Homeಕರ್ನಾಟಕಆಯ್ಕೆಯಾಗಿ ವರ್ಷವಾದರೂ ನೇಮಕಾತಿ ಆದೇಶವಿಲ್ಲ: PUC ಉಪನ್ಯಾಸಕ ಅಭ್ಯರ್ಥಿಗಳ ಆಕ್ರೋಶ!

ಆಯ್ಕೆಯಾಗಿ ವರ್ಷವಾದರೂ ನೇಮಕಾತಿ ಆದೇಶವಿಲ್ಲ: PUC ಉಪನ್ಯಾಸಕ ಅಭ್ಯರ್ಥಿಗಳ ಆಕ್ರೋಶ!

ಹೈಕೋರ್ಟ್ ಆದೇಶದ ಪ್ರಕಾರ, ಯಾವುದೇ ಸರ್ಕಾರಿ ಹುದ್ದೆಯ ನೇಮಕಾತಿ ಪ್ರಕ್ರಿಯೆ ಪ್ರಾರಂಭವಾದ 1 ವರ್ಷದೊಳಗೆ ಸಂಪೂರ್ಣ ಪ್ರಕ್ರಿಯೆ ಪೂರ್ಣಗೊಂಡು, ಅಭ್ಯರ್ಥಿಗಳು ಹುದ್ದೆಗೆ ವರದಿ ಮಾಡಿಕೊಳ್ಳಬೇಕು. ಅಧಿಸೂಚನೆ ಹೊರಡಿಸಿ 5 ವರ್ಷ ಕಳೆದಿದೆ. ಅಂತಿಮ ಪಟ್ಟಿ ಪ್ರಕಟವಾಗಿ 1 ವರ್ಷವಾಗಿದೆ. ಆದರೂ ನೇಮಕಾತಿ ಆದೇಶ ಸಿಕ್ಕಿಲ್ಲ.

- Advertisement -
- Advertisement -

ಸರ್ಕಾರಿ ಪದವಿ ಪೂರ್ವ ಕಾಲೇಜು (PUC) ಉಪನ್ಯಾಸಕರ ಹುದ್ದೆಗೆ ಆಯ್ಕೆಯಾಗಿರುವವರಿಗೆ ಈ ಕೂಡಲೇ ನೇಮಕಾತಿ ಪತ್ರ ನೀಡುವಂತೆ ಆದೇಶ ಹೊರಡಿಸಬೇಕೆಂದು ಆಗ್ರಹಿಸಿ ಉಪನ್ಯಾಸಕರಾಗಿ ಆಯ್ಕೆಯಾಗಿರುವ ಅಭ್ಯರ್ಥಿಗಳು ಕಳೆದ 3 ದಿನಗಳಿಂದ ಅಹೋರಾತ್ರಿ ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ ಇದುವರೆಗೂ ಸರ್ಕಾರ ಈ ಕಡೆಗೆ ಎಳ್ಳಷ್ಟೂ ಗಮನಹರಿಸಿಲ್ಲ.

2015 ರಲ್ಲಿ ಪ್ರಾರಂಭವಾದ PUC ಉಪನ್ಯಾಸಕರ ನೇಮಕಾತಿ ಪ್ರಕ್ರಿಯೆಯು ಕಾರಣಾಂತರಗಳಿಂದ ವಿಳಂಬವಾಗಿತ್ತು. ನಂತರ 2017ರಲ್ಲಿ ಮತ್ತೊಮ್ಮೆ ಅಧಿಸೂಚನೆ ಹೊರಡಿಸಿ, ಅರ್ಜಿ ಸಲ್ಲಿಸಲು ಮತ್ತೆ ಅವಕಾಶ ನೀಡಲಾಗಿತ್ತು. 2018 ರಲ್ಲಿ ಪರೀಕ್ಷೆ ನಡೆದು ಫಲಿತಾಂಶವೂ ಹೊರಬಿದ್ದಿತ್ತು. 2019 ಡಿಸಂಬರ್‌ನಲ್ಲಿ ಹುದ್ದೆಗೆ ಆಯ್ಕೆಯಾದವರು ಅಂತಿಮ ಪಟ್ಟಿಯನ್ನು ಪ್ರಕಟಿಸಲಾಗಿದೆ.

ಇದನ್ನೂ ಓದಿ: ನೆಟ್‌ವರ್ಕ್ ಸಮಸ್ಯೆ: ಆನ್‌ಲೈನ್ ತರಗತಿಗಾಗಿ 5 ಕಿಮೀ ನಡೆಯುವ ವಿದ್ಯಾರ್ಥಿಗಳು!

ಆದರೆ ಇದಾಗಿ ಒಂದು ವರ್ಷ ಕಳೆದರೂ ಇನ್ನೂ ನೇಮಕಾತಿ ಪತ್ರವನ್ನು ನೀಡದೇ ಸರ್ಕಾರ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ವಂಚಿಸುತ್ತಿದೆ.

ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಲ್ಲಿ ಒಬ್ಬರಾದ ಅಶೋಕ್ ಎಂಬುವವರು ಇದರ ಕುರಿತು ನಾನು ಗೌರಿ.ಕಾಂ ನೊಂದಿಗೆ ಮಾತನಾಡಿ, “ಇದರ ಹಿಂದೆ ಸರ್ಕಾರದ ಕೈವಾಡವಿದೆ. ನೇಮಕಾತಿ ಪ್ರಕ್ರಿಯೆ ಈಗಾಗಲೇ ವಿಳಂಬವಾಗಿದೆ. ಆದರೆ ಈಗ ಕೊರೊನಾ ಕಾರಣವೊಡ್ಡಿ ನಮಗೆ ವಂಚಿಸಲಾಗುತ್ತಿದೆ. ಈ ಅಧಿಸೂಚನೆ ಹೊರಬಿದ್ದಿದ್ದು ಕಳೆದ 5 ವರ್ಷಗಳ ಹಿಂದೆ. ಪರೀಕ್ಷೆ ನಡೆದು ಫಲಿತಾಂಶ ಬಂದು ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸಿದಾಗ ಯಾವ ಕೊರೊನಾ ರೋಗವೂ ಇರಲಿಲ್ಲ. ಆದರೂ ಸರ್ಕಾರ ಅಸಮರ್ಥನೀಯ ನೆಪವೊಡ್ಡುತ್ತಿದೆ” ಎಂದು ಹೇಳಿದರು.

ಇದನ್ನೂ ಓದಿ: ಬಾಕಿ ಸಂಬಳ ಹಾಗೂ ಇತರ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಅತಿಥಿ ಉಪನ್ಯಾಸಕರಿಂದ ಪ್ರತಿಭಟನೆ

“ನಮಗೆ ನೇಮಕಾತಿ ನೀಡಿದರೆ ಸಂಬಳ ನೀಡಬೇಕಾಗುತ್ತದೆ. ಬದಲಿಗೆ ಕೊರೊನಾ ನೆಪವೊಡ್ಡಿದರೆ ಆ ಹಣವನ್ನು ಉಳಿಸಿಕೊಳ್ಳಬಹುದು ಎಂಬ ಹುನ್ನಾರದಲ್ಲಿ ಈ ಸರ್ಕಾರ ಯೋಚಿಸುತ್ತಿದೆ. ಈಗಾಗಲೆ ಯೂಟ್ಯೂಬ್‌ ಮತ್ತು ಆನ್ಲೈನ್ ತರಗತಿಗಳು ಆರಂಭವಾಗಿದ್ದು, ಈಗಿರುವ ಉಪನ್ಯಾಸಕರಿಂದಲೇ ಸರಿದೂಗಿಸಿಕೊಳ್ಳಬಹುದು ಎಂದು ಸರ್ಕಾರ ಎಣಿಸುತ್ತಿದೆ. ಆದರೆ ಹೈಕೋರ್ಟ್ ಆದೇಶದ ಪ್ರಕಾರ, ಯಾವುದೇ ಸರ್ಕಾರಿ ಹುದ್ದೆಯ ನೇಮಕಾತಿ ಪ್ರಕ್ರಿಯೆ ಪ್ರಾರಂಭವಾದ 1 ವರ್ಷದೊಳಗೆ ಸಂಪೂರ್ಣ ಪ್ರಕ್ರಿಯೆ ಪೂರ್ಣಗೊಂಡು, ಅಭ್ಯರ್ಥಿಗಳು ಹುದ್ದೆಗೆ ವರದಿ ಮಾಡಿಕೊಳ್ಳಬೇಕು. ಅಧಿಸೂಚನೆ ಹೊರಡಿಸಿ 5 ವರ್ಷ ಕಳೆದಿದೆ. ಅಂತಿಮ ಪಟ್ಟಿ ಪ್ರಕಟವಾಗಿ 1 ವರ್ಷವಾಗಿದೆ. ಆದರೂ ನಮಗೆ ನೇಮಕಾತಿ ಆದೇಶ ಸಿಕ್ಕಿಲ್ಲ.” ಎಂದು ಹೇಳಿದರು.

ಈಗಾಗಲೆ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು  ಶಿಕ್ಷಣ ಸಚಿವರಾದ ಸುರೇಶ್ ಕುಮಾರ್ ಪ್ರತಿಭಟನಾಕಾರರಿಗೆ ಭರವಸೆ ನೀಡಿದ್ದಾರೆ. ಆದರೆ ಈ ಭರವಸೆಗೆ ಮಣಿಯದ ಪ್ರತಿಭಟನಾಕಾರರು, ನಿಯಮಾನುಸಾರ ನೇಮಕಾತಿ ಆದೇಶ ಹೊರಡಿಸುವಂತೆ ಪಟ್ಟು ಹಿಡಿದಿದ್ದಾರೆ.

ಇದನ್ನೂ ಓದಿ: 35,000 ಕ್ಕೂ ಹೆಚ್ಚು ಖಾಸಗಿ ಶಾಲಾ ಶಿಕ್ಷಕರು ವಜಾ: 8 ಅತಿಥಿ ಉಪನ್ಯಾಸಕರ ಆತ್ಮಹತ್ಯೆ!

ಸರ್ಕಾರ ಈ ಧೊರಣೆಯ ವಿರುದ್ಧ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯವನವರು ದನಿಯೆತ್ತಿದ್ದು, ಶೀಘ್ರವೇ ನೇಮಕಾತಿ ಆದೇಶ ನೀಡುವಂತೆ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಪ್ರತಿಭಾಟನಾ ನಿರತರನ್ನು ಭೇಟಿ ಮಾಡಿ, ಅವರನ್ನು ಬೆಂಬಲಿಸಿ, ಆದೇಶ ನಿಡುವಂತೆ ಸರ್ಕಾರವನ್ನು ಒತ್ತಾಯಿಸುವುದಾಗಿ ಭರವಸೆ ನೀಡಿದರು.


ಇದನ್ನೂ ಓದಿ: ಲಾಕ್‍ಡೌನ್ – ಮನೆಯಿಂದಲೇ ಕೆಲಸ, ಮನೆಕೆಲಸ ಮತ್ತು ಮಹಿಳೆ! – ಮಲ್ಲಿಗೆ ಸಿರಿಮನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...