HomeUncategorizedಇಸ್ರೇಲ್‌ ಯುದ್ಧ ಭೀಕರತೆ: ಮಕ್ಕಳ ಸ್ಮಶಾನವಾದ ಗಾಝಾ!

ಇಸ್ರೇಲ್‌ ಯುದ್ಧ ಭೀಕರತೆ: ಮಕ್ಕಳ ಸ್ಮಶಾನವಾದ ಗಾಝಾ!

- Advertisement -
- Advertisement -

ಇಸ್ರೇಲ್ ಬಾಂಬ್‌ ದಾಳಿಗೆ ಗಾಝಾದಲ್ಲಿ 24,00ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ. ಇದರಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರ ಮತ್ತು ಮಕ್ಕಳ ಹತ್ಯಾಕಾಂಡವನ್ನು ಇಸ್ರೇಲ್‌ ನಡೆಸಿದೆ. ಪದೇ ಪದೇ ಶಾಲೆಗಳನ್ನು, ನವಜಾತ ಶಿಶುಗಳ ಆರೈಕೆ ಕೇಂದ್ರಗಳನ್ನು ಕೇಂದ್ರೀಕರಿಸಿ ಇಸ್ರೇಲ್‌ ದಾಳಿ ನಡೆಸಿದ್ದು, ಈವರೆಗೆ 10,000ಕ್ಕೂ ಹೆಚ್ಚು ಪ್ಯಾಲೇಸ್ತೀನ್‌ನ ಅಮಾಯಕ ಮಕ್ಕಳು ಇಸ್ರೇಲ್‌ ದಾಳಿಯಿಂದ ಕೊಲ್ಲಲ್ಪಟ್ಟಿದ್ದಾರೆ.

ಯುರೋ-ಮೆಡ್ ಮಾನವ ಹಕ್ಕುಗಳ ಮಾನಿಟರ್ ಬಿಡುಗಡೆ ಮಾಡಿದ್ದ ವರದಿಯ ಪ್ರಕಾರ, ಇಸ್ರೇಲ್ 10,000 ಕ್ಕೂ ಹೆಚ್ಚು ಶಿಶುಗಳು ಮತ್ತು ಮಕ್ಕಳನ್ನು ಕೊಂದಿದೆ. ನೂರಾರು ಮಕ್ಕಳು ಪಾಳುಬಿದ್ದ ಕಟ್ಟಡಗಳ ಅವಶೇಷಗಳಡಿಯಲ್ಲಿ ಉಳಿದುಕೊಂಡಿರುವುದರಿಂದ ಬದುಕುಳಿಯುವ ಸಾಧ್ಯತೆ ಕಡಿಮೆ ಇದೆ. ಸುಮಾರು 7,00,000 ಮಕ್ಕಳು ಇಸ್ರೇಲ್‌ನ ಗಾಝಾ ನರಮೇಧದಿಂದ ಪ್ರಭಾವಿತರಾಗಿದ್ದಾರೆ, ಇದರಲ್ಲಿ ಕೊಲ್ಲಲ್ಪಟ್ಟವರು, ಗಾಯಗೊಂಡವರು ಮತ್ತು ಆಂತರಿಕವಾಗಿ ಸ್ಥಳಾಂತರಗೊಂಡವರು ಸೇರಿದ್ದಾರೆ.

ಇಸ್ರೇಲ್‌ ದಾಳಿಯಲ್ಲಿ 18,000 ಪ್ಯಾಲೆಸ್ತೀನ್ ಮಕ್ಕಳು ಗಾಯಗೊಂಡಿದ್ದಾರೆ. ಇದರಲ್ಲಿ ಅನೇಕ ಮಕ್ಕಳು ಗಂಭೀರವಾಗಿದ್ದಾರೆ. ಡಜನ್‌ಗಟ್ಟಲೆ ಮಕ್ಕಳು ಅಂಗಾಂಗಳನ್ನು ಕಳೆದುಕೊಂಡಿದ್ದಾರೆ ಮತ್ತು ನೂರಾರು ಮ್ಕಕಳು ತಮ್ಮ ದೇಹದ ವಿವಿಧ ಭಾಗಗಳಿಗೆ ತೀವ್ರ ಸುಟ್ಟಗಾಯಗಳನ್ನು ಅನುಭವಿಸಿದ್ದಾರೆ. ಸ್ಥಳಾಂತರಗೊಂಡ ಮಕ್ಕಳಲ್ಲಿ 50 ಪ್ರತಿಶತದಷ್ಟು ಮಕ್ಕಳು ನಿರ್ಜಲೀಕರಣ, ಅಪೌಷ್ಟಿಕತೆ, ಉಸಿರಾಟ ಮತ್ತು ಚರ್ಮ ರೋಗಗಳು, ತೀವ್ರ ಶೀತದಿಂದ ಅನಾರೋಗ್ಯಕ್ಕೆ ತುತ್ತಾಗಿದ್ದಾರೆ. ನವಜಾತ ಶಿಶುಗಳಿಗೆ ಲಸಿಕೆ ಸಿಗದೆ ಅಪಾಯದಲ್ಲಿದೆ.

ಗಾಝಾ ಪಟ್ಟಿಯಲ್ಲಿರುವ ಕನಿಷ್ಠ 25,000 ಮಕ್ಕಳು ಒಬ್ಬ ಅಥವಾ ಇಬ್ಬರ ಪೋಷಕರನ್ನು ಕಳೆದುಕೊಂಡಿದ್ದಾರೆ. ಸಾವಿರಾರು ಮಕ್ಕಳು ಭವಿಷ್ಯವನ್ನು ಕಳೆದುಕೊಂಡಿದ್ದಾರೆ. ಗಾಝಾ ಪಟ್ಟಿಯಲ್ಲಿರುವ 217 ಶಾಲೆಗಳು ಇಸ್ರೇಲ್‌ ದಾಳಿಯ ಸಮಯದಲ್ಲಿ ಹಾನಿಗೊಳಗಾಗಿವೆ.

ಸೇವ್ ದಿ ಚಿಲ್ಡ್ರನ್ ಡೇಟಾ ಪ್ರಕಾರ, ಗಾಝಾದಲ್ಲಿ ಪ್ರತಿ 10 ನಿಮಿಷಕ್ಕೆ ಒಂದು ಮಗುವನ್ನು ಕೊಲ್ಲಲಾಗುತ್ತಿದೆ. ಮಧ್ಯಪ್ರಾಚ್ಯ ಮತ್ತು ಉತ್ತರ ಆಫ್ರಿಕಾದ ಯುನಿಸೆಫ್ ಪ್ರಾದೇಶಿಕ ನಿರ್ದೇಶಕ ಅಡೆಲೆ ಖೋಡ್ರ್ ಶನಿವಾರ ಹೇಳಿಕೆಯೊಂದರಲ್ಲಿ, ಗಾಝಾವು ಮಕ್ಕಳಿಗೆ ಪ್ರಪಂಚದಲ್ಲೇ ಅತ್ಯಂತ ಅಪಾಯಕಾರಿ ಸ್ಥಳವಾಗಿದೆ. ವಿಶ್ವದೆಲ್ಲೆಡೆ ಮಕ್ಕಳು ಆಟವಾಡುತ್ತಿರುವಾಗ ಮತ್ತು ಶಾಲೆಗೆ ಹೋಗುತ್ತಿರುವಾಗ ಗಾಝಾ ಮಕ್ಕಳ ಅವಶೇಷಗಳ ರಾಶಿಯಾಗಿ ಮಾರ್ಪಟ್ಟಿದೆ ಎಂದು ಹೇಳಿದ್ದಾರೆ.

ಅ.7ರಂದು ಯುದ್ಧ ಪ್ರಾರಂಭವಾದಾಗಿನಿಂದ ಸುಮಾರು ಒಂದು ಮಿಲಿಯನ್ ಮಕ್ಕಳನ್ನು ಈಗ ಬಲವಂತವಾಗಿ ಸ್ಥಳಾಂತರಿಸಲಾಗಿದೆ ಎಂದು UN ಮಕ್ಕಳ ಏಜೆನ್ಸಿಯ ಹೇಳಿದೆ. ನೀರು, ಆಹಾರ, ಅಥವಾ ರಕ್ಷಣೆಯಿಲ್ಲದೆ, ಉಸಿರಾಟದ ಸೋಂಕುಗಳು ಮತ್ತು ನೀರಿನಿಂದ ಹರಡುವ ರೋಗಗಳ ಅಪಾಯಗಳು ಹೆಚ್ಚಿದ್ದು, ಗಾಝಾ ಮಕ್ಕಳ ಸ್ಮಶಾನವಾಗಿದೆ ಎಂದು ಹೇಳಿದೆ.

ಪ್ಯಾಲೆಸ್ತೀನಿಯನ್‌ ನರಮೇಧವನ್ನು ಸಂಭ್ರಮಿಸಿ ಹಾಡು ಹಾಡಿದ್ದ ಇಸ್ರೇಲ್ ಮಕ್ಕಳು:

ನವೆಂಬರ್‌ನಲ್ಲಿ ಇಸ್ರೇಲ್‌ನ ಸಾರ್ವಜನಿಕ ಬ್ರಾಡ್‌ಕಾಸ್ಟರ್ ಕಾನ್, ತನ್ನ ಅಧಿಕೃತ ಎಕ್ಸ್‌ಲ್ಲಿನ ಪೋಸ್ಟ್‌ನಲ್ಲಿ  ಇಸ್ರೇಲ್‌ ಮಕ್ಕಳು ಗಾಝಾದಲ್ಲಿ ಪ್ಯಾಲೆಸ್ತೀನಿಯನ್ನರು ನರಮೇಧವನ್ನು ಆಚರಿಸುವ ಹಾಡನ್ನು ಹಾಡುವ ವೀಡಿಯೊವನ್ನು ಅಪ್‌ಲೋಡ್ ಮಾಡಿದೆ. ಟೀಕೆಗೆ ಒಳಗಾದ ಬಳಿಕ ನಂತರ ವೀಡಿಯೊ ಕ್ಲಿಪ್‌ನ್ನು ಅಳಿಸಿದ್ದಾರೆ. ಸಾಮಾಜಿಕ ಮಾಧ್ಯಮದಿಂದ ವೀಡಿಯೊವನ್ನು ಅಳಿಸಿದ ನಂತರವೂ, ಹಾಡು ಚರ್ಚೆ ಮತ್ತು ವಿವಾದದ ವಿಷಯವಾಗಿ ಉಳಿದಿದೆ. ಒಂದು ವರ್ಷದೊಳಗೆ ಇಡೀ ಗಾಝಾದ ಜನರನ್ನು ನಿರ್ಮೂಲನೆ ಮಾಡುವ ಬಗ್ಗೆ ಮಕ್ಕಳು ಸಂತೋಷದಿಂದ ಹಾಡುವುದನ್ನು ನೋಡಿ ಪ್ರಪಂಚದಾದ್ಯಂತದ ಅನೇಕರು ಆಘಾತಕ್ಕೊಳಗಾಗಿದ್ದರು.

ರಾಫಾದಲ್ಲಿ ನಾಗರಿಕರ ಪರಿಸ್ಥಿತಿಗಳು ಗಂಭೀರ:

ದಕ್ಷಿಣ ಗಾಝಾ ಪಟ್ಟಿಯಲ್ಲಿರುವ ರಾಫಾದಲ್ಲಿ ನಾಗರಿಕರ ಪರಿಸ್ಥಿತಿಗಳು ಅತ್ಯಂತ ಭೀಕರವಾಗಿವೆ ಎಂದು ಇಂಟರ್ನ್ಯಾಷನಲ್ ಕಮಿಟಿ ಆಫ್ ದಿ ರೆಡ್ ಕ್ರಾಸ್ (ICRC) ಹೇಳಿಕೊಂಡಿದೆ. ರಾಫಾ ಈಜಿಪ್ಟ್‌ನ ಗಡಿಯ ಸಮೀಪದಲ್ಲಿದೆ ಮತ್ತು ಲಕ್ಷಾಂತರ ಮಂದಿ ಅಲ್ಲಿ ಆಶ್ರಯವನ್ನು ಪಡದುಕೊಂಡಿದ್ದಾರೆ.

ರಾಫಾದಲ್ಲಿ ನಿರಾಶ್ರಿತ ಜನರ ಅಗತ್ಯಗಳನ್ನು ಪೂರೈಸಲು ನಮ್ಮಲ್ಲಿ ಸಾಕಷ್ಟು ಪರಿಹಾರ ಸಾಮಗ್ರಿಗಳಿಲ್ಲ.ಸಾಕಷ್ಟು ನೀರು ಇಲ್ಲ, ಸಾಕಷ್ಟು ನೈರ್ಮಲ್ಯವಿಲ್ಲ, ಮತ್ತು ಜನರಿಗೆ ಆಹಾರ, ವೈದ್ಯಕೀಯ ಹಾರೈಕೆ ಸಿಗುತ್ತಿಲ್ಲ ಎಂದು ICRC ಕ್ಷಿಪ್ರ ನಿಯೋಜನೆ ಸಂಯೋಜಕ ಸ್ಟೀಫನ್ ರಯಾನ್ ತಿಳಿಸಿದ್ದಾರೆ.

ವಿಶ್ವ ಆರೋಗ್ಯ ಸಂಸ್ಥೆಯ ಮುಖ್ಯಸ್ಥ ಟೆಡ್ರೊಸ್ ಅಧಾನೊಮ್ ಘೆಬ್ರೆಯೆಸಸ್, ಗಾಝಾದ ಜನಸಂಖ್ಯೆಯನ್ನು ಎದುರಿಸುತ್ತಿರುವ ಗಂಭೀರ ಅಪಾಯವನ್ನು ನಿವಾರಿಸಲು ಮತ್ತು ಗಾಯಗಳು, ತೀವ್ರವಾದ ಹಸಿವಿನಿಂದ ಬಳಲುತ್ತಿರುವ ಜನರಿಗೆ ತುರ್ತು ಸಹಾಯ ಮಾಡುವಂತೆ ಅಂತರಾಷ್ಟ್ರೀಯ ಸಮುದಾಯಕ್ಕೆ ಕರೆ ನೀಡಿದ್ದಾರೆ.

ಆಸ್ಪತ್ರೆಗಳಿಗೆ ಔಷಧಗಳು, ವೈದ್ಯಕೀಯ ಸರಬರಾಜುಗಳು ಮತ್ತು ಇಂಧನವನ್ನು ಪೂರೈಸುವ ಸಾಮರ್ಥ್ಯವು ಸೀಮಿತವಾಗಿದೆ. ಇತ್ತೀಚಿನ WHO ಮೌಲ್ಯಮಾಪನಗಳ ಪ್ರಕಾರ ಗಾಝಾದಲ್ಲಿ 13 ಭಾಗಶಃ ಕಾರ್ಯನಿರ್ವಹಿಸುವ ಆಸ್ಪತ್ರೆಗಳನ್ನು ಹೊಂದಿದೆ ಮತ್ತು 21 ಆಸ್ಪತ್ರೆಗಳು ಕಾರ್ಯನಿರ್ವಹಿಸುತ್ತಿಲ್ಲ ಎಂದು ಹೇಳಿದೆ. ನಾಗರಿಕರನ್ನು ಮತ್ತಷ್ಟು ಹಿಂಸಾಚಾರದಿಂದ ರಕ್ಷಿಸಲು ಮತ್ತು ಮತ್ತು ಶಾಂತಿ ಸ್ಥಾಪನೆಗೆ ಕದನ ವಿರಾಮ ಒಂದೇ ದಾರಿಯಾಗಿದೆ ಎಂದು ಟೆಡ್ರೊಸ್ ಹೇಳಿದರು.

ಕಳೆದ 24 ಗಂಟೆಗಳ ಅವಧಿಯಲ್ಲಿ ಗಾಝಾದ ಮೇಲೆ ಇಸ್ರೇಲ್‌ ನಡೆಸಿದ ದಾಳಿಯಲ್ಲಿ ಸುಮಾರು 210 ಪ್ಯಾಲೆಸ್ತೀನಿಯನ್ನರು ಸಾವನ್ನಪ್ಪಿದ್ದಾರೆ ಮತ್ತು 325 ಮಂದಿ ಗಾಯಗೊಂಡಿದ್ದಾರೆ ಎಂದು ಪ್ಯಾಲೇಸ್ತೀನಿಯನ್ ಆರೋಗ್ಯ ಸಚಿವಾಲಯ ತಿಳಿಸಿದೆ. ಇಸ್ರೇಲ್‌ ಮಿಲಿಟರಿ ಕ್ಲಿಯರೆನ್ಸ್ ಆದೇಶಗಳ ನಂತರ ಕನಿಷ್ಠ 1,00,000 ಸ್ಥಳಾಂತರಗೊಂಡ ಜನರು ರಾಫಾದಲ್ಲಿ ಸೇರಿದ್ದಾರೆ.

ಇದನ್ನು ಓದಿ: ಲೋಕಸಭೆ ಚುನಾವಣೆಗೆ ಮುನ್ನ ಇವಿಎಂ ಸರಿಪಡಿಸದಿದ್ದರೆ ಬಿಜೆಪಿ 400 ಸ್ಥಾನಗಳನ್ನು ಗೆಲ್ಲಬಹುದು: ಸ್ಯಾಮ್ ಪಿತ್ರೋಡಾ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...