HomeಮುಖಪುಟJNU ಹಿಂಸಾಚಾರಕ್ಕೆ ಒಂದು ವರ್ಷ: ಒಂದೂ ಅರೆಸ್ಟ್ ಇಲ್ಲ, ಚಾರ್ಜ್‌ಶೀಟ್ ಇಲ್ಲ, ಆಂತರಿಕ ತನಿಖೆ ಸ್ಥಗಿತ!

JNU ಹಿಂಸಾಚಾರಕ್ಕೆ ಒಂದು ವರ್ಷ: ಒಂದೂ ಅರೆಸ್ಟ್ ಇಲ್ಲ, ಚಾರ್ಜ್‌ಶೀಟ್ ಇಲ್ಲ, ಆಂತರಿಕ ತನಿಖೆ ಸ್ಥಗಿತ!

ಕಳೆದ ವರ್ಷ ಸುಮಾರು 100 ಮಾಸ್ಕ್‌ಧಾರಿಗಳ ತಂಡವೊಂದು ದೆಹಲಿಯ ಜವಾಹರಲಾಲ್ ನೆಹರು ವಿವಿಯಲ್ಲಿ (JNU) ಸಿಕ್ಕಾಪಟ್ಟೆ ದಾಂಧಲೆ ಮಾಡಿ, 36 ವಿದ್ಯಾರ್ಥಿಗಳು, ಅಧ್ಯಾಪಕರು ಮತ್ತು ಇತರ ಸಿಬ್ಬಂದಿಯನ್ನು ಭೀಕರವಾಗಿ ಗಾಯಗೊಳಿಸಿದ್ದರು.

- Advertisement -
- Advertisement -

ಪೊಲೀಸ್ ಮೂಲಗಳ ಪ್ರಕಾರ, ದೆಹಲಿ ಪೊಲೀಸ್ ಕ್ರೈಮ್ ಬ್ರ್ಯಾಂಚ್‌ನ ವಿಶೇಷ ತನಿಖಾ ದಳ 15 ಆರೋಪಿಗಳನ್ನು (ಎಲ್ಲರೂ ವಿದ್ಯಾರ್ಥಿಗಳೇ) ಗುರುತಿಸಿದೆ. ಆದರೆ ಲಾಕ್‌ಡೌನ್‌ನಿಂದಾಗಿ ವಿದ್ಯಾರ್ಥಿಗಳು ಮನೆಗೆ ಮರಳಿದ ನಂತರ ತನಿಖೆ ಸ್ಥಗಿತಗೊಂಡಿತು.
ಒಂದೂ ಬಂಧನವಿಲ್ಲ, ಚಾರ್ಜ್‌ಶಿಟೂ ಇಲ್ಲ, ವಿಶ್ವವಿದ್ಯಾಲಯದ ಆಂತರಿಕ ತನಿಖೆಯನ್ನು ನಿಲ್ಲಿಸಲಾಗಿದೆ ಕೂಡ! ಮುಖಗವಸು (ಮಾಸ್ಕ್) ಹಾಕಿಕೊಂಡು JNU ಕ್ಯಾಂಪಸ್‌ನಲ್ಲಿ ಪುಂಡರು ದಾಂಧಲೆ ಮಾಡಿ ಇಂದಿಗೆ ವರ್ಷವಾದರೂ ತನಿಖೆಯಲ್ಲಿ ಏನೇನೂ ಪ್ರಗತಿಯಾಗಿಲ್ಲ.

ಕಳೆದ ವರ್ಷ ಸುಮಾರು 100 ಜನರ ಮಾಸ್ಕ್‌ಧಾರಿಗಳ ತಂಡವೊಂದು ದೆಹಲಿಯ ಜವಾಹರಲಾಲ್ ನೆಹರು ವಿವಿಯಲ್ಲಿ (JNU) ಸಿಕ್ಕಾಪಟ್ಟೆ ದಾಂಧಲೆ ಮಾಡಿ, 36 ವಿದ್ಯಾರ್ಥಿಗಳು, ಅಧ್ಯಾಪಕರು ಮತ್ತು ಇತರ ಸಿಬ್ಬಂದಿಯನ್ನು ಭೀಕರವಾಗಿ ಗಾಯಗೊಳಿಸಿದ್ದರು. ಇದಾದ ನಾಲ್ಕು ದಿನಗಳ ನಂತರ ಜನೆವರಿ 9 ರಂದು ದೆಹಲಿ ಪೊಲೀಸರು ಒಂದು ಪತ್ರಿಕಾಗೋಷ್ಠಿ ನಡೆಸಿದ್ದರು. ಅಂದು 8 ಸಂಶಯಿತರನ್ನು (ಎಲ್ಲರೂ ವಿದ್ಯಾರ್ಥಿಗಳು) ಹೆಸರಿಸಿದ್ದ ಪೊಲೀಸರು ಅದರಲ್ಲಿ 7 ಜನ ಎಡಪಂಥೀಯ ಸಂಘಟನೆಗೆ ಸೇರಿದವರು ಎಂದು ಹೇಳಿದ್ದರು. ಇನ್ನಿಬ್ಬರು ಯಾವ ಸಂಘಟನೆ ಎಂದು ಹೇಳಿರಲಿಲ್ಲ. ಆದರೆ ಅವರಿಬ್ಬರು ಎಬಿವಿಪಿ ಸಂಘಟನೆಯವರಾಗಿದ್ದರು.

ಇದನ್ನೂ ಓದಿ: ಜೆಎನ್‌ಯು ಮರುನಾಮಕರಣವಾಗಲಿ ಎಂದ ಸಿ.ಟಿ. ರವಿಯನ್ನು ತರಾಟೆಗೆ ಪಡೆದ ನೆಟ್ಟಿಗರು!

ಉತ್ತರ ದೆಹಲಿಯ ವಸಂತ್‌ಕುಂಜ್‌ನಲ್ಲಿ ಮೂರು ಎಫ್‌ಐಆರ್ ದಾಖಲಿಸಲಾಗಿತ್ತು. ನಂತರ ಪ್ರಕರಣವನ್ನು ಕ್ರೈಮ್ ಬ್ರ್ಯಾಂಚ್‌ಗೆ ವರ್ಗಾಯಿಸಲಾಯಿತು. ಜೆಎನ್‌ಯು ಕ್ಯಾಂಪಸ್‌ನಲ್ಲೇ 20 ಪೊಲೀಸರ ಒಂದು ತನಿಖಾ ತಂಡವನ್ನು ಸ್ಥಾಪಿಸಲಾಯಿತು. ಫೆಬ್ರುವರಿಯಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಗಳ ತನಿಖೆಯನ್ನು ಮತ್ತು ಕೊವಿಡ್ ನಿಯಮ ಉಲ್ಲಂಘಿಸಿದ್ದಾರೆ ಎಂಬ ಆರೋಪ ಹೊತ್ತಿದ್ದ ನಿಜಾಮುದ್ದೀನ್ ಮರ್ಕಜ್‌ನ ಮೌಲಾನಾ ಸಾದ್ ತನಿಖೆಯನ್ನು ಇದೇ ತಂಡಕ್ಕೆ ವಹಿಸಲಾಗಿತು.

ಇಂಡಿಯನ್ ಎಕ್ಸ್‌ಪ್ರೆಸ್‌ಗೆ ಪೊಲೀಸ್ ಮೂಲಗಳು ಹೇಳಿದ ಪ್ರಕಾರ, ಪತ್ರಿಕಾಗೋಷ್ಠಿಯಲ್ಲಿ ಸಂಶಯಿತರು ಎಂದು ಕರೆದಿದ್ದ 9 ಜನರನ್ನು ಸೇರಿಸಿ 88 ಜನರನ್ನು ಎಸ್‌ಐಟಿ ಪ್ರಶ್ನಿಸಿತು. ದಾಂಧಲೆಯ ಆರೋಪ ಹೊತ್ತಿದ್ದ ಗಾಯಗೊಂಡ ಅಧ್ಯಾಪಕರು, ವಾರ್ಡನ್‌ಗಳು, ಸೆಕ್ಯುರಿಟಿ ಗಾರ್ಡ್ಸ್ ಮತ್ತು ವಿದ್ಯಾರ್ಥಿಗಳ ಹೇಳಿಕೆಯನ್ನೂ ಎಸ್‌ಐಟಿ ಪಡೆಯಿತು. ’ಪ್ರಶ್ನಿಸಿದ ನಂತರ ಇತರ ಸಂಶಯಿತರ ಮಾಹಿತಿಯೂ ದೊರಕಿತು. ಆದರೆ ಲಾಕ್‌ಡೌನ್ ಘೋಷಣೆಯಾದ ಪರಿಣಾಮ ತಂಡಕ್ಕೆ ಹೆಚ್ಚಿನ ಮಾಹಿತಿ ಪಡೆಯಲು ಆಗಲಿಲ್ಲ’ ಎಂದು ತಿಳಿಸಿವೆ.

ಇದನ್ನೂ ಓದಿ: ಜೆಎನ್‍ಯು, ಜಾಮಿಯಾ ಮತ್ತು ಬೀದರ್‌ ಪ್ರಕರಣ: ನಮ್ಮ ಪೊಲಿಸರು ಹಿಂಗ ಯಾಕ ಅದಾರ?

ಅವತ್ತಿನ ಹಿಂಸಾಚಾರದ ವಿಡಿಯೋದಲ್ಲಿ ’ಕಾಣಿಸಿಕೊಂಡಿದ್ದ’ ದೆಹಲಿ ವಿವಿಯ ಕೋಮಲ್ ಶರ್ಮಾಳನ್ನು ಎಸ್‌ಐಟಿ ವಿಚಾರಣೆ ಮಾಡಿತು ಎನ್ನಲಾಗಿದೆ. ಆದರೆ ಆಕೆ, ’ಕೆಲವರು ನನ್ನನ್ನು ಇದರಲ್ಲಿ ಸಿಕ್ಕಿಸಲು ಯತ್ನಿಸುತ್ತಿದ್ದಾರೆ. ಈ ದಾಂಧಲೆಯಲ್ಲಿ ನಾನು ಪಾಲ್ಗೊಂಡಿಲ್ಲ’ ಎಂಬ ಹೇಳಿಕೆ ನೀಡಿದ್ದಾಳೆ ಎಂದು ಪೊಲೀಸ್ ಮೂಲಗಳು ಹೇಳುತ್ತಿವೆ.

ದೆಹಲಿ ಪೊಲೀಸ್ ವಕ್ತಾರ ಏಯಿಷ್ ಸಿಂಘಾಲ್, ’ದಾಂಧಲೆಗೆ ಸಂಬಂಧಿಸಿ ಮೂರು ಎಫ್‌ಐಆರ್ ದಾಖಲಾಗಿವೆ, ಆದರೆ ತನಿಖೆ ಪೆಂಡಿಂಗ್‌ನಲ್ಲಿದೆ’ ಎಂದು ಹೇಳಿದ್ದಾರೆ.

ಜನೆವರಿ 5 ರ ದಾಂಧಲೆ ಕುರಿತು ನಿಷ್ಕ್ರಿಯತೆ ತೋರಿದ್ದಕ್ಕಾಗಿ ಮತ್ತು ಗಾಯಗೊಂಡ ಅಧ್ಯಾಪಕರು, ವಿದ್ಯಾರ್ಥಿಗಳನ್ನು ಸೌಜನ್ಯಕ್ಕೂ ಭೇಟಿಯಾಗದ ಕಾರಣಕ್ಕಾಗಿ ಟೀಕೆಗೆ ಗುರಿಯಾದ ವಿವಿಯ ಆಡಳಿತವು, ಘಟನೆಯ ತನಿಖೆಗೆ ಐವರು ಸದಸ್ಯರ ಸಮಿತಿಯನ್ನು ನೇಮಿಸಿತು. ಆದರೆ ದಾಂಧಲೆ ನಡೆದು ಒಂದು ವರ್ಷವಾದ ಈ ಸಂದರ್ಭದಲ್ಲಿ ವಿವಿಯ ರಿಜಿಸ್ಟ್ರಾರ್ ಪ್ರಮೋದ್‌ಕುಮಾರ್, ’ಪೊಲೀಸರ ತನಿಖೆ ಜಾರಿಯಲ್ಲಿರುವ ಕಾರಣ ಆಂತರಿಕ ತನಿಖೆಯನ್ನು ಸ್ಥಗಿತಗೊಳಿಸಲಾಗಿದೆ’ ಎಂದು ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ.
ದಾಂಧಲೆಯಲ್ಲಿ ಗಾಯಗೊಂಡ ಅಧ್ಯಾಪಕರು ಮತ್ತು ವಿದ್ಯಾರ್ಥಿಗಳು ವಿವಿ ಸಮಿತಿ ತಮ್ಮನ್ನು ಒಂದು ಸಲವೂ ಸಂಪರ್ಕಿಸಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ನಿಮಗೆ ಇದೇ ಸರಿಯಾದ ಚಿಕಿತ್ಸೆ : ಜೆಎನ್‌ಯು, ಜಾಮಿಯ ವಿದ್ಯಾರ್ಥಿಗಳಿಗೆ ಬೆದರಿಕೆ ಹಾಕಿದ ಕೇಂದ್ರ ಸಚಿವ..

’ಪೊಲೀಸರು ತನಿಖೆ ಮಾಡುತ್ತಿರುವ ಕಾರಣಕ್ಕೆ ಸಮಿತಿ ವರದಿ ಸಲ್ಲಿಸಿಲ್ಲ. ಇಲ್ಲಿ ಸಮಸ್ಯೆ ಏನಿದೆ? ದಾಂಧಲೆ ಆರಂಭಿಸಿದವರು ಯಾರು ಎಂಬುದಷ್ಟೇ ಅಲ್ಲವಾ? ನಾವು ಪೊಲೀಸರಿಗೆ ಎಲ್ಲ ರೀತಿಯ ನೆರವು ನೀಡಿದ್ದೇವೆ’ ಎನ್ನುತ್ತಾರೆ ರಿಜಿಸ್ಟ್ರಾರ್ ಪ್ರಮೋದ್ ಕುಮಾರ್.

ಕಬ್ಬಿಣದ ರಾಡ್‌ನಿಂದ ಹಲ್ಲೆಗೊಳಗಾಗಿ, ತಲೆಗೆ 16 ಹೊಲಿಗೆ ಹಾಕಿಸಿಕೊಂಡ ಜೆಎನ್‌ಯು ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಆಯೀಷಾ ಘೋಷ್, ’ಒಂದು ವರ್ಷದ ನಂತರ ಪ್ರಕರಣದಲ್ಲಿ ಒಂದಿಷ್ಟಾದರೂ ಬೆಳವಣಿಗೆ ಆಗಬೇಕಿತ್ತು. ನಮ್ಮ ಜೊತೆ ಇದ್ದೇವೆಂದು ಪೊಲೀಸರು ಹೇಳುತ್ತಾರಾದರೂ, ನಮ್ಮ ಹೇಳಿಕೆ ಪಡೆದ ನಂತರ ಮತ್ತೆಂದೂ ನಮ್ಮನ್ನು ಸಂಪರ್ಕಿಸಿಲ್ಲ, ಅವರು ಫಾಲೋ-ಅಪ್ ಮಾಡಲೇ ಇಲ್ಲ. ನಮ್ಮನ್ನೆಂದೂ ಸಂಪರ್ಕಿಸದ ಆಂತರಿಕ ತನಿಖಾ ಸಮಿತಿ ಬಗ್ಗೆ ನಮಗೆ ಭರವಸೆಯಿಲ್ಲ’ ಎಂದು ನಿರಾಶೆಯಿಂದ ಹೇಳಿದ್ದಾರೆ.

ಕಲ್ಲುಗಳ ಏಟಿನಿಂದಾದ ಗಾಯದಿಂದ ತಲೆಗೆ ನಾಲ್ಕು ಹೊಲಿಗೆ ಹಾಕಿಸಿಕೊಂಡ ಪ್ರೊ. ಸುಚಿತ್ರಾ ಸೇನ್, ’ಜನೆವರಿ 20 ರಂದು ವಿ.ಸಿಗೆ ಪತ್ರ ಬರೆದು ನಿಷ್ಪಕ್ಷಪಾತ ತನಿಖೆ ನಡೆಸಿ ಮತ್ತು ಜೆಎನ್‌ಯು ನೇಮಿಸಿಕೊಂಡಿರುವ ಸೆಕ್ಯುರಿಟಿ ಏಜೆನ್ಸಿ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಆಗ್ರಹಿಸಿದ್ದೆ. ಇವತ್ತಿಗೂ ಇದಕ್ಕೆ ಉತ್ತರ ಬಂದಿಲ್ಲ. ಪೊಲೀಸರು ಒಮ್ಮೆ ಮಾತ್ರ ನಮ್ಮನ್ನು ಸಂರ್ಕಿಸಿದ್ದರು’ ಎನ್ನುತ್ತಾರೆ.


ಇದನ್ನೂ ಓದಿ: ಜೆಎನ್‍ಯು ಘಟನೆ: ಸಂಪೂರ್ಣ ಹಿನ್ನೆಲೆ ಮತ್ತು ಉತ್ತರವಿಲ್ಲದ ಪ್ರಶ್ನೆಗಳು – ಪ್ರೊ. ಪುರುಷೋತ್ತಮ ಬಿಳಿಮಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...