Homeಮುಖಪುಟಇಸ್ರೇಲ್-ಹಮಾಸ್ ಸಂಘರ್ಷಕ್ಕೆ 1 ವರ್ಷ | ಲೆಬನಾನ್, ಯೆಮನ್‌, ಇರಾನ್‌ಗೆ ವಿಸ್ತರಿಸಿದ ಆಕ್ರಮಣ : ಯುದ್ದೋನ್ಮಾದಕ್ಕೆ...

ಇಸ್ರೇಲ್-ಹಮಾಸ್ ಸಂಘರ್ಷಕ್ಕೆ 1 ವರ್ಷ | ಲೆಬನಾನ್, ಯೆಮನ್‌, ಇರಾನ್‌ಗೆ ವಿಸ್ತರಿಸಿದ ಆಕ್ರಮಣ : ಯುದ್ದೋನ್ಮಾದಕ್ಕೆ 45 ಸಾವಿರ ಜನರು ಬಲಿ

- Advertisement -
- Advertisement -

ಇಸ್ರೇಲ್-ಹಮಾಸ್ ನಡುವಿನ ಸಂಘರ್ಷ ಪ್ರಾರಂಭಗೊಂಡು ಇಂದಿಗೆ (ಅ.7, 2024) ಒಂದು ವರ್ಷ ಪೂರ್ಣಗೊಂಡಿದೆ. ಹಲವು ವರ್ಷಗಳಿಂದ ಈ ಎರಡು ಗುಂಪುಗಳ ನಡುವೆ ಕಲಹ ಇದ್ದರೂ, ಎಡೆಬಿಡದ ಆಕ್ರಮಣ ಶುರುವಾಗಿ ಒಂದು ವರ್ಷವಾಗಿದೆ.

ಇಸ್ರೇಲ್ ಮತ್ತು ಹಮಾಸ್ ನಡುವಿನ ಸುದೀರ್ಘ ಸಮಯದ ಸಂಘರ್ಷದ ಮುಂದುವರೆದ ಭಾಗವಾಗಿ ಅಕ್ಟೋಬರ್ 7,2023ರಂದು ಪ್ಯಾಲೆಸ್ತೀನ್‌ನ ಗಾಝಾದ ಆಡಳಿತ ನೋಡಿಕೊಳ್ಳುತ್ತಿರುವ ಹಮಾಸ್ ಸಶಸ್ತ್ರ ಗುಂಪು ಇಸ್ರೇಲ್‌ ರಾಜಧಾನಿ ಟೆಲ್ ಅವೀವ್ ಮೇಲೆ ಏಕಾಏಕಿ ದಾಳಿ ನಡೆಸಿತ್ತು.

ಗಾಝಾದಿಂದ ರಾಕೆಟ್ ದಾಳಿ, ಪ್ಯಾರಚೂಟ್ ಮೂಲಕ ಇಸ್ರೇಲ್ ಭೂಪ್ರದೇಶಕ್ಕೆ ತೆರಳಿ ಗುಂಡಿನ ದಾಳಿ ಮತ್ತು ಇಸ್ರೇಲ್-ಗಾಝಾ ಗಡಿ ಬೇಲಿಯನ್ನು ದಾಟಿ ಒಳನುಗ್ಗಿ ಹಮಾಸ್ ದಾಳಿ ನಡೆಸಿತ್ತು. ಪರಿಣಾಮ 815 ನಾಗರಿಕರು, ವಿದೇಶಿಯರು ಸೇರಿದಂತೆ ಇಸ್ರೇಲ್‌ನಲ್ಲಿ 1,139 ಜನರು ಸಾವನ್ನಪ್ಪಿದ್ದರು. ನೂರಾರು ಮಂದಿ ಗಾಯಗೊಂಡಿದ್ದರು. ಸುಮಾರು 251 ಜನರನ್ನು ಹಮಾಸ್ ಗಾಝಾಗೆ ಕರೆದಕೊಂಡು ಬಂದು ಒತ್ತೆಯಾಳಾಗಿಟ್ಟುಕೊಂಡಿತ್ತು.

ಪದೇ ಪದೇ ನಡೆಯುತ್ತಿರುವ ಇಸ್ರೇಲ್ ಆಕ್ರಮಣಕ್ಕೆ ಪ್ರತೀಕಾರವಾಗಿ ಮತ್ತು ಇಸ್ರೇಲ್‌ನಲ್ಲಿ ಬಂಧಿಯಾಗಿರುವ ಪ್ಯಾಲೆಸ್ತೀನಿಗರ ಬಿಡುಗಡೆಗಾಗಿ ದಾಳಿ ನಡೆಸಿ, ಅಲ್ಲಿನ ಜನರನ್ನು ಒತ್ತೆಯಾಳಾಗಿಟ್ಟುಕೊಂಡಿದ್ದೇವೆ ಎಂದು ಹಮಾಸ್ ಹೇಳಿತ್ತು.

ಹಮಾಸ್ ದಾಳಿಯಿಂದ ಕುಪಿತಗೊಂಡ ಇಸ್ರೇಲ್, ಅಕ್ಟೋಬರ್ 8ರಂದು ಹಮಾಸ್ ಜೊತೆ ಯುದ್ದ ಘೋಷಣೆ ಮಾಡಿತ್ತು. ಅಂದಿನಿಂದ ಇಸ್ರೇಲ್ ಗಾಝಾ ಮೇಲೆ ದಾಳಿ ನಡೆಸುತ್ತಲೇ ಇದೆ. ಪರಿಣಾಮ ಇದುವರೆಗೆ ಗಾಝಾದ 41,870 ಜನರು ಸಾವನ್ನಪ್ಪಿದ್ದಾರೆ. 97,166 ಜನರು ಗಾಯಗೊಂಡಿದ್ದಾರೆ.

ಹಮಾಸ್‌ನ ಒಂದು ದಿನದ ದಾಳಿಗೆ ಪ್ರತೀಕಾರವಾಗಿ ಒಂದು ವರ್ಷದಿಂದ ಗಾಝಾ ಮೇಲೆ ಆಕ್ರಮಣ ನಡೆಸುತ್ತಿರುವ ಇಸ್ರೇಲ್‌, ಗಾಝಾದ ಆಸ್ಪತ್ರೆ, ಶಾಲೆ, ಸರ್ಕಾರಿ ಕಚೇರಿಗಳು, ಮಸೀದಿ, ಮನೆಗಳು ಸೇರಿದಂತೆ ಎಲ್ಲವನ್ನೂ ನಾಶ ಮಾಡಿದೆ. ಜನರು ಅನ್ನ, ನೀರಿಗಾಗಿ ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ವರದಿಗಳ ಪ್ರಕಾರ, ಸಾವಿರಾರು ಜನರು ಅಪೌಷ್ಠಿಕತೆಯಿಂದ ಬಳಲುತ್ತಿದ್ದಾರೆ. ಗಾಝಾದ ಅಮಾಯಕ ನಾಗರಿಕರು ತಮ್ಮ ಸ್ವಂತ ನೆಲದಲ್ಲಿ ಬದುಕುವ ಹಕ್ಕನ್ನು ಕಳೆದುಕೊಂಡಿದ್ದಾರೆ.

ವರ್ಷದ ಕಳೆದರೂ ಗಾಝಾ ಮೇಲಿನ ಇಸ್ರೇಲ್ ದಾಳಿ ನಿಂತಿಲ್ಲ. ಇತ್ತೀಚಿನ, ಅಂದರೆ ಭಾನುವಾರ (ಅ.6, 2024) ದಂದು ಗಾಝಾದ ಶಾಲೆ ಮತ್ತು ಮಸೀದಿಯನ್ನು ಗುರಿಯಾಗಿಸಿ ಇಸ್ರೇಲ್ ನಡೆಸಿದ ದಾಳಿಯಲ್ಲಿ 26 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ಲೆಬನಾನ್‌-ಯೆಮನ್‌ಗೆ ವಿಸ್ತರಣೆಗೊಂಡ ಆಕ್ರಮಣ

ಕದನ ವಿರಾಮಕ್ಕಾಗಿ ವಿಶ್ವಸಂಸ್ಥೆಯಲ್ಲಿ ಕೈಗೊಂಡ ಹಲವು ನಿರ್ಣಯಗಳು, ಕತಾರ್, ಯುಎಸ್‌ಎ ಮತ್ತು ಜೋರ್ಡಾನ್ ಮಧ್ಯಸ್ಥಿಕೆಯಲ್ಲಿ ನಡೆದ ಶಾಂತಿ ಮಾತುಕತೆಗಳು, ಅಂತಾರಾಷ್ಟ್ರೀಯ ನ್ಯಾಯಾಲಯದ ಆದೇಶ ಮತ್ತು ಹಲವು ರಾಷ್ಟ್ರಗಳ ಒತ್ತಡದ ನಡುವೆಯೂ ಇಸ್ರೇಲ್ ಗಾಝಾ ಮೇಲಿನ ತನ್ನ ದಾಳಿಯನ್ನು ಮುಂದುವರೆಸಿದೆ. ಜೊತೆಗೆ ತನ್ನ ಆಕ್ರಮಣವನ್ನು ಲೆಬನಾನ್‌, ಯೆಮನ್‌ಗೆ ವಿಸ್ತರಿಸಿದೆ.

ಹಮಾಸ್-ಇಸ್ರೇಲ್‌ನಂತೆಯೇ ಹಲವು ವರ್ಷಗಳಿಂದ ನಡೆಯುತ್ತಿರುವ ಹೆಜ್ಬುಲ್ಲಾ-ಇಸ್ರೇಲ್ ಸಂಘರ್ಷ ಉಲ್ಬಣಗೊಂಡಿದೆ. ಗಾಝಾ ಮೇಲಿನ ಆಕ್ರಮಣದ ನಡುವೆಯೇ ಲೆಬನಾನ್‌ನ ಮೇಲೆ ಗಡಿಯ ಹೊರಗಿನಿಂದ ಇಸ್ರೇಲ್ ಹಲವು ಸಣ್ಣಪುಟ್ಟ ದಾಳಿಗಳನ್ನು ನಡೆಸುತ್ತಿತ್ತು. ಆದರೆ, 2024ರ ಸೆಪ್ಟೆಂಬರ್ 17 ಮತ್ತು 18 ರಂದು ಲೆಬನಾನ್‌ನ ಸಾವಿರಾರು ಜನರ ಮೊಬೈಲ್‌ನ ಹ್ಯಾಂಡ್‌ ಹೆಲ್ಡ್ ಪೇಜರ್ ಮತ್ತು ವಾಕಿ-ಟಾಕಿಗಳನ್ನು ಇಸ್ರೇಲ್ ಸ್ಪೋಟಗೊಳಿಸಿತ್ತು. ಈ ಘಟನೆಯಲ್ಲಿ 42 ಜನರು ಸಾವನ್ನಪ್ಪಿದ್ದರು ಮತ್ತು ನಾಗರಿಕರು ಸೇರಿದಂತೆ ಕನಿಷ್ಠ 3, 500 ಜನರು ಗಾಯಗೊಂಡಿದ್ದರು.

ಆ ಬಳಿಕ ಇಸ್ರೇಲ್ ಮತ್ತು ಹೆಜ್ಬುಲ್ಲಾ ನಡುವಿನ ಸಂಘರ್ಷ ತೀವ್ರಗೊಂಡಿದೆ. ಇಸ್ರೇಲ್ ಹೆಜ್ಬುಲ್ಲಾದ ಪರಮೋನ್ನತ ನಾಯಕ ಹಸ್ಸನ್ ನಸ್ರಲ್ಲಾ, ಹೆಜ್ಬುಲ್ಲಾದ ಸೌತ್ ಫ್ರಂಟ್‌ನ ಕಮಾಂಡರ್ ಅಲಿ ಕರ್ಕಿ, ನಸ್ರಲ್ಲಾ ಅವರ ಭದ್ರತಾ ಘಟಕದ ಮುಖ್ಯಸ್ಥ ಇಬ್ರಾಹಿಂ ಹುಸೇನ್ ಜಾಜಿನಿ, ನಸ್ರಲ್ಲಾ ಅವರ ದೀರ್ಘಾವಧಿಯ ವಿಶ್ವಾಸಾರ್ಹ ಜೊತೆಗಾರ ಮತ್ತು ಹೆಜ್ಬುಲ್ಲಾ ಚಟುವಟಿಕೆಗಳ ಸಲಹೆಗಾರ ಸಮೀರ್ ತೌಫಿಕ್ ದಿಬ್, ಹೆಜ್ಬುಲ್ಲಾದ ಫೋರ್ಸ್-ಬಿಲ್ಡ್ ಅಪ್ ಮುಖ್ಯಸ್ಥ ಅಬೇದ್ ಅಲ್-ಅಮೀರ್ ಮುಹಮ್ಮದ್ ಸಬ್ಲಿನಿ, ಹೆಜ್ಬುಲ್ಲಾದ ಫೈರ್‌ಪವರ್ ಅನ್ನು ಸಂಘಟಿಸುವ ಜವಾಬ್ದಾರಿ ಹೊತ್ತಿದ್ದ ಅಲಿ ನಾಫ್ ಅಯೌಬ್ ಅವರನ್ನು ಹತ್ಯೆ ಮಾಡಿದೆ.

ಇತ್ತೀಚಿನ, ಅಂದರೆ ಭಾನುವಾರ (ಅ.6) ಲೆಬನಾನ್ ರಾಜಧಾನಿ ಬೈರುತ್‌ನ ಆಗ್ನೇಯದಲ್ಲಿರುವ ಕಮಾತಿಯೆಹ್ ಪಟ್ಟಣದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ ಮೂವರು ಮಕ್ಕಳು ಸೇರಿದಂತೆ ಆರು ಜನರು ಸಾವನ್ನಪ್ಪಿದ್ದಾರೆ ಎಂದು ಲೆಬನಾನ್‌ನ ಆರೋಗ್ಯ ಸಚಿವಾಲಯ ತಿಳಿಸಿದೆ. ಇದಕ್ಕೆ ಪ್ರತೀಕಾರವಾಗಿ ಸೋಮವಾರ ಬೆಳಗ್ಗೆ ಇಸ್ರೇಲ್‌ನ ಹೈಫಾ ಮೇಲೆ ಹೆಜ್ಬುಲ್ಲಾ ದಾಳಿ ನಡೆಸಿದೆ.

ಹೆಜ್ಬುಲ್ಲಾ- ಇಸ್ರೇಲ್ ಸಂಘರ್ಷದ ನಡುವೆ ಸೆಪ್ಟೆಂಬರ್ 29ರಂದು ಇಸ್ರೇಲಿ ವಾಯುಪಡೆಯು ಯೆಮೆನ್‌ನ ಬಂದರು ನಗರಗಳಾದ ಹುದೈದ ಮತ್ತು ರಾಸ್ ಇಸಾದಲ್ಲಿನ ವಿದ್ಯುತ್ ಸ್ಥಾವರ ಮತ್ತು ಬಂದರನ್ನು ಗುರಿಯಾಗಿಸಿ ನಡೆಸಿದ ದಾಳಿಯಲ್ಲಿ ಕನಿಷ್ಠ ನಾಲ್ವರು ಸಾವನ್ನಪ್ಪಿದ್ದಾರೆ.

ಇರಾನ್ -ಇಸ್ರೇಲ್ ಸಂಘರ್ಷ

ಹಮಾಸ್- ಇಸ್ರೇಲ್, ಹೆಜ್ಬುಲ್ಲಾ-ಇಸ್ರೇಲ್ ಮತ್ತು ಯೆಮನ್‌ನ ಹೌತಿ-ಇಸ್ರೇಲ್ ನಡುವಿನ ಸಂಘರ್ಷಕ್ಕೆ ಈಗ ಇರಾನ್ ಎಂಟ್ರಿಯಾಗಿದೆ. ಹೆಜ್ಬುಲ್ಲಾ ನಾಯಕ ಹಸ್ಸನ್ ನಸ್ರಲ್ಲಾ ಹತ್ಯೆಗೆ ಪ್ರತೀಕಾರವಾಗಿ ಇಸ್ರೇಲ್‌ನ ಟೆಲ್ ಅವೀವ್ ನಗರ ಮೇಲೆ ಸೆಪ್ಟೆಂಬರ್ 1ರಂದು ಇರಾನ್ ಸುಮಾರು 200ರಷ್ಟು ಕ್ಷಿಪಣಿಗಳನ್ನು ಹಾರಿ ಬಿಟ್ಟಿದೆ. ಈ ಘಟನೆಯ ಸಾವು-ನೋವುಗಳ ಬಗ್ಗೆ ಇಸ್ರೇಲ್ ಸರಿಯಾದ ಮಾಹಿತಿ ಬಿಟ್ಟುಕೊಟ್ಟಿಲ್ಲ. ಆದರೆ, ನಾವು ಇಸ್ರೇಲ್ ಪ್ರಮುಖ ವಾಯುನೆಲೆ ಮೇಲೆ ದಾಳಿ ನಡೆಸಿದ್ದೇವೆ ಎಂದು ಇರಾನ್ ಹೇಳಿಕೊಂಡಿದೆ.

ಒಟ್ಟಿನಲ್ಲಿ ಕಳೆದ ಒಂದು ವರ್ಷದ ಅವಧಿಯಲ್ಲಿ ನಡೆದ, ಈಗಲೂ ಮುಂದುವರೆಯುತ್ತಿರುವ ಇಸ್ರೇಲ್, ಹಮಾಸ್, ಹೆಜ್ಬುಲ್ಲಾ, ಹೌತಿ ಮತ್ತು ಇರಾನ್ ನಡುವಿನ ದಾಳಿ-ಪ್ರತಿ ದಾಳಿಗಳಲ್ಲಿ ಸಾವನ್ನಪ್ಪಿದವರ ಸಂಖ್ಯೆ ಅಂದಾಜು 45 ಸಾವಿರ ತಲುಪಿದೆ.

ಎಲ್ಲಾ ಗುಂಪುಗಳ ಪ್ರತಿಷ್ಠೆ, ಯುದ್ದೋನ್ಮಾದ, ಅಮೆರಿಕ-ರಷ್ಯಾದಂತಹ ಪ್ರಬಲ ರಾಷ್ಟ್ರಗಳ ಸಶ್ತ್ರಾಸ್ತ್ರ ವ್ಯಾಪಾರಕ್ಕೆ ಸಾವಿರಾರು ಜನರು ಜೀವ ಕಳೆದಕೊಂಡರು, ತಮ್ಮ ಸ್ವಂತ ನಾಡಿನಲ್ಲಿ ಬದುಕುವ ಹಕ್ಕು ಕಳೆದುಕೊಂಡರು, ಆಹಾರ-ನೀರು, ವಸತಿ-ಬಟ್ಟೆಯಂತಹ ಮೂಲಭೂತ ಸೌಲಭ್ಯಗಳಿಂದ ವಂಚಿತರಾದರು. ಸುಂದರ ನಗರಗಳು, ಆಸ್ಪತ್ರೆ, ಶಾಲೆ, ಮಸೀದಿ, ಚರ್ಚ್‌ಗಳು, ಸರ್ಕಾರಿ ಕಚೇರಿಗಳು ನಾಶವಾದವು. ಕೊನೆಗೆ ಯುದ್ಧದಿಂದ ಗಳಿಸಿದ್ದಿಷ್ಟೆ.

ಇದನ್ನೂ ಓದಿ : ಚೆನ್ನೈ: ವಾಯುಪಡೆ ಏರ್‌ಶೋ ಅವಘಡ; ಬಿಸಿಲಿನ ಝಳಕ್ಕೆ ಐವರು ಪ್ರೇಕ್ಷಕರು ಸಾವು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಪೊಲೀಸರಿಂದ ಬೈಕ್ ಸೀಝ್‌; ಠಾಣೆ ಮುಂದೆ ಬೆಂಕಿ ಹಚ್ಚಿಕೊಂಡ ‘ಗಿಗ್’ ಕಾರ್ಮಿಕ

ಪೊಲೀಸರು ತನ್ನ ಬೈಕ್‌ ವಶಪಡಿಸಿಕೊಂಡ ನಂತರ 32 ವರ್ಷದ ಗಿಗ್ ಕಾರ್ಮಿಕನೊಬ್ಬ ಠಾಣೆಯ ಹೊರಗೆ ಬೆಂಕಿಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ. ಅಕ್ಷಯ್ ಕಶ್ಯಪ್ ಎಂದು ಗುರುತಿಸಲ್ಪಟ್ಟ ಯುವಕನಿಗೆ ದೇಹದ...

ಎಪ್‌ಸ್ಟೀನ್ ಫೈಲ್ಸ್ ನಲ್ಲಿ ಹೆಸರು ಪ್ರಸ್ತಾಪ; ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ ಬಿಲ್ ಗೇಟ್ಸ್: ವರದಿ 

ನ್ಯೂಯಾರ್ಕ್: ಅಮೆರಿಕದ ತಂತ್ರಜ್ಞಾನ ಉದ್ಯಮಿ ಬಿಲ್ ಗೇಟ್ಸ್, ಲೈಂಗಿಕ ಅಪರಾಧಿ ಜೆಫ್ರಿ ಎಪ್‌ಸ್ಟೈನ್‌ನೊಂದಿಗಿನ ಹಳೆಯ ಸಂಪರ್ಕಕ್ಕಾಗಿ ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ್ದಾರೆ ಎಂದು ವರದಿಯಾಗಿದೆ. ವಾಲ್ ಸ್ಟ್ರೀಟ್ ಜರ್ನಲ್ ವರದಿಯ ಪ್ರಕಾರ, ಫೌಂಡೇಶನ್‌ನ ಟೌನ್...

ಕೆಎಸ್‌ಯು-ಐಯುಎಂಎಲ್ ಪ್ರತಿಭಟನೆಯಲ್ಲಿ ಘರ್ಷಣೆ; ಗಾಯಗೊಂಡ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್

ಕಣ್ಣೂರು ರೈಲ್ವೆ ನಿಲ್ದಾಣದಲ್ಲಿ ಬುಧವಾರ ಪೊಲೀಸರು ಮತ್ತು ಕೇರಳ ವಿದ್ಯಾರ್ಥಿ ಸಂಘ (ಕೆಎಸ್‌ಯು)-ಐಯುಎಂಎಲ್ ಯುವ ಘಟಕದ ಪ್ರತಿಭಟನಾಕಾರರ ನಡುವೆ ನಡೆದ ಘರ್ಷಣೆಯಲ್ಲಿ ಆರೋಗ್ಯ ಸಚಿವೆ ವೀಣಾ ಜಾರ್ಜ್ ಕುತ್ತಿಗೆ ಮತ್ತು ಕೈಗೆ ಗಾಯಗಳಾಗಿದೆ. ಕಾಂಗ್ರೆಸ್-ಕೆಎಸ್‌ಯು...

ಉತ್ತರಾಖಂಡ| ದೇವಸ್ಥಾನದ ಸಮೀಪ ಖಾಲಿ ಜಾಗದಲ್ಲಿ ನಮಾಜ್; ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ

ಉತ್ತರಾಖಂಡದ ಜಗತ್ಪುರದ ಅತ್ರಿಯ ದೇವಸ್ಥಾನದ ಮುಂಭಾಗದಲ್ಲಿರುವ ಖಾಲಿ ಜಾಗದಲ್ಲಿ ನಮಾಜ್ ಮಾಡಿದ ನಂತರ ಶಾಹಿದ್ ಎಂದು ಗುರುತಿಸಲಾದ ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ ಧಾರ್ಮಿಕ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು...

ಮುಝಫ್ಫರ್‌ನಗರ ಗಲಭೆ ಪ್ರಕರಣ : 37 ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

ಉತ್ತರ ಪ್ರದೇಶದ ಮುಝಫ್ಫರ್‌ನಗರದ ನ್ಯಾಯಾಲಯ 2013ರ ಕೋಮು ಗಲಭೆಗೆ ಸಂಬಂಧಿಸಿದ ಎಂಟು ಜನರ ಹತ್ಯೆ ಪ್ರಕರಣದಲ್ಲಿ ಸಾಕ್ಷ್ಯಗಳ ಕೊರತೆಯನ್ನು ಉಲ್ಲೇಖಿಸಿ 37 ಆರೋಪಿಗಳನ್ನು ಮಂಗಳವಾರ (ಫೆ.25) ಖುಲಾಸೆಗೊಳಿಸಿದೆ ಎಂದು ವರದಿಯಾಗಿದೆ. ತೀರ್ಪು ಪ್ರಕಟಿಸಿದ ಹೆಚ್ಚುವರಿ...

ಇಸ್ರೇಲ್ ಸಂಸತ್ತಿನಲ್ಲಿ ಭಾಷಣದ ವೇಳೆ ಪ್ರಧಾನಿ ಮೋದಿ ಗಾಝಾ ನರಮೇಧ ಉಲ್ಲೇಖಿಸಲಿ : ಪ್ರಿಯಾಂಕಾ ಗಾಂಧಿ ಆಗ್ರಹ

ಇಸ್ರೇಲ್‌ಗೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ಅಲ್ಲಿನ ಸಂಸತ್ತಾದ ನೆಸೆಟ್ ಅನ್ನು ಉದ್ದೇಶಿಸಿ ಮಾತನಾಡುವಾಗ ಗಾಝಾ ನರಮೇಧವನ್ನು ಉಲ್ಲೇಖಿಸಿ ನ್ಯಾಯಕ್ಕಾಗಿ ಆಗ್ರಹಿಸಬೇಕು ಎಂದು ಎಐಸಿಸಿ ಕಾರ್ಯದರ್ಶಿ ಹಾಗೂ ವಯನಾಡ್ ಸಂಸದೆ ಪ್ರಿಯಾಂಕಾ...

ಕೇಂದ್ರ ಸಚಿವರ ಸಮ್ಮುಖದಲ್ಲಿ ‘ಮುಸ್ಲಿಂ ವಿರೋಧಿ ಹೇಳಿಕೆ’ ನೀಡಿದ ಹಿಂದುತ್ವವಾದಿ ವ್ಯಕ್ತಿ

ಉತ್ತರಾಖಂಡದಲ್ಲಿ ನಡೆದ ಸಾರ್ವಜನಿಕ ಹಿಂದೂ ಧಾರ್ಮಿಕ ಕಾರ್ಯಕ್ರಮದಲ್ಲಿ, ಕೇಂದ್ರ ಸಚಿವರ ಸಮ್ಮುಖದಲ್ಲಿಯೇ ಹಿಂದುತ್ವವಾದಿ ಮುಖಂಡನೊಬ್ಬ ಮುಸ್ಲಿಮರ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ್ದು ರಾಜಕೀಯ ಮತ್ತು ಸಾಮಾಜಿಕ ವಿವಾದಕ್ಕೆ ಕಾರಣವಾಗಿದೆ. ಇದು ಪೊಲೀಸ್ ಕ್ರಮ...

ಎನ್‌ಸಿಇಆರ್‌ಟಿ ಪಠ್ಯಪುಸ್ತಕದ ‘ನ್ಯಾಯಾಂಗದಲ್ಲಿನ ಭ್ರಷ್ಟಾಚಾರ’ ವಿಷಯಕ್ಕೆ ಸುಪ್ರೀಂ ಕೋರ್ಟ್ ತೀವ್ರ ಆಕ್ಷೇಪ

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಪ್ರಕಟಿಸಿದ 8ನೇ ತರಗತಿಯ ಹೊಸ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ "ನ್ಯಾಯಾಂಗದಲ್ಲಿನ ಭ್ರಷ್ಟಾಚಾರ" ಎಂಬ ವಿಷಯ ಉಲ್ಲೇಖಿಸಿರುವುದಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಫೆ.25) ತೀವ್ರ...

ಮಧ್ಯಪ್ರದೇಶ: ಡಾ. ಹರಿಸಿಂಗ್ ಗೌರ್ ವಿವಿಯಲ್ಲಿ ಎಬಿವಿಪಿ-ಆರ್‌ಎಸ್‌ಎಸ್‌ ದುಷ್ಕರ್ಮಿಗಳಿಂದ ವಿದ್ಯಾರ್ಥಿಗಳ ಮೇಲೆ ದಾಳಿ, ಜೀವಬೆದರಿಕೆ;  ಎಫ್‌ಐಆರ್ ದಾಖಲು

ಮಧ್ಯಪ್ರದೇಶದ ಸಾಗರ್‌ನಲ್ಲಿರುವ ಡಾ. ಹರಿ ಸಿಂಗ್ ಗೌರ್ ವಿಶ್ವವಿದ್ಯಾಲಯದಲ್ಲಿ ನಡೆದ ಸರಣಿ ಹಿಂಸಾತ್ಮಕ ಘಟನೆಗಳು ಕ್ಯಾಂಪಸ್ ಸುರಕ್ಷತೆಯ ಬಗ್ಗೆ ಗಂಭೀರ ಕಳವಳವನ್ನು ಉಂಟುಮಾಡಿವೆ. ಐದು ದಿನಗಳಲ್ಲಿ ಎಬಿವಿಪಿ-ಆರ್‌ಎಸ್‌ಎಸ್‌ಗೆ ಸಂಬಂಧಿಸಿದ ವ್ಯಕ್ತಿಗಳಿಂದ ಎರಡು ಜೀವ...

ಅಜೀಂ ಪ್ರೇಮ್‌ ಜಿ ವಿವಿಯಲ್ಲಿ ದಾಂಧಲೆ : ಎಬಿವಿಪಿ ಸದಸ್ಯರ ವಿರುದ್ಧ ಕಠಿಣ ಕ್ರಮಕ್ಕೆ ಕೆವಿಎಸ್‌ ಆಗ್ರಹ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ ನುಗ್ಗಿ ದಾಂಧಲೆ ನಡೆಸಿದ ಎಬಿವಿಪಿ ಸದಸ್ಯರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ಕರ್ನಾಟಕ ವಿದ್ಯಾರ್ಥಿ ಸಂಘಟನೆ (ಕೆವಿಎಸ್‌) ಆಗ್ರಹಿಸಿದೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಸಂಘಟನೆಯ ರಾಜ್ಯ...