Homeಮುಖಪುಟಪಾಲ್ಘರ್‌ ಗುಂಪು ಹತ್ಯೆಗೆ ಒಂದು ವರ್ಷ- ಏಳು ಚಾರ್ಜ್‌ಶೀಟ್ ಸಲ್ಲಿಕೆ; ಏನಾಗಿತ್ತುಅಂದು?

ಪಾಲ್ಘರ್‌ ಗುಂಪು ಹತ್ಯೆಗೆ ಒಂದು ವರ್ಷ- ಏಳು ಚಾರ್ಜ್‌ಶೀಟ್ ಸಲ್ಲಿಕೆ; ಏನಾಗಿತ್ತುಅಂದು?

ಬಿಜೆಪಿ ಸೇರಿದಂತೆ ಕೆಲವು ಮಾಧ್ಯಮಗಳು ಘಟನೆಗೆ ಕೋಮು ಆಯಾಮ ನೀಡಲು ಪ್ರಯತ್ನಿಸಿತ್ತು.

- Advertisement -
- Advertisement -

ಮಹಾರಾಷ್ಟ್ರದಲ್ಲಿ ಪಾಲ್ಘರ್ ಗುಂಪು ಹತ್ಯೆ ಘಟನೆ ನಡೆದು ಇಂದಿಗೆ ಒಂದು ವರ್ಷವಾಗಿದೆ. ಘಟನೆಯಲ್ಲಿ ಇಬ್ಬರು ಸಾಧುಗಳು ಮತ್ತು ಅವರ ಚಾಲಕನನ್ನು ಮಕ್ಕಳ ಕಳ್ಳರು ಎಂಬ ಅನುಮಾನದ ಮೇಲೆ ಜನರ ಗುಂಪೊಂದು ಹೊಡೆದೆ ಹತ್ಯೆ ಮಾಡಿತ್ತು. ಈ ಪ್ರಕರಣದಲ್ಲಿ ನೋಂದಾಯಿಸಲಾದ ಮೂರು ಎಫ್ಐಆರ್‌‌ಗಳಲ್ಲಿ ರಾಜ್ಯ ಸಿಐಡಿಯು ಏಳು ಚಾರ್ಜ್‌ಶೀಟ್‌‌ಗಳನ್ನು ಸಲ್ಲಿಸಿದೆ.

ಈ ಪ್ರಕರಣದಲ್ಲಿ 251 ವಯಸ್ಕರನ್ನು ಬಂಧಿಸಲಾಗಿದ್ದು, 15 ಬಾಲಾಪರಾಧಿಗಳನ್ನು ಬಂಧಿಸಲಾಗಿದೆ. ಬಂಧಿತರಲ್ಲಿ, ಘಟನೆಯಲ್ಲಿ ಪ್ರಮುಖ ಪಾತ್ರ ವಹಿಸಿದ 75 ಮಂದಿ ಇನ್ನೂ ಜೈಲುಗಳಲ್ಲಿ ಇದ್ದಾರೆ. ಈ ಪ್ರಕರಣದಲ್ಲಿ ವಾಂಟೆಡ್ ಆರೋಪಿಗಳೆಂದು ಹೆಸರಿಸಲಾದ ಇನ್ನೂ 52 ಜನರನ್ನು ಸಿಐಡಿ ಹುಡುಕುತ್ತಿದೆ.

ಇದನ್ನೂ ಓದಿ: Fact check: ಪಾಲ್ಘರ್ ಗುಂಪು ಹತ್ಯೆಯ ಬಗ್ಗೆ ಸುಳ್ಳು ವರದಿ ಮಾಡಿದ ಪಿಟಿಐ

ಘಟನೆಯ ನಡೆದ ಕೂಡಲೇ ಸಾಮಾಜಿಕ ಜಾಲತಾಣದಲ್ಲಿ ಕೋಮು ಬಣ್ಣ ಹಚ್ಚಲಾಗಿತ್ತು. ಬಿಜೆಪಿ ಸೇರಿದಂತೆ ಕೆಲವು ಮಾಧ್ಯಮಗಳು ಕೂಡಾ ಘಟನೆಗೆ ಕೋಮು ಆಯಾಮ ನೀಡಲು ಪ್ರಯತ್ನಿಸಿತ್ತು. ಆದರೆ ಸಿಐಡಿ ಇದು ಕೋಮು ಆಧಾರಿತ ಹತ್ಯೆ ಅಲ್ಲ ಎಂದು ಹೇಳಿದೆ.

ಘಟನೆ ನಡೆದ ಕೂಡಲೇ ಮಹಾರಾಷ್ಟ್ರದ ವಿರೋಧ ಪಕ್ಷದ ನಾಯಕ ದೇವೇಂದ್ರ ಫಡ್ನವೀಸ್ ಮತ್ತು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಈ ಘಟನೆ ಕುರಿತು ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಿದ್ದರು. ಕಳೆದ ವರ್ಷ ಲಾಕ್ ಡೌನ್ ಸಮಯದಲ್ಲಿ ನಡೆದ ಘಟನೆಯ ಬಗ್ಗೆ ಬಿಜೆಪಿಯು “ಕೋಮು ರಾಜಕೀಯ” ಮಾಡುತ್ತಿದೆ ಎಂದು ಮಹಾ ವಿಕಾಸ್ ಅಘಾಡಿ ಸರ್ಕಾರ ಆರೋಪಿಸಿತ್ತು.

ಕಳೆದ ವರ್ಷ ಏಪ್ರಿಲ್ 16 ರಂದು ಸಾಧು ಮಹಂತ್ ಕಲ್ಪವೃಕ್ಷ ಗಿರಿ (70) ಸುಶಿಲ್‌‌ ಗಿರಿ ಮಹಾರಾಜ್ (35) ಮತ್ತು ಅವರ ಚಾಲಕ ನಿಲೇಶ್ ತೆಲ್ಗಡೆ (30) ಅವರು ವಾಹನವೊಂದರಲ್ಲಿ ಮುಂಬೈಯಿಂದ ಸೂರತ್‌ಗೆ ಪ್ರಯಾಣಿಸುತ್ತಿದ್ದರು. ಆದರೆ ಮಹಾರಾಷ್ಟ್ರದ ಬುಡಕಟ್ಟು ಪ್ರಾಬಲ್ಯದ ಪಾಲ್ಘರ್ ಜಿಲ್ಲೆಯ ದಹನು ತಾಲ್ಲೂಕಿನಲ್ಲಿನ ಪ್ರದೇಶವೊಂದರಲ್ಲಿ ಜನರು ಮಕ್ಕಳ ಕಳ್ಳರು ಎಂದು ಅವರನ್ನು ಹೊಡೆದು ಕೊಂದಿದ್ದಾರೆ. ಈ ಪ್ರದೇಶದಲ್ಲಿ ಹಲವು ದಿನಗಳಿಂದ ಮಕ್ಕಳ ಕಳ್ಳರು ಮತ್ತು ಅಂಗಾಂಗ ಮಾರಾಟ ಮಾಡುವವರು ಸುತ್ತಾಡುತ್ತಿದ್ದಾರೆ ಎಂದು ವಾಟ್ಸಪ್‌ ಮೂಲಕ ವದಂತಿಗಳು ಹರಡಿತ್ತು.

ಇದನ್ನೂ ಓದಿ: ಪಾಲ್ಘರ್‌ ಘಟನೆಗೆ ಕೋಮು ಆಯಾಮವಿಲ್ಲ: ಮುಖ್ಯಮಂತ್ರಿ ಉದ್ದವ್ ಠಾಕ್ರೆ ಸ್ಪಷ್ಟನೆ

ಮೊದಲಿಗೆ ಜನರಿಂದ ಸಂತ್ರಸ್ತರನ್ನು ಪೊಲೀಸರು ರಕ್ಷಿಸಿದ್ದರು. ಆದರೆ 300 ರಿಂದ 400 ರಷ್ಟಿದ್ದ ಜನರ ಗುಂಪು ಪೊಲೀಸ್ ವಾಹನದಿಂದ ಅವರನ್ನು ಎಳೆದು ಹಾಕಿ ಹತ್ಯೆ ಮಾಡಿದೆ. ಒಬ್ಬ ಪೋಲಿಸ್ ವಯಸ್ಸಾದ ಸಾಧುವನ್ನು ತ್ಯಜಿಸಿ ಪಲಾಯನ ಮಾಡುವ ವಿಡಿಯೊಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು.

ಅಂತಿಮವಾಗಿ ಪಾಲ್ಘರ್ ಎಸ್ಪಿ ಗೌರವ್ ಸಿಂಗ್ ಅವರನ್ನು ಕಡ್ಡಾಯ ರಜೆ ಮೇಲೆ ಕಳುಹಿಸಲಾಯಿತು. ಐವರು ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿತ್ತು. ಅಲ್ಲದೆ, ಸ್ಥಳೀಯ ಪೊಲೀಸ್ ಠಾಣೆಯ 35 ಅಧಿಕಾರಿಗಳನ್ನು ವರ್ಗಾಯಿಸಲಾಗಿತ್ತು.

ಘಟನೆ ನಡೆದ ನಾಲ್ಕು ದಿನಗಳ ನಂತರ ಈ ಪ್ರಕರಣವನ್ನು ಎಡಿಜಿ ಅತುಲ್‌ಚಂದ್ರ ಕುಲಕರ್ಣಿ ನೇತೃತ್ವದ ರಾಜ್ಯ ಸಿಐಡಿಗೆ ಹಸ್ತಾಂತರಿಸಲಾಯಿತು. ಅವರ ಮೇಲ್ವಿಚಾರಣೆಯಲ್ಲಿ ಮೂರು ಎಫ್‌ಐಆರ್‌ಗಳನ್ನು ನೋಂದಾಯಿಸಲಾಗಿದೆ. ಮೊದಲ ಎರಡು ಎಫ್‌ಐಆರ್‌ಗಳನ್ನು ಸಾಧುಗಳ ಹತ್ಯೆಗೆ ಸಂಬಂಧಿಸಿದ್ದಾಗಿದ್ದು, ಮೂರನೆಯದು ಸ್ಥಳಕ್ಕೆ ತಲುಪಿದ ಪೊಲೀಸ್ ತಂಡದ ಮೇಲೆ ಕಲ್ಲು ತೂರಾಟಕ್ಕೆ ಸಂಬಂಧಿಸಿದೆ.

ಇದನ್ನೂ ಓದಿ: ನನ್ನ ಮೇಲೆ ಗುಂಪು ಹಲ್ಲೆಯಾದಾಗ ನೀವೇಕೆ ಮಾತಾಡಲಿಲ್ಲ?: ಸ್ವಾಮಿ ಅಗ್ನಿವೇಶ್ ಪ್ರಶ್ನೆ

ಕಳೆದ ಜುಲೈನಲ್ಲಿ ಸಿಐಡಿ 126 ಆರೋಪಿಗಳ ವಿರುದ್ಧ ಮೊದಲ ಎರಡು ಎಫ್‌ಐಆರ್‌ಗಳಲ್ಲಿ ಎರಡು ಚಾರ್ಜ್‌ಶೀಟ್‌ಗಳನ್ನು ಸಲ್ಲಿಸಿತ್ತು. ಕಳೆದ ಅಕ್ಟೋಬರ್‌ನಲ್ಲಿ ಇನ್ನೂ 75 ಜನರನ್ನು ಬಂಧಿಸಲಾಗಿದ್ದು, ಇನ್ನೂ ಎರಡು ಚಾರ್ಜ್‌ಶೀಟ್‌ಗಳನ್ನು ಸಲ್ಲಿಸಲಾಗಿದೆ, ಅದರ ನಂತರ ಕಳೆದ ಡಿಸೆಂಬರ್‌ನಲ್ಲಿ ಬಂಧಿಸಲ್ಪಟ್ಟ 22 ಜನರ ವಿರುದ್ಧ ಮೂರನೇ ಪೂರಕ ಚಾರ್ಜ್‌ಶೀಟ್ ದಾಖಲಿಸಲಾಗಿದೆ.

ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ಈ ಆರು ಚಾರ್ಜ್‌ಶೀಟ್‌ಗಳ ಹೊರತಾಗಿ, ಪೊಲೀಸರಿಗೆ ತಮ್ಮ ಕರ್ತವ್ಯ ನಿರ್ವಹಿಸದಂತೆ ಅಡ್ಡಿಯುಂಟು ಮಾಡಿದ ಮತ್ತು ಅವರ ಕೊಲೆ ಯತ್ನ ಮಾಡಿದ ಆರೋಪದ ಮೇಲೆ ಪೊಲೀಸ್ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದವರ ವಿರುದ್ಧ ಕಳೆದ ಆಗಸ್ಟ್‌ನಲ್ಲಿ ಮತ್ತೊಂದು ಚಾರ್ಜ್‌ಶೀಟ್ ದಾಖಲಿಸಲಾಗಿತ್ತು.

ಘಟನೆಯ ನಂತರ, ವಿಶೇಷವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಘಟನೆಯು ಕೋಮು ಆಧಾರಿತ ಹಿಂಸಾಚಾರ ಎಂದು ಹೇಳಿ ಹರಿಯಬಿಡಲಾಗಿತ್ತು. ಘಟನೆಯ ಬಗ್ಗೆ ಸರಿಯಾಗಿ ತನಿಖೆ ನಡೆಸುತ್ತಿಲ್ಲ ಎಂದು ಬಿಜೆಪಿ ಆರೋಪಿಸಿತ್ತು ಮತ್ತು ಕೇಂದ್ರ ಏಜೆನ್ಸಿಗಳು ತನಿಖೆ ನಡೆಸಬೇಕೆಂದು ಒತ್ತಾಯಿಸಿತ್ತು. ಆದರೆ, ಈ ಎಲ್ಲಾ ಆರೋಪಗಳು ಸುಳ್ಳು ಎಂದು ಆಗ ಮಹಾರಾಷ್ಟ್ರದ ಗೃಹ ಸಚಿವರಾಗಿದ್ದ ಅನಿಲ್ ದೇಶ್ಮುಖ್ ಅವರು ಮೃತಪಟ್ಟವರು ಮತ್ತು ಆರೋಪಿಗಳು ಒಂದೇ ಧರ್ಮಕ್ಕೆ ಸೇರಿದವರು ಎಂದು ಬಂಧಿತ ಆರೋಪಿಗಳ ಹೆಸರನ್ನು ಟ್ವಿಟರ್‌ನಲ್ಲಿ ಬಿಡುಗಡೆ ಮಾಡಿದ್ದರು.

ಇದನ್ನೂ ಓದಿ: ಪಾಲ್ಘರ್ ಘಟನೆ: 101 ಬಂಧಿತರಲ್ಲಿ ಒಬ್ಬರೂ ಮುಸ್ಲಿಮರಿಲ್ಲ – ಗೃಹಸಚಿವರ ಸ್ಪಷ್ಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...