HomeUncategorizedಇಸ್ರೇಲ್‌ ಯುದ್ಧ ಭೀಕರತೆ: ಮಕ್ಕಳ ಸ್ಮಶಾನವಾದ ಗಾಝಾ!

ಇಸ್ರೇಲ್‌ ಯುದ್ಧ ಭೀಕರತೆ: ಮಕ್ಕಳ ಸ್ಮಶಾನವಾದ ಗಾಝಾ!

- Advertisement -
- Advertisement -

ಇಸ್ರೇಲ್ ಬಾಂಬ್‌ ದಾಳಿಗೆ ಗಾಝಾದಲ್ಲಿ 24,00ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ. ಇದರಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರ ಮತ್ತು ಮಕ್ಕಳ ಹತ್ಯಾಕಾಂಡವನ್ನು ಇಸ್ರೇಲ್‌ ನಡೆಸಿದೆ. ಪದೇ ಪದೇ ಶಾಲೆಗಳನ್ನು, ನವಜಾತ ಶಿಶುಗಳ ಆರೈಕೆ ಕೇಂದ್ರಗಳನ್ನು ಕೇಂದ್ರೀಕರಿಸಿ ಇಸ್ರೇಲ್‌ ದಾಳಿ ನಡೆಸಿದ್ದು, ಈವರೆಗೆ 10,000ಕ್ಕೂ ಹೆಚ್ಚು ಪ್ಯಾಲೇಸ್ತೀನ್‌ನ ಅಮಾಯಕ ಮಕ್ಕಳು ಇಸ್ರೇಲ್‌ ದಾಳಿಯಿಂದ ಕೊಲ್ಲಲ್ಪಟ್ಟಿದ್ದಾರೆ.

ಯುರೋ-ಮೆಡ್ ಮಾನವ ಹಕ್ಕುಗಳ ಮಾನಿಟರ್ ಬಿಡುಗಡೆ ಮಾಡಿದ್ದ ವರದಿಯ ಪ್ರಕಾರ, ಇಸ್ರೇಲ್ 10,000 ಕ್ಕೂ ಹೆಚ್ಚು ಶಿಶುಗಳು ಮತ್ತು ಮಕ್ಕಳನ್ನು ಕೊಂದಿದೆ. ನೂರಾರು ಮಕ್ಕಳು ಪಾಳುಬಿದ್ದ ಕಟ್ಟಡಗಳ ಅವಶೇಷಗಳಡಿಯಲ್ಲಿ ಉಳಿದುಕೊಂಡಿರುವುದರಿಂದ ಬದುಕುಳಿಯುವ ಸಾಧ್ಯತೆ ಕಡಿಮೆ ಇದೆ. ಸುಮಾರು 7,00,000 ಮಕ್ಕಳು ಇಸ್ರೇಲ್‌ನ ಗಾಝಾ ನರಮೇಧದಿಂದ ಪ್ರಭಾವಿತರಾಗಿದ್ದಾರೆ, ಇದರಲ್ಲಿ ಕೊಲ್ಲಲ್ಪಟ್ಟವರು, ಗಾಯಗೊಂಡವರು ಮತ್ತು ಆಂತರಿಕವಾಗಿ ಸ್ಥಳಾಂತರಗೊಂಡವರು ಸೇರಿದ್ದಾರೆ.

ಇಸ್ರೇಲ್‌ ದಾಳಿಯಲ್ಲಿ 18,000 ಪ್ಯಾಲೆಸ್ತೀನ್ ಮಕ್ಕಳು ಗಾಯಗೊಂಡಿದ್ದಾರೆ. ಇದರಲ್ಲಿ ಅನೇಕ ಮಕ್ಕಳು ಗಂಭೀರವಾಗಿದ್ದಾರೆ. ಡಜನ್‌ಗಟ್ಟಲೆ ಮಕ್ಕಳು ಅಂಗಾಂಗಳನ್ನು ಕಳೆದುಕೊಂಡಿದ್ದಾರೆ ಮತ್ತು ನೂರಾರು ಮ್ಕಕಳು ತಮ್ಮ ದೇಹದ ವಿವಿಧ ಭಾಗಗಳಿಗೆ ತೀವ್ರ ಸುಟ್ಟಗಾಯಗಳನ್ನು ಅನುಭವಿಸಿದ್ದಾರೆ. ಸ್ಥಳಾಂತರಗೊಂಡ ಮಕ್ಕಳಲ್ಲಿ 50 ಪ್ರತಿಶತದಷ್ಟು ಮಕ್ಕಳು ನಿರ್ಜಲೀಕರಣ, ಅಪೌಷ್ಟಿಕತೆ, ಉಸಿರಾಟ ಮತ್ತು ಚರ್ಮ ರೋಗಗಳು, ತೀವ್ರ ಶೀತದಿಂದ ಅನಾರೋಗ್ಯಕ್ಕೆ ತುತ್ತಾಗಿದ್ದಾರೆ. ನವಜಾತ ಶಿಶುಗಳಿಗೆ ಲಸಿಕೆ ಸಿಗದೆ ಅಪಾಯದಲ್ಲಿದೆ.

ಗಾಝಾ ಪಟ್ಟಿಯಲ್ಲಿರುವ ಕನಿಷ್ಠ 25,000 ಮಕ್ಕಳು ಒಬ್ಬ ಅಥವಾ ಇಬ್ಬರ ಪೋಷಕರನ್ನು ಕಳೆದುಕೊಂಡಿದ್ದಾರೆ. ಸಾವಿರಾರು ಮಕ್ಕಳು ಭವಿಷ್ಯವನ್ನು ಕಳೆದುಕೊಂಡಿದ್ದಾರೆ. ಗಾಝಾ ಪಟ್ಟಿಯಲ್ಲಿರುವ 217 ಶಾಲೆಗಳು ಇಸ್ರೇಲ್‌ ದಾಳಿಯ ಸಮಯದಲ್ಲಿ ಹಾನಿಗೊಳಗಾಗಿವೆ.

ಸೇವ್ ದಿ ಚಿಲ್ಡ್ರನ್ ಡೇಟಾ ಪ್ರಕಾರ, ಗಾಝಾದಲ್ಲಿ ಪ್ರತಿ 10 ನಿಮಿಷಕ್ಕೆ ಒಂದು ಮಗುವನ್ನು ಕೊಲ್ಲಲಾಗುತ್ತಿದೆ. ಮಧ್ಯಪ್ರಾಚ್ಯ ಮತ್ತು ಉತ್ತರ ಆಫ್ರಿಕಾದ ಯುನಿಸೆಫ್ ಪ್ರಾದೇಶಿಕ ನಿರ್ದೇಶಕ ಅಡೆಲೆ ಖೋಡ್ರ್ ಶನಿವಾರ ಹೇಳಿಕೆಯೊಂದರಲ್ಲಿ, ಗಾಝಾವು ಮಕ್ಕಳಿಗೆ ಪ್ರಪಂಚದಲ್ಲೇ ಅತ್ಯಂತ ಅಪಾಯಕಾರಿ ಸ್ಥಳವಾಗಿದೆ. ವಿಶ್ವದೆಲ್ಲೆಡೆ ಮಕ್ಕಳು ಆಟವಾಡುತ್ತಿರುವಾಗ ಮತ್ತು ಶಾಲೆಗೆ ಹೋಗುತ್ತಿರುವಾಗ ಗಾಝಾ ಮಕ್ಕಳ ಅವಶೇಷಗಳ ರಾಶಿಯಾಗಿ ಮಾರ್ಪಟ್ಟಿದೆ ಎಂದು ಹೇಳಿದ್ದಾರೆ.

ಅ.7ರಂದು ಯುದ್ಧ ಪ್ರಾರಂಭವಾದಾಗಿನಿಂದ ಸುಮಾರು ಒಂದು ಮಿಲಿಯನ್ ಮಕ್ಕಳನ್ನು ಈಗ ಬಲವಂತವಾಗಿ ಸ್ಥಳಾಂತರಿಸಲಾಗಿದೆ ಎಂದು UN ಮಕ್ಕಳ ಏಜೆನ್ಸಿಯ ಹೇಳಿದೆ. ನೀರು, ಆಹಾರ, ಅಥವಾ ರಕ್ಷಣೆಯಿಲ್ಲದೆ, ಉಸಿರಾಟದ ಸೋಂಕುಗಳು ಮತ್ತು ನೀರಿನಿಂದ ಹರಡುವ ರೋಗಗಳ ಅಪಾಯಗಳು ಹೆಚ್ಚಿದ್ದು, ಗಾಝಾ ಮಕ್ಕಳ ಸ್ಮಶಾನವಾಗಿದೆ ಎಂದು ಹೇಳಿದೆ.

ಪ್ಯಾಲೆಸ್ತೀನಿಯನ್‌ ನರಮೇಧವನ್ನು ಸಂಭ್ರಮಿಸಿ ಹಾಡು ಹಾಡಿದ್ದ ಇಸ್ರೇಲ್ ಮಕ್ಕಳು:

ನವೆಂಬರ್‌ನಲ್ಲಿ ಇಸ್ರೇಲ್‌ನ ಸಾರ್ವಜನಿಕ ಬ್ರಾಡ್‌ಕಾಸ್ಟರ್ ಕಾನ್, ತನ್ನ ಅಧಿಕೃತ ಎಕ್ಸ್‌ಲ್ಲಿನ ಪೋಸ್ಟ್‌ನಲ್ಲಿ  ಇಸ್ರೇಲ್‌ ಮಕ್ಕಳು ಗಾಝಾದಲ್ಲಿ ಪ್ಯಾಲೆಸ್ತೀನಿಯನ್ನರು ನರಮೇಧವನ್ನು ಆಚರಿಸುವ ಹಾಡನ್ನು ಹಾಡುವ ವೀಡಿಯೊವನ್ನು ಅಪ್‌ಲೋಡ್ ಮಾಡಿದೆ. ಟೀಕೆಗೆ ಒಳಗಾದ ಬಳಿಕ ನಂತರ ವೀಡಿಯೊ ಕ್ಲಿಪ್‌ನ್ನು ಅಳಿಸಿದ್ದಾರೆ. ಸಾಮಾಜಿಕ ಮಾಧ್ಯಮದಿಂದ ವೀಡಿಯೊವನ್ನು ಅಳಿಸಿದ ನಂತರವೂ, ಹಾಡು ಚರ್ಚೆ ಮತ್ತು ವಿವಾದದ ವಿಷಯವಾಗಿ ಉಳಿದಿದೆ. ಒಂದು ವರ್ಷದೊಳಗೆ ಇಡೀ ಗಾಝಾದ ಜನರನ್ನು ನಿರ್ಮೂಲನೆ ಮಾಡುವ ಬಗ್ಗೆ ಮಕ್ಕಳು ಸಂತೋಷದಿಂದ ಹಾಡುವುದನ್ನು ನೋಡಿ ಪ್ರಪಂಚದಾದ್ಯಂತದ ಅನೇಕರು ಆಘಾತಕ್ಕೊಳಗಾಗಿದ್ದರು.

ರಾಫಾದಲ್ಲಿ ನಾಗರಿಕರ ಪರಿಸ್ಥಿತಿಗಳು ಗಂಭೀರ:

ದಕ್ಷಿಣ ಗಾಝಾ ಪಟ್ಟಿಯಲ್ಲಿರುವ ರಾಫಾದಲ್ಲಿ ನಾಗರಿಕರ ಪರಿಸ್ಥಿತಿಗಳು ಅತ್ಯಂತ ಭೀಕರವಾಗಿವೆ ಎಂದು ಇಂಟರ್ನ್ಯಾಷನಲ್ ಕಮಿಟಿ ಆಫ್ ದಿ ರೆಡ್ ಕ್ರಾಸ್ (ICRC) ಹೇಳಿಕೊಂಡಿದೆ. ರಾಫಾ ಈಜಿಪ್ಟ್‌ನ ಗಡಿಯ ಸಮೀಪದಲ್ಲಿದೆ ಮತ್ತು ಲಕ್ಷಾಂತರ ಮಂದಿ ಅಲ್ಲಿ ಆಶ್ರಯವನ್ನು ಪಡದುಕೊಂಡಿದ್ದಾರೆ.

ರಾಫಾದಲ್ಲಿ ನಿರಾಶ್ರಿತ ಜನರ ಅಗತ್ಯಗಳನ್ನು ಪೂರೈಸಲು ನಮ್ಮಲ್ಲಿ ಸಾಕಷ್ಟು ಪರಿಹಾರ ಸಾಮಗ್ರಿಗಳಿಲ್ಲ.ಸಾಕಷ್ಟು ನೀರು ಇಲ್ಲ, ಸಾಕಷ್ಟು ನೈರ್ಮಲ್ಯವಿಲ್ಲ, ಮತ್ತು ಜನರಿಗೆ ಆಹಾರ, ವೈದ್ಯಕೀಯ ಹಾರೈಕೆ ಸಿಗುತ್ತಿಲ್ಲ ಎಂದು ICRC ಕ್ಷಿಪ್ರ ನಿಯೋಜನೆ ಸಂಯೋಜಕ ಸ್ಟೀಫನ್ ರಯಾನ್ ತಿಳಿಸಿದ್ದಾರೆ.

ವಿಶ್ವ ಆರೋಗ್ಯ ಸಂಸ್ಥೆಯ ಮುಖ್ಯಸ್ಥ ಟೆಡ್ರೊಸ್ ಅಧಾನೊಮ್ ಘೆಬ್ರೆಯೆಸಸ್, ಗಾಝಾದ ಜನಸಂಖ್ಯೆಯನ್ನು ಎದುರಿಸುತ್ತಿರುವ ಗಂಭೀರ ಅಪಾಯವನ್ನು ನಿವಾರಿಸಲು ಮತ್ತು ಗಾಯಗಳು, ತೀವ್ರವಾದ ಹಸಿವಿನಿಂದ ಬಳಲುತ್ತಿರುವ ಜನರಿಗೆ ತುರ್ತು ಸಹಾಯ ಮಾಡುವಂತೆ ಅಂತರಾಷ್ಟ್ರೀಯ ಸಮುದಾಯಕ್ಕೆ ಕರೆ ನೀಡಿದ್ದಾರೆ.

ಆಸ್ಪತ್ರೆಗಳಿಗೆ ಔಷಧಗಳು, ವೈದ್ಯಕೀಯ ಸರಬರಾಜುಗಳು ಮತ್ತು ಇಂಧನವನ್ನು ಪೂರೈಸುವ ಸಾಮರ್ಥ್ಯವು ಸೀಮಿತವಾಗಿದೆ. ಇತ್ತೀಚಿನ WHO ಮೌಲ್ಯಮಾಪನಗಳ ಪ್ರಕಾರ ಗಾಝಾದಲ್ಲಿ 13 ಭಾಗಶಃ ಕಾರ್ಯನಿರ್ವಹಿಸುವ ಆಸ್ಪತ್ರೆಗಳನ್ನು ಹೊಂದಿದೆ ಮತ್ತು 21 ಆಸ್ಪತ್ರೆಗಳು ಕಾರ್ಯನಿರ್ವಹಿಸುತ್ತಿಲ್ಲ ಎಂದು ಹೇಳಿದೆ. ನಾಗರಿಕರನ್ನು ಮತ್ತಷ್ಟು ಹಿಂಸಾಚಾರದಿಂದ ರಕ್ಷಿಸಲು ಮತ್ತು ಮತ್ತು ಶಾಂತಿ ಸ್ಥಾಪನೆಗೆ ಕದನ ವಿರಾಮ ಒಂದೇ ದಾರಿಯಾಗಿದೆ ಎಂದು ಟೆಡ್ರೊಸ್ ಹೇಳಿದರು.

ಕಳೆದ 24 ಗಂಟೆಗಳ ಅವಧಿಯಲ್ಲಿ ಗಾಝಾದ ಮೇಲೆ ಇಸ್ರೇಲ್‌ ನಡೆಸಿದ ದಾಳಿಯಲ್ಲಿ ಸುಮಾರು 210 ಪ್ಯಾಲೆಸ್ತೀನಿಯನ್ನರು ಸಾವನ್ನಪ್ಪಿದ್ದಾರೆ ಮತ್ತು 325 ಮಂದಿ ಗಾಯಗೊಂಡಿದ್ದಾರೆ ಎಂದು ಪ್ಯಾಲೇಸ್ತೀನಿಯನ್ ಆರೋಗ್ಯ ಸಚಿವಾಲಯ ತಿಳಿಸಿದೆ. ಇಸ್ರೇಲ್‌ ಮಿಲಿಟರಿ ಕ್ಲಿಯರೆನ್ಸ್ ಆದೇಶಗಳ ನಂತರ ಕನಿಷ್ಠ 1,00,000 ಸ್ಥಳಾಂತರಗೊಂಡ ಜನರು ರಾಫಾದಲ್ಲಿ ಸೇರಿದ್ದಾರೆ.

ಇದನ್ನು ಓದಿ: ಲೋಕಸಭೆ ಚುನಾವಣೆಗೆ ಮುನ್ನ ಇವಿಎಂ ಸರಿಪಡಿಸದಿದ್ದರೆ ಬಿಜೆಪಿ 400 ಸ್ಥಾನಗಳನ್ನು ಗೆಲ್ಲಬಹುದು: ಸ್ಯಾಮ್ ಪಿತ್ರೋಡಾ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

NALSAR ವಿವಾದ : ಕಾನೂನು ವಿದ್ಯಾರ್ಥಿಗಳಲ್ಲಿ ಕ್ಷಮೆಯಾಚಿಸಿದ ಬಿಸಿಐ ಅಧ್ಯಕ್ಷ ಮನನ್ ಕುಮಾರ್ ಮಿಶ್ರಾ

ನಲ್ಸಾರ್ (NALSAR) ಕಾನೂನು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ವಿರುದ್ಧ ಹೊರಡಿಸಿದ್ದ ನಿರ್ದೇಶನಗಳ ಕುರಿತು ತೀವ್ರ ಟೀಕೆಗಳು ವ್ಯಕ್ತವಾದ ಹಿನ್ನೆಲೆಯಲ್ಲಿ, ಬಾರ್ ಕೌನ್ಸಿಲ್ ಆಫ್ ಇಂಡಿಯಾ (ಬಿಸಿಥ) ಅಧ್ಯಕ್ಷ ಮನನ್ ಕುಮಾರ್ ಮಿಶ್ರಾ ಕ್ಷಮೆಯಾಚಿಸಿದ್ದಾರೆ. ಹೈದರಾಬಾದ್‌ನ ನಲ್ಸಾರ್...

ವಿಮಲ್ ‘ಏಲೈಚಿ’ ಜಾಹೀರಾತು ವಿವಾದ: ಶಾರುಖ್ ಖಾನ್, ಅಜಯ್ ದೇವಗನ್ ಮತ್ತು ಟೈಗರ್ ಶ್ರಾಫ್‌ಗೆ ಮಹಾರಾಷ್ಟ್ರ ಎಫ್‌ಡಿಎ ಶೋಕಾಸ್ ನೋಟಿಸ್

ಬಾಲಿವುಡ್‌ನ ಖ್ಯಾತ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರುಗಳು ಇದೀಗ ಕಾನೂನು ಸಂಕಷ್ಟಕ್ಕೆ ಸಿಲುಕಿದ್ದಾರೆ. 'ವಿಮಲ್ ಏಲೈಚಿ' ಜಾಹೀರಾತಿನಲ್ಲಿ ಕಾಣಿಸಿಕೊಂಡಿದ್ದಕ್ಕಾಗಿ ಮಹಾರಾಷ್ಟ್ರದ ಆಹಾರ ಮತ್ತು ಔಷಧ ಆಡಳಿತ...

ಹನೂರು ಶೂಟೌಟ್ ಪ್ರಕರಣ: ಅರಣ್ಯ ಇಲಾಖೆ ಸಿಬ್ಬಂದಿ ವಿರುದ್ಧ ಎಫ್‌ಐಆರ್‌ ದಾಖಲು

ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಶಾಗ್ಯ ಗ್ರಾಮ ಪಂಚಾಯತ್ ವಾಪ್ತಿಯ ಅರಣ್ಯ ಪ್ರದೇಶದಲ್ಲಿ ಮೂವರು ಗುಂಡೇಟಿಗೆ ಬಲಿಯಾದ ಪ್ರಕರಣ ಸಂಬಂಧ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಎಫ್​​​​ಐಆರ್ ದಾಖಲಾಗಿದೆ. ಅರಣ್ಯ ಸಿಬ್ಬಂದಿಯ ಗುಂಡೇಟಿಗೆ ಹನೂರು...

ಮಮತಾ ಬ್ಯಾನರ್ಜಿ ಆಪ್ತ, ಮಾಜಿ ಡೆಪ್ಯೂಟಿ ಸ್ಪೀಕರ್‌ ಆಶಿಶ್ ಬ್ಯಾನರ್ಜಿ TMC ಕಚೇರಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಪಶ್ಚಿಮ ಬಂಗಾಳ ವಿಧಾನಸಭೆಯ ಮಾಜಿ ಉಪ ಸಭಾಧ್ಯಕ್ಷ ಹಾಗೂ ತೃಣಮೂಲ ಕಾಂಗ್ರೆಸ್‌ನ (ಟಿಎಂಸಿ) ಹಿರಿಯ ಮುಖಂಡ ಆಶಿಶ್ ಬ್ಯಾನರ್ಜಿ ಅವರು, ಭಾನುವಾರ (ಆ.16) ಬೆಳಿಗ್ಗೆ ಬೀರ್‌ಭೂಮ್ ಜಿಲ್ಲೆಯ ರಾಂಪುರಹತ್‌ನ ಹಟ್ಟಾಲಾ ಪಾರಾದಲ್ಲಿರುವ ಅವರ...

ದೇಶದ ಜನರಿಗೆ ‘SIR, EVM, ECI’ಗಳಿಂದ ಸ್ವಾತಂತ್ರ್ಯ ಬೇಕಿದೆ: ಎದ್ದೇಳು ಕರ್ನಾಟಕ

ಬೆಂಗಳೂರು: ಭಾರತವು ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿರುವಾಗಲೇ, ದೇಶದ ಪ್ರಜೆಗಳು ತಮ್ಮ ಅತಿ ಅಮೂಲ್ಯವಾದ ‘ಮತದಾನದ ಹಕ್ಕನ್ನು’ ಕಳೆದುಕೊಳ್ಳುತ್ತಿದ್ದಾರೆ. ಪ್ರಜಾಪ್ರಭುತ್ವದ ಉಳಿವಿಗಾಗಿ ಈ ದೇಶದ ಜನರಿಗೆ ಈಗ ‘SIR (ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆ),...

ಹನೂರು | ಅರಣ್ಯ ಸಿಬ್ಬಂದಿ ಗುಂಡೇಟಿಗೆ ಮೂವರು ಬಲಿ : ಇಲಾಖೆಯಿಂದ ತಪ್ಪಾಗಿದೆ ಎಂದ ಸಚಿವ ಪುಟ್ಟರಂಗಶೆಟ್ಟಿ

ಅರಣ್ಯದಲ್ಲಿ ಬೇಟೆಗೆ ಬಂದಿದ್ದರೆನ್ನಲಾದ ನಾಲ್ವರು ಮತ್ತು ಅರಣ್ಯ ಸಿಬ್ಬಂದಿ ನಡುವೆ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದು, ಓರ್ವ ಪರಾರಿಯಾದ ಘಟನೆ ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮದಲ್ಲಿ ಶನಿವಾರ...

ಪ್ರಧಾನಿ ಮೋದಿ ಧರಿಸಿದ್ದ ತ್ರಿವರ್ಣದ ‘ಪಾಕೆಟ್ ಸ್ಕ್ವೇರ್’ ಉಲ್ಟಾ, ಕಾಂಗ್ರೆಸ್ ವ್ಯಂಗ್ಯ

ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ಧರಿಸಿದ್ದ ತ್ರಿವರ್ಣದ ‘ಪಾಕೆಟ್ ಸ್ಕ್ವೇರ್’ ಬಣ್ಣಗಳ ಸರಣಿಯನ್ನು ಬೆಟ್ಟು ಮಾಡಿರುವ ಕಾಂಗ್ರೆಸ್ ಪಕ್ಷ, ಪ್ರಧಾನಿಯವರು ಭಾರತದ ಬದಲು ಐರ್ಲೆಂಡ್‌ನ ಸ್ವಾತಂತ್ರ್ಯ...

“ಹತಾಶೆಯ ಸ್ಪಷ್ಟ ಸಂಕೇತ” : ಪ್ರಧಾನಿ ಮೋದಿಯ ‘ದಿಮಾಗಿ ನಕ್ಸಲ್ಸ್’ ಹೇಳಿಕೆಗೆ ಕಾಂಗ್ರೆಸ್ ತಿರುಗೇಟು

ಪ್ರಧಾನಿ ಮೋದಿಯ 'ದಿಮಾಗಿ ನಕ್ಸಲ್ಸ್' (ಮಾನಸಿಕ ನಕ್ಸಲರು) ಹೇಳಿಕೆಗೆ ಶನಿವಾರ (ಆ.15) ತಿರುಗೇಟು ನೀಡಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, ಇದು 'ಹತಾಶೆಯ ಸ್ಪಷ್ಟ ಸಂಕೇತ' ಎಂದು ತಿರುಗೇಟು ನೀಡಿದ್ದಾರೆ. ಮೋದಿಯವರು ಈ...

‘ನನ್ನ ಮತ ಉಳಿಸಿ ಎಂದು ಜನ ಬೇಡಿಕೊಳ್ಳುವಂತೆ ಮಾಡಬೇಡಿ’: ಇದು ನನ್ನ ವೈಯಕ್ತಿಕ ಸಮಸ್ಯೆ ಅಲ್ಲ, ಇಡೀ ದೇಶದ ಸಮಸ್ಯೆ: ಬಹುಭಾಷಾ ನಟ ಪ್ರಕಾಶ್ ರಾಜ್

ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ವಿಧಾನದ ಬಗ್ಗೆ ಬಹುಭಾಷಾ ನಟ ಪ್ರಕಾಶ್ ರಾಜ್ ಅವರು ಕರೆದಿದ್ದ ಮಹತ್ವದ ಪತ್ರಿಕಾಗೋಷ್ಠಿ ಆಗಸ್ಟ್ 14, 2026ರಂದು ಬೆಂಗಳೂರಿನ ಪ್ರೆಸ್ ಕ್ಲಬ್‌ನಲ್ಲಿ...

‘ನಲ್ಸಾರ್’ ವಿದ್ಯಾರ್ಥಿಗಳ ವೃತ್ತಿಜೀವನಕ್ಕೆ ಅಡ್ಡಬಂದ BCI ನಡೆಗೆ CJI ಗರಂ

ಹೈದರಾಬಾದ್‌ನ 'ನಲ್ಸಾರ್' (NALSAR) ಕಾನೂನು ವಿಶ್ವವಿದ್ಯಾಲಯದ ಪದವೀಧರರ ಸನ್ನದು (ಎನ್‌ರೋಲ್‌ಮೆಂಟ್) ನೋಂದಣಿಯನ್ನು ಅಮಾನತಿನಲ್ಲಿಡುವಂತೆ ಬಾರ್ ಕೌನ್ಸಿಲ್ ಆಫ್ ಇಂಡಿಯಾ (BCI) ನೀಡಿದ್ದ ವಿವಾದಾತ್ಮಕ ನಿರ್ದೇಶನದ ವಿರುದ್ಧ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್,...