Homeಕರ್ನಾಟಕದಿಢೀರ್‌ ಕುಸಿದ ಈರುಳ್ಳಿ ಬೆಲೆ, ಕ್ವಿಂಟಾಲ್‌ ಕೇವಲ 150ರೂ : ಆಕ್ರೋಶಗೊಂಡು ದಲ್ಲಾಳಿಗಳನ್ನು ಅಟ್ಟಾಡಿಸಿದ ರೈತರು…

ದಿಢೀರ್‌ ಕುಸಿದ ಈರುಳ್ಳಿ ಬೆಲೆ, ಕ್ವಿಂಟಾಲ್‌ ಕೇವಲ 150ರೂ : ಆಕ್ರೋಶಗೊಂಡು ದಲ್ಲಾಳಿಗಳನ್ನು ಅಟ್ಟಾಡಿಸಿದ ರೈತರು…

- Advertisement -
- Advertisement -

ಮಂಗಳವಾರ ಮುಂಜಾನೆ ಈರುಳ್ಳಿ ಬೆಲೆ ದಿಢೀರ್ ಕುಸಿದ ಹಿನ್ನೆಲೆಯಲ್ಲಿ ದಲ್ಲಾಳಿ ಅಂಗಡಿಗಳ ಗ್ಲಾಸ್‌ಗಳನ್ನು ರೈತರು ಒಡೆದು ಪುಡಿಪುಡಿ ಮಾಡಿದ ಘಟನೆ ಗದಗ ಎಪಿಎಂಸಿಯಲ್ಲಿ ನಡೆದಿದೆ. ರೈತರ ಆಕ್ರೋಶಕ್ಕೆ ದಲ್ಲಾಳಿಗಳು ಅಂಗಡಿಗಳನ್ನು ಬಿಟ್ಟು ಪರಾರಿಯಾದರು.

ಆಕ್ರೋಶಗೊಂಡ ರೈತರು ಗದಗ ಎಪಿಎಂಸಿಯಿಂದ ಜನರಲ್ ಕಾರ್ಯಪ್ಪ ಸರ್ಕಲ್‌ವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿ ರಾಜ್ಯ ಹೆದ್ದಾರಿ ತಡೆದರು. ಇದರಿಂದ ವಾಹನ ಸವಾರರು ಪರದಾಡುವಂತಾಯಿತು.
ಸ್ಥಳಕ್ಕೆ ಗದಗ ಎಸ್ಪಿ ಶ್ರೀನಾಥ್ ಜೋಷಿ, ಎಸಿ ಭೇಟಿ ನೀಡಿ ರೈತರ ಮನವೊಲಿಸಿದರು. ದಲ್ಲಾಳಿಗಳ ಜೊತೆ ಮಾತನಾಡಿ ಸೂಕ್ತ ಬೆಲೆ ಒದಗಿಸೋ ಪ್ರಯತ್ನ ಮಾಡೋ ಭರವಸೆ ಸಿಕ್ಕ ನಂತರ ರೈತರು ತಮ್ಮ ಪ್ರತಿಭಟನೆ ಹಿಂಪಡೆದರು. ಕ್ವಿಂಟಲ್ ಗೆ 4-5 ಸಾವಿರ ಇದ್ದ ಈರುಳ್ಳಿ ಬೆಲೆ ಈಗ ಏಕಾಏಕಿ ರೂ. 150 ಕ್ಕೆ ಕುಸಿದಿದ್ದು ರೈತರ ಆಕ್ರೋಶಕ್ಕೆ ಕಾರಣವಾಯಿತು.

ಗದಗ ಇಡೀ ರಾಜ್ಯಕ್ಕೆ ಉಳ್ಳಾಗಡ್ಡಿಯ ದೊಡ್ಡ ಮಾರುಕಟ್ಟೆ. ಗದಗಿನ ಎಲ್ಲಾ ತಾಲ್ಲೂಕುಗಳಲ್ಲೂ ಅಪಾರ ಪ್ರಮಾಣದಲ್ಲಿ ಪ್ರತಿವರ್ಷ ಉಳ್ಳಾಗಡ್ಡಿ ಬೆಳೆಯುತ್ತಾರೆ. ಕೆಲವೊಮ್ಮೆ ಬೆಳೆಯನ್ನು ಬೆಂಗಳೂರಿನ ಯಶವಂತಪುರ ಮಾರುಕಟ್ಟೆಗೆ, ಮುಂಬೈನ ನಾಸಿಕಕ್ಕೂ ಕಳಿಸಿ ಮಾರುತ್ತಾರೆ. ಇಲ್ಲಿನ ಈರುಳ್ಳಿಗೆ ಒಳ್ಳೆ ಬೆಲೆಯೂ ಇದೆ. ಈ ಸಲ ವಿಪರೀತ ಮಳೆಯಿಂದ ಸಾಕಷ್ಟು ಪ್ರಮಾಣದಲ್ಲಿ ಈರುಳ್ಳಿ ನಾಶವಾಗಿದೆ. ಕೊಳೆರೋಗದಿಂದಲೂ ಇಳುವರಿ ಕಡಿಮೆಯಾಗಿದೆ. ಆದರೆ, ಚೆನ್ನಾಗಿ ಬಂದ ಬೆಳೆಗೂ ಸರಿಯಾದ ಬೆಲೆ ಸಿಕ್ಕಿಲ್ಲ.

ಮೊದಲಿಗೆ ಕೇಂದ್ರ ಸರ್ಕಾರ ರಫ್ತು ನಿಷೇಧ ಹೇರಿದ್ದರಿಂದ ಧಾರಣೆ ಕುಸಿದಿತ್ತು. ನಂತರ ರಫ್ತು ನಿಷೇಧ ತೆಗೆದ ಮೇಲೂ ಧಾರಣೆಯೇನೂ ಏರಲಿಲ್ಲ. ಕಳೆದ ವರ್ಷ 7-8 ಸಾವಿರವಿದ್ದ ದರ ಈ ವರ್ಷ 4 ಸಾವಿರಕ್ಕೆ ಇಳಿಯಿತು. ಆದರೆ ಇಂದು ಮುಂಜಾನೆ ರೈತರಿಗೆ ದೊಡ್ಡ ಆಘಾತ ಕಾದಿತ್ತು. ಈರುಳ್ಳಿ ದರ ಏಕಾಏಕಿ ಕ್ವಿಂಟಾಲ್‌ಗೆ 150 ರೂಪಾಯಿಗೆ ಕುಸಿಯಿತು.

ಕ್ಷಣಕಾಲ ಕುಸಿದೇ ಹೋದ ರೈತ ಸಮೂಹ ನಂತರ ಈ ಮಾರುಕಟ್ಟೆ ವ್ಯವಸ್ಥೆಯ ವಿರುದ್ಧ ತಿರುಗಿ ಬಿದ್ದರು. ಅದರ ಪರಿಣಾಮವಾಗಿ ತಂದಿದ್ದ ಈರುಳ್ಳಿಯನ್ನು ಎಪಿಎಂಸಿ ಆವರಣ, ರಸ್ತೆಗಳಲ್ಲಿ ಚೆಲ್ಲಾಡಿದರು. ದಲ್ಲಾಳಿ ಅಂಗಡಿಗಳ ಗಾಜುಗಳನ್ನು ಈರುಳ್ಳಿ ಎಸೆದೇ ಪುಡಿಪುಡಿ ಮಾಡಿದರು. ಕುರ್ಚಿ ಟೇಬಲ್ಲುಗಳನ್ನು ಜಖಂಗೊಳಿಸಿದರು. ಭಯಭಿತರಾದ ದಲ್ಲಾಳಿ ಅಂಗಡಿಯ ವ್ಯಾಪಾರಸ್ಥರು ಎದ್ದು ಬಿದ್ದ್ದು ಓಡಿ ಹೋದರು.

ಈ ಪರಿಸ್ಥಿತಿಗೆ ಕಾರಣರಾದ ದಲ್ಲಾಳಿ ಅಂಗಡಿಯ ವಂಚಕ ವ್ಯಾಪಾರಿಗಳನ್ನು ಅಟ್ಟಾಡಿಸಿಕೊಂಡು ಹೋದರು. ತಮ್ಮ ಬೆಳೆಗೆ ಸೂಕ್ತ ಬೆಲೆ ಕೊಡಬೇಕು ಅಂತ ಆಗ್ರಹಿಸಿ ಎಪಿಎಂಸಿಯಿಂದ ಪ್ರತಿಭಟನೆ ಮಾಡ್ತಾ, ನಗರದ ಜನರಲ್ ಕಾರ್ಯಪ್ಪ ಸರ್ಕಲ್ ವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿ, ರಾಜ್ಯ ಹೆದ್ದಾರಿ ಬಂದ್ ಮಾಡಿದರು.
ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ರೈತ ವಿರೋಧಿ ಧೋರಣೆಗೆ ಉಳ್ಳಾಗಡ್ಡಿ ಇಂದು ಸಾಕ್ಷಿಯಾಗಿ ನಿಂತಿದೆ. ಈರುಳ್ಳಿ ಬೆಳೆದ ರೈತನ ಕಣ್ಣಲ್ಲಿ ಕಣ್ಣೀರು ಮಾತ್ರವಲ್ಲ, ಆಕ್ರೋಶವೂ ಇದೆ.

ಸಾಕು ಸಾಕಾಗಿದೆ : ಗಂಗಾಧರಯ್ಯ, ರೈತ.

ಗದಗ ಜಿಲ್ಲೆ ಈ ಬಾರಿಯ ಪ್ರವಾಹದಿಂದ ನಲುಗಿಹೋಗಿದೆ. ರೈತರು ಬೆಳೆದಿದ್ದ ಈರುಳ್ಳಿಯೆಲ್ಲಾ ನೀರು ಪಾಲಾಗಿತ್ತು. ಅಷ್ಟೋ ಇಷ್ಟೋ ಉಳಿದ ಬೆಳೆಯನ್ನು ಮಾರುಕಟ್ಟೆಗೆ ತಂದ್ರೆ ಕ್ವಿಂಟಲ್ ಈರುಳ್ಳಿಗೆ 100 ರಿಂದ 150 ರೂಪಾಯಿ ಮಾತ್ರ ಹರಾಜು ಕೂಗಲಾಗ್ತಿದೆ. ಇದು ನಮ್ಮ ಆಕ್ರೋಶಕ್ಕೆ ಕಾರಣವಾಗಿದೆ. ಹೀಗಾಗಿ ಬೆಲೆಯ ಕಣ್ಣಾ ಮುಚ್ಚಾಲೆ ಆಟದಿಂದ ಇಂದು ರೈತರ ಆಕ್ರೋಶದ ಕಟ್ಟೆ ಇಂದು ಒಡೆದು ಹೋಯಿತು ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...