HomeಮುಖಪುಟJNU ಹಿಂಸಾಚಾರಕ್ಕೆ ಒಂದು ವರ್ಷ: ಒಂದೂ ಅರೆಸ್ಟ್ ಇಲ್ಲ, ಚಾರ್ಜ್‌ಶೀಟ್ ಇಲ್ಲ, ಆಂತರಿಕ ತನಿಖೆ ಸ್ಥಗಿತ!

JNU ಹಿಂಸಾಚಾರಕ್ಕೆ ಒಂದು ವರ್ಷ: ಒಂದೂ ಅರೆಸ್ಟ್ ಇಲ್ಲ, ಚಾರ್ಜ್‌ಶೀಟ್ ಇಲ್ಲ, ಆಂತರಿಕ ತನಿಖೆ ಸ್ಥಗಿತ!

ಕಳೆದ ವರ್ಷ ಸುಮಾರು 100 ಮಾಸ್ಕ್‌ಧಾರಿಗಳ ತಂಡವೊಂದು ದೆಹಲಿಯ ಜವಾಹರಲಾಲ್ ನೆಹರು ವಿವಿಯಲ್ಲಿ (JNU) ಸಿಕ್ಕಾಪಟ್ಟೆ ದಾಂಧಲೆ ಮಾಡಿ, 36 ವಿದ್ಯಾರ್ಥಿಗಳು, ಅಧ್ಯಾಪಕರು ಮತ್ತು ಇತರ ಸಿಬ್ಬಂದಿಯನ್ನು ಭೀಕರವಾಗಿ ಗಾಯಗೊಳಿಸಿದ್ದರು.

- Advertisement -
- Advertisement -

ಪೊಲೀಸ್ ಮೂಲಗಳ ಪ್ರಕಾರ, ದೆಹಲಿ ಪೊಲೀಸ್ ಕ್ರೈಮ್ ಬ್ರ್ಯಾಂಚ್‌ನ ವಿಶೇಷ ತನಿಖಾ ದಳ 15 ಆರೋಪಿಗಳನ್ನು (ಎಲ್ಲರೂ ವಿದ್ಯಾರ್ಥಿಗಳೇ) ಗುರುತಿಸಿದೆ. ಆದರೆ ಲಾಕ್‌ಡೌನ್‌ನಿಂದಾಗಿ ವಿದ್ಯಾರ್ಥಿಗಳು ಮನೆಗೆ ಮರಳಿದ ನಂತರ ತನಿಖೆ ಸ್ಥಗಿತಗೊಂಡಿತು.
ಒಂದೂ ಬಂಧನವಿಲ್ಲ, ಚಾರ್ಜ್‌ಶಿಟೂ ಇಲ್ಲ, ವಿಶ್ವವಿದ್ಯಾಲಯದ ಆಂತರಿಕ ತನಿಖೆಯನ್ನು ನಿಲ್ಲಿಸಲಾಗಿದೆ ಕೂಡ! ಮುಖಗವಸು (ಮಾಸ್ಕ್) ಹಾಕಿಕೊಂಡು JNU ಕ್ಯಾಂಪಸ್‌ನಲ್ಲಿ ಪುಂಡರು ದಾಂಧಲೆ ಮಾಡಿ ಇಂದಿಗೆ ವರ್ಷವಾದರೂ ತನಿಖೆಯಲ್ಲಿ ಏನೇನೂ ಪ್ರಗತಿಯಾಗಿಲ್ಲ.

ಕಳೆದ ವರ್ಷ ಸುಮಾರು 100 ಜನರ ಮಾಸ್ಕ್‌ಧಾರಿಗಳ ತಂಡವೊಂದು ದೆಹಲಿಯ ಜವಾಹರಲಾಲ್ ನೆಹರು ವಿವಿಯಲ್ಲಿ (JNU) ಸಿಕ್ಕಾಪಟ್ಟೆ ದಾಂಧಲೆ ಮಾಡಿ, 36 ವಿದ್ಯಾರ್ಥಿಗಳು, ಅಧ್ಯಾಪಕರು ಮತ್ತು ಇತರ ಸಿಬ್ಬಂದಿಯನ್ನು ಭೀಕರವಾಗಿ ಗಾಯಗೊಳಿಸಿದ್ದರು. ಇದಾದ ನಾಲ್ಕು ದಿನಗಳ ನಂತರ ಜನೆವರಿ 9 ರಂದು ದೆಹಲಿ ಪೊಲೀಸರು ಒಂದು ಪತ್ರಿಕಾಗೋಷ್ಠಿ ನಡೆಸಿದ್ದರು. ಅಂದು 8 ಸಂಶಯಿತರನ್ನು (ಎಲ್ಲರೂ ವಿದ್ಯಾರ್ಥಿಗಳು) ಹೆಸರಿಸಿದ್ದ ಪೊಲೀಸರು ಅದರಲ್ಲಿ 7 ಜನ ಎಡಪಂಥೀಯ ಸಂಘಟನೆಗೆ ಸೇರಿದವರು ಎಂದು ಹೇಳಿದ್ದರು. ಇನ್ನಿಬ್ಬರು ಯಾವ ಸಂಘಟನೆ ಎಂದು ಹೇಳಿರಲಿಲ್ಲ. ಆದರೆ ಅವರಿಬ್ಬರು ಎಬಿವಿಪಿ ಸಂಘಟನೆಯವರಾಗಿದ್ದರು.

ಇದನ್ನೂ ಓದಿ: ಜೆಎನ್‌ಯು ಮರುನಾಮಕರಣವಾಗಲಿ ಎಂದ ಸಿ.ಟಿ. ರವಿಯನ್ನು ತರಾಟೆಗೆ ಪಡೆದ ನೆಟ್ಟಿಗರು!

ಉತ್ತರ ದೆಹಲಿಯ ವಸಂತ್‌ಕುಂಜ್‌ನಲ್ಲಿ ಮೂರು ಎಫ್‌ಐಆರ್ ದಾಖಲಿಸಲಾಗಿತ್ತು. ನಂತರ ಪ್ರಕರಣವನ್ನು ಕ್ರೈಮ್ ಬ್ರ್ಯಾಂಚ್‌ಗೆ ವರ್ಗಾಯಿಸಲಾಯಿತು. ಜೆಎನ್‌ಯು ಕ್ಯಾಂಪಸ್‌ನಲ್ಲೇ 20 ಪೊಲೀಸರ ಒಂದು ತನಿಖಾ ತಂಡವನ್ನು ಸ್ಥಾಪಿಸಲಾಯಿತು. ಫೆಬ್ರುವರಿಯಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಗಳ ತನಿಖೆಯನ್ನು ಮತ್ತು ಕೊವಿಡ್ ನಿಯಮ ಉಲ್ಲಂಘಿಸಿದ್ದಾರೆ ಎಂಬ ಆರೋಪ ಹೊತ್ತಿದ್ದ ನಿಜಾಮುದ್ದೀನ್ ಮರ್ಕಜ್‌ನ ಮೌಲಾನಾ ಸಾದ್ ತನಿಖೆಯನ್ನು ಇದೇ ತಂಡಕ್ಕೆ ವಹಿಸಲಾಗಿತು.

ಇಂಡಿಯನ್ ಎಕ್ಸ್‌ಪ್ರೆಸ್‌ಗೆ ಪೊಲೀಸ್ ಮೂಲಗಳು ಹೇಳಿದ ಪ್ರಕಾರ, ಪತ್ರಿಕಾಗೋಷ್ಠಿಯಲ್ಲಿ ಸಂಶಯಿತರು ಎಂದು ಕರೆದಿದ್ದ 9 ಜನರನ್ನು ಸೇರಿಸಿ 88 ಜನರನ್ನು ಎಸ್‌ಐಟಿ ಪ್ರಶ್ನಿಸಿತು. ದಾಂಧಲೆಯ ಆರೋಪ ಹೊತ್ತಿದ್ದ ಗಾಯಗೊಂಡ ಅಧ್ಯಾಪಕರು, ವಾರ್ಡನ್‌ಗಳು, ಸೆಕ್ಯುರಿಟಿ ಗಾರ್ಡ್ಸ್ ಮತ್ತು ವಿದ್ಯಾರ್ಥಿಗಳ ಹೇಳಿಕೆಯನ್ನೂ ಎಸ್‌ಐಟಿ ಪಡೆಯಿತು. ’ಪ್ರಶ್ನಿಸಿದ ನಂತರ ಇತರ ಸಂಶಯಿತರ ಮಾಹಿತಿಯೂ ದೊರಕಿತು. ಆದರೆ ಲಾಕ್‌ಡೌನ್ ಘೋಷಣೆಯಾದ ಪರಿಣಾಮ ತಂಡಕ್ಕೆ ಹೆಚ್ಚಿನ ಮಾಹಿತಿ ಪಡೆಯಲು ಆಗಲಿಲ್ಲ’ ಎಂದು ತಿಳಿಸಿವೆ.

ಇದನ್ನೂ ಓದಿ: ಜೆಎನ್‍ಯು, ಜಾಮಿಯಾ ಮತ್ತು ಬೀದರ್‌ ಪ್ರಕರಣ: ನಮ್ಮ ಪೊಲಿಸರು ಹಿಂಗ ಯಾಕ ಅದಾರ?

ಅವತ್ತಿನ ಹಿಂಸಾಚಾರದ ವಿಡಿಯೋದಲ್ಲಿ ’ಕಾಣಿಸಿಕೊಂಡಿದ್ದ’ ದೆಹಲಿ ವಿವಿಯ ಕೋಮಲ್ ಶರ್ಮಾಳನ್ನು ಎಸ್‌ಐಟಿ ವಿಚಾರಣೆ ಮಾಡಿತು ಎನ್ನಲಾಗಿದೆ. ಆದರೆ ಆಕೆ, ’ಕೆಲವರು ನನ್ನನ್ನು ಇದರಲ್ಲಿ ಸಿಕ್ಕಿಸಲು ಯತ್ನಿಸುತ್ತಿದ್ದಾರೆ. ಈ ದಾಂಧಲೆಯಲ್ಲಿ ನಾನು ಪಾಲ್ಗೊಂಡಿಲ್ಲ’ ಎಂಬ ಹೇಳಿಕೆ ನೀಡಿದ್ದಾಳೆ ಎಂದು ಪೊಲೀಸ್ ಮೂಲಗಳು ಹೇಳುತ್ತಿವೆ.

ದೆಹಲಿ ಪೊಲೀಸ್ ವಕ್ತಾರ ಏಯಿಷ್ ಸಿಂಘಾಲ್, ’ದಾಂಧಲೆಗೆ ಸಂಬಂಧಿಸಿ ಮೂರು ಎಫ್‌ಐಆರ್ ದಾಖಲಾಗಿವೆ, ಆದರೆ ತನಿಖೆ ಪೆಂಡಿಂಗ್‌ನಲ್ಲಿದೆ’ ಎಂದು ಹೇಳಿದ್ದಾರೆ.

ಜನೆವರಿ 5 ರ ದಾಂಧಲೆ ಕುರಿತು ನಿಷ್ಕ್ರಿಯತೆ ತೋರಿದ್ದಕ್ಕಾಗಿ ಮತ್ತು ಗಾಯಗೊಂಡ ಅಧ್ಯಾಪಕರು, ವಿದ್ಯಾರ್ಥಿಗಳನ್ನು ಸೌಜನ್ಯಕ್ಕೂ ಭೇಟಿಯಾಗದ ಕಾರಣಕ್ಕಾಗಿ ಟೀಕೆಗೆ ಗುರಿಯಾದ ವಿವಿಯ ಆಡಳಿತವು, ಘಟನೆಯ ತನಿಖೆಗೆ ಐವರು ಸದಸ್ಯರ ಸಮಿತಿಯನ್ನು ನೇಮಿಸಿತು. ಆದರೆ ದಾಂಧಲೆ ನಡೆದು ಒಂದು ವರ್ಷವಾದ ಈ ಸಂದರ್ಭದಲ್ಲಿ ವಿವಿಯ ರಿಜಿಸ್ಟ್ರಾರ್ ಪ್ರಮೋದ್‌ಕುಮಾರ್, ’ಪೊಲೀಸರ ತನಿಖೆ ಜಾರಿಯಲ್ಲಿರುವ ಕಾರಣ ಆಂತರಿಕ ತನಿಖೆಯನ್ನು ಸ್ಥಗಿತಗೊಳಿಸಲಾಗಿದೆ’ ಎಂದು ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ.
ದಾಂಧಲೆಯಲ್ಲಿ ಗಾಯಗೊಂಡ ಅಧ್ಯಾಪಕರು ಮತ್ತು ವಿದ್ಯಾರ್ಥಿಗಳು ವಿವಿ ಸಮಿತಿ ತಮ್ಮನ್ನು ಒಂದು ಸಲವೂ ಸಂಪರ್ಕಿಸಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ನಿಮಗೆ ಇದೇ ಸರಿಯಾದ ಚಿಕಿತ್ಸೆ : ಜೆಎನ್‌ಯು, ಜಾಮಿಯ ವಿದ್ಯಾರ್ಥಿಗಳಿಗೆ ಬೆದರಿಕೆ ಹಾಕಿದ ಕೇಂದ್ರ ಸಚಿವ..

’ಪೊಲೀಸರು ತನಿಖೆ ಮಾಡುತ್ತಿರುವ ಕಾರಣಕ್ಕೆ ಸಮಿತಿ ವರದಿ ಸಲ್ಲಿಸಿಲ್ಲ. ಇಲ್ಲಿ ಸಮಸ್ಯೆ ಏನಿದೆ? ದಾಂಧಲೆ ಆರಂಭಿಸಿದವರು ಯಾರು ಎಂಬುದಷ್ಟೇ ಅಲ್ಲವಾ? ನಾವು ಪೊಲೀಸರಿಗೆ ಎಲ್ಲ ರೀತಿಯ ನೆರವು ನೀಡಿದ್ದೇವೆ’ ಎನ್ನುತ್ತಾರೆ ರಿಜಿಸ್ಟ್ರಾರ್ ಪ್ರಮೋದ್ ಕುಮಾರ್.

ಕಬ್ಬಿಣದ ರಾಡ್‌ನಿಂದ ಹಲ್ಲೆಗೊಳಗಾಗಿ, ತಲೆಗೆ 16 ಹೊಲಿಗೆ ಹಾಕಿಸಿಕೊಂಡ ಜೆಎನ್‌ಯು ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಆಯೀಷಾ ಘೋಷ್, ’ಒಂದು ವರ್ಷದ ನಂತರ ಪ್ರಕರಣದಲ್ಲಿ ಒಂದಿಷ್ಟಾದರೂ ಬೆಳವಣಿಗೆ ಆಗಬೇಕಿತ್ತು. ನಮ್ಮ ಜೊತೆ ಇದ್ದೇವೆಂದು ಪೊಲೀಸರು ಹೇಳುತ್ತಾರಾದರೂ, ನಮ್ಮ ಹೇಳಿಕೆ ಪಡೆದ ನಂತರ ಮತ್ತೆಂದೂ ನಮ್ಮನ್ನು ಸಂಪರ್ಕಿಸಿಲ್ಲ, ಅವರು ಫಾಲೋ-ಅಪ್ ಮಾಡಲೇ ಇಲ್ಲ. ನಮ್ಮನ್ನೆಂದೂ ಸಂಪರ್ಕಿಸದ ಆಂತರಿಕ ತನಿಖಾ ಸಮಿತಿ ಬಗ್ಗೆ ನಮಗೆ ಭರವಸೆಯಿಲ್ಲ’ ಎಂದು ನಿರಾಶೆಯಿಂದ ಹೇಳಿದ್ದಾರೆ.

ಕಲ್ಲುಗಳ ಏಟಿನಿಂದಾದ ಗಾಯದಿಂದ ತಲೆಗೆ ನಾಲ್ಕು ಹೊಲಿಗೆ ಹಾಕಿಸಿಕೊಂಡ ಪ್ರೊ. ಸುಚಿತ್ರಾ ಸೇನ್, ’ಜನೆವರಿ 20 ರಂದು ವಿ.ಸಿಗೆ ಪತ್ರ ಬರೆದು ನಿಷ್ಪಕ್ಷಪಾತ ತನಿಖೆ ನಡೆಸಿ ಮತ್ತು ಜೆಎನ್‌ಯು ನೇಮಿಸಿಕೊಂಡಿರುವ ಸೆಕ್ಯುರಿಟಿ ಏಜೆನ್ಸಿ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಆಗ್ರಹಿಸಿದ್ದೆ. ಇವತ್ತಿಗೂ ಇದಕ್ಕೆ ಉತ್ತರ ಬಂದಿಲ್ಲ. ಪೊಲೀಸರು ಒಮ್ಮೆ ಮಾತ್ರ ನಮ್ಮನ್ನು ಸಂರ್ಕಿಸಿದ್ದರು’ ಎನ್ನುತ್ತಾರೆ.


ಇದನ್ನೂ ಓದಿ: ಜೆಎನ್‍ಯು ಘಟನೆ: ಸಂಪೂರ್ಣ ಹಿನ್ನೆಲೆ ಮತ್ತು ಉತ್ತರವಿಲ್ಲದ ಪ್ರಶ್ನೆಗಳು – ಪ್ರೊ. ಪುರುಷೋತ್ತಮ ಬಿಳಿಮಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...