Homeಮುಖಪುಟಕೃಷಿ ಸುಗ್ರೀವಾಜ್ಞೆಗಳಿಗೆ ವರ್ಷ: ಬಿಜೆಪಿ ಶಾಸಕರು, ಸಂಸದರ ಮನೆ ಮುಂದೆ ಪ್ರತಿಭಟನೆಗೆ ರೈತರ ಕರೆ

ಕೃಷಿ ಸುಗ್ರೀವಾಜ್ಞೆಗಳಿಗೆ ವರ್ಷ: ಬಿಜೆಪಿ ಶಾಸಕರು, ಸಂಸದರ ಮನೆ ಮುಂದೆ ಪ್ರತಿಭಟನೆಗೆ ರೈತರ ಕರೆ

- Advertisement -
- Advertisement -

ಕಳೆದ ವರ್ಷ ಸಾಂಕ್ರಾಮಿಕದ ಕಾರಣಕ್ಕಾಗಿ ಹೇರಲಾದ ಲಾಕ್‌ಡೌನ್‌ ಸಮಯದಲ್ಲಿ ಜೂನ್ 5ರಂದು ಸುಗ್ರೀವಾಜ್ಞೆಗಳ ಮೂಲಕ ಹೊಸ ಕೃಷಿ ಕಾನೂನುಗಳನ್ನು ಮೋದಿ ನೇತೃತ್ವದ ಸರ್ಕಾರ ಜಾರಿ ಮಾಡಿತ್ತು. ಅದಕ್ಕೆ ಒಂದು ವರ್ಷ ತುಂಬುತ್ತಿದ್ದು ಇದೇ ಜೂನ್ 5 ರಂದು ಕೃಷಿ ಕಾನೂನುಗಳನ್ನು ವಿರೋಧಿಸಿ ಬಿಜೆಪಿ ಸಂಸದರು ಮತ್ತು ಶಾಸಕರ ಕಚೇರಿಗಳ ಮುಂದೆ ಕೃಷಿ ಕಾನೂನುಗಳ ಪ್ರತಿಗಳನ್ನು ಸುಟ್ಟು `ಸಂಪೂರ್ಣ ಕ್ರಾಂತಿ ದಿನ’ವನ್ನಾಗಿ ಆಚರಿಸಲು ಸಂಯುಕ್ತ ಕಿಸಾನ್ ಮೋರ್ಚಾ ನಿರ್ಧರಿಸಿದೆ.

ಕೇಂದ್ರ ಸರ್ಕಾರ ಸುಗ್ರೀವಾಜ್ಞೆಗಳ ಮೂಲಕ ಜಾರಿಗೆ ತಂದಿದ್ದ ವಿವಾದಾತ್ಮಕ ಕೃಷಿ ಕಾಯ್ದೆಗಳನ್ನು ಸೆಪ್ಟೆಂಬರ್ನಲ್ಲಿ ಸಂಸತ್ತಿನಲ್ಲಿ ಅಂಗೀಕರಿಸಿತು. ಅವುಗಳಿಗೆ ರಾಷ್ಟ್ರಪತಿಯವರು ಸಹಿ ಹಾಕಿ ಅನಮೋದನೆ ನೀಡಿದ್ದರು. ಆದರೆ ಇವುಗಳ ವಿರುದ್ಧ ರೈತರು ಕಳೆದ ಸೆಪ್ಟಂಬರ್ನಿಂದಲೇ ಹೋರಾಟ ಆರಂಭಿಸಿದರು. ರೈತ ವಿರೋಧಿಯಾದ ಹೊಸ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಹಾಗೂ ರೈತರ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತರಿಪಡಿಸುವ ಕಾನೂನು ಜಾರಿಗೆ ಒತ್ತಾಯಿಸಿ ಕಳೆದ ನವೆಂಬರ್ನಿಂದ ರೈತರು ದೆಹಲಿ ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

1974 ರಲ್ಲಿ ಜಯಪ್ರಕಾಶ್ ನಾರಾಯಣ್ ಅವರು ಸಂಪೂರ್ಣ ಕ್ರಾಂತಿ’ ಎಂದು ಘೋಷಿಸಿ ಅಂದಿನ ಕೇಂದ್ರ ಸರ್ಕಾರದ ವಿರುದ್ಧ ಬೃಹತ್ ಆಂದೋಲನವನ್ನು ಪ್ರಾರಂಭಿಸಿದ್ದರು. ಅದೇ ನೆನಪಿನಲ್ಲಿ ಸಂಯುಕ್ತ ಕಿಸಾನ್ ಮೋರ್ಚಾ ಹೊಸ ಕೃಷಿ ಕಾಯ್ದೆಗಳ ಪ್ರತಿಗಳನ್ನು ಸುಟ್ಟು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಿದೆ. 1974ರ ಜೂನ್ 5ರಂದು ಪಾಟ್ನಾದ ಗಾಂಧಿ ಮೈದಾನದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಜಯಪ್ರಕಾಶ್ ನಾರಾಯಣ್ ಅವರು ಬಿಹಾರದ ಜನರಿಗೆಸಂಪೂರ್ಣ ಕ್ರಾಂತಿ ದಿವಸ್’ ಎಂದು ಆಚರಿಸಿಲು ಕರೆ ನೀಡಿದ್ದರು. ಹೊಸ ಸಾಮಾಜಿಕ ವ್ಯವಸ್ಥೆ ರೂಪಿಸಲು ಪ್ರತಿ ಹಳ್ಳಿಯಲ್ಲೂ `ಜನತಾ ಸರ್ಕಾರ್’ ರಚಿಸಿದ್ದರು.

ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಸಂಯುಕ್ತ ಕಿಸಾನ್ ಮೋರ್ಚಾ, ‘ಜೂನ್ 5ರಂದು ದೇಶಾದ್ಯಂತ ಸಂಪೂರ್ಣ ಕ್ರಾಂತಿ ದಿವಸ್ ಆಚರಿಸಲಾಗುವುದು ಎಂದು ತಿಳಿಸಿದೆ. ಅಂದು ಬಿಜೆಪಿ ಸಂಸದರು, ಶಾಸಕರು ಮತ್ತು ಜನಪ್ರತಿನಿಧಿಗಳ ಕಚೇರಿಗಳ ಮುಂದೆ ಮೂರು ಕೃಷಿ ಕಾನೂನುಗಳ ಪ್ರತಿಗಳನ್ನು ಸುಡುವಂತೆ ನಾವು ನಾಗರೀಕರಿಗೆ ಮನವಿ ಮಾಡುತ್ತೇವೆ. ಕೃಷಿ ಕಾನೂನುಗಳನ್ನು ರದ್ದುಗೊಳಿಸುವಂತೆ ಸರ್ಕಾರವನ್ನು ಒತ್ತಾಯಿಸುವಂತೆ ಹೇಳಿಕೆಯಲ್ಲಿ ತಿಳಿಸಿದೆ.

ಇದೇ ಸಂದರ್ಭದಲ್ಲಿ ಹೋರಾಟನಿರತ ರೈತರು ಮತ್ತು ಗ್ರಾಮಗಳ ಅಭಿವೃದ್ಧಿಗೆ ಕೊಡುಗೆ ನೀಡಿದ್ದ ಮಾಜಿ ಪ್ರಧಾನಿ ಚೌಧರಿ ಚರಣ್ ಸಿಂಗ್ ಪುಣ್ಯಸ್ಮರಣೆ ಅಂಗವಾಗಿ ಅವರಿಗೆ ಗೌರವ ಸಲ್ಲಿಸಿದರು.

ಚೌಧರಿ ಚರಣ್ ಸಿಂಗ್ ಅವರು ದೇಶವನ್ನುಆತ್ಮನಿರ್ಭರ್’ (ಸ್ವಾವಲಂಬಿ)ಯನ್ನಾಗಿ ಮಾಡಲು ಬಯಸಿದ್ದರು. ಇದರಲ್ಲಿ ರೈತರು, ಕಾರ್ಮಿಕರು ಮತ್ತು ಹಳ್ಳಿಗಳ ಜನರು ಸಂತೋಷದಿಂದ ಬದುಕಬಲ್ಲರು’. ಇಂದಿನ ಸರ್ಕಾರದ ಬಗ್ಗೆ ರೈತರಿಗಿರುವ ಅಪನಂಬಿಕೆ ಚೌಧರಿ ಚರಣ್ ಸಿಂಗ್ ಅವರನ್ನು ನೆನಪಿಸುತ್ತದೆ. ಅವರು ರೈತರ ಪ್ರತಿಯೊಂದು ಸಮಸ್ಯೆ ಮತ್ತು ನೋವನ್ನು ಸಮಾಜ ಮತ್ತು ಸರ್ಕಾರದ ಮುಂದೆ ಇರಿಸಿ ಪರಿಹರಿಸುತ್ತಿದ್ದರು’ ಎಂದು ರೈತರು ನೆನಪಿಸಿಕೊಂಡರು.

ರೈತ ಹೋರಾಟವನ್ನು ಬಲಪಡಿಸಲು ಪಂಜಾಬಿನ ದೋಬಾ ಪ್ರದೇಶದ ಅತಿ ಹೆಚ್ಚು ಸಂಖ್ಯೆಯಲ್ಲಿ ರೈತರು ಶನಿವಾರ ಪ್ರತಿಭಟನಾ ಗಡಿಗಳಿಗೆ ಬಂದಿದ್ದಾರೆ. ಆಂದೋಲನವನ್ನು ಮುನ್ನಡೆಸುವ ನಿಟ್ಟಿನಲ್ಲಿ ಇನ್ನೂ ಅನೇಕ ರೈತರು ಬಂದು ಸೇರುವ ನಿರೀಕ್ಷೆಯನ್ನು ಸಂಯುಕ್ತ ಕಿಸಾನ್ ಮೋರ್ಚಾ ವ್ಯಕ್ತಪಡಿಸಿದೆ.

ಕೃಪೆ: ಅನ್ನದ ಋಣ


ಇದನ್ನೂ ಓದಿ: ರೈತ ಹೋರಾಟಕ್ಕೆ ಬೆಂಬಲ ಸೂಚಿಸಿದ ಅಮೆರಿಕಾದ ಕೃಷಿಕರು, ತಜ್ಞರು ಮತ್ತು ರಾಜಕಾರಣಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...