Homeಮುಖಪುಟಇಸ್ರೇಲ್-ಹಮಾಸ್ ಸಂಘರ್ಷಕ್ಕೆ 1 ವರ್ಷ | ಲೆಬನಾನ್, ಯೆಮನ್‌, ಇರಾನ್‌ಗೆ ವಿಸ್ತರಿಸಿದ ಆಕ್ರಮಣ : ಯುದ್ದೋನ್ಮಾದಕ್ಕೆ...

ಇಸ್ರೇಲ್-ಹಮಾಸ್ ಸಂಘರ್ಷಕ್ಕೆ 1 ವರ್ಷ | ಲೆಬನಾನ್, ಯೆಮನ್‌, ಇರಾನ್‌ಗೆ ವಿಸ್ತರಿಸಿದ ಆಕ್ರಮಣ : ಯುದ್ದೋನ್ಮಾದಕ್ಕೆ 45 ಸಾವಿರ ಜನರು ಬಲಿ

- Advertisement -
- Advertisement -

ಇಸ್ರೇಲ್-ಹಮಾಸ್ ನಡುವಿನ ಸಂಘರ್ಷ ಪ್ರಾರಂಭಗೊಂಡು ಇಂದಿಗೆ (ಅ.7, 2024) ಒಂದು ವರ್ಷ ಪೂರ್ಣಗೊಂಡಿದೆ. ಹಲವು ವರ್ಷಗಳಿಂದ ಈ ಎರಡು ಗುಂಪುಗಳ ನಡುವೆ ಕಲಹ ಇದ್ದರೂ, ಎಡೆಬಿಡದ ಆಕ್ರಮಣ ಶುರುವಾಗಿ ಒಂದು ವರ್ಷವಾಗಿದೆ.

ಇಸ್ರೇಲ್ ಮತ್ತು ಹಮಾಸ್ ನಡುವಿನ ಸುದೀರ್ಘ ಸಮಯದ ಸಂಘರ್ಷದ ಮುಂದುವರೆದ ಭಾಗವಾಗಿ ಅಕ್ಟೋಬರ್ 7,2023ರಂದು ಪ್ಯಾಲೆಸ್ತೀನ್‌ನ ಗಾಝಾದ ಆಡಳಿತ ನೋಡಿಕೊಳ್ಳುತ್ತಿರುವ ಹಮಾಸ್ ಸಶಸ್ತ್ರ ಗುಂಪು ಇಸ್ರೇಲ್‌ ರಾಜಧಾನಿ ಟೆಲ್ ಅವೀವ್ ಮೇಲೆ ಏಕಾಏಕಿ ದಾಳಿ ನಡೆಸಿತ್ತು.

ಗಾಝಾದಿಂದ ರಾಕೆಟ್ ದಾಳಿ, ಪ್ಯಾರಚೂಟ್ ಮೂಲಕ ಇಸ್ರೇಲ್ ಭೂಪ್ರದೇಶಕ್ಕೆ ತೆರಳಿ ಗುಂಡಿನ ದಾಳಿ ಮತ್ತು ಇಸ್ರೇಲ್-ಗಾಝಾ ಗಡಿ ಬೇಲಿಯನ್ನು ದಾಟಿ ಒಳನುಗ್ಗಿ ಹಮಾಸ್ ದಾಳಿ ನಡೆಸಿತ್ತು. ಪರಿಣಾಮ 815 ನಾಗರಿಕರು, ವಿದೇಶಿಯರು ಸೇರಿದಂತೆ ಇಸ್ರೇಲ್‌ನಲ್ಲಿ 1,139 ಜನರು ಸಾವನ್ನಪ್ಪಿದ್ದರು. ನೂರಾರು ಮಂದಿ ಗಾಯಗೊಂಡಿದ್ದರು. ಸುಮಾರು 251 ಜನರನ್ನು ಹಮಾಸ್ ಗಾಝಾಗೆ ಕರೆದಕೊಂಡು ಬಂದು ಒತ್ತೆಯಾಳಾಗಿಟ್ಟುಕೊಂಡಿತ್ತು.

ಪದೇ ಪದೇ ನಡೆಯುತ್ತಿರುವ ಇಸ್ರೇಲ್ ಆಕ್ರಮಣಕ್ಕೆ ಪ್ರತೀಕಾರವಾಗಿ ಮತ್ತು ಇಸ್ರೇಲ್‌ನಲ್ಲಿ ಬಂಧಿಯಾಗಿರುವ ಪ್ಯಾಲೆಸ್ತೀನಿಗರ ಬಿಡುಗಡೆಗಾಗಿ ದಾಳಿ ನಡೆಸಿ, ಅಲ್ಲಿನ ಜನರನ್ನು ಒತ್ತೆಯಾಳಾಗಿಟ್ಟುಕೊಂಡಿದ್ದೇವೆ ಎಂದು ಹಮಾಸ್ ಹೇಳಿತ್ತು.

ಹಮಾಸ್ ದಾಳಿಯಿಂದ ಕುಪಿತಗೊಂಡ ಇಸ್ರೇಲ್, ಅಕ್ಟೋಬರ್ 8ರಂದು ಹಮಾಸ್ ಜೊತೆ ಯುದ್ದ ಘೋಷಣೆ ಮಾಡಿತ್ತು. ಅಂದಿನಿಂದ ಇಸ್ರೇಲ್ ಗಾಝಾ ಮೇಲೆ ದಾಳಿ ನಡೆಸುತ್ತಲೇ ಇದೆ. ಪರಿಣಾಮ ಇದುವರೆಗೆ ಗಾಝಾದ 41,870 ಜನರು ಸಾವನ್ನಪ್ಪಿದ್ದಾರೆ. 97,166 ಜನರು ಗಾಯಗೊಂಡಿದ್ದಾರೆ.

ಹಮಾಸ್‌ನ ಒಂದು ದಿನದ ದಾಳಿಗೆ ಪ್ರತೀಕಾರವಾಗಿ ಒಂದು ವರ್ಷದಿಂದ ಗಾಝಾ ಮೇಲೆ ಆಕ್ರಮಣ ನಡೆಸುತ್ತಿರುವ ಇಸ್ರೇಲ್‌, ಗಾಝಾದ ಆಸ್ಪತ್ರೆ, ಶಾಲೆ, ಸರ್ಕಾರಿ ಕಚೇರಿಗಳು, ಮಸೀದಿ, ಮನೆಗಳು ಸೇರಿದಂತೆ ಎಲ್ಲವನ್ನೂ ನಾಶ ಮಾಡಿದೆ. ಜನರು ಅನ್ನ, ನೀರಿಗಾಗಿ ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ವರದಿಗಳ ಪ್ರಕಾರ, ಸಾವಿರಾರು ಜನರು ಅಪೌಷ್ಠಿಕತೆಯಿಂದ ಬಳಲುತ್ತಿದ್ದಾರೆ. ಗಾಝಾದ ಅಮಾಯಕ ನಾಗರಿಕರು ತಮ್ಮ ಸ್ವಂತ ನೆಲದಲ್ಲಿ ಬದುಕುವ ಹಕ್ಕನ್ನು ಕಳೆದುಕೊಂಡಿದ್ದಾರೆ.

ವರ್ಷದ ಕಳೆದರೂ ಗಾಝಾ ಮೇಲಿನ ಇಸ್ರೇಲ್ ದಾಳಿ ನಿಂತಿಲ್ಲ. ಇತ್ತೀಚಿನ, ಅಂದರೆ ಭಾನುವಾರ (ಅ.6, 2024) ದಂದು ಗಾಝಾದ ಶಾಲೆ ಮತ್ತು ಮಸೀದಿಯನ್ನು ಗುರಿಯಾಗಿಸಿ ಇಸ್ರೇಲ್ ನಡೆಸಿದ ದಾಳಿಯಲ್ಲಿ 26 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ಲೆಬನಾನ್‌-ಯೆಮನ್‌ಗೆ ವಿಸ್ತರಣೆಗೊಂಡ ಆಕ್ರಮಣ

ಕದನ ವಿರಾಮಕ್ಕಾಗಿ ವಿಶ್ವಸಂಸ್ಥೆಯಲ್ಲಿ ಕೈಗೊಂಡ ಹಲವು ನಿರ್ಣಯಗಳು, ಕತಾರ್, ಯುಎಸ್‌ಎ ಮತ್ತು ಜೋರ್ಡಾನ್ ಮಧ್ಯಸ್ಥಿಕೆಯಲ್ಲಿ ನಡೆದ ಶಾಂತಿ ಮಾತುಕತೆಗಳು, ಅಂತಾರಾಷ್ಟ್ರೀಯ ನ್ಯಾಯಾಲಯದ ಆದೇಶ ಮತ್ತು ಹಲವು ರಾಷ್ಟ್ರಗಳ ಒತ್ತಡದ ನಡುವೆಯೂ ಇಸ್ರೇಲ್ ಗಾಝಾ ಮೇಲಿನ ತನ್ನ ದಾಳಿಯನ್ನು ಮುಂದುವರೆಸಿದೆ. ಜೊತೆಗೆ ತನ್ನ ಆಕ್ರಮಣವನ್ನು ಲೆಬನಾನ್‌, ಯೆಮನ್‌ಗೆ ವಿಸ್ತರಿಸಿದೆ.

ಹಮಾಸ್-ಇಸ್ರೇಲ್‌ನಂತೆಯೇ ಹಲವು ವರ್ಷಗಳಿಂದ ನಡೆಯುತ್ತಿರುವ ಹೆಜ್ಬುಲ್ಲಾ-ಇಸ್ರೇಲ್ ಸಂಘರ್ಷ ಉಲ್ಬಣಗೊಂಡಿದೆ. ಗಾಝಾ ಮೇಲಿನ ಆಕ್ರಮಣದ ನಡುವೆಯೇ ಲೆಬನಾನ್‌ನ ಮೇಲೆ ಗಡಿಯ ಹೊರಗಿನಿಂದ ಇಸ್ರೇಲ್ ಹಲವು ಸಣ್ಣಪುಟ್ಟ ದಾಳಿಗಳನ್ನು ನಡೆಸುತ್ತಿತ್ತು. ಆದರೆ, 2024ರ ಸೆಪ್ಟೆಂಬರ್ 17 ಮತ್ತು 18 ರಂದು ಲೆಬನಾನ್‌ನ ಸಾವಿರಾರು ಜನರ ಮೊಬೈಲ್‌ನ ಹ್ಯಾಂಡ್‌ ಹೆಲ್ಡ್ ಪೇಜರ್ ಮತ್ತು ವಾಕಿ-ಟಾಕಿಗಳನ್ನು ಇಸ್ರೇಲ್ ಸ್ಪೋಟಗೊಳಿಸಿತ್ತು. ಈ ಘಟನೆಯಲ್ಲಿ 42 ಜನರು ಸಾವನ್ನಪ್ಪಿದ್ದರು ಮತ್ತು ನಾಗರಿಕರು ಸೇರಿದಂತೆ ಕನಿಷ್ಠ 3, 500 ಜನರು ಗಾಯಗೊಂಡಿದ್ದರು.

ಆ ಬಳಿಕ ಇಸ್ರೇಲ್ ಮತ್ತು ಹೆಜ್ಬುಲ್ಲಾ ನಡುವಿನ ಸಂಘರ್ಷ ತೀವ್ರಗೊಂಡಿದೆ. ಇಸ್ರೇಲ್ ಹೆಜ್ಬುಲ್ಲಾದ ಪರಮೋನ್ನತ ನಾಯಕ ಹಸ್ಸನ್ ನಸ್ರಲ್ಲಾ, ಹೆಜ್ಬುಲ್ಲಾದ ಸೌತ್ ಫ್ರಂಟ್‌ನ ಕಮಾಂಡರ್ ಅಲಿ ಕರ್ಕಿ, ನಸ್ರಲ್ಲಾ ಅವರ ಭದ್ರತಾ ಘಟಕದ ಮುಖ್ಯಸ್ಥ ಇಬ್ರಾಹಿಂ ಹುಸೇನ್ ಜಾಜಿನಿ, ನಸ್ರಲ್ಲಾ ಅವರ ದೀರ್ಘಾವಧಿಯ ವಿಶ್ವಾಸಾರ್ಹ ಜೊತೆಗಾರ ಮತ್ತು ಹೆಜ್ಬುಲ್ಲಾ ಚಟುವಟಿಕೆಗಳ ಸಲಹೆಗಾರ ಸಮೀರ್ ತೌಫಿಕ್ ದಿಬ್, ಹೆಜ್ಬುಲ್ಲಾದ ಫೋರ್ಸ್-ಬಿಲ್ಡ್ ಅಪ್ ಮುಖ್ಯಸ್ಥ ಅಬೇದ್ ಅಲ್-ಅಮೀರ್ ಮುಹಮ್ಮದ್ ಸಬ್ಲಿನಿ, ಹೆಜ್ಬುಲ್ಲಾದ ಫೈರ್‌ಪವರ್ ಅನ್ನು ಸಂಘಟಿಸುವ ಜವಾಬ್ದಾರಿ ಹೊತ್ತಿದ್ದ ಅಲಿ ನಾಫ್ ಅಯೌಬ್ ಅವರನ್ನು ಹತ್ಯೆ ಮಾಡಿದೆ.

ಇತ್ತೀಚಿನ, ಅಂದರೆ ಭಾನುವಾರ (ಅ.6) ಲೆಬನಾನ್ ರಾಜಧಾನಿ ಬೈರುತ್‌ನ ಆಗ್ನೇಯದಲ್ಲಿರುವ ಕಮಾತಿಯೆಹ್ ಪಟ್ಟಣದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ ಮೂವರು ಮಕ್ಕಳು ಸೇರಿದಂತೆ ಆರು ಜನರು ಸಾವನ್ನಪ್ಪಿದ್ದಾರೆ ಎಂದು ಲೆಬನಾನ್‌ನ ಆರೋಗ್ಯ ಸಚಿವಾಲಯ ತಿಳಿಸಿದೆ. ಇದಕ್ಕೆ ಪ್ರತೀಕಾರವಾಗಿ ಸೋಮವಾರ ಬೆಳಗ್ಗೆ ಇಸ್ರೇಲ್‌ನ ಹೈಫಾ ಮೇಲೆ ಹೆಜ್ಬುಲ್ಲಾ ದಾಳಿ ನಡೆಸಿದೆ.

ಹೆಜ್ಬುಲ್ಲಾ- ಇಸ್ರೇಲ್ ಸಂಘರ್ಷದ ನಡುವೆ ಸೆಪ್ಟೆಂಬರ್ 29ರಂದು ಇಸ್ರೇಲಿ ವಾಯುಪಡೆಯು ಯೆಮೆನ್‌ನ ಬಂದರು ನಗರಗಳಾದ ಹುದೈದ ಮತ್ತು ರಾಸ್ ಇಸಾದಲ್ಲಿನ ವಿದ್ಯುತ್ ಸ್ಥಾವರ ಮತ್ತು ಬಂದರನ್ನು ಗುರಿಯಾಗಿಸಿ ನಡೆಸಿದ ದಾಳಿಯಲ್ಲಿ ಕನಿಷ್ಠ ನಾಲ್ವರು ಸಾವನ್ನಪ್ಪಿದ್ದಾರೆ.

ಇರಾನ್ -ಇಸ್ರೇಲ್ ಸಂಘರ್ಷ

ಹಮಾಸ್- ಇಸ್ರೇಲ್, ಹೆಜ್ಬುಲ್ಲಾ-ಇಸ್ರೇಲ್ ಮತ್ತು ಯೆಮನ್‌ನ ಹೌತಿ-ಇಸ್ರೇಲ್ ನಡುವಿನ ಸಂಘರ್ಷಕ್ಕೆ ಈಗ ಇರಾನ್ ಎಂಟ್ರಿಯಾಗಿದೆ. ಹೆಜ್ಬುಲ್ಲಾ ನಾಯಕ ಹಸ್ಸನ್ ನಸ್ರಲ್ಲಾ ಹತ್ಯೆಗೆ ಪ್ರತೀಕಾರವಾಗಿ ಇಸ್ರೇಲ್‌ನ ಟೆಲ್ ಅವೀವ್ ನಗರ ಮೇಲೆ ಸೆಪ್ಟೆಂಬರ್ 1ರಂದು ಇರಾನ್ ಸುಮಾರು 200ರಷ್ಟು ಕ್ಷಿಪಣಿಗಳನ್ನು ಹಾರಿ ಬಿಟ್ಟಿದೆ. ಈ ಘಟನೆಯ ಸಾವು-ನೋವುಗಳ ಬಗ್ಗೆ ಇಸ್ರೇಲ್ ಸರಿಯಾದ ಮಾಹಿತಿ ಬಿಟ್ಟುಕೊಟ್ಟಿಲ್ಲ. ಆದರೆ, ನಾವು ಇಸ್ರೇಲ್ ಪ್ರಮುಖ ವಾಯುನೆಲೆ ಮೇಲೆ ದಾಳಿ ನಡೆಸಿದ್ದೇವೆ ಎಂದು ಇರಾನ್ ಹೇಳಿಕೊಂಡಿದೆ.

ಒಟ್ಟಿನಲ್ಲಿ ಕಳೆದ ಒಂದು ವರ್ಷದ ಅವಧಿಯಲ್ಲಿ ನಡೆದ, ಈಗಲೂ ಮುಂದುವರೆಯುತ್ತಿರುವ ಇಸ್ರೇಲ್, ಹಮಾಸ್, ಹೆಜ್ಬುಲ್ಲಾ, ಹೌತಿ ಮತ್ತು ಇರಾನ್ ನಡುವಿನ ದಾಳಿ-ಪ್ರತಿ ದಾಳಿಗಳಲ್ಲಿ ಸಾವನ್ನಪ್ಪಿದವರ ಸಂಖ್ಯೆ ಅಂದಾಜು 45 ಸಾವಿರ ತಲುಪಿದೆ.

ಎಲ್ಲಾ ಗುಂಪುಗಳ ಪ್ರತಿಷ್ಠೆ, ಯುದ್ದೋನ್ಮಾದ, ಅಮೆರಿಕ-ರಷ್ಯಾದಂತಹ ಪ್ರಬಲ ರಾಷ್ಟ್ರಗಳ ಸಶ್ತ್ರಾಸ್ತ್ರ ವ್ಯಾಪಾರಕ್ಕೆ ಸಾವಿರಾರು ಜನರು ಜೀವ ಕಳೆದಕೊಂಡರು, ತಮ್ಮ ಸ್ವಂತ ನಾಡಿನಲ್ಲಿ ಬದುಕುವ ಹಕ್ಕು ಕಳೆದುಕೊಂಡರು, ಆಹಾರ-ನೀರು, ವಸತಿ-ಬಟ್ಟೆಯಂತಹ ಮೂಲಭೂತ ಸೌಲಭ್ಯಗಳಿಂದ ವಂಚಿತರಾದರು. ಸುಂದರ ನಗರಗಳು, ಆಸ್ಪತ್ರೆ, ಶಾಲೆ, ಮಸೀದಿ, ಚರ್ಚ್‌ಗಳು, ಸರ್ಕಾರಿ ಕಚೇರಿಗಳು ನಾಶವಾದವು. ಕೊನೆಗೆ ಯುದ್ಧದಿಂದ ಗಳಿಸಿದ್ದಿಷ್ಟೆ.

ಇದನ್ನೂ ಓದಿ : ಚೆನ್ನೈ: ವಾಯುಪಡೆ ಏರ್‌ಶೋ ಅವಘಡ; ಬಿಸಿಲಿನ ಝಳಕ್ಕೆ ಐವರು ಪ್ರೇಕ್ಷಕರು ಸಾವು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...