. ಬುಧವಾರ (ಡಿ.17) ಜಿಲ್ಲಾಡಳಿತ ಈ ಆದೇಶ ನೀಡಿತ್ತು. ಆದರೆ, ಇದುವರೆಗೆ (ಡಿ.20) ಈ 15...

ಸಿರಿಯಾದ ಐಸಿಸ್ ಅಡಗುತಾಣಗಳ ಮೇಲೆ ಅಮೆರಿಕ ವಾಯುದಾಳಿ

ಕಳೆದ ವಾರ ಅಮೆರಿಕದ ಸಿಬ್ಬಂದಿ ಮೇಲೆ ನಡೆದ ಮಾರಕ ದಾಳಿಗೆ ಪ್ರತೀಕಾರವಾಗಿ ಅಮೆರಿಕವು ಮಧ್ಯ ಸಿರಿಯಾದಾದ್ಯಂತ ಡಜನ್‌ಗಟ್ಟಲೆ ಇಸ್ಲಾಮಿಕ್ ಸ್ಟೇಟ್ (ಐಎಸ್) ನೆಲೆಗಳ ಮೇಲೆ ವಾಯುದಾಳಿ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 'ಆಪರೇಷನ್ ಹಾಕೈ...

16 ಲಕ್ಷಕ್ಕೂ ಹೆಚ್ಚು ಕಾರ್ಮಿಕರನ್ನು ‘ಮನರೇಗಾ’ ಪಟ್ಟಿಯಿಂದ ಕೈಬಿಟ್ಟ ಕೇಂದ್ರ ಸರ್ಕಾರ: ವರದಿ

ಯುಪಿಎ ಸರ್ಕಾರದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಮನರೇಗಾ) ಹೆಸರನ್ನು ಬದಲಿಸಲು ಪ್ರಯತ್ನಿಸುವ 'ವಿಕ್ಷಿತ್ ಭಾರತ್ - ಗ್ಯಾರಂಟಿ ಫಾರ್ ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) (ವಿಬಿ–ಜಿ...

ಅಮೆರಿಕದ ಬಹು ನಿರೀಕ್ಷಿತ ‘ಎಪ್‌ಸ್ಟೀನ್ ಫೈಲ್ಸ್’ ಬಿಡುಗಡೆ : ಬಿಲ್ ಕ್ಲಿಂಟನ್, ಮೈಕಲ್ ಜಾಕ್ಸನ್ ಸೇರಿದಂತೆ ಪ್ರಮುಖರ ಫೋಟೋಗಳು ಬಹಿರಂಗ

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ(ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಕೆಲ ದಾಖಲೆಗಳನ್ನು...

ಕೋಮು ಸಾಮರಸ್ಯಕ್ಕಾಗಿ ಭಾರತದ ಮುಸ್ಲಿಮರು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು: ಜಮಾಅತ್ ಅಧ್ಯಕ್ಷ

'ಭಾರತದ ಮುಸ್ಲಿಮರು, ದೇಶದಲ್ಲಿ ಕೋಮು ಸಾಮರಸ್ಯಕ್ಕಾಗಿ ವೈಯಕ್ತಿಕ ಮತ್ತು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು' ಎಂದು ಜಮಾಅತೆ-ಇ-ಇಸ್ಲಾಮಿ ಹಿಂದ್ ಅಧ್ಯಕ್ಷ ಸೈಯದ್ ಸಾದತುಲ್ಲಾ ಹುಸೈನಿ ಅವರು ಒತ್ತಾಯಿಸಿದರು. ಕೋಮು ಸಾಮರಸ್ಯ ಇಲಾಖೆಯು ಆಯೋಜಿಸಿದ್ದ 'ಅಖಿಲ...

3 ವರ್ಷಗಳಲ್ಲಿ ರಷ್ಯಾ ಸೇನೆ ಸೇರಿದ 200 ಕ್ಕೂ ಹೆಚ್ಚು ಭಾರತೀಯರು; 26 ಮಂದಿ ಸಾವು: ವಿದೇಶಾಂಗ ಸಚಿವಾಲಯ

2022 ರಿಂದ ಕನಿಷ್ಠ 202 ಭಾರತೀಯ ಪ್ರಜೆಗಳು ರಷ್ಯಾದ ಸಶಸ್ತ್ರ ಪಡೆಗಳಿಗೆ ಸೇರಿದ್ದಾರೆ ಎಂದು ವರದಿಯಾಗಿದೆ. ಇದರಲ್ಲಿ 26 ಮಂದಿ ಸಾವನ್ನಪ್ಪಿದ್ದು, ಇಬ್ಬರನ್ನು ರಷ್ಯಾದಲ್ಲಿ ಅಂತ್ಯಕ್ರಿಯೆ ಮಾಡಲಾಗಿದೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ)...

ಎಸ್‌ಐಆರ್‌ ಬಳಿಕ ಕರಡು ಮತದಾರರ ಪಟ್ಟಿ ಪ್ರಕಟ : ತಮಿಳುನಾಡಿನಲ್ಲಿ 97 ಲಕ್ಷ, ಗುಜರಾತ್‌ನಲ್ಲಿ 73 ಲಕ್ಷ ಹೆಸರು ಡಿಲೀಟ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ ತಮಿಳುನಾಡು ಮತ್ತು ಗುಜರಾತ್‌ನ ಕರಡು ಮತದಾರರ ಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಪ್ರಕಟಿಸಿದ್ದು, ಕ್ರಮವಾಗಿ 97.3 ಮತ್ತು 73.7 ಲಕ್ಷ ಮತದಾರರ...