HomeಮುಖಪುಟJNU ಹಿಂಸಾಚಾರಕ್ಕೆ ಒಂದು ವರ್ಷ: ಒಂದೂ ಅರೆಸ್ಟ್ ಇಲ್ಲ, ಚಾರ್ಜ್‌ಶೀಟ್ ಇಲ್ಲ, ಆಂತರಿಕ ತನಿಖೆ ಸ್ಥಗಿತ!

JNU ಹಿಂಸಾಚಾರಕ್ಕೆ ಒಂದು ವರ್ಷ: ಒಂದೂ ಅರೆಸ್ಟ್ ಇಲ್ಲ, ಚಾರ್ಜ್‌ಶೀಟ್ ಇಲ್ಲ, ಆಂತರಿಕ ತನಿಖೆ ಸ್ಥಗಿತ!

ಕಳೆದ ವರ್ಷ ಸುಮಾರು 100 ಮಾಸ್ಕ್‌ಧಾರಿಗಳ ತಂಡವೊಂದು ದೆಹಲಿಯ ಜವಾಹರಲಾಲ್ ನೆಹರು ವಿವಿಯಲ್ಲಿ (JNU) ಸಿಕ್ಕಾಪಟ್ಟೆ ದಾಂಧಲೆ ಮಾಡಿ, 36 ವಿದ್ಯಾರ್ಥಿಗಳು, ಅಧ್ಯಾಪಕರು ಮತ್ತು ಇತರ ಸಿಬ್ಬಂದಿಯನ್ನು ಭೀಕರವಾಗಿ ಗಾಯಗೊಳಿಸಿದ್ದರು.

- Advertisement -
- Advertisement -

ಪೊಲೀಸ್ ಮೂಲಗಳ ಪ್ರಕಾರ, ದೆಹಲಿ ಪೊಲೀಸ್ ಕ್ರೈಮ್ ಬ್ರ್ಯಾಂಚ್‌ನ ವಿಶೇಷ ತನಿಖಾ ದಳ 15 ಆರೋಪಿಗಳನ್ನು (ಎಲ್ಲರೂ ವಿದ್ಯಾರ್ಥಿಗಳೇ) ಗುರುತಿಸಿದೆ. ಆದರೆ ಲಾಕ್‌ಡೌನ್‌ನಿಂದಾಗಿ ವಿದ್ಯಾರ್ಥಿಗಳು ಮನೆಗೆ ಮರಳಿದ ನಂತರ ತನಿಖೆ ಸ್ಥಗಿತಗೊಂಡಿತು.
ಒಂದೂ ಬಂಧನವಿಲ್ಲ, ಚಾರ್ಜ್‌ಶಿಟೂ ಇಲ್ಲ, ವಿಶ್ವವಿದ್ಯಾಲಯದ ಆಂತರಿಕ ತನಿಖೆಯನ್ನು ನಿಲ್ಲಿಸಲಾಗಿದೆ ಕೂಡ! ಮುಖಗವಸು (ಮಾಸ್ಕ್) ಹಾಕಿಕೊಂಡು JNU ಕ್ಯಾಂಪಸ್‌ನಲ್ಲಿ ಪುಂಡರು ದಾಂಧಲೆ ಮಾಡಿ ಇಂದಿಗೆ ವರ್ಷವಾದರೂ ತನಿಖೆಯಲ್ಲಿ ಏನೇನೂ ಪ್ರಗತಿಯಾಗಿಲ್ಲ.

ಕಳೆದ ವರ್ಷ ಸುಮಾರು 100 ಜನರ ಮಾಸ್ಕ್‌ಧಾರಿಗಳ ತಂಡವೊಂದು ದೆಹಲಿಯ ಜವಾಹರಲಾಲ್ ನೆಹರು ವಿವಿಯಲ್ಲಿ (JNU) ಸಿಕ್ಕಾಪಟ್ಟೆ ದಾಂಧಲೆ ಮಾಡಿ, 36 ವಿದ್ಯಾರ್ಥಿಗಳು, ಅಧ್ಯಾಪಕರು ಮತ್ತು ಇತರ ಸಿಬ್ಬಂದಿಯನ್ನು ಭೀಕರವಾಗಿ ಗಾಯಗೊಳಿಸಿದ್ದರು. ಇದಾದ ನಾಲ್ಕು ದಿನಗಳ ನಂತರ ಜನೆವರಿ 9 ರಂದು ದೆಹಲಿ ಪೊಲೀಸರು ಒಂದು ಪತ್ರಿಕಾಗೋಷ್ಠಿ ನಡೆಸಿದ್ದರು. ಅಂದು 8 ಸಂಶಯಿತರನ್ನು (ಎಲ್ಲರೂ ವಿದ್ಯಾರ್ಥಿಗಳು) ಹೆಸರಿಸಿದ್ದ ಪೊಲೀಸರು ಅದರಲ್ಲಿ 7 ಜನ ಎಡಪಂಥೀಯ ಸಂಘಟನೆಗೆ ಸೇರಿದವರು ಎಂದು ಹೇಳಿದ್ದರು. ಇನ್ನಿಬ್ಬರು ಯಾವ ಸಂಘಟನೆ ಎಂದು ಹೇಳಿರಲಿಲ್ಲ. ಆದರೆ ಅವರಿಬ್ಬರು ಎಬಿವಿಪಿ ಸಂಘಟನೆಯವರಾಗಿದ್ದರು.

ಇದನ್ನೂ ಓದಿ: ಜೆಎನ್‌ಯು ಮರುನಾಮಕರಣವಾಗಲಿ ಎಂದ ಸಿ.ಟಿ. ರವಿಯನ್ನು ತರಾಟೆಗೆ ಪಡೆದ ನೆಟ್ಟಿಗರು!

ಉತ್ತರ ದೆಹಲಿಯ ವಸಂತ್‌ಕುಂಜ್‌ನಲ್ಲಿ ಮೂರು ಎಫ್‌ಐಆರ್ ದಾಖಲಿಸಲಾಗಿತ್ತು. ನಂತರ ಪ್ರಕರಣವನ್ನು ಕ್ರೈಮ್ ಬ್ರ್ಯಾಂಚ್‌ಗೆ ವರ್ಗಾಯಿಸಲಾಯಿತು. ಜೆಎನ್‌ಯು ಕ್ಯಾಂಪಸ್‌ನಲ್ಲೇ 20 ಪೊಲೀಸರ ಒಂದು ತನಿಖಾ ತಂಡವನ್ನು ಸ್ಥಾಪಿಸಲಾಯಿತು. ಫೆಬ್ರುವರಿಯಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಗಳ ತನಿಖೆಯನ್ನು ಮತ್ತು ಕೊವಿಡ್ ನಿಯಮ ಉಲ್ಲಂಘಿಸಿದ್ದಾರೆ ಎಂಬ ಆರೋಪ ಹೊತ್ತಿದ್ದ ನಿಜಾಮುದ್ದೀನ್ ಮರ್ಕಜ್‌ನ ಮೌಲಾನಾ ಸಾದ್ ತನಿಖೆಯನ್ನು ಇದೇ ತಂಡಕ್ಕೆ ವಹಿಸಲಾಗಿತು.

ಇಂಡಿಯನ್ ಎಕ್ಸ್‌ಪ್ರೆಸ್‌ಗೆ ಪೊಲೀಸ್ ಮೂಲಗಳು ಹೇಳಿದ ಪ್ರಕಾರ, ಪತ್ರಿಕಾಗೋಷ್ಠಿಯಲ್ಲಿ ಸಂಶಯಿತರು ಎಂದು ಕರೆದಿದ್ದ 9 ಜನರನ್ನು ಸೇರಿಸಿ 88 ಜನರನ್ನು ಎಸ್‌ಐಟಿ ಪ್ರಶ್ನಿಸಿತು. ದಾಂಧಲೆಯ ಆರೋಪ ಹೊತ್ತಿದ್ದ ಗಾಯಗೊಂಡ ಅಧ್ಯಾಪಕರು, ವಾರ್ಡನ್‌ಗಳು, ಸೆಕ್ಯುರಿಟಿ ಗಾರ್ಡ್ಸ್ ಮತ್ತು ವಿದ್ಯಾರ್ಥಿಗಳ ಹೇಳಿಕೆಯನ್ನೂ ಎಸ್‌ಐಟಿ ಪಡೆಯಿತು. ’ಪ್ರಶ್ನಿಸಿದ ನಂತರ ಇತರ ಸಂಶಯಿತರ ಮಾಹಿತಿಯೂ ದೊರಕಿತು. ಆದರೆ ಲಾಕ್‌ಡೌನ್ ಘೋಷಣೆಯಾದ ಪರಿಣಾಮ ತಂಡಕ್ಕೆ ಹೆಚ್ಚಿನ ಮಾಹಿತಿ ಪಡೆಯಲು ಆಗಲಿಲ್ಲ’ ಎಂದು ತಿಳಿಸಿವೆ.

ಇದನ್ನೂ ಓದಿ: ಜೆಎನ್‍ಯು, ಜಾಮಿಯಾ ಮತ್ತು ಬೀದರ್‌ ಪ್ರಕರಣ: ನಮ್ಮ ಪೊಲಿಸರು ಹಿಂಗ ಯಾಕ ಅದಾರ?

ಅವತ್ತಿನ ಹಿಂಸಾಚಾರದ ವಿಡಿಯೋದಲ್ಲಿ ’ಕಾಣಿಸಿಕೊಂಡಿದ್ದ’ ದೆಹಲಿ ವಿವಿಯ ಕೋಮಲ್ ಶರ್ಮಾಳನ್ನು ಎಸ್‌ಐಟಿ ವಿಚಾರಣೆ ಮಾಡಿತು ಎನ್ನಲಾಗಿದೆ. ಆದರೆ ಆಕೆ, ’ಕೆಲವರು ನನ್ನನ್ನು ಇದರಲ್ಲಿ ಸಿಕ್ಕಿಸಲು ಯತ್ನಿಸುತ್ತಿದ್ದಾರೆ. ಈ ದಾಂಧಲೆಯಲ್ಲಿ ನಾನು ಪಾಲ್ಗೊಂಡಿಲ್ಲ’ ಎಂಬ ಹೇಳಿಕೆ ನೀಡಿದ್ದಾಳೆ ಎಂದು ಪೊಲೀಸ್ ಮೂಲಗಳು ಹೇಳುತ್ತಿವೆ.

ದೆಹಲಿ ಪೊಲೀಸ್ ವಕ್ತಾರ ಏಯಿಷ್ ಸಿಂಘಾಲ್, ’ದಾಂಧಲೆಗೆ ಸಂಬಂಧಿಸಿ ಮೂರು ಎಫ್‌ಐಆರ್ ದಾಖಲಾಗಿವೆ, ಆದರೆ ತನಿಖೆ ಪೆಂಡಿಂಗ್‌ನಲ್ಲಿದೆ’ ಎಂದು ಹೇಳಿದ್ದಾರೆ.

ಜನೆವರಿ 5 ರ ದಾಂಧಲೆ ಕುರಿತು ನಿಷ್ಕ್ರಿಯತೆ ತೋರಿದ್ದಕ್ಕಾಗಿ ಮತ್ತು ಗಾಯಗೊಂಡ ಅಧ್ಯಾಪಕರು, ವಿದ್ಯಾರ್ಥಿಗಳನ್ನು ಸೌಜನ್ಯಕ್ಕೂ ಭೇಟಿಯಾಗದ ಕಾರಣಕ್ಕಾಗಿ ಟೀಕೆಗೆ ಗುರಿಯಾದ ವಿವಿಯ ಆಡಳಿತವು, ಘಟನೆಯ ತನಿಖೆಗೆ ಐವರು ಸದಸ್ಯರ ಸಮಿತಿಯನ್ನು ನೇಮಿಸಿತು. ಆದರೆ ದಾಂಧಲೆ ನಡೆದು ಒಂದು ವರ್ಷವಾದ ಈ ಸಂದರ್ಭದಲ್ಲಿ ವಿವಿಯ ರಿಜಿಸ್ಟ್ರಾರ್ ಪ್ರಮೋದ್‌ಕುಮಾರ್, ’ಪೊಲೀಸರ ತನಿಖೆ ಜಾರಿಯಲ್ಲಿರುವ ಕಾರಣ ಆಂತರಿಕ ತನಿಖೆಯನ್ನು ಸ್ಥಗಿತಗೊಳಿಸಲಾಗಿದೆ’ ಎಂದು ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ.
ದಾಂಧಲೆಯಲ್ಲಿ ಗಾಯಗೊಂಡ ಅಧ್ಯಾಪಕರು ಮತ್ತು ವಿದ್ಯಾರ್ಥಿಗಳು ವಿವಿ ಸಮಿತಿ ತಮ್ಮನ್ನು ಒಂದು ಸಲವೂ ಸಂಪರ್ಕಿಸಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ನಿಮಗೆ ಇದೇ ಸರಿಯಾದ ಚಿಕಿತ್ಸೆ : ಜೆಎನ್‌ಯು, ಜಾಮಿಯ ವಿದ್ಯಾರ್ಥಿಗಳಿಗೆ ಬೆದರಿಕೆ ಹಾಕಿದ ಕೇಂದ್ರ ಸಚಿವ..

’ಪೊಲೀಸರು ತನಿಖೆ ಮಾಡುತ್ತಿರುವ ಕಾರಣಕ್ಕೆ ಸಮಿತಿ ವರದಿ ಸಲ್ಲಿಸಿಲ್ಲ. ಇಲ್ಲಿ ಸಮಸ್ಯೆ ಏನಿದೆ? ದಾಂಧಲೆ ಆರಂಭಿಸಿದವರು ಯಾರು ಎಂಬುದಷ್ಟೇ ಅಲ್ಲವಾ? ನಾವು ಪೊಲೀಸರಿಗೆ ಎಲ್ಲ ರೀತಿಯ ನೆರವು ನೀಡಿದ್ದೇವೆ’ ಎನ್ನುತ್ತಾರೆ ರಿಜಿಸ್ಟ್ರಾರ್ ಪ್ರಮೋದ್ ಕುಮಾರ್.

ಕಬ್ಬಿಣದ ರಾಡ್‌ನಿಂದ ಹಲ್ಲೆಗೊಳಗಾಗಿ, ತಲೆಗೆ 16 ಹೊಲಿಗೆ ಹಾಕಿಸಿಕೊಂಡ ಜೆಎನ್‌ಯು ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಆಯೀಷಾ ಘೋಷ್, ’ಒಂದು ವರ್ಷದ ನಂತರ ಪ್ರಕರಣದಲ್ಲಿ ಒಂದಿಷ್ಟಾದರೂ ಬೆಳವಣಿಗೆ ಆಗಬೇಕಿತ್ತು. ನಮ್ಮ ಜೊತೆ ಇದ್ದೇವೆಂದು ಪೊಲೀಸರು ಹೇಳುತ್ತಾರಾದರೂ, ನಮ್ಮ ಹೇಳಿಕೆ ಪಡೆದ ನಂತರ ಮತ್ತೆಂದೂ ನಮ್ಮನ್ನು ಸಂಪರ್ಕಿಸಿಲ್ಲ, ಅವರು ಫಾಲೋ-ಅಪ್ ಮಾಡಲೇ ಇಲ್ಲ. ನಮ್ಮನ್ನೆಂದೂ ಸಂಪರ್ಕಿಸದ ಆಂತರಿಕ ತನಿಖಾ ಸಮಿತಿ ಬಗ್ಗೆ ನಮಗೆ ಭರವಸೆಯಿಲ್ಲ’ ಎಂದು ನಿರಾಶೆಯಿಂದ ಹೇಳಿದ್ದಾರೆ.

ಕಲ್ಲುಗಳ ಏಟಿನಿಂದಾದ ಗಾಯದಿಂದ ತಲೆಗೆ ನಾಲ್ಕು ಹೊಲಿಗೆ ಹಾಕಿಸಿಕೊಂಡ ಪ್ರೊ. ಸುಚಿತ್ರಾ ಸೇನ್, ’ಜನೆವರಿ 20 ರಂದು ವಿ.ಸಿಗೆ ಪತ್ರ ಬರೆದು ನಿಷ್ಪಕ್ಷಪಾತ ತನಿಖೆ ನಡೆಸಿ ಮತ್ತು ಜೆಎನ್‌ಯು ನೇಮಿಸಿಕೊಂಡಿರುವ ಸೆಕ್ಯುರಿಟಿ ಏಜೆನ್ಸಿ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಆಗ್ರಹಿಸಿದ್ದೆ. ಇವತ್ತಿಗೂ ಇದಕ್ಕೆ ಉತ್ತರ ಬಂದಿಲ್ಲ. ಪೊಲೀಸರು ಒಮ್ಮೆ ಮಾತ್ರ ನಮ್ಮನ್ನು ಸಂರ್ಕಿಸಿದ್ದರು’ ಎನ್ನುತ್ತಾರೆ.


ಇದನ್ನೂ ಓದಿ: ಜೆಎನ್‍ಯು ಘಟನೆ: ಸಂಪೂರ್ಣ ಹಿನ್ನೆಲೆ ಮತ್ತು ಉತ್ತರವಿಲ್ಲದ ಪ್ರಶ್ನೆಗಳು – ಪ್ರೊ. ಪುರುಷೋತ್ತಮ ಬಿಳಿಮಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...