Homeಮುಖಪುಟಕೃಷಿ ಸುಗ್ರೀವಾಜ್ಞೆಗಳಿಗೆ ವರ್ಷ: ಬಿಜೆಪಿ ಶಾಸಕರು, ಸಂಸದರ ಮನೆ ಮುಂದೆ ಪ್ರತಿಭಟನೆಗೆ ರೈತರ ಕರೆ

ಕೃಷಿ ಸುಗ್ರೀವಾಜ್ಞೆಗಳಿಗೆ ವರ್ಷ: ಬಿಜೆಪಿ ಶಾಸಕರು, ಸಂಸದರ ಮನೆ ಮುಂದೆ ಪ್ರತಿಭಟನೆಗೆ ರೈತರ ಕರೆ

- Advertisement -
- Advertisement -

ಕಳೆದ ವರ್ಷ ಸಾಂಕ್ರಾಮಿಕದ ಕಾರಣಕ್ಕಾಗಿ ಹೇರಲಾದ ಲಾಕ್‌ಡೌನ್‌ ಸಮಯದಲ್ಲಿ ಜೂನ್ 5ರಂದು ಸುಗ್ರೀವಾಜ್ಞೆಗಳ ಮೂಲಕ ಹೊಸ ಕೃಷಿ ಕಾನೂನುಗಳನ್ನು ಮೋದಿ ನೇತೃತ್ವದ ಸರ್ಕಾರ ಜಾರಿ ಮಾಡಿತ್ತು. ಅದಕ್ಕೆ ಒಂದು ವರ್ಷ ತುಂಬುತ್ತಿದ್ದು ಇದೇ ಜೂನ್ 5 ರಂದು ಕೃಷಿ ಕಾನೂನುಗಳನ್ನು ವಿರೋಧಿಸಿ ಬಿಜೆಪಿ ಸಂಸದರು ಮತ್ತು ಶಾಸಕರ ಕಚೇರಿಗಳ ಮುಂದೆ ಕೃಷಿ ಕಾನೂನುಗಳ ಪ್ರತಿಗಳನ್ನು ಸುಟ್ಟು `ಸಂಪೂರ್ಣ ಕ್ರಾಂತಿ ದಿನ’ವನ್ನಾಗಿ ಆಚರಿಸಲು ಸಂಯುಕ್ತ ಕಿಸಾನ್ ಮೋರ್ಚಾ ನಿರ್ಧರಿಸಿದೆ.

ಕೇಂದ್ರ ಸರ್ಕಾರ ಸುಗ್ರೀವಾಜ್ಞೆಗಳ ಮೂಲಕ ಜಾರಿಗೆ ತಂದಿದ್ದ ವಿವಾದಾತ್ಮಕ ಕೃಷಿ ಕಾಯ್ದೆಗಳನ್ನು ಸೆಪ್ಟೆಂಬರ್ನಲ್ಲಿ ಸಂಸತ್ತಿನಲ್ಲಿ ಅಂಗೀಕರಿಸಿತು. ಅವುಗಳಿಗೆ ರಾಷ್ಟ್ರಪತಿಯವರು ಸಹಿ ಹಾಕಿ ಅನಮೋದನೆ ನೀಡಿದ್ದರು. ಆದರೆ ಇವುಗಳ ವಿರುದ್ಧ ರೈತರು ಕಳೆದ ಸೆಪ್ಟಂಬರ್ನಿಂದಲೇ ಹೋರಾಟ ಆರಂಭಿಸಿದರು. ರೈತ ವಿರೋಧಿಯಾದ ಹೊಸ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಹಾಗೂ ರೈತರ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತರಿಪಡಿಸುವ ಕಾನೂನು ಜಾರಿಗೆ ಒತ್ತಾಯಿಸಿ ಕಳೆದ ನವೆಂಬರ್ನಿಂದ ರೈತರು ದೆಹಲಿ ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

1974 ರಲ್ಲಿ ಜಯಪ್ರಕಾಶ್ ನಾರಾಯಣ್ ಅವರು ಸಂಪೂರ್ಣ ಕ್ರಾಂತಿ’ ಎಂದು ಘೋಷಿಸಿ ಅಂದಿನ ಕೇಂದ್ರ ಸರ್ಕಾರದ ವಿರುದ್ಧ ಬೃಹತ್ ಆಂದೋಲನವನ್ನು ಪ್ರಾರಂಭಿಸಿದ್ದರು. ಅದೇ ನೆನಪಿನಲ್ಲಿ ಸಂಯುಕ್ತ ಕಿಸಾನ್ ಮೋರ್ಚಾ ಹೊಸ ಕೃಷಿ ಕಾಯ್ದೆಗಳ ಪ್ರತಿಗಳನ್ನು ಸುಟ್ಟು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಿದೆ. 1974ರ ಜೂನ್ 5ರಂದು ಪಾಟ್ನಾದ ಗಾಂಧಿ ಮೈದಾನದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಜಯಪ್ರಕಾಶ್ ನಾರಾಯಣ್ ಅವರು ಬಿಹಾರದ ಜನರಿಗೆಸಂಪೂರ್ಣ ಕ್ರಾಂತಿ ದಿವಸ್’ ಎಂದು ಆಚರಿಸಿಲು ಕರೆ ನೀಡಿದ್ದರು. ಹೊಸ ಸಾಮಾಜಿಕ ವ್ಯವಸ್ಥೆ ರೂಪಿಸಲು ಪ್ರತಿ ಹಳ್ಳಿಯಲ್ಲೂ `ಜನತಾ ಸರ್ಕಾರ್’ ರಚಿಸಿದ್ದರು.

ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಸಂಯುಕ್ತ ಕಿಸಾನ್ ಮೋರ್ಚಾ, ‘ಜೂನ್ 5ರಂದು ದೇಶಾದ್ಯಂತ ಸಂಪೂರ್ಣ ಕ್ರಾಂತಿ ದಿವಸ್ ಆಚರಿಸಲಾಗುವುದು ಎಂದು ತಿಳಿಸಿದೆ. ಅಂದು ಬಿಜೆಪಿ ಸಂಸದರು, ಶಾಸಕರು ಮತ್ತು ಜನಪ್ರತಿನಿಧಿಗಳ ಕಚೇರಿಗಳ ಮುಂದೆ ಮೂರು ಕೃಷಿ ಕಾನೂನುಗಳ ಪ್ರತಿಗಳನ್ನು ಸುಡುವಂತೆ ನಾವು ನಾಗರೀಕರಿಗೆ ಮನವಿ ಮಾಡುತ್ತೇವೆ. ಕೃಷಿ ಕಾನೂನುಗಳನ್ನು ರದ್ದುಗೊಳಿಸುವಂತೆ ಸರ್ಕಾರವನ್ನು ಒತ್ತಾಯಿಸುವಂತೆ ಹೇಳಿಕೆಯಲ್ಲಿ ತಿಳಿಸಿದೆ.

ಇದೇ ಸಂದರ್ಭದಲ್ಲಿ ಹೋರಾಟನಿರತ ರೈತರು ಮತ್ತು ಗ್ರಾಮಗಳ ಅಭಿವೃದ್ಧಿಗೆ ಕೊಡುಗೆ ನೀಡಿದ್ದ ಮಾಜಿ ಪ್ರಧಾನಿ ಚೌಧರಿ ಚರಣ್ ಸಿಂಗ್ ಪುಣ್ಯಸ್ಮರಣೆ ಅಂಗವಾಗಿ ಅವರಿಗೆ ಗೌರವ ಸಲ್ಲಿಸಿದರು.

ಚೌಧರಿ ಚರಣ್ ಸಿಂಗ್ ಅವರು ದೇಶವನ್ನುಆತ್ಮನಿರ್ಭರ್’ (ಸ್ವಾವಲಂಬಿ)ಯನ್ನಾಗಿ ಮಾಡಲು ಬಯಸಿದ್ದರು. ಇದರಲ್ಲಿ ರೈತರು, ಕಾರ್ಮಿಕರು ಮತ್ತು ಹಳ್ಳಿಗಳ ಜನರು ಸಂತೋಷದಿಂದ ಬದುಕಬಲ್ಲರು’. ಇಂದಿನ ಸರ್ಕಾರದ ಬಗ್ಗೆ ರೈತರಿಗಿರುವ ಅಪನಂಬಿಕೆ ಚೌಧರಿ ಚರಣ್ ಸಿಂಗ್ ಅವರನ್ನು ನೆನಪಿಸುತ್ತದೆ. ಅವರು ರೈತರ ಪ್ರತಿಯೊಂದು ಸಮಸ್ಯೆ ಮತ್ತು ನೋವನ್ನು ಸಮಾಜ ಮತ್ತು ಸರ್ಕಾರದ ಮುಂದೆ ಇರಿಸಿ ಪರಿಹರಿಸುತ್ತಿದ್ದರು’ ಎಂದು ರೈತರು ನೆನಪಿಸಿಕೊಂಡರು.

ರೈತ ಹೋರಾಟವನ್ನು ಬಲಪಡಿಸಲು ಪಂಜಾಬಿನ ದೋಬಾ ಪ್ರದೇಶದ ಅತಿ ಹೆಚ್ಚು ಸಂಖ್ಯೆಯಲ್ಲಿ ರೈತರು ಶನಿವಾರ ಪ್ರತಿಭಟನಾ ಗಡಿಗಳಿಗೆ ಬಂದಿದ್ದಾರೆ. ಆಂದೋಲನವನ್ನು ಮುನ್ನಡೆಸುವ ನಿಟ್ಟಿನಲ್ಲಿ ಇನ್ನೂ ಅನೇಕ ರೈತರು ಬಂದು ಸೇರುವ ನಿರೀಕ್ಷೆಯನ್ನು ಸಂಯುಕ್ತ ಕಿಸಾನ್ ಮೋರ್ಚಾ ವ್ಯಕ್ತಪಡಿಸಿದೆ.

ಕೃಪೆ: ಅನ್ನದ ಋಣ


ಇದನ್ನೂ ಓದಿ: ರೈತ ಹೋರಾಟಕ್ಕೆ ಬೆಂಬಲ ಸೂಚಿಸಿದ ಅಮೆರಿಕಾದ ಕೃಷಿಕರು, ತಜ್ಞರು ಮತ್ತು ರಾಜಕಾರಣಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...