Homeಕರ್ನಾಟಕದಿಢೀರ್‌ ಕುಸಿದ ಈರುಳ್ಳಿ ಬೆಲೆ, ಕ್ವಿಂಟಾಲ್‌ ಕೇವಲ 150ರೂ : ಆಕ್ರೋಶಗೊಂಡು ದಲ್ಲಾಳಿಗಳನ್ನು ಅಟ್ಟಾಡಿಸಿದ ರೈತರು…

ದಿಢೀರ್‌ ಕುಸಿದ ಈರುಳ್ಳಿ ಬೆಲೆ, ಕ್ವಿಂಟಾಲ್‌ ಕೇವಲ 150ರೂ : ಆಕ್ರೋಶಗೊಂಡು ದಲ್ಲಾಳಿಗಳನ್ನು ಅಟ್ಟಾಡಿಸಿದ ರೈತರು…

- Advertisement -
- Advertisement -

ಮಂಗಳವಾರ ಮುಂಜಾನೆ ಈರುಳ್ಳಿ ಬೆಲೆ ದಿಢೀರ್ ಕುಸಿದ ಹಿನ್ನೆಲೆಯಲ್ಲಿ ದಲ್ಲಾಳಿ ಅಂಗಡಿಗಳ ಗ್ಲಾಸ್‌ಗಳನ್ನು ರೈತರು ಒಡೆದು ಪುಡಿಪುಡಿ ಮಾಡಿದ ಘಟನೆ ಗದಗ ಎಪಿಎಂಸಿಯಲ್ಲಿ ನಡೆದಿದೆ. ರೈತರ ಆಕ್ರೋಶಕ್ಕೆ ದಲ್ಲಾಳಿಗಳು ಅಂಗಡಿಗಳನ್ನು ಬಿಟ್ಟು ಪರಾರಿಯಾದರು.

ಆಕ್ರೋಶಗೊಂಡ ರೈತರು ಗದಗ ಎಪಿಎಂಸಿಯಿಂದ ಜನರಲ್ ಕಾರ್ಯಪ್ಪ ಸರ್ಕಲ್‌ವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿ ರಾಜ್ಯ ಹೆದ್ದಾರಿ ತಡೆದರು. ಇದರಿಂದ ವಾಹನ ಸವಾರರು ಪರದಾಡುವಂತಾಯಿತು.
ಸ್ಥಳಕ್ಕೆ ಗದಗ ಎಸ್ಪಿ ಶ್ರೀನಾಥ್ ಜೋಷಿ, ಎಸಿ ಭೇಟಿ ನೀಡಿ ರೈತರ ಮನವೊಲಿಸಿದರು. ದಲ್ಲಾಳಿಗಳ ಜೊತೆ ಮಾತನಾಡಿ ಸೂಕ್ತ ಬೆಲೆ ಒದಗಿಸೋ ಪ್ರಯತ್ನ ಮಾಡೋ ಭರವಸೆ ಸಿಕ್ಕ ನಂತರ ರೈತರು ತಮ್ಮ ಪ್ರತಿಭಟನೆ ಹಿಂಪಡೆದರು. ಕ್ವಿಂಟಲ್ ಗೆ 4-5 ಸಾವಿರ ಇದ್ದ ಈರುಳ್ಳಿ ಬೆಲೆ ಈಗ ಏಕಾಏಕಿ ರೂ. 150 ಕ್ಕೆ ಕುಸಿದಿದ್ದು ರೈತರ ಆಕ್ರೋಶಕ್ಕೆ ಕಾರಣವಾಯಿತು.

ಗದಗ ಇಡೀ ರಾಜ್ಯಕ್ಕೆ ಉಳ್ಳಾಗಡ್ಡಿಯ ದೊಡ್ಡ ಮಾರುಕಟ್ಟೆ. ಗದಗಿನ ಎಲ್ಲಾ ತಾಲ್ಲೂಕುಗಳಲ್ಲೂ ಅಪಾರ ಪ್ರಮಾಣದಲ್ಲಿ ಪ್ರತಿವರ್ಷ ಉಳ್ಳಾಗಡ್ಡಿ ಬೆಳೆಯುತ್ತಾರೆ. ಕೆಲವೊಮ್ಮೆ ಬೆಳೆಯನ್ನು ಬೆಂಗಳೂರಿನ ಯಶವಂತಪುರ ಮಾರುಕಟ್ಟೆಗೆ, ಮುಂಬೈನ ನಾಸಿಕಕ್ಕೂ ಕಳಿಸಿ ಮಾರುತ್ತಾರೆ. ಇಲ್ಲಿನ ಈರುಳ್ಳಿಗೆ ಒಳ್ಳೆ ಬೆಲೆಯೂ ಇದೆ. ಈ ಸಲ ವಿಪರೀತ ಮಳೆಯಿಂದ ಸಾಕಷ್ಟು ಪ್ರಮಾಣದಲ್ಲಿ ಈರುಳ್ಳಿ ನಾಶವಾಗಿದೆ. ಕೊಳೆರೋಗದಿಂದಲೂ ಇಳುವರಿ ಕಡಿಮೆಯಾಗಿದೆ. ಆದರೆ, ಚೆನ್ನಾಗಿ ಬಂದ ಬೆಳೆಗೂ ಸರಿಯಾದ ಬೆಲೆ ಸಿಕ್ಕಿಲ್ಲ.

ಮೊದಲಿಗೆ ಕೇಂದ್ರ ಸರ್ಕಾರ ರಫ್ತು ನಿಷೇಧ ಹೇರಿದ್ದರಿಂದ ಧಾರಣೆ ಕುಸಿದಿತ್ತು. ನಂತರ ರಫ್ತು ನಿಷೇಧ ತೆಗೆದ ಮೇಲೂ ಧಾರಣೆಯೇನೂ ಏರಲಿಲ್ಲ. ಕಳೆದ ವರ್ಷ 7-8 ಸಾವಿರವಿದ್ದ ದರ ಈ ವರ್ಷ 4 ಸಾವಿರಕ್ಕೆ ಇಳಿಯಿತು. ಆದರೆ ಇಂದು ಮುಂಜಾನೆ ರೈತರಿಗೆ ದೊಡ್ಡ ಆಘಾತ ಕಾದಿತ್ತು. ಈರುಳ್ಳಿ ದರ ಏಕಾಏಕಿ ಕ್ವಿಂಟಾಲ್‌ಗೆ 150 ರೂಪಾಯಿಗೆ ಕುಸಿಯಿತು.

ಕ್ಷಣಕಾಲ ಕುಸಿದೇ ಹೋದ ರೈತ ಸಮೂಹ ನಂತರ ಈ ಮಾರುಕಟ್ಟೆ ವ್ಯವಸ್ಥೆಯ ವಿರುದ್ಧ ತಿರುಗಿ ಬಿದ್ದರು. ಅದರ ಪರಿಣಾಮವಾಗಿ ತಂದಿದ್ದ ಈರುಳ್ಳಿಯನ್ನು ಎಪಿಎಂಸಿ ಆವರಣ, ರಸ್ತೆಗಳಲ್ಲಿ ಚೆಲ್ಲಾಡಿದರು. ದಲ್ಲಾಳಿ ಅಂಗಡಿಗಳ ಗಾಜುಗಳನ್ನು ಈರುಳ್ಳಿ ಎಸೆದೇ ಪುಡಿಪುಡಿ ಮಾಡಿದರು. ಕುರ್ಚಿ ಟೇಬಲ್ಲುಗಳನ್ನು ಜಖಂಗೊಳಿಸಿದರು. ಭಯಭಿತರಾದ ದಲ್ಲಾಳಿ ಅಂಗಡಿಯ ವ್ಯಾಪಾರಸ್ಥರು ಎದ್ದು ಬಿದ್ದ್ದು ಓಡಿ ಹೋದರು.

ಈ ಪರಿಸ್ಥಿತಿಗೆ ಕಾರಣರಾದ ದಲ್ಲಾಳಿ ಅಂಗಡಿಯ ವಂಚಕ ವ್ಯಾಪಾರಿಗಳನ್ನು ಅಟ್ಟಾಡಿಸಿಕೊಂಡು ಹೋದರು. ತಮ್ಮ ಬೆಳೆಗೆ ಸೂಕ್ತ ಬೆಲೆ ಕೊಡಬೇಕು ಅಂತ ಆಗ್ರಹಿಸಿ ಎಪಿಎಂಸಿಯಿಂದ ಪ್ರತಿಭಟನೆ ಮಾಡ್ತಾ, ನಗರದ ಜನರಲ್ ಕಾರ್ಯಪ್ಪ ಸರ್ಕಲ್ ವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿ, ರಾಜ್ಯ ಹೆದ್ದಾರಿ ಬಂದ್ ಮಾಡಿದರು.
ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ರೈತ ವಿರೋಧಿ ಧೋರಣೆಗೆ ಉಳ್ಳಾಗಡ್ಡಿ ಇಂದು ಸಾಕ್ಷಿಯಾಗಿ ನಿಂತಿದೆ. ಈರುಳ್ಳಿ ಬೆಳೆದ ರೈತನ ಕಣ್ಣಲ್ಲಿ ಕಣ್ಣೀರು ಮಾತ್ರವಲ್ಲ, ಆಕ್ರೋಶವೂ ಇದೆ.

ಸಾಕು ಸಾಕಾಗಿದೆ : ಗಂಗಾಧರಯ್ಯ, ರೈತ.

ಗದಗ ಜಿಲ್ಲೆ ಈ ಬಾರಿಯ ಪ್ರವಾಹದಿಂದ ನಲುಗಿಹೋಗಿದೆ. ರೈತರು ಬೆಳೆದಿದ್ದ ಈರುಳ್ಳಿಯೆಲ್ಲಾ ನೀರು ಪಾಲಾಗಿತ್ತು. ಅಷ್ಟೋ ಇಷ್ಟೋ ಉಳಿದ ಬೆಳೆಯನ್ನು ಮಾರುಕಟ್ಟೆಗೆ ತಂದ್ರೆ ಕ್ವಿಂಟಲ್ ಈರುಳ್ಳಿಗೆ 100 ರಿಂದ 150 ರೂಪಾಯಿ ಮಾತ್ರ ಹರಾಜು ಕೂಗಲಾಗ್ತಿದೆ. ಇದು ನಮ್ಮ ಆಕ್ರೋಶಕ್ಕೆ ಕಾರಣವಾಗಿದೆ. ಹೀಗಾಗಿ ಬೆಲೆಯ ಕಣ್ಣಾ ಮುಚ್ಚಾಲೆ ಆಟದಿಂದ ಇಂದು ರೈತರ ಆಕ್ರೋಶದ ಕಟ್ಟೆ ಇಂದು ಒಡೆದು ಹೋಯಿತು ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...