Homeಕರ್ನಾಟಕದಿಢೀರ್‌ ಕುಸಿದ ಈರುಳ್ಳಿ ಬೆಲೆ, ಕ್ವಿಂಟಾಲ್‌ ಕೇವಲ 150ರೂ : ಆಕ್ರೋಶಗೊಂಡು ದಲ್ಲಾಳಿಗಳನ್ನು ಅಟ್ಟಾಡಿಸಿದ ರೈತರು…

ದಿಢೀರ್‌ ಕುಸಿದ ಈರುಳ್ಳಿ ಬೆಲೆ, ಕ್ವಿಂಟಾಲ್‌ ಕೇವಲ 150ರೂ : ಆಕ್ರೋಶಗೊಂಡು ದಲ್ಲಾಳಿಗಳನ್ನು ಅಟ್ಟಾಡಿಸಿದ ರೈತರು…

- Advertisement -
- Advertisement -

ಮಂಗಳವಾರ ಮುಂಜಾನೆ ಈರುಳ್ಳಿ ಬೆಲೆ ದಿಢೀರ್ ಕುಸಿದ ಹಿನ್ನೆಲೆಯಲ್ಲಿ ದಲ್ಲಾಳಿ ಅಂಗಡಿಗಳ ಗ್ಲಾಸ್‌ಗಳನ್ನು ರೈತರು ಒಡೆದು ಪುಡಿಪುಡಿ ಮಾಡಿದ ಘಟನೆ ಗದಗ ಎಪಿಎಂಸಿಯಲ್ಲಿ ನಡೆದಿದೆ. ರೈತರ ಆಕ್ರೋಶಕ್ಕೆ ದಲ್ಲಾಳಿಗಳು ಅಂಗಡಿಗಳನ್ನು ಬಿಟ್ಟು ಪರಾರಿಯಾದರು.

ಆಕ್ರೋಶಗೊಂಡ ರೈತರು ಗದಗ ಎಪಿಎಂಸಿಯಿಂದ ಜನರಲ್ ಕಾರ್ಯಪ್ಪ ಸರ್ಕಲ್‌ವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿ ರಾಜ್ಯ ಹೆದ್ದಾರಿ ತಡೆದರು. ಇದರಿಂದ ವಾಹನ ಸವಾರರು ಪರದಾಡುವಂತಾಯಿತು.
ಸ್ಥಳಕ್ಕೆ ಗದಗ ಎಸ್ಪಿ ಶ್ರೀನಾಥ್ ಜೋಷಿ, ಎಸಿ ಭೇಟಿ ನೀಡಿ ರೈತರ ಮನವೊಲಿಸಿದರು. ದಲ್ಲಾಳಿಗಳ ಜೊತೆ ಮಾತನಾಡಿ ಸೂಕ್ತ ಬೆಲೆ ಒದಗಿಸೋ ಪ್ರಯತ್ನ ಮಾಡೋ ಭರವಸೆ ಸಿಕ್ಕ ನಂತರ ರೈತರು ತಮ್ಮ ಪ್ರತಿಭಟನೆ ಹಿಂಪಡೆದರು. ಕ್ವಿಂಟಲ್ ಗೆ 4-5 ಸಾವಿರ ಇದ್ದ ಈರುಳ್ಳಿ ಬೆಲೆ ಈಗ ಏಕಾಏಕಿ ರೂ. 150 ಕ್ಕೆ ಕುಸಿದಿದ್ದು ರೈತರ ಆಕ್ರೋಶಕ್ಕೆ ಕಾರಣವಾಯಿತು.

ಗದಗ ಇಡೀ ರಾಜ್ಯಕ್ಕೆ ಉಳ್ಳಾಗಡ್ಡಿಯ ದೊಡ್ಡ ಮಾರುಕಟ್ಟೆ. ಗದಗಿನ ಎಲ್ಲಾ ತಾಲ್ಲೂಕುಗಳಲ್ಲೂ ಅಪಾರ ಪ್ರಮಾಣದಲ್ಲಿ ಪ್ರತಿವರ್ಷ ಉಳ್ಳಾಗಡ್ಡಿ ಬೆಳೆಯುತ್ತಾರೆ. ಕೆಲವೊಮ್ಮೆ ಬೆಳೆಯನ್ನು ಬೆಂಗಳೂರಿನ ಯಶವಂತಪುರ ಮಾರುಕಟ್ಟೆಗೆ, ಮುಂಬೈನ ನಾಸಿಕಕ್ಕೂ ಕಳಿಸಿ ಮಾರುತ್ತಾರೆ. ಇಲ್ಲಿನ ಈರುಳ್ಳಿಗೆ ಒಳ್ಳೆ ಬೆಲೆಯೂ ಇದೆ. ಈ ಸಲ ವಿಪರೀತ ಮಳೆಯಿಂದ ಸಾಕಷ್ಟು ಪ್ರಮಾಣದಲ್ಲಿ ಈರುಳ್ಳಿ ನಾಶವಾಗಿದೆ. ಕೊಳೆರೋಗದಿಂದಲೂ ಇಳುವರಿ ಕಡಿಮೆಯಾಗಿದೆ. ಆದರೆ, ಚೆನ್ನಾಗಿ ಬಂದ ಬೆಳೆಗೂ ಸರಿಯಾದ ಬೆಲೆ ಸಿಕ್ಕಿಲ್ಲ.

ಮೊದಲಿಗೆ ಕೇಂದ್ರ ಸರ್ಕಾರ ರಫ್ತು ನಿಷೇಧ ಹೇರಿದ್ದರಿಂದ ಧಾರಣೆ ಕುಸಿದಿತ್ತು. ನಂತರ ರಫ್ತು ನಿಷೇಧ ತೆಗೆದ ಮೇಲೂ ಧಾರಣೆಯೇನೂ ಏರಲಿಲ್ಲ. ಕಳೆದ ವರ್ಷ 7-8 ಸಾವಿರವಿದ್ದ ದರ ಈ ವರ್ಷ 4 ಸಾವಿರಕ್ಕೆ ಇಳಿಯಿತು. ಆದರೆ ಇಂದು ಮುಂಜಾನೆ ರೈತರಿಗೆ ದೊಡ್ಡ ಆಘಾತ ಕಾದಿತ್ತು. ಈರುಳ್ಳಿ ದರ ಏಕಾಏಕಿ ಕ್ವಿಂಟಾಲ್‌ಗೆ 150 ರೂಪಾಯಿಗೆ ಕುಸಿಯಿತು.

ಕ್ಷಣಕಾಲ ಕುಸಿದೇ ಹೋದ ರೈತ ಸಮೂಹ ನಂತರ ಈ ಮಾರುಕಟ್ಟೆ ವ್ಯವಸ್ಥೆಯ ವಿರುದ್ಧ ತಿರುಗಿ ಬಿದ್ದರು. ಅದರ ಪರಿಣಾಮವಾಗಿ ತಂದಿದ್ದ ಈರುಳ್ಳಿಯನ್ನು ಎಪಿಎಂಸಿ ಆವರಣ, ರಸ್ತೆಗಳಲ್ಲಿ ಚೆಲ್ಲಾಡಿದರು. ದಲ್ಲಾಳಿ ಅಂಗಡಿಗಳ ಗಾಜುಗಳನ್ನು ಈರುಳ್ಳಿ ಎಸೆದೇ ಪುಡಿಪುಡಿ ಮಾಡಿದರು. ಕುರ್ಚಿ ಟೇಬಲ್ಲುಗಳನ್ನು ಜಖಂಗೊಳಿಸಿದರು. ಭಯಭಿತರಾದ ದಲ್ಲಾಳಿ ಅಂಗಡಿಯ ವ್ಯಾಪಾರಸ್ಥರು ಎದ್ದು ಬಿದ್ದ್ದು ಓಡಿ ಹೋದರು.

ಈ ಪರಿಸ್ಥಿತಿಗೆ ಕಾರಣರಾದ ದಲ್ಲಾಳಿ ಅಂಗಡಿಯ ವಂಚಕ ವ್ಯಾಪಾರಿಗಳನ್ನು ಅಟ್ಟಾಡಿಸಿಕೊಂಡು ಹೋದರು. ತಮ್ಮ ಬೆಳೆಗೆ ಸೂಕ್ತ ಬೆಲೆ ಕೊಡಬೇಕು ಅಂತ ಆಗ್ರಹಿಸಿ ಎಪಿಎಂಸಿಯಿಂದ ಪ್ರತಿಭಟನೆ ಮಾಡ್ತಾ, ನಗರದ ಜನರಲ್ ಕಾರ್ಯಪ್ಪ ಸರ್ಕಲ್ ವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿ, ರಾಜ್ಯ ಹೆದ್ದಾರಿ ಬಂದ್ ಮಾಡಿದರು.
ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ರೈತ ವಿರೋಧಿ ಧೋರಣೆಗೆ ಉಳ್ಳಾಗಡ್ಡಿ ಇಂದು ಸಾಕ್ಷಿಯಾಗಿ ನಿಂತಿದೆ. ಈರುಳ್ಳಿ ಬೆಳೆದ ರೈತನ ಕಣ್ಣಲ್ಲಿ ಕಣ್ಣೀರು ಮಾತ್ರವಲ್ಲ, ಆಕ್ರೋಶವೂ ಇದೆ.

ಸಾಕು ಸಾಕಾಗಿದೆ : ಗಂಗಾಧರಯ್ಯ, ರೈತ.

ಗದಗ ಜಿಲ್ಲೆ ಈ ಬಾರಿಯ ಪ್ರವಾಹದಿಂದ ನಲುಗಿಹೋಗಿದೆ. ರೈತರು ಬೆಳೆದಿದ್ದ ಈರುಳ್ಳಿಯೆಲ್ಲಾ ನೀರು ಪಾಲಾಗಿತ್ತು. ಅಷ್ಟೋ ಇಷ್ಟೋ ಉಳಿದ ಬೆಳೆಯನ್ನು ಮಾರುಕಟ್ಟೆಗೆ ತಂದ್ರೆ ಕ್ವಿಂಟಲ್ ಈರುಳ್ಳಿಗೆ 100 ರಿಂದ 150 ರೂಪಾಯಿ ಮಾತ್ರ ಹರಾಜು ಕೂಗಲಾಗ್ತಿದೆ. ಇದು ನಮ್ಮ ಆಕ್ರೋಶಕ್ಕೆ ಕಾರಣವಾಗಿದೆ. ಹೀಗಾಗಿ ಬೆಲೆಯ ಕಣ್ಣಾ ಮುಚ್ಚಾಲೆ ಆಟದಿಂದ ಇಂದು ರೈತರ ಆಕ್ರೋಶದ ಕಟ್ಟೆ ಇಂದು ಒಡೆದು ಹೋಯಿತು ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...