HomeಮುಖಪುಟJNU ಹಿಂಸಾಚಾರಕ್ಕೆ ಒಂದು ವರ್ಷ: ಒಂದೂ ಅರೆಸ್ಟ್ ಇಲ್ಲ, ಚಾರ್ಜ್‌ಶೀಟ್ ಇಲ್ಲ, ಆಂತರಿಕ ತನಿಖೆ ಸ್ಥಗಿತ!

JNU ಹಿಂಸಾಚಾರಕ್ಕೆ ಒಂದು ವರ್ಷ: ಒಂದೂ ಅರೆಸ್ಟ್ ಇಲ್ಲ, ಚಾರ್ಜ್‌ಶೀಟ್ ಇಲ್ಲ, ಆಂತರಿಕ ತನಿಖೆ ಸ್ಥಗಿತ!

ಕಳೆದ ವರ್ಷ ಸುಮಾರು 100 ಮಾಸ್ಕ್‌ಧಾರಿಗಳ ತಂಡವೊಂದು ದೆಹಲಿಯ ಜವಾಹರಲಾಲ್ ನೆಹರು ವಿವಿಯಲ್ಲಿ (JNU) ಸಿಕ್ಕಾಪಟ್ಟೆ ದಾಂಧಲೆ ಮಾಡಿ, 36 ವಿದ್ಯಾರ್ಥಿಗಳು, ಅಧ್ಯಾಪಕರು ಮತ್ತು ಇತರ ಸಿಬ್ಬಂದಿಯನ್ನು ಭೀಕರವಾಗಿ ಗಾಯಗೊಳಿಸಿದ್ದರು.

- Advertisement -
- Advertisement -

ಪೊಲೀಸ್ ಮೂಲಗಳ ಪ್ರಕಾರ, ದೆಹಲಿ ಪೊಲೀಸ್ ಕ್ರೈಮ್ ಬ್ರ್ಯಾಂಚ್‌ನ ವಿಶೇಷ ತನಿಖಾ ದಳ 15 ಆರೋಪಿಗಳನ್ನು (ಎಲ್ಲರೂ ವಿದ್ಯಾರ್ಥಿಗಳೇ) ಗುರುತಿಸಿದೆ. ಆದರೆ ಲಾಕ್‌ಡೌನ್‌ನಿಂದಾಗಿ ವಿದ್ಯಾರ್ಥಿಗಳು ಮನೆಗೆ ಮರಳಿದ ನಂತರ ತನಿಖೆ ಸ್ಥಗಿತಗೊಂಡಿತು.
ಒಂದೂ ಬಂಧನವಿಲ್ಲ, ಚಾರ್ಜ್‌ಶಿಟೂ ಇಲ್ಲ, ವಿಶ್ವವಿದ್ಯಾಲಯದ ಆಂತರಿಕ ತನಿಖೆಯನ್ನು ನಿಲ್ಲಿಸಲಾಗಿದೆ ಕೂಡ! ಮುಖಗವಸು (ಮಾಸ್ಕ್) ಹಾಕಿಕೊಂಡು JNU ಕ್ಯಾಂಪಸ್‌ನಲ್ಲಿ ಪುಂಡರು ದಾಂಧಲೆ ಮಾಡಿ ಇಂದಿಗೆ ವರ್ಷವಾದರೂ ತನಿಖೆಯಲ್ಲಿ ಏನೇನೂ ಪ್ರಗತಿಯಾಗಿಲ್ಲ.

ಕಳೆದ ವರ್ಷ ಸುಮಾರು 100 ಜನರ ಮಾಸ್ಕ್‌ಧಾರಿಗಳ ತಂಡವೊಂದು ದೆಹಲಿಯ ಜವಾಹರಲಾಲ್ ನೆಹರು ವಿವಿಯಲ್ಲಿ (JNU) ಸಿಕ್ಕಾಪಟ್ಟೆ ದಾಂಧಲೆ ಮಾಡಿ, 36 ವಿದ್ಯಾರ್ಥಿಗಳು, ಅಧ್ಯಾಪಕರು ಮತ್ತು ಇತರ ಸಿಬ್ಬಂದಿಯನ್ನು ಭೀಕರವಾಗಿ ಗಾಯಗೊಳಿಸಿದ್ದರು. ಇದಾದ ನಾಲ್ಕು ದಿನಗಳ ನಂತರ ಜನೆವರಿ 9 ರಂದು ದೆಹಲಿ ಪೊಲೀಸರು ಒಂದು ಪತ್ರಿಕಾಗೋಷ್ಠಿ ನಡೆಸಿದ್ದರು. ಅಂದು 8 ಸಂಶಯಿತರನ್ನು (ಎಲ್ಲರೂ ವಿದ್ಯಾರ್ಥಿಗಳು) ಹೆಸರಿಸಿದ್ದ ಪೊಲೀಸರು ಅದರಲ್ಲಿ 7 ಜನ ಎಡಪಂಥೀಯ ಸಂಘಟನೆಗೆ ಸೇರಿದವರು ಎಂದು ಹೇಳಿದ್ದರು. ಇನ್ನಿಬ್ಬರು ಯಾವ ಸಂಘಟನೆ ಎಂದು ಹೇಳಿರಲಿಲ್ಲ. ಆದರೆ ಅವರಿಬ್ಬರು ಎಬಿವಿಪಿ ಸಂಘಟನೆಯವರಾಗಿದ್ದರು.

ಇದನ್ನೂ ಓದಿ: ಜೆಎನ್‌ಯು ಮರುನಾಮಕರಣವಾಗಲಿ ಎಂದ ಸಿ.ಟಿ. ರವಿಯನ್ನು ತರಾಟೆಗೆ ಪಡೆದ ನೆಟ್ಟಿಗರು!

ಉತ್ತರ ದೆಹಲಿಯ ವಸಂತ್‌ಕುಂಜ್‌ನಲ್ಲಿ ಮೂರು ಎಫ್‌ಐಆರ್ ದಾಖಲಿಸಲಾಗಿತ್ತು. ನಂತರ ಪ್ರಕರಣವನ್ನು ಕ್ರೈಮ್ ಬ್ರ್ಯಾಂಚ್‌ಗೆ ವರ್ಗಾಯಿಸಲಾಯಿತು. ಜೆಎನ್‌ಯು ಕ್ಯಾಂಪಸ್‌ನಲ್ಲೇ 20 ಪೊಲೀಸರ ಒಂದು ತನಿಖಾ ತಂಡವನ್ನು ಸ್ಥಾಪಿಸಲಾಯಿತು. ಫೆಬ್ರುವರಿಯಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಗಳ ತನಿಖೆಯನ್ನು ಮತ್ತು ಕೊವಿಡ್ ನಿಯಮ ಉಲ್ಲಂಘಿಸಿದ್ದಾರೆ ಎಂಬ ಆರೋಪ ಹೊತ್ತಿದ್ದ ನಿಜಾಮುದ್ದೀನ್ ಮರ್ಕಜ್‌ನ ಮೌಲಾನಾ ಸಾದ್ ತನಿಖೆಯನ್ನು ಇದೇ ತಂಡಕ್ಕೆ ವಹಿಸಲಾಗಿತು.

ಇಂಡಿಯನ್ ಎಕ್ಸ್‌ಪ್ರೆಸ್‌ಗೆ ಪೊಲೀಸ್ ಮೂಲಗಳು ಹೇಳಿದ ಪ್ರಕಾರ, ಪತ್ರಿಕಾಗೋಷ್ಠಿಯಲ್ಲಿ ಸಂಶಯಿತರು ಎಂದು ಕರೆದಿದ್ದ 9 ಜನರನ್ನು ಸೇರಿಸಿ 88 ಜನರನ್ನು ಎಸ್‌ಐಟಿ ಪ್ರಶ್ನಿಸಿತು. ದಾಂಧಲೆಯ ಆರೋಪ ಹೊತ್ತಿದ್ದ ಗಾಯಗೊಂಡ ಅಧ್ಯಾಪಕರು, ವಾರ್ಡನ್‌ಗಳು, ಸೆಕ್ಯುರಿಟಿ ಗಾರ್ಡ್ಸ್ ಮತ್ತು ವಿದ್ಯಾರ್ಥಿಗಳ ಹೇಳಿಕೆಯನ್ನೂ ಎಸ್‌ಐಟಿ ಪಡೆಯಿತು. ’ಪ್ರಶ್ನಿಸಿದ ನಂತರ ಇತರ ಸಂಶಯಿತರ ಮಾಹಿತಿಯೂ ದೊರಕಿತು. ಆದರೆ ಲಾಕ್‌ಡೌನ್ ಘೋಷಣೆಯಾದ ಪರಿಣಾಮ ತಂಡಕ್ಕೆ ಹೆಚ್ಚಿನ ಮಾಹಿತಿ ಪಡೆಯಲು ಆಗಲಿಲ್ಲ’ ಎಂದು ತಿಳಿಸಿವೆ.

ಇದನ್ನೂ ಓದಿ: ಜೆಎನ್‍ಯು, ಜಾಮಿಯಾ ಮತ್ತು ಬೀದರ್‌ ಪ್ರಕರಣ: ನಮ್ಮ ಪೊಲಿಸರು ಹಿಂಗ ಯಾಕ ಅದಾರ?

ಅವತ್ತಿನ ಹಿಂಸಾಚಾರದ ವಿಡಿಯೋದಲ್ಲಿ ’ಕಾಣಿಸಿಕೊಂಡಿದ್ದ’ ದೆಹಲಿ ವಿವಿಯ ಕೋಮಲ್ ಶರ್ಮಾಳನ್ನು ಎಸ್‌ಐಟಿ ವಿಚಾರಣೆ ಮಾಡಿತು ಎನ್ನಲಾಗಿದೆ. ಆದರೆ ಆಕೆ, ’ಕೆಲವರು ನನ್ನನ್ನು ಇದರಲ್ಲಿ ಸಿಕ್ಕಿಸಲು ಯತ್ನಿಸುತ್ತಿದ್ದಾರೆ. ಈ ದಾಂಧಲೆಯಲ್ಲಿ ನಾನು ಪಾಲ್ಗೊಂಡಿಲ್ಲ’ ಎಂಬ ಹೇಳಿಕೆ ನೀಡಿದ್ದಾಳೆ ಎಂದು ಪೊಲೀಸ್ ಮೂಲಗಳು ಹೇಳುತ್ತಿವೆ.

ದೆಹಲಿ ಪೊಲೀಸ್ ವಕ್ತಾರ ಏಯಿಷ್ ಸಿಂಘಾಲ್, ’ದಾಂಧಲೆಗೆ ಸಂಬಂಧಿಸಿ ಮೂರು ಎಫ್‌ಐಆರ್ ದಾಖಲಾಗಿವೆ, ಆದರೆ ತನಿಖೆ ಪೆಂಡಿಂಗ್‌ನಲ್ಲಿದೆ’ ಎಂದು ಹೇಳಿದ್ದಾರೆ.

ಜನೆವರಿ 5 ರ ದಾಂಧಲೆ ಕುರಿತು ನಿಷ್ಕ್ರಿಯತೆ ತೋರಿದ್ದಕ್ಕಾಗಿ ಮತ್ತು ಗಾಯಗೊಂಡ ಅಧ್ಯಾಪಕರು, ವಿದ್ಯಾರ್ಥಿಗಳನ್ನು ಸೌಜನ್ಯಕ್ಕೂ ಭೇಟಿಯಾಗದ ಕಾರಣಕ್ಕಾಗಿ ಟೀಕೆಗೆ ಗುರಿಯಾದ ವಿವಿಯ ಆಡಳಿತವು, ಘಟನೆಯ ತನಿಖೆಗೆ ಐವರು ಸದಸ್ಯರ ಸಮಿತಿಯನ್ನು ನೇಮಿಸಿತು. ಆದರೆ ದಾಂಧಲೆ ನಡೆದು ಒಂದು ವರ್ಷವಾದ ಈ ಸಂದರ್ಭದಲ್ಲಿ ವಿವಿಯ ರಿಜಿಸ್ಟ್ರಾರ್ ಪ್ರಮೋದ್‌ಕುಮಾರ್, ’ಪೊಲೀಸರ ತನಿಖೆ ಜಾರಿಯಲ್ಲಿರುವ ಕಾರಣ ಆಂತರಿಕ ತನಿಖೆಯನ್ನು ಸ್ಥಗಿತಗೊಳಿಸಲಾಗಿದೆ’ ಎಂದು ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ.
ದಾಂಧಲೆಯಲ್ಲಿ ಗಾಯಗೊಂಡ ಅಧ್ಯಾಪಕರು ಮತ್ತು ವಿದ್ಯಾರ್ಥಿಗಳು ವಿವಿ ಸಮಿತಿ ತಮ್ಮನ್ನು ಒಂದು ಸಲವೂ ಸಂಪರ್ಕಿಸಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ನಿಮಗೆ ಇದೇ ಸರಿಯಾದ ಚಿಕಿತ್ಸೆ : ಜೆಎನ್‌ಯು, ಜಾಮಿಯ ವಿದ್ಯಾರ್ಥಿಗಳಿಗೆ ಬೆದರಿಕೆ ಹಾಕಿದ ಕೇಂದ್ರ ಸಚಿವ..

’ಪೊಲೀಸರು ತನಿಖೆ ಮಾಡುತ್ತಿರುವ ಕಾರಣಕ್ಕೆ ಸಮಿತಿ ವರದಿ ಸಲ್ಲಿಸಿಲ್ಲ. ಇಲ್ಲಿ ಸಮಸ್ಯೆ ಏನಿದೆ? ದಾಂಧಲೆ ಆರಂಭಿಸಿದವರು ಯಾರು ಎಂಬುದಷ್ಟೇ ಅಲ್ಲವಾ? ನಾವು ಪೊಲೀಸರಿಗೆ ಎಲ್ಲ ರೀತಿಯ ನೆರವು ನೀಡಿದ್ದೇವೆ’ ಎನ್ನುತ್ತಾರೆ ರಿಜಿಸ್ಟ್ರಾರ್ ಪ್ರಮೋದ್ ಕುಮಾರ್.

ಕಬ್ಬಿಣದ ರಾಡ್‌ನಿಂದ ಹಲ್ಲೆಗೊಳಗಾಗಿ, ತಲೆಗೆ 16 ಹೊಲಿಗೆ ಹಾಕಿಸಿಕೊಂಡ ಜೆಎನ್‌ಯು ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಆಯೀಷಾ ಘೋಷ್, ’ಒಂದು ವರ್ಷದ ನಂತರ ಪ್ರಕರಣದಲ್ಲಿ ಒಂದಿಷ್ಟಾದರೂ ಬೆಳವಣಿಗೆ ಆಗಬೇಕಿತ್ತು. ನಮ್ಮ ಜೊತೆ ಇದ್ದೇವೆಂದು ಪೊಲೀಸರು ಹೇಳುತ್ತಾರಾದರೂ, ನಮ್ಮ ಹೇಳಿಕೆ ಪಡೆದ ನಂತರ ಮತ್ತೆಂದೂ ನಮ್ಮನ್ನು ಸಂಪರ್ಕಿಸಿಲ್ಲ, ಅವರು ಫಾಲೋ-ಅಪ್ ಮಾಡಲೇ ಇಲ್ಲ. ನಮ್ಮನ್ನೆಂದೂ ಸಂಪರ್ಕಿಸದ ಆಂತರಿಕ ತನಿಖಾ ಸಮಿತಿ ಬಗ್ಗೆ ನಮಗೆ ಭರವಸೆಯಿಲ್ಲ’ ಎಂದು ನಿರಾಶೆಯಿಂದ ಹೇಳಿದ್ದಾರೆ.

ಕಲ್ಲುಗಳ ಏಟಿನಿಂದಾದ ಗಾಯದಿಂದ ತಲೆಗೆ ನಾಲ್ಕು ಹೊಲಿಗೆ ಹಾಕಿಸಿಕೊಂಡ ಪ್ರೊ. ಸುಚಿತ್ರಾ ಸೇನ್, ’ಜನೆವರಿ 20 ರಂದು ವಿ.ಸಿಗೆ ಪತ್ರ ಬರೆದು ನಿಷ್ಪಕ್ಷಪಾತ ತನಿಖೆ ನಡೆಸಿ ಮತ್ತು ಜೆಎನ್‌ಯು ನೇಮಿಸಿಕೊಂಡಿರುವ ಸೆಕ್ಯುರಿಟಿ ಏಜೆನ್ಸಿ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಆಗ್ರಹಿಸಿದ್ದೆ. ಇವತ್ತಿಗೂ ಇದಕ್ಕೆ ಉತ್ತರ ಬಂದಿಲ್ಲ. ಪೊಲೀಸರು ಒಮ್ಮೆ ಮಾತ್ರ ನಮ್ಮನ್ನು ಸಂರ್ಕಿಸಿದ್ದರು’ ಎನ್ನುತ್ತಾರೆ.


ಇದನ್ನೂ ಓದಿ: ಜೆಎನ್‍ಯು ಘಟನೆ: ಸಂಪೂರ್ಣ ಹಿನ್ನೆಲೆ ಮತ್ತು ಉತ್ತರವಿಲ್ಲದ ಪ್ರಶ್ನೆಗಳು – ಪ್ರೊ. ಪುರುಷೋತ್ತಮ ಬಿಳಿಮಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಸರ್ವೆಗೆ ರೈತರ ತೀವ್ರ ವಿರೋಧ: ಅಧಿಕಾರಿಗಳಿಗೆ ಪೊರಕೆ ಏಟು, ಕಾರುಗಳು ಜಖಂ

ರಾಮನಗರ: ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಯನ್ನು ವಿರೋಧಿಸಿ ಸ್ಥಳೀಯ ರೈತರು ನಡೆಸುತ್ತಿರುವ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಸೋಮವಾರ (ಜುಲೈ 13) ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಮಂಡಲಹಳ್ಳಿ...

ಮನೆಕೆಲಸದಾಕೆ ಮೇಲಿನ ದೌರ್ಜನ್ಯ ಆರೋಪ ಪ್ರಕರಣ : ಜೆಡಿಎಸ್ ಶಾಸಕ ಹೆಚ್​​​.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್​ ನೋಟಿಸ್​

ಮಹಿಳೆಯ ಘನತೆಗೆ ಧಕ್ಕೆ ಹಾಗೂ ಲೈಂಗಿಕ ಕಿರುಕುಳ ಆರೋಪಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್‌ ಸೋಮವಾರ (ಜು.13) ಜೆಡಿಎಸ್‌...

ದಲಿತ ಯುವಕರಿಗೆ ವಿದ್ಯುತ್ ಶಾಕ್‌ ಶಿಕ್ಷೆ: ಕಳ್ಳತನ ಆರೋಪದ ಮೇಲೆ ಇಬ್ಬರಿಗೆ ಚಿತ್ರಹಿಂಸೆ

ದಲಿತ ಯುವಕರ ಮೇಲೆ ಮಧ್ಯಪ್ರದೇಶದಲ್ಲಿ ನಡೆದಿರುವ ಅಮಾನವೀಯ ಕೃತ್ಯವೊಂದರ ವಿಡಿಯೋ ಇದೀಗ ನಾಗರಿಕ ಸಮಾಜವನ್ನೇ ಆಘಾತಕ್ಕೀಡು ಮಾಡಿದೆ. ನೀರಿನ ಪಂಪ್ ಮೋಟಾರ್ ಕದ್ದಿದ್ದಾರೆ ಎಂಬ ಶಂಕೆಯ ಮೇಲೆ ಇಬ್ಬರು ದಲಿತ ಯುವಕರನ್ನು ಕಂಬಕ್ಕೆ...

ರಾಮಮಂದಿರ ಹಗರಣ: ಕೇಂದ್ರ ಸರ್ಕಾರ, ಟ್ರಸ್ಟ್, ಉತ್ತರ ಪ್ರದೇಶ ಸರ್ಕಾರಕ್ಕೆ ‘ಸುಪ್ರೀಂ’ ನೋಟಿಸ್ 

ನವದೆಹಲಿ: ವಿಶ್ವಪ್ರಸಿದ್ಧ ಅಯೋಧ್ಯೆಯ ಶ್ರೀ ರಾಮಮಂದಿರಕ್ಕೆ ಸಾರ್ವಜನಿಕ ಭಕ್ತಾದಿಗಳಿಂದ ಹರಿದುಬಂದಿರುವ ಕೋಟ್ಯಂತರ ರೂಪಾಯಿ ದೇಣಿಗೆ ನಿಧಿಯ ಕಳ್ಳತನ, ದುರುಪಯೋಗ ಮತ್ತು ಆಡಳಿತಾತ್ಮಕ ಅಕ್ರಮಗಳ ಆರೋಪ ಇದೀಗ ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಈ...

ಜಮ್ಮು-ಕಾಶ್ಮೀರ: ಪ್ರತ್ಯೇಕತಾವಾದಿಗಳು, ಉಗ್ರಗಾಮಿಗಳನ್ನು ವೈಭವೀಕರಿಸಿದ ಆರೋಪ: ಮೂವರು ಪ್ರಕಾಶಕರ ಬಂಧನ

ಜಮ್ಮು/ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ಹಾಗೂ ಭಯೋತ್ಪಾದಕ ನಾಯಕರನ್ನು ವೈಭವೀಕರಿಸುವ ಪುಸ್ತಕಗಳನ್ನು ಪ್ರಕಟಿಸಿ, ವಿತರಿಸಿದ ಗಂಭೀರ ಆರೋಪದ ಮೇಲೆ ಪ್ರತಿ-ಗುಪ್ತಚರ ವಿಭಾಗದ (ಸಿಐಜೆಕೆ) ಪೊಲೀಸರು ಭಾನುವಾರ ಇಬ್ಬರು ಪ್ರಮುಖ ಪ್ರಕಾಶನ ಸಂಸ್ಥೆಗಳಿಗೆ...

ಕರ್ನಾಟಕ ಎಸ್‍ಐಆರ್: ಮತದಾರರ ಸೌಲಭ್ಯ ಕೇಂದ್ರಗಳ ಕೊರತೆ, ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ಅಡ್ಡಿ: ವರದಿ

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಆರಂಭವಾಗಿ ಸುಮಾರು ಎರಡು ವಾರಗಳು ಕಳೆಯುತ್ತಾ ಬಂದಿದ್ದರೂ, ಚುನಾವಣಾ ಆಯೋಗವು ಸಾರ್ವಜನಿಕರ ಅನುಕೂಲಕ್ಕಾಗಿ ರಾಜ್ಯಾದ್ಯಂತ ಅಗತ್ಯವಿರುವಷ್ಟು ಮತದಾರರ ಸೌಲಭ್ಯ ಕೇಂದ್ರಗಳನ್ನು...

27 ಮಂದಿಯನ್ನು ‘ವಿದೇಶಿಯರು’ ಎಂದಿದ್ದ ಅಸ್ಸಾಂ ನ್ಯಾಯಮಂಡಳಿಗಳ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಒಬ್ಬ ವ್ಯಕ್ತಿಯ ಪೌರತ್ವ ಮತ್ತು ವಿದೇಶಿಯರ ಸ್ಥಾನಮಾನವನ್ನು ನಿರ್ಧರಿಸುವಾಗ ಕೇವಲ ಯಾಂತ್ರಿಕವಾಗಿ ತೀರ್ಪು ನೀಡಲಾಗದು, ಬದಲಿಗೆ ಅತ್ಯಂತ ನ್ಯಾಯಯುತ, ಕಾನೂನುಬದ್ಧ ಹಾಗೂ ಸಮಂಜಸವಾದ ಪ್ರಕ್ರಿಯೆಯನ್ನು ಕಡ್ಡಾಯವಾಗಿ ಪಾಲಿಸಲೇಬೇಕು ಎಂದು ಸುಪ್ರೀಂ ಕೋರ್ಟ್ ಸೋಮವಾರ...

ಶಿಕ್ಷಕ ‘ಖಾನ್ ಸರ್‌’ಗೆ ಪಟ್ನಾ ಕೋರ್ಟ್‌ನಲ್ಲಿ ಜಯ: ಕೋಚಿಂಗ್ ಸೆಂಟರ್ ದಾಳಿ ಪ್ರಕರಣದಲ್ಲಿ ಮುಂಗಡ ಜಾಮೀನು ಮಂಜೂರು

ಬಿಹಾರದ ಖ್ಯಾತ ಶಿಕ್ಷಕ ಫೈಸಲ್ ಖಾನ್ (ಜನಪ್ರಿಯವಾಗಿ ಖಾನ್ ಸರ್ ಎಂದು ಕರೆಯಲ್ಪಡುವ) ಅವರಿಗೆ ಪಟ್ನಾ ನ್ಯಾಯಾಲಯವು ಸೋಮವಾರ ಮುಂಗಡ ಜಾಮೀನು ಮಂಜೂರು ಮಾಡಿದೆ. ಈ ತಿಂಗಳ ಆರಂಭದಲ್ಲಿ ಅವರ ಕೋಚಿಂಗ್ ಇನ್ಸ್ಟಿಟ್ಯೂಟ್...

ಗುಜರಾತ್‌| ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಚಾಲಕನನ್ನು ಬೆದರಿಸಿದ ನಕಲಿ ಗೋರಕ್ಷಕರು

ಗುಜರಾತ್‌ನ ವಲ್ಸಾದ್ ಜಿಲ್ಲೆಯಲ್ಲಿ ಸ್ವಘೋಷಿತ ಗೋರಕ್ಷಕರ ಗುಂಪೊಂದು ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಅನ್ನು ಸುಮಾರು 100 ಕಿಲೋಮೀಟರ್‌ಗಳವರೆಗೆ ಬೆನ್ನಟ್ಟಿ, ವಾಹನವನ್ನು ತಡೆದು ಗುಂಪು ಮುಸ್ಲಿಂ ಚಾಲಕನನ್ನು ನಿಂದಿಸಿ ಬೆದರಿಸಿದ್ದಾರೆ. 'ಕ್ಲಾರಿಯನ್ ಇಂಡಿಯಾ' ವರದಿ ಪ್ರಕಾರ,...

ವಿಜಯ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಜಯ: ತಮಿಳುನಾಡು ಗೋಹತ್ಯೆ ನಿಷೇಧದ ಹೈಕೋರ್ಟ್ ಆದೇಶಕ್ಕೆ ತಡೆ

ತಮಿಳುನಾಡಿನಲ್ಲಿ ಹಸು ಮತ್ತು ಕರುಗಳ ಹತ್ಯೆಯನ್ನು ರಾಜ್ಯಾದ್ಯಂತ ಸಂಪೂರ್ಣವಾಗಿ ನಿಷೇಧಿಸಿ ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ. ಮುಖ್ಯಮಂತ್ರಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK)...