Homeಮುಖಪುಟಬಂಧಿತ ಕಾರ್ಯಕರ್ತ ರೋಣಾ ವಿಲ್ಸನ್ ಮೇಲೆ ಒಂದು ವರ್ಷ ಪೆಗಾಸಸ್ ಗೂಢಚರ್ಯೆ: ಹೊಸ ವರದಿ

ಬಂಧಿತ ಕಾರ್ಯಕರ್ತ ರೋಣಾ ವಿಲ್ಸನ್ ಮೇಲೆ ಒಂದು ವರ್ಷ ಪೆಗಾಸಸ್ ಗೂಢಚರ್ಯೆ: ಹೊಸ ವರದಿ

- Advertisement -
- Advertisement -

2018ರ ಜೂನ್ 6 ರಂದು ಭೀಮಾ-ಕೋರೆಗಾಂವ್‌ ಪ್ರಕರಣದಲ್ಲಿ ಬಂಧಿತರಾಗಿರುವ ಸಾಮಾಜಿಕ ಕಾರ್ಯಕರ್ತ ರೋಣಾ ವಿಲ್ಸನ್‌ರವರ ಕಂಪ್ಯೂಟರ್‌ನಲ್ಲಿ ಅವರ ಬಂಧನಕ್ಕೂ ಒಂದು ವರ್ಷದ ಮೊದಲೇ ಹ್ಯಾಕರ್ “ದೋಷಾರೋಪಣೆ” ಫೈಲ್‌ಗಳನ್ನು ಸೇರಿಸಲಾಗಿತ್ತು ಮತ್ತು ಅವರ ಮೊಬೈಲ್ ಮೇಲೆ ಪೆಗಾಸಸ್ ಗೂಢಚರ್ಯೆ ನಡೆಸಲಾಗಿತ್ತು ಎಂದು ಯುಎಸ್ ಮೂಲದ ಡಿಜಿಟಲ್ ಫೊರೆನ್ಸಿಕ್ಸ್ ಕಂಪನಿಯ ಹೊಸ ವರದಿಯು ತಿಳಿಸಿದೆ.

ಈ ಸಾಕ್ಷ್ಯಗಳನ್ನೇ ಬಳಸಿಕೊಂಡು ರೋಣಾ ವಿಲ್ಸನ್ ಮತ್ತು ವಕೀಲರು, ಶಿಕ್ಷಣ ತಜ್ಞರು ಮತ್ತು ಕಲಾವಿದರು ಸೇರಿದಂತೆ ಇತರ 15 ಜನರನ್ನು ಮೂರು ವರ್ಷಗಳಿಂದ ಜಾಮೀನು ಇಲ್ಲದೆ ಬಂಧಿಸಿ ಜೈಲಿಗೆ ಹಾಕಲಾಗಿದೆ.

ಮ್ಯಾಸಚೂಸೆಟ್ಸ್ ಮೂಲದ ಡಿಜಿಟಲ್ ಫೋರೆನ್ಸಿಕ್ಸ್ ಸಂಸ್ಥೆ ಆರ್ಸೆನಲ್ ಕನ್ಸಲ್ಟಿಂಗ್‌ ಅಂತಿಮ ವರದಿಯಲ್ಲಿ ವಿಲ್ಸನ್‌ರವರ ಆಪಲ್ ಫೋನ್ ಅನ್ನು ಇಸ್ರೇಲ್ ಮೂಲದ ಎನ್‌ಎಸ್‌ಒ ಗ್ರೂಪ್ ಮಾತ್ರವಲ್ಲದೇ ಹಲವು ಕಂಪನಿಗಳು ಗೂಢಾಚರ್ಯೆ ನಡೆಸಿದ್ದವು ಎಂದು ತಿಳಿಸಿದೆ. ಪೆಗಾಸಸ್ ಅನ್ನು ಆಯ್ಕೆಯಾದ ಸರ್ಕಾರಗಳಿಗೆ ಮಾತ್ರ ಮಾರಲಾಗುತ್ತದೆ ಎನ್ನುವುದನ್ನು ಈ ಸಂದರ್ಭದಲ್ಲಿ ನಾನು ಗಮನಿಸಬಹುದಾಗಿದೆ.

ಭೀಮಾ ಕೊರೆಗಾವ್ ಪ್ರಕರಣದಲ್ಲಿ ವಿಲ್ಸನ್ ಮೊದಲ ಟಾರ್ಗೆಟ್ ಆಗಿದ್ದರು. 2017ರ ಮಧ್ಯಭಾಗದಿಂದಲೇ ರೋಣಾ ವಿಲ್ಸನ್‌ರವರ ಮೇಲೆ ಪೆಗಾಸಸ್ ಗೂಢಾಚರ್ಯೆ ನಡೆಸಲಾಗಿದೆ. ಜೊತೆಗೆ ಅವರ ಲ್ಯಾಪ್‌ ಟಾಪ್ ಹ್ಯಾಕ್ ಮಾಡಿ ಸುಳ್ಳು ಸಾಕ್ಷಿಗಳನ್ನು ತುರುಕಲಾಗಿದೆ. ಈ ಫೈಲ್‌ಗಳನ್ನು 15 ನವೆಂಬರ್ 2018 ರಿಂದ, ಆರಂಭದಲ್ಲಿ ಪುಣೆ ಪೊಲೀಸರು ಮತ್ತು ನಂತರ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಪ್ರಮುಖ ಸಾಕ್ಷಿಯಾಗಿ ಉಲ್ಲೇಖಿಸಲಾಗಿದೆ. ಆದರೆ ಅವರ ಮೊಬೈಲ್ ಮತ್ತು ಲ್ಯಾಪ್ ಟಾಪ್ ಎನ್‌ಐಎ ಪೊಲೀಸರ ವಶದಲ್ಲಿರುವುದರಿಂದ ಫೋರೆನ್ಸಿಕ್ಸ್ ತನಿಖೆ ನಡೆಸಲಾಗುತ್ತಿಲ್ಲ.

ಜುಲೈ 5, 2017 ರಿಂದ ಏಪ್ರಿಲ್ 10, 2018ರವರೆಗೆ ಪೆಗಾಸಸ್ ಬಳಸಿ ಐಫೋನ್ 6S ನಿಂದ ಎರಡು ಐಟ್ಯೂನ್ಸ್ ಬ್ಯಾಕಪ್‌ಗಳಲ್ಲಿ ವಿಲ್ಸನ್ ಕಂಪ್ಯೂಟರ್‌ನ ವಿಂಡೋಸ್ ವಾಲ್ಯೂಮ್‌ನಲ್ಲಿ ದೋಷಾರೋಪಣೆಗಳನ್ನು ಸೇರಿಸಲಾಗಿದೆ ಎಂದು ಆರ್ಸೆನಲ್ ಕನ್ಸಲ್ಟಿಂಗ್‌ ಹೇಳಿದೆ.


ಇದನ್ನೂ ಓದಿ: ಅಜೀವಪರ್ಯಂತ ಮಾನವಹಕ್ಕುಗಳ ಹೋರಾಟಗಾರ ರೋಣ ವಿಲ್ಸನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...