Homeಮುಖಪುಟಹತ್ರಾಸ್ ದಲಿತ ಯುವತಿಯ ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆಗೆ 1 ವರ್ಷ - ಸಂಪೂರ್ಣ...

ಹತ್ರಾಸ್ ದಲಿತ ಯುವತಿಯ ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆಗೆ 1 ವರ್ಷ – ಸಂಪೂರ್ಣ ವಿವರ

ಅಕ್ಟೋಬರ್ 4 ರಂದು ಬಿಜೆಪಿಯ ಮಾಜಿ ಶಾಸಕರಾದ ರಾಜವೀರ್ ಸಿಂಗ್ ಪೆಹೆಲ್ವಾನ್ ಆರೋಪಿಗಳನ್ನು ಬೆಂಬಲಿಸಿ ರ್‍ಯಾಲಿ ನಡೆಸಿದ್ದರು

- Advertisement -
- Advertisement -

ಸರಿಯಾಗಿ ಒಂದು ವರ್ಷದ ಹಿಂದೆ 14 ಸೆಪ್ಟೆಂಬರ್ 2020 ರಂದು ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ, 19 ವರ್ಷದ ದಲಿತ ಯುವತಿಯ ಮೇಲೆ ನಾಲ್ವರು ಮೇಲ್ಜಾತಿಯ ಯುವಕರು ಸಾಮೂಹಿಕ ಅತ್ಯಾಚಾರ ಎಸಗಿ, ಮಾರಣಾತಿಂಕ ಹಲ್ಲೆ ನಡೆಸಿದ್ದರು. ಇದಾಗಿ ಎರಡು ವಾರಗಳ ನಂತರ ಯುವತಿ ದೆಹಲಿಯ ಆಸ್ಪತ್ರೆಯಲ್ಲಿ ನಿಧನರಾದರು. ಈ ಬಗ್ಗೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರು ಮಂಗಳವಾರ ಪ್ರತಿಕ್ರಿಯಿಸಿದ್ದು, ಸಂತ್ರಸ್ತೆಗೆ ನ್ಯಾಯದಾನ ವಿಳಂಬವಾಗುತ್ತಿರುವುದಕ್ಕೆ ಕಳವಳ ವ್ಯಕ್ತಪಡಿಸಿದ್ದಾರೆ.

ಘಟನೆ ನಡೆದು ಸರಿಯಾಗಿ ಒಂದು ವರ್ಷವಾಗಿದೆ, ಆದರೆ ಉತ್ತರ ಪ್ರದೇಶ ಸರ್ಕಾರವು ಕುಟುಂಬಕ್ಕೆ ನ್ಯಾಯ ಮತ್ತು ಭದ್ರತೆ ನೀಡುವ ಬದಲಾಗಿ ಜೀವ ಬೆದರಿಕೆಗಳನ್ನು ಹಾಕಿತು ಎಂದು ಪ್ರಿಯಾಂಕಾ ಗಾಂಧಿ ತಮ್ಮ ಟ್ವೀಟ್‌ನಲ್ಲಿ ತಿಳಿಸಿದ್ದಾರೆ. ಗೌರವಯುತವಾದ ಶವ ಸಂಸ್ಕಾರದ ಹಕ್ಕನ್ನೂ ಹೆತ್ತವರಿಂದ ಕಸಿದುಕೊಂಡ ಸರ್ಕಾರ, ಇಡೀ ರಾಜ್ಯದ ಆಡಳಿತ ಯಂತ್ರವನ್ನು ಬಳಸಿಕೊಂಡು ಯುವತಿಯ ಘನತೆಗೆ ಅಪಪ್ರಚಾರ ಮಾಡಿ ಚಾರಿತ್ಯ್ರ ಹರಣ ಮಾಡಿತ್ತು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಹತ್ರಾಸ್ ಪ್ರಕರಣ: ಸಂತ್ರಸ್ತ ಕುಟುಂಬ ಮತ್ತು ವಕೀಲರಿಗೆ ನ್ಯಾಯಾಲಯದಲ್ಲೇ ಬೆದರಿಕೆ!

“ಮಹಿಳೆಯರ ವಿರುದ್ಧದ ಅಪರಾಧಗಳ ಬಗ್ಗೆ ಇಂತಹ ಕೆಟ್ಟ ನಿಲುವು ತೆಗೆದುಕೊಂಡ ಸರ್ಕಾರದ ಮುಖ್ಯಸ್ಥರಿಂದ ಸೂಕ್ಷ್ಮತೆಯನ್ನು ನೀವು ಹೇಗೆ ನಿರೀಕ್ಷಿಸುತ್ತೀರಿ? ಅದೇನೇ ಇರಲಿ, ಯುಪಿಯ ಮುಖ್ಯಮಂತ್ರಿ ಮಹಿಳಾ ವಿರೋಧಿ ಚಿಂತನೆಯ ನಾಯಕ. ಅವರು ‘ಮಹಿಳೆಯರು ಸ್ವತಂತ್ರವಾಗಿರಬಾರದು’ ಎಂದು ಹೇಳಿಕೊಂಡಿದ್ದಾರೆ” ಎಂದು ಪ್ರಿಯಾಂಕ ಗಾಂಧಿ ಟ್ವೀಟ್‌ನಲ್ಲಿ ಬರೆದಿದ್ದಾರೆ.

ಪ್ರಕರಣವು ಮೊದಲಿಗೆ, ಒಬ್ಬ ಆರೋಪಿಯು ಯುವತಿಯನ್ನು ಕೊಲ್ಲಲು ಪ್ರಯತ್ನಿಸಿದನೆಂದು ವರದಿಯಾಗಿತ್ತು. ಆದರೆ, ತನ್ನ ಮೇಲೆ ಅತ್ಯಾಚಾರ ನಡೆದಿದೆ ಎಂದು ಯುವತಿ ಮ್ಯಾಜಿಸ್ಟ್ರೇಟಿಗೆ ನೀಡಿದ ಹೇಳಿಕೆಯ ನಂತರ ಸಾಮೂಹಿಕ ಅತ್ಯಾಚಾರದ ಬಗ್ಗೆ ತಿಳಿದು ಬಂದಿತ್ತು. ಜೊತೆಗೆ ಸಂತ್ರಸ್ತ ಯುವತಿಯೆ ತನ್ನ ಮೇಲೆ ಅತ್ಯಾಚಾರ ಮಾಡಿದ ನಾಲ್ವರು ಆರೋಪಿಗಳನ್ನು ಹೆಸರಿಸಿದ್ದರು. ಅಷ್ಟೆ ಅಲ್ಲದೆ ಯುವತಿಯ ಮೃತದೇಹವನ್ನು ಅವರ ಕುಟುಂಬದ ಒಪ್ಪಿಗೆಯಿಲ್ಲದೆ ಪೊಲೀಸರು ಬಲವಂತವಾಗಿ ರಾತ್ರೋರಾತ್ರಿ ಸುಟ್ಟು ಹಾಕಿದ್ದರು.

ಹತ್ರಾಸ್ ದಲಿತ ಯುವತಿಯ ಸಾಮೂಹಿತ ಅತ್ಯಾಚಾರ ಮತ್ತು ಹತ್ಯೆ ಘಟನೆ? ಯಾಕೆ ದೇಶದಾದ್ಯಂತ ಗಮನಸೆಳೆಯಿತು?

2020 ರ ಸೆಪ್ಟೆಂಬರ್ 14 ರಂದು ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ, 19 ವರ್ಷದ ದಲಿತ ಯುವತಿ ಜಾನುವಾರಿಗೆ ಮೇವು ಸಂಗ್ರಹಿಸಲು ಹೊಲಕ್ಕೆ ಹೋದಾಗ ಈ ಘಟನೆ ನಡೆದಿದೆ. ರಾಜ್ಯದ ಮೇಲ್ಜಾತಿಯಾದ ಠಾಕೂರ್‌ ಸಮುದಾಯಕ್ಕೆ ಸೇರಿದ ಸಂದೀಪ್, ರಾಮು, ಲವ್ಕುಶ್ ಮತ್ತು ರವಿ ಎಂಬ ನಾಲ್ವರು ಯುವತಿಯ ಕುತ್ತಿಗೆಗೆ ದುಪ್ಪಟ್ಟಾ ಹಾಕಿ ಎಳೆದೊಯ್ದಿದ್ದಾರೆ. ಇದರಿಂದಾಗಿ ಯುವತಿಯ ಬೆನ್ನು ಹುರಿಗೆ ಗಾಯವಾಗಿತ್ತು. ನಂತರ ಸಾಮೂಹಿಕ ಅತ್ಯಾಚಾರ ನಡೆಸಿದ್ದ ದುಷ್ಕರ್ಮಿಗಳು, ಅತ್ಯಾಚಾರ ಯತ್ನವನ್ನು ವಿರೋಧಿಸಿದ ಕಾರಣ ಯುವತಿಯ ಕತ್ತು ಹಿಸುಕಿದ್ದರು, ಈ ವೇಳೆ ಯುವತಿ ನಾಲಿಗೆ ಕತ್ತರಿಸಲ್ಪಟ್ಟಿತ್ತು.

ಇದನ್ನೂ ಓದಿ:  ಹತ್ರಾಸ್‌ ಅತ್ಯಾಚಾರ-ಕೊಲೆ ಪ್ರಕರಣದ ವಿಚಾರಣೆ ನಡೆಸುತ್ತಿದ್ದ ಮ್ಯಾಜಿಸ್ಟ್ರೇಟ್ ವರ್ಗಾವಣೆ!

ಈ ವೇಳೆ ಯುವತಿಯ ಕೂಗು ಕೇಳಿ ಹೊಲಕ್ಕೆ ಬಂದಿದ್ದ ತಾಯಿ ಮೊದಲಿಗೆ ಚಾಂದ್‌ ಪಾ ಪೊಲೀಸ್ ಠಾಣೆಗೆ ಕರೆದೊಯ್ದಿದ್ದರು. ಆದರೆ ಅಲ್ಲಿ ಪೊಲೀಸರು ಅವರ ದೂರನ್ನು ಪಡೆಯದೆ, ಅವರನ್ನು ಅವಮಾನಿಸಿದ್ದರು. ಇದಾಗಿ ಸುಮಾರು ಆರು ದಿನಗಳ ನಂತರ ಅಂದರೆ ಸೆಪ್ಟೆಂಬರ್ 20 ರಂದು ಪೊಲೀಸರು ದೂರು ದಾಖಲಿಸಿದ್ದರು. ಸೆಪ್ಟೆಂಬರ್‌ 22 ರಂದು ಸಂತ್ರಸ್ತೆಯ ಹೇಳಿಕೆಯನ್ನು ದಾಖಲಿಸಿದ್ದರು. ಯುವತಿ ಹೇಳಿಕೆ ನೀಡಿ, ತನ್ನ ಮೇಲೆ ಅತ್ಯಾಚಾರ ನಡೆದಿರುವುದು ಮತ್ತು ಅದನ್ನು ವಿರೋಧಿಸಿದ್ದಕ್ಕೆ ಕತ್ತು ಹಿಸುಕಿರುವುದನ್ನು ಉಲ್ಲೇಖಿಸಿದ್ದರು.

ಘಟನೆ ನಡೆದ ದಿನದಂದು ಯುವತಿಯನ್ನು ಅಲಿಗಡದ ಜವಾಹರಲಾಲ್ ನೆಹರು ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರ ಸ್ಥಿತಿ ಹದಗೆಟ್ಟ ನಂತರ ದೆಹಲಿಯ ಸಫ್ದರ್‌ಜಂಗ್ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಆದರೆ ಅಲ್ಲಿ ಅವರು ಚಿಕಿತ್ಸೆ ಫಲಾಕಾರಿಯಾಗದೆ 2020 ರ ಸೆಪ್ಟೆಂಬರ್ 29 ರಂದು ನಿಧನರಾದರು.

ಶವಪರೀಕ್ಷೆಯ ವರದಿಯಲ್ಲಿ, ‘ಗಟ್ಟಿಯಾದ ವಸ್ತುವಿನಿಂದ ಕುತ್ತಿಗೆಯ ಬಳಿಯ ಬೆನ್ನುಮೂಳೆಗೆ ಬಲವಾದ ಏಟು’ ಬಿದ್ದಿದ್ದರಿಂದ ಸಾವಾಗಿದೆ ಎಂದು ದಾಖಲಾಗಿತ್ತು. ಆದರೆ ವೈದ್ಯಕೀಯ ದಾಖಲೆ, “ಅತ್ಯಾಚಾರ ಮತ್ತು ಕತ್ತು ಹಿಸುಕುವಿಕೆ” ಸಾವಿಗೆ ಕಾರಣ ಎಂದು ಉಲ್ಲೇಖಿಸಿತ್ತು.

ಇದನ್ನೂ ಓದಿ: ಹತ್ರಾಸ್: ಸಾಮೂಹಿಕ ಅತ್ಯಾಚಾರ ನಡೆಸಿ, ಕೊಲೆಗೈದಿದ್ದಾರೆ ಎಂದು ಸಿಬಿಐ ಚಾರ್ಜ್‌ಶೀಟ್‌ – ವಕೀಲರ ಹೇಳಿಕೆ

ಸರ್ಕಾರ, ಬಿಜೆಪಿ ಮತ್ತು ಮೇಲ್ಜಾತಿ ಸಂಘಟನೆಗಳು ನಡೆದುಕೊಂಡ ಬಗ್ಗೆ

ದಲಿಯ ಯುವತಿಯ ಅತ್ಯಾಚಾರ ನಡೆದಿದೆ ಎಂದು ತಿಳಿದ ನಂತರವು, ಆಡಳಿತವು ತನಿಖೆ ವಿಳಂಬ ಮಾಡಿರುವ ಬಗ್ಗೆ ದೇಶದಾದ್ಯಂತ ವ್ಯಾಪಕ ಟೀಕೆ ವ್ಯಕ್ತವಾಗಿತ್ತು. ಅಷ್ಟೆ ಅಲ್ಲದೆ ಮೃತಪಟ್ಟ ನಂತರ ಯುವತಿಯ ಮೃತದೇಹವನ್ನು ದೆಹಲಿಯಿಂದ ರಾತ್ರೋರಾತ್ರಿ ತಂದು ಹೆತ್ತವರ ಅನುಮತಿಯಿಲ್ಲದೆ ಪೊಲೀಸರು ಬಲವಂತವಾಗಿ ಸುಟ್ಟು ಹಾಕಿದ್ದರು. ಇದು ಕೂಡಾ ದೇಶದಾದ್ಯಂತ ಭಾರಿ ಆಕ್ರೋಶಕ್ಕೆ ಕಾರಣವಾಗಿತ್ತು.

ಇಷ್ಟೆ ಅಲ್ಲದೆ ಯುವತಿಯ ಕುಟುಂಬವನ್ನು ಸಂದರ್ಶಿಸಲು ಕೂಡಾ ಯಾರಿಗೆ ಅನುಮತಿ ನೀಡಿರಲಿಲ್ಲ. ಅವರ ಮನೆಯ ಸುತ್ತ ಬಿಗಿ ಬಂದೋಬಸ್ತ್‌ ಮಾಡಲಾಗಿತ್ತು. ಘಟನೆಯನ್ನು ವರದಿ ಮಾಡಲು ಹೊರಟ ಪತ್ರಕರ್ತರನ್ನೂ ಯುಎಪಿಎ ಅಂತಹ ಕರಾಳ ಕಾನೂನಿನ ಅಡಿಯಲ್ಲಿ ಬಂಧಿಸಲಾಗಿತ್ತು. ಜೊತೆಗೆ ಕುಟುಂಬವನ್ನು ಬೆದರಿಸುವ ತಂತ್ರವನ್ನೂ ಸರ್ಕಾರ ಮಾಡಿತ್ತು.

ಅತ್ಯಾಚಾರ ಆರೋಪಿಗಳನ್ನು ಬೆಂಬಲಿಸಿ ನಡೆಸಿದ ರ್‍ಯಾಲಿಯಲ್ಲಿ ಬಿಜೆಪಿ ಸೇರಿದಂತೆ ಬಲಪಂಥೀಯ ಸಂಘಟನೆಗಳ ಸದಸ್ಯರು ಭಾಗಿ!

ಈ ಎಲ್ಲದರ ಮಧ್ಯೆ “ರಾಷ್ಟ್ರೀಯ ಸವರ್ಣ ಪರಿಷತ್” ಎಂಬ ಸಂಘಟನೆ ಆರೋಪಿಗಳ ಬೆಂಬಲಕ್ಕೆ ನಿಂತಿತ್ತು. ಅಕ್ಟೋಬರ್ 4 ರಂದು ಬಿಜೆಪಿಯ ಮಾಜಿ ಶಾಸಕರಾದ ರಾಜವೀರ್ ಸಿಂಗ್ ಪೆಹೆಲ್ವಾನ್ ಆರೋಪಿಗಳನ್ನು ಬೆಂಬಲಿಸಿ ರ್‍ಯಾಲಿ ನಡೆಸಿದ್ದರು. ಈ ರ್‍ಯಾಲಿಯಲ್ಲಿ ನಾಲ್ವರು ಆರೋಪಿಗಳ ಕುಟುಂಬ ಸದಸ್ಯರು ಸೇರಿದಂತೆ ನೂರಾರು ಜನರು ಭಾಗವಹಿಸಿದ್ದರು. ಜೊತೆಗೆ ಈ ಸಭೆಯಲ್ಲಿ ಆರ್‌ಎಸ್‌ಎಸ್, ಕರ್ಣಿ ಸೇನೆ ಮತ್ತು ಬಜರಂಗದಳದಂತಹ ಬಲಪಂಥೀಯ ಸಂಘಟನೆಗಳ ಸದಸ್ಯರು ಭಾಗವಹಿಸಿದ್ದರು. ಈ ಸದಸ್ಯರು ಕ್ಷತ್ರಿಯ ಮಹಾಸಭಾ, ರಾಷ್ಟ್ರೀಯ ಸವರ್ಣ ಸಂಘಟನೆ ಮುಂತಾದವುಗಳನ್ನು ಒಳಗೊಂಡಂತೆ ವಿವಿಧ ಮೇಲ್ಜಾತಿಯ ಸಂಘಟನೆಗಳ ಭಾಗವಾಗಿದ್ದರು.

ತನಿಖೆಯ ಎಲ್ಲಿವರೆಗೆ ಆಗಿವೆ?

2020 ಡಿಸೆಂಬರ್ 19 ರಂದು, ಸಿಬಿಐ ಹತ್ರಾಸ್‌ನ ವಿಶೇಷ ನ್ಯಾಯಾಲಯದಲ್ಲಿ ಚಾರ್ಜ್‌ಶೀಟ್ ಅನ್ನು ಸಲ್ಲಿಸಿದೆ. ನಾಲ್ಕು ಆರೋಪಿಗಳ ವಿರುದ್ಧ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯ ಅಡಿಯಲ್ಲಿ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಆರೋಪಗಳನ್ನು ಹೊರಿಸಲಾಗಿದೆ. ಸಂತ್ರಸ್ತೆಯ ಹೇಳಿಕೆಯನ್ನು ಲಿಖಿತವಾಗಿ ದಾಖಲಿಸುವುದರಲ್ಲಿ ತೋರಿದ ವಿಳಂಬ ಮತ್ತು ಯುವತಿಯ ವೈದ್ಯಕೀಯ ಪರೀಕ್ಷೆಯಲ್ಲಿ ಯುಪಿ ಪೊಲೀಸರ ಲೋಪದೋಷಗಳನ್ನೂ ಸಿಬಿಐ ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಿದೆ.

ಹತ್ರಾಸ್‌ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಎಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: ಭಯದಲ್ಲಿ ಬದುಕುತ್ತಿದೆ ಹತ್ರಾಸ್ ಸಂತ್ರಸ್ತೆ ಕುಟುಂಬ: PUCL ಸತ್ಯಶೋಧನಾ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...