Homeಮುಖಪುಟಪಾಲ್ಘರ್‌ ಗುಂಪು ಹತ್ಯೆಗೆ ಒಂದು ವರ್ಷ- ಏಳು ಚಾರ್ಜ್‌ಶೀಟ್ ಸಲ್ಲಿಕೆ; ಏನಾಗಿತ್ತುಅಂದು?

ಪಾಲ್ಘರ್‌ ಗುಂಪು ಹತ್ಯೆಗೆ ಒಂದು ವರ್ಷ- ಏಳು ಚಾರ್ಜ್‌ಶೀಟ್ ಸಲ್ಲಿಕೆ; ಏನಾಗಿತ್ತುಅಂದು?

ಬಿಜೆಪಿ ಸೇರಿದಂತೆ ಕೆಲವು ಮಾಧ್ಯಮಗಳು ಘಟನೆಗೆ ಕೋಮು ಆಯಾಮ ನೀಡಲು ಪ್ರಯತ್ನಿಸಿತ್ತು.

- Advertisement -
- Advertisement -

ಮಹಾರಾಷ್ಟ್ರದಲ್ಲಿ ಪಾಲ್ಘರ್ ಗುಂಪು ಹತ್ಯೆ ಘಟನೆ ನಡೆದು ಇಂದಿಗೆ ಒಂದು ವರ್ಷವಾಗಿದೆ. ಘಟನೆಯಲ್ಲಿ ಇಬ್ಬರು ಸಾಧುಗಳು ಮತ್ತು ಅವರ ಚಾಲಕನನ್ನು ಮಕ್ಕಳ ಕಳ್ಳರು ಎಂಬ ಅನುಮಾನದ ಮೇಲೆ ಜನರ ಗುಂಪೊಂದು ಹೊಡೆದೆ ಹತ್ಯೆ ಮಾಡಿತ್ತು. ಈ ಪ್ರಕರಣದಲ್ಲಿ ನೋಂದಾಯಿಸಲಾದ ಮೂರು ಎಫ್ಐಆರ್‌‌ಗಳಲ್ಲಿ ರಾಜ್ಯ ಸಿಐಡಿಯು ಏಳು ಚಾರ್ಜ್‌ಶೀಟ್‌‌ಗಳನ್ನು ಸಲ್ಲಿಸಿದೆ.

ಈ ಪ್ರಕರಣದಲ್ಲಿ 251 ವಯಸ್ಕರನ್ನು ಬಂಧಿಸಲಾಗಿದ್ದು, 15 ಬಾಲಾಪರಾಧಿಗಳನ್ನು ಬಂಧಿಸಲಾಗಿದೆ. ಬಂಧಿತರಲ್ಲಿ, ಘಟನೆಯಲ್ಲಿ ಪ್ರಮುಖ ಪಾತ್ರ ವಹಿಸಿದ 75 ಮಂದಿ ಇನ್ನೂ ಜೈಲುಗಳಲ್ಲಿ ಇದ್ದಾರೆ. ಈ ಪ್ರಕರಣದಲ್ಲಿ ವಾಂಟೆಡ್ ಆರೋಪಿಗಳೆಂದು ಹೆಸರಿಸಲಾದ ಇನ್ನೂ 52 ಜನರನ್ನು ಸಿಐಡಿ ಹುಡುಕುತ್ತಿದೆ.

ಇದನ್ನೂ ಓದಿ: Fact check: ಪಾಲ್ಘರ್ ಗುಂಪು ಹತ್ಯೆಯ ಬಗ್ಗೆ ಸುಳ್ಳು ವರದಿ ಮಾಡಿದ ಪಿಟಿಐ

ಘಟನೆಯ ನಡೆದ ಕೂಡಲೇ ಸಾಮಾಜಿಕ ಜಾಲತಾಣದಲ್ಲಿ ಕೋಮು ಬಣ್ಣ ಹಚ್ಚಲಾಗಿತ್ತು. ಬಿಜೆಪಿ ಸೇರಿದಂತೆ ಕೆಲವು ಮಾಧ್ಯಮಗಳು ಕೂಡಾ ಘಟನೆಗೆ ಕೋಮು ಆಯಾಮ ನೀಡಲು ಪ್ರಯತ್ನಿಸಿತ್ತು. ಆದರೆ ಸಿಐಡಿ ಇದು ಕೋಮು ಆಧಾರಿತ ಹತ್ಯೆ ಅಲ್ಲ ಎಂದು ಹೇಳಿದೆ.

ಘಟನೆ ನಡೆದ ಕೂಡಲೇ ಮಹಾರಾಷ್ಟ್ರದ ವಿರೋಧ ಪಕ್ಷದ ನಾಯಕ ದೇವೇಂದ್ರ ಫಡ್ನವೀಸ್ ಮತ್ತು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಈ ಘಟನೆ ಕುರಿತು ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಿದ್ದರು. ಕಳೆದ ವರ್ಷ ಲಾಕ್ ಡೌನ್ ಸಮಯದಲ್ಲಿ ನಡೆದ ಘಟನೆಯ ಬಗ್ಗೆ ಬಿಜೆಪಿಯು “ಕೋಮು ರಾಜಕೀಯ” ಮಾಡುತ್ತಿದೆ ಎಂದು ಮಹಾ ವಿಕಾಸ್ ಅಘಾಡಿ ಸರ್ಕಾರ ಆರೋಪಿಸಿತ್ತು.

ಕಳೆದ ವರ್ಷ ಏಪ್ರಿಲ್ 16 ರಂದು ಸಾಧು ಮಹಂತ್ ಕಲ್ಪವೃಕ್ಷ ಗಿರಿ (70) ಸುಶಿಲ್‌‌ ಗಿರಿ ಮಹಾರಾಜ್ (35) ಮತ್ತು ಅವರ ಚಾಲಕ ನಿಲೇಶ್ ತೆಲ್ಗಡೆ (30) ಅವರು ವಾಹನವೊಂದರಲ್ಲಿ ಮುಂಬೈಯಿಂದ ಸೂರತ್‌ಗೆ ಪ್ರಯಾಣಿಸುತ್ತಿದ್ದರು. ಆದರೆ ಮಹಾರಾಷ್ಟ್ರದ ಬುಡಕಟ್ಟು ಪ್ರಾಬಲ್ಯದ ಪಾಲ್ಘರ್ ಜಿಲ್ಲೆಯ ದಹನು ತಾಲ್ಲೂಕಿನಲ್ಲಿನ ಪ್ರದೇಶವೊಂದರಲ್ಲಿ ಜನರು ಮಕ್ಕಳ ಕಳ್ಳರು ಎಂದು ಅವರನ್ನು ಹೊಡೆದು ಕೊಂದಿದ್ದಾರೆ. ಈ ಪ್ರದೇಶದಲ್ಲಿ ಹಲವು ದಿನಗಳಿಂದ ಮಕ್ಕಳ ಕಳ್ಳರು ಮತ್ತು ಅಂಗಾಂಗ ಮಾರಾಟ ಮಾಡುವವರು ಸುತ್ತಾಡುತ್ತಿದ್ದಾರೆ ಎಂದು ವಾಟ್ಸಪ್‌ ಮೂಲಕ ವದಂತಿಗಳು ಹರಡಿತ್ತು.

ಇದನ್ನೂ ಓದಿ: ಪಾಲ್ಘರ್‌ ಘಟನೆಗೆ ಕೋಮು ಆಯಾಮವಿಲ್ಲ: ಮುಖ್ಯಮಂತ್ರಿ ಉದ್ದವ್ ಠಾಕ್ರೆ ಸ್ಪಷ್ಟನೆ

ಮೊದಲಿಗೆ ಜನರಿಂದ ಸಂತ್ರಸ್ತರನ್ನು ಪೊಲೀಸರು ರಕ್ಷಿಸಿದ್ದರು. ಆದರೆ 300 ರಿಂದ 400 ರಷ್ಟಿದ್ದ ಜನರ ಗುಂಪು ಪೊಲೀಸ್ ವಾಹನದಿಂದ ಅವರನ್ನು ಎಳೆದು ಹಾಕಿ ಹತ್ಯೆ ಮಾಡಿದೆ. ಒಬ್ಬ ಪೋಲಿಸ್ ವಯಸ್ಸಾದ ಸಾಧುವನ್ನು ತ್ಯಜಿಸಿ ಪಲಾಯನ ಮಾಡುವ ವಿಡಿಯೊಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು.

ಅಂತಿಮವಾಗಿ ಪಾಲ್ಘರ್ ಎಸ್ಪಿ ಗೌರವ್ ಸಿಂಗ್ ಅವರನ್ನು ಕಡ್ಡಾಯ ರಜೆ ಮೇಲೆ ಕಳುಹಿಸಲಾಯಿತು. ಐವರು ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿತ್ತು. ಅಲ್ಲದೆ, ಸ್ಥಳೀಯ ಪೊಲೀಸ್ ಠಾಣೆಯ 35 ಅಧಿಕಾರಿಗಳನ್ನು ವರ್ಗಾಯಿಸಲಾಗಿತ್ತು.

ಘಟನೆ ನಡೆದ ನಾಲ್ಕು ದಿನಗಳ ನಂತರ ಈ ಪ್ರಕರಣವನ್ನು ಎಡಿಜಿ ಅತುಲ್‌ಚಂದ್ರ ಕುಲಕರ್ಣಿ ನೇತೃತ್ವದ ರಾಜ್ಯ ಸಿಐಡಿಗೆ ಹಸ್ತಾಂತರಿಸಲಾಯಿತು. ಅವರ ಮೇಲ್ವಿಚಾರಣೆಯಲ್ಲಿ ಮೂರು ಎಫ್‌ಐಆರ್‌ಗಳನ್ನು ನೋಂದಾಯಿಸಲಾಗಿದೆ. ಮೊದಲ ಎರಡು ಎಫ್‌ಐಆರ್‌ಗಳನ್ನು ಸಾಧುಗಳ ಹತ್ಯೆಗೆ ಸಂಬಂಧಿಸಿದ್ದಾಗಿದ್ದು, ಮೂರನೆಯದು ಸ್ಥಳಕ್ಕೆ ತಲುಪಿದ ಪೊಲೀಸ್ ತಂಡದ ಮೇಲೆ ಕಲ್ಲು ತೂರಾಟಕ್ಕೆ ಸಂಬಂಧಿಸಿದೆ.

ಇದನ್ನೂ ಓದಿ: ನನ್ನ ಮೇಲೆ ಗುಂಪು ಹಲ್ಲೆಯಾದಾಗ ನೀವೇಕೆ ಮಾತಾಡಲಿಲ್ಲ?: ಸ್ವಾಮಿ ಅಗ್ನಿವೇಶ್ ಪ್ರಶ್ನೆ

ಕಳೆದ ಜುಲೈನಲ್ಲಿ ಸಿಐಡಿ 126 ಆರೋಪಿಗಳ ವಿರುದ್ಧ ಮೊದಲ ಎರಡು ಎಫ್‌ಐಆರ್‌ಗಳಲ್ಲಿ ಎರಡು ಚಾರ್ಜ್‌ಶೀಟ್‌ಗಳನ್ನು ಸಲ್ಲಿಸಿತ್ತು. ಕಳೆದ ಅಕ್ಟೋಬರ್‌ನಲ್ಲಿ ಇನ್ನೂ 75 ಜನರನ್ನು ಬಂಧಿಸಲಾಗಿದ್ದು, ಇನ್ನೂ ಎರಡು ಚಾರ್ಜ್‌ಶೀಟ್‌ಗಳನ್ನು ಸಲ್ಲಿಸಲಾಗಿದೆ, ಅದರ ನಂತರ ಕಳೆದ ಡಿಸೆಂಬರ್‌ನಲ್ಲಿ ಬಂಧಿಸಲ್ಪಟ್ಟ 22 ಜನರ ವಿರುದ್ಧ ಮೂರನೇ ಪೂರಕ ಚಾರ್ಜ್‌ಶೀಟ್ ದಾಖಲಿಸಲಾಗಿದೆ.

ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ಈ ಆರು ಚಾರ್ಜ್‌ಶೀಟ್‌ಗಳ ಹೊರತಾಗಿ, ಪೊಲೀಸರಿಗೆ ತಮ್ಮ ಕರ್ತವ್ಯ ನಿರ್ವಹಿಸದಂತೆ ಅಡ್ಡಿಯುಂಟು ಮಾಡಿದ ಮತ್ತು ಅವರ ಕೊಲೆ ಯತ್ನ ಮಾಡಿದ ಆರೋಪದ ಮೇಲೆ ಪೊಲೀಸ್ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದವರ ವಿರುದ್ಧ ಕಳೆದ ಆಗಸ್ಟ್‌ನಲ್ಲಿ ಮತ್ತೊಂದು ಚಾರ್ಜ್‌ಶೀಟ್ ದಾಖಲಿಸಲಾಗಿತ್ತು.

ಘಟನೆಯ ನಂತರ, ವಿಶೇಷವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಘಟನೆಯು ಕೋಮು ಆಧಾರಿತ ಹಿಂಸಾಚಾರ ಎಂದು ಹೇಳಿ ಹರಿಯಬಿಡಲಾಗಿತ್ತು. ಘಟನೆಯ ಬಗ್ಗೆ ಸರಿಯಾಗಿ ತನಿಖೆ ನಡೆಸುತ್ತಿಲ್ಲ ಎಂದು ಬಿಜೆಪಿ ಆರೋಪಿಸಿತ್ತು ಮತ್ತು ಕೇಂದ್ರ ಏಜೆನ್ಸಿಗಳು ತನಿಖೆ ನಡೆಸಬೇಕೆಂದು ಒತ್ತಾಯಿಸಿತ್ತು. ಆದರೆ, ಈ ಎಲ್ಲಾ ಆರೋಪಗಳು ಸುಳ್ಳು ಎಂದು ಆಗ ಮಹಾರಾಷ್ಟ್ರದ ಗೃಹ ಸಚಿವರಾಗಿದ್ದ ಅನಿಲ್ ದೇಶ್ಮುಖ್ ಅವರು ಮೃತಪಟ್ಟವರು ಮತ್ತು ಆರೋಪಿಗಳು ಒಂದೇ ಧರ್ಮಕ್ಕೆ ಸೇರಿದವರು ಎಂದು ಬಂಧಿತ ಆರೋಪಿಗಳ ಹೆಸರನ್ನು ಟ್ವಿಟರ್‌ನಲ್ಲಿ ಬಿಡುಗಡೆ ಮಾಡಿದ್ದರು.

ಇದನ್ನೂ ಓದಿ: ಪಾಲ್ಘರ್ ಘಟನೆ: 101 ಬಂಧಿತರಲ್ಲಿ ಒಬ್ಬರೂ ಮುಸ್ಲಿಮರಿಲ್ಲ – ಗೃಹಸಚಿವರ ಸ್ಪಷ್ಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...