Homeಮುಖಪುಟಹತ್ರಾಸ್ ದಲಿತ ಯುವತಿಯ ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆಗೆ 1 ವರ್ಷ - ಸಂಪೂರ್ಣ...

ಹತ್ರಾಸ್ ದಲಿತ ಯುವತಿಯ ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆಗೆ 1 ವರ್ಷ – ಸಂಪೂರ್ಣ ವಿವರ

ಅಕ್ಟೋಬರ್ 4 ರಂದು ಬಿಜೆಪಿಯ ಮಾಜಿ ಶಾಸಕರಾದ ರಾಜವೀರ್ ಸಿಂಗ್ ಪೆಹೆಲ್ವಾನ್ ಆರೋಪಿಗಳನ್ನು ಬೆಂಬಲಿಸಿ ರ್‍ಯಾಲಿ ನಡೆಸಿದ್ದರು

- Advertisement -
- Advertisement -

ಸರಿಯಾಗಿ ಒಂದು ವರ್ಷದ ಹಿಂದೆ 14 ಸೆಪ್ಟೆಂಬರ್ 2020 ರಂದು ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ, 19 ವರ್ಷದ ದಲಿತ ಯುವತಿಯ ಮೇಲೆ ನಾಲ್ವರು ಮೇಲ್ಜಾತಿಯ ಯುವಕರು ಸಾಮೂಹಿಕ ಅತ್ಯಾಚಾರ ಎಸಗಿ, ಮಾರಣಾತಿಂಕ ಹಲ್ಲೆ ನಡೆಸಿದ್ದರು. ಇದಾಗಿ ಎರಡು ವಾರಗಳ ನಂತರ ಯುವತಿ ದೆಹಲಿಯ ಆಸ್ಪತ್ರೆಯಲ್ಲಿ ನಿಧನರಾದರು. ಈ ಬಗ್ಗೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರು ಮಂಗಳವಾರ ಪ್ರತಿಕ್ರಿಯಿಸಿದ್ದು, ಸಂತ್ರಸ್ತೆಗೆ ನ್ಯಾಯದಾನ ವಿಳಂಬವಾಗುತ್ತಿರುವುದಕ್ಕೆ ಕಳವಳ ವ್ಯಕ್ತಪಡಿಸಿದ್ದಾರೆ.

ಘಟನೆ ನಡೆದು ಸರಿಯಾಗಿ ಒಂದು ವರ್ಷವಾಗಿದೆ, ಆದರೆ ಉತ್ತರ ಪ್ರದೇಶ ಸರ್ಕಾರವು ಕುಟುಂಬಕ್ಕೆ ನ್ಯಾಯ ಮತ್ತು ಭದ್ರತೆ ನೀಡುವ ಬದಲಾಗಿ ಜೀವ ಬೆದರಿಕೆಗಳನ್ನು ಹಾಕಿತು ಎಂದು ಪ್ರಿಯಾಂಕಾ ಗಾಂಧಿ ತಮ್ಮ ಟ್ವೀಟ್‌ನಲ್ಲಿ ತಿಳಿಸಿದ್ದಾರೆ. ಗೌರವಯುತವಾದ ಶವ ಸಂಸ್ಕಾರದ ಹಕ್ಕನ್ನೂ ಹೆತ್ತವರಿಂದ ಕಸಿದುಕೊಂಡ ಸರ್ಕಾರ, ಇಡೀ ರಾಜ್ಯದ ಆಡಳಿತ ಯಂತ್ರವನ್ನು ಬಳಸಿಕೊಂಡು ಯುವತಿಯ ಘನತೆಗೆ ಅಪಪ್ರಚಾರ ಮಾಡಿ ಚಾರಿತ್ಯ್ರ ಹರಣ ಮಾಡಿತ್ತು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಹತ್ರಾಸ್ ಪ್ರಕರಣ: ಸಂತ್ರಸ್ತ ಕುಟುಂಬ ಮತ್ತು ವಕೀಲರಿಗೆ ನ್ಯಾಯಾಲಯದಲ್ಲೇ ಬೆದರಿಕೆ!

“ಮಹಿಳೆಯರ ವಿರುದ್ಧದ ಅಪರಾಧಗಳ ಬಗ್ಗೆ ಇಂತಹ ಕೆಟ್ಟ ನಿಲುವು ತೆಗೆದುಕೊಂಡ ಸರ್ಕಾರದ ಮುಖ್ಯಸ್ಥರಿಂದ ಸೂಕ್ಷ್ಮತೆಯನ್ನು ನೀವು ಹೇಗೆ ನಿರೀಕ್ಷಿಸುತ್ತೀರಿ? ಅದೇನೇ ಇರಲಿ, ಯುಪಿಯ ಮುಖ್ಯಮಂತ್ರಿ ಮಹಿಳಾ ವಿರೋಧಿ ಚಿಂತನೆಯ ನಾಯಕ. ಅವರು ‘ಮಹಿಳೆಯರು ಸ್ವತಂತ್ರವಾಗಿರಬಾರದು’ ಎಂದು ಹೇಳಿಕೊಂಡಿದ್ದಾರೆ” ಎಂದು ಪ್ರಿಯಾಂಕ ಗಾಂಧಿ ಟ್ವೀಟ್‌ನಲ್ಲಿ ಬರೆದಿದ್ದಾರೆ.

ಪ್ರಕರಣವು ಮೊದಲಿಗೆ, ಒಬ್ಬ ಆರೋಪಿಯು ಯುವತಿಯನ್ನು ಕೊಲ್ಲಲು ಪ್ರಯತ್ನಿಸಿದನೆಂದು ವರದಿಯಾಗಿತ್ತು. ಆದರೆ, ತನ್ನ ಮೇಲೆ ಅತ್ಯಾಚಾರ ನಡೆದಿದೆ ಎಂದು ಯುವತಿ ಮ್ಯಾಜಿಸ್ಟ್ರೇಟಿಗೆ ನೀಡಿದ ಹೇಳಿಕೆಯ ನಂತರ ಸಾಮೂಹಿಕ ಅತ್ಯಾಚಾರದ ಬಗ್ಗೆ ತಿಳಿದು ಬಂದಿತ್ತು. ಜೊತೆಗೆ ಸಂತ್ರಸ್ತ ಯುವತಿಯೆ ತನ್ನ ಮೇಲೆ ಅತ್ಯಾಚಾರ ಮಾಡಿದ ನಾಲ್ವರು ಆರೋಪಿಗಳನ್ನು ಹೆಸರಿಸಿದ್ದರು. ಅಷ್ಟೆ ಅಲ್ಲದೆ ಯುವತಿಯ ಮೃತದೇಹವನ್ನು ಅವರ ಕುಟುಂಬದ ಒಪ್ಪಿಗೆಯಿಲ್ಲದೆ ಪೊಲೀಸರು ಬಲವಂತವಾಗಿ ರಾತ್ರೋರಾತ್ರಿ ಸುಟ್ಟು ಹಾಕಿದ್ದರು.

ಹತ್ರಾಸ್ ದಲಿತ ಯುವತಿಯ ಸಾಮೂಹಿತ ಅತ್ಯಾಚಾರ ಮತ್ತು ಹತ್ಯೆ ಘಟನೆ? ಯಾಕೆ ದೇಶದಾದ್ಯಂತ ಗಮನಸೆಳೆಯಿತು?

2020 ರ ಸೆಪ್ಟೆಂಬರ್ 14 ರಂದು ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ, 19 ವರ್ಷದ ದಲಿತ ಯುವತಿ ಜಾನುವಾರಿಗೆ ಮೇವು ಸಂಗ್ರಹಿಸಲು ಹೊಲಕ್ಕೆ ಹೋದಾಗ ಈ ಘಟನೆ ನಡೆದಿದೆ. ರಾಜ್ಯದ ಮೇಲ್ಜಾತಿಯಾದ ಠಾಕೂರ್‌ ಸಮುದಾಯಕ್ಕೆ ಸೇರಿದ ಸಂದೀಪ್, ರಾಮು, ಲವ್ಕುಶ್ ಮತ್ತು ರವಿ ಎಂಬ ನಾಲ್ವರು ಯುವತಿಯ ಕುತ್ತಿಗೆಗೆ ದುಪ್ಪಟ್ಟಾ ಹಾಕಿ ಎಳೆದೊಯ್ದಿದ್ದಾರೆ. ಇದರಿಂದಾಗಿ ಯುವತಿಯ ಬೆನ್ನು ಹುರಿಗೆ ಗಾಯವಾಗಿತ್ತು. ನಂತರ ಸಾಮೂಹಿಕ ಅತ್ಯಾಚಾರ ನಡೆಸಿದ್ದ ದುಷ್ಕರ್ಮಿಗಳು, ಅತ್ಯಾಚಾರ ಯತ್ನವನ್ನು ವಿರೋಧಿಸಿದ ಕಾರಣ ಯುವತಿಯ ಕತ್ತು ಹಿಸುಕಿದ್ದರು, ಈ ವೇಳೆ ಯುವತಿ ನಾಲಿಗೆ ಕತ್ತರಿಸಲ್ಪಟ್ಟಿತ್ತು.

ಇದನ್ನೂ ಓದಿ:  ಹತ್ರಾಸ್‌ ಅತ್ಯಾಚಾರ-ಕೊಲೆ ಪ್ರಕರಣದ ವಿಚಾರಣೆ ನಡೆಸುತ್ತಿದ್ದ ಮ್ಯಾಜಿಸ್ಟ್ರೇಟ್ ವರ್ಗಾವಣೆ!

ಈ ವೇಳೆ ಯುವತಿಯ ಕೂಗು ಕೇಳಿ ಹೊಲಕ್ಕೆ ಬಂದಿದ್ದ ತಾಯಿ ಮೊದಲಿಗೆ ಚಾಂದ್‌ ಪಾ ಪೊಲೀಸ್ ಠಾಣೆಗೆ ಕರೆದೊಯ್ದಿದ್ದರು. ಆದರೆ ಅಲ್ಲಿ ಪೊಲೀಸರು ಅವರ ದೂರನ್ನು ಪಡೆಯದೆ, ಅವರನ್ನು ಅವಮಾನಿಸಿದ್ದರು. ಇದಾಗಿ ಸುಮಾರು ಆರು ದಿನಗಳ ನಂತರ ಅಂದರೆ ಸೆಪ್ಟೆಂಬರ್ 20 ರಂದು ಪೊಲೀಸರು ದೂರು ದಾಖಲಿಸಿದ್ದರು. ಸೆಪ್ಟೆಂಬರ್‌ 22 ರಂದು ಸಂತ್ರಸ್ತೆಯ ಹೇಳಿಕೆಯನ್ನು ದಾಖಲಿಸಿದ್ದರು. ಯುವತಿ ಹೇಳಿಕೆ ನೀಡಿ, ತನ್ನ ಮೇಲೆ ಅತ್ಯಾಚಾರ ನಡೆದಿರುವುದು ಮತ್ತು ಅದನ್ನು ವಿರೋಧಿಸಿದ್ದಕ್ಕೆ ಕತ್ತು ಹಿಸುಕಿರುವುದನ್ನು ಉಲ್ಲೇಖಿಸಿದ್ದರು.

ಘಟನೆ ನಡೆದ ದಿನದಂದು ಯುವತಿಯನ್ನು ಅಲಿಗಡದ ಜವಾಹರಲಾಲ್ ನೆಹರು ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರ ಸ್ಥಿತಿ ಹದಗೆಟ್ಟ ನಂತರ ದೆಹಲಿಯ ಸಫ್ದರ್‌ಜಂಗ್ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಆದರೆ ಅಲ್ಲಿ ಅವರು ಚಿಕಿತ್ಸೆ ಫಲಾಕಾರಿಯಾಗದೆ 2020 ರ ಸೆಪ್ಟೆಂಬರ್ 29 ರಂದು ನಿಧನರಾದರು.

ಶವಪರೀಕ್ಷೆಯ ವರದಿಯಲ್ಲಿ, ‘ಗಟ್ಟಿಯಾದ ವಸ್ತುವಿನಿಂದ ಕುತ್ತಿಗೆಯ ಬಳಿಯ ಬೆನ್ನುಮೂಳೆಗೆ ಬಲವಾದ ಏಟು’ ಬಿದ್ದಿದ್ದರಿಂದ ಸಾವಾಗಿದೆ ಎಂದು ದಾಖಲಾಗಿತ್ತು. ಆದರೆ ವೈದ್ಯಕೀಯ ದಾಖಲೆ, “ಅತ್ಯಾಚಾರ ಮತ್ತು ಕತ್ತು ಹಿಸುಕುವಿಕೆ” ಸಾವಿಗೆ ಕಾರಣ ಎಂದು ಉಲ್ಲೇಖಿಸಿತ್ತು.

ಇದನ್ನೂ ಓದಿ: ಹತ್ರಾಸ್: ಸಾಮೂಹಿಕ ಅತ್ಯಾಚಾರ ನಡೆಸಿ, ಕೊಲೆಗೈದಿದ್ದಾರೆ ಎಂದು ಸಿಬಿಐ ಚಾರ್ಜ್‌ಶೀಟ್‌ – ವಕೀಲರ ಹೇಳಿಕೆ

ಸರ್ಕಾರ, ಬಿಜೆಪಿ ಮತ್ತು ಮೇಲ್ಜಾತಿ ಸಂಘಟನೆಗಳು ನಡೆದುಕೊಂಡ ಬಗ್ಗೆ

ದಲಿಯ ಯುವತಿಯ ಅತ್ಯಾಚಾರ ನಡೆದಿದೆ ಎಂದು ತಿಳಿದ ನಂತರವು, ಆಡಳಿತವು ತನಿಖೆ ವಿಳಂಬ ಮಾಡಿರುವ ಬಗ್ಗೆ ದೇಶದಾದ್ಯಂತ ವ್ಯಾಪಕ ಟೀಕೆ ವ್ಯಕ್ತವಾಗಿತ್ತು. ಅಷ್ಟೆ ಅಲ್ಲದೆ ಮೃತಪಟ್ಟ ನಂತರ ಯುವತಿಯ ಮೃತದೇಹವನ್ನು ದೆಹಲಿಯಿಂದ ರಾತ್ರೋರಾತ್ರಿ ತಂದು ಹೆತ್ತವರ ಅನುಮತಿಯಿಲ್ಲದೆ ಪೊಲೀಸರು ಬಲವಂತವಾಗಿ ಸುಟ್ಟು ಹಾಕಿದ್ದರು. ಇದು ಕೂಡಾ ದೇಶದಾದ್ಯಂತ ಭಾರಿ ಆಕ್ರೋಶಕ್ಕೆ ಕಾರಣವಾಗಿತ್ತು.

ಇಷ್ಟೆ ಅಲ್ಲದೆ ಯುವತಿಯ ಕುಟುಂಬವನ್ನು ಸಂದರ್ಶಿಸಲು ಕೂಡಾ ಯಾರಿಗೆ ಅನುಮತಿ ನೀಡಿರಲಿಲ್ಲ. ಅವರ ಮನೆಯ ಸುತ್ತ ಬಿಗಿ ಬಂದೋಬಸ್ತ್‌ ಮಾಡಲಾಗಿತ್ತು. ಘಟನೆಯನ್ನು ವರದಿ ಮಾಡಲು ಹೊರಟ ಪತ್ರಕರ್ತರನ್ನೂ ಯುಎಪಿಎ ಅಂತಹ ಕರಾಳ ಕಾನೂನಿನ ಅಡಿಯಲ್ಲಿ ಬಂಧಿಸಲಾಗಿತ್ತು. ಜೊತೆಗೆ ಕುಟುಂಬವನ್ನು ಬೆದರಿಸುವ ತಂತ್ರವನ್ನೂ ಸರ್ಕಾರ ಮಾಡಿತ್ತು.

ಅತ್ಯಾಚಾರ ಆರೋಪಿಗಳನ್ನು ಬೆಂಬಲಿಸಿ ನಡೆಸಿದ ರ್‍ಯಾಲಿಯಲ್ಲಿ ಬಿಜೆಪಿ ಸೇರಿದಂತೆ ಬಲಪಂಥೀಯ ಸಂಘಟನೆಗಳ ಸದಸ್ಯರು ಭಾಗಿ!

ಈ ಎಲ್ಲದರ ಮಧ್ಯೆ “ರಾಷ್ಟ್ರೀಯ ಸವರ್ಣ ಪರಿಷತ್” ಎಂಬ ಸಂಘಟನೆ ಆರೋಪಿಗಳ ಬೆಂಬಲಕ್ಕೆ ನಿಂತಿತ್ತು. ಅಕ್ಟೋಬರ್ 4 ರಂದು ಬಿಜೆಪಿಯ ಮಾಜಿ ಶಾಸಕರಾದ ರಾಜವೀರ್ ಸಿಂಗ್ ಪೆಹೆಲ್ವಾನ್ ಆರೋಪಿಗಳನ್ನು ಬೆಂಬಲಿಸಿ ರ್‍ಯಾಲಿ ನಡೆಸಿದ್ದರು. ಈ ರ್‍ಯಾಲಿಯಲ್ಲಿ ನಾಲ್ವರು ಆರೋಪಿಗಳ ಕುಟುಂಬ ಸದಸ್ಯರು ಸೇರಿದಂತೆ ನೂರಾರು ಜನರು ಭಾಗವಹಿಸಿದ್ದರು. ಜೊತೆಗೆ ಈ ಸಭೆಯಲ್ಲಿ ಆರ್‌ಎಸ್‌ಎಸ್, ಕರ್ಣಿ ಸೇನೆ ಮತ್ತು ಬಜರಂಗದಳದಂತಹ ಬಲಪಂಥೀಯ ಸಂಘಟನೆಗಳ ಸದಸ್ಯರು ಭಾಗವಹಿಸಿದ್ದರು. ಈ ಸದಸ್ಯರು ಕ್ಷತ್ರಿಯ ಮಹಾಸಭಾ, ರಾಷ್ಟ್ರೀಯ ಸವರ್ಣ ಸಂಘಟನೆ ಮುಂತಾದವುಗಳನ್ನು ಒಳಗೊಂಡಂತೆ ವಿವಿಧ ಮೇಲ್ಜಾತಿಯ ಸಂಘಟನೆಗಳ ಭಾಗವಾಗಿದ್ದರು.

ತನಿಖೆಯ ಎಲ್ಲಿವರೆಗೆ ಆಗಿವೆ?

2020 ಡಿಸೆಂಬರ್ 19 ರಂದು, ಸಿಬಿಐ ಹತ್ರಾಸ್‌ನ ವಿಶೇಷ ನ್ಯಾಯಾಲಯದಲ್ಲಿ ಚಾರ್ಜ್‌ಶೀಟ್ ಅನ್ನು ಸಲ್ಲಿಸಿದೆ. ನಾಲ್ಕು ಆರೋಪಿಗಳ ವಿರುದ್ಧ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯ ಅಡಿಯಲ್ಲಿ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಆರೋಪಗಳನ್ನು ಹೊರಿಸಲಾಗಿದೆ. ಸಂತ್ರಸ್ತೆಯ ಹೇಳಿಕೆಯನ್ನು ಲಿಖಿತವಾಗಿ ದಾಖಲಿಸುವುದರಲ್ಲಿ ತೋರಿದ ವಿಳಂಬ ಮತ್ತು ಯುವತಿಯ ವೈದ್ಯಕೀಯ ಪರೀಕ್ಷೆಯಲ್ಲಿ ಯುಪಿ ಪೊಲೀಸರ ಲೋಪದೋಷಗಳನ್ನೂ ಸಿಬಿಐ ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಿದೆ.

ಹತ್ರಾಸ್‌ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಎಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: ಭಯದಲ್ಲಿ ಬದುಕುತ್ತಿದೆ ಹತ್ರಾಸ್ ಸಂತ್ರಸ್ತೆ ಕುಟುಂಬ: PUCL ಸತ್ಯಶೋಧನಾ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...