HomeUncategorizedಇಸ್ರೇಲ್‌ ಯುದ್ಧ ಭೀಕರತೆ: ಮಕ್ಕಳ ಸ್ಮಶಾನವಾದ ಗಾಝಾ!

ಇಸ್ರೇಲ್‌ ಯುದ್ಧ ಭೀಕರತೆ: ಮಕ್ಕಳ ಸ್ಮಶಾನವಾದ ಗಾಝಾ!

- Advertisement -
- Advertisement -

ಇಸ್ರೇಲ್ ಬಾಂಬ್‌ ದಾಳಿಗೆ ಗಾಝಾದಲ್ಲಿ 24,00ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ. ಇದರಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರ ಮತ್ತು ಮಕ್ಕಳ ಹತ್ಯಾಕಾಂಡವನ್ನು ಇಸ್ರೇಲ್‌ ನಡೆಸಿದೆ. ಪದೇ ಪದೇ ಶಾಲೆಗಳನ್ನು, ನವಜಾತ ಶಿಶುಗಳ ಆರೈಕೆ ಕೇಂದ್ರಗಳನ್ನು ಕೇಂದ್ರೀಕರಿಸಿ ಇಸ್ರೇಲ್‌ ದಾಳಿ ನಡೆಸಿದ್ದು, ಈವರೆಗೆ 10,000ಕ್ಕೂ ಹೆಚ್ಚು ಪ್ಯಾಲೇಸ್ತೀನ್‌ನ ಅಮಾಯಕ ಮಕ್ಕಳು ಇಸ್ರೇಲ್‌ ದಾಳಿಯಿಂದ ಕೊಲ್ಲಲ್ಪಟ್ಟಿದ್ದಾರೆ.

ಯುರೋ-ಮೆಡ್ ಮಾನವ ಹಕ್ಕುಗಳ ಮಾನಿಟರ್ ಬಿಡುಗಡೆ ಮಾಡಿದ್ದ ವರದಿಯ ಪ್ರಕಾರ, ಇಸ್ರೇಲ್ 10,000 ಕ್ಕೂ ಹೆಚ್ಚು ಶಿಶುಗಳು ಮತ್ತು ಮಕ್ಕಳನ್ನು ಕೊಂದಿದೆ. ನೂರಾರು ಮಕ್ಕಳು ಪಾಳುಬಿದ್ದ ಕಟ್ಟಡಗಳ ಅವಶೇಷಗಳಡಿಯಲ್ಲಿ ಉಳಿದುಕೊಂಡಿರುವುದರಿಂದ ಬದುಕುಳಿಯುವ ಸಾಧ್ಯತೆ ಕಡಿಮೆ ಇದೆ. ಸುಮಾರು 7,00,000 ಮಕ್ಕಳು ಇಸ್ರೇಲ್‌ನ ಗಾಝಾ ನರಮೇಧದಿಂದ ಪ್ರಭಾವಿತರಾಗಿದ್ದಾರೆ, ಇದರಲ್ಲಿ ಕೊಲ್ಲಲ್ಪಟ್ಟವರು, ಗಾಯಗೊಂಡವರು ಮತ್ತು ಆಂತರಿಕವಾಗಿ ಸ್ಥಳಾಂತರಗೊಂಡವರು ಸೇರಿದ್ದಾರೆ.

ಇಸ್ರೇಲ್‌ ದಾಳಿಯಲ್ಲಿ 18,000 ಪ್ಯಾಲೆಸ್ತೀನ್ ಮಕ್ಕಳು ಗಾಯಗೊಂಡಿದ್ದಾರೆ. ಇದರಲ್ಲಿ ಅನೇಕ ಮಕ್ಕಳು ಗಂಭೀರವಾಗಿದ್ದಾರೆ. ಡಜನ್‌ಗಟ್ಟಲೆ ಮಕ್ಕಳು ಅಂಗಾಂಗಳನ್ನು ಕಳೆದುಕೊಂಡಿದ್ದಾರೆ ಮತ್ತು ನೂರಾರು ಮ್ಕಕಳು ತಮ್ಮ ದೇಹದ ವಿವಿಧ ಭಾಗಗಳಿಗೆ ತೀವ್ರ ಸುಟ್ಟಗಾಯಗಳನ್ನು ಅನುಭವಿಸಿದ್ದಾರೆ. ಸ್ಥಳಾಂತರಗೊಂಡ ಮಕ್ಕಳಲ್ಲಿ 50 ಪ್ರತಿಶತದಷ್ಟು ಮಕ್ಕಳು ನಿರ್ಜಲೀಕರಣ, ಅಪೌಷ್ಟಿಕತೆ, ಉಸಿರಾಟ ಮತ್ತು ಚರ್ಮ ರೋಗಗಳು, ತೀವ್ರ ಶೀತದಿಂದ ಅನಾರೋಗ್ಯಕ್ಕೆ ತುತ್ತಾಗಿದ್ದಾರೆ. ನವಜಾತ ಶಿಶುಗಳಿಗೆ ಲಸಿಕೆ ಸಿಗದೆ ಅಪಾಯದಲ್ಲಿದೆ.

ಗಾಝಾ ಪಟ್ಟಿಯಲ್ಲಿರುವ ಕನಿಷ್ಠ 25,000 ಮಕ್ಕಳು ಒಬ್ಬ ಅಥವಾ ಇಬ್ಬರ ಪೋಷಕರನ್ನು ಕಳೆದುಕೊಂಡಿದ್ದಾರೆ. ಸಾವಿರಾರು ಮಕ್ಕಳು ಭವಿಷ್ಯವನ್ನು ಕಳೆದುಕೊಂಡಿದ್ದಾರೆ. ಗಾಝಾ ಪಟ್ಟಿಯಲ್ಲಿರುವ 217 ಶಾಲೆಗಳು ಇಸ್ರೇಲ್‌ ದಾಳಿಯ ಸಮಯದಲ್ಲಿ ಹಾನಿಗೊಳಗಾಗಿವೆ.

ಸೇವ್ ದಿ ಚಿಲ್ಡ್ರನ್ ಡೇಟಾ ಪ್ರಕಾರ, ಗಾಝಾದಲ್ಲಿ ಪ್ರತಿ 10 ನಿಮಿಷಕ್ಕೆ ಒಂದು ಮಗುವನ್ನು ಕೊಲ್ಲಲಾಗುತ್ತಿದೆ. ಮಧ್ಯಪ್ರಾಚ್ಯ ಮತ್ತು ಉತ್ತರ ಆಫ್ರಿಕಾದ ಯುನಿಸೆಫ್ ಪ್ರಾದೇಶಿಕ ನಿರ್ದೇಶಕ ಅಡೆಲೆ ಖೋಡ್ರ್ ಶನಿವಾರ ಹೇಳಿಕೆಯೊಂದರಲ್ಲಿ, ಗಾಝಾವು ಮಕ್ಕಳಿಗೆ ಪ್ರಪಂಚದಲ್ಲೇ ಅತ್ಯಂತ ಅಪಾಯಕಾರಿ ಸ್ಥಳವಾಗಿದೆ. ವಿಶ್ವದೆಲ್ಲೆಡೆ ಮಕ್ಕಳು ಆಟವಾಡುತ್ತಿರುವಾಗ ಮತ್ತು ಶಾಲೆಗೆ ಹೋಗುತ್ತಿರುವಾಗ ಗಾಝಾ ಮಕ್ಕಳ ಅವಶೇಷಗಳ ರಾಶಿಯಾಗಿ ಮಾರ್ಪಟ್ಟಿದೆ ಎಂದು ಹೇಳಿದ್ದಾರೆ.

ಅ.7ರಂದು ಯುದ್ಧ ಪ್ರಾರಂಭವಾದಾಗಿನಿಂದ ಸುಮಾರು ಒಂದು ಮಿಲಿಯನ್ ಮಕ್ಕಳನ್ನು ಈಗ ಬಲವಂತವಾಗಿ ಸ್ಥಳಾಂತರಿಸಲಾಗಿದೆ ಎಂದು UN ಮಕ್ಕಳ ಏಜೆನ್ಸಿಯ ಹೇಳಿದೆ. ನೀರು, ಆಹಾರ, ಅಥವಾ ರಕ್ಷಣೆಯಿಲ್ಲದೆ, ಉಸಿರಾಟದ ಸೋಂಕುಗಳು ಮತ್ತು ನೀರಿನಿಂದ ಹರಡುವ ರೋಗಗಳ ಅಪಾಯಗಳು ಹೆಚ್ಚಿದ್ದು, ಗಾಝಾ ಮಕ್ಕಳ ಸ್ಮಶಾನವಾಗಿದೆ ಎಂದು ಹೇಳಿದೆ.

ಪ್ಯಾಲೆಸ್ತೀನಿಯನ್‌ ನರಮೇಧವನ್ನು ಸಂಭ್ರಮಿಸಿ ಹಾಡು ಹಾಡಿದ್ದ ಇಸ್ರೇಲ್ ಮಕ್ಕಳು:

ನವೆಂಬರ್‌ನಲ್ಲಿ ಇಸ್ರೇಲ್‌ನ ಸಾರ್ವಜನಿಕ ಬ್ರಾಡ್‌ಕಾಸ್ಟರ್ ಕಾನ್, ತನ್ನ ಅಧಿಕೃತ ಎಕ್ಸ್‌ಲ್ಲಿನ ಪೋಸ್ಟ್‌ನಲ್ಲಿ  ಇಸ್ರೇಲ್‌ ಮಕ್ಕಳು ಗಾಝಾದಲ್ಲಿ ಪ್ಯಾಲೆಸ್ತೀನಿಯನ್ನರು ನರಮೇಧವನ್ನು ಆಚರಿಸುವ ಹಾಡನ್ನು ಹಾಡುವ ವೀಡಿಯೊವನ್ನು ಅಪ್‌ಲೋಡ್ ಮಾಡಿದೆ. ಟೀಕೆಗೆ ಒಳಗಾದ ಬಳಿಕ ನಂತರ ವೀಡಿಯೊ ಕ್ಲಿಪ್‌ನ್ನು ಅಳಿಸಿದ್ದಾರೆ. ಸಾಮಾಜಿಕ ಮಾಧ್ಯಮದಿಂದ ವೀಡಿಯೊವನ್ನು ಅಳಿಸಿದ ನಂತರವೂ, ಹಾಡು ಚರ್ಚೆ ಮತ್ತು ವಿವಾದದ ವಿಷಯವಾಗಿ ಉಳಿದಿದೆ. ಒಂದು ವರ್ಷದೊಳಗೆ ಇಡೀ ಗಾಝಾದ ಜನರನ್ನು ನಿರ್ಮೂಲನೆ ಮಾಡುವ ಬಗ್ಗೆ ಮಕ್ಕಳು ಸಂತೋಷದಿಂದ ಹಾಡುವುದನ್ನು ನೋಡಿ ಪ್ರಪಂಚದಾದ್ಯಂತದ ಅನೇಕರು ಆಘಾತಕ್ಕೊಳಗಾಗಿದ್ದರು.

ರಾಫಾದಲ್ಲಿ ನಾಗರಿಕರ ಪರಿಸ್ಥಿತಿಗಳು ಗಂಭೀರ:

ದಕ್ಷಿಣ ಗಾಝಾ ಪಟ್ಟಿಯಲ್ಲಿರುವ ರಾಫಾದಲ್ಲಿ ನಾಗರಿಕರ ಪರಿಸ್ಥಿತಿಗಳು ಅತ್ಯಂತ ಭೀಕರವಾಗಿವೆ ಎಂದು ಇಂಟರ್ನ್ಯಾಷನಲ್ ಕಮಿಟಿ ಆಫ್ ದಿ ರೆಡ್ ಕ್ರಾಸ್ (ICRC) ಹೇಳಿಕೊಂಡಿದೆ. ರಾಫಾ ಈಜಿಪ್ಟ್‌ನ ಗಡಿಯ ಸಮೀಪದಲ್ಲಿದೆ ಮತ್ತು ಲಕ್ಷಾಂತರ ಮಂದಿ ಅಲ್ಲಿ ಆಶ್ರಯವನ್ನು ಪಡದುಕೊಂಡಿದ್ದಾರೆ.

ರಾಫಾದಲ್ಲಿ ನಿರಾಶ್ರಿತ ಜನರ ಅಗತ್ಯಗಳನ್ನು ಪೂರೈಸಲು ನಮ್ಮಲ್ಲಿ ಸಾಕಷ್ಟು ಪರಿಹಾರ ಸಾಮಗ್ರಿಗಳಿಲ್ಲ.ಸಾಕಷ್ಟು ನೀರು ಇಲ್ಲ, ಸಾಕಷ್ಟು ನೈರ್ಮಲ್ಯವಿಲ್ಲ, ಮತ್ತು ಜನರಿಗೆ ಆಹಾರ, ವೈದ್ಯಕೀಯ ಹಾರೈಕೆ ಸಿಗುತ್ತಿಲ್ಲ ಎಂದು ICRC ಕ್ಷಿಪ್ರ ನಿಯೋಜನೆ ಸಂಯೋಜಕ ಸ್ಟೀಫನ್ ರಯಾನ್ ತಿಳಿಸಿದ್ದಾರೆ.

ವಿಶ್ವ ಆರೋಗ್ಯ ಸಂಸ್ಥೆಯ ಮುಖ್ಯಸ್ಥ ಟೆಡ್ರೊಸ್ ಅಧಾನೊಮ್ ಘೆಬ್ರೆಯೆಸಸ್, ಗಾಝಾದ ಜನಸಂಖ್ಯೆಯನ್ನು ಎದುರಿಸುತ್ತಿರುವ ಗಂಭೀರ ಅಪಾಯವನ್ನು ನಿವಾರಿಸಲು ಮತ್ತು ಗಾಯಗಳು, ತೀವ್ರವಾದ ಹಸಿವಿನಿಂದ ಬಳಲುತ್ತಿರುವ ಜನರಿಗೆ ತುರ್ತು ಸಹಾಯ ಮಾಡುವಂತೆ ಅಂತರಾಷ್ಟ್ರೀಯ ಸಮುದಾಯಕ್ಕೆ ಕರೆ ನೀಡಿದ್ದಾರೆ.

ಆಸ್ಪತ್ರೆಗಳಿಗೆ ಔಷಧಗಳು, ವೈದ್ಯಕೀಯ ಸರಬರಾಜುಗಳು ಮತ್ತು ಇಂಧನವನ್ನು ಪೂರೈಸುವ ಸಾಮರ್ಥ್ಯವು ಸೀಮಿತವಾಗಿದೆ. ಇತ್ತೀಚಿನ WHO ಮೌಲ್ಯಮಾಪನಗಳ ಪ್ರಕಾರ ಗಾಝಾದಲ್ಲಿ 13 ಭಾಗಶಃ ಕಾರ್ಯನಿರ್ವಹಿಸುವ ಆಸ್ಪತ್ರೆಗಳನ್ನು ಹೊಂದಿದೆ ಮತ್ತು 21 ಆಸ್ಪತ್ರೆಗಳು ಕಾರ್ಯನಿರ್ವಹಿಸುತ್ತಿಲ್ಲ ಎಂದು ಹೇಳಿದೆ. ನಾಗರಿಕರನ್ನು ಮತ್ತಷ್ಟು ಹಿಂಸಾಚಾರದಿಂದ ರಕ್ಷಿಸಲು ಮತ್ತು ಮತ್ತು ಶಾಂತಿ ಸ್ಥಾಪನೆಗೆ ಕದನ ವಿರಾಮ ಒಂದೇ ದಾರಿಯಾಗಿದೆ ಎಂದು ಟೆಡ್ರೊಸ್ ಹೇಳಿದರು.

ಕಳೆದ 24 ಗಂಟೆಗಳ ಅವಧಿಯಲ್ಲಿ ಗಾಝಾದ ಮೇಲೆ ಇಸ್ರೇಲ್‌ ನಡೆಸಿದ ದಾಳಿಯಲ್ಲಿ ಸುಮಾರು 210 ಪ್ಯಾಲೆಸ್ತೀನಿಯನ್ನರು ಸಾವನ್ನಪ್ಪಿದ್ದಾರೆ ಮತ್ತು 325 ಮಂದಿ ಗಾಯಗೊಂಡಿದ್ದಾರೆ ಎಂದು ಪ್ಯಾಲೇಸ್ತೀನಿಯನ್ ಆರೋಗ್ಯ ಸಚಿವಾಲಯ ತಿಳಿಸಿದೆ. ಇಸ್ರೇಲ್‌ ಮಿಲಿಟರಿ ಕ್ಲಿಯರೆನ್ಸ್ ಆದೇಶಗಳ ನಂತರ ಕನಿಷ್ಠ 1,00,000 ಸ್ಥಳಾಂತರಗೊಂಡ ಜನರು ರಾಫಾದಲ್ಲಿ ಸೇರಿದ್ದಾರೆ.

ಇದನ್ನು ಓದಿ: ಲೋಕಸಭೆ ಚುನಾವಣೆಗೆ ಮುನ್ನ ಇವಿಎಂ ಸರಿಪಡಿಸದಿದ್ದರೆ ಬಿಜೆಪಿ 400 ಸ್ಥಾನಗಳನ್ನು ಗೆಲ್ಲಬಹುದು: ಸ್ಯಾಮ್ ಪಿತ್ರೋಡಾ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...

ಅಕ್ರಮ ಕಲ್ಲು ಗಣಿಗಾರಿಕೆ ಆರೋಪ: ಸಚಿವ ರುದ್ರಪ್ಪ ಲಮಾಣಿಗೆ 3 ಕೋಟಿ ರೂ. ದಂಡ

ಕಲ್ಲು ಗಣಿಗಾರಿಕೆ ನಡೆಸುವ ವೇಳೆ ಸಾಲು ಸಾಲು ನಿಯಮಗಳನ್ನು ಉಲ್ಲಂಘಿಸಲಾಗಿದೆ ಎಂಬ ಗಂಭೀರ ಆರೋಪಕ್ಕೆ ಸಂಬಂಧಿಸಿದಂತೆ ಜವಳಿ ಮತ್ತು ಸಕ್ಕರೆ ಖಾತೆ ಸಚಿವ ಶ್ರೀ ರುದ್ರಪ್ಪ ಮಾನಪ್ಪ ಲಮಾಣಿ ಅವರಿಗೆ ಗಣಿ ಮತ್ತು...

ಪಶ್ಚಿಮ ಬಂಗಾಳ SIR: 38 ಲಕ್ಷ ಮೇಲ್ಮನವಿಗಳಲ್ಲಿ ವಿಲೇವಾರಿಯಾಗಿದ್ದು ಕೇವಲ 1 ಲಕ್ಷ

ಪಶ್ಚಿಮ ಬಂಗಾಳದಲ್ಲಿ ನಡೆದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (SIR) ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ಬೃಹತ್ ಪ್ರಮಾಣದ ಮೇಲ್ಮನವಿಗಳ ಪೈಕಿ ವಿಲೇವಾರಿಯಾದ ಅರ್ಜಿಗಳ ಸಂಖ್ಯೆ ತೀರಾ ಕನಿಷ್ಠ ಮಟ್ಟದಲ್ಲಿದೆ ಎಂಬ ಆಘಾತಕಾರಿ ಮಾಹಿತಿ...

ಕರ್ನಾಟಕ ಎಸ್‌ಐಆರ್: ತಡವಾಗಿ ತಲುಪಿದ ನೋಟಿಸ್‌ಗಳಿಂದ ವಿಚಾರಣಾ ಕೇಂದ್ರಗಳಲ್ಲಿ ಜನದಟ್ಟಣೆ; ಮತದಾರರಲ್ಲಿ ಗೊಂದಲ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗಳನ್ನು ಮತದಾರರಿಗೆ ತಲುಪಿಸುವಲ್ಲಿ ಉಂಟಾಗುತ್ತಿರುವ ವಿಳಂಬವು ಹಲವು ಕಡೆ ವಿಚಾರಣಾ ಕೇಂದ್ರಗಳಲ್ಲಿ ಜನದಟ್ಟಣೆ ಮತ್ತು ಗೊಂದಲಕ್ಕೆ ಕಾರಣವಾಗುತ್ತಿದೆ. ‘ನೋ-ಮ್ಯಾಪಿಂಗ್’...

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...