Homeಮುಖಪುಟಬಂಧಿತ ಕಾರ್ಯಕರ್ತ ರೋಣಾ ವಿಲ್ಸನ್ ಮೇಲೆ ಒಂದು ವರ್ಷ ಪೆಗಾಸಸ್ ಗೂಢಚರ್ಯೆ: ಹೊಸ ವರದಿ

ಬಂಧಿತ ಕಾರ್ಯಕರ್ತ ರೋಣಾ ವಿಲ್ಸನ್ ಮೇಲೆ ಒಂದು ವರ್ಷ ಪೆಗಾಸಸ್ ಗೂಢಚರ್ಯೆ: ಹೊಸ ವರದಿ

- Advertisement -
- Advertisement -

2018ರ ಜೂನ್ 6 ರಂದು ಭೀಮಾ-ಕೋರೆಗಾಂವ್‌ ಪ್ರಕರಣದಲ್ಲಿ ಬಂಧಿತರಾಗಿರುವ ಸಾಮಾಜಿಕ ಕಾರ್ಯಕರ್ತ ರೋಣಾ ವಿಲ್ಸನ್‌ರವರ ಕಂಪ್ಯೂಟರ್‌ನಲ್ಲಿ ಅವರ ಬಂಧನಕ್ಕೂ ಒಂದು ವರ್ಷದ ಮೊದಲೇ ಹ್ಯಾಕರ್ “ದೋಷಾರೋಪಣೆ” ಫೈಲ್‌ಗಳನ್ನು ಸೇರಿಸಲಾಗಿತ್ತು ಮತ್ತು ಅವರ ಮೊಬೈಲ್ ಮೇಲೆ ಪೆಗಾಸಸ್ ಗೂಢಚರ್ಯೆ ನಡೆಸಲಾಗಿತ್ತು ಎಂದು ಯುಎಸ್ ಮೂಲದ ಡಿಜಿಟಲ್ ಫೊರೆನ್ಸಿಕ್ಸ್ ಕಂಪನಿಯ ಹೊಸ ವರದಿಯು ತಿಳಿಸಿದೆ.

ಈ ಸಾಕ್ಷ್ಯಗಳನ್ನೇ ಬಳಸಿಕೊಂಡು ರೋಣಾ ವಿಲ್ಸನ್ ಮತ್ತು ವಕೀಲರು, ಶಿಕ್ಷಣ ತಜ್ಞರು ಮತ್ತು ಕಲಾವಿದರು ಸೇರಿದಂತೆ ಇತರ 15 ಜನರನ್ನು ಮೂರು ವರ್ಷಗಳಿಂದ ಜಾಮೀನು ಇಲ್ಲದೆ ಬಂಧಿಸಿ ಜೈಲಿಗೆ ಹಾಕಲಾಗಿದೆ.

ಮ್ಯಾಸಚೂಸೆಟ್ಸ್ ಮೂಲದ ಡಿಜಿಟಲ್ ಫೋರೆನ್ಸಿಕ್ಸ್ ಸಂಸ್ಥೆ ಆರ್ಸೆನಲ್ ಕನ್ಸಲ್ಟಿಂಗ್‌ ಅಂತಿಮ ವರದಿಯಲ್ಲಿ ವಿಲ್ಸನ್‌ರವರ ಆಪಲ್ ಫೋನ್ ಅನ್ನು ಇಸ್ರೇಲ್ ಮೂಲದ ಎನ್‌ಎಸ್‌ಒ ಗ್ರೂಪ್ ಮಾತ್ರವಲ್ಲದೇ ಹಲವು ಕಂಪನಿಗಳು ಗೂಢಾಚರ್ಯೆ ನಡೆಸಿದ್ದವು ಎಂದು ತಿಳಿಸಿದೆ. ಪೆಗಾಸಸ್ ಅನ್ನು ಆಯ್ಕೆಯಾದ ಸರ್ಕಾರಗಳಿಗೆ ಮಾತ್ರ ಮಾರಲಾಗುತ್ತದೆ ಎನ್ನುವುದನ್ನು ಈ ಸಂದರ್ಭದಲ್ಲಿ ನಾನು ಗಮನಿಸಬಹುದಾಗಿದೆ.

ಭೀಮಾ ಕೊರೆಗಾವ್ ಪ್ರಕರಣದಲ್ಲಿ ವಿಲ್ಸನ್ ಮೊದಲ ಟಾರ್ಗೆಟ್ ಆಗಿದ್ದರು. 2017ರ ಮಧ್ಯಭಾಗದಿಂದಲೇ ರೋಣಾ ವಿಲ್ಸನ್‌ರವರ ಮೇಲೆ ಪೆಗಾಸಸ್ ಗೂಢಾಚರ್ಯೆ ನಡೆಸಲಾಗಿದೆ. ಜೊತೆಗೆ ಅವರ ಲ್ಯಾಪ್‌ ಟಾಪ್ ಹ್ಯಾಕ್ ಮಾಡಿ ಸುಳ್ಳು ಸಾಕ್ಷಿಗಳನ್ನು ತುರುಕಲಾಗಿದೆ. ಈ ಫೈಲ್‌ಗಳನ್ನು 15 ನವೆಂಬರ್ 2018 ರಿಂದ, ಆರಂಭದಲ್ಲಿ ಪುಣೆ ಪೊಲೀಸರು ಮತ್ತು ನಂತರ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಪ್ರಮುಖ ಸಾಕ್ಷಿಯಾಗಿ ಉಲ್ಲೇಖಿಸಲಾಗಿದೆ. ಆದರೆ ಅವರ ಮೊಬೈಲ್ ಮತ್ತು ಲ್ಯಾಪ್ ಟಾಪ್ ಎನ್‌ಐಎ ಪೊಲೀಸರ ವಶದಲ್ಲಿರುವುದರಿಂದ ಫೋರೆನ್ಸಿಕ್ಸ್ ತನಿಖೆ ನಡೆಸಲಾಗುತ್ತಿಲ್ಲ.

ಜುಲೈ 5, 2017 ರಿಂದ ಏಪ್ರಿಲ್ 10, 2018ರವರೆಗೆ ಪೆಗಾಸಸ್ ಬಳಸಿ ಐಫೋನ್ 6S ನಿಂದ ಎರಡು ಐಟ್ಯೂನ್ಸ್ ಬ್ಯಾಕಪ್‌ಗಳಲ್ಲಿ ವಿಲ್ಸನ್ ಕಂಪ್ಯೂಟರ್‌ನ ವಿಂಡೋಸ್ ವಾಲ್ಯೂಮ್‌ನಲ್ಲಿ ದೋಷಾರೋಪಣೆಗಳನ್ನು ಸೇರಿಸಲಾಗಿದೆ ಎಂದು ಆರ್ಸೆನಲ್ ಕನ್ಸಲ್ಟಿಂಗ್‌ ಹೇಳಿದೆ.


ಇದನ್ನೂ ಓದಿ: ಅಜೀವಪರ್ಯಂತ ಮಾನವಹಕ್ಕುಗಳ ಹೋರಾಟಗಾರ ರೋಣ ವಿಲ್ಸನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...