Homeಮುಖಪುಟಬಂಧಿತ ಕಾರ್ಯಕರ್ತ ರೋಣಾ ವಿಲ್ಸನ್ ಮೇಲೆ ಒಂದು ವರ್ಷ ಪೆಗಾಸಸ್ ಗೂಢಚರ್ಯೆ: ಹೊಸ ವರದಿ

ಬಂಧಿತ ಕಾರ್ಯಕರ್ತ ರೋಣಾ ವಿಲ್ಸನ್ ಮೇಲೆ ಒಂದು ವರ್ಷ ಪೆಗಾಸಸ್ ಗೂಢಚರ್ಯೆ: ಹೊಸ ವರದಿ

- Advertisement -
- Advertisement -

2018ರ ಜೂನ್ 6 ರಂದು ಭೀಮಾ-ಕೋರೆಗಾಂವ್‌ ಪ್ರಕರಣದಲ್ಲಿ ಬಂಧಿತರಾಗಿರುವ ಸಾಮಾಜಿಕ ಕಾರ್ಯಕರ್ತ ರೋಣಾ ವಿಲ್ಸನ್‌ರವರ ಕಂಪ್ಯೂಟರ್‌ನಲ್ಲಿ ಅವರ ಬಂಧನಕ್ಕೂ ಒಂದು ವರ್ಷದ ಮೊದಲೇ ಹ್ಯಾಕರ್ “ದೋಷಾರೋಪಣೆ” ಫೈಲ್‌ಗಳನ್ನು ಸೇರಿಸಲಾಗಿತ್ತು ಮತ್ತು ಅವರ ಮೊಬೈಲ್ ಮೇಲೆ ಪೆಗಾಸಸ್ ಗೂಢಚರ್ಯೆ ನಡೆಸಲಾಗಿತ್ತು ಎಂದು ಯುಎಸ್ ಮೂಲದ ಡಿಜಿಟಲ್ ಫೊರೆನ್ಸಿಕ್ಸ್ ಕಂಪನಿಯ ಹೊಸ ವರದಿಯು ತಿಳಿಸಿದೆ.

ಈ ಸಾಕ್ಷ್ಯಗಳನ್ನೇ ಬಳಸಿಕೊಂಡು ರೋಣಾ ವಿಲ್ಸನ್ ಮತ್ತು ವಕೀಲರು, ಶಿಕ್ಷಣ ತಜ್ಞರು ಮತ್ತು ಕಲಾವಿದರು ಸೇರಿದಂತೆ ಇತರ 15 ಜನರನ್ನು ಮೂರು ವರ್ಷಗಳಿಂದ ಜಾಮೀನು ಇಲ್ಲದೆ ಬಂಧಿಸಿ ಜೈಲಿಗೆ ಹಾಕಲಾಗಿದೆ.

ಮ್ಯಾಸಚೂಸೆಟ್ಸ್ ಮೂಲದ ಡಿಜಿಟಲ್ ಫೋರೆನ್ಸಿಕ್ಸ್ ಸಂಸ್ಥೆ ಆರ್ಸೆನಲ್ ಕನ್ಸಲ್ಟಿಂಗ್‌ ಅಂತಿಮ ವರದಿಯಲ್ಲಿ ವಿಲ್ಸನ್‌ರವರ ಆಪಲ್ ಫೋನ್ ಅನ್ನು ಇಸ್ರೇಲ್ ಮೂಲದ ಎನ್‌ಎಸ್‌ಒ ಗ್ರೂಪ್ ಮಾತ್ರವಲ್ಲದೇ ಹಲವು ಕಂಪನಿಗಳು ಗೂಢಾಚರ್ಯೆ ನಡೆಸಿದ್ದವು ಎಂದು ತಿಳಿಸಿದೆ. ಪೆಗಾಸಸ್ ಅನ್ನು ಆಯ್ಕೆಯಾದ ಸರ್ಕಾರಗಳಿಗೆ ಮಾತ್ರ ಮಾರಲಾಗುತ್ತದೆ ಎನ್ನುವುದನ್ನು ಈ ಸಂದರ್ಭದಲ್ಲಿ ನಾನು ಗಮನಿಸಬಹುದಾಗಿದೆ.

ಭೀಮಾ ಕೊರೆಗಾವ್ ಪ್ರಕರಣದಲ್ಲಿ ವಿಲ್ಸನ್ ಮೊದಲ ಟಾರ್ಗೆಟ್ ಆಗಿದ್ದರು. 2017ರ ಮಧ್ಯಭಾಗದಿಂದಲೇ ರೋಣಾ ವಿಲ್ಸನ್‌ರವರ ಮೇಲೆ ಪೆಗಾಸಸ್ ಗೂಢಾಚರ್ಯೆ ನಡೆಸಲಾಗಿದೆ. ಜೊತೆಗೆ ಅವರ ಲ್ಯಾಪ್‌ ಟಾಪ್ ಹ್ಯಾಕ್ ಮಾಡಿ ಸುಳ್ಳು ಸಾಕ್ಷಿಗಳನ್ನು ತುರುಕಲಾಗಿದೆ. ಈ ಫೈಲ್‌ಗಳನ್ನು 15 ನವೆಂಬರ್ 2018 ರಿಂದ, ಆರಂಭದಲ್ಲಿ ಪುಣೆ ಪೊಲೀಸರು ಮತ್ತು ನಂತರ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಪ್ರಮುಖ ಸಾಕ್ಷಿಯಾಗಿ ಉಲ್ಲೇಖಿಸಲಾಗಿದೆ. ಆದರೆ ಅವರ ಮೊಬೈಲ್ ಮತ್ತು ಲ್ಯಾಪ್ ಟಾಪ್ ಎನ್‌ಐಎ ಪೊಲೀಸರ ವಶದಲ್ಲಿರುವುದರಿಂದ ಫೋರೆನ್ಸಿಕ್ಸ್ ತನಿಖೆ ನಡೆಸಲಾಗುತ್ತಿಲ್ಲ.

ಜುಲೈ 5, 2017 ರಿಂದ ಏಪ್ರಿಲ್ 10, 2018ರವರೆಗೆ ಪೆಗಾಸಸ್ ಬಳಸಿ ಐಫೋನ್ 6S ನಿಂದ ಎರಡು ಐಟ್ಯೂನ್ಸ್ ಬ್ಯಾಕಪ್‌ಗಳಲ್ಲಿ ವಿಲ್ಸನ್ ಕಂಪ್ಯೂಟರ್‌ನ ವಿಂಡೋಸ್ ವಾಲ್ಯೂಮ್‌ನಲ್ಲಿ ದೋಷಾರೋಪಣೆಗಳನ್ನು ಸೇರಿಸಲಾಗಿದೆ ಎಂದು ಆರ್ಸೆನಲ್ ಕನ್ಸಲ್ಟಿಂಗ್‌ ಹೇಳಿದೆ.


ಇದನ್ನೂ ಓದಿ: ಅಜೀವಪರ್ಯಂತ ಮಾನವಹಕ್ಕುಗಳ ಹೋರಾಟಗಾರ ರೋಣ ವಿಲ್ಸನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...