HomeUncategorizedಇಸ್ರೇಲ್‌ ಯುದ್ಧ ಭೀಕರತೆ: ಮಕ್ಕಳ ಸ್ಮಶಾನವಾದ ಗಾಝಾ!

ಇಸ್ರೇಲ್‌ ಯುದ್ಧ ಭೀಕರತೆ: ಮಕ್ಕಳ ಸ್ಮಶಾನವಾದ ಗಾಝಾ!

- Advertisement -
- Advertisement -

ಇಸ್ರೇಲ್ ಬಾಂಬ್‌ ದಾಳಿಗೆ ಗಾಝಾದಲ್ಲಿ 24,00ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ. ಇದರಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರ ಮತ್ತು ಮಕ್ಕಳ ಹತ್ಯಾಕಾಂಡವನ್ನು ಇಸ್ರೇಲ್‌ ನಡೆಸಿದೆ. ಪದೇ ಪದೇ ಶಾಲೆಗಳನ್ನು, ನವಜಾತ ಶಿಶುಗಳ ಆರೈಕೆ ಕೇಂದ್ರಗಳನ್ನು ಕೇಂದ್ರೀಕರಿಸಿ ಇಸ್ರೇಲ್‌ ದಾಳಿ ನಡೆಸಿದ್ದು, ಈವರೆಗೆ 10,000ಕ್ಕೂ ಹೆಚ್ಚು ಪ್ಯಾಲೇಸ್ತೀನ್‌ನ ಅಮಾಯಕ ಮಕ್ಕಳು ಇಸ್ರೇಲ್‌ ದಾಳಿಯಿಂದ ಕೊಲ್ಲಲ್ಪಟ್ಟಿದ್ದಾರೆ.

ಯುರೋ-ಮೆಡ್ ಮಾನವ ಹಕ್ಕುಗಳ ಮಾನಿಟರ್ ಬಿಡುಗಡೆ ಮಾಡಿದ್ದ ವರದಿಯ ಪ್ರಕಾರ, ಇಸ್ರೇಲ್ 10,000 ಕ್ಕೂ ಹೆಚ್ಚು ಶಿಶುಗಳು ಮತ್ತು ಮಕ್ಕಳನ್ನು ಕೊಂದಿದೆ. ನೂರಾರು ಮಕ್ಕಳು ಪಾಳುಬಿದ್ದ ಕಟ್ಟಡಗಳ ಅವಶೇಷಗಳಡಿಯಲ್ಲಿ ಉಳಿದುಕೊಂಡಿರುವುದರಿಂದ ಬದುಕುಳಿಯುವ ಸಾಧ್ಯತೆ ಕಡಿಮೆ ಇದೆ. ಸುಮಾರು 7,00,000 ಮಕ್ಕಳು ಇಸ್ರೇಲ್‌ನ ಗಾಝಾ ನರಮೇಧದಿಂದ ಪ್ರಭಾವಿತರಾಗಿದ್ದಾರೆ, ಇದರಲ್ಲಿ ಕೊಲ್ಲಲ್ಪಟ್ಟವರು, ಗಾಯಗೊಂಡವರು ಮತ್ತು ಆಂತರಿಕವಾಗಿ ಸ್ಥಳಾಂತರಗೊಂಡವರು ಸೇರಿದ್ದಾರೆ.

ಇಸ್ರೇಲ್‌ ದಾಳಿಯಲ್ಲಿ 18,000 ಪ್ಯಾಲೆಸ್ತೀನ್ ಮಕ್ಕಳು ಗಾಯಗೊಂಡಿದ್ದಾರೆ. ಇದರಲ್ಲಿ ಅನೇಕ ಮಕ್ಕಳು ಗಂಭೀರವಾಗಿದ್ದಾರೆ. ಡಜನ್‌ಗಟ್ಟಲೆ ಮಕ್ಕಳು ಅಂಗಾಂಗಳನ್ನು ಕಳೆದುಕೊಂಡಿದ್ದಾರೆ ಮತ್ತು ನೂರಾರು ಮ್ಕಕಳು ತಮ್ಮ ದೇಹದ ವಿವಿಧ ಭಾಗಗಳಿಗೆ ತೀವ್ರ ಸುಟ್ಟಗಾಯಗಳನ್ನು ಅನುಭವಿಸಿದ್ದಾರೆ. ಸ್ಥಳಾಂತರಗೊಂಡ ಮಕ್ಕಳಲ್ಲಿ 50 ಪ್ರತಿಶತದಷ್ಟು ಮಕ್ಕಳು ನಿರ್ಜಲೀಕರಣ, ಅಪೌಷ್ಟಿಕತೆ, ಉಸಿರಾಟ ಮತ್ತು ಚರ್ಮ ರೋಗಗಳು, ತೀವ್ರ ಶೀತದಿಂದ ಅನಾರೋಗ್ಯಕ್ಕೆ ತುತ್ತಾಗಿದ್ದಾರೆ. ನವಜಾತ ಶಿಶುಗಳಿಗೆ ಲಸಿಕೆ ಸಿಗದೆ ಅಪಾಯದಲ್ಲಿದೆ.

ಗಾಝಾ ಪಟ್ಟಿಯಲ್ಲಿರುವ ಕನಿಷ್ಠ 25,000 ಮಕ್ಕಳು ಒಬ್ಬ ಅಥವಾ ಇಬ್ಬರ ಪೋಷಕರನ್ನು ಕಳೆದುಕೊಂಡಿದ್ದಾರೆ. ಸಾವಿರಾರು ಮಕ್ಕಳು ಭವಿಷ್ಯವನ್ನು ಕಳೆದುಕೊಂಡಿದ್ದಾರೆ. ಗಾಝಾ ಪಟ್ಟಿಯಲ್ಲಿರುವ 217 ಶಾಲೆಗಳು ಇಸ್ರೇಲ್‌ ದಾಳಿಯ ಸಮಯದಲ್ಲಿ ಹಾನಿಗೊಳಗಾಗಿವೆ.

ಸೇವ್ ದಿ ಚಿಲ್ಡ್ರನ್ ಡೇಟಾ ಪ್ರಕಾರ, ಗಾಝಾದಲ್ಲಿ ಪ್ರತಿ 10 ನಿಮಿಷಕ್ಕೆ ಒಂದು ಮಗುವನ್ನು ಕೊಲ್ಲಲಾಗುತ್ತಿದೆ. ಮಧ್ಯಪ್ರಾಚ್ಯ ಮತ್ತು ಉತ್ತರ ಆಫ್ರಿಕಾದ ಯುನಿಸೆಫ್ ಪ್ರಾದೇಶಿಕ ನಿರ್ದೇಶಕ ಅಡೆಲೆ ಖೋಡ್ರ್ ಶನಿವಾರ ಹೇಳಿಕೆಯೊಂದರಲ್ಲಿ, ಗಾಝಾವು ಮಕ್ಕಳಿಗೆ ಪ್ರಪಂಚದಲ್ಲೇ ಅತ್ಯಂತ ಅಪಾಯಕಾರಿ ಸ್ಥಳವಾಗಿದೆ. ವಿಶ್ವದೆಲ್ಲೆಡೆ ಮಕ್ಕಳು ಆಟವಾಡುತ್ತಿರುವಾಗ ಮತ್ತು ಶಾಲೆಗೆ ಹೋಗುತ್ತಿರುವಾಗ ಗಾಝಾ ಮಕ್ಕಳ ಅವಶೇಷಗಳ ರಾಶಿಯಾಗಿ ಮಾರ್ಪಟ್ಟಿದೆ ಎಂದು ಹೇಳಿದ್ದಾರೆ.

ಅ.7ರಂದು ಯುದ್ಧ ಪ್ರಾರಂಭವಾದಾಗಿನಿಂದ ಸುಮಾರು ಒಂದು ಮಿಲಿಯನ್ ಮಕ್ಕಳನ್ನು ಈಗ ಬಲವಂತವಾಗಿ ಸ್ಥಳಾಂತರಿಸಲಾಗಿದೆ ಎಂದು UN ಮಕ್ಕಳ ಏಜೆನ್ಸಿಯ ಹೇಳಿದೆ. ನೀರು, ಆಹಾರ, ಅಥವಾ ರಕ್ಷಣೆಯಿಲ್ಲದೆ, ಉಸಿರಾಟದ ಸೋಂಕುಗಳು ಮತ್ತು ನೀರಿನಿಂದ ಹರಡುವ ರೋಗಗಳ ಅಪಾಯಗಳು ಹೆಚ್ಚಿದ್ದು, ಗಾಝಾ ಮಕ್ಕಳ ಸ್ಮಶಾನವಾಗಿದೆ ಎಂದು ಹೇಳಿದೆ.

ಪ್ಯಾಲೆಸ್ತೀನಿಯನ್‌ ನರಮೇಧವನ್ನು ಸಂಭ್ರಮಿಸಿ ಹಾಡು ಹಾಡಿದ್ದ ಇಸ್ರೇಲ್ ಮಕ್ಕಳು:

ನವೆಂಬರ್‌ನಲ್ಲಿ ಇಸ್ರೇಲ್‌ನ ಸಾರ್ವಜನಿಕ ಬ್ರಾಡ್‌ಕಾಸ್ಟರ್ ಕಾನ್, ತನ್ನ ಅಧಿಕೃತ ಎಕ್ಸ್‌ಲ್ಲಿನ ಪೋಸ್ಟ್‌ನಲ್ಲಿ  ಇಸ್ರೇಲ್‌ ಮಕ್ಕಳು ಗಾಝಾದಲ್ಲಿ ಪ್ಯಾಲೆಸ್ತೀನಿಯನ್ನರು ನರಮೇಧವನ್ನು ಆಚರಿಸುವ ಹಾಡನ್ನು ಹಾಡುವ ವೀಡಿಯೊವನ್ನು ಅಪ್‌ಲೋಡ್ ಮಾಡಿದೆ. ಟೀಕೆಗೆ ಒಳಗಾದ ಬಳಿಕ ನಂತರ ವೀಡಿಯೊ ಕ್ಲಿಪ್‌ನ್ನು ಅಳಿಸಿದ್ದಾರೆ. ಸಾಮಾಜಿಕ ಮಾಧ್ಯಮದಿಂದ ವೀಡಿಯೊವನ್ನು ಅಳಿಸಿದ ನಂತರವೂ, ಹಾಡು ಚರ್ಚೆ ಮತ್ತು ವಿವಾದದ ವಿಷಯವಾಗಿ ಉಳಿದಿದೆ. ಒಂದು ವರ್ಷದೊಳಗೆ ಇಡೀ ಗಾಝಾದ ಜನರನ್ನು ನಿರ್ಮೂಲನೆ ಮಾಡುವ ಬಗ್ಗೆ ಮಕ್ಕಳು ಸಂತೋಷದಿಂದ ಹಾಡುವುದನ್ನು ನೋಡಿ ಪ್ರಪಂಚದಾದ್ಯಂತದ ಅನೇಕರು ಆಘಾತಕ್ಕೊಳಗಾಗಿದ್ದರು.

ರಾಫಾದಲ್ಲಿ ನಾಗರಿಕರ ಪರಿಸ್ಥಿತಿಗಳು ಗಂಭೀರ:

ದಕ್ಷಿಣ ಗಾಝಾ ಪಟ್ಟಿಯಲ್ಲಿರುವ ರಾಫಾದಲ್ಲಿ ನಾಗರಿಕರ ಪರಿಸ್ಥಿತಿಗಳು ಅತ್ಯಂತ ಭೀಕರವಾಗಿವೆ ಎಂದು ಇಂಟರ್ನ್ಯಾಷನಲ್ ಕಮಿಟಿ ಆಫ್ ದಿ ರೆಡ್ ಕ್ರಾಸ್ (ICRC) ಹೇಳಿಕೊಂಡಿದೆ. ರಾಫಾ ಈಜಿಪ್ಟ್‌ನ ಗಡಿಯ ಸಮೀಪದಲ್ಲಿದೆ ಮತ್ತು ಲಕ್ಷಾಂತರ ಮಂದಿ ಅಲ್ಲಿ ಆಶ್ರಯವನ್ನು ಪಡದುಕೊಂಡಿದ್ದಾರೆ.

ರಾಫಾದಲ್ಲಿ ನಿರಾಶ್ರಿತ ಜನರ ಅಗತ್ಯಗಳನ್ನು ಪೂರೈಸಲು ನಮ್ಮಲ್ಲಿ ಸಾಕಷ್ಟು ಪರಿಹಾರ ಸಾಮಗ್ರಿಗಳಿಲ್ಲ.ಸಾಕಷ್ಟು ನೀರು ಇಲ್ಲ, ಸಾಕಷ್ಟು ನೈರ್ಮಲ್ಯವಿಲ್ಲ, ಮತ್ತು ಜನರಿಗೆ ಆಹಾರ, ವೈದ್ಯಕೀಯ ಹಾರೈಕೆ ಸಿಗುತ್ತಿಲ್ಲ ಎಂದು ICRC ಕ್ಷಿಪ್ರ ನಿಯೋಜನೆ ಸಂಯೋಜಕ ಸ್ಟೀಫನ್ ರಯಾನ್ ತಿಳಿಸಿದ್ದಾರೆ.

ವಿಶ್ವ ಆರೋಗ್ಯ ಸಂಸ್ಥೆಯ ಮುಖ್ಯಸ್ಥ ಟೆಡ್ರೊಸ್ ಅಧಾನೊಮ್ ಘೆಬ್ರೆಯೆಸಸ್, ಗಾಝಾದ ಜನಸಂಖ್ಯೆಯನ್ನು ಎದುರಿಸುತ್ತಿರುವ ಗಂಭೀರ ಅಪಾಯವನ್ನು ನಿವಾರಿಸಲು ಮತ್ತು ಗಾಯಗಳು, ತೀವ್ರವಾದ ಹಸಿವಿನಿಂದ ಬಳಲುತ್ತಿರುವ ಜನರಿಗೆ ತುರ್ತು ಸಹಾಯ ಮಾಡುವಂತೆ ಅಂತರಾಷ್ಟ್ರೀಯ ಸಮುದಾಯಕ್ಕೆ ಕರೆ ನೀಡಿದ್ದಾರೆ.

ಆಸ್ಪತ್ರೆಗಳಿಗೆ ಔಷಧಗಳು, ವೈದ್ಯಕೀಯ ಸರಬರಾಜುಗಳು ಮತ್ತು ಇಂಧನವನ್ನು ಪೂರೈಸುವ ಸಾಮರ್ಥ್ಯವು ಸೀಮಿತವಾಗಿದೆ. ಇತ್ತೀಚಿನ WHO ಮೌಲ್ಯಮಾಪನಗಳ ಪ್ರಕಾರ ಗಾಝಾದಲ್ಲಿ 13 ಭಾಗಶಃ ಕಾರ್ಯನಿರ್ವಹಿಸುವ ಆಸ್ಪತ್ರೆಗಳನ್ನು ಹೊಂದಿದೆ ಮತ್ತು 21 ಆಸ್ಪತ್ರೆಗಳು ಕಾರ್ಯನಿರ್ವಹಿಸುತ್ತಿಲ್ಲ ಎಂದು ಹೇಳಿದೆ. ನಾಗರಿಕರನ್ನು ಮತ್ತಷ್ಟು ಹಿಂಸಾಚಾರದಿಂದ ರಕ್ಷಿಸಲು ಮತ್ತು ಮತ್ತು ಶಾಂತಿ ಸ್ಥಾಪನೆಗೆ ಕದನ ವಿರಾಮ ಒಂದೇ ದಾರಿಯಾಗಿದೆ ಎಂದು ಟೆಡ್ರೊಸ್ ಹೇಳಿದರು.

ಕಳೆದ 24 ಗಂಟೆಗಳ ಅವಧಿಯಲ್ಲಿ ಗಾಝಾದ ಮೇಲೆ ಇಸ್ರೇಲ್‌ ನಡೆಸಿದ ದಾಳಿಯಲ್ಲಿ ಸುಮಾರು 210 ಪ್ಯಾಲೆಸ್ತೀನಿಯನ್ನರು ಸಾವನ್ನಪ್ಪಿದ್ದಾರೆ ಮತ್ತು 325 ಮಂದಿ ಗಾಯಗೊಂಡಿದ್ದಾರೆ ಎಂದು ಪ್ಯಾಲೇಸ್ತೀನಿಯನ್ ಆರೋಗ್ಯ ಸಚಿವಾಲಯ ತಿಳಿಸಿದೆ. ಇಸ್ರೇಲ್‌ ಮಿಲಿಟರಿ ಕ್ಲಿಯರೆನ್ಸ್ ಆದೇಶಗಳ ನಂತರ ಕನಿಷ್ಠ 1,00,000 ಸ್ಥಳಾಂತರಗೊಂಡ ಜನರು ರಾಫಾದಲ್ಲಿ ಸೇರಿದ್ದಾರೆ.

ಇದನ್ನು ಓದಿ: ಲೋಕಸಭೆ ಚುನಾವಣೆಗೆ ಮುನ್ನ ಇವಿಎಂ ಸರಿಪಡಿಸದಿದ್ದರೆ ಬಿಜೆಪಿ 400 ಸ್ಥಾನಗಳನ್ನು ಗೆಲ್ಲಬಹುದು: ಸ್ಯಾಮ್ ಪಿತ್ರೋಡಾ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...