Homeಮುಖಪುಟಇಸ್ರೇಲ್-ಹಮಾಸ್ ಸಂಘರ್ಷಕ್ಕೆ 1 ವರ್ಷ | ಲೆಬನಾನ್, ಯೆಮನ್‌, ಇರಾನ್‌ಗೆ ವಿಸ್ತರಿಸಿದ ಆಕ್ರಮಣ : ಯುದ್ದೋನ್ಮಾದಕ್ಕೆ...

ಇಸ್ರೇಲ್-ಹಮಾಸ್ ಸಂಘರ್ಷಕ್ಕೆ 1 ವರ್ಷ | ಲೆಬನಾನ್, ಯೆಮನ್‌, ಇರಾನ್‌ಗೆ ವಿಸ್ತರಿಸಿದ ಆಕ್ರಮಣ : ಯುದ್ದೋನ್ಮಾದಕ್ಕೆ 45 ಸಾವಿರ ಜನರು ಬಲಿ

- Advertisement -
- Advertisement -

ಇಸ್ರೇಲ್-ಹಮಾಸ್ ನಡುವಿನ ಸಂಘರ್ಷ ಪ್ರಾರಂಭಗೊಂಡು ಇಂದಿಗೆ (ಅ.7, 2024) ಒಂದು ವರ್ಷ ಪೂರ್ಣಗೊಂಡಿದೆ. ಹಲವು ವರ್ಷಗಳಿಂದ ಈ ಎರಡು ಗುಂಪುಗಳ ನಡುವೆ ಕಲಹ ಇದ್ದರೂ, ಎಡೆಬಿಡದ ಆಕ್ರಮಣ ಶುರುವಾಗಿ ಒಂದು ವರ್ಷವಾಗಿದೆ.

ಇಸ್ರೇಲ್ ಮತ್ತು ಹಮಾಸ್ ನಡುವಿನ ಸುದೀರ್ಘ ಸಮಯದ ಸಂಘರ್ಷದ ಮುಂದುವರೆದ ಭಾಗವಾಗಿ ಅಕ್ಟೋಬರ್ 7,2023ರಂದು ಪ್ಯಾಲೆಸ್ತೀನ್‌ನ ಗಾಝಾದ ಆಡಳಿತ ನೋಡಿಕೊಳ್ಳುತ್ತಿರುವ ಹಮಾಸ್ ಸಶಸ್ತ್ರ ಗುಂಪು ಇಸ್ರೇಲ್‌ ರಾಜಧಾನಿ ಟೆಲ್ ಅವೀವ್ ಮೇಲೆ ಏಕಾಏಕಿ ದಾಳಿ ನಡೆಸಿತ್ತು.

ಗಾಝಾದಿಂದ ರಾಕೆಟ್ ದಾಳಿ, ಪ್ಯಾರಚೂಟ್ ಮೂಲಕ ಇಸ್ರೇಲ್ ಭೂಪ್ರದೇಶಕ್ಕೆ ತೆರಳಿ ಗುಂಡಿನ ದಾಳಿ ಮತ್ತು ಇಸ್ರೇಲ್-ಗಾಝಾ ಗಡಿ ಬೇಲಿಯನ್ನು ದಾಟಿ ಒಳನುಗ್ಗಿ ಹಮಾಸ್ ದಾಳಿ ನಡೆಸಿತ್ತು. ಪರಿಣಾಮ 815 ನಾಗರಿಕರು, ವಿದೇಶಿಯರು ಸೇರಿದಂತೆ ಇಸ್ರೇಲ್‌ನಲ್ಲಿ 1,139 ಜನರು ಸಾವನ್ನಪ್ಪಿದ್ದರು. ನೂರಾರು ಮಂದಿ ಗಾಯಗೊಂಡಿದ್ದರು. ಸುಮಾರು 251 ಜನರನ್ನು ಹಮಾಸ್ ಗಾಝಾಗೆ ಕರೆದಕೊಂಡು ಬಂದು ಒತ್ತೆಯಾಳಾಗಿಟ್ಟುಕೊಂಡಿತ್ತು.

ಪದೇ ಪದೇ ನಡೆಯುತ್ತಿರುವ ಇಸ್ರೇಲ್ ಆಕ್ರಮಣಕ್ಕೆ ಪ್ರತೀಕಾರವಾಗಿ ಮತ್ತು ಇಸ್ರೇಲ್‌ನಲ್ಲಿ ಬಂಧಿಯಾಗಿರುವ ಪ್ಯಾಲೆಸ್ತೀನಿಗರ ಬಿಡುಗಡೆಗಾಗಿ ದಾಳಿ ನಡೆಸಿ, ಅಲ್ಲಿನ ಜನರನ್ನು ಒತ್ತೆಯಾಳಾಗಿಟ್ಟುಕೊಂಡಿದ್ದೇವೆ ಎಂದು ಹಮಾಸ್ ಹೇಳಿತ್ತು.

ಹಮಾಸ್ ದಾಳಿಯಿಂದ ಕುಪಿತಗೊಂಡ ಇಸ್ರೇಲ್, ಅಕ್ಟೋಬರ್ 8ರಂದು ಹಮಾಸ್ ಜೊತೆ ಯುದ್ದ ಘೋಷಣೆ ಮಾಡಿತ್ತು. ಅಂದಿನಿಂದ ಇಸ್ರೇಲ್ ಗಾಝಾ ಮೇಲೆ ದಾಳಿ ನಡೆಸುತ್ತಲೇ ಇದೆ. ಪರಿಣಾಮ ಇದುವರೆಗೆ ಗಾಝಾದ 41,870 ಜನರು ಸಾವನ್ನಪ್ಪಿದ್ದಾರೆ. 97,166 ಜನರು ಗಾಯಗೊಂಡಿದ್ದಾರೆ.

ಹಮಾಸ್‌ನ ಒಂದು ದಿನದ ದಾಳಿಗೆ ಪ್ರತೀಕಾರವಾಗಿ ಒಂದು ವರ್ಷದಿಂದ ಗಾಝಾ ಮೇಲೆ ಆಕ್ರಮಣ ನಡೆಸುತ್ತಿರುವ ಇಸ್ರೇಲ್‌, ಗಾಝಾದ ಆಸ್ಪತ್ರೆ, ಶಾಲೆ, ಸರ್ಕಾರಿ ಕಚೇರಿಗಳು, ಮಸೀದಿ, ಮನೆಗಳು ಸೇರಿದಂತೆ ಎಲ್ಲವನ್ನೂ ನಾಶ ಮಾಡಿದೆ. ಜನರು ಅನ್ನ, ನೀರಿಗಾಗಿ ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ವರದಿಗಳ ಪ್ರಕಾರ, ಸಾವಿರಾರು ಜನರು ಅಪೌಷ್ಠಿಕತೆಯಿಂದ ಬಳಲುತ್ತಿದ್ದಾರೆ. ಗಾಝಾದ ಅಮಾಯಕ ನಾಗರಿಕರು ತಮ್ಮ ಸ್ವಂತ ನೆಲದಲ್ಲಿ ಬದುಕುವ ಹಕ್ಕನ್ನು ಕಳೆದುಕೊಂಡಿದ್ದಾರೆ.

ವರ್ಷದ ಕಳೆದರೂ ಗಾಝಾ ಮೇಲಿನ ಇಸ್ರೇಲ್ ದಾಳಿ ನಿಂತಿಲ್ಲ. ಇತ್ತೀಚಿನ, ಅಂದರೆ ಭಾನುವಾರ (ಅ.6, 2024) ದಂದು ಗಾಝಾದ ಶಾಲೆ ಮತ್ತು ಮಸೀದಿಯನ್ನು ಗುರಿಯಾಗಿಸಿ ಇಸ್ರೇಲ್ ನಡೆಸಿದ ದಾಳಿಯಲ್ಲಿ 26 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ಲೆಬನಾನ್‌-ಯೆಮನ್‌ಗೆ ವಿಸ್ತರಣೆಗೊಂಡ ಆಕ್ರಮಣ

ಕದನ ವಿರಾಮಕ್ಕಾಗಿ ವಿಶ್ವಸಂಸ್ಥೆಯಲ್ಲಿ ಕೈಗೊಂಡ ಹಲವು ನಿರ್ಣಯಗಳು, ಕತಾರ್, ಯುಎಸ್‌ಎ ಮತ್ತು ಜೋರ್ಡಾನ್ ಮಧ್ಯಸ್ಥಿಕೆಯಲ್ಲಿ ನಡೆದ ಶಾಂತಿ ಮಾತುಕತೆಗಳು, ಅಂತಾರಾಷ್ಟ್ರೀಯ ನ್ಯಾಯಾಲಯದ ಆದೇಶ ಮತ್ತು ಹಲವು ರಾಷ್ಟ್ರಗಳ ಒತ್ತಡದ ನಡುವೆಯೂ ಇಸ್ರೇಲ್ ಗಾಝಾ ಮೇಲಿನ ತನ್ನ ದಾಳಿಯನ್ನು ಮುಂದುವರೆಸಿದೆ. ಜೊತೆಗೆ ತನ್ನ ಆಕ್ರಮಣವನ್ನು ಲೆಬನಾನ್‌, ಯೆಮನ್‌ಗೆ ವಿಸ್ತರಿಸಿದೆ.

ಹಮಾಸ್-ಇಸ್ರೇಲ್‌ನಂತೆಯೇ ಹಲವು ವರ್ಷಗಳಿಂದ ನಡೆಯುತ್ತಿರುವ ಹೆಜ್ಬುಲ್ಲಾ-ಇಸ್ರೇಲ್ ಸಂಘರ್ಷ ಉಲ್ಬಣಗೊಂಡಿದೆ. ಗಾಝಾ ಮೇಲಿನ ಆಕ್ರಮಣದ ನಡುವೆಯೇ ಲೆಬನಾನ್‌ನ ಮೇಲೆ ಗಡಿಯ ಹೊರಗಿನಿಂದ ಇಸ್ರೇಲ್ ಹಲವು ಸಣ್ಣಪುಟ್ಟ ದಾಳಿಗಳನ್ನು ನಡೆಸುತ್ತಿತ್ತು. ಆದರೆ, 2024ರ ಸೆಪ್ಟೆಂಬರ್ 17 ಮತ್ತು 18 ರಂದು ಲೆಬನಾನ್‌ನ ಸಾವಿರಾರು ಜನರ ಮೊಬೈಲ್‌ನ ಹ್ಯಾಂಡ್‌ ಹೆಲ್ಡ್ ಪೇಜರ್ ಮತ್ತು ವಾಕಿ-ಟಾಕಿಗಳನ್ನು ಇಸ್ರೇಲ್ ಸ್ಪೋಟಗೊಳಿಸಿತ್ತು. ಈ ಘಟನೆಯಲ್ಲಿ 42 ಜನರು ಸಾವನ್ನಪ್ಪಿದ್ದರು ಮತ್ತು ನಾಗರಿಕರು ಸೇರಿದಂತೆ ಕನಿಷ್ಠ 3, 500 ಜನರು ಗಾಯಗೊಂಡಿದ್ದರು.

ಆ ಬಳಿಕ ಇಸ್ರೇಲ್ ಮತ್ತು ಹೆಜ್ಬುಲ್ಲಾ ನಡುವಿನ ಸಂಘರ್ಷ ತೀವ್ರಗೊಂಡಿದೆ. ಇಸ್ರೇಲ್ ಹೆಜ್ಬುಲ್ಲಾದ ಪರಮೋನ್ನತ ನಾಯಕ ಹಸ್ಸನ್ ನಸ್ರಲ್ಲಾ, ಹೆಜ್ಬುಲ್ಲಾದ ಸೌತ್ ಫ್ರಂಟ್‌ನ ಕಮಾಂಡರ್ ಅಲಿ ಕರ್ಕಿ, ನಸ್ರಲ್ಲಾ ಅವರ ಭದ್ರತಾ ಘಟಕದ ಮುಖ್ಯಸ್ಥ ಇಬ್ರಾಹಿಂ ಹುಸೇನ್ ಜಾಜಿನಿ, ನಸ್ರಲ್ಲಾ ಅವರ ದೀರ್ಘಾವಧಿಯ ವಿಶ್ವಾಸಾರ್ಹ ಜೊತೆಗಾರ ಮತ್ತು ಹೆಜ್ಬುಲ್ಲಾ ಚಟುವಟಿಕೆಗಳ ಸಲಹೆಗಾರ ಸಮೀರ್ ತೌಫಿಕ್ ದಿಬ್, ಹೆಜ್ಬುಲ್ಲಾದ ಫೋರ್ಸ್-ಬಿಲ್ಡ್ ಅಪ್ ಮುಖ್ಯಸ್ಥ ಅಬೇದ್ ಅಲ್-ಅಮೀರ್ ಮುಹಮ್ಮದ್ ಸಬ್ಲಿನಿ, ಹೆಜ್ಬುಲ್ಲಾದ ಫೈರ್‌ಪವರ್ ಅನ್ನು ಸಂಘಟಿಸುವ ಜವಾಬ್ದಾರಿ ಹೊತ್ತಿದ್ದ ಅಲಿ ನಾಫ್ ಅಯೌಬ್ ಅವರನ್ನು ಹತ್ಯೆ ಮಾಡಿದೆ.

ಇತ್ತೀಚಿನ, ಅಂದರೆ ಭಾನುವಾರ (ಅ.6) ಲೆಬನಾನ್ ರಾಜಧಾನಿ ಬೈರುತ್‌ನ ಆಗ್ನೇಯದಲ್ಲಿರುವ ಕಮಾತಿಯೆಹ್ ಪಟ್ಟಣದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ ಮೂವರು ಮಕ್ಕಳು ಸೇರಿದಂತೆ ಆರು ಜನರು ಸಾವನ್ನಪ್ಪಿದ್ದಾರೆ ಎಂದು ಲೆಬನಾನ್‌ನ ಆರೋಗ್ಯ ಸಚಿವಾಲಯ ತಿಳಿಸಿದೆ. ಇದಕ್ಕೆ ಪ್ರತೀಕಾರವಾಗಿ ಸೋಮವಾರ ಬೆಳಗ್ಗೆ ಇಸ್ರೇಲ್‌ನ ಹೈಫಾ ಮೇಲೆ ಹೆಜ್ಬುಲ್ಲಾ ದಾಳಿ ನಡೆಸಿದೆ.

ಹೆಜ್ಬುಲ್ಲಾ- ಇಸ್ರೇಲ್ ಸಂಘರ್ಷದ ನಡುವೆ ಸೆಪ್ಟೆಂಬರ್ 29ರಂದು ಇಸ್ರೇಲಿ ವಾಯುಪಡೆಯು ಯೆಮೆನ್‌ನ ಬಂದರು ನಗರಗಳಾದ ಹುದೈದ ಮತ್ತು ರಾಸ್ ಇಸಾದಲ್ಲಿನ ವಿದ್ಯುತ್ ಸ್ಥಾವರ ಮತ್ತು ಬಂದರನ್ನು ಗುರಿಯಾಗಿಸಿ ನಡೆಸಿದ ದಾಳಿಯಲ್ಲಿ ಕನಿಷ್ಠ ನಾಲ್ವರು ಸಾವನ್ನಪ್ಪಿದ್ದಾರೆ.

ಇರಾನ್ -ಇಸ್ರೇಲ್ ಸಂಘರ್ಷ

ಹಮಾಸ್- ಇಸ್ರೇಲ್, ಹೆಜ್ಬುಲ್ಲಾ-ಇಸ್ರೇಲ್ ಮತ್ತು ಯೆಮನ್‌ನ ಹೌತಿ-ಇಸ್ರೇಲ್ ನಡುವಿನ ಸಂಘರ್ಷಕ್ಕೆ ಈಗ ಇರಾನ್ ಎಂಟ್ರಿಯಾಗಿದೆ. ಹೆಜ್ಬುಲ್ಲಾ ನಾಯಕ ಹಸ್ಸನ್ ನಸ್ರಲ್ಲಾ ಹತ್ಯೆಗೆ ಪ್ರತೀಕಾರವಾಗಿ ಇಸ್ರೇಲ್‌ನ ಟೆಲ್ ಅವೀವ್ ನಗರ ಮೇಲೆ ಸೆಪ್ಟೆಂಬರ್ 1ರಂದು ಇರಾನ್ ಸುಮಾರು 200ರಷ್ಟು ಕ್ಷಿಪಣಿಗಳನ್ನು ಹಾರಿ ಬಿಟ್ಟಿದೆ. ಈ ಘಟನೆಯ ಸಾವು-ನೋವುಗಳ ಬಗ್ಗೆ ಇಸ್ರೇಲ್ ಸರಿಯಾದ ಮಾಹಿತಿ ಬಿಟ್ಟುಕೊಟ್ಟಿಲ್ಲ. ಆದರೆ, ನಾವು ಇಸ್ರೇಲ್ ಪ್ರಮುಖ ವಾಯುನೆಲೆ ಮೇಲೆ ದಾಳಿ ನಡೆಸಿದ್ದೇವೆ ಎಂದು ಇರಾನ್ ಹೇಳಿಕೊಂಡಿದೆ.

ಒಟ್ಟಿನಲ್ಲಿ ಕಳೆದ ಒಂದು ವರ್ಷದ ಅವಧಿಯಲ್ಲಿ ನಡೆದ, ಈಗಲೂ ಮುಂದುವರೆಯುತ್ತಿರುವ ಇಸ್ರೇಲ್, ಹಮಾಸ್, ಹೆಜ್ಬುಲ್ಲಾ, ಹೌತಿ ಮತ್ತು ಇರಾನ್ ನಡುವಿನ ದಾಳಿ-ಪ್ರತಿ ದಾಳಿಗಳಲ್ಲಿ ಸಾವನ್ನಪ್ಪಿದವರ ಸಂಖ್ಯೆ ಅಂದಾಜು 45 ಸಾವಿರ ತಲುಪಿದೆ.

ಎಲ್ಲಾ ಗುಂಪುಗಳ ಪ್ರತಿಷ್ಠೆ, ಯುದ್ದೋನ್ಮಾದ, ಅಮೆರಿಕ-ರಷ್ಯಾದಂತಹ ಪ್ರಬಲ ರಾಷ್ಟ್ರಗಳ ಸಶ್ತ್ರಾಸ್ತ್ರ ವ್ಯಾಪಾರಕ್ಕೆ ಸಾವಿರಾರು ಜನರು ಜೀವ ಕಳೆದಕೊಂಡರು, ತಮ್ಮ ಸ್ವಂತ ನಾಡಿನಲ್ಲಿ ಬದುಕುವ ಹಕ್ಕು ಕಳೆದುಕೊಂಡರು, ಆಹಾರ-ನೀರು, ವಸತಿ-ಬಟ್ಟೆಯಂತಹ ಮೂಲಭೂತ ಸೌಲಭ್ಯಗಳಿಂದ ವಂಚಿತರಾದರು. ಸುಂದರ ನಗರಗಳು, ಆಸ್ಪತ್ರೆ, ಶಾಲೆ, ಮಸೀದಿ, ಚರ್ಚ್‌ಗಳು, ಸರ್ಕಾರಿ ಕಚೇರಿಗಳು ನಾಶವಾದವು. ಕೊನೆಗೆ ಯುದ್ಧದಿಂದ ಗಳಿಸಿದ್ದಿಷ್ಟೆ.

ಇದನ್ನೂ ಓದಿ : ಚೆನ್ನೈ: ವಾಯುಪಡೆ ಏರ್‌ಶೋ ಅವಘಡ; ಬಿಸಿಲಿನ ಝಳಕ್ಕೆ ಐವರು ಪ್ರೇಕ್ಷಕರು ಸಾವು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...