Homeಮುಖಪುಟಪಾಲ್ಘರ್‌ ಗುಂಪು ಹತ್ಯೆಗೆ ಒಂದು ವರ್ಷ- ಏಳು ಚಾರ್ಜ್‌ಶೀಟ್ ಸಲ್ಲಿಕೆ; ಏನಾಗಿತ್ತುಅಂದು?

ಪಾಲ್ಘರ್‌ ಗುಂಪು ಹತ್ಯೆಗೆ ಒಂದು ವರ್ಷ- ಏಳು ಚಾರ್ಜ್‌ಶೀಟ್ ಸಲ್ಲಿಕೆ; ಏನಾಗಿತ್ತುಅಂದು?

ಬಿಜೆಪಿ ಸೇರಿದಂತೆ ಕೆಲವು ಮಾಧ್ಯಮಗಳು ಘಟನೆಗೆ ಕೋಮು ಆಯಾಮ ನೀಡಲು ಪ್ರಯತ್ನಿಸಿತ್ತು.

- Advertisement -
- Advertisement -

ಮಹಾರಾಷ್ಟ್ರದಲ್ಲಿ ಪಾಲ್ಘರ್ ಗುಂಪು ಹತ್ಯೆ ಘಟನೆ ನಡೆದು ಇಂದಿಗೆ ಒಂದು ವರ್ಷವಾಗಿದೆ. ಘಟನೆಯಲ್ಲಿ ಇಬ್ಬರು ಸಾಧುಗಳು ಮತ್ತು ಅವರ ಚಾಲಕನನ್ನು ಮಕ್ಕಳ ಕಳ್ಳರು ಎಂಬ ಅನುಮಾನದ ಮೇಲೆ ಜನರ ಗುಂಪೊಂದು ಹೊಡೆದೆ ಹತ್ಯೆ ಮಾಡಿತ್ತು. ಈ ಪ್ರಕರಣದಲ್ಲಿ ನೋಂದಾಯಿಸಲಾದ ಮೂರು ಎಫ್ಐಆರ್‌‌ಗಳಲ್ಲಿ ರಾಜ್ಯ ಸಿಐಡಿಯು ಏಳು ಚಾರ್ಜ್‌ಶೀಟ್‌‌ಗಳನ್ನು ಸಲ್ಲಿಸಿದೆ.

ಈ ಪ್ರಕರಣದಲ್ಲಿ 251 ವಯಸ್ಕರನ್ನು ಬಂಧಿಸಲಾಗಿದ್ದು, 15 ಬಾಲಾಪರಾಧಿಗಳನ್ನು ಬಂಧಿಸಲಾಗಿದೆ. ಬಂಧಿತರಲ್ಲಿ, ಘಟನೆಯಲ್ಲಿ ಪ್ರಮುಖ ಪಾತ್ರ ವಹಿಸಿದ 75 ಮಂದಿ ಇನ್ನೂ ಜೈಲುಗಳಲ್ಲಿ ಇದ್ದಾರೆ. ಈ ಪ್ರಕರಣದಲ್ಲಿ ವಾಂಟೆಡ್ ಆರೋಪಿಗಳೆಂದು ಹೆಸರಿಸಲಾದ ಇನ್ನೂ 52 ಜನರನ್ನು ಸಿಐಡಿ ಹುಡುಕುತ್ತಿದೆ.

ಇದನ್ನೂ ಓದಿ: Fact check: ಪಾಲ್ಘರ್ ಗುಂಪು ಹತ್ಯೆಯ ಬಗ್ಗೆ ಸುಳ್ಳು ವರದಿ ಮಾಡಿದ ಪಿಟಿಐ

ಘಟನೆಯ ನಡೆದ ಕೂಡಲೇ ಸಾಮಾಜಿಕ ಜಾಲತಾಣದಲ್ಲಿ ಕೋಮು ಬಣ್ಣ ಹಚ್ಚಲಾಗಿತ್ತು. ಬಿಜೆಪಿ ಸೇರಿದಂತೆ ಕೆಲವು ಮಾಧ್ಯಮಗಳು ಕೂಡಾ ಘಟನೆಗೆ ಕೋಮು ಆಯಾಮ ನೀಡಲು ಪ್ರಯತ್ನಿಸಿತ್ತು. ಆದರೆ ಸಿಐಡಿ ಇದು ಕೋಮು ಆಧಾರಿತ ಹತ್ಯೆ ಅಲ್ಲ ಎಂದು ಹೇಳಿದೆ.

ಘಟನೆ ನಡೆದ ಕೂಡಲೇ ಮಹಾರಾಷ್ಟ್ರದ ವಿರೋಧ ಪಕ್ಷದ ನಾಯಕ ದೇವೇಂದ್ರ ಫಡ್ನವೀಸ್ ಮತ್ತು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಈ ಘಟನೆ ಕುರಿತು ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಿದ್ದರು. ಕಳೆದ ವರ್ಷ ಲಾಕ್ ಡೌನ್ ಸಮಯದಲ್ಲಿ ನಡೆದ ಘಟನೆಯ ಬಗ್ಗೆ ಬಿಜೆಪಿಯು “ಕೋಮು ರಾಜಕೀಯ” ಮಾಡುತ್ತಿದೆ ಎಂದು ಮಹಾ ವಿಕಾಸ್ ಅಘಾಡಿ ಸರ್ಕಾರ ಆರೋಪಿಸಿತ್ತು.

ಕಳೆದ ವರ್ಷ ಏಪ್ರಿಲ್ 16 ರಂದು ಸಾಧು ಮಹಂತ್ ಕಲ್ಪವೃಕ್ಷ ಗಿರಿ (70) ಸುಶಿಲ್‌‌ ಗಿರಿ ಮಹಾರಾಜ್ (35) ಮತ್ತು ಅವರ ಚಾಲಕ ನಿಲೇಶ್ ತೆಲ್ಗಡೆ (30) ಅವರು ವಾಹನವೊಂದರಲ್ಲಿ ಮುಂಬೈಯಿಂದ ಸೂರತ್‌ಗೆ ಪ್ರಯಾಣಿಸುತ್ತಿದ್ದರು. ಆದರೆ ಮಹಾರಾಷ್ಟ್ರದ ಬುಡಕಟ್ಟು ಪ್ರಾಬಲ್ಯದ ಪಾಲ್ಘರ್ ಜಿಲ್ಲೆಯ ದಹನು ತಾಲ್ಲೂಕಿನಲ್ಲಿನ ಪ್ರದೇಶವೊಂದರಲ್ಲಿ ಜನರು ಮಕ್ಕಳ ಕಳ್ಳರು ಎಂದು ಅವರನ್ನು ಹೊಡೆದು ಕೊಂದಿದ್ದಾರೆ. ಈ ಪ್ರದೇಶದಲ್ಲಿ ಹಲವು ದಿನಗಳಿಂದ ಮಕ್ಕಳ ಕಳ್ಳರು ಮತ್ತು ಅಂಗಾಂಗ ಮಾರಾಟ ಮಾಡುವವರು ಸುತ್ತಾಡುತ್ತಿದ್ದಾರೆ ಎಂದು ವಾಟ್ಸಪ್‌ ಮೂಲಕ ವದಂತಿಗಳು ಹರಡಿತ್ತು.

ಇದನ್ನೂ ಓದಿ: ಪಾಲ್ಘರ್‌ ಘಟನೆಗೆ ಕೋಮು ಆಯಾಮವಿಲ್ಲ: ಮುಖ್ಯಮಂತ್ರಿ ಉದ್ದವ್ ಠಾಕ್ರೆ ಸ್ಪಷ್ಟನೆ

ಮೊದಲಿಗೆ ಜನರಿಂದ ಸಂತ್ರಸ್ತರನ್ನು ಪೊಲೀಸರು ರಕ್ಷಿಸಿದ್ದರು. ಆದರೆ 300 ರಿಂದ 400 ರಷ್ಟಿದ್ದ ಜನರ ಗುಂಪು ಪೊಲೀಸ್ ವಾಹನದಿಂದ ಅವರನ್ನು ಎಳೆದು ಹಾಕಿ ಹತ್ಯೆ ಮಾಡಿದೆ. ಒಬ್ಬ ಪೋಲಿಸ್ ವಯಸ್ಸಾದ ಸಾಧುವನ್ನು ತ್ಯಜಿಸಿ ಪಲಾಯನ ಮಾಡುವ ವಿಡಿಯೊಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು.

ಅಂತಿಮವಾಗಿ ಪಾಲ್ಘರ್ ಎಸ್ಪಿ ಗೌರವ್ ಸಿಂಗ್ ಅವರನ್ನು ಕಡ್ಡಾಯ ರಜೆ ಮೇಲೆ ಕಳುಹಿಸಲಾಯಿತು. ಐವರು ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿತ್ತು. ಅಲ್ಲದೆ, ಸ್ಥಳೀಯ ಪೊಲೀಸ್ ಠಾಣೆಯ 35 ಅಧಿಕಾರಿಗಳನ್ನು ವರ್ಗಾಯಿಸಲಾಗಿತ್ತು.

ಘಟನೆ ನಡೆದ ನಾಲ್ಕು ದಿನಗಳ ನಂತರ ಈ ಪ್ರಕರಣವನ್ನು ಎಡಿಜಿ ಅತುಲ್‌ಚಂದ್ರ ಕುಲಕರ್ಣಿ ನೇತೃತ್ವದ ರಾಜ್ಯ ಸಿಐಡಿಗೆ ಹಸ್ತಾಂತರಿಸಲಾಯಿತು. ಅವರ ಮೇಲ್ವಿಚಾರಣೆಯಲ್ಲಿ ಮೂರು ಎಫ್‌ಐಆರ್‌ಗಳನ್ನು ನೋಂದಾಯಿಸಲಾಗಿದೆ. ಮೊದಲ ಎರಡು ಎಫ್‌ಐಆರ್‌ಗಳನ್ನು ಸಾಧುಗಳ ಹತ್ಯೆಗೆ ಸಂಬಂಧಿಸಿದ್ದಾಗಿದ್ದು, ಮೂರನೆಯದು ಸ್ಥಳಕ್ಕೆ ತಲುಪಿದ ಪೊಲೀಸ್ ತಂಡದ ಮೇಲೆ ಕಲ್ಲು ತೂರಾಟಕ್ಕೆ ಸಂಬಂಧಿಸಿದೆ.

ಇದನ್ನೂ ಓದಿ: ನನ್ನ ಮೇಲೆ ಗುಂಪು ಹಲ್ಲೆಯಾದಾಗ ನೀವೇಕೆ ಮಾತಾಡಲಿಲ್ಲ?: ಸ್ವಾಮಿ ಅಗ್ನಿವೇಶ್ ಪ್ರಶ್ನೆ

ಕಳೆದ ಜುಲೈನಲ್ಲಿ ಸಿಐಡಿ 126 ಆರೋಪಿಗಳ ವಿರುದ್ಧ ಮೊದಲ ಎರಡು ಎಫ್‌ಐಆರ್‌ಗಳಲ್ಲಿ ಎರಡು ಚಾರ್ಜ್‌ಶೀಟ್‌ಗಳನ್ನು ಸಲ್ಲಿಸಿತ್ತು. ಕಳೆದ ಅಕ್ಟೋಬರ್‌ನಲ್ಲಿ ಇನ್ನೂ 75 ಜನರನ್ನು ಬಂಧಿಸಲಾಗಿದ್ದು, ಇನ್ನೂ ಎರಡು ಚಾರ್ಜ್‌ಶೀಟ್‌ಗಳನ್ನು ಸಲ್ಲಿಸಲಾಗಿದೆ, ಅದರ ನಂತರ ಕಳೆದ ಡಿಸೆಂಬರ್‌ನಲ್ಲಿ ಬಂಧಿಸಲ್ಪಟ್ಟ 22 ಜನರ ವಿರುದ್ಧ ಮೂರನೇ ಪೂರಕ ಚಾರ್ಜ್‌ಶೀಟ್ ದಾಖಲಿಸಲಾಗಿದೆ.

ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ಈ ಆರು ಚಾರ್ಜ್‌ಶೀಟ್‌ಗಳ ಹೊರತಾಗಿ, ಪೊಲೀಸರಿಗೆ ತಮ್ಮ ಕರ್ತವ್ಯ ನಿರ್ವಹಿಸದಂತೆ ಅಡ್ಡಿಯುಂಟು ಮಾಡಿದ ಮತ್ತು ಅವರ ಕೊಲೆ ಯತ್ನ ಮಾಡಿದ ಆರೋಪದ ಮೇಲೆ ಪೊಲೀಸ್ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದವರ ವಿರುದ್ಧ ಕಳೆದ ಆಗಸ್ಟ್‌ನಲ್ಲಿ ಮತ್ತೊಂದು ಚಾರ್ಜ್‌ಶೀಟ್ ದಾಖಲಿಸಲಾಗಿತ್ತು.

ಘಟನೆಯ ನಂತರ, ವಿಶೇಷವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಘಟನೆಯು ಕೋಮು ಆಧಾರಿತ ಹಿಂಸಾಚಾರ ಎಂದು ಹೇಳಿ ಹರಿಯಬಿಡಲಾಗಿತ್ತು. ಘಟನೆಯ ಬಗ್ಗೆ ಸರಿಯಾಗಿ ತನಿಖೆ ನಡೆಸುತ್ತಿಲ್ಲ ಎಂದು ಬಿಜೆಪಿ ಆರೋಪಿಸಿತ್ತು ಮತ್ತು ಕೇಂದ್ರ ಏಜೆನ್ಸಿಗಳು ತನಿಖೆ ನಡೆಸಬೇಕೆಂದು ಒತ್ತಾಯಿಸಿತ್ತು. ಆದರೆ, ಈ ಎಲ್ಲಾ ಆರೋಪಗಳು ಸುಳ್ಳು ಎಂದು ಆಗ ಮಹಾರಾಷ್ಟ್ರದ ಗೃಹ ಸಚಿವರಾಗಿದ್ದ ಅನಿಲ್ ದೇಶ್ಮುಖ್ ಅವರು ಮೃತಪಟ್ಟವರು ಮತ್ತು ಆರೋಪಿಗಳು ಒಂದೇ ಧರ್ಮಕ್ಕೆ ಸೇರಿದವರು ಎಂದು ಬಂಧಿತ ಆರೋಪಿಗಳ ಹೆಸರನ್ನು ಟ್ವಿಟರ್‌ನಲ್ಲಿ ಬಿಡುಗಡೆ ಮಾಡಿದ್ದರು.

ಇದನ್ನೂ ಓದಿ: ಪಾಲ್ಘರ್ ಘಟನೆ: 101 ಬಂಧಿತರಲ್ಲಿ ಒಬ್ಬರೂ ಮುಸ್ಲಿಮರಿಲ್ಲ – ಗೃಹಸಚಿವರ ಸ್ಪಷ್ಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...