HomeUncategorizedಇಸ್ರೇಲ್‌ ಯುದ್ಧ ಭೀಕರತೆ: ಮಕ್ಕಳ ಸ್ಮಶಾನವಾದ ಗಾಝಾ!

ಇಸ್ರೇಲ್‌ ಯುದ್ಧ ಭೀಕರತೆ: ಮಕ್ಕಳ ಸ್ಮಶಾನವಾದ ಗಾಝಾ!

- Advertisement -
- Advertisement -

ಇಸ್ರೇಲ್ ಬಾಂಬ್‌ ದಾಳಿಗೆ ಗಾಝಾದಲ್ಲಿ 24,00ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ. ಇದರಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರ ಮತ್ತು ಮಕ್ಕಳ ಹತ್ಯಾಕಾಂಡವನ್ನು ಇಸ್ರೇಲ್‌ ನಡೆಸಿದೆ. ಪದೇ ಪದೇ ಶಾಲೆಗಳನ್ನು, ನವಜಾತ ಶಿಶುಗಳ ಆರೈಕೆ ಕೇಂದ್ರಗಳನ್ನು ಕೇಂದ್ರೀಕರಿಸಿ ಇಸ್ರೇಲ್‌ ದಾಳಿ ನಡೆಸಿದ್ದು, ಈವರೆಗೆ 10,000ಕ್ಕೂ ಹೆಚ್ಚು ಪ್ಯಾಲೇಸ್ತೀನ್‌ನ ಅಮಾಯಕ ಮಕ್ಕಳು ಇಸ್ರೇಲ್‌ ದಾಳಿಯಿಂದ ಕೊಲ್ಲಲ್ಪಟ್ಟಿದ್ದಾರೆ.

ಯುರೋ-ಮೆಡ್ ಮಾನವ ಹಕ್ಕುಗಳ ಮಾನಿಟರ್ ಬಿಡುಗಡೆ ಮಾಡಿದ್ದ ವರದಿಯ ಪ್ರಕಾರ, ಇಸ್ರೇಲ್ 10,000 ಕ್ಕೂ ಹೆಚ್ಚು ಶಿಶುಗಳು ಮತ್ತು ಮಕ್ಕಳನ್ನು ಕೊಂದಿದೆ. ನೂರಾರು ಮಕ್ಕಳು ಪಾಳುಬಿದ್ದ ಕಟ್ಟಡಗಳ ಅವಶೇಷಗಳಡಿಯಲ್ಲಿ ಉಳಿದುಕೊಂಡಿರುವುದರಿಂದ ಬದುಕುಳಿಯುವ ಸಾಧ್ಯತೆ ಕಡಿಮೆ ಇದೆ. ಸುಮಾರು 7,00,000 ಮಕ್ಕಳು ಇಸ್ರೇಲ್‌ನ ಗಾಝಾ ನರಮೇಧದಿಂದ ಪ್ರಭಾವಿತರಾಗಿದ್ದಾರೆ, ಇದರಲ್ಲಿ ಕೊಲ್ಲಲ್ಪಟ್ಟವರು, ಗಾಯಗೊಂಡವರು ಮತ್ತು ಆಂತರಿಕವಾಗಿ ಸ್ಥಳಾಂತರಗೊಂಡವರು ಸೇರಿದ್ದಾರೆ.

ಇಸ್ರೇಲ್‌ ದಾಳಿಯಲ್ಲಿ 18,000 ಪ್ಯಾಲೆಸ್ತೀನ್ ಮಕ್ಕಳು ಗಾಯಗೊಂಡಿದ್ದಾರೆ. ಇದರಲ್ಲಿ ಅನೇಕ ಮಕ್ಕಳು ಗಂಭೀರವಾಗಿದ್ದಾರೆ. ಡಜನ್‌ಗಟ್ಟಲೆ ಮಕ್ಕಳು ಅಂಗಾಂಗಳನ್ನು ಕಳೆದುಕೊಂಡಿದ್ದಾರೆ ಮತ್ತು ನೂರಾರು ಮ್ಕಕಳು ತಮ್ಮ ದೇಹದ ವಿವಿಧ ಭಾಗಗಳಿಗೆ ತೀವ್ರ ಸುಟ್ಟಗಾಯಗಳನ್ನು ಅನುಭವಿಸಿದ್ದಾರೆ. ಸ್ಥಳಾಂತರಗೊಂಡ ಮಕ್ಕಳಲ್ಲಿ 50 ಪ್ರತಿಶತದಷ್ಟು ಮಕ್ಕಳು ನಿರ್ಜಲೀಕರಣ, ಅಪೌಷ್ಟಿಕತೆ, ಉಸಿರಾಟ ಮತ್ತು ಚರ್ಮ ರೋಗಗಳು, ತೀವ್ರ ಶೀತದಿಂದ ಅನಾರೋಗ್ಯಕ್ಕೆ ತುತ್ತಾಗಿದ್ದಾರೆ. ನವಜಾತ ಶಿಶುಗಳಿಗೆ ಲಸಿಕೆ ಸಿಗದೆ ಅಪಾಯದಲ್ಲಿದೆ.

ಗಾಝಾ ಪಟ್ಟಿಯಲ್ಲಿರುವ ಕನಿಷ್ಠ 25,000 ಮಕ್ಕಳು ಒಬ್ಬ ಅಥವಾ ಇಬ್ಬರ ಪೋಷಕರನ್ನು ಕಳೆದುಕೊಂಡಿದ್ದಾರೆ. ಸಾವಿರಾರು ಮಕ್ಕಳು ಭವಿಷ್ಯವನ್ನು ಕಳೆದುಕೊಂಡಿದ್ದಾರೆ. ಗಾಝಾ ಪಟ್ಟಿಯಲ್ಲಿರುವ 217 ಶಾಲೆಗಳು ಇಸ್ರೇಲ್‌ ದಾಳಿಯ ಸಮಯದಲ್ಲಿ ಹಾನಿಗೊಳಗಾಗಿವೆ.

ಸೇವ್ ದಿ ಚಿಲ್ಡ್ರನ್ ಡೇಟಾ ಪ್ರಕಾರ, ಗಾಝಾದಲ್ಲಿ ಪ್ರತಿ 10 ನಿಮಿಷಕ್ಕೆ ಒಂದು ಮಗುವನ್ನು ಕೊಲ್ಲಲಾಗುತ್ತಿದೆ. ಮಧ್ಯಪ್ರಾಚ್ಯ ಮತ್ತು ಉತ್ತರ ಆಫ್ರಿಕಾದ ಯುನಿಸೆಫ್ ಪ್ರಾದೇಶಿಕ ನಿರ್ದೇಶಕ ಅಡೆಲೆ ಖೋಡ್ರ್ ಶನಿವಾರ ಹೇಳಿಕೆಯೊಂದರಲ್ಲಿ, ಗಾಝಾವು ಮಕ್ಕಳಿಗೆ ಪ್ರಪಂಚದಲ್ಲೇ ಅತ್ಯಂತ ಅಪಾಯಕಾರಿ ಸ್ಥಳವಾಗಿದೆ. ವಿಶ್ವದೆಲ್ಲೆಡೆ ಮಕ್ಕಳು ಆಟವಾಡುತ್ತಿರುವಾಗ ಮತ್ತು ಶಾಲೆಗೆ ಹೋಗುತ್ತಿರುವಾಗ ಗಾಝಾ ಮಕ್ಕಳ ಅವಶೇಷಗಳ ರಾಶಿಯಾಗಿ ಮಾರ್ಪಟ್ಟಿದೆ ಎಂದು ಹೇಳಿದ್ದಾರೆ.

ಅ.7ರಂದು ಯುದ್ಧ ಪ್ರಾರಂಭವಾದಾಗಿನಿಂದ ಸುಮಾರು ಒಂದು ಮಿಲಿಯನ್ ಮಕ್ಕಳನ್ನು ಈಗ ಬಲವಂತವಾಗಿ ಸ್ಥಳಾಂತರಿಸಲಾಗಿದೆ ಎಂದು UN ಮಕ್ಕಳ ಏಜೆನ್ಸಿಯ ಹೇಳಿದೆ. ನೀರು, ಆಹಾರ, ಅಥವಾ ರಕ್ಷಣೆಯಿಲ್ಲದೆ, ಉಸಿರಾಟದ ಸೋಂಕುಗಳು ಮತ್ತು ನೀರಿನಿಂದ ಹರಡುವ ರೋಗಗಳ ಅಪಾಯಗಳು ಹೆಚ್ಚಿದ್ದು, ಗಾಝಾ ಮಕ್ಕಳ ಸ್ಮಶಾನವಾಗಿದೆ ಎಂದು ಹೇಳಿದೆ.

ಪ್ಯಾಲೆಸ್ತೀನಿಯನ್‌ ನರಮೇಧವನ್ನು ಸಂಭ್ರಮಿಸಿ ಹಾಡು ಹಾಡಿದ್ದ ಇಸ್ರೇಲ್ ಮಕ್ಕಳು:

ನವೆಂಬರ್‌ನಲ್ಲಿ ಇಸ್ರೇಲ್‌ನ ಸಾರ್ವಜನಿಕ ಬ್ರಾಡ್‌ಕಾಸ್ಟರ್ ಕಾನ್, ತನ್ನ ಅಧಿಕೃತ ಎಕ್ಸ್‌ಲ್ಲಿನ ಪೋಸ್ಟ್‌ನಲ್ಲಿ  ಇಸ್ರೇಲ್‌ ಮಕ್ಕಳು ಗಾಝಾದಲ್ಲಿ ಪ್ಯಾಲೆಸ್ತೀನಿಯನ್ನರು ನರಮೇಧವನ್ನು ಆಚರಿಸುವ ಹಾಡನ್ನು ಹಾಡುವ ವೀಡಿಯೊವನ್ನು ಅಪ್‌ಲೋಡ್ ಮಾಡಿದೆ. ಟೀಕೆಗೆ ಒಳಗಾದ ಬಳಿಕ ನಂತರ ವೀಡಿಯೊ ಕ್ಲಿಪ್‌ನ್ನು ಅಳಿಸಿದ್ದಾರೆ. ಸಾಮಾಜಿಕ ಮಾಧ್ಯಮದಿಂದ ವೀಡಿಯೊವನ್ನು ಅಳಿಸಿದ ನಂತರವೂ, ಹಾಡು ಚರ್ಚೆ ಮತ್ತು ವಿವಾದದ ವಿಷಯವಾಗಿ ಉಳಿದಿದೆ. ಒಂದು ವರ್ಷದೊಳಗೆ ಇಡೀ ಗಾಝಾದ ಜನರನ್ನು ನಿರ್ಮೂಲನೆ ಮಾಡುವ ಬಗ್ಗೆ ಮಕ್ಕಳು ಸಂತೋಷದಿಂದ ಹಾಡುವುದನ್ನು ನೋಡಿ ಪ್ರಪಂಚದಾದ್ಯಂತದ ಅನೇಕರು ಆಘಾತಕ್ಕೊಳಗಾಗಿದ್ದರು.

ರಾಫಾದಲ್ಲಿ ನಾಗರಿಕರ ಪರಿಸ್ಥಿತಿಗಳು ಗಂಭೀರ:

ದಕ್ಷಿಣ ಗಾಝಾ ಪಟ್ಟಿಯಲ್ಲಿರುವ ರಾಫಾದಲ್ಲಿ ನಾಗರಿಕರ ಪರಿಸ್ಥಿತಿಗಳು ಅತ್ಯಂತ ಭೀಕರವಾಗಿವೆ ಎಂದು ಇಂಟರ್ನ್ಯಾಷನಲ್ ಕಮಿಟಿ ಆಫ್ ದಿ ರೆಡ್ ಕ್ರಾಸ್ (ICRC) ಹೇಳಿಕೊಂಡಿದೆ. ರಾಫಾ ಈಜಿಪ್ಟ್‌ನ ಗಡಿಯ ಸಮೀಪದಲ್ಲಿದೆ ಮತ್ತು ಲಕ್ಷಾಂತರ ಮಂದಿ ಅಲ್ಲಿ ಆಶ್ರಯವನ್ನು ಪಡದುಕೊಂಡಿದ್ದಾರೆ.

ರಾಫಾದಲ್ಲಿ ನಿರಾಶ್ರಿತ ಜನರ ಅಗತ್ಯಗಳನ್ನು ಪೂರೈಸಲು ನಮ್ಮಲ್ಲಿ ಸಾಕಷ್ಟು ಪರಿಹಾರ ಸಾಮಗ್ರಿಗಳಿಲ್ಲ.ಸಾಕಷ್ಟು ನೀರು ಇಲ್ಲ, ಸಾಕಷ್ಟು ನೈರ್ಮಲ್ಯವಿಲ್ಲ, ಮತ್ತು ಜನರಿಗೆ ಆಹಾರ, ವೈದ್ಯಕೀಯ ಹಾರೈಕೆ ಸಿಗುತ್ತಿಲ್ಲ ಎಂದು ICRC ಕ್ಷಿಪ್ರ ನಿಯೋಜನೆ ಸಂಯೋಜಕ ಸ್ಟೀಫನ್ ರಯಾನ್ ತಿಳಿಸಿದ್ದಾರೆ.

ವಿಶ್ವ ಆರೋಗ್ಯ ಸಂಸ್ಥೆಯ ಮುಖ್ಯಸ್ಥ ಟೆಡ್ರೊಸ್ ಅಧಾನೊಮ್ ಘೆಬ್ರೆಯೆಸಸ್, ಗಾಝಾದ ಜನಸಂಖ್ಯೆಯನ್ನು ಎದುರಿಸುತ್ತಿರುವ ಗಂಭೀರ ಅಪಾಯವನ್ನು ನಿವಾರಿಸಲು ಮತ್ತು ಗಾಯಗಳು, ತೀವ್ರವಾದ ಹಸಿವಿನಿಂದ ಬಳಲುತ್ತಿರುವ ಜನರಿಗೆ ತುರ್ತು ಸಹಾಯ ಮಾಡುವಂತೆ ಅಂತರಾಷ್ಟ್ರೀಯ ಸಮುದಾಯಕ್ಕೆ ಕರೆ ನೀಡಿದ್ದಾರೆ.

ಆಸ್ಪತ್ರೆಗಳಿಗೆ ಔಷಧಗಳು, ವೈದ್ಯಕೀಯ ಸರಬರಾಜುಗಳು ಮತ್ತು ಇಂಧನವನ್ನು ಪೂರೈಸುವ ಸಾಮರ್ಥ್ಯವು ಸೀಮಿತವಾಗಿದೆ. ಇತ್ತೀಚಿನ WHO ಮೌಲ್ಯಮಾಪನಗಳ ಪ್ರಕಾರ ಗಾಝಾದಲ್ಲಿ 13 ಭಾಗಶಃ ಕಾರ್ಯನಿರ್ವಹಿಸುವ ಆಸ್ಪತ್ರೆಗಳನ್ನು ಹೊಂದಿದೆ ಮತ್ತು 21 ಆಸ್ಪತ್ರೆಗಳು ಕಾರ್ಯನಿರ್ವಹಿಸುತ್ತಿಲ್ಲ ಎಂದು ಹೇಳಿದೆ. ನಾಗರಿಕರನ್ನು ಮತ್ತಷ್ಟು ಹಿಂಸಾಚಾರದಿಂದ ರಕ್ಷಿಸಲು ಮತ್ತು ಮತ್ತು ಶಾಂತಿ ಸ್ಥಾಪನೆಗೆ ಕದನ ವಿರಾಮ ಒಂದೇ ದಾರಿಯಾಗಿದೆ ಎಂದು ಟೆಡ್ರೊಸ್ ಹೇಳಿದರು.

ಕಳೆದ 24 ಗಂಟೆಗಳ ಅವಧಿಯಲ್ಲಿ ಗಾಝಾದ ಮೇಲೆ ಇಸ್ರೇಲ್‌ ನಡೆಸಿದ ದಾಳಿಯಲ್ಲಿ ಸುಮಾರು 210 ಪ್ಯಾಲೆಸ್ತೀನಿಯನ್ನರು ಸಾವನ್ನಪ್ಪಿದ್ದಾರೆ ಮತ್ತು 325 ಮಂದಿ ಗಾಯಗೊಂಡಿದ್ದಾರೆ ಎಂದು ಪ್ಯಾಲೇಸ್ತೀನಿಯನ್ ಆರೋಗ್ಯ ಸಚಿವಾಲಯ ತಿಳಿಸಿದೆ. ಇಸ್ರೇಲ್‌ ಮಿಲಿಟರಿ ಕ್ಲಿಯರೆನ್ಸ್ ಆದೇಶಗಳ ನಂತರ ಕನಿಷ್ಠ 1,00,000 ಸ್ಥಳಾಂತರಗೊಂಡ ಜನರು ರಾಫಾದಲ್ಲಿ ಸೇರಿದ್ದಾರೆ.

ಇದನ್ನು ಓದಿ: ಲೋಕಸಭೆ ಚುನಾವಣೆಗೆ ಮುನ್ನ ಇವಿಎಂ ಸರಿಪಡಿಸದಿದ್ದರೆ ಬಿಜೆಪಿ 400 ಸ್ಥಾನಗಳನ್ನು ಗೆಲ್ಲಬಹುದು: ಸ್ಯಾಮ್ ಪಿತ್ರೋಡಾ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...