Homeಕರ್ನಾಟಕಆಯ್ಕೆಯಾಗಿ ವರ್ಷವಾದರೂ ನೇಮಕಾತಿ ಆದೇಶವಿಲ್ಲ: PUC ಉಪನ್ಯಾಸಕ ಅಭ್ಯರ್ಥಿಗಳ ಆಕ್ರೋಶ!

ಆಯ್ಕೆಯಾಗಿ ವರ್ಷವಾದರೂ ನೇಮಕಾತಿ ಆದೇಶವಿಲ್ಲ: PUC ಉಪನ್ಯಾಸಕ ಅಭ್ಯರ್ಥಿಗಳ ಆಕ್ರೋಶ!

ಹೈಕೋರ್ಟ್ ಆದೇಶದ ಪ್ರಕಾರ, ಯಾವುದೇ ಸರ್ಕಾರಿ ಹುದ್ದೆಯ ನೇಮಕಾತಿ ಪ್ರಕ್ರಿಯೆ ಪ್ರಾರಂಭವಾದ 1 ವರ್ಷದೊಳಗೆ ಸಂಪೂರ್ಣ ಪ್ರಕ್ರಿಯೆ ಪೂರ್ಣಗೊಂಡು, ಅಭ್ಯರ್ಥಿಗಳು ಹುದ್ದೆಗೆ ವರದಿ ಮಾಡಿಕೊಳ್ಳಬೇಕು. ಅಧಿಸೂಚನೆ ಹೊರಡಿಸಿ 5 ವರ್ಷ ಕಳೆದಿದೆ. ಅಂತಿಮ ಪಟ್ಟಿ ಪ್ರಕಟವಾಗಿ 1 ವರ್ಷವಾಗಿದೆ. ಆದರೂ ನೇಮಕಾತಿ ಆದೇಶ ಸಿಕ್ಕಿಲ್ಲ.

- Advertisement -
- Advertisement -

ಸರ್ಕಾರಿ ಪದವಿ ಪೂರ್ವ ಕಾಲೇಜು (PUC) ಉಪನ್ಯಾಸಕರ ಹುದ್ದೆಗೆ ಆಯ್ಕೆಯಾಗಿರುವವರಿಗೆ ಈ ಕೂಡಲೇ ನೇಮಕಾತಿ ಪತ್ರ ನೀಡುವಂತೆ ಆದೇಶ ಹೊರಡಿಸಬೇಕೆಂದು ಆಗ್ರಹಿಸಿ ಉಪನ್ಯಾಸಕರಾಗಿ ಆಯ್ಕೆಯಾಗಿರುವ ಅಭ್ಯರ್ಥಿಗಳು ಕಳೆದ 3 ದಿನಗಳಿಂದ ಅಹೋರಾತ್ರಿ ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ ಇದುವರೆಗೂ ಸರ್ಕಾರ ಈ ಕಡೆಗೆ ಎಳ್ಳಷ್ಟೂ ಗಮನಹರಿಸಿಲ್ಲ.

2015 ರಲ್ಲಿ ಪ್ರಾರಂಭವಾದ PUC ಉಪನ್ಯಾಸಕರ ನೇಮಕಾತಿ ಪ್ರಕ್ರಿಯೆಯು ಕಾರಣಾಂತರಗಳಿಂದ ವಿಳಂಬವಾಗಿತ್ತು. ನಂತರ 2017ರಲ್ಲಿ ಮತ್ತೊಮ್ಮೆ ಅಧಿಸೂಚನೆ ಹೊರಡಿಸಿ, ಅರ್ಜಿ ಸಲ್ಲಿಸಲು ಮತ್ತೆ ಅವಕಾಶ ನೀಡಲಾಗಿತ್ತು. 2018 ರಲ್ಲಿ ಪರೀಕ್ಷೆ ನಡೆದು ಫಲಿತಾಂಶವೂ ಹೊರಬಿದ್ದಿತ್ತು. 2019 ಡಿಸಂಬರ್‌ನಲ್ಲಿ ಹುದ್ದೆಗೆ ಆಯ್ಕೆಯಾದವರು ಅಂತಿಮ ಪಟ್ಟಿಯನ್ನು ಪ್ರಕಟಿಸಲಾಗಿದೆ.

ಇದನ್ನೂ ಓದಿ: ನೆಟ್‌ವರ್ಕ್ ಸಮಸ್ಯೆ: ಆನ್‌ಲೈನ್ ತರಗತಿಗಾಗಿ 5 ಕಿಮೀ ನಡೆಯುವ ವಿದ್ಯಾರ್ಥಿಗಳು!

ಆದರೆ ಇದಾಗಿ ಒಂದು ವರ್ಷ ಕಳೆದರೂ ಇನ್ನೂ ನೇಮಕಾತಿ ಪತ್ರವನ್ನು ನೀಡದೇ ಸರ್ಕಾರ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ವಂಚಿಸುತ್ತಿದೆ.

ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಲ್ಲಿ ಒಬ್ಬರಾದ ಅಶೋಕ್ ಎಂಬುವವರು ಇದರ ಕುರಿತು ನಾನು ಗೌರಿ.ಕಾಂ ನೊಂದಿಗೆ ಮಾತನಾಡಿ, “ಇದರ ಹಿಂದೆ ಸರ್ಕಾರದ ಕೈವಾಡವಿದೆ. ನೇಮಕಾತಿ ಪ್ರಕ್ರಿಯೆ ಈಗಾಗಲೇ ವಿಳಂಬವಾಗಿದೆ. ಆದರೆ ಈಗ ಕೊರೊನಾ ಕಾರಣವೊಡ್ಡಿ ನಮಗೆ ವಂಚಿಸಲಾಗುತ್ತಿದೆ. ಈ ಅಧಿಸೂಚನೆ ಹೊರಬಿದ್ದಿದ್ದು ಕಳೆದ 5 ವರ್ಷಗಳ ಹಿಂದೆ. ಪರೀಕ್ಷೆ ನಡೆದು ಫಲಿತಾಂಶ ಬಂದು ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸಿದಾಗ ಯಾವ ಕೊರೊನಾ ರೋಗವೂ ಇರಲಿಲ್ಲ. ಆದರೂ ಸರ್ಕಾರ ಅಸಮರ್ಥನೀಯ ನೆಪವೊಡ್ಡುತ್ತಿದೆ” ಎಂದು ಹೇಳಿದರು.

ಇದನ್ನೂ ಓದಿ: ಬಾಕಿ ಸಂಬಳ ಹಾಗೂ ಇತರ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಅತಿಥಿ ಉಪನ್ಯಾಸಕರಿಂದ ಪ್ರತಿಭಟನೆ

“ನಮಗೆ ನೇಮಕಾತಿ ನೀಡಿದರೆ ಸಂಬಳ ನೀಡಬೇಕಾಗುತ್ತದೆ. ಬದಲಿಗೆ ಕೊರೊನಾ ನೆಪವೊಡ್ಡಿದರೆ ಆ ಹಣವನ್ನು ಉಳಿಸಿಕೊಳ್ಳಬಹುದು ಎಂಬ ಹುನ್ನಾರದಲ್ಲಿ ಈ ಸರ್ಕಾರ ಯೋಚಿಸುತ್ತಿದೆ. ಈಗಾಗಲೆ ಯೂಟ್ಯೂಬ್‌ ಮತ್ತು ಆನ್ಲೈನ್ ತರಗತಿಗಳು ಆರಂಭವಾಗಿದ್ದು, ಈಗಿರುವ ಉಪನ್ಯಾಸಕರಿಂದಲೇ ಸರಿದೂಗಿಸಿಕೊಳ್ಳಬಹುದು ಎಂದು ಸರ್ಕಾರ ಎಣಿಸುತ್ತಿದೆ. ಆದರೆ ಹೈಕೋರ್ಟ್ ಆದೇಶದ ಪ್ರಕಾರ, ಯಾವುದೇ ಸರ್ಕಾರಿ ಹುದ್ದೆಯ ನೇಮಕಾತಿ ಪ್ರಕ್ರಿಯೆ ಪ್ರಾರಂಭವಾದ 1 ವರ್ಷದೊಳಗೆ ಸಂಪೂರ್ಣ ಪ್ರಕ್ರಿಯೆ ಪೂರ್ಣಗೊಂಡು, ಅಭ್ಯರ್ಥಿಗಳು ಹುದ್ದೆಗೆ ವರದಿ ಮಾಡಿಕೊಳ್ಳಬೇಕು. ಅಧಿಸೂಚನೆ ಹೊರಡಿಸಿ 5 ವರ್ಷ ಕಳೆದಿದೆ. ಅಂತಿಮ ಪಟ್ಟಿ ಪ್ರಕಟವಾಗಿ 1 ವರ್ಷವಾಗಿದೆ. ಆದರೂ ನಮಗೆ ನೇಮಕಾತಿ ಆದೇಶ ಸಿಕ್ಕಿಲ್ಲ.” ಎಂದು ಹೇಳಿದರು.

ಈಗಾಗಲೆ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು  ಶಿಕ್ಷಣ ಸಚಿವರಾದ ಸುರೇಶ್ ಕುಮಾರ್ ಪ್ರತಿಭಟನಾಕಾರರಿಗೆ ಭರವಸೆ ನೀಡಿದ್ದಾರೆ. ಆದರೆ ಈ ಭರವಸೆಗೆ ಮಣಿಯದ ಪ್ರತಿಭಟನಾಕಾರರು, ನಿಯಮಾನುಸಾರ ನೇಮಕಾತಿ ಆದೇಶ ಹೊರಡಿಸುವಂತೆ ಪಟ್ಟು ಹಿಡಿದಿದ್ದಾರೆ.

ಇದನ್ನೂ ಓದಿ: 35,000 ಕ್ಕೂ ಹೆಚ್ಚು ಖಾಸಗಿ ಶಾಲಾ ಶಿಕ್ಷಕರು ವಜಾ: 8 ಅತಿಥಿ ಉಪನ್ಯಾಸಕರ ಆತ್ಮಹತ್ಯೆ!

ಸರ್ಕಾರ ಈ ಧೊರಣೆಯ ವಿರುದ್ಧ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯವನವರು ದನಿಯೆತ್ತಿದ್ದು, ಶೀಘ್ರವೇ ನೇಮಕಾತಿ ಆದೇಶ ನೀಡುವಂತೆ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಪ್ರತಿಭಾಟನಾ ನಿರತರನ್ನು ಭೇಟಿ ಮಾಡಿ, ಅವರನ್ನು ಬೆಂಬಲಿಸಿ, ಆದೇಶ ನಿಡುವಂತೆ ಸರ್ಕಾರವನ್ನು ಒತ್ತಾಯಿಸುವುದಾಗಿ ಭರವಸೆ ನೀಡಿದರು.


ಇದನ್ನೂ ಓದಿ: ಲಾಕ್‍ಡೌನ್ – ಮನೆಯಿಂದಲೇ ಕೆಲಸ, ಮನೆಕೆಲಸ ಮತ್ತು ಮಹಿಳೆ! – ಮಲ್ಲಿಗೆ ಸಿರಿಮನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...