Homeಕರ್ನಾಟಕದಿಢೀರ್‌ ಕುಸಿದ ಈರುಳ್ಳಿ ಬೆಲೆ, ಕ್ವಿಂಟಾಲ್‌ ಕೇವಲ 150ರೂ : ಆಕ್ರೋಶಗೊಂಡು ದಲ್ಲಾಳಿಗಳನ್ನು ಅಟ್ಟಾಡಿಸಿದ ರೈತರು…

ದಿಢೀರ್‌ ಕುಸಿದ ಈರುಳ್ಳಿ ಬೆಲೆ, ಕ್ವಿಂಟಾಲ್‌ ಕೇವಲ 150ರೂ : ಆಕ್ರೋಶಗೊಂಡು ದಲ್ಲಾಳಿಗಳನ್ನು ಅಟ್ಟಾಡಿಸಿದ ರೈತರು…

- Advertisement -
- Advertisement -

ಮಂಗಳವಾರ ಮುಂಜಾನೆ ಈರುಳ್ಳಿ ಬೆಲೆ ದಿಢೀರ್ ಕುಸಿದ ಹಿನ್ನೆಲೆಯಲ್ಲಿ ದಲ್ಲಾಳಿ ಅಂಗಡಿಗಳ ಗ್ಲಾಸ್‌ಗಳನ್ನು ರೈತರು ಒಡೆದು ಪುಡಿಪುಡಿ ಮಾಡಿದ ಘಟನೆ ಗದಗ ಎಪಿಎಂಸಿಯಲ್ಲಿ ನಡೆದಿದೆ. ರೈತರ ಆಕ್ರೋಶಕ್ಕೆ ದಲ್ಲಾಳಿಗಳು ಅಂಗಡಿಗಳನ್ನು ಬಿಟ್ಟು ಪರಾರಿಯಾದರು.

ಆಕ್ರೋಶಗೊಂಡ ರೈತರು ಗದಗ ಎಪಿಎಂಸಿಯಿಂದ ಜನರಲ್ ಕಾರ್ಯಪ್ಪ ಸರ್ಕಲ್‌ವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿ ರಾಜ್ಯ ಹೆದ್ದಾರಿ ತಡೆದರು. ಇದರಿಂದ ವಾಹನ ಸವಾರರು ಪರದಾಡುವಂತಾಯಿತು.
ಸ್ಥಳಕ್ಕೆ ಗದಗ ಎಸ್ಪಿ ಶ್ರೀನಾಥ್ ಜೋಷಿ, ಎಸಿ ಭೇಟಿ ನೀಡಿ ರೈತರ ಮನವೊಲಿಸಿದರು. ದಲ್ಲಾಳಿಗಳ ಜೊತೆ ಮಾತನಾಡಿ ಸೂಕ್ತ ಬೆಲೆ ಒದಗಿಸೋ ಪ್ರಯತ್ನ ಮಾಡೋ ಭರವಸೆ ಸಿಕ್ಕ ನಂತರ ರೈತರು ತಮ್ಮ ಪ್ರತಿಭಟನೆ ಹಿಂಪಡೆದರು. ಕ್ವಿಂಟಲ್ ಗೆ 4-5 ಸಾವಿರ ಇದ್ದ ಈರುಳ್ಳಿ ಬೆಲೆ ಈಗ ಏಕಾಏಕಿ ರೂ. 150 ಕ್ಕೆ ಕುಸಿದಿದ್ದು ರೈತರ ಆಕ್ರೋಶಕ್ಕೆ ಕಾರಣವಾಯಿತು.

ಗದಗ ಇಡೀ ರಾಜ್ಯಕ್ಕೆ ಉಳ್ಳಾಗಡ್ಡಿಯ ದೊಡ್ಡ ಮಾರುಕಟ್ಟೆ. ಗದಗಿನ ಎಲ್ಲಾ ತಾಲ್ಲೂಕುಗಳಲ್ಲೂ ಅಪಾರ ಪ್ರಮಾಣದಲ್ಲಿ ಪ್ರತಿವರ್ಷ ಉಳ್ಳಾಗಡ್ಡಿ ಬೆಳೆಯುತ್ತಾರೆ. ಕೆಲವೊಮ್ಮೆ ಬೆಳೆಯನ್ನು ಬೆಂಗಳೂರಿನ ಯಶವಂತಪುರ ಮಾರುಕಟ್ಟೆಗೆ, ಮುಂಬೈನ ನಾಸಿಕಕ್ಕೂ ಕಳಿಸಿ ಮಾರುತ್ತಾರೆ. ಇಲ್ಲಿನ ಈರುಳ್ಳಿಗೆ ಒಳ್ಳೆ ಬೆಲೆಯೂ ಇದೆ. ಈ ಸಲ ವಿಪರೀತ ಮಳೆಯಿಂದ ಸಾಕಷ್ಟು ಪ್ರಮಾಣದಲ್ಲಿ ಈರುಳ್ಳಿ ನಾಶವಾಗಿದೆ. ಕೊಳೆರೋಗದಿಂದಲೂ ಇಳುವರಿ ಕಡಿಮೆಯಾಗಿದೆ. ಆದರೆ, ಚೆನ್ನಾಗಿ ಬಂದ ಬೆಳೆಗೂ ಸರಿಯಾದ ಬೆಲೆ ಸಿಕ್ಕಿಲ್ಲ.

ಮೊದಲಿಗೆ ಕೇಂದ್ರ ಸರ್ಕಾರ ರಫ್ತು ನಿಷೇಧ ಹೇರಿದ್ದರಿಂದ ಧಾರಣೆ ಕುಸಿದಿತ್ತು. ನಂತರ ರಫ್ತು ನಿಷೇಧ ತೆಗೆದ ಮೇಲೂ ಧಾರಣೆಯೇನೂ ಏರಲಿಲ್ಲ. ಕಳೆದ ವರ್ಷ 7-8 ಸಾವಿರವಿದ್ದ ದರ ಈ ವರ್ಷ 4 ಸಾವಿರಕ್ಕೆ ಇಳಿಯಿತು. ಆದರೆ ಇಂದು ಮುಂಜಾನೆ ರೈತರಿಗೆ ದೊಡ್ಡ ಆಘಾತ ಕಾದಿತ್ತು. ಈರುಳ್ಳಿ ದರ ಏಕಾಏಕಿ ಕ್ವಿಂಟಾಲ್‌ಗೆ 150 ರೂಪಾಯಿಗೆ ಕುಸಿಯಿತು.

ಕ್ಷಣಕಾಲ ಕುಸಿದೇ ಹೋದ ರೈತ ಸಮೂಹ ನಂತರ ಈ ಮಾರುಕಟ್ಟೆ ವ್ಯವಸ್ಥೆಯ ವಿರುದ್ಧ ತಿರುಗಿ ಬಿದ್ದರು. ಅದರ ಪರಿಣಾಮವಾಗಿ ತಂದಿದ್ದ ಈರುಳ್ಳಿಯನ್ನು ಎಪಿಎಂಸಿ ಆವರಣ, ರಸ್ತೆಗಳಲ್ಲಿ ಚೆಲ್ಲಾಡಿದರು. ದಲ್ಲಾಳಿ ಅಂಗಡಿಗಳ ಗಾಜುಗಳನ್ನು ಈರುಳ್ಳಿ ಎಸೆದೇ ಪುಡಿಪುಡಿ ಮಾಡಿದರು. ಕುರ್ಚಿ ಟೇಬಲ್ಲುಗಳನ್ನು ಜಖಂಗೊಳಿಸಿದರು. ಭಯಭಿತರಾದ ದಲ್ಲಾಳಿ ಅಂಗಡಿಯ ವ್ಯಾಪಾರಸ್ಥರು ಎದ್ದು ಬಿದ್ದ್ದು ಓಡಿ ಹೋದರು.

ಈ ಪರಿಸ್ಥಿತಿಗೆ ಕಾರಣರಾದ ದಲ್ಲಾಳಿ ಅಂಗಡಿಯ ವಂಚಕ ವ್ಯಾಪಾರಿಗಳನ್ನು ಅಟ್ಟಾಡಿಸಿಕೊಂಡು ಹೋದರು. ತಮ್ಮ ಬೆಳೆಗೆ ಸೂಕ್ತ ಬೆಲೆ ಕೊಡಬೇಕು ಅಂತ ಆಗ್ರಹಿಸಿ ಎಪಿಎಂಸಿಯಿಂದ ಪ್ರತಿಭಟನೆ ಮಾಡ್ತಾ, ನಗರದ ಜನರಲ್ ಕಾರ್ಯಪ್ಪ ಸರ್ಕಲ್ ವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿ, ರಾಜ್ಯ ಹೆದ್ದಾರಿ ಬಂದ್ ಮಾಡಿದರು.
ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ರೈತ ವಿರೋಧಿ ಧೋರಣೆಗೆ ಉಳ್ಳಾಗಡ್ಡಿ ಇಂದು ಸಾಕ್ಷಿಯಾಗಿ ನಿಂತಿದೆ. ಈರುಳ್ಳಿ ಬೆಳೆದ ರೈತನ ಕಣ್ಣಲ್ಲಿ ಕಣ್ಣೀರು ಮಾತ್ರವಲ್ಲ, ಆಕ್ರೋಶವೂ ಇದೆ.

ಸಾಕು ಸಾಕಾಗಿದೆ : ಗಂಗಾಧರಯ್ಯ, ರೈತ.

ಗದಗ ಜಿಲ್ಲೆ ಈ ಬಾರಿಯ ಪ್ರವಾಹದಿಂದ ನಲುಗಿಹೋಗಿದೆ. ರೈತರು ಬೆಳೆದಿದ್ದ ಈರುಳ್ಳಿಯೆಲ್ಲಾ ನೀರು ಪಾಲಾಗಿತ್ತು. ಅಷ್ಟೋ ಇಷ್ಟೋ ಉಳಿದ ಬೆಳೆಯನ್ನು ಮಾರುಕಟ್ಟೆಗೆ ತಂದ್ರೆ ಕ್ವಿಂಟಲ್ ಈರುಳ್ಳಿಗೆ 100 ರಿಂದ 150 ರೂಪಾಯಿ ಮಾತ್ರ ಹರಾಜು ಕೂಗಲಾಗ್ತಿದೆ. ಇದು ನಮ್ಮ ಆಕ್ರೋಶಕ್ಕೆ ಕಾರಣವಾಗಿದೆ. ಹೀಗಾಗಿ ಬೆಲೆಯ ಕಣ್ಣಾ ಮುಚ್ಚಾಲೆ ಆಟದಿಂದ ಇಂದು ರೈತರ ಆಕ್ರೋಶದ ಕಟ್ಟೆ ಇಂದು ಒಡೆದು ಹೋಯಿತು ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...