HomeUncategorizedಇಸ್ರೇಲ್‌ ಯುದ್ಧ ಭೀಕರತೆ: ಮಕ್ಕಳ ಸ್ಮಶಾನವಾದ ಗಾಝಾ!

ಇಸ್ರೇಲ್‌ ಯುದ್ಧ ಭೀಕರತೆ: ಮಕ್ಕಳ ಸ್ಮಶಾನವಾದ ಗಾಝಾ!

- Advertisement -
- Advertisement -

ಇಸ್ರೇಲ್ ಬಾಂಬ್‌ ದಾಳಿಗೆ ಗಾಝಾದಲ್ಲಿ 24,00ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ. ಇದರಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರ ಮತ್ತು ಮಕ್ಕಳ ಹತ್ಯಾಕಾಂಡವನ್ನು ಇಸ್ರೇಲ್‌ ನಡೆಸಿದೆ. ಪದೇ ಪದೇ ಶಾಲೆಗಳನ್ನು, ನವಜಾತ ಶಿಶುಗಳ ಆರೈಕೆ ಕೇಂದ್ರಗಳನ್ನು ಕೇಂದ್ರೀಕರಿಸಿ ಇಸ್ರೇಲ್‌ ದಾಳಿ ನಡೆಸಿದ್ದು, ಈವರೆಗೆ 10,000ಕ್ಕೂ ಹೆಚ್ಚು ಪ್ಯಾಲೇಸ್ತೀನ್‌ನ ಅಮಾಯಕ ಮಕ್ಕಳು ಇಸ್ರೇಲ್‌ ದಾಳಿಯಿಂದ ಕೊಲ್ಲಲ್ಪಟ್ಟಿದ್ದಾರೆ.

ಯುರೋ-ಮೆಡ್ ಮಾನವ ಹಕ್ಕುಗಳ ಮಾನಿಟರ್ ಬಿಡುಗಡೆ ಮಾಡಿದ್ದ ವರದಿಯ ಪ್ರಕಾರ, ಇಸ್ರೇಲ್ 10,000 ಕ್ಕೂ ಹೆಚ್ಚು ಶಿಶುಗಳು ಮತ್ತು ಮಕ್ಕಳನ್ನು ಕೊಂದಿದೆ. ನೂರಾರು ಮಕ್ಕಳು ಪಾಳುಬಿದ್ದ ಕಟ್ಟಡಗಳ ಅವಶೇಷಗಳಡಿಯಲ್ಲಿ ಉಳಿದುಕೊಂಡಿರುವುದರಿಂದ ಬದುಕುಳಿಯುವ ಸಾಧ್ಯತೆ ಕಡಿಮೆ ಇದೆ. ಸುಮಾರು 7,00,000 ಮಕ್ಕಳು ಇಸ್ರೇಲ್‌ನ ಗಾಝಾ ನರಮೇಧದಿಂದ ಪ್ರಭಾವಿತರಾಗಿದ್ದಾರೆ, ಇದರಲ್ಲಿ ಕೊಲ್ಲಲ್ಪಟ್ಟವರು, ಗಾಯಗೊಂಡವರು ಮತ್ತು ಆಂತರಿಕವಾಗಿ ಸ್ಥಳಾಂತರಗೊಂಡವರು ಸೇರಿದ್ದಾರೆ.

ಇಸ್ರೇಲ್‌ ದಾಳಿಯಲ್ಲಿ 18,000 ಪ್ಯಾಲೆಸ್ತೀನ್ ಮಕ್ಕಳು ಗಾಯಗೊಂಡಿದ್ದಾರೆ. ಇದರಲ್ಲಿ ಅನೇಕ ಮಕ್ಕಳು ಗಂಭೀರವಾಗಿದ್ದಾರೆ. ಡಜನ್‌ಗಟ್ಟಲೆ ಮಕ್ಕಳು ಅಂಗಾಂಗಳನ್ನು ಕಳೆದುಕೊಂಡಿದ್ದಾರೆ ಮತ್ತು ನೂರಾರು ಮ್ಕಕಳು ತಮ್ಮ ದೇಹದ ವಿವಿಧ ಭಾಗಗಳಿಗೆ ತೀವ್ರ ಸುಟ್ಟಗಾಯಗಳನ್ನು ಅನುಭವಿಸಿದ್ದಾರೆ. ಸ್ಥಳಾಂತರಗೊಂಡ ಮಕ್ಕಳಲ್ಲಿ 50 ಪ್ರತಿಶತದಷ್ಟು ಮಕ್ಕಳು ನಿರ್ಜಲೀಕರಣ, ಅಪೌಷ್ಟಿಕತೆ, ಉಸಿರಾಟ ಮತ್ತು ಚರ್ಮ ರೋಗಗಳು, ತೀವ್ರ ಶೀತದಿಂದ ಅನಾರೋಗ್ಯಕ್ಕೆ ತುತ್ತಾಗಿದ್ದಾರೆ. ನವಜಾತ ಶಿಶುಗಳಿಗೆ ಲಸಿಕೆ ಸಿಗದೆ ಅಪಾಯದಲ್ಲಿದೆ.

ಗಾಝಾ ಪಟ್ಟಿಯಲ್ಲಿರುವ ಕನಿಷ್ಠ 25,000 ಮಕ್ಕಳು ಒಬ್ಬ ಅಥವಾ ಇಬ್ಬರ ಪೋಷಕರನ್ನು ಕಳೆದುಕೊಂಡಿದ್ದಾರೆ. ಸಾವಿರಾರು ಮಕ್ಕಳು ಭವಿಷ್ಯವನ್ನು ಕಳೆದುಕೊಂಡಿದ್ದಾರೆ. ಗಾಝಾ ಪಟ್ಟಿಯಲ್ಲಿರುವ 217 ಶಾಲೆಗಳು ಇಸ್ರೇಲ್‌ ದಾಳಿಯ ಸಮಯದಲ್ಲಿ ಹಾನಿಗೊಳಗಾಗಿವೆ.

ಸೇವ್ ದಿ ಚಿಲ್ಡ್ರನ್ ಡೇಟಾ ಪ್ರಕಾರ, ಗಾಝಾದಲ್ಲಿ ಪ್ರತಿ 10 ನಿಮಿಷಕ್ಕೆ ಒಂದು ಮಗುವನ್ನು ಕೊಲ್ಲಲಾಗುತ್ತಿದೆ. ಮಧ್ಯಪ್ರಾಚ್ಯ ಮತ್ತು ಉತ್ತರ ಆಫ್ರಿಕಾದ ಯುನಿಸೆಫ್ ಪ್ರಾದೇಶಿಕ ನಿರ್ದೇಶಕ ಅಡೆಲೆ ಖೋಡ್ರ್ ಶನಿವಾರ ಹೇಳಿಕೆಯೊಂದರಲ್ಲಿ, ಗಾಝಾವು ಮಕ್ಕಳಿಗೆ ಪ್ರಪಂಚದಲ್ಲೇ ಅತ್ಯಂತ ಅಪಾಯಕಾರಿ ಸ್ಥಳವಾಗಿದೆ. ವಿಶ್ವದೆಲ್ಲೆಡೆ ಮಕ್ಕಳು ಆಟವಾಡುತ್ತಿರುವಾಗ ಮತ್ತು ಶಾಲೆಗೆ ಹೋಗುತ್ತಿರುವಾಗ ಗಾಝಾ ಮಕ್ಕಳ ಅವಶೇಷಗಳ ರಾಶಿಯಾಗಿ ಮಾರ್ಪಟ್ಟಿದೆ ಎಂದು ಹೇಳಿದ್ದಾರೆ.

ಅ.7ರಂದು ಯುದ್ಧ ಪ್ರಾರಂಭವಾದಾಗಿನಿಂದ ಸುಮಾರು ಒಂದು ಮಿಲಿಯನ್ ಮಕ್ಕಳನ್ನು ಈಗ ಬಲವಂತವಾಗಿ ಸ್ಥಳಾಂತರಿಸಲಾಗಿದೆ ಎಂದು UN ಮಕ್ಕಳ ಏಜೆನ್ಸಿಯ ಹೇಳಿದೆ. ನೀರು, ಆಹಾರ, ಅಥವಾ ರಕ್ಷಣೆಯಿಲ್ಲದೆ, ಉಸಿರಾಟದ ಸೋಂಕುಗಳು ಮತ್ತು ನೀರಿನಿಂದ ಹರಡುವ ರೋಗಗಳ ಅಪಾಯಗಳು ಹೆಚ್ಚಿದ್ದು, ಗಾಝಾ ಮಕ್ಕಳ ಸ್ಮಶಾನವಾಗಿದೆ ಎಂದು ಹೇಳಿದೆ.

ಪ್ಯಾಲೆಸ್ತೀನಿಯನ್‌ ನರಮೇಧವನ್ನು ಸಂಭ್ರಮಿಸಿ ಹಾಡು ಹಾಡಿದ್ದ ಇಸ್ರೇಲ್ ಮಕ್ಕಳು:

ನವೆಂಬರ್‌ನಲ್ಲಿ ಇಸ್ರೇಲ್‌ನ ಸಾರ್ವಜನಿಕ ಬ್ರಾಡ್‌ಕಾಸ್ಟರ್ ಕಾನ್, ತನ್ನ ಅಧಿಕೃತ ಎಕ್ಸ್‌ಲ್ಲಿನ ಪೋಸ್ಟ್‌ನಲ್ಲಿ  ಇಸ್ರೇಲ್‌ ಮಕ್ಕಳು ಗಾಝಾದಲ್ಲಿ ಪ್ಯಾಲೆಸ್ತೀನಿಯನ್ನರು ನರಮೇಧವನ್ನು ಆಚರಿಸುವ ಹಾಡನ್ನು ಹಾಡುವ ವೀಡಿಯೊವನ್ನು ಅಪ್‌ಲೋಡ್ ಮಾಡಿದೆ. ಟೀಕೆಗೆ ಒಳಗಾದ ಬಳಿಕ ನಂತರ ವೀಡಿಯೊ ಕ್ಲಿಪ್‌ನ್ನು ಅಳಿಸಿದ್ದಾರೆ. ಸಾಮಾಜಿಕ ಮಾಧ್ಯಮದಿಂದ ವೀಡಿಯೊವನ್ನು ಅಳಿಸಿದ ನಂತರವೂ, ಹಾಡು ಚರ್ಚೆ ಮತ್ತು ವಿವಾದದ ವಿಷಯವಾಗಿ ಉಳಿದಿದೆ. ಒಂದು ವರ್ಷದೊಳಗೆ ಇಡೀ ಗಾಝಾದ ಜನರನ್ನು ನಿರ್ಮೂಲನೆ ಮಾಡುವ ಬಗ್ಗೆ ಮಕ್ಕಳು ಸಂತೋಷದಿಂದ ಹಾಡುವುದನ್ನು ನೋಡಿ ಪ್ರಪಂಚದಾದ್ಯಂತದ ಅನೇಕರು ಆಘಾತಕ್ಕೊಳಗಾಗಿದ್ದರು.

ರಾಫಾದಲ್ಲಿ ನಾಗರಿಕರ ಪರಿಸ್ಥಿತಿಗಳು ಗಂಭೀರ:

ದಕ್ಷಿಣ ಗಾಝಾ ಪಟ್ಟಿಯಲ್ಲಿರುವ ರಾಫಾದಲ್ಲಿ ನಾಗರಿಕರ ಪರಿಸ್ಥಿತಿಗಳು ಅತ್ಯಂತ ಭೀಕರವಾಗಿವೆ ಎಂದು ಇಂಟರ್ನ್ಯಾಷನಲ್ ಕಮಿಟಿ ಆಫ್ ದಿ ರೆಡ್ ಕ್ರಾಸ್ (ICRC) ಹೇಳಿಕೊಂಡಿದೆ. ರಾಫಾ ಈಜಿಪ್ಟ್‌ನ ಗಡಿಯ ಸಮೀಪದಲ್ಲಿದೆ ಮತ್ತು ಲಕ್ಷಾಂತರ ಮಂದಿ ಅಲ್ಲಿ ಆಶ್ರಯವನ್ನು ಪಡದುಕೊಂಡಿದ್ದಾರೆ.

ರಾಫಾದಲ್ಲಿ ನಿರಾಶ್ರಿತ ಜನರ ಅಗತ್ಯಗಳನ್ನು ಪೂರೈಸಲು ನಮ್ಮಲ್ಲಿ ಸಾಕಷ್ಟು ಪರಿಹಾರ ಸಾಮಗ್ರಿಗಳಿಲ್ಲ.ಸಾಕಷ್ಟು ನೀರು ಇಲ್ಲ, ಸಾಕಷ್ಟು ನೈರ್ಮಲ್ಯವಿಲ್ಲ, ಮತ್ತು ಜನರಿಗೆ ಆಹಾರ, ವೈದ್ಯಕೀಯ ಹಾರೈಕೆ ಸಿಗುತ್ತಿಲ್ಲ ಎಂದು ICRC ಕ್ಷಿಪ್ರ ನಿಯೋಜನೆ ಸಂಯೋಜಕ ಸ್ಟೀಫನ್ ರಯಾನ್ ತಿಳಿಸಿದ್ದಾರೆ.

ವಿಶ್ವ ಆರೋಗ್ಯ ಸಂಸ್ಥೆಯ ಮುಖ್ಯಸ್ಥ ಟೆಡ್ರೊಸ್ ಅಧಾನೊಮ್ ಘೆಬ್ರೆಯೆಸಸ್, ಗಾಝಾದ ಜನಸಂಖ್ಯೆಯನ್ನು ಎದುರಿಸುತ್ತಿರುವ ಗಂಭೀರ ಅಪಾಯವನ್ನು ನಿವಾರಿಸಲು ಮತ್ತು ಗಾಯಗಳು, ತೀವ್ರವಾದ ಹಸಿವಿನಿಂದ ಬಳಲುತ್ತಿರುವ ಜನರಿಗೆ ತುರ್ತು ಸಹಾಯ ಮಾಡುವಂತೆ ಅಂತರಾಷ್ಟ್ರೀಯ ಸಮುದಾಯಕ್ಕೆ ಕರೆ ನೀಡಿದ್ದಾರೆ.

ಆಸ್ಪತ್ರೆಗಳಿಗೆ ಔಷಧಗಳು, ವೈದ್ಯಕೀಯ ಸರಬರಾಜುಗಳು ಮತ್ತು ಇಂಧನವನ್ನು ಪೂರೈಸುವ ಸಾಮರ್ಥ್ಯವು ಸೀಮಿತವಾಗಿದೆ. ಇತ್ತೀಚಿನ WHO ಮೌಲ್ಯಮಾಪನಗಳ ಪ್ರಕಾರ ಗಾಝಾದಲ್ಲಿ 13 ಭಾಗಶಃ ಕಾರ್ಯನಿರ್ವಹಿಸುವ ಆಸ್ಪತ್ರೆಗಳನ್ನು ಹೊಂದಿದೆ ಮತ್ತು 21 ಆಸ್ಪತ್ರೆಗಳು ಕಾರ್ಯನಿರ್ವಹಿಸುತ್ತಿಲ್ಲ ಎಂದು ಹೇಳಿದೆ. ನಾಗರಿಕರನ್ನು ಮತ್ತಷ್ಟು ಹಿಂಸಾಚಾರದಿಂದ ರಕ್ಷಿಸಲು ಮತ್ತು ಮತ್ತು ಶಾಂತಿ ಸ್ಥಾಪನೆಗೆ ಕದನ ವಿರಾಮ ಒಂದೇ ದಾರಿಯಾಗಿದೆ ಎಂದು ಟೆಡ್ರೊಸ್ ಹೇಳಿದರು.

ಕಳೆದ 24 ಗಂಟೆಗಳ ಅವಧಿಯಲ್ಲಿ ಗಾಝಾದ ಮೇಲೆ ಇಸ್ರೇಲ್‌ ನಡೆಸಿದ ದಾಳಿಯಲ್ಲಿ ಸುಮಾರು 210 ಪ್ಯಾಲೆಸ್ತೀನಿಯನ್ನರು ಸಾವನ್ನಪ್ಪಿದ್ದಾರೆ ಮತ್ತು 325 ಮಂದಿ ಗಾಯಗೊಂಡಿದ್ದಾರೆ ಎಂದು ಪ್ಯಾಲೇಸ್ತೀನಿಯನ್ ಆರೋಗ್ಯ ಸಚಿವಾಲಯ ತಿಳಿಸಿದೆ. ಇಸ್ರೇಲ್‌ ಮಿಲಿಟರಿ ಕ್ಲಿಯರೆನ್ಸ್ ಆದೇಶಗಳ ನಂತರ ಕನಿಷ್ಠ 1,00,000 ಸ್ಥಳಾಂತರಗೊಂಡ ಜನರು ರಾಫಾದಲ್ಲಿ ಸೇರಿದ್ದಾರೆ.

ಇದನ್ನು ಓದಿ: ಲೋಕಸಭೆ ಚುನಾವಣೆಗೆ ಮುನ್ನ ಇವಿಎಂ ಸರಿಪಡಿಸದಿದ್ದರೆ ಬಿಜೆಪಿ 400 ಸ್ಥಾನಗಳನ್ನು ಗೆಲ್ಲಬಹುದು: ಸ್ಯಾಮ್ ಪಿತ್ರೋಡಾ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಖರ್ಗೆ ಭಾಷಣ ಸ್ಥಳದ ‘ಶುದ್ಧೀಕರಣ’: ಬಿಜೆಪಿ-RSS, ಸಂಘ ಪರಿವಾರದ ವಿಷಪೂರಿತ ಮನಸ್ಥಿತಿ ಮಾಜಿ ಸಿಎಂ ಸಿದ್ದರಾಮಯ್ಯ

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಮಾವೇಶದಲ್ಲಿ ಪಾಲ್ಗೊಂಡ ಬಳಿಕ, ಬಲಪಂಥೀಯ ಸಂಘಟನೆಯೊಂದು ಆ ಮೈದಾನದಲ್ಲಿ 'ಶುದ್ಧೀಕರಣ' ಕೈಗೊಂಡಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ರೋಶ...

ಸೋನಿಯಾ ಗಾಂಧಿ ಆತ್ಮಕಥೆ ವಿವಾದ | ಮೋದಿ, ಆರ್‌ಎಸ್‌ಎಸ್, ಚೀನಾ ನುಸುಳುವಿಕೆ ಕುರಿತ ಭಾಗಗಳನ್ನು ತೆಗೆದುಹಾಕಲು ಪೆಂಗ್ವಿನ್ ಇಂಡಿಯಾ ಕೋರಿತ್ತು : ಕಾಂಗ್ರೆಸ್ ಆರೋಪ

ಪ್ರಧಾನಿ ನರೇಂದ್ರ ಮೋದಿ, ಆರ್‌ಎಸ್‌ಎಸ್ ಮತ್ತು ಅವರ ಅಧಿಕಾರಾವಧಿಯಲ್ಲಿ ನಡೆದ ಭಾರತೀಯ ಭೂಪ್ರದೇಶದ ಮೇಲಿನ ಚೀನಾದ ಆಕ್ರಮಣದ ನಿರ್ವಹಣೆಗೆ ಸಂಬಂಧಿಸಿದ ಭಾಗಗಳನ್ನು ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ "ಬೆಲಾಂಗಿಂಗ್: ಎ ಜರ್ನಿ...

ಪಶ್ಚಿಮ ಬಂಗಾಳ| ದುರ್ಗಾಪೂಜೆ ಸಂದರ್ಭದಲ್ಲಿ ಮಾಂಸ ಮಾರಾಟ ನಿಷೇಧ ಆದೇಶ ಹೊರಡಿಸಿದ ವಿಎಚ್‌ಪಿ; ಬಲಪಂಥೀಯ ಸಂಘನೆಯ ಅಧಿಕಾರ ಪ್ರಶ್ನಿಸಿದ ವಿಪಕ್ಷಗಳು

ಪಶ್ಚಿಮ ಬಂಗಾಳದಲ್ಲಿ ದುರ್ಗಾಪೂಜೆ ಆಚರಣೆಗೆ ಸಂಬಂಧಿಸಿದಂತೆ ಬಲಪಂಥೀಯ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಹೊರಡಿಸಿರುವ ಮಾರ್ಗಸೂಚಿಯು ರಾಜಕೀಯ ಚರ್ಚೆಗೆ ಗ್ರಾಸವಾಗಿದೆ. ಪೂಜಾ ಮಂಟಪಗಳ ಸುತ್ತಮುತ್ತ ಸಸ್ಯಾಹಾರಿ ಅಲ್ಲದ ಮಾಂಸ ಮತ್ತು ಮೀನು...

ನ್ಯೂಯಾರ್ಕ್‌ನಲ್ಲಿ ಮೋಹನ್ ಭಾಗವತ್ ಕಾರ್ಯಕ್ರಮ: RSS ಮತ್ತು ಸಂಸ್ಥೆಯ ನಂಟಿನ ರಹಸ್ಯ ಬಯಲು

ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘಚಾಲಕ ಮೋಹನ್ ಭಾಗವತ್ ಅವರು ಶನಿವಾರ ನ್ಯೂಯಾರ್ಕ್‌ನ ಪ್ರಸಿದ್ಧ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ಆಯೋಜಿಸಲಾಗಿರುವ ‘ಯೂನಿವರ್ಸಲ್ ಒನ್‌ನೆಸ್ ಸೆಲೆಬ್ರೇಷನ್ಸ್’ ಎಂಬ ಬೃಹತ್ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ವರದಿಗಳ ಪ್ರಕಾರ,...

ಮೋಹನ್ ಭಾಗವತ್ ನ್ಯೂಯಾರ್ಕ್ ಕಾರ್ಯಕ್ರಮಕ್ಕೆ ವಿರೋಧ : ಅಮೆರಿಕದ 61 ಸಂಘಟನೆಗಳಿಂದ ಪ್ರತಿಭಟನೆ

ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಭಾಷಣ ಮಾಡಲಿರುವ, ಶನಿವಾರ (ಆ.29) ನ್ಯೂಯಾರ್ಕ್‌ನ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ಆಯೋಜಿಸಲಾಗಿರುವ 'ಯೂನಿವರ್ಸಲ್ ಒನ್ನೆಸ್ ಸೆಲೆಬ್ರೇಷನ್ಸ್' ಕಾರ್ಯಕ್ರಮಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ. ನ್ಯೂಯಾರ್ಕ್ ಮೇಯರ್ ಝೊಹ್ರಾನ್ ಮಮ್ದಾನಿ ಅವರು...

ಶಿವಮೊಗ್ಗ| ಈದ್-ಎ-ಮಿಲಾದ್ ರ್‍ಯಾಲಿಯಲ್ಲಿ ಪ್ಯಾಲೆಸ್ತೀನ್ ಧ್ವಜ ಪ್ರದರ್ಶನ: ಮೂವರ ವಿರುದ್ಧ ಪ್ರಕರಣ ದಾಖಲು

ಶಿವಮೊಗ್ಗದ ಆರ್‌ಎಂಎಲ್ ನಗರದಲ್ಲಿ ಈದ್-ಎ-ಮಿಲಾದ್ ಆಚರಣೆಗಾಗಿ ನಿರ್ಮಿಸಲಾಗಿದ್ದ ಕಟೌಟ್ ಒಂದರ ಮೇಲೆ ಫೆಲೆಸ್ತೀನ್ ಧ್ವಜವನ್ನು ಪ್ರದರ್ಶಿಸಿದ ಆರೋಪದ ಮೇಲೆ ಪೊಲೀಸರು ಮೂವರು ಮುಸ್ಲಿಂ ಯುವಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಆರೋಪಿಗಳನ್ನು ನಿಹಾಲ್ ಉರುಫ್ ಬೆಕ್ಕು,...

ಕೋಲ್ಕತ್ತಾದಲ್ಲಿ ಮಮತಾ ಬ್ಯಾನರ್ಜಿ ವಿರುದ್ಧ FIR: ಹೈಕೋರ್ಟ್ ಆದೇಶ ಉಲ್ಲಂಘನೆ ಆರೋಪ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮಮತಾ ಬ್ಯಾನರ್ಜಿ ವಿರುದ್ಧ ಕೋಲ್ಕತ್ತಾ ಪೊಲೀಸರು ಸ್ವಯಂಪ್ರೇರಿತ (Suo Motu) ದೂರು ದಾಖಲಿಸಿಕೊಂಡಿದ್ದಾರೆ. ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಟಿಎಂಸಿ ವಿದ್ಯಾರ್ಥಿ...

ಈದ್ ಮಿಲಾದ್ ಸಂದರ್ಭದಲ್ಲಿ ಸಾರ್ವಜನಿಕ ಶಾಂತಿಗೆ ಭಂಗ ತರಲು ಯತ್ನ; ಭಜರಂಗದಳ ಕಾರ್ಯಕರ್ತನ ವಿರುದ್ಧ ಪ್ರಕರಣ ದಾಖಲು

ಈದ್-ಎ-ಮಿಲಾದ್ ಪೋಸ್ಟರ್‌ಗಳ ವಿಚಾರವಾಗಿ ಗುಂಪುಗಳ ನಡುವೆ ಶತ್ರುತ್ವ ಸೃಷ್ಟಿಸಲು ಮತ್ತು ಸಾರ್ವಜನಿಕ ಶಾಂತಿಗೆ ಭಂಗ ತರಲು ಯತ್ನಿಸಿದ ಆರೋಪದ ಮೇಲೆ ಕಲಬುರಗಿಯಲ್ಲಿ ಭಜರಂಗದಳದ ಕಾರ್ಯಕರ್ತನೊಬ್ಬನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ನಗರದಲ್ಲಿ ಈದ್-ಎ-ಮಿಲಾದ್ ಆಚರಣೆಯ ಭಾಗವಾಗಿ...

ವೆನೆಜುವೆಲಾ ತೈಲ ನಿಕ್ಷೇಪಗಳ ಮೇಲೆ ಅಮೆರಿಕ ನಿಯಂತ್ರಣ: ಜಾಗತಿಕ ರಾಜಕಾರಣದಲ್ಲಿ ತಲ್ಲಣ!

ವಾಷಿಂಗ್ಟನ್/ಕಾರಕಾಸ್: ವಿಶ್ವದಲ್ಲೇ ಅತಿ ಹೆಚ್ಚು ಕಚ್ಚಾ ತೈಲ ನಿಕ್ಷೇಪ ಹೊಂದಿರುವ ವೆನೆಜುವೆಲಾ ದೇಶದ 65 ಬಿಲಿಯನ್ ಬ್ಯಾರೆಲ್‌ಗಿಂತ ಹೆಚ್ಚು ಸಾಬೀತಾದ ತೈಲ ನಿಕ್ಷೇಪಗಳ ಮೇಲೆ ಬಹುಮತ ನಿಯಂತ್ರಣ ಸಾಧಿಸುವ ಒಪ್ಪಂದವನ್ನು ಅಮೆರಿಕ ಮಾಡಿಕೊಂಡಿದೆ....

ನೈತಿಕ ಹೊಣೆ ಹೊತ್ತು ನಾಗೇಂದ್ರ ರಾಜೀನಾಮೆ ನೀಡಿದ್ದಾರೆ; ಇದು ಬಿಜೆಪಿಯ ಗೆಲುವಲ್ಲ: ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್

ಸಚಿವರಾಗಿದ್ದ ಬಿ. ನಾಗೇಂದ್ರ ಅವರು ಸಾರ್ವಜನಿಕ ಜೀವನದಲ್ಲಿ ನೈತಿಕ ಹೊಣೆಗಾರಿಕೆ ಹೊತ್ತು ರಾಜೀನಾಮೆ ನೀಡಿದ್ದಾರೆ. ಇದು ಬಿಜೆಪಿಯ ಗೆಲುವೂ ಅಲ್ಲ, ವಿಪಕ್ಷ ನಾಯಕರ ಹೋರಾಟದ ಗೆಲುವೂ ಅಲ್ಲ. ಇದೊಂದು ದಲಿತ ಸಮುದಾಯ ನಾಯಕರ...