HomeUncategorizedಇಸ್ರೇಲ್‌ ಯುದ್ಧ ಭೀಕರತೆ: ಮಕ್ಕಳ ಸ್ಮಶಾನವಾದ ಗಾಝಾ!

ಇಸ್ರೇಲ್‌ ಯುದ್ಧ ಭೀಕರತೆ: ಮಕ್ಕಳ ಸ್ಮಶಾನವಾದ ಗಾಝಾ!

- Advertisement -
- Advertisement -

ಇಸ್ರೇಲ್ ಬಾಂಬ್‌ ದಾಳಿಗೆ ಗಾಝಾದಲ್ಲಿ 24,00ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ. ಇದರಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರ ಮತ್ತು ಮಕ್ಕಳ ಹತ್ಯಾಕಾಂಡವನ್ನು ಇಸ್ರೇಲ್‌ ನಡೆಸಿದೆ. ಪದೇ ಪದೇ ಶಾಲೆಗಳನ್ನು, ನವಜಾತ ಶಿಶುಗಳ ಆರೈಕೆ ಕೇಂದ್ರಗಳನ್ನು ಕೇಂದ್ರೀಕರಿಸಿ ಇಸ್ರೇಲ್‌ ದಾಳಿ ನಡೆಸಿದ್ದು, ಈವರೆಗೆ 10,000ಕ್ಕೂ ಹೆಚ್ಚು ಪ್ಯಾಲೇಸ್ತೀನ್‌ನ ಅಮಾಯಕ ಮಕ್ಕಳು ಇಸ್ರೇಲ್‌ ದಾಳಿಯಿಂದ ಕೊಲ್ಲಲ್ಪಟ್ಟಿದ್ದಾರೆ.

ಯುರೋ-ಮೆಡ್ ಮಾನವ ಹಕ್ಕುಗಳ ಮಾನಿಟರ್ ಬಿಡುಗಡೆ ಮಾಡಿದ್ದ ವರದಿಯ ಪ್ರಕಾರ, ಇಸ್ರೇಲ್ 10,000 ಕ್ಕೂ ಹೆಚ್ಚು ಶಿಶುಗಳು ಮತ್ತು ಮಕ್ಕಳನ್ನು ಕೊಂದಿದೆ. ನೂರಾರು ಮಕ್ಕಳು ಪಾಳುಬಿದ್ದ ಕಟ್ಟಡಗಳ ಅವಶೇಷಗಳಡಿಯಲ್ಲಿ ಉಳಿದುಕೊಂಡಿರುವುದರಿಂದ ಬದುಕುಳಿಯುವ ಸಾಧ್ಯತೆ ಕಡಿಮೆ ಇದೆ. ಸುಮಾರು 7,00,000 ಮಕ್ಕಳು ಇಸ್ರೇಲ್‌ನ ಗಾಝಾ ನರಮೇಧದಿಂದ ಪ್ರಭಾವಿತರಾಗಿದ್ದಾರೆ, ಇದರಲ್ಲಿ ಕೊಲ್ಲಲ್ಪಟ್ಟವರು, ಗಾಯಗೊಂಡವರು ಮತ್ತು ಆಂತರಿಕವಾಗಿ ಸ್ಥಳಾಂತರಗೊಂಡವರು ಸೇರಿದ್ದಾರೆ.

ಇಸ್ರೇಲ್‌ ದಾಳಿಯಲ್ಲಿ 18,000 ಪ್ಯಾಲೆಸ್ತೀನ್ ಮಕ್ಕಳು ಗಾಯಗೊಂಡಿದ್ದಾರೆ. ಇದರಲ್ಲಿ ಅನೇಕ ಮಕ್ಕಳು ಗಂಭೀರವಾಗಿದ್ದಾರೆ. ಡಜನ್‌ಗಟ್ಟಲೆ ಮಕ್ಕಳು ಅಂಗಾಂಗಳನ್ನು ಕಳೆದುಕೊಂಡಿದ್ದಾರೆ ಮತ್ತು ನೂರಾರು ಮ್ಕಕಳು ತಮ್ಮ ದೇಹದ ವಿವಿಧ ಭಾಗಗಳಿಗೆ ತೀವ್ರ ಸುಟ್ಟಗಾಯಗಳನ್ನು ಅನುಭವಿಸಿದ್ದಾರೆ. ಸ್ಥಳಾಂತರಗೊಂಡ ಮಕ್ಕಳಲ್ಲಿ 50 ಪ್ರತಿಶತದಷ್ಟು ಮಕ್ಕಳು ನಿರ್ಜಲೀಕರಣ, ಅಪೌಷ್ಟಿಕತೆ, ಉಸಿರಾಟ ಮತ್ತು ಚರ್ಮ ರೋಗಗಳು, ತೀವ್ರ ಶೀತದಿಂದ ಅನಾರೋಗ್ಯಕ್ಕೆ ತುತ್ತಾಗಿದ್ದಾರೆ. ನವಜಾತ ಶಿಶುಗಳಿಗೆ ಲಸಿಕೆ ಸಿಗದೆ ಅಪಾಯದಲ್ಲಿದೆ.

ಗಾಝಾ ಪಟ್ಟಿಯಲ್ಲಿರುವ ಕನಿಷ್ಠ 25,000 ಮಕ್ಕಳು ಒಬ್ಬ ಅಥವಾ ಇಬ್ಬರ ಪೋಷಕರನ್ನು ಕಳೆದುಕೊಂಡಿದ್ದಾರೆ. ಸಾವಿರಾರು ಮಕ್ಕಳು ಭವಿಷ್ಯವನ್ನು ಕಳೆದುಕೊಂಡಿದ್ದಾರೆ. ಗಾಝಾ ಪಟ್ಟಿಯಲ್ಲಿರುವ 217 ಶಾಲೆಗಳು ಇಸ್ರೇಲ್‌ ದಾಳಿಯ ಸಮಯದಲ್ಲಿ ಹಾನಿಗೊಳಗಾಗಿವೆ.

ಸೇವ್ ದಿ ಚಿಲ್ಡ್ರನ್ ಡೇಟಾ ಪ್ರಕಾರ, ಗಾಝಾದಲ್ಲಿ ಪ್ರತಿ 10 ನಿಮಿಷಕ್ಕೆ ಒಂದು ಮಗುವನ್ನು ಕೊಲ್ಲಲಾಗುತ್ತಿದೆ. ಮಧ್ಯಪ್ರಾಚ್ಯ ಮತ್ತು ಉತ್ತರ ಆಫ್ರಿಕಾದ ಯುನಿಸೆಫ್ ಪ್ರಾದೇಶಿಕ ನಿರ್ದೇಶಕ ಅಡೆಲೆ ಖೋಡ್ರ್ ಶನಿವಾರ ಹೇಳಿಕೆಯೊಂದರಲ್ಲಿ, ಗಾಝಾವು ಮಕ್ಕಳಿಗೆ ಪ್ರಪಂಚದಲ್ಲೇ ಅತ್ಯಂತ ಅಪಾಯಕಾರಿ ಸ್ಥಳವಾಗಿದೆ. ವಿಶ್ವದೆಲ್ಲೆಡೆ ಮಕ್ಕಳು ಆಟವಾಡುತ್ತಿರುವಾಗ ಮತ್ತು ಶಾಲೆಗೆ ಹೋಗುತ್ತಿರುವಾಗ ಗಾಝಾ ಮಕ್ಕಳ ಅವಶೇಷಗಳ ರಾಶಿಯಾಗಿ ಮಾರ್ಪಟ್ಟಿದೆ ಎಂದು ಹೇಳಿದ್ದಾರೆ.

ಅ.7ರಂದು ಯುದ್ಧ ಪ್ರಾರಂಭವಾದಾಗಿನಿಂದ ಸುಮಾರು ಒಂದು ಮಿಲಿಯನ್ ಮಕ್ಕಳನ್ನು ಈಗ ಬಲವಂತವಾಗಿ ಸ್ಥಳಾಂತರಿಸಲಾಗಿದೆ ಎಂದು UN ಮಕ್ಕಳ ಏಜೆನ್ಸಿಯ ಹೇಳಿದೆ. ನೀರು, ಆಹಾರ, ಅಥವಾ ರಕ್ಷಣೆಯಿಲ್ಲದೆ, ಉಸಿರಾಟದ ಸೋಂಕುಗಳು ಮತ್ತು ನೀರಿನಿಂದ ಹರಡುವ ರೋಗಗಳ ಅಪಾಯಗಳು ಹೆಚ್ಚಿದ್ದು, ಗಾಝಾ ಮಕ್ಕಳ ಸ್ಮಶಾನವಾಗಿದೆ ಎಂದು ಹೇಳಿದೆ.

ಪ್ಯಾಲೆಸ್ತೀನಿಯನ್‌ ನರಮೇಧವನ್ನು ಸಂಭ್ರಮಿಸಿ ಹಾಡು ಹಾಡಿದ್ದ ಇಸ್ರೇಲ್ ಮಕ್ಕಳು:

ನವೆಂಬರ್‌ನಲ್ಲಿ ಇಸ್ರೇಲ್‌ನ ಸಾರ್ವಜನಿಕ ಬ್ರಾಡ್‌ಕಾಸ್ಟರ್ ಕಾನ್, ತನ್ನ ಅಧಿಕೃತ ಎಕ್ಸ್‌ಲ್ಲಿನ ಪೋಸ್ಟ್‌ನಲ್ಲಿ  ಇಸ್ರೇಲ್‌ ಮಕ್ಕಳು ಗಾಝಾದಲ್ಲಿ ಪ್ಯಾಲೆಸ್ತೀನಿಯನ್ನರು ನರಮೇಧವನ್ನು ಆಚರಿಸುವ ಹಾಡನ್ನು ಹಾಡುವ ವೀಡಿಯೊವನ್ನು ಅಪ್‌ಲೋಡ್ ಮಾಡಿದೆ. ಟೀಕೆಗೆ ಒಳಗಾದ ಬಳಿಕ ನಂತರ ವೀಡಿಯೊ ಕ್ಲಿಪ್‌ನ್ನು ಅಳಿಸಿದ್ದಾರೆ. ಸಾಮಾಜಿಕ ಮಾಧ್ಯಮದಿಂದ ವೀಡಿಯೊವನ್ನು ಅಳಿಸಿದ ನಂತರವೂ, ಹಾಡು ಚರ್ಚೆ ಮತ್ತು ವಿವಾದದ ವಿಷಯವಾಗಿ ಉಳಿದಿದೆ. ಒಂದು ವರ್ಷದೊಳಗೆ ಇಡೀ ಗಾಝಾದ ಜನರನ್ನು ನಿರ್ಮೂಲನೆ ಮಾಡುವ ಬಗ್ಗೆ ಮಕ್ಕಳು ಸಂತೋಷದಿಂದ ಹಾಡುವುದನ್ನು ನೋಡಿ ಪ್ರಪಂಚದಾದ್ಯಂತದ ಅನೇಕರು ಆಘಾತಕ್ಕೊಳಗಾಗಿದ್ದರು.

ರಾಫಾದಲ್ಲಿ ನಾಗರಿಕರ ಪರಿಸ್ಥಿತಿಗಳು ಗಂಭೀರ:

ದಕ್ಷಿಣ ಗಾಝಾ ಪಟ್ಟಿಯಲ್ಲಿರುವ ರಾಫಾದಲ್ಲಿ ನಾಗರಿಕರ ಪರಿಸ್ಥಿತಿಗಳು ಅತ್ಯಂತ ಭೀಕರವಾಗಿವೆ ಎಂದು ಇಂಟರ್ನ್ಯಾಷನಲ್ ಕಮಿಟಿ ಆಫ್ ದಿ ರೆಡ್ ಕ್ರಾಸ್ (ICRC) ಹೇಳಿಕೊಂಡಿದೆ. ರಾಫಾ ಈಜಿಪ್ಟ್‌ನ ಗಡಿಯ ಸಮೀಪದಲ್ಲಿದೆ ಮತ್ತು ಲಕ್ಷಾಂತರ ಮಂದಿ ಅಲ್ಲಿ ಆಶ್ರಯವನ್ನು ಪಡದುಕೊಂಡಿದ್ದಾರೆ.

ರಾಫಾದಲ್ಲಿ ನಿರಾಶ್ರಿತ ಜನರ ಅಗತ್ಯಗಳನ್ನು ಪೂರೈಸಲು ನಮ್ಮಲ್ಲಿ ಸಾಕಷ್ಟು ಪರಿಹಾರ ಸಾಮಗ್ರಿಗಳಿಲ್ಲ.ಸಾಕಷ್ಟು ನೀರು ಇಲ್ಲ, ಸಾಕಷ್ಟು ನೈರ್ಮಲ್ಯವಿಲ್ಲ, ಮತ್ತು ಜನರಿಗೆ ಆಹಾರ, ವೈದ್ಯಕೀಯ ಹಾರೈಕೆ ಸಿಗುತ್ತಿಲ್ಲ ಎಂದು ICRC ಕ್ಷಿಪ್ರ ನಿಯೋಜನೆ ಸಂಯೋಜಕ ಸ್ಟೀಫನ್ ರಯಾನ್ ತಿಳಿಸಿದ್ದಾರೆ.

ವಿಶ್ವ ಆರೋಗ್ಯ ಸಂಸ್ಥೆಯ ಮುಖ್ಯಸ್ಥ ಟೆಡ್ರೊಸ್ ಅಧಾನೊಮ್ ಘೆಬ್ರೆಯೆಸಸ್, ಗಾಝಾದ ಜನಸಂಖ್ಯೆಯನ್ನು ಎದುರಿಸುತ್ತಿರುವ ಗಂಭೀರ ಅಪಾಯವನ್ನು ನಿವಾರಿಸಲು ಮತ್ತು ಗಾಯಗಳು, ತೀವ್ರವಾದ ಹಸಿವಿನಿಂದ ಬಳಲುತ್ತಿರುವ ಜನರಿಗೆ ತುರ್ತು ಸಹಾಯ ಮಾಡುವಂತೆ ಅಂತರಾಷ್ಟ್ರೀಯ ಸಮುದಾಯಕ್ಕೆ ಕರೆ ನೀಡಿದ್ದಾರೆ.

ಆಸ್ಪತ್ರೆಗಳಿಗೆ ಔಷಧಗಳು, ವೈದ್ಯಕೀಯ ಸರಬರಾಜುಗಳು ಮತ್ತು ಇಂಧನವನ್ನು ಪೂರೈಸುವ ಸಾಮರ್ಥ್ಯವು ಸೀಮಿತವಾಗಿದೆ. ಇತ್ತೀಚಿನ WHO ಮೌಲ್ಯಮಾಪನಗಳ ಪ್ರಕಾರ ಗಾಝಾದಲ್ಲಿ 13 ಭಾಗಶಃ ಕಾರ್ಯನಿರ್ವಹಿಸುವ ಆಸ್ಪತ್ರೆಗಳನ್ನು ಹೊಂದಿದೆ ಮತ್ತು 21 ಆಸ್ಪತ್ರೆಗಳು ಕಾರ್ಯನಿರ್ವಹಿಸುತ್ತಿಲ್ಲ ಎಂದು ಹೇಳಿದೆ. ನಾಗರಿಕರನ್ನು ಮತ್ತಷ್ಟು ಹಿಂಸಾಚಾರದಿಂದ ರಕ್ಷಿಸಲು ಮತ್ತು ಮತ್ತು ಶಾಂತಿ ಸ್ಥಾಪನೆಗೆ ಕದನ ವಿರಾಮ ಒಂದೇ ದಾರಿಯಾಗಿದೆ ಎಂದು ಟೆಡ್ರೊಸ್ ಹೇಳಿದರು.

ಕಳೆದ 24 ಗಂಟೆಗಳ ಅವಧಿಯಲ್ಲಿ ಗಾಝಾದ ಮೇಲೆ ಇಸ್ರೇಲ್‌ ನಡೆಸಿದ ದಾಳಿಯಲ್ಲಿ ಸುಮಾರು 210 ಪ್ಯಾಲೆಸ್ತೀನಿಯನ್ನರು ಸಾವನ್ನಪ್ಪಿದ್ದಾರೆ ಮತ್ತು 325 ಮಂದಿ ಗಾಯಗೊಂಡಿದ್ದಾರೆ ಎಂದು ಪ್ಯಾಲೇಸ್ತೀನಿಯನ್ ಆರೋಗ್ಯ ಸಚಿವಾಲಯ ತಿಳಿಸಿದೆ. ಇಸ್ರೇಲ್‌ ಮಿಲಿಟರಿ ಕ್ಲಿಯರೆನ್ಸ್ ಆದೇಶಗಳ ನಂತರ ಕನಿಷ್ಠ 1,00,000 ಸ್ಥಳಾಂತರಗೊಂಡ ಜನರು ರಾಫಾದಲ್ಲಿ ಸೇರಿದ್ದಾರೆ.

ಇದನ್ನು ಓದಿ: ಲೋಕಸಭೆ ಚುನಾವಣೆಗೆ ಮುನ್ನ ಇವಿಎಂ ಸರಿಪಡಿಸದಿದ್ದರೆ ಬಿಜೆಪಿ 400 ಸ್ಥಾನಗಳನ್ನು ಗೆಲ್ಲಬಹುದು: ಸ್ಯಾಮ್ ಪಿತ್ರೋಡಾ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ಮೇಲಿನ ಇಸ್ರೇಲ್-ಅಮೆರಿಕ ದಾಳಿಗಳು ಅಂತರರಾಷ್ಟ್ರೀಯ ಕಾನೂನಿಗೆ ಸರಿ ಹೊಂದುವುದಿಲ್ಲ: ಕೆನಡಾ ಪ್ರಧಾನಿ ಮಾರ್ಕ್ ಕಾರ್ನಿ

ಸಿಡ್ನಿ: ಇರಾನ್ ಮೇಲಿನ ಅಮೆರಿಕ ಮತ್ತು ಇಸ್ರೇಲ್ ದಾಳಿಗಳನ್ನು "ವಿಷಾದದಿಂದ" ಬೆಂಬಲಿಸುವುದಾಗಿ ಕೆನಡಾ ಪ್ರಧಾನಿ ಮಾರ್ಕ್ ಕಾರ್ನಿ ಹೇಳಿದ್ದಾರೆ. ಆದರೆ ಈ ಸಂಘರ್ಷವು ಅಂತರರಾಷ್ಟ್ರೀಯ ಕ್ರಮದ ವೈಫಲ್ಯವನ್ನು ಪ್ರತಿಬಿಂಬಿಸುತ್ತದೆ ಎಂದು ಅವರು...

ಉತ್ತರ ಪ್ರದೇಶ | ಅತ್ಯಾಚಾರ ಸಂತ್ರಸ್ತೆಯನ್ನು ಗುಂಡಿಕ್ಕಿ ಕೊಂದ ಆರೋಪಿ

ಸುಮಾರು 17 ವರ್ಷದ ಅತ್ಯಾಚಾರ ಸಂತ್ರಸ್ತೆಯನ್ನು 22 ವರ್ಷದ ಆರೋಪಿ ಗುಂಡಿಕ್ಕಿ ಕೊಂದು ಪರಾರಿಯಾಗಿರುವ ಘಟನೆ ಉತ್ತರ ಪ್ರದೇಶದ ಬಸ್ತಿ ಜಿಲ್ಲೆಯಲ್ಲಿ ನಡೆದಿದೆ. ಸದ್ಯ ತಲೆಮರೆಸಿಕೊಂಡಿರುವ ಆರೋಪಿಯ ಹುಡುಕಾಟ ನಡೆಯುತ್ತಿದೆ ಎಂದು ಪೊಲೀಸರು...

ಹಾರ್ಮುಜ್ ಜಲಸಂಧಿ ಮುಚ್ಚಿದ ಇರಾನ್; ಪರ್ಷಿಯನ್ ಕೊಲ್ಲಿಯಲ್ಲಿ ಸಿಲುಕಿಸಿದ 37 ಭಾರತೀಯ ಹಡಗುಗಳು

ಇಸ್ರೇಲ್-ಯುಎಸ್ ಜಂಟಿ ದಾಳಿಯ ನಂತರ, ಇರಾನ್ ಹಾರ್ಮುಜ್ ಜಲಸಂಧಿಯನ್ನು ಮುಚ್ಚಿರುವುದರಿಂದ ಭಾರತೀಯ ಹಡಗುಗಳು ಬಿಕ್ಕಟ್ಟಿನಲ್ಲಿ ಸಿಲುಕಿಕೊಂಡಿವೆ. ಭಾರತೀಯ ಧ್ವಜ ಹೊಂದಿರುವ 37 ಹಡಗುಗಳು ಪರ್ಷಿಯನ್ ಕೊಲ್ಲಿ ಮತ್ತು ಒಮಾನ್ ನೀರಿನಲ್ಲಿ ಸಿಲುಕಿಕೊಂಡಿವೆ. 37 ಹಡಗುಗಳು...

ಪಾಲ್ಘರ್: ಮುಂಬೈ-ಅಹಮದಾಬಾದ್ ಹೆದ್ದಾರಿಯಲ್ಲಿ ಹೊತ್ತಿ ಉರಿದ ಟೆಂಪೋ: 28 ವರ್ಷದ ಚಾಲಕ ಸಜೀವ ದಹನ, ಕ್ಲೀನರ್ ಗೆ ಗಾಯ

ಪಾಲ್ಘರ್: ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ಮುಂಬೈ-ಅಹಮದಾಬಾದ್ ಹೆದ್ದಾರಿಯಲ್ಲಿ ಟೆಂಪೋಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಪಂಜಾಬ್‌ನ 28 ವರ್ಷದ ಚಾಲಕ ಸುಟ್ಟು ಕರಕಲಾಗಿದ್ದು, ಕ್ಲೀನರ್ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಘಟನೆಯ ಬಗ್ಗೆ ಜನನಿಬಿಡ...

ಗುಜರಾತ್| ಅಂತರ್ಧರ್ಮೀಯ ದಂಪತಿಗೆ ಪೊಲೀಸರ ರಕ್ಷಣೆ; ‘ಲವ್ ಜಿಹಾದ್’ ಎಂದು ಕೂಗಿದ ವಿಎಚ್‌ಪಿ

ಮಾರ್ಚ್ 3 ರಂದು ಗುಜರಾತ್‌ನ ಅಹಮದಾಬಾದ್‌ನ ಮೆಟ್ರೋ ನ್ಯಾಯಾಲಯದ ಸಂಕೀರ್ಣದೊಳಗಿನ ವಿವಾಹ ನೋಂದಣಿ ಕಚೇರಿಯು ಅವ್ಯವಸ್ಥೆಯ ತಾಣವಾಯಿತು. ಗಾಂಧಿನಗರದ ಹಿಂದೂ ಮಹಿಳೆಯೊಬ್ಬರು ನಗರದ ಮುಸ್ಲಿಂ ವ್ಯಕ್ತಿಯನ್ನು ಮದುವೆಯಾಗಲು ಬಂದ ನಂತರ ಹಿಂದುತ್ವ ಸಂಘಟನೆಯ...

ಖಮೇನಿ ಹತ್ಯೆ ಕುರಿತು ಪೋಸ್ಟ್‌ : ನ್ಯಾಷನಲ್ ಕಾನ್ಫರೆನ್ಸ್ ಸಂಸದ, ಶ್ರೀನಗರದ ಮಾಜಿ ಮೇಯರ್ ವಿರುದ್ಧ ಎಫ್‌ಐಆರ್

ದಾರಿತಪ್ಪಿಸುವ ಆನ್‌ಲೈನ್ ವಿಷಯವನ್ನು ಹಂಚಿಕೊಂಡ ಆರೋಪದ ಮೇಲೆ ಜಮ್ಮು ಕಾಶ್ಮೀರದ ಆಡಳಿತಾರೂಢ ನ್ಯಾಷನಲ್ ಕಾನ್ಫರೆನ್ಸ್ ಸಂಸದ ಅಗಾ ಸೈಯದ್ ರೂಹುಲ್ಲಾ ಮೆಹದಿ ಮತ್ತು ಶ್ರೀನಗರದ ಮಾಜಿ ಮೇಯರ್ ಜುನೈದ್ ಅಝೀಂ ಮಟ್ಟು ವಿರುದ್ಧ...

ಒಡಿಶಾ| ಮೇಕೆ ಕಳ್ಳತನ ಶಂಕೆಯಿಂದ 14 ವರ್ಷದ ಬಾಲಕನನ್ನು ಹೊಡೆದು ಕೊಂದ ಗುಂಪು; 12 ಜನರ ಬಂಧನ

ಒಡಿಶಾದ ಮಯೂರ್‌ಭಂಜ್ ಜಿಲ್ಲೆಯಲ್ಲಿ ಮೇಕೆ ಕಳ್ಳತನದ ಶಂಕೆಯಿಂದ ಗ್ರಾಮಸ್ಥರು ಥಳಿಸಿದರಿಂದ 14 ವರ್ಷದ ಬಾಲಕನೊಬ್ಬ ಸಾವನ್ನಪ್ಪಿ, ಇನ್ನೊಬ್ಬ ಬಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ಟಿರಿಂಗ್ ಪೊಲೀಸ್ ಠಾಣೆ ವ್ಯಾಪ್ತಿಯ ಇಂಡೋಖೋಲಿ...

ಮಧ್ಯಪ್ರಾಚ್ಯ ಉದ್ವಿಗ್ನತೆ: ಪಶ್ಚಿಮ ಏಷ್ಯಾದಲ್ಲಿ ಸಿಲುಕಿದ್ದ ಮಹಾರಾಷ್ಟ್ರದ 164 ಪ್ರವಾಸಿಗರು ಮನೆಗೆ ಮರಳಿದ್ದಾರೆ: ಶಿವಸೇನೆ

ಮುಂಬೈ: ಅಮೆರಿಕ-ಇಸ್ರೇಲ್-ಇರಾನ್ ಸಂಘರ್ಷದಿಂದಾಗಿ ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಸಿಲುಕಿಕೊಂಡಿದ್ದ ಮಹಾರಾಷ್ಟ್ರದ ಒಟ್ಟು 164 ಪ್ರವಾಸಿಗರು ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ವ್ಯವಸ್ಥೆ ಮಾಡಿದ ಎರಡು ವಿಮಾನಗಳಲ್ಲಿ ಮನೆಗೆ ಮರಳಿದ್ದಾರೆ ಎಂದು ಶಿವಸೇನಾ ಪದಾಧಿಕಾರಿಯೊಬ್ಬರು ಬುಧವಾರ...

‘ಇದು ಟ್ರಂಪ್ ವಾಗ್ದಾನ ಮಾಡಿದ ರಕ್ಷಣೆ’: 165 ಮಕ್ಕಳ ಸಾಮೂಹಿಕ ಸಮಾಧಿಯ ಫೋಟೋ ಹಂಚಿಕೊಂಡ ಇರಾನ್; ಮರುಗಿದ ಮಾನವ ಜಗತ್ತು

ದಕ್ಷಿಣ ಇರಾನ್‌ನ ಮಿನಾಬ್ ನಗರದ ಬಾಲಕಿಯರ ಶಾಲೆಯೊಂದರ ಮೇಲೆ ಶನಿವಾರ (ಫೆ.28) ಅಮೆರಿಕ-ಇಸ್ರೇಲ್ ನಡೆಸಿದ ಜಂಟಿ ದಾಳಿಯಲ್ಲಿ ಸಾವನ್ನಪ್ಪಿದ 165 ವಿದ್ಯಾರ್ಥಿನಿಯರು ಮತ್ತು ಸಿಬ್ಬಂದಿಯ ಬೃಹತ್ ಅಂತಿಮ ಸಂಸ್ಕಾರ ಮೆರವಣಿಗೆ ಮಂಗಳವಾರ (ಮಾ.3)...

ಖಮೇನಿ ಪುತ್ರ ಮೊಜ್ತಬಾ ಅವರನ್ನು ಸರ್ವೋಚ್ಚ ನಾಯಕನನ್ನಾಗಿ ಹೆಸರಿಸಿದ ಇರಾನ್ ತಜ್ಞರ ಸಭೆ?

ದಿವಂಗತ ಅಯತೊಲ್ಲಾ ಅಲಿ ಖಮೇನಿಯವರ ಪುತ್ರ 56 ವರ್ಷದ ಮೊಜ್ತಬಾ ಖಮೇನಿ ಅವರನ್ನು ತಜ್ಞರ ಸಭೆಯು ಇರಾನ್‌ನ ಹೊಸ ಸರ್ವೋಚ್ಚ ನಾಯಕನನ್ನಾಗಿ ಆಯ್ಕೆ ಮಾಡಿದೆ ಎಂದು ಬಲ್ಲ ಮೂಲಗಳನ್ನು ಉಲ್ಲೇಖಿಸಿ ಇರಾನ್ ಅಂತಾರಾಷ್ಟ್ರೀಯ...