HomeಮುಖಪುಟJNU ಹಿಂಸಾಚಾರಕ್ಕೆ ಒಂದು ವರ್ಷ: ಒಂದೂ ಅರೆಸ್ಟ್ ಇಲ್ಲ, ಚಾರ್ಜ್‌ಶೀಟ್ ಇಲ್ಲ, ಆಂತರಿಕ ತನಿಖೆ ಸ್ಥಗಿತ!

JNU ಹಿಂಸಾಚಾರಕ್ಕೆ ಒಂದು ವರ್ಷ: ಒಂದೂ ಅರೆಸ್ಟ್ ಇಲ್ಲ, ಚಾರ್ಜ್‌ಶೀಟ್ ಇಲ್ಲ, ಆಂತರಿಕ ತನಿಖೆ ಸ್ಥಗಿತ!

ಕಳೆದ ವರ್ಷ ಸುಮಾರು 100 ಮಾಸ್ಕ್‌ಧಾರಿಗಳ ತಂಡವೊಂದು ದೆಹಲಿಯ ಜವಾಹರಲಾಲ್ ನೆಹರು ವಿವಿಯಲ್ಲಿ (JNU) ಸಿಕ್ಕಾಪಟ್ಟೆ ದಾಂಧಲೆ ಮಾಡಿ, 36 ವಿದ್ಯಾರ್ಥಿಗಳು, ಅಧ್ಯಾಪಕರು ಮತ್ತು ಇತರ ಸಿಬ್ಬಂದಿಯನ್ನು ಭೀಕರವಾಗಿ ಗಾಯಗೊಳಿಸಿದ್ದರು.

- Advertisement -
- Advertisement -

ಪೊಲೀಸ್ ಮೂಲಗಳ ಪ್ರಕಾರ, ದೆಹಲಿ ಪೊಲೀಸ್ ಕ್ರೈಮ್ ಬ್ರ್ಯಾಂಚ್‌ನ ವಿಶೇಷ ತನಿಖಾ ದಳ 15 ಆರೋಪಿಗಳನ್ನು (ಎಲ್ಲರೂ ವಿದ್ಯಾರ್ಥಿಗಳೇ) ಗುರುತಿಸಿದೆ. ಆದರೆ ಲಾಕ್‌ಡೌನ್‌ನಿಂದಾಗಿ ವಿದ್ಯಾರ್ಥಿಗಳು ಮನೆಗೆ ಮರಳಿದ ನಂತರ ತನಿಖೆ ಸ್ಥಗಿತಗೊಂಡಿತು.
ಒಂದೂ ಬಂಧನವಿಲ್ಲ, ಚಾರ್ಜ್‌ಶಿಟೂ ಇಲ್ಲ, ವಿಶ್ವವಿದ್ಯಾಲಯದ ಆಂತರಿಕ ತನಿಖೆಯನ್ನು ನಿಲ್ಲಿಸಲಾಗಿದೆ ಕೂಡ! ಮುಖಗವಸು (ಮಾಸ್ಕ್) ಹಾಕಿಕೊಂಡು JNU ಕ್ಯಾಂಪಸ್‌ನಲ್ಲಿ ಪುಂಡರು ದಾಂಧಲೆ ಮಾಡಿ ಇಂದಿಗೆ ವರ್ಷವಾದರೂ ತನಿಖೆಯಲ್ಲಿ ಏನೇನೂ ಪ್ರಗತಿಯಾಗಿಲ್ಲ.

ಕಳೆದ ವರ್ಷ ಸುಮಾರು 100 ಜನರ ಮಾಸ್ಕ್‌ಧಾರಿಗಳ ತಂಡವೊಂದು ದೆಹಲಿಯ ಜವಾಹರಲಾಲ್ ನೆಹರು ವಿವಿಯಲ್ಲಿ (JNU) ಸಿಕ್ಕಾಪಟ್ಟೆ ದಾಂಧಲೆ ಮಾಡಿ, 36 ವಿದ್ಯಾರ್ಥಿಗಳು, ಅಧ್ಯಾಪಕರು ಮತ್ತು ಇತರ ಸಿಬ್ಬಂದಿಯನ್ನು ಭೀಕರವಾಗಿ ಗಾಯಗೊಳಿಸಿದ್ದರು. ಇದಾದ ನಾಲ್ಕು ದಿನಗಳ ನಂತರ ಜನೆವರಿ 9 ರಂದು ದೆಹಲಿ ಪೊಲೀಸರು ಒಂದು ಪತ್ರಿಕಾಗೋಷ್ಠಿ ನಡೆಸಿದ್ದರು. ಅಂದು 8 ಸಂಶಯಿತರನ್ನು (ಎಲ್ಲರೂ ವಿದ್ಯಾರ್ಥಿಗಳು) ಹೆಸರಿಸಿದ್ದ ಪೊಲೀಸರು ಅದರಲ್ಲಿ 7 ಜನ ಎಡಪಂಥೀಯ ಸಂಘಟನೆಗೆ ಸೇರಿದವರು ಎಂದು ಹೇಳಿದ್ದರು. ಇನ್ನಿಬ್ಬರು ಯಾವ ಸಂಘಟನೆ ಎಂದು ಹೇಳಿರಲಿಲ್ಲ. ಆದರೆ ಅವರಿಬ್ಬರು ಎಬಿವಿಪಿ ಸಂಘಟನೆಯವರಾಗಿದ್ದರು.

ಇದನ್ನೂ ಓದಿ: ಜೆಎನ್‌ಯು ಮರುನಾಮಕರಣವಾಗಲಿ ಎಂದ ಸಿ.ಟಿ. ರವಿಯನ್ನು ತರಾಟೆಗೆ ಪಡೆದ ನೆಟ್ಟಿಗರು!

ಉತ್ತರ ದೆಹಲಿಯ ವಸಂತ್‌ಕುಂಜ್‌ನಲ್ಲಿ ಮೂರು ಎಫ್‌ಐಆರ್ ದಾಖಲಿಸಲಾಗಿತ್ತು. ನಂತರ ಪ್ರಕರಣವನ್ನು ಕ್ರೈಮ್ ಬ್ರ್ಯಾಂಚ್‌ಗೆ ವರ್ಗಾಯಿಸಲಾಯಿತು. ಜೆಎನ್‌ಯು ಕ್ಯಾಂಪಸ್‌ನಲ್ಲೇ 20 ಪೊಲೀಸರ ಒಂದು ತನಿಖಾ ತಂಡವನ್ನು ಸ್ಥಾಪಿಸಲಾಯಿತು. ಫೆಬ್ರುವರಿಯಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಗಳ ತನಿಖೆಯನ್ನು ಮತ್ತು ಕೊವಿಡ್ ನಿಯಮ ಉಲ್ಲಂಘಿಸಿದ್ದಾರೆ ಎಂಬ ಆರೋಪ ಹೊತ್ತಿದ್ದ ನಿಜಾಮುದ್ದೀನ್ ಮರ್ಕಜ್‌ನ ಮೌಲಾನಾ ಸಾದ್ ತನಿಖೆಯನ್ನು ಇದೇ ತಂಡಕ್ಕೆ ವಹಿಸಲಾಗಿತು.

ಇಂಡಿಯನ್ ಎಕ್ಸ್‌ಪ್ರೆಸ್‌ಗೆ ಪೊಲೀಸ್ ಮೂಲಗಳು ಹೇಳಿದ ಪ್ರಕಾರ, ಪತ್ರಿಕಾಗೋಷ್ಠಿಯಲ್ಲಿ ಸಂಶಯಿತರು ಎಂದು ಕರೆದಿದ್ದ 9 ಜನರನ್ನು ಸೇರಿಸಿ 88 ಜನರನ್ನು ಎಸ್‌ಐಟಿ ಪ್ರಶ್ನಿಸಿತು. ದಾಂಧಲೆಯ ಆರೋಪ ಹೊತ್ತಿದ್ದ ಗಾಯಗೊಂಡ ಅಧ್ಯಾಪಕರು, ವಾರ್ಡನ್‌ಗಳು, ಸೆಕ್ಯುರಿಟಿ ಗಾರ್ಡ್ಸ್ ಮತ್ತು ವಿದ್ಯಾರ್ಥಿಗಳ ಹೇಳಿಕೆಯನ್ನೂ ಎಸ್‌ಐಟಿ ಪಡೆಯಿತು. ’ಪ್ರಶ್ನಿಸಿದ ನಂತರ ಇತರ ಸಂಶಯಿತರ ಮಾಹಿತಿಯೂ ದೊರಕಿತು. ಆದರೆ ಲಾಕ್‌ಡೌನ್ ಘೋಷಣೆಯಾದ ಪರಿಣಾಮ ತಂಡಕ್ಕೆ ಹೆಚ್ಚಿನ ಮಾಹಿತಿ ಪಡೆಯಲು ಆಗಲಿಲ್ಲ’ ಎಂದು ತಿಳಿಸಿವೆ.

ಇದನ್ನೂ ಓದಿ: ಜೆಎನ್‍ಯು, ಜಾಮಿಯಾ ಮತ್ತು ಬೀದರ್‌ ಪ್ರಕರಣ: ನಮ್ಮ ಪೊಲಿಸರು ಹಿಂಗ ಯಾಕ ಅದಾರ?

ಅವತ್ತಿನ ಹಿಂಸಾಚಾರದ ವಿಡಿಯೋದಲ್ಲಿ ’ಕಾಣಿಸಿಕೊಂಡಿದ್ದ’ ದೆಹಲಿ ವಿವಿಯ ಕೋಮಲ್ ಶರ್ಮಾಳನ್ನು ಎಸ್‌ಐಟಿ ವಿಚಾರಣೆ ಮಾಡಿತು ಎನ್ನಲಾಗಿದೆ. ಆದರೆ ಆಕೆ, ’ಕೆಲವರು ನನ್ನನ್ನು ಇದರಲ್ಲಿ ಸಿಕ್ಕಿಸಲು ಯತ್ನಿಸುತ್ತಿದ್ದಾರೆ. ಈ ದಾಂಧಲೆಯಲ್ಲಿ ನಾನು ಪಾಲ್ಗೊಂಡಿಲ್ಲ’ ಎಂಬ ಹೇಳಿಕೆ ನೀಡಿದ್ದಾಳೆ ಎಂದು ಪೊಲೀಸ್ ಮೂಲಗಳು ಹೇಳುತ್ತಿವೆ.

ದೆಹಲಿ ಪೊಲೀಸ್ ವಕ್ತಾರ ಏಯಿಷ್ ಸಿಂಘಾಲ್, ’ದಾಂಧಲೆಗೆ ಸಂಬಂಧಿಸಿ ಮೂರು ಎಫ್‌ಐಆರ್ ದಾಖಲಾಗಿವೆ, ಆದರೆ ತನಿಖೆ ಪೆಂಡಿಂಗ್‌ನಲ್ಲಿದೆ’ ಎಂದು ಹೇಳಿದ್ದಾರೆ.

ಜನೆವರಿ 5 ರ ದಾಂಧಲೆ ಕುರಿತು ನಿಷ್ಕ್ರಿಯತೆ ತೋರಿದ್ದಕ್ಕಾಗಿ ಮತ್ತು ಗಾಯಗೊಂಡ ಅಧ್ಯಾಪಕರು, ವಿದ್ಯಾರ್ಥಿಗಳನ್ನು ಸೌಜನ್ಯಕ್ಕೂ ಭೇಟಿಯಾಗದ ಕಾರಣಕ್ಕಾಗಿ ಟೀಕೆಗೆ ಗುರಿಯಾದ ವಿವಿಯ ಆಡಳಿತವು, ಘಟನೆಯ ತನಿಖೆಗೆ ಐವರು ಸದಸ್ಯರ ಸಮಿತಿಯನ್ನು ನೇಮಿಸಿತು. ಆದರೆ ದಾಂಧಲೆ ನಡೆದು ಒಂದು ವರ್ಷವಾದ ಈ ಸಂದರ್ಭದಲ್ಲಿ ವಿವಿಯ ರಿಜಿಸ್ಟ್ರಾರ್ ಪ್ರಮೋದ್‌ಕುಮಾರ್, ’ಪೊಲೀಸರ ತನಿಖೆ ಜಾರಿಯಲ್ಲಿರುವ ಕಾರಣ ಆಂತರಿಕ ತನಿಖೆಯನ್ನು ಸ್ಥಗಿತಗೊಳಿಸಲಾಗಿದೆ’ ಎಂದು ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ.
ದಾಂಧಲೆಯಲ್ಲಿ ಗಾಯಗೊಂಡ ಅಧ್ಯಾಪಕರು ಮತ್ತು ವಿದ್ಯಾರ್ಥಿಗಳು ವಿವಿ ಸಮಿತಿ ತಮ್ಮನ್ನು ಒಂದು ಸಲವೂ ಸಂಪರ್ಕಿಸಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ನಿಮಗೆ ಇದೇ ಸರಿಯಾದ ಚಿಕಿತ್ಸೆ : ಜೆಎನ್‌ಯು, ಜಾಮಿಯ ವಿದ್ಯಾರ್ಥಿಗಳಿಗೆ ಬೆದರಿಕೆ ಹಾಕಿದ ಕೇಂದ್ರ ಸಚಿವ..

’ಪೊಲೀಸರು ತನಿಖೆ ಮಾಡುತ್ತಿರುವ ಕಾರಣಕ್ಕೆ ಸಮಿತಿ ವರದಿ ಸಲ್ಲಿಸಿಲ್ಲ. ಇಲ್ಲಿ ಸಮಸ್ಯೆ ಏನಿದೆ? ದಾಂಧಲೆ ಆರಂಭಿಸಿದವರು ಯಾರು ಎಂಬುದಷ್ಟೇ ಅಲ್ಲವಾ? ನಾವು ಪೊಲೀಸರಿಗೆ ಎಲ್ಲ ರೀತಿಯ ನೆರವು ನೀಡಿದ್ದೇವೆ’ ಎನ್ನುತ್ತಾರೆ ರಿಜಿಸ್ಟ್ರಾರ್ ಪ್ರಮೋದ್ ಕುಮಾರ್.

ಕಬ್ಬಿಣದ ರಾಡ್‌ನಿಂದ ಹಲ್ಲೆಗೊಳಗಾಗಿ, ತಲೆಗೆ 16 ಹೊಲಿಗೆ ಹಾಕಿಸಿಕೊಂಡ ಜೆಎನ್‌ಯು ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಆಯೀಷಾ ಘೋಷ್, ’ಒಂದು ವರ್ಷದ ನಂತರ ಪ್ರಕರಣದಲ್ಲಿ ಒಂದಿಷ್ಟಾದರೂ ಬೆಳವಣಿಗೆ ಆಗಬೇಕಿತ್ತು. ನಮ್ಮ ಜೊತೆ ಇದ್ದೇವೆಂದು ಪೊಲೀಸರು ಹೇಳುತ್ತಾರಾದರೂ, ನಮ್ಮ ಹೇಳಿಕೆ ಪಡೆದ ನಂತರ ಮತ್ತೆಂದೂ ನಮ್ಮನ್ನು ಸಂಪರ್ಕಿಸಿಲ್ಲ, ಅವರು ಫಾಲೋ-ಅಪ್ ಮಾಡಲೇ ಇಲ್ಲ. ನಮ್ಮನ್ನೆಂದೂ ಸಂಪರ್ಕಿಸದ ಆಂತರಿಕ ತನಿಖಾ ಸಮಿತಿ ಬಗ್ಗೆ ನಮಗೆ ಭರವಸೆಯಿಲ್ಲ’ ಎಂದು ನಿರಾಶೆಯಿಂದ ಹೇಳಿದ್ದಾರೆ.

ಕಲ್ಲುಗಳ ಏಟಿನಿಂದಾದ ಗಾಯದಿಂದ ತಲೆಗೆ ನಾಲ್ಕು ಹೊಲಿಗೆ ಹಾಕಿಸಿಕೊಂಡ ಪ್ರೊ. ಸುಚಿತ್ರಾ ಸೇನ್, ’ಜನೆವರಿ 20 ರಂದು ವಿ.ಸಿಗೆ ಪತ್ರ ಬರೆದು ನಿಷ್ಪಕ್ಷಪಾತ ತನಿಖೆ ನಡೆಸಿ ಮತ್ತು ಜೆಎನ್‌ಯು ನೇಮಿಸಿಕೊಂಡಿರುವ ಸೆಕ್ಯುರಿಟಿ ಏಜೆನ್ಸಿ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಆಗ್ರಹಿಸಿದ್ದೆ. ಇವತ್ತಿಗೂ ಇದಕ್ಕೆ ಉತ್ತರ ಬಂದಿಲ್ಲ. ಪೊಲೀಸರು ಒಮ್ಮೆ ಮಾತ್ರ ನಮ್ಮನ್ನು ಸಂರ್ಕಿಸಿದ್ದರು’ ಎನ್ನುತ್ತಾರೆ.


ಇದನ್ನೂ ಓದಿ: ಜೆಎನ್‍ಯು ಘಟನೆ: ಸಂಪೂರ್ಣ ಹಿನ್ನೆಲೆ ಮತ್ತು ಉತ್ತರವಿಲ್ಲದ ಪ್ರಶ್ನೆಗಳು – ಪ್ರೊ. ಪುರುಷೋತ್ತಮ ಬಿಳಿಮಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...