Homeಕರ್ನಾಟಕದಿಢೀರ್‌ ಕುಸಿದ ಈರುಳ್ಳಿ ಬೆಲೆ, ಕ್ವಿಂಟಾಲ್‌ ಕೇವಲ 150ರೂ : ಆಕ್ರೋಶಗೊಂಡು ದಲ್ಲಾಳಿಗಳನ್ನು ಅಟ್ಟಾಡಿಸಿದ ರೈತರು…

ದಿಢೀರ್‌ ಕುಸಿದ ಈರುಳ್ಳಿ ಬೆಲೆ, ಕ್ವಿಂಟಾಲ್‌ ಕೇವಲ 150ರೂ : ಆಕ್ರೋಶಗೊಂಡು ದಲ್ಲಾಳಿಗಳನ್ನು ಅಟ್ಟಾಡಿಸಿದ ರೈತರು…

- Advertisement -
- Advertisement -

ಮಂಗಳವಾರ ಮುಂಜಾನೆ ಈರುಳ್ಳಿ ಬೆಲೆ ದಿಢೀರ್ ಕುಸಿದ ಹಿನ್ನೆಲೆಯಲ್ಲಿ ದಲ್ಲಾಳಿ ಅಂಗಡಿಗಳ ಗ್ಲಾಸ್‌ಗಳನ್ನು ರೈತರು ಒಡೆದು ಪುಡಿಪುಡಿ ಮಾಡಿದ ಘಟನೆ ಗದಗ ಎಪಿಎಂಸಿಯಲ್ಲಿ ನಡೆದಿದೆ. ರೈತರ ಆಕ್ರೋಶಕ್ಕೆ ದಲ್ಲಾಳಿಗಳು ಅಂಗಡಿಗಳನ್ನು ಬಿಟ್ಟು ಪರಾರಿಯಾದರು.

ಆಕ್ರೋಶಗೊಂಡ ರೈತರು ಗದಗ ಎಪಿಎಂಸಿಯಿಂದ ಜನರಲ್ ಕಾರ್ಯಪ್ಪ ಸರ್ಕಲ್‌ವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿ ರಾಜ್ಯ ಹೆದ್ದಾರಿ ತಡೆದರು. ಇದರಿಂದ ವಾಹನ ಸವಾರರು ಪರದಾಡುವಂತಾಯಿತು.
ಸ್ಥಳಕ್ಕೆ ಗದಗ ಎಸ್ಪಿ ಶ್ರೀನಾಥ್ ಜೋಷಿ, ಎಸಿ ಭೇಟಿ ನೀಡಿ ರೈತರ ಮನವೊಲಿಸಿದರು. ದಲ್ಲಾಳಿಗಳ ಜೊತೆ ಮಾತನಾಡಿ ಸೂಕ್ತ ಬೆಲೆ ಒದಗಿಸೋ ಪ್ರಯತ್ನ ಮಾಡೋ ಭರವಸೆ ಸಿಕ್ಕ ನಂತರ ರೈತರು ತಮ್ಮ ಪ್ರತಿಭಟನೆ ಹಿಂಪಡೆದರು. ಕ್ವಿಂಟಲ್ ಗೆ 4-5 ಸಾವಿರ ಇದ್ದ ಈರುಳ್ಳಿ ಬೆಲೆ ಈಗ ಏಕಾಏಕಿ ರೂ. 150 ಕ್ಕೆ ಕುಸಿದಿದ್ದು ರೈತರ ಆಕ್ರೋಶಕ್ಕೆ ಕಾರಣವಾಯಿತು.

ಗದಗ ಇಡೀ ರಾಜ್ಯಕ್ಕೆ ಉಳ್ಳಾಗಡ್ಡಿಯ ದೊಡ್ಡ ಮಾರುಕಟ್ಟೆ. ಗದಗಿನ ಎಲ್ಲಾ ತಾಲ್ಲೂಕುಗಳಲ್ಲೂ ಅಪಾರ ಪ್ರಮಾಣದಲ್ಲಿ ಪ್ರತಿವರ್ಷ ಉಳ್ಳಾಗಡ್ಡಿ ಬೆಳೆಯುತ್ತಾರೆ. ಕೆಲವೊಮ್ಮೆ ಬೆಳೆಯನ್ನು ಬೆಂಗಳೂರಿನ ಯಶವಂತಪುರ ಮಾರುಕಟ್ಟೆಗೆ, ಮುಂಬೈನ ನಾಸಿಕಕ್ಕೂ ಕಳಿಸಿ ಮಾರುತ್ತಾರೆ. ಇಲ್ಲಿನ ಈರುಳ್ಳಿಗೆ ಒಳ್ಳೆ ಬೆಲೆಯೂ ಇದೆ. ಈ ಸಲ ವಿಪರೀತ ಮಳೆಯಿಂದ ಸಾಕಷ್ಟು ಪ್ರಮಾಣದಲ್ಲಿ ಈರುಳ್ಳಿ ನಾಶವಾಗಿದೆ. ಕೊಳೆರೋಗದಿಂದಲೂ ಇಳುವರಿ ಕಡಿಮೆಯಾಗಿದೆ. ಆದರೆ, ಚೆನ್ನಾಗಿ ಬಂದ ಬೆಳೆಗೂ ಸರಿಯಾದ ಬೆಲೆ ಸಿಕ್ಕಿಲ್ಲ.

ಮೊದಲಿಗೆ ಕೇಂದ್ರ ಸರ್ಕಾರ ರಫ್ತು ನಿಷೇಧ ಹೇರಿದ್ದರಿಂದ ಧಾರಣೆ ಕುಸಿದಿತ್ತು. ನಂತರ ರಫ್ತು ನಿಷೇಧ ತೆಗೆದ ಮೇಲೂ ಧಾರಣೆಯೇನೂ ಏರಲಿಲ್ಲ. ಕಳೆದ ವರ್ಷ 7-8 ಸಾವಿರವಿದ್ದ ದರ ಈ ವರ್ಷ 4 ಸಾವಿರಕ್ಕೆ ಇಳಿಯಿತು. ಆದರೆ ಇಂದು ಮುಂಜಾನೆ ರೈತರಿಗೆ ದೊಡ್ಡ ಆಘಾತ ಕಾದಿತ್ತು. ಈರುಳ್ಳಿ ದರ ಏಕಾಏಕಿ ಕ್ವಿಂಟಾಲ್‌ಗೆ 150 ರೂಪಾಯಿಗೆ ಕುಸಿಯಿತು.

ಕ್ಷಣಕಾಲ ಕುಸಿದೇ ಹೋದ ರೈತ ಸಮೂಹ ನಂತರ ಈ ಮಾರುಕಟ್ಟೆ ವ್ಯವಸ್ಥೆಯ ವಿರುದ್ಧ ತಿರುಗಿ ಬಿದ್ದರು. ಅದರ ಪರಿಣಾಮವಾಗಿ ತಂದಿದ್ದ ಈರುಳ್ಳಿಯನ್ನು ಎಪಿಎಂಸಿ ಆವರಣ, ರಸ್ತೆಗಳಲ್ಲಿ ಚೆಲ್ಲಾಡಿದರು. ದಲ್ಲಾಳಿ ಅಂಗಡಿಗಳ ಗಾಜುಗಳನ್ನು ಈರುಳ್ಳಿ ಎಸೆದೇ ಪುಡಿಪುಡಿ ಮಾಡಿದರು. ಕುರ್ಚಿ ಟೇಬಲ್ಲುಗಳನ್ನು ಜಖಂಗೊಳಿಸಿದರು. ಭಯಭಿತರಾದ ದಲ್ಲಾಳಿ ಅಂಗಡಿಯ ವ್ಯಾಪಾರಸ್ಥರು ಎದ್ದು ಬಿದ್ದ್ದು ಓಡಿ ಹೋದರು.

ಈ ಪರಿಸ್ಥಿತಿಗೆ ಕಾರಣರಾದ ದಲ್ಲಾಳಿ ಅಂಗಡಿಯ ವಂಚಕ ವ್ಯಾಪಾರಿಗಳನ್ನು ಅಟ್ಟಾಡಿಸಿಕೊಂಡು ಹೋದರು. ತಮ್ಮ ಬೆಳೆಗೆ ಸೂಕ್ತ ಬೆಲೆ ಕೊಡಬೇಕು ಅಂತ ಆಗ್ರಹಿಸಿ ಎಪಿಎಂಸಿಯಿಂದ ಪ್ರತಿಭಟನೆ ಮಾಡ್ತಾ, ನಗರದ ಜನರಲ್ ಕಾರ್ಯಪ್ಪ ಸರ್ಕಲ್ ವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿ, ರಾಜ್ಯ ಹೆದ್ದಾರಿ ಬಂದ್ ಮಾಡಿದರು.
ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ರೈತ ವಿರೋಧಿ ಧೋರಣೆಗೆ ಉಳ್ಳಾಗಡ್ಡಿ ಇಂದು ಸಾಕ್ಷಿಯಾಗಿ ನಿಂತಿದೆ. ಈರುಳ್ಳಿ ಬೆಳೆದ ರೈತನ ಕಣ್ಣಲ್ಲಿ ಕಣ್ಣೀರು ಮಾತ್ರವಲ್ಲ, ಆಕ್ರೋಶವೂ ಇದೆ.

ಸಾಕು ಸಾಕಾಗಿದೆ : ಗಂಗಾಧರಯ್ಯ, ರೈತ.

ಗದಗ ಜಿಲ್ಲೆ ಈ ಬಾರಿಯ ಪ್ರವಾಹದಿಂದ ನಲುಗಿಹೋಗಿದೆ. ರೈತರು ಬೆಳೆದಿದ್ದ ಈರುಳ್ಳಿಯೆಲ್ಲಾ ನೀರು ಪಾಲಾಗಿತ್ತು. ಅಷ್ಟೋ ಇಷ್ಟೋ ಉಳಿದ ಬೆಳೆಯನ್ನು ಮಾರುಕಟ್ಟೆಗೆ ತಂದ್ರೆ ಕ್ವಿಂಟಲ್ ಈರುಳ್ಳಿಗೆ 100 ರಿಂದ 150 ರೂಪಾಯಿ ಮಾತ್ರ ಹರಾಜು ಕೂಗಲಾಗ್ತಿದೆ. ಇದು ನಮ್ಮ ಆಕ್ರೋಶಕ್ಕೆ ಕಾರಣವಾಗಿದೆ. ಹೀಗಾಗಿ ಬೆಲೆಯ ಕಣ್ಣಾ ಮುಚ್ಚಾಲೆ ಆಟದಿಂದ ಇಂದು ರೈತರ ಆಕ್ರೋಶದ ಕಟ್ಟೆ ಇಂದು ಒಡೆದು ಹೋಯಿತು ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...