Homeಮುಖಪುಟಇಸ್ರೇಲ್-ಹಮಾಸ್ ಸಂಘರ್ಷಕ್ಕೆ 1 ವರ್ಷ | ಲೆಬನಾನ್, ಯೆಮನ್‌, ಇರಾನ್‌ಗೆ ವಿಸ್ತರಿಸಿದ ಆಕ್ರಮಣ : ಯುದ್ದೋನ್ಮಾದಕ್ಕೆ...

ಇಸ್ರೇಲ್-ಹಮಾಸ್ ಸಂಘರ್ಷಕ್ಕೆ 1 ವರ್ಷ | ಲೆಬನಾನ್, ಯೆಮನ್‌, ಇರಾನ್‌ಗೆ ವಿಸ್ತರಿಸಿದ ಆಕ್ರಮಣ : ಯುದ್ದೋನ್ಮಾದಕ್ಕೆ 45 ಸಾವಿರ ಜನರು ಬಲಿ

- Advertisement -
- Advertisement -

ಇಸ್ರೇಲ್-ಹಮಾಸ್ ನಡುವಿನ ಸಂಘರ್ಷ ಪ್ರಾರಂಭಗೊಂಡು ಇಂದಿಗೆ (ಅ.7, 2024) ಒಂದು ವರ್ಷ ಪೂರ್ಣಗೊಂಡಿದೆ. ಹಲವು ವರ್ಷಗಳಿಂದ ಈ ಎರಡು ಗುಂಪುಗಳ ನಡುವೆ ಕಲಹ ಇದ್ದರೂ, ಎಡೆಬಿಡದ ಆಕ್ರಮಣ ಶುರುವಾಗಿ ಒಂದು ವರ್ಷವಾಗಿದೆ.

ಇಸ್ರೇಲ್ ಮತ್ತು ಹಮಾಸ್ ನಡುವಿನ ಸುದೀರ್ಘ ಸಮಯದ ಸಂಘರ್ಷದ ಮುಂದುವರೆದ ಭಾಗವಾಗಿ ಅಕ್ಟೋಬರ್ 7,2023ರಂದು ಪ್ಯಾಲೆಸ್ತೀನ್‌ನ ಗಾಝಾದ ಆಡಳಿತ ನೋಡಿಕೊಳ್ಳುತ್ತಿರುವ ಹಮಾಸ್ ಸಶಸ್ತ್ರ ಗುಂಪು ಇಸ್ರೇಲ್‌ ರಾಜಧಾನಿ ಟೆಲ್ ಅವೀವ್ ಮೇಲೆ ಏಕಾಏಕಿ ದಾಳಿ ನಡೆಸಿತ್ತು.

ಗಾಝಾದಿಂದ ರಾಕೆಟ್ ದಾಳಿ, ಪ್ಯಾರಚೂಟ್ ಮೂಲಕ ಇಸ್ರೇಲ್ ಭೂಪ್ರದೇಶಕ್ಕೆ ತೆರಳಿ ಗುಂಡಿನ ದಾಳಿ ಮತ್ತು ಇಸ್ರೇಲ್-ಗಾಝಾ ಗಡಿ ಬೇಲಿಯನ್ನು ದಾಟಿ ಒಳನುಗ್ಗಿ ಹಮಾಸ್ ದಾಳಿ ನಡೆಸಿತ್ತು. ಪರಿಣಾಮ 815 ನಾಗರಿಕರು, ವಿದೇಶಿಯರು ಸೇರಿದಂತೆ ಇಸ್ರೇಲ್‌ನಲ್ಲಿ 1,139 ಜನರು ಸಾವನ್ನಪ್ಪಿದ್ದರು. ನೂರಾರು ಮಂದಿ ಗಾಯಗೊಂಡಿದ್ದರು. ಸುಮಾರು 251 ಜನರನ್ನು ಹಮಾಸ್ ಗಾಝಾಗೆ ಕರೆದಕೊಂಡು ಬಂದು ಒತ್ತೆಯಾಳಾಗಿಟ್ಟುಕೊಂಡಿತ್ತು.

ಪದೇ ಪದೇ ನಡೆಯುತ್ತಿರುವ ಇಸ್ರೇಲ್ ಆಕ್ರಮಣಕ್ಕೆ ಪ್ರತೀಕಾರವಾಗಿ ಮತ್ತು ಇಸ್ರೇಲ್‌ನಲ್ಲಿ ಬಂಧಿಯಾಗಿರುವ ಪ್ಯಾಲೆಸ್ತೀನಿಗರ ಬಿಡುಗಡೆಗಾಗಿ ದಾಳಿ ನಡೆಸಿ, ಅಲ್ಲಿನ ಜನರನ್ನು ಒತ್ತೆಯಾಳಾಗಿಟ್ಟುಕೊಂಡಿದ್ದೇವೆ ಎಂದು ಹಮಾಸ್ ಹೇಳಿತ್ತು.

ಹಮಾಸ್ ದಾಳಿಯಿಂದ ಕುಪಿತಗೊಂಡ ಇಸ್ರೇಲ್, ಅಕ್ಟೋಬರ್ 8ರಂದು ಹಮಾಸ್ ಜೊತೆ ಯುದ್ದ ಘೋಷಣೆ ಮಾಡಿತ್ತು. ಅಂದಿನಿಂದ ಇಸ್ರೇಲ್ ಗಾಝಾ ಮೇಲೆ ದಾಳಿ ನಡೆಸುತ್ತಲೇ ಇದೆ. ಪರಿಣಾಮ ಇದುವರೆಗೆ ಗಾಝಾದ 41,870 ಜನರು ಸಾವನ್ನಪ್ಪಿದ್ದಾರೆ. 97,166 ಜನರು ಗಾಯಗೊಂಡಿದ್ದಾರೆ.

ಹಮಾಸ್‌ನ ಒಂದು ದಿನದ ದಾಳಿಗೆ ಪ್ರತೀಕಾರವಾಗಿ ಒಂದು ವರ್ಷದಿಂದ ಗಾಝಾ ಮೇಲೆ ಆಕ್ರಮಣ ನಡೆಸುತ್ತಿರುವ ಇಸ್ರೇಲ್‌, ಗಾಝಾದ ಆಸ್ಪತ್ರೆ, ಶಾಲೆ, ಸರ್ಕಾರಿ ಕಚೇರಿಗಳು, ಮಸೀದಿ, ಮನೆಗಳು ಸೇರಿದಂತೆ ಎಲ್ಲವನ್ನೂ ನಾಶ ಮಾಡಿದೆ. ಜನರು ಅನ್ನ, ನೀರಿಗಾಗಿ ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ವರದಿಗಳ ಪ್ರಕಾರ, ಸಾವಿರಾರು ಜನರು ಅಪೌಷ್ಠಿಕತೆಯಿಂದ ಬಳಲುತ್ತಿದ್ದಾರೆ. ಗಾಝಾದ ಅಮಾಯಕ ನಾಗರಿಕರು ತಮ್ಮ ಸ್ವಂತ ನೆಲದಲ್ಲಿ ಬದುಕುವ ಹಕ್ಕನ್ನು ಕಳೆದುಕೊಂಡಿದ್ದಾರೆ.

ವರ್ಷದ ಕಳೆದರೂ ಗಾಝಾ ಮೇಲಿನ ಇಸ್ರೇಲ್ ದಾಳಿ ನಿಂತಿಲ್ಲ. ಇತ್ತೀಚಿನ, ಅಂದರೆ ಭಾನುವಾರ (ಅ.6, 2024) ದಂದು ಗಾಝಾದ ಶಾಲೆ ಮತ್ತು ಮಸೀದಿಯನ್ನು ಗುರಿಯಾಗಿಸಿ ಇಸ್ರೇಲ್ ನಡೆಸಿದ ದಾಳಿಯಲ್ಲಿ 26 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ಲೆಬನಾನ್‌-ಯೆಮನ್‌ಗೆ ವಿಸ್ತರಣೆಗೊಂಡ ಆಕ್ರಮಣ

ಕದನ ವಿರಾಮಕ್ಕಾಗಿ ವಿಶ್ವಸಂಸ್ಥೆಯಲ್ಲಿ ಕೈಗೊಂಡ ಹಲವು ನಿರ್ಣಯಗಳು, ಕತಾರ್, ಯುಎಸ್‌ಎ ಮತ್ತು ಜೋರ್ಡಾನ್ ಮಧ್ಯಸ್ಥಿಕೆಯಲ್ಲಿ ನಡೆದ ಶಾಂತಿ ಮಾತುಕತೆಗಳು, ಅಂತಾರಾಷ್ಟ್ರೀಯ ನ್ಯಾಯಾಲಯದ ಆದೇಶ ಮತ್ತು ಹಲವು ರಾಷ್ಟ್ರಗಳ ಒತ್ತಡದ ನಡುವೆಯೂ ಇಸ್ರೇಲ್ ಗಾಝಾ ಮೇಲಿನ ತನ್ನ ದಾಳಿಯನ್ನು ಮುಂದುವರೆಸಿದೆ. ಜೊತೆಗೆ ತನ್ನ ಆಕ್ರಮಣವನ್ನು ಲೆಬನಾನ್‌, ಯೆಮನ್‌ಗೆ ವಿಸ್ತರಿಸಿದೆ.

ಹಮಾಸ್-ಇಸ್ರೇಲ್‌ನಂತೆಯೇ ಹಲವು ವರ್ಷಗಳಿಂದ ನಡೆಯುತ್ತಿರುವ ಹೆಜ್ಬುಲ್ಲಾ-ಇಸ್ರೇಲ್ ಸಂಘರ್ಷ ಉಲ್ಬಣಗೊಂಡಿದೆ. ಗಾಝಾ ಮೇಲಿನ ಆಕ್ರಮಣದ ನಡುವೆಯೇ ಲೆಬನಾನ್‌ನ ಮೇಲೆ ಗಡಿಯ ಹೊರಗಿನಿಂದ ಇಸ್ರೇಲ್ ಹಲವು ಸಣ್ಣಪುಟ್ಟ ದಾಳಿಗಳನ್ನು ನಡೆಸುತ್ತಿತ್ತು. ಆದರೆ, 2024ರ ಸೆಪ್ಟೆಂಬರ್ 17 ಮತ್ತು 18 ರಂದು ಲೆಬನಾನ್‌ನ ಸಾವಿರಾರು ಜನರ ಮೊಬೈಲ್‌ನ ಹ್ಯಾಂಡ್‌ ಹೆಲ್ಡ್ ಪೇಜರ್ ಮತ್ತು ವಾಕಿ-ಟಾಕಿಗಳನ್ನು ಇಸ್ರೇಲ್ ಸ್ಪೋಟಗೊಳಿಸಿತ್ತು. ಈ ಘಟನೆಯಲ್ಲಿ 42 ಜನರು ಸಾವನ್ನಪ್ಪಿದ್ದರು ಮತ್ತು ನಾಗರಿಕರು ಸೇರಿದಂತೆ ಕನಿಷ್ಠ 3, 500 ಜನರು ಗಾಯಗೊಂಡಿದ್ದರು.

ಆ ಬಳಿಕ ಇಸ್ರೇಲ್ ಮತ್ತು ಹೆಜ್ಬುಲ್ಲಾ ನಡುವಿನ ಸಂಘರ್ಷ ತೀವ್ರಗೊಂಡಿದೆ. ಇಸ್ರೇಲ್ ಹೆಜ್ಬುಲ್ಲಾದ ಪರಮೋನ್ನತ ನಾಯಕ ಹಸ್ಸನ್ ನಸ್ರಲ್ಲಾ, ಹೆಜ್ಬುಲ್ಲಾದ ಸೌತ್ ಫ್ರಂಟ್‌ನ ಕಮಾಂಡರ್ ಅಲಿ ಕರ್ಕಿ, ನಸ್ರಲ್ಲಾ ಅವರ ಭದ್ರತಾ ಘಟಕದ ಮುಖ್ಯಸ್ಥ ಇಬ್ರಾಹಿಂ ಹುಸೇನ್ ಜಾಜಿನಿ, ನಸ್ರಲ್ಲಾ ಅವರ ದೀರ್ಘಾವಧಿಯ ವಿಶ್ವಾಸಾರ್ಹ ಜೊತೆಗಾರ ಮತ್ತು ಹೆಜ್ಬುಲ್ಲಾ ಚಟುವಟಿಕೆಗಳ ಸಲಹೆಗಾರ ಸಮೀರ್ ತೌಫಿಕ್ ದಿಬ್, ಹೆಜ್ಬುಲ್ಲಾದ ಫೋರ್ಸ್-ಬಿಲ್ಡ್ ಅಪ್ ಮುಖ್ಯಸ್ಥ ಅಬೇದ್ ಅಲ್-ಅಮೀರ್ ಮುಹಮ್ಮದ್ ಸಬ್ಲಿನಿ, ಹೆಜ್ಬುಲ್ಲಾದ ಫೈರ್‌ಪವರ್ ಅನ್ನು ಸಂಘಟಿಸುವ ಜವಾಬ್ದಾರಿ ಹೊತ್ತಿದ್ದ ಅಲಿ ನಾಫ್ ಅಯೌಬ್ ಅವರನ್ನು ಹತ್ಯೆ ಮಾಡಿದೆ.

ಇತ್ತೀಚಿನ, ಅಂದರೆ ಭಾನುವಾರ (ಅ.6) ಲೆಬನಾನ್ ರಾಜಧಾನಿ ಬೈರುತ್‌ನ ಆಗ್ನೇಯದಲ್ಲಿರುವ ಕಮಾತಿಯೆಹ್ ಪಟ್ಟಣದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ ಮೂವರು ಮಕ್ಕಳು ಸೇರಿದಂತೆ ಆರು ಜನರು ಸಾವನ್ನಪ್ಪಿದ್ದಾರೆ ಎಂದು ಲೆಬನಾನ್‌ನ ಆರೋಗ್ಯ ಸಚಿವಾಲಯ ತಿಳಿಸಿದೆ. ಇದಕ್ಕೆ ಪ್ರತೀಕಾರವಾಗಿ ಸೋಮವಾರ ಬೆಳಗ್ಗೆ ಇಸ್ರೇಲ್‌ನ ಹೈಫಾ ಮೇಲೆ ಹೆಜ್ಬುಲ್ಲಾ ದಾಳಿ ನಡೆಸಿದೆ.

ಹೆಜ್ಬುಲ್ಲಾ- ಇಸ್ರೇಲ್ ಸಂಘರ್ಷದ ನಡುವೆ ಸೆಪ್ಟೆಂಬರ್ 29ರಂದು ಇಸ್ರೇಲಿ ವಾಯುಪಡೆಯು ಯೆಮೆನ್‌ನ ಬಂದರು ನಗರಗಳಾದ ಹುದೈದ ಮತ್ತು ರಾಸ್ ಇಸಾದಲ್ಲಿನ ವಿದ್ಯುತ್ ಸ್ಥಾವರ ಮತ್ತು ಬಂದರನ್ನು ಗುರಿಯಾಗಿಸಿ ನಡೆಸಿದ ದಾಳಿಯಲ್ಲಿ ಕನಿಷ್ಠ ನಾಲ್ವರು ಸಾವನ್ನಪ್ಪಿದ್ದಾರೆ.

ಇರಾನ್ -ಇಸ್ರೇಲ್ ಸಂಘರ್ಷ

ಹಮಾಸ್- ಇಸ್ರೇಲ್, ಹೆಜ್ಬುಲ್ಲಾ-ಇಸ್ರೇಲ್ ಮತ್ತು ಯೆಮನ್‌ನ ಹೌತಿ-ಇಸ್ರೇಲ್ ನಡುವಿನ ಸಂಘರ್ಷಕ್ಕೆ ಈಗ ಇರಾನ್ ಎಂಟ್ರಿಯಾಗಿದೆ. ಹೆಜ್ಬುಲ್ಲಾ ನಾಯಕ ಹಸ್ಸನ್ ನಸ್ರಲ್ಲಾ ಹತ್ಯೆಗೆ ಪ್ರತೀಕಾರವಾಗಿ ಇಸ್ರೇಲ್‌ನ ಟೆಲ್ ಅವೀವ್ ನಗರ ಮೇಲೆ ಸೆಪ್ಟೆಂಬರ್ 1ರಂದು ಇರಾನ್ ಸುಮಾರು 200ರಷ್ಟು ಕ್ಷಿಪಣಿಗಳನ್ನು ಹಾರಿ ಬಿಟ್ಟಿದೆ. ಈ ಘಟನೆಯ ಸಾವು-ನೋವುಗಳ ಬಗ್ಗೆ ಇಸ್ರೇಲ್ ಸರಿಯಾದ ಮಾಹಿತಿ ಬಿಟ್ಟುಕೊಟ್ಟಿಲ್ಲ. ಆದರೆ, ನಾವು ಇಸ್ರೇಲ್ ಪ್ರಮುಖ ವಾಯುನೆಲೆ ಮೇಲೆ ದಾಳಿ ನಡೆಸಿದ್ದೇವೆ ಎಂದು ಇರಾನ್ ಹೇಳಿಕೊಂಡಿದೆ.

ಒಟ್ಟಿನಲ್ಲಿ ಕಳೆದ ಒಂದು ವರ್ಷದ ಅವಧಿಯಲ್ಲಿ ನಡೆದ, ಈಗಲೂ ಮುಂದುವರೆಯುತ್ತಿರುವ ಇಸ್ರೇಲ್, ಹಮಾಸ್, ಹೆಜ್ಬುಲ್ಲಾ, ಹೌತಿ ಮತ್ತು ಇರಾನ್ ನಡುವಿನ ದಾಳಿ-ಪ್ರತಿ ದಾಳಿಗಳಲ್ಲಿ ಸಾವನ್ನಪ್ಪಿದವರ ಸಂಖ್ಯೆ ಅಂದಾಜು 45 ಸಾವಿರ ತಲುಪಿದೆ.

ಎಲ್ಲಾ ಗುಂಪುಗಳ ಪ್ರತಿಷ್ಠೆ, ಯುದ್ದೋನ್ಮಾದ, ಅಮೆರಿಕ-ರಷ್ಯಾದಂತಹ ಪ್ರಬಲ ರಾಷ್ಟ್ರಗಳ ಸಶ್ತ್ರಾಸ್ತ್ರ ವ್ಯಾಪಾರಕ್ಕೆ ಸಾವಿರಾರು ಜನರು ಜೀವ ಕಳೆದಕೊಂಡರು, ತಮ್ಮ ಸ್ವಂತ ನಾಡಿನಲ್ಲಿ ಬದುಕುವ ಹಕ್ಕು ಕಳೆದುಕೊಂಡರು, ಆಹಾರ-ನೀರು, ವಸತಿ-ಬಟ್ಟೆಯಂತಹ ಮೂಲಭೂತ ಸೌಲಭ್ಯಗಳಿಂದ ವಂಚಿತರಾದರು. ಸುಂದರ ನಗರಗಳು, ಆಸ್ಪತ್ರೆ, ಶಾಲೆ, ಮಸೀದಿ, ಚರ್ಚ್‌ಗಳು, ಸರ್ಕಾರಿ ಕಚೇರಿಗಳು ನಾಶವಾದವು. ಕೊನೆಗೆ ಯುದ್ಧದಿಂದ ಗಳಿಸಿದ್ದಿಷ್ಟೆ.

ಇದನ್ನೂ ಓದಿ : ಚೆನ್ನೈ: ವಾಯುಪಡೆ ಏರ್‌ಶೋ ಅವಘಡ; ಬಿಸಿಲಿನ ಝಳಕ್ಕೆ ಐವರು ಪ್ರೇಕ್ಷಕರು ಸಾವು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...