Homeಮುಖಪುಟಇಸ್ರೇಲ್-ಹಮಾಸ್ ಸಂಘರ್ಷಕ್ಕೆ 1 ವರ್ಷ | ಲೆಬನಾನ್, ಯೆಮನ್‌, ಇರಾನ್‌ಗೆ ವಿಸ್ತರಿಸಿದ ಆಕ್ರಮಣ : ಯುದ್ದೋನ್ಮಾದಕ್ಕೆ...

ಇಸ್ರೇಲ್-ಹಮಾಸ್ ಸಂಘರ್ಷಕ್ಕೆ 1 ವರ್ಷ | ಲೆಬನಾನ್, ಯೆಮನ್‌, ಇರಾನ್‌ಗೆ ವಿಸ್ತರಿಸಿದ ಆಕ್ರಮಣ : ಯುದ್ದೋನ್ಮಾದಕ್ಕೆ 45 ಸಾವಿರ ಜನರು ಬಲಿ

- Advertisement -
- Advertisement -

ಇಸ್ರೇಲ್-ಹಮಾಸ್ ನಡುವಿನ ಸಂಘರ್ಷ ಪ್ರಾರಂಭಗೊಂಡು ಇಂದಿಗೆ (ಅ.7, 2024) ಒಂದು ವರ್ಷ ಪೂರ್ಣಗೊಂಡಿದೆ. ಹಲವು ವರ್ಷಗಳಿಂದ ಈ ಎರಡು ಗುಂಪುಗಳ ನಡುವೆ ಕಲಹ ಇದ್ದರೂ, ಎಡೆಬಿಡದ ಆಕ್ರಮಣ ಶುರುವಾಗಿ ಒಂದು ವರ್ಷವಾಗಿದೆ.

ಇಸ್ರೇಲ್ ಮತ್ತು ಹಮಾಸ್ ನಡುವಿನ ಸುದೀರ್ಘ ಸಮಯದ ಸಂಘರ್ಷದ ಮುಂದುವರೆದ ಭಾಗವಾಗಿ ಅಕ್ಟೋಬರ್ 7,2023ರಂದು ಪ್ಯಾಲೆಸ್ತೀನ್‌ನ ಗಾಝಾದ ಆಡಳಿತ ನೋಡಿಕೊಳ್ಳುತ್ತಿರುವ ಹಮಾಸ್ ಸಶಸ್ತ್ರ ಗುಂಪು ಇಸ್ರೇಲ್‌ ರಾಜಧಾನಿ ಟೆಲ್ ಅವೀವ್ ಮೇಲೆ ಏಕಾಏಕಿ ದಾಳಿ ನಡೆಸಿತ್ತು.

ಗಾಝಾದಿಂದ ರಾಕೆಟ್ ದಾಳಿ, ಪ್ಯಾರಚೂಟ್ ಮೂಲಕ ಇಸ್ರೇಲ್ ಭೂಪ್ರದೇಶಕ್ಕೆ ತೆರಳಿ ಗುಂಡಿನ ದಾಳಿ ಮತ್ತು ಇಸ್ರೇಲ್-ಗಾಝಾ ಗಡಿ ಬೇಲಿಯನ್ನು ದಾಟಿ ಒಳನುಗ್ಗಿ ಹಮಾಸ್ ದಾಳಿ ನಡೆಸಿತ್ತು. ಪರಿಣಾಮ 815 ನಾಗರಿಕರು, ವಿದೇಶಿಯರು ಸೇರಿದಂತೆ ಇಸ್ರೇಲ್‌ನಲ್ಲಿ 1,139 ಜನರು ಸಾವನ್ನಪ್ಪಿದ್ದರು. ನೂರಾರು ಮಂದಿ ಗಾಯಗೊಂಡಿದ್ದರು. ಸುಮಾರು 251 ಜನರನ್ನು ಹಮಾಸ್ ಗಾಝಾಗೆ ಕರೆದಕೊಂಡು ಬಂದು ಒತ್ತೆಯಾಳಾಗಿಟ್ಟುಕೊಂಡಿತ್ತು.

ಪದೇ ಪದೇ ನಡೆಯುತ್ತಿರುವ ಇಸ್ರೇಲ್ ಆಕ್ರಮಣಕ್ಕೆ ಪ್ರತೀಕಾರವಾಗಿ ಮತ್ತು ಇಸ್ರೇಲ್‌ನಲ್ಲಿ ಬಂಧಿಯಾಗಿರುವ ಪ್ಯಾಲೆಸ್ತೀನಿಗರ ಬಿಡುಗಡೆಗಾಗಿ ದಾಳಿ ನಡೆಸಿ, ಅಲ್ಲಿನ ಜನರನ್ನು ಒತ್ತೆಯಾಳಾಗಿಟ್ಟುಕೊಂಡಿದ್ದೇವೆ ಎಂದು ಹಮಾಸ್ ಹೇಳಿತ್ತು.

ಹಮಾಸ್ ದಾಳಿಯಿಂದ ಕುಪಿತಗೊಂಡ ಇಸ್ರೇಲ್, ಅಕ್ಟೋಬರ್ 8ರಂದು ಹಮಾಸ್ ಜೊತೆ ಯುದ್ದ ಘೋಷಣೆ ಮಾಡಿತ್ತು. ಅಂದಿನಿಂದ ಇಸ್ರೇಲ್ ಗಾಝಾ ಮೇಲೆ ದಾಳಿ ನಡೆಸುತ್ತಲೇ ಇದೆ. ಪರಿಣಾಮ ಇದುವರೆಗೆ ಗಾಝಾದ 41,870 ಜನರು ಸಾವನ್ನಪ್ಪಿದ್ದಾರೆ. 97,166 ಜನರು ಗಾಯಗೊಂಡಿದ್ದಾರೆ.

ಹಮಾಸ್‌ನ ಒಂದು ದಿನದ ದಾಳಿಗೆ ಪ್ರತೀಕಾರವಾಗಿ ಒಂದು ವರ್ಷದಿಂದ ಗಾಝಾ ಮೇಲೆ ಆಕ್ರಮಣ ನಡೆಸುತ್ತಿರುವ ಇಸ್ರೇಲ್‌, ಗಾಝಾದ ಆಸ್ಪತ್ರೆ, ಶಾಲೆ, ಸರ್ಕಾರಿ ಕಚೇರಿಗಳು, ಮಸೀದಿ, ಮನೆಗಳು ಸೇರಿದಂತೆ ಎಲ್ಲವನ್ನೂ ನಾಶ ಮಾಡಿದೆ. ಜನರು ಅನ್ನ, ನೀರಿಗಾಗಿ ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ವರದಿಗಳ ಪ್ರಕಾರ, ಸಾವಿರಾರು ಜನರು ಅಪೌಷ್ಠಿಕತೆಯಿಂದ ಬಳಲುತ್ತಿದ್ದಾರೆ. ಗಾಝಾದ ಅಮಾಯಕ ನಾಗರಿಕರು ತಮ್ಮ ಸ್ವಂತ ನೆಲದಲ್ಲಿ ಬದುಕುವ ಹಕ್ಕನ್ನು ಕಳೆದುಕೊಂಡಿದ್ದಾರೆ.

ವರ್ಷದ ಕಳೆದರೂ ಗಾಝಾ ಮೇಲಿನ ಇಸ್ರೇಲ್ ದಾಳಿ ನಿಂತಿಲ್ಲ. ಇತ್ತೀಚಿನ, ಅಂದರೆ ಭಾನುವಾರ (ಅ.6, 2024) ದಂದು ಗಾಝಾದ ಶಾಲೆ ಮತ್ತು ಮಸೀದಿಯನ್ನು ಗುರಿಯಾಗಿಸಿ ಇಸ್ರೇಲ್ ನಡೆಸಿದ ದಾಳಿಯಲ್ಲಿ 26 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ಲೆಬನಾನ್‌-ಯೆಮನ್‌ಗೆ ವಿಸ್ತರಣೆಗೊಂಡ ಆಕ್ರಮಣ

ಕದನ ವಿರಾಮಕ್ಕಾಗಿ ವಿಶ್ವಸಂಸ್ಥೆಯಲ್ಲಿ ಕೈಗೊಂಡ ಹಲವು ನಿರ್ಣಯಗಳು, ಕತಾರ್, ಯುಎಸ್‌ಎ ಮತ್ತು ಜೋರ್ಡಾನ್ ಮಧ್ಯಸ್ಥಿಕೆಯಲ್ಲಿ ನಡೆದ ಶಾಂತಿ ಮಾತುಕತೆಗಳು, ಅಂತಾರಾಷ್ಟ್ರೀಯ ನ್ಯಾಯಾಲಯದ ಆದೇಶ ಮತ್ತು ಹಲವು ರಾಷ್ಟ್ರಗಳ ಒತ್ತಡದ ನಡುವೆಯೂ ಇಸ್ರೇಲ್ ಗಾಝಾ ಮೇಲಿನ ತನ್ನ ದಾಳಿಯನ್ನು ಮುಂದುವರೆಸಿದೆ. ಜೊತೆಗೆ ತನ್ನ ಆಕ್ರಮಣವನ್ನು ಲೆಬನಾನ್‌, ಯೆಮನ್‌ಗೆ ವಿಸ್ತರಿಸಿದೆ.

ಹಮಾಸ್-ಇಸ್ರೇಲ್‌ನಂತೆಯೇ ಹಲವು ವರ್ಷಗಳಿಂದ ನಡೆಯುತ್ತಿರುವ ಹೆಜ್ಬುಲ್ಲಾ-ಇಸ್ರೇಲ್ ಸಂಘರ್ಷ ಉಲ್ಬಣಗೊಂಡಿದೆ. ಗಾಝಾ ಮೇಲಿನ ಆಕ್ರಮಣದ ನಡುವೆಯೇ ಲೆಬನಾನ್‌ನ ಮೇಲೆ ಗಡಿಯ ಹೊರಗಿನಿಂದ ಇಸ್ರೇಲ್ ಹಲವು ಸಣ್ಣಪುಟ್ಟ ದಾಳಿಗಳನ್ನು ನಡೆಸುತ್ತಿತ್ತು. ಆದರೆ, 2024ರ ಸೆಪ್ಟೆಂಬರ್ 17 ಮತ್ತು 18 ರಂದು ಲೆಬನಾನ್‌ನ ಸಾವಿರಾರು ಜನರ ಮೊಬೈಲ್‌ನ ಹ್ಯಾಂಡ್‌ ಹೆಲ್ಡ್ ಪೇಜರ್ ಮತ್ತು ವಾಕಿ-ಟಾಕಿಗಳನ್ನು ಇಸ್ರೇಲ್ ಸ್ಪೋಟಗೊಳಿಸಿತ್ತು. ಈ ಘಟನೆಯಲ್ಲಿ 42 ಜನರು ಸಾವನ್ನಪ್ಪಿದ್ದರು ಮತ್ತು ನಾಗರಿಕರು ಸೇರಿದಂತೆ ಕನಿಷ್ಠ 3, 500 ಜನರು ಗಾಯಗೊಂಡಿದ್ದರು.

ಆ ಬಳಿಕ ಇಸ್ರೇಲ್ ಮತ್ತು ಹೆಜ್ಬುಲ್ಲಾ ನಡುವಿನ ಸಂಘರ್ಷ ತೀವ್ರಗೊಂಡಿದೆ. ಇಸ್ರೇಲ್ ಹೆಜ್ಬುಲ್ಲಾದ ಪರಮೋನ್ನತ ನಾಯಕ ಹಸ್ಸನ್ ನಸ್ರಲ್ಲಾ, ಹೆಜ್ಬುಲ್ಲಾದ ಸೌತ್ ಫ್ರಂಟ್‌ನ ಕಮಾಂಡರ್ ಅಲಿ ಕರ್ಕಿ, ನಸ್ರಲ್ಲಾ ಅವರ ಭದ್ರತಾ ಘಟಕದ ಮುಖ್ಯಸ್ಥ ಇಬ್ರಾಹಿಂ ಹುಸೇನ್ ಜಾಜಿನಿ, ನಸ್ರಲ್ಲಾ ಅವರ ದೀರ್ಘಾವಧಿಯ ವಿಶ್ವಾಸಾರ್ಹ ಜೊತೆಗಾರ ಮತ್ತು ಹೆಜ್ಬುಲ್ಲಾ ಚಟುವಟಿಕೆಗಳ ಸಲಹೆಗಾರ ಸಮೀರ್ ತೌಫಿಕ್ ದಿಬ್, ಹೆಜ್ಬುಲ್ಲಾದ ಫೋರ್ಸ್-ಬಿಲ್ಡ್ ಅಪ್ ಮುಖ್ಯಸ್ಥ ಅಬೇದ್ ಅಲ್-ಅಮೀರ್ ಮುಹಮ್ಮದ್ ಸಬ್ಲಿನಿ, ಹೆಜ್ಬುಲ್ಲಾದ ಫೈರ್‌ಪವರ್ ಅನ್ನು ಸಂಘಟಿಸುವ ಜವಾಬ್ದಾರಿ ಹೊತ್ತಿದ್ದ ಅಲಿ ನಾಫ್ ಅಯೌಬ್ ಅವರನ್ನು ಹತ್ಯೆ ಮಾಡಿದೆ.

ಇತ್ತೀಚಿನ, ಅಂದರೆ ಭಾನುವಾರ (ಅ.6) ಲೆಬನಾನ್ ರಾಜಧಾನಿ ಬೈರುತ್‌ನ ಆಗ್ನೇಯದಲ್ಲಿರುವ ಕಮಾತಿಯೆಹ್ ಪಟ್ಟಣದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ ಮೂವರು ಮಕ್ಕಳು ಸೇರಿದಂತೆ ಆರು ಜನರು ಸಾವನ್ನಪ್ಪಿದ್ದಾರೆ ಎಂದು ಲೆಬನಾನ್‌ನ ಆರೋಗ್ಯ ಸಚಿವಾಲಯ ತಿಳಿಸಿದೆ. ಇದಕ್ಕೆ ಪ್ರತೀಕಾರವಾಗಿ ಸೋಮವಾರ ಬೆಳಗ್ಗೆ ಇಸ್ರೇಲ್‌ನ ಹೈಫಾ ಮೇಲೆ ಹೆಜ್ಬುಲ್ಲಾ ದಾಳಿ ನಡೆಸಿದೆ.

ಹೆಜ್ಬುಲ್ಲಾ- ಇಸ್ರೇಲ್ ಸಂಘರ್ಷದ ನಡುವೆ ಸೆಪ್ಟೆಂಬರ್ 29ರಂದು ಇಸ್ರೇಲಿ ವಾಯುಪಡೆಯು ಯೆಮೆನ್‌ನ ಬಂದರು ನಗರಗಳಾದ ಹುದೈದ ಮತ್ತು ರಾಸ್ ಇಸಾದಲ್ಲಿನ ವಿದ್ಯುತ್ ಸ್ಥಾವರ ಮತ್ತು ಬಂದರನ್ನು ಗುರಿಯಾಗಿಸಿ ನಡೆಸಿದ ದಾಳಿಯಲ್ಲಿ ಕನಿಷ್ಠ ನಾಲ್ವರು ಸಾವನ್ನಪ್ಪಿದ್ದಾರೆ.

ಇರಾನ್ -ಇಸ್ರೇಲ್ ಸಂಘರ್ಷ

ಹಮಾಸ್- ಇಸ್ರೇಲ್, ಹೆಜ್ಬುಲ್ಲಾ-ಇಸ್ರೇಲ್ ಮತ್ತು ಯೆಮನ್‌ನ ಹೌತಿ-ಇಸ್ರೇಲ್ ನಡುವಿನ ಸಂಘರ್ಷಕ್ಕೆ ಈಗ ಇರಾನ್ ಎಂಟ್ರಿಯಾಗಿದೆ. ಹೆಜ್ಬುಲ್ಲಾ ನಾಯಕ ಹಸ್ಸನ್ ನಸ್ರಲ್ಲಾ ಹತ್ಯೆಗೆ ಪ್ರತೀಕಾರವಾಗಿ ಇಸ್ರೇಲ್‌ನ ಟೆಲ್ ಅವೀವ್ ನಗರ ಮೇಲೆ ಸೆಪ್ಟೆಂಬರ್ 1ರಂದು ಇರಾನ್ ಸುಮಾರು 200ರಷ್ಟು ಕ್ಷಿಪಣಿಗಳನ್ನು ಹಾರಿ ಬಿಟ್ಟಿದೆ. ಈ ಘಟನೆಯ ಸಾವು-ನೋವುಗಳ ಬಗ್ಗೆ ಇಸ್ರೇಲ್ ಸರಿಯಾದ ಮಾಹಿತಿ ಬಿಟ್ಟುಕೊಟ್ಟಿಲ್ಲ. ಆದರೆ, ನಾವು ಇಸ್ರೇಲ್ ಪ್ರಮುಖ ವಾಯುನೆಲೆ ಮೇಲೆ ದಾಳಿ ನಡೆಸಿದ್ದೇವೆ ಎಂದು ಇರಾನ್ ಹೇಳಿಕೊಂಡಿದೆ.

ಒಟ್ಟಿನಲ್ಲಿ ಕಳೆದ ಒಂದು ವರ್ಷದ ಅವಧಿಯಲ್ಲಿ ನಡೆದ, ಈಗಲೂ ಮುಂದುವರೆಯುತ್ತಿರುವ ಇಸ್ರೇಲ್, ಹಮಾಸ್, ಹೆಜ್ಬುಲ್ಲಾ, ಹೌತಿ ಮತ್ತು ಇರಾನ್ ನಡುವಿನ ದಾಳಿ-ಪ್ರತಿ ದಾಳಿಗಳಲ್ಲಿ ಸಾವನ್ನಪ್ಪಿದವರ ಸಂಖ್ಯೆ ಅಂದಾಜು 45 ಸಾವಿರ ತಲುಪಿದೆ.

ಎಲ್ಲಾ ಗುಂಪುಗಳ ಪ್ರತಿಷ್ಠೆ, ಯುದ್ದೋನ್ಮಾದ, ಅಮೆರಿಕ-ರಷ್ಯಾದಂತಹ ಪ್ರಬಲ ರಾಷ್ಟ್ರಗಳ ಸಶ್ತ್ರಾಸ್ತ್ರ ವ್ಯಾಪಾರಕ್ಕೆ ಸಾವಿರಾರು ಜನರು ಜೀವ ಕಳೆದಕೊಂಡರು, ತಮ್ಮ ಸ್ವಂತ ನಾಡಿನಲ್ಲಿ ಬದುಕುವ ಹಕ್ಕು ಕಳೆದುಕೊಂಡರು, ಆಹಾರ-ನೀರು, ವಸತಿ-ಬಟ್ಟೆಯಂತಹ ಮೂಲಭೂತ ಸೌಲಭ್ಯಗಳಿಂದ ವಂಚಿತರಾದರು. ಸುಂದರ ನಗರಗಳು, ಆಸ್ಪತ್ರೆ, ಶಾಲೆ, ಮಸೀದಿ, ಚರ್ಚ್‌ಗಳು, ಸರ್ಕಾರಿ ಕಚೇರಿಗಳು ನಾಶವಾದವು. ಕೊನೆಗೆ ಯುದ್ಧದಿಂದ ಗಳಿಸಿದ್ದಿಷ್ಟೆ.

ಇದನ್ನೂ ಓದಿ : ಚೆನ್ನೈ: ವಾಯುಪಡೆ ಏರ್‌ಶೋ ಅವಘಡ; ಬಿಸಿಲಿನ ಝಳಕ್ಕೆ ಐವರು ಪ್ರೇಕ್ಷಕರು ಸಾವು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ: ಪ್ರತ್ಯೇಕ ಘಟನೆಗಳಲ್ಲಿ ಈವರೆಗೆ ಆರು ಭಾರತೀಯರ ಸಾವು, ಒಬ್ಬರು ಕಾಣೆ; ವಿದೇಶಾಂಗ ಸಚಿವಾಲಯ ಮಾಹಿತಿ

ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಗಲ್ಫ್ ಪ್ರದೇಶದಾದ್ಯಂತ ನಡೆದ ಪ್ರತ್ಯೇಕ ಘಟನೆಗಳಲ್ಲಿ ಆರು ಭಾರತೀಯ ಪ್ರಜೆಗಳು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಒಬ್ಬರು ಕಾಣೆಯಾಗಿದ್ದಾರೆ ಎಂದು ವಿದೇಶಾಂಗ ಸಚಿವಾಲಯ (MEA) ಶುಕ್ರವಾರ ತಿಳಿಸಿದೆ.  ಭಾರತೀಯ ಕಾರ್ಯಾಚರಣೆಗಳು...

ಅಮೆರಿಕ-ಇಸ್ರೇಲ್ ದಾಳಿಯಲ್ಲಿ ಇರಾನ್‌ನ ಮತ್ತೊಬ್ಬ ನಾಯಕ, ಐಆರ್‌ಜಿಸಿ ವಕ್ತಾರ ಅಲಿ ಮೊಹಮ್ಮದ್ ನೈನಿ ಸಾವು

ಟೆಹ್ರಾನ್: ಇಸ್ರೇಲಿ-ಅಮೆರಿಕನ್ ಕ್ಷಿಪಣಿ ದಾಳಿಯಲ್ಲಿ ಇರಾನ್ ವಕ್ತಾರ ಜನರಲ್ ಅಲಿ ಮೊಹಮ್ಮದ್ ನೈನಿ ಸಾವನ್ನಪ್ಪಿದ್ದಾರೆ ಎಂದು ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಶುಕ್ರವಾರ ದೃಢಪಡಿಸಿದೆ. ಸರ್ಕಾರಿ ಸ್ವಾಮ್ಯದ ತಸ್ನಿಮ್ ಸುದ್ದಿ ಸಂಸ್ಥೆ...

ಶಿವಮೊಗ್ಗ: ಚಿಕಿತ್ಸೆ ನೀಡಲು ತೆರಳಿದ್ದ ವೇಳೆ ನೀರಾನೆ ದಾಳಿ; 26 ವರ್ಷದ ಪಶುವೈದ್ಯೆ ಸಾವು

ಶಿವಮೊಗ್ಗದ ತ್ಯಾವರೆಕೊಪ್ಪ ಸಿಂಹ ಮತ್ತು ಹುಲಿ ಸಫಾರಿ ಮೃಗಾಲಯದಲ್ಲಿ ಗುರುವಾರ ತಡರಾತ್ರಿ ನೀರಾನೆ ದಾಳಿಗೆ ಒಳಗಾಗಿದ್ದ 26 ವರ್ಷದ ತರಬೇತಿ ವನ್ಯಜೀವಿ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಶುಕ್ರವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ. ಬೆಂಗಳೂರಿನ ಬನ್ನೇರುಘಟ್ಟದವರಾದ ಸಮೀಕ್ಷಾ,...

ಸಾಮೂಹಿಕ ಮತಾಂತರಕ್ಕೆ ಕಾರಣವಾದವರಿಗೆ ಜೀವಾವಧಿ ಶಿಕ್ಷೆ; ಮಸೂದೆ ಅಂಗೀಕರಿಸಿದ ಛತ್ತೀಸ್‌ಗಢ ವಿಧಾನಸಭೆ

ಬಲವಂತ, ಪ್ರಚೋದನೆ, ವಂಚನೆ ಅಥವಾ ತಪ್ಪು ನಿರೂಪಣೆಯ ಮೂಲಕ ನಡೆಸಲಾಗುವ ಧಾರ್ಮಿಕ ಮತಾಂತರಗಳನ್ನು ತಡೆಗಟ್ಟುವ ಗುರಿಯನ್ನು ಹೊಂದಿರುವ ಮಸೂದೆಯನ್ನು ಛತ್ತೀಸ್‌ಗಢ ವಿಧಾನಸಭೆಯು ಗುರುವಾರ ಅಂಗೀಕರಿಸಿದೆ. ಸಾಮೂಹಿಕ ಮತಾಂತರ ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆ ಸೇರಿದಂತೆ...

6 ವರ್ಷಗಳ ಜೈಲುವಾಸದ ನಂತರ ಮಧ್ಯಂತರ ಜಾಮೀನು; ಜೈಲಿನಿಂದ ಹೊರಬಂದ ಶಾರ್ಜೀಲ್ ಇಮಾಮ್‌

ಸಹೋದರನ ಮದುವೆಯಲ್ಲಿ ಭಾಗವಹಿಸಲು ಮತ್ತು ಅನಾರೋಗ್ಯ ಪೀಡಿತ ತಾಯಿಯನ್ನು ನೋಡಿಕೊಳ್ಳಲು ದೆಹಲಿ ನ್ಯಾಯಾಲಯವು 10 ದಿನಗಳ ಮಧ್ಯಂತರ ಜಾಮೀನು ನೀಡಿದ ನಂತರ ವಿದ್ಯಾರ್ಥಿ ಕಾರ್ಯಕರ್ತ ಶಾರ್ಜೀಲ್ ಇಮಾಮ್ ಶುಕ್ರವಾರ ಸುಮಾರು ಆರು ವರ್ಷಗಳ...

ಉತ್ತಮ್ ನಗರದಲ್ಲಿ ಗೌರವಯುತ-ಶಾಂತಿಯುತ ಈದ್ ಆಚರಿಸುವಂತೆ ನೋಡಿಕೊಳ್ಳಿ: ಅಧಿಕಾರಿಗಳಿಗೆ ಎಂದು ದೆಹಲಿ ಹೈಕೋರ್ಟ್ ನಿರ್ದೇಶನ

ರಾಷ್ಟ್ರ ರಾಜಧಾನಿಯ ದೆಹಲಿಯ ಉತ್ತಮ್ ನಗರ ಪ್ರದೇಶದಲ್ಲಿ ಹೆಚ್ಚುತ್ತಿರುವ ಕೋಮು ಉದ್ವಿಗ್ನತೆಯ ನಡುವೆ, ಸಮುದಾಯಗಳ ನಡುವೆ ಶಾಂತಿ ಕಾಪಾಡಿಕೊಳ್ಳುವ ಜೊತೆಗೆ ಶಾಂತಿಯುತ ಮತ್ತು ಘನತೆಯ ಈದ್ ಆಚರಣೆಯನ್ನು ಖಚಿತಪಡಿಸಿಕೊಳ್ಳಲು ಕಾನೂನಿನಡಿಯಲ್ಲಿ ಅನುಮತಿಸಬಹುದಾದ ಎಲ್ಲಾ...

ಕಥುವಾ ಪ್ರಕರಣ: ವೈಯಕ್ತಿಕ ಭದ್ರತೆ ಕಡಿತ; ‘ಮಗಳು ಶಾಲೆಗೆ ಹೋಗುತ್ತಿಲ್ಲ’ ಎಂದು ಕಳವಳ ವ್ಯಕ್ತಪಡಿಸಿದ ವಕೀಲೆ ದೀಪಿಕಾ ಪುಷ್ಕರ್ ನಾಥ್ 

2018 ರ ಕಥುವಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಎಂಟು ವರ್ಷದ ಬಾಲಕಿಯ ಕುಟುಂಬವನ್ನು ಪ್ರತಿನಿಧಿಸಿದ್ದ ಜಮ್ಮುವಿನ ಪ್ರಮುಖ ವಕೀಲೆ ಮತ್ತು ಮಾನವ ಹಕ್ಕುಗಳ ಕಾರ್ಯಕರ್ತೆ ದೀಪಿಕಾ ಪುಷ್ಕರ್ ನಾಥ್, ತಮ್ಮ ವೈಯಕ್ತಿಕ...

ಒಡಿಶಾ| ದಲಿತ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

ಸಾಮಾಜಿಕ ಬಹಿಷ್ಕಾರದ ಆತಂಕಕಾರಿ ಪ್ರಕರಣವೊಂದು ಒಡಿಶಾ ರಾಜ್ಯದ ಗಂಜಾಂ ಜಿಲ್ಲೆಯ ಕಬಿಸೂರ್ಯನಗರ ಪೊಲೀಸ್ ವ್ಯಾಪ್ತಿಯಲ್ಲಿರುವ ಅರ್ಜುನಪಲ್ಲಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಪರಿಶಿಷ್ಟ ಜಾತಿ (ಎಸ್‌ಸಿ) ಗೆ ಸೇರಿದ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ್ದಕ್ಕಾಗಿ...

‘ಕೇವಲ ಗಾಳಿಯಲ್ಲಿ ಕ್ರಾಂತಿ ಸಾಧ್ಯವಿಲ್ಲ, ನೆಲದ ಘಟಕವೂ ಬೇಕು’; ಇರಾನ್ ಮೇಲಿನ ಯುದ್ಧದಲ್ಲಿ ‘ಭೂ-ದಾಳಿ’ಯ ಸುಳಿವು ನೀಡಿದ ನೆತನ್ಯಾಹು

‘ನೀವು ಗಾಳಿಯಿಂದ ಕ್ರಾಂತಿಗಳನ್ನು ಮಾಡಲು ಸಾಧ್ಯವಿಲ್ಲ’ ಈ ಹೇಳಿಕೆಯ ಮೂಲಕ ಇರಾನ್ ವಿರುದ್ಧ ಅಮೆರಿಕ-ಇಸ್ರೇಲ್ ಯುದ್ಧಕ್ಕೆ 'ನೆಲದ ಅಂಶ'ದ ಸಾಧ್ಯತೆಯ ಬಗ್ಗೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸುಳಿವು ನೀಡಿದ್ದಾರೆ ಎನ್ನುವ ಸುದ್ದಿ...

ನಕಲಿ ಆಪಲ್ ಪರಿಕರಗಳ ದಂಧೆ ಭೇದಿಸಿದ ಮುಂಬೈ ಪೊಲೀಸರು; ₹16.33 ಲಕ್ಷ ಮೌಲ್ಯದ ಸರಕುಗಳ ವಶ; ಆರು ಜನರ ವಿರುದ್ಧ ಪ್ರಕರಣ 

ಮುಂಬೈ: ನಕಲಿ ಬ್ರಾಂಡ್ ಸರಕುಗಳ ಮಾರಾಟದ ಮೇಲೆ ಪ್ರಮುಖ ದಾಳಿ ನಡೆಸಿರುವ ಮುಂಬೈ ಪೊಲೀಸರು, ಘಾಟ್ಕೋಪರ್ ಪೂರ್ವದಲ್ಲಿ ನಕಲಿ ಆಪಲ್ ಪರಿಕರಗಳನ್ನು ಮಾರಾಟ ಮಾಡುತ್ತಿದ್ದ ಸಂಘಟಿತ ದಂಧೆಯನ್ನು ಭೇದಿಸಿದ್ದಾರೆ. ಈ ಪ್ರಕರಣದಲ್ಲಿ 16.33...