Homeಮುಖಪುಟಪಾಲ್ಘರ್‌ ಗುಂಪು ಹತ್ಯೆಗೆ ಒಂದು ವರ್ಷ- ಏಳು ಚಾರ್ಜ್‌ಶೀಟ್ ಸಲ್ಲಿಕೆ; ಏನಾಗಿತ್ತುಅಂದು?

ಪಾಲ್ಘರ್‌ ಗುಂಪು ಹತ್ಯೆಗೆ ಒಂದು ವರ್ಷ- ಏಳು ಚಾರ್ಜ್‌ಶೀಟ್ ಸಲ್ಲಿಕೆ; ಏನಾಗಿತ್ತುಅಂದು?

ಬಿಜೆಪಿ ಸೇರಿದಂತೆ ಕೆಲವು ಮಾಧ್ಯಮಗಳು ಘಟನೆಗೆ ಕೋಮು ಆಯಾಮ ನೀಡಲು ಪ್ರಯತ್ನಿಸಿತ್ತು.

- Advertisement -
- Advertisement -

ಮಹಾರಾಷ್ಟ್ರದಲ್ಲಿ ಪಾಲ್ಘರ್ ಗುಂಪು ಹತ್ಯೆ ಘಟನೆ ನಡೆದು ಇಂದಿಗೆ ಒಂದು ವರ್ಷವಾಗಿದೆ. ಘಟನೆಯಲ್ಲಿ ಇಬ್ಬರು ಸಾಧುಗಳು ಮತ್ತು ಅವರ ಚಾಲಕನನ್ನು ಮಕ್ಕಳ ಕಳ್ಳರು ಎಂಬ ಅನುಮಾನದ ಮೇಲೆ ಜನರ ಗುಂಪೊಂದು ಹೊಡೆದೆ ಹತ್ಯೆ ಮಾಡಿತ್ತು. ಈ ಪ್ರಕರಣದಲ್ಲಿ ನೋಂದಾಯಿಸಲಾದ ಮೂರು ಎಫ್ಐಆರ್‌‌ಗಳಲ್ಲಿ ರಾಜ್ಯ ಸಿಐಡಿಯು ಏಳು ಚಾರ್ಜ್‌ಶೀಟ್‌‌ಗಳನ್ನು ಸಲ್ಲಿಸಿದೆ.

ಈ ಪ್ರಕರಣದಲ್ಲಿ 251 ವಯಸ್ಕರನ್ನು ಬಂಧಿಸಲಾಗಿದ್ದು, 15 ಬಾಲಾಪರಾಧಿಗಳನ್ನು ಬಂಧಿಸಲಾಗಿದೆ. ಬಂಧಿತರಲ್ಲಿ, ಘಟನೆಯಲ್ಲಿ ಪ್ರಮುಖ ಪಾತ್ರ ವಹಿಸಿದ 75 ಮಂದಿ ಇನ್ನೂ ಜೈಲುಗಳಲ್ಲಿ ಇದ್ದಾರೆ. ಈ ಪ್ರಕರಣದಲ್ಲಿ ವಾಂಟೆಡ್ ಆರೋಪಿಗಳೆಂದು ಹೆಸರಿಸಲಾದ ಇನ್ನೂ 52 ಜನರನ್ನು ಸಿಐಡಿ ಹುಡುಕುತ್ತಿದೆ.

ಇದನ್ನೂ ಓದಿ: Fact check: ಪಾಲ್ಘರ್ ಗುಂಪು ಹತ್ಯೆಯ ಬಗ್ಗೆ ಸುಳ್ಳು ವರದಿ ಮಾಡಿದ ಪಿಟಿಐ

ಘಟನೆಯ ನಡೆದ ಕೂಡಲೇ ಸಾಮಾಜಿಕ ಜಾಲತಾಣದಲ್ಲಿ ಕೋಮು ಬಣ್ಣ ಹಚ್ಚಲಾಗಿತ್ತು. ಬಿಜೆಪಿ ಸೇರಿದಂತೆ ಕೆಲವು ಮಾಧ್ಯಮಗಳು ಕೂಡಾ ಘಟನೆಗೆ ಕೋಮು ಆಯಾಮ ನೀಡಲು ಪ್ರಯತ್ನಿಸಿತ್ತು. ಆದರೆ ಸಿಐಡಿ ಇದು ಕೋಮು ಆಧಾರಿತ ಹತ್ಯೆ ಅಲ್ಲ ಎಂದು ಹೇಳಿದೆ.

ಘಟನೆ ನಡೆದ ಕೂಡಲೇ ಮಹಾರಾಷ್ಟ್ರದ ವಿರೋಧ ಪಕ್ಷದ ನಾಯಕ ದೇವೇಂದ್ರ ಫಡ್ನವೀಸ್ ಮತ್ತು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಈ ಘಟನೆ ಕುರಿತು ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಿದ್ದರು. ಕಳೆದ ವರ್ಷ ಲಾಕ್ ಡೌನ್ ಸಮಯದಲ್ಲಿ ನಡೆದ ಘಟನೆಯ ಬಗ್ಗೆ ಬಿಜೆಪಿಯು “ಕೋಮು ರಾಜಕೀಯ” ಮಾಡುತ್ತಿದೆ ಎಂದು ಮಹಾ ವಿಕಾಸ್ ಅಘಾಡಿ ಸರ್ಕಾರ ಆರೋಪಿಸಿತ್ತು.

ಕಳೆದ ವರ್ಷ ಏಪ್ರಿಲ್ 16 ರಂದು ಸಾಧು ಮಹಂತ್ ಕಲ್ಪವೃಕ್ಷ ಗಿರಿ (70) ಸುಶಿಲ್‌‌ ಗಿರಿ ಮಹಾರಾಜ್ (35) ಮತ್ತು ಅವರ ಚಾಲಕ ನಿಲೇಶ್ ತೆಲ್ಗಡೆ (30) ಅವರು ವಾಹನವೊಂದರಲ್ಲಿ ಮುಂಬೈಯಿಂದ ಸೂರತ್‌ಗೆ ಪ್ರಯಾಣಿಸುತ್ತಿದ್ದರು. ಆದರೆ ಮಹಾರಾಷ್ಟ್ರದ ಬುಡಕಟ್ಟು ಪ್ರಾಬಲ್ಯದ ಪಾಲ್ಘರ್ ಜಿಲ್ಲೆಯ ದಹನು ತಾಲ್ಲೂಕಿನಲ್ಲಿನ ಪ್ರದೇಶವೊಂದರಲ್ಲಿ ಜನರು ಮಕ್ಕಳ ಕಳ್ಳರು ಎಂದು ಅವರನ್ನು ಹೊಡೆದು ಕೊಂದಿದ್ದಾರೆ. ಈ ಪ್ರದೇಶದಲ್ಲಿ ಹಲವು ದಿನಗಳಿಂದ ಮಕ್ಕಳ ಕಳ್ಳರು ಮತ್ತು ಅಂಗಾಂಗ ಮಾರಾಟ ಮಾಡುವವರು ಸುತ್ತಾಡುತ್ತಿದ್ದಾರೆ ಎಂದು ವಾಟ್ಸಪ್‌ ಮೂಲಕ ವದಂತಿಗಳು ಹರಡಿತ್ತು.

ಇದನ್ನೂ ಓದಿ: ಪಾಲ್ಘರ್‌ ಘಟನೆಗೆ ಕೋಮು ಆಯಾಮವಿಲ್ಲ: ಮುಖ್ಯಮಂತ್ರಿ ಉದ್ದವ್ ಠಾಕ್ರೆ ಸ್ಪಷ್ಟನೆ

ಮೊದಲಿಗೆ ಜನರಿಂದ ಸಂತ್ರಸ್ತರನ್ನು ಪೊಲೀಸರು ರಕ್ಷಿಸಿದ್ದರು. ಆದರೆ 300 ರಿಂದ 400 ರಷ್ಟಿದ್ದ ಜನರ ಗುಂಪು ಪೊಲೀಸ್ ವಾಹನದಿಂದ ಅವರನ್ನು ಎಳೆದು ಹಾಕಿ ಹತ್ಯೆ ಮಾಡಿದೆ. ಒಬ್ಬ ಪೋಲಿಸ್ ವಯಸ್ಸಾದ ಸಾಧುವನ್ನು ತ್ಯಜಿಸಿ ಪಲಾಯನ ಮಾಡುವ ವಿಡಿಯೊಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು.

ಅಂತಿಮವಾಗಿ ಪಾಲ್ಘರ್ ಎಸ್ಪಿ ಗೌರವ್ ಸಿಂಗ್ ಅವರನ್ನು ಕಡ್ಡಾಯ ರಜೆ ಮೇಲೆ ಕಳುಹಿಸಲಾಯಿತು. ಐವರು ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿತ್ತು. ಅಲ್ಲದೆ, ಸ್ಥಳೀಯ ಪೊಲೀಸ್ ಠಾಣೆಯ 35 ಅಧಿಕಾರಿಗಳನ್ನು ವರ್ಗಾಯಿಸಲಾಗಿತ್ತು.

ಘಟನೆ ನಡೆದ ನಾಲ್ಕು ದಿನಗಳ ನಂತರ ಈ ಪ್ರಕರಣವನ್ನು ಎಡಿಜಿ ಅತುಲ್‌ಚಂದ್ರ ಕುಲಕರ್ಣಿ ನೇತೃತ್ವದ ರಾಜ್ಯ ಸಿಐಡಿಗೆ ಹಸ್ತಾಂತರಿಸಲಾಯಿತು. ಅವರ ಮೇಲ್ವಿಚಾರಣೆಯಲ್ಲಿ ಮೂರು ಎಫ್‌ಐಆರ್‌ಗಳನ್ನು ನೋಂದಾಯಿಸಲಾಗಿದೆ. ಮೊದಲ ಎರಡು ಎಫ್‌ಐಆರ್‌ಗಳನ್ನು ಸಾಧುಗಳ ಹತ್ಯೆಗೆ ಸಂಬಂಧಿಸಿದ್ದಾಗಿದ್ದು, ಮೂರನೆಯದು ಸ್ಥಳಕ್ಕೆ ತಲುಪಿದ ಪೊಲೀಸ್ ತಂಡದ ಮೇಲೆ ಕಲ್ಲು ತೂರಾಟಕ್ಕೆ ಸಂಬಂಧಿಸಿದೆ.

ಇದನ್ನೂ ಓದಿ: ನನ್ನ ಮೇಲೆ ಗುಂಪು ಹಲ್ಲೆಯಾದಾಗ ನೀವೇಕೆ ಮಾತಾಡಲಿಲ್ಲ?: ಸ್ವಾಮಿ ಅಗ್ನಿವೇಶ್ ಪ್ರಶ್ನೆ

ಕಳೆದ ಜುಲೈನಲ್ಲಿ ಸಿಐಡಿ 126 ಆರೋಪಿಗಳ ವಿರುದ್ಧ ಮೊದಲ ಎರಡು ಎಫ್‌ಐಆರ್‌ಗಳಲ್ಲಿ ಎರಡು ಚಾರ್ಜ್‌ಶೀಟ್‌ಗಳನ್ನು ಸಲ್ಲಿಸಿತ್ತು. ಕಳೆದ ಅಕ್ಟೋಬರ್‌ನಲ್ಲಿ ಇನ್ನೂ 75 ಜನರನ್ನು ಬಂಧಿಸಲಾಗಿದ್ದು, ಇನ್ನೂ ಎರಡು ಚಾರ್ಜ್‌ಶೀಟ್‌ಗಳನ್ನು ಸಲ್ಲಿಸಲಾಗಿದೆ, ಅದರ ನಂತರ ಕಳೆದ ಡಿಸೆಂಬರ್‌ನಲ್ಲಿ ಬಂಧಿಸಲ್ಪಟ್ಟ 22 ಜನರ ವಿರುದ್ಧ ಮೂರನೇ ಪೂರಕ ಚಾರ್ಜ್‌ಶೀಟ್ ದಾಖಲಿಸಲಾಗಿದೆ.

ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ಈ ಆರು ಚಾರ್ಜ್‌ಶೀಟ್‌ಗಳ ಹೊರತಾಗಿ, ಪೊಲೀಸರಿಗೆ ತಮ್ಮ ಕರ್ತವ್ಯ ನಿರ್ವಹಿಸದಂತೆ ಅಡ್ಡಿಯುಂಟು ಮಾಡಿದ ಮತ್ತು ಅವರ ಕೊಲೆ ಯತ್ನ ಮಾಡಿದ ಆರೋಪದ ಮೇಲೆ ಪೊಲೀಸ್ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದವರ ವಿರುದ್ಧ ಕಳೆದ ಆಗಸ್ಟ್‌ನಲ್ಲಿ ಮತ್ತೊಂದು ಚಾರ್ಜ್‌ಶೀಟ್ ದಾಖಲಿಸಲಾಗಿತ್ತು.

ಘಟನೆಯ ನಂತರ, ವಿಶೇಷವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಘಟನೆಯು ಕೋಮು ಆಧಾರಿತ ಹಿಂಸಾಚಾರ ಎಂದು ಹೇಳಿ ಹರಿಯಬಿಡಲಾಗಿತ್ತು. ಘಟನೆಯ ಬಗ್ಗೆ ಸರಿಯಾಗಿ ತನಿಖೆ ನಡೆಸುತ್ತಿಲ್ಲ ಎಂದು ಬಿಜೆಪಿ ಆರೋಪಿಸಿತ್ತು ಮತ್ತು ಕೇಂದ್ರ ಏಜೆನ್ಸಿಗಳು ತನಿಖೆ ನಡೆಸಬೇಕೆಂದು ಒತ್ತಾಯಿಸಿತ್ತು. ಆದರೆ, ಈ ಎಲ್ಲಾ ಆರೋಪಗಳು ಸುಳ್ಳು ಎಂದು ಆಗ ಮಹಾರಾಷ್ಟ್ರದ ಗೃಹ ಸಚಿವರಾಗಿದ್ದ ಅನಿಲ್ ದೇಶ್ಮುಖ್ ಅವರು ಮೃತಪಟ್ಟವರು ಮತ್ತು ಆರೋಪಿಗಳು ಒಂದೇ ಧರ್ಮಕ್ಕೆ ಸೇರಿದವರು ಎಂದು ಬಂಧಿತ ಆರೋಪಿಗಳ ಹೆಸರನ್ನು ಟ್ವಿಟರ್‌ನಲ್ಲಿ ಬಿಡುಗಡೆ ಮಾಡಿದ್ದರು.

ಇದನ್ನೂ ಓದಿ: ಪಾಲ್ಘರ್ ಘಟನೆ: 101 ಬಂಧಿತರಲ್ಲಿ ಒಬ್ಬರೂ ಮುಸ್ಲಿಮರಿಲ್ಲ – ಗೃಹಸಚಿವರ ಸ್ಪಷ್ಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...