HomeUncategorizedಇಸ್ರೇಲ್‌ ಯುದ್ಧ ಭೀಕರತೆ: ಮಕ್ಕಳ ಸ್ಮಶಾನವಾದ ಗಾಝಾ!

ಇಸ್ರೇಲ್‌ ಯುದ್ಧ ಭೀಕರತೆ: ಮಕ್ಕಳ ಸ್ಮಶಾನವಾದ ಗಾಝಾ!

- Advertisement -
- Advertisement -

ಇಸ್ರೇಲ್ ಬಾಂಬ್‌ ದಾಳಿಗೆ ಗಾಝಾದಲ್ಲಿ 24,00ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ. ಇದರಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರ ಮತ್ತು ಮಕ್ಕಳ ಹತ್ಯಾಕಾಂಡವನ್ನು ಇಸ್ರೇಲ್‌ ನಡೆಸಿದೆ. ಪದೇ ಪದೇ ಶಾಲೆಗಳನ್ನು, ನವಜಾತ ಶಿಶುಗಳ ಆರೈಕೆ ಕೇಂದ್ರಗಳನ್ನು ಕೇಂದ್ರೀಕರಿಸಿ ಇಸ್ರೇಲ್‌ ದಾಳಿ ನಡೆಸಿದ್ದು, ಈವರೆಗೆ 10,000ಕ್ಕೂ ಹೆಚ್ಚು ಪ್ಯಾಲೇಸ್ತೀನ್‌ನ ಅಮಾಯಕ ಮಕ್ಕಳು ಇಸ್ರೇಲ್‌ ದಾಳಿಯಿಂದ ಕೊಲ್ಲಲ್ಪಟ್ಟಿದ್ದಾರೆ.

ಯುರೋ-ಮೆಡ್ ಮಾನವ ಹಕ್ಕುಗಳ ಮಾನಿಟರ್ ಬಿಡುಗಡೆ ಮಾಡಿದ್ದ ವರದಿಯ ಪ್ರಕಾರ, ಇಸ್ರೇಲ್ 10,000 ಕ್ಕೂ ಹೆಚ್ಚು ಶಿಶುಗಳು ಮತ್ತು ಮಕ್ಕಳನ್ನು ಕೊಂದಿದೆ. ನೂರಾರು ಮಕ್ಕಳು ಪಾಳುಬಿದ್ದ ಕಟ್ಟಡಗಳ ಅವಶೇಷಗಳಡಿಯಲ್ಲಿ ಉಳಿದುಕೊಂಡಿರುವುದರಿಂದ ಬದುಕುಳಿಯುವ ಸಾಧ್ಯತೆ ಕಡಿಮೆ ಇದೆ. ಸುಮಾರು 7,00,000 ಮಕ್ಕಳು ಇಸ್ರೇಲ್‌ನ ಗಾಝಾ ನರಮೇಧದಿಂದ ಪ್ರಭಾವಿತರಾಗಿದ್ದಾರೆ, ಇದರಲ್ಲಿ ಕೊಲ್ಲಲ್ಪಟ್ಟವರು, ಗಾಯಗೊಂಡವರು ಮತ್ತು ಆಂತರಿಕವಾಗಿ ಸ್ಥಳಾಂತರಗೊಂಡವರು ಸೇರಿದ್ದಾರೆ.

ಇಸ್ರೇಲ್‌ ದಾಳಿಯಲ್ಲಿ 18,000 ಪ್ಯಾಲೆಸ್ತೀನ್ ಮಕ್ಕಳು ಗಾಯಗೊಂಡಿದ್ದಾರೆ. ಇದರಲ್ಲಿ ಅನೇಕ ಮಕ್ಕಳು ಗಂಭೀರವಾಗಿದ್ದಾರೆ. ಡಜನ್‌ಗಟ್ಟಲೆ ಮಕ್ಕಳು ಅಂಗಾಂಗಳನ್ನು ಕಳೆದುಕೊಂಡಿದ್ದಾರೆ ಮತ್ತು ನೂರಾರು ಮ್ಕಕಳು ತಮ್ಮ ದೇಹದ ವಿವಿಧ ಭಾಗಗಳಿಗೆ ತೀವ್ರ ಸುಟ್ಟಗಾಯಗಳನ್ನು ಅನುಭವಿಸಿದ್ದಾರೆ. ಸ್ಥಳಾಂತರಗೊಂಡ ಮಕ್ಕಳಲ್ಲಿ 50 ಪ್ರತಿಶತದಷ್ಟು ಮಕ್ಕಳು ನಿರ್ಜಲೀಕರಣ, ಅಪೌಷ್ಟಿಕತೆ, ಉಸಿರಾಟ ಮತ್ತು ಚರ್ಮ ರೋಗಗಳು, ತೀವ್ರ ಶೀತದಿಂದ ಅನಾರೋಗ್ಯಕ್ಕೆ ತುತ್ತಾಗಿದ್ದಾರೆ. ನವಜಾತ ಶಿಶುಗಳಿಗೆ ಲಸಿಕೆ ಸಿಗದೆ ಅಪಾಯದಲ್ಲಿದೆ.

ಗಾಝಾ ಪಟ್ಟಿಯಲ್ಲಿರುವ ಕನಿಷ್ಠ 25,000 ಮಕ್ಕಳು ಒಬ್ಬ ಅಥವಾ ಇಬ್ಬರ ಪೋಷಕರನ್ನು ಕಳೆದುಕೊಂಡಿದ್ದಾರೆ. ಸಾವಿರಾರು ಮಕ್ಕಳು ಭವಿಷ್ಯವನ್ನು ಕಳೆದುಕೊಂಡಿದ್ದಾರೆ. ಗಾಝಾ ಪಟ್ಟಿಯಲ್ಲಿರುವ 217 ಶಾಲೆಗಳು ಇಸ್ರೇಲ್‌ ದಾಳಿಯ ಸಮಯದಲ್ಲಿ ಹಾನಿಗೊಳಗಾಗಿವೆ.

ಸೇವ್ ದಿ ಚಿಲ್ಡ್ರನ್ ಡೇಟಾ ಪ್ರಕಾರ, ಗಾಝಾದಲ್ಲಿ ಪ್ರತಿ 10 ನಿಮಿಷಕ್ಕೆ ಒಂದು ಮಗುವನ್ನು ಕೊಲ್ಲಲಾಗುತ್ತಿದೆ. ಮಧ್ಯಪ್ರಾಚ್ಯ ಮತ್ತು ಉತ್ತರ ಆಫ್ರಿಕಾದ ಯುನಿಸೆಫ್ ಪ್ರಾದೇಶಿಕ ನಿರ್ದೇಶಕ ಅಡೆಲೆ ಖೋಡ್ರ್ ಶನಿವಾರ ಹೇಳಿಕೆಯೊಂದರಲ್ಲಿ, ಗಾಝಾವು ಮಕ್ಕಳಿಗೆ ಪ್ರಪಂಚದಲ್ಲೇ ಅತ್ಯಂತ ಅಪಾಯಕಾರಿ ಸ್ಥಳವಾಗಿದೆ. ವಿಶ್ವದೆಲ್ಲೆಡೆ ಮಕ್ಕಳು ಆಟವಾಡುತ್ತಿರುವಾಗ ಮತ್ತು ಶಾಲೆಗೆ ಹೋಗುತ್ತಿರುವಾಗ ಗಾಝಾ ಮಕ್ಕಳ ಅವಶೇಷಗಳ ರಾಶಿಯಾಗಿ ಮಾರ್ಪಟ್ಟಿದೆ ಎಂದು ಹೇಳಿದ್ದಾರೆ.

ಅ.7ರಂದು ಯುದ್ಧ ಪ್ರಾರಂಭವಾದಾಗಿನಿಂದ ಸುಮಾರು ಒಂದು ಮಿಲಿಯನ್ ಮಕ್ಕಳನ್ನು ಈಗ ಬಲವಂತವಾಗಿ ಸ್ಥಳಾಂತರಿಸಲಾಗಿದೆ ಎಂದು UN ಮಕ್ಕಳ ಏಜೆನ್ಸಿಯ ಹೇಳಿದೆ. ನೀರು, ಆಹಾರ, ಅಥವಾ ರಕ್ಷಣೆಯಿಲ್ಲದೆ, ಉಸಿರಾಟದ ಸೋಂಕುಗಳು ಮತ್ತು ನೀರಿನಿಂದ ಹರಡುವ ರೋಗಗಳ ಅಪಾಯಗಳು ಹೆಚ್ಚಿದ್ದು, ಗಾಝಾ ಮಕ್ಕಳ ಸ್ಮಶಾನವಾಗಿದೆ ಎಂದು ಹೇಳಿದೆ.

ಪ್ಯಾಲೆಸ್ತೀನಿಯನ್‌ ನರಮೇಧವನ್ನು ಸಂಭ್ರಮಿಸಿ ಹಾಡು ಹಾಡಿದ್ದ ಇಸ್ರೇಲ್ ಮಕ್ಕಳು:

ನವೆಂಬರ್‌ನಲ್ಲಿ ಇಸ್ರೇಲ್‌ನ ಸಾರ್ವಜನಿಕ ಬ್ರಾಡ್‌ಕಾಸ್ಟರ್ ಕಾನ್, ತನ್ನ ಅಧಿಕೃತ ಎಕ್ಸ್‌ಲ್ಲಿನ ಪೋಸ್ಟ್‌ನಲ್ಲಿ  ಇಸ್ರೇಲ್‌ ಮಕ್ಕಳು ಗಾಝಾದಲ್ಲಿ ಪ್ಯಾಲೆಸ್ತೀನಿಯನ್ನರು ನರಮೇಧವನ್ನು ಆಚರಿಸುವ ಹಾಡನ್ನು ಹಾಡುವ ವೀಡಿಯೊವನ್ನು ಅಪ್‌ಲೋಡ್ ಮಾಡಿದೆ. ಟೀಕೆಗೆ ಒಳಗಾದ ಬಳಿಕ ನಂತರ ವೀಡಿಯೊ ಕ್ಲಿಪ್‌ನ್ನು ಅಳಿಸಿದ್ದಾರೆ. ಸಾಮಾಜಿಕ ಮಾಧ್ಯಮದಿಂದ ವೀಡಿಯೊವನ್ನು ಅಳಿಸಿದ ನಂತರವೂ, ಹಾಡು ಚರ್ಚೆ ಮತ್ತು ವಿವಾದದ ವಿಷಯವಾಗಿ ಉಳಿದಿದೆ. ಒಂದು ವರ್ಷದೊಳಗೆ ಇಡೀ ಗಾಝಾದ ಜನರನ್ನು ನಿರ್ಮೂಲನೆ ಮಾಡುವ ಬಗ್ಗೆ ಮಕ್ಕಳು ಸಂತೋಷದಿಂದ ಹಾಡುವುದನ್ನು ನೋಡಿ ಪ್ರಪಂಚದಾದ್ಯಂತದ ಅನೇಕರು ಆಘಾತಕ್ಕೊಳಗಾಗಿದ್ದರು.

ರಾಫಾದಲ್ಲಿ ನಾಗರಿಕರ ಪರಿಸ್ಥಿತಿಗಳು ಗಂಭೀರ:

ದಕ್ಷಿಣ ಗಾಝಾ ಪಟ್ಟಿಯಲ್ಲಿರುವ ರಾಫಾದಲ್ಲಿ ನಾಗರಿಕರ ಪರಿಸ್ಥಿತಿಗಳು ಅತ್ಯಂತ ಭೀಕರವಾಗಿವೆ ಎಂದು ಇಂಟರ್ನ್ಯಾಷನಲ್ ಕಮಿಟಿ ಆಫ್ ದಿ ರೆಡ್ ಕ್ರಾಸ್ (ICRC) ಹೇಳಿಕೊಂಡಿದೆ. ರಾಫಾ ಈಜಿಪ್ಟ್‌ನ ಗಡಿಯ ಸಮೀಪದಲ್ಲಿದೆ ಮತ್ತು ಲಕ್ಷಾಂತರ ಮಂದಿ ಅಲ್ಲಿ ಆಶ್ರಯವನ್ನು ಪಡದುಕೊಂಡಿದ್ದಾರೆ.

ರಾಫಾದಲ್ಲಿ ನಿರಾಶ್ರಿತ ಜನರ ಅಗತ್ಯಗಳನ್ನು ಪೂರೈಸಲು ನಮ್ಮಲ್ಲಿ ಸಾಕಷ್ಟು ಪರಿಹಾರ ಸಾಮಗ್ರಿಗಳಿಲ್ಲ.ಸಾಕಷ್ಟು ನೀರು ಇಲ್ಲ, ಸಾಕಷ್ಟು ನೈರ್ಮಲ್ಯವಿಲ್ಲ, ಮತ್ತು ಜನರಿಗೆ ಆಹಾರ, ವೈದ್ಯಕೀಯ ಹಾರೈಕೆ ಸಿಗುತ್ತಿಲ್ಲ ಎಂದು ICRC ಕ್ಷಿಪ್ರ ನಿಯೋಜನೆ ಸಂಯೋಜಕ ಸ್ಟೀಫನ್ ರಯಾನ್ ತಿಳಿಸಿದ್ದಾರೆ.

ವಿಶ್ವ ಆರೋಗ್ಯ ಸಂಸ್ಥೆಯ ಮುಖ್ಯಸ್ಥ ಟೆಡ್ರೊಸ್ ಅಧಾನೊಮ್ ಘೆಬ್ರೆಯೆಸಸ್, ಗಾಝಾದ ಜನಸಂಖ್ಯೆಯನ್ನು ಎದುರಿಸುತ್ತಿರುವ ಗಂಭೀರ ಅಪಾಯವನ್ನು ನಿವಾರಿಸಲು ಮತ್ತು ಗಾಯಗಳು, ತೀವ್ರವಾದ ಹಸಿವಿನಿಂದ ಬಳಲುತ್ತಿರುವ ಜನರಿಗೆ ತುರ್ತು ಸಹಾಯ ಮಾಡುವಂತೆ ಅಂತರಾಷ್ಟ್ರೀಯ ಸಮುದಾಯಕ್ಕೆ ಕರೆ ನೀಡಿದ್ದಾರೆ.

ಆಸ್ಪತ್ರೆಗಳಿಗೆ ಔಷಧಗಳು, ವೈದ್ಯಕೀಯ ಸರಬರಾಜುಗಳು ಮತ್ತು ಇಂಧನವನ್ನು ಪೂರೈಸುವ ಸಾಮರ್ಥ್ಯವು ಸೀಮಿತವಾಗಿದೆ. ಇತ್ತೀಚಿನ WHO ಮೌಲ್ಯಮಾಪನಗಳ ಪ್ರಕಾರ ಗಾಝಾದಲ್ಲಿ 13 ಭಾಗಶಃ ಕಾರ್ಯನಿರ್ವಹಿಸುವ ಆಸ್ಪತ್ರೆಗಳನ್ನು ಹೊಂದಿದೆ ಮತ್ತು 21 ಆಸ್ಪತ್ರೆಗಳು ಕಾರ್ಯನಿರ್ವಹಿಸುತ್ತಿಲ್ಲ ಎಂದು ಹೇಳಿದೆ. ನಾಗರಿಕರನ್ನು ಮತ್ತಷ್ಟು ಹಿಂಸಾಚಾರದಿಂದ ರಕ್ಷಿಸಲು ಮತ್ತು ಮತ್ತು ಶಾಂತಿ ಸ್ಥಾಪನೆಗೆ ಕದನ ವಿರಾಮ ಒಂದೇ ದಾರಿಯಾಗಿದೆ ಎಂದು ಟೆಡ್ರೊಸ್ ಹೇಳಿದರು.

ಕಳೆದ 24 ಗಂಟೆಗಳ ಅವಧಿಯಲ್ಲಿ ಗಾಝಾದ ಮೇಲೆ ಇಸ್ರೇಲ್‌ ನಡೆಸಿದ ದಾಳಿಯಲ್ಲಿ ಸುಮಾರು 210 ಪ್ಯಾಲೆಸ್ತೀನಿಯನ್ನರು ಸಾವನ್ನಪ್ಪಿದ್ದಾರೆ ಮತ್ತು 325 ಮಂದಿ ಗಾಯಗೊಂಡಿದ್ದಾರೆ ಎಂದು ಪ್ಯಾಲೇಸ್ತೀನಿಯನ್ ಆರೋಗ್ಯ ಸಚಿವಾಲಯ ತಿಳಿಸಿದೆ. ಇಸ್ರೇಲ್‌ ಮಿಲಿಟರಿ ಕ್ಲಿಯರೆನ್ಸ್ ಆದೇಶಗಳ ನಂತರ ಕನಿಷ್ಠ 1,00,000 ಸ್ಥಳಾಂತರಗೊಂಡ ಜನರು ರಾಫಾದಲ್ಲಿ ಸೇರಿದ್ದಾರೆ.

ಇದನ್ನು ಓದಿ: ಲೋಕಸಭೆ ಚುನಾವಣೆಗೆ ಮುನ್ನ ಇವಿಎಂ ಸರಿಪಡಿಸದಿದ್ದರೆ ಬಿಜೆಪಿ 400 ಸ್ಥಾನಗಳನ್ನು ಗೆಲ್ಲಬಹುದು: ಸ್ಯಾಮ್ ಪಿತ್ರೋಡಾ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸರ್ವಾಧಿಕಾರಿ ಪ್ರವೃತ್ತಿ, ಹೇಡಿತನಕ್ಕೆ ಸಾಕ್ಷಿ’ : ಯುವ ಕಾಂಗ್ರೆಸ್‌ ನಾಯಕರ ಬಂಧನಕ್ಕೆ ರಾಹುಲ್ ಗಾಂಧಿ ಪ್ರತಿಕ್ರಿಯೆ

ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಮತ್ತು ಪಕ್ಷದ ಇತರ ಸದಸ್ಯರ ಬಂಧನವನ್ನು ತೀವ್ರವಾಗಿ ಖಂಡಿಸಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, "ಇದು ಸರ್ವಾಧಿಕಾರಿ ಪ್ರವೃತ್ತಿ ಮತ್ತು...

‘ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ’; ನ್ಯಾಯಮೂರ್ತಿ ಉಜ್ವಲ್  ಭೂಯಾನ್

ಹೊಸದಿಲ್ಲಿ: ಭಾರತದ ಸಂವಿಧಾನವು ಪ್ರತಿಯೊಬ್ಬರಿಗೂ ಸಮಾನತೆ ಮತ್ತು ಘನತೆಯ ಭರವಸೆ ನೀಡುತ್ತದೆ. ಆದರೆ ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ...

ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ದಲಿತ ವಿದ್ಯಾರ್ಥಿಯ ಮೇಲೆ ಹಲ್ಲೆ ಆರೋಪ; ಎಎಸ್ಎ ಪ್ರತಿಭಟನೆ

ದಲಿತ ವಿದ್ಯಾರ್ಥಿಯ ಮೇಲೆ ಜಾತಿ ಆಧಾರಿತ ಹಲ್ಲೆ ನಡೆದಿದ್ದರೂ ಪ್ರಕರಣದಲ್ಲಿ ಹೈದರಾಬಾದ್ ವಿಶ್ವವಿದ್ಯಾಲಯದ (ಯುಒಎಚ್) ಆಡಳಿತಾತ್ಮಕ ನಿಷ್ಕ್ರಿಯತೆ ಇದೆ ಎಂದು ಆರೋಪಿಸಿ, ಅಂಬೇಡ್ಕರ್ ವಿದ್ಯಾರ್ಥಿ ಸಂಘ (ಎಎಸ್ಎ) ಸೋಮವಾರ (ಫೆ.23) ಪ್ರತಿಭಟನೆ ನಡೆಸಿತು...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಬಂಧನ

ಭಾರತೀಯ ಯುವ ಕಾಂಗ್ರೆಸ್ (ಐವೈಸಿ) ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಅವರನ್ನು ದೆಹಲಿ ಪೊಲೀಸರು ಮಂಗಳವಾರ (ಫೆ. 24) ಮುಂಜಾನೆ ಸುಮಾರು 4:30ಕ್ಕೆ ಬಂಧಿಸಿದ್ದಾರೆ. ಕಳೆದ ವಾರ ದೆಹಲಿಯ ಭಾರತ್ ಮಂಟಪದಲ್ಲಿ ನಡೆದ...

ಭೂ ವಿವಾದದಲ್ಲಿ ಸಹೋದರರ ಹತ್ಯೆ; ಒಂದೇ ಕುಟುಂಬದ 13 ಮಂದಿಗೆ ಜೀವಾವಧಿ ಶಿಕ್ಷೆ

ಭೂ ವಿವಾದಕ್ಕೆ ಸಂಬಂಧಿಸಿದಂತೆ ಸುಮಾರು 10 ವರ್ಷಗಳ ಹಿಂದೆ ಇಬ್ಬರು ಸಹೋದರರನ್ನು ಹತ್ಯೆಗೈದ ಪ್ರಕರಣದಲ್ಲಿ ಒಂದೇ ಕುಟುಂಬದ 13 ಮಂದಿಗೆ ಉತ್ತರ ಪ್ರದೇಶದ ಸಹರಾನ್‌ಪುರದ ಸ್ಥಳೀಯ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ ಎಂದು...

ಉತ್ತರ ಪ್ರದೇಶ: ಬಜರಂಗದಳ ದೂರಿನ ಮೇರೆಗೆ ಮತಾಂತರ ವಿರೋಧಿ ಕಾನೂನಿನಡಿಯಲ್ಲಿ ಕೇರಳ ಮೂಲದ ಪಾದ್ರಿಯ ಬಂಧನ

ಬಜರಂಗದಳ ಸದಸ್ಯರು ನೀಡಿದ ದೂರಿನ ಮೇರೆಗೆ ಧಾರ್ಮಿಕ ಮತಾಂತರದ ಆರೋಪದ ಮೇಲೆ ಕೇರಳದ ಪಾದ್ರಿಯೊಬ್ಬರನ್ನು ಉತ್ತರ ಪ್ರದೇಶದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ತಿರುವನಂತಪುರಂ ಮೂಲದ ಪಾದ್ರಿ ಜೋಸ್ ಥಾಮಸ್,...

‘ನಾಚಿಕೆಗೇಡು ಅಂದ್ರೇನು ನಾನು ಹೇಳ್ತೇನೆ’: ಅಮೆರಿಕ ವ್ಯಾಪಾರ ಒಪ್ಪಂದ, ಎಪ್‌ಸ್ಟೀನ್ ಫೈಲ್ಸ್ ಉಲ್ಲೇಖಿಸಿ ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ಎಐ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರು ಶರ್ಟ್‌ ಬಿಚ್ಚಿ ಪ್ರತಿಭಟಿಸಿದ್ದನ್ನು 'ಗಲೀಜು, ನಾಚಿಕೆಗೇಡು'ಎಂದಿದ್ದ ಪ್ರಧಾನಿ ನರೇಂದ್ರ ಮೋದಿಯವರಿಗೆ ವಿಪಕ್ಷ ನಾಯಕ ರಾಹುಲ್ ಗಾಂಧಿ ತಿರುಗೇಟು ನೀಡಿದ್ದಾರೆ. ವಿಡಿಯೋ ಮೂಲಕ ಪ್ರತಿಕ್ರಿಯಿಸಿರುವ ರಾಹುಲ್ ಗಾಂಧಿ, "ಪ್ರಧಾನಿ...

ಜಾರ್ಖಂಡ್ | ಏರ್ ಆಂಬ್ಯುಲೆನ್ಸ್ ಪತನ : ರೋಗಿ, ವೈದ್ಯ ಸೇರಿ 7 ಮಂದಿ ಸಾವು

ರಾಂಚಿಯಿಂದ ದೆಹಲಿಗೆ ತೆರಳುತ್ತಿದ್ದ ಏರ್ ಆಂಬ್ಯುಲೆನ್ಸ್ ಜಾರ್ಖಂಡ್‌ನ ಛಾತ್ರಾ ಜಿಲ್ಲೆಯಲ್ಲಿ ಸೋಮವಾರ (ಫೆ.24) ಪತನಗೊಂಡಿದ್ದು, ಅದರಲ್ಲಿದ್ದ ಎಲ್ಲಾ ಏಳು ಜನರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ರೆಡ್‌ಬರ್ಡ್‌ ಏರ್ವೇಸ್ ಪ್ರೈವೆಟ್ ಲಿಮಿಟೆಡ್ ಎಂಬ ಸಂಸ್ಥೆ ನಿರ್ವಹಣೆ...

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...