Homeಮುಖಪುಟಪಾಲ್ಘರ್‌ ಗುಂಪು ಹತ್ಯೆಗೆ ಒಂದು ವರ್ಷ- ಏಳು ಚಾರ್ಜ್‌ಶೀಟ್ ಸಲ್ಲಿಕೆ; ಏನಾಗಿತ್ತುಅಂದು?

ಪಾಲ್ಘರ್‌ ಗುಂಪು ಹತ್ಯೆಗೆ ಒಂದು ವರ್ಷ- ಏಳು ಚಾರ್ಜ್‌ಶೀಟ್ ಸಲ್ಲಿಕೆ; ಏನಾಗಿತ್ತುಅಂದು?

ಬಿಜೆಪಿ ಸೇರಿದಂತೆ ಕೆಲವು ಮಾಧ್ಯಮಗಳು ಘಟನೆಗೆ ಕೋಮು ಆಯಾಮ ನೀಡಲು ಪ್ರಯತ್ನಿಸಿತ್ತು.

- Advertisement -
- Advertisement -

ಮಹಾರಾಷ್ಟ್ರದಲ್ಲಿ ಪಾಲ್ಘರ್ ಗುಂಪು ಹತ್ಯೆ ಘಟನೆ ನಡೆದು ಇಂದಿಗೆ ಒಂದು ವರ್ಷವಾಗಿದೆ. ಘಟನೆಯಲ್ಲಿ ಇಬ್ಬರು ಸಾಧುಗಳು ಮತ್ತು ಅವರ ಚಾಲಕನನ್ನು ಮಕ್ಕಳ ಕಳ್ಳರು ಎಂಬ ಅನುಮಾನದ ಮೇಲೆ ಜನರ ಗುಂಪೊಂದು ಹೊಡೆದೆ ಹತ್ಯೆ ಮಾಡಿತ್ತು. ಈ ಪ್ರಕರಣದಲ್ಲಿ ನೋಂದಾಯಿಸಲಾದ ಮೂರು ಎಫ್ಐಆರ್‌‌ಗಳಲ್ಲಿ ರಾಜ್ಯ ಸಿಐಡಿಯು ಏಳು ಚಾರ್ಜ್‌ಶೀಟ್‌‌ಗಳನ್ನು ಸಲ್ಲಿಸಿದೆ.

ಈ ಪ್ರಕರಣದಲ್ಲಿ 251 ವಯಸ್ಕರನ್ನು ಬಂಧಿಸಲಾಗಿದ್ದು, 15 ಬಾಲಾಪರಾಧಿಗಳನ್ನು ಬಂಧಿಸಲಾಗಿದೆ. ಬಂಧಿತರಲ್ಲಿ, ಘಟನೆಯಲ್ಲಿ ಪ್ರಮುಖ ಪಾತ್ರ ವಹಿಸಿದ 75 ಮಂದಿ ಇನ್ನೂ ಜೈಲುಗಳಲ್ಲಿ ಇದ್ದಾರೆ. ಈ ಪ್ರಕರಣದಲ್ಲಿ ವಾಂಟೆಡ್ ಆರೋಪಿಗಳೆಂದು ಹೆಸರಿಸಲಾದ ಇನ್ನೂ 52 ಜನರನ್ನು ಸಿಐಡಿ ಹುಡುಕುತ್ತಿದೆ.

ಇದನ್ನೂ ಓದಿ: Fact check: ಪಾಲ್ಘರ್ ಗುಂಪು ಹತ್ಯೆಯ ಬಗ್ಗೆ ಸುಳ್ಳು ವರದಿ ಮಾಡಿದ ಪಿಟಿಐ

ಘಟನೆಯ ನಡೆದ ಕೂಡಲೇ ಸಾಮಾಜಿಕ ಜಾಲತಾಣದಲ್ಲಿ ಕೋಮು ಬಣ್ಣ ಹಚ್ಚಲಾಗಿತ್ತು. ಬಿಜೆಪಿ ಸೇರಿದಂತೆ ಕೆಲವು ಮಾಧ್ಯಮಗಳು ಕೂಡಾ ಘಟನೆಗೆ ಕೋಮು ಆಯಾಮ ನೀಡಲು ಪ್ರಯತ್ನಿಸಿತ್ತು. ಆದರೆ ಸಿಐಡಿ ಇದು ಕೋಮು ಆಧಾರಿತ ಹತ್ಯೆ ಅಲ್ಲ ಎಂದು ಹೇಳಿದೆ.

ಘಟನೆ ನಡೆದ ಕೂಡಲೇ ಮಹಾರಾಷ್ಟ್ರದ ವಿರೋಧ ಪಕ್ಷದ ನಾಯಕ ದೇವೇಂದ್ರ ಫಡ್ನವೀಸ್ ಮತ್ತು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಈ ಘಟನೆ ಕುರಿತು ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಿದ್ದರು. ಕಳೆದ ವರ್ಷ ಲಾಕ್ ಡೌನ್ ಸಮಯದಲ್ಲಿ ನಡೆದ ಘಟನೆಯ ಬಗ್ಗೆ ಬಿಜೆಪಿಯು “ಕೋಮು ರಾಜಕೀಯ” ಮಾಡುತ್ತಿದೆ ಎಂದು ಮಹಾ ವಿಕಾಸ್ ಅಘಾಡಿ ಸರ್ಕಾರ ಆರೋಪಿಸಿತ್ತು.

ಕಳೆದ ವರ್ಷ ಏಪ್ರಿಲ್ 16 ರಂದು ಸಾಧು ಮಹಂತ್ ಕಲ್ಪವೃಕ್ಷ ಗಿರಿ (70) ಸುಶಿಲ್‌‌ ಗಿರಿ ಮಹಾರಾಜ್ (35) ಮತ್ತು ಅವರ ಚಾಲಕ ನಿಲೇಶ್ ತೆಲ್ಗಡೆ (30) ಅವರು ವಾಹನವೊಂದರಲ್ಲಿ ಮುಂಬೈಯಿಂದ ಸೂರತ್‌ಗೆ ಪ್ರಯಾಣಿಸುತ್ತಿದ್ದರು. ಆದರೆ ಮಹಾರಾಷ್ಟ್ರದ ಬುಡಕಟ್ಟು ಪ್ರಾಬಲ್ಯದ ಪಾಲ್ಘರ್ ಜಿಲ್ಲೆಯ ದಹನು ತಾಲ್ಲೂಕಿನಲ್ಲಿನ ಪ್ರದೇಶವೊಂದರಲ್ಲಿ ಜನರು ಮಕ್ಕಳ ಕಳ್ಳರು ಎಂದು ಅವರನ್ನು ಹೊಡೆದು ಕೊಂದಿದ್ದಾರೆ. ಈ ಪ್ರದೇಶದಲ್ಲಿ ಹಲವು ದಿನಗಳಿಂದ ಮಕ್ಕಳ ಕಳ್ಳರು ಮತ್ತು ಅಂಗಾಂಗ ಮಾರಾಟ ಮಾಡುವವರು ಸುತ್ತಾಡುತ್ತಿದ್ದಾರೆ ಎಂದು ವಾಟ್ಸಪ್‌ ಮೂಲಕ ವದಂತಿಗಳು ಹರಡಿತ್ತು.

ಇದನ್ನೂ ಓದಿ: ಪಾಲ್ಘರ್‌ ಘಟನೆಗೆ ಕೋಮು ಆಯಾಮವಿಲ್ಲ: ಮುಖ್ಯಮಂತ್ರಿ ಉದ್ದವ್ ಠಾಕ್ರೆ ಸ್ಪಷ್ಟನೆ

ಮೊದಲಿಗೆ ಜನರಿಂದ ಸಂತ್ರಸ್ತರನ್ನು ಪೊಲೀಸರು ರಕ್ಷಿಸಿದ್ದರು. ಆದರೆ 300 ರಿಂದ 400 ರಷ್ಟಿದ್ದ ಜನರ ಗುಂಪು ಪೊಲೀಸ್ ವಾಹನದಿಂದ ಅವರನ್ನು ಎಳೆದು ಹಾಕಿ ಹತ್ಯೆ ಮಾಡಿದೆ. ಒಬ್ಬ ಪೋಲಿಸ್ ವಯಸ್ಸಾದ ಸಾಧುವನ್ನು ತ್ಯಜಿಸಿ ಪಲಾಯನ ಮಾಡುವ ವಿಡಿಯೊಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು.

ಅಂತಿಮವಾಗಿ ಪಾಲ್ಘರ್ ಎಸ್ಪಿ ಗೌರವ್ ಸಿಂಗ್ ಅವರನ್ನು ಕಡ್ಡಾಯ ರಜೆ ಮೇಲೆ ಕಳುಹಿಸಲಾಯಿತು. ಐವರು ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿತ್ತು. ಅಲ್ಲದೆ, ಸ್ಥಳೀಯ ಪೊಲೀಸ್ ಠಾಣೆಯ 35 ಅಧಿಕಾರಿಗಳನ್ನು ವರ್ಗಾಯಿಸಲಾಗಿತ್ತು.

ಘಟನೆ ನಡೆದ ನಾಲ್ಕು ದಿನಗಳ ನಂತರ ಈ ಪ್ರಕರಣವನ್ನು ಎಡಿಜಿ ಅತುಲ್‌ಚಂದ್ರ ಕುಲಕರ್ಣಿ ನೇತೃತ್ವದ ರಾಜ್ಯ ಸಿಐಡಿಗೆ ಹಸ್ತಾಂತರಿಸಲಾಯಿತು. ಅವರ ಮೇಲ್ವಿಚಾರಣೆಯಲ್ಲಿ ಮೂರು ಎಫ್‌ಐಆರ್‌ಗಳನ್ನು ನೋಂದಾಯಿಸಲಾಗಿದೆ. ಮೊದಲ ಎರಡು ಎಫ್‌ಐಆರ್‌ಗಳನ್ನು ಸಾಧುಗಳ ಹತ್ಯೆಗೆ ಸಂಬಂಧಿಸಿದ್ದಾಗಿದ್ದು, ಮೂರನೆಯದು ಸ್ಥಳಕ್ಕೆ ತಲುಪಿದ ಪೊಲೀಸ್ ತಂಡದ ಮೇಲೆ ಕಲ್ಲು ತೂರಾಟಕ್ಕೆ ಸಂಬಂಧಿಸಿದೆ.

ಇದನ್ನೂ ಓದಿ: ನನ್ನ ಮೇಲೆ ಗುಂಪು ಹಲ್ಲೆಯಾದಾಗ ನೀವೇಕೆ ಮಾತಾಡಲಿಲ್ಲ?: ಸ್ವಾಮಿ ಅಗ್ನಿವೇಶ್ ಪ್ರಶ್ನೆ

ಕಳೆದ ಜುಲೈನಲ್ಲಿ ಸಿಐಡಿ 126 ಆರೋಪಿಗಳ ವಿರುದ್ಧ ಮೊದಲ ಎರಡು ಎಫ್‌ಐಆರ್‌ಗಳಲ್ಲಿ ಎರಡು ಚಾರ್ಜ್‌ಶೀಟ್‌ಗಳನ್ನು ಸಲ್ಲಿಸಿತ್ತು. ಕಳೆದ ಅಕ್ಟೋಬರ್‌ನಲ್ಲಿ ಇನ್ನೂ 75 ಜನರನ್ನು ಬಂಧಿಸಲಾಗಿದ್ದು, ಇನ್ನೂ ಎರಡು ಚಾರ್ಜ್‌ಶೀಟ್‌ಗಳನ್ನು ಸಲ್ಲಿಸಲಾಗಿದೆ, ಅದರ ನಂತರ ಕಳೆದ ಡಿಸೆಂಬರ್‌ನಲ್ಲಿ ಬಂಧಿಸಲ್ಪಟ್ಟ 22 ಜನರ ವಿರುದ್ಧ ಮೂರನೇ ಪೂರಕ ಚಾರ್ಜ್‌ಶೀಟ್ ದಾಖಲಿಸಲಾಗಿದೆ.

ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ಈ ಆರು ಚಾರ್ಜ್‌ಶೀಟ್‌ಗಳ ಹೊರತಾಗಿ, ಪೊಲೀಸರಿಗೆ ತಮ್ಮ ಕರ್ತವ್ಯ ನಿರ್ವಹಿಸದಂತೆ ಅಡ್ಡಿಯುಂಟು ಮಾಡಿದ ಮತ್ತು ಅವರ ಕೊಲೆ ಯತ್ನ ಮಾಡಿದ ಆರೋಪದ ಮೇಲೆ ಪೊಲೀಸ್ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದವರ ವಿರುದ್ಧ ಕಳೆದ ಆಗಸ್ಟ್‌ನಲ್ಲಿ ಮತ್ತೊಂದು ಚಾರ್ಜ್‌ಶೀಟ್ ದಾಖಲಿಸಲಾಗಿತ್ತು.

ಘಟನೆಯ ನಂತರ, ವಿಶೇಷವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಘಟನೆಯು ಕೋಮು ಆಧಾರಿತ ಹಿಂಸಾಚಾರ ಎಂದು ಹೇಳಿ ಹರಿಯಬಿಡಲಾಗಿತ್ತು. ಘಟನೆಯ ಬಗ್ಗೆ ಸರಿಯಾಗಿ ತನಿಖೆ ನಡೆಸುತ್ತಿಲ್ಲ ಎಂದು ಬಿಜೆಪಿ ಆರೋಪಿಸಿತ್ತು ಮತ್ತು ಕೇಂದ್ರ ಏಜೆನ್ಸಿಗಳು ತನಿಖೆ ನಡೆಸಬೇಕೆಂದು ಒತ್ತಾಯಿಸಿತ್ತು. ಆದರೆ, ಈ ಎಲ್ಲಾ ಆರೋಪಗಳು ಸುಳ್ಳು ಎಂದು ಆಗ ಮಹಾರಾಷ್ಟ್ರದ ಗೃಹ ಸಚಿವರಾಗಿದ್ದ ಅನಿಲ್ ದೇಶ್ಮುಖ್ ಅವರು ಮೃತಪಟ್ಟವರು ಮತ್ತು ಆರೋಪಿಗಳು ಒಂದೇ ಧರ್ಮಕ್ಕೆ ಸೇರಿದವರು ಎಂದು ಬಂಧಿತ ಆರೋಪಿಗಳ ಹೆಸರನ್ನು ಟ್ವಿಟರ್‌ನಲ್ಲಿ ಬಿಡುಗಡೆ ಮಾಡಿದ್ದರು.

ಇದನ್ನೂ ಓದಿ: ಪಾಲ್ಘರ್ ಘಟನೆ: 101 ಬಂಧಿತರಲ್ಲಿ ಒಬ್ಬರೂ ಮುಸ್ಲಿಮರಿಲ್ಲ – ಗೃಹಸಚಿವರ ಸ್ಪಷ್ಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...