Homeಕರ್ನಾಟಕದಿಢೀರ್‌ ಕುಸಿದ ಈರುಳ್ಳಿ ಬೆಲೆ, ಕ್ವಿಂಟಾಲ್‌ ಕೇವಲ 150ರೂ : ಆಕ್ರೋಶಗೊಂಡು ದಲ್ಲಾಳಿಗಳನ್ನು ಅಟ್ಟಾಡಿಸಿದ ರೈತರು…

ದಿಢೀರ್‌ ಕುಸಿದ ಈರುಳ್ಳಿ ಬೆಲೆ, ಕ್ವಿಂಟಾಲ್‌ ಕೇವಲ 150ರೂ : ಆಕ್ರೋಶಗೊಂಡು ದಲ್ಲಾಳಿಗಳನ್ನು ಅಟ್ಟಾಡಿಸಿದ ರೈತರು…

- Advertisement -
- Advertisement -

ಮಂಗಳವಾರ ಮುಂಜಾನೆ ಈರುಳ್ಳಿ ಬೆಲೆ ದಿಢೀರ್ ಕುಸಿದ ಹಿನ್ನೆಲೆಯಲ್ಲಿ ದಲ್ಲಾಳಿ ಅಂಗಡಿಗಳ ಗ್ಲಾಸ್‌ಗಳನ್ನು ರೈತರು ಒಡೆದು ಪುಡಿಪುಡಿ ಮಾಡಿದ ಘಟನೆ ಗದಗ ಎಪಿಎಂಸಿಯಲ್ಲಿ ನಡೆದಿದೆ. ರೈತರ ಆಕ್ರೋಶಕ್ಕೆ ದಲ್ಲಾಳಿಗಳು ಅಂಗಡಿಗಳನ್ನು ಬಿಟ್ಟು ಪರಾರಿಯಾದರು.

ಆಕ್ರೋಶಗೊಂಡ ರೈತರು ಗದಗ ಎಪಿಎಂಸಿಯಿಂದ ಜನರಲ್ ಕಾರ್ಯಪ್ಪ ಸರ್ಕಲ್‌ವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿ ರಾಜ್ಯ ಹೆದ್ದಾರಿ ತಡೆದರು. ಇದರಿಂದ ವಾಹನ ಸವಾರರು ಪರದಾಡುವಂತಾಯಿತು.
ಸ್ಥಳಕ್ಕೆ ಗದಗ ಎಸ್ಪಿ ಶ್ರೀನಾಥ್ ಜೋಷಿ, ಎಸಿ ಭೇಟಿ ನೀಡಿ ರೈತರ ಮನವೊಲಿಸಿದರು. ದಲ್ಲಾಳಿಗಳ ಜೊತೆ ಮಾತನಾಡಿ ಸೂಕ್ತ ಬೆಲೆ ಒದಗಿಸೋ ಪ್ರಯತ್ನ ಮಾಡೋ ಭರವಸೆ ಸಿಕ್ಕ ನಂತರ ರೈತರು ತಮ್ಮ ಪ್ರತಿಭಟನೆ ಹಿಂಪಡೆದರು. ಕ್ವಿಂಟಲ್ ಗೆ 4-5 ಸಾವಿರ ಇದ್ದ ಈರುಳ್ಳಿ ಬೆಲೆ ಈಗ ಏಕಾಏಕಿ ರೂ. 150 ಕ್ಕೆ ಕುಸಿದಿದ್ದು ರೈತರ ಆಕ್ರೋಶಕ್ಕೆ ಕಾರಣವಾಯಿತು.

ಗದಗ ಇಡೀ ರಾಜ್ಯಕ್ಕೆ ಉಳ್ಳಾಗಡ್ಡಿಯ ದೊಡ್ಡ ಮಾರುಕಟ್ಟೆ. ಗದಗಿನ ಎಲ್ಲಾ ತಾಲ್ಲೂಕುಗಳಲ್ಲೂ ಅಪಾರ ಪ್ರಮಾಣದಲ್ಲಿ ಪ್ರತಿವರ್ಷ ಉಳ್ಳಾಗಡ್ಡಿ ಬೆಳೆಯುತ್ತಾರೆ. ಕೆಲವೊಮ್ಮೆ ಬೆಳೆಯನ್ನು ಬೆಂಗಳೂರಿನ ಯಶವಂತಪುರ ಮಾರುಕಟ್ಟೆಗೆ, ಮುಂಬೈನ ನಾಸಿಕಕ್ಕೂ ಕಳಿಸಿ ಮಾರುತ್ತಾರೆ. ಇಲ್ಲಿನ ಈರುಳ್ಳಿಗೆ ಒಳ್ಳೆ ಬೆಲೆಯೂ ಇದೆ. ಈ ಸಲ ವಿಪರೀತ ಮಳೆಯಿಂದ ಸಾಕಷ್ಟು ಪ್ರಮಾಣದಲ್ಲಿ ಈರುಳ್ಳಿ ನಾಶವಾಗಿದೆ. ಕೊಳೆರೋಗದಿಂದಲೂ ಇಳುವರಿ ಕಡಿಮೆಯಾಗಿದೆ. ಆದರೆ, ಚೆನ್ನಾಗಿ ಬಂದ ಬೆಳೆಗೂ ಸರಿಯಾದ ಬೆಲೆ ಸಿಕ್ಕಿಲ್ಲ.

ಮೊದಲಿಗೆ ಕೇಂದ್ರ ಸರ್ಕಾರ ರಫ್ತು ನಿಷೇಧ ಹೇರಿದ್ದರಿಂದ ಧಾರಣೆ ಕುಸಿದಿತ್ತು. ನಂತರ ರಫ್ತು ನಿಷೇಧ ತೆಗೆದ ಮೇಲೂ ಧಾರಣೆಯೇನೂ ಏರಲಿಲ್ಲ. ಕಳೆದ ವರ್ಷ 7-8 ಸಾವಿರವಿದ್ದ ದರ ಈ ವರ್ಷ 4 ಸಾವಿರಕ್ಕೆ ಇಳಿಯಿತು. ಆದರೆ ಇಂದು ಮುಂಜಾನೆ ರೈತರಿಗೆ ದೊಡ್ಡ ಆಘಾತ ಕಾದಿತ್ತು. ಈರುಳ್ಳಿ ದರ ಏಕಾಏಕಿ ಕ್ವಿಂಟಾಲ್‌ಗೆ 150 ರೂಪಾಯಿಗೆ ಕುಸಿಯಿತು.

ಕ್ಷಣಕಾಲ ಕುಸಿದೇ ಹೋದ ರೈತ ಸಮೂಹ ನಂತರ ಈ ಮಾರುಕಟ್ಟೆ ವ್ಯವಸ್ಥೆಯ ವಿರುದ್ಧ ತಿರುಗಿ ಬಿದ್ದರು. ಅದರ ಪರಿಣಾಮವಾಗಿ ತಂದಿದ್ದ ಈರುಳ್ಳಿಯನ್ನು ಎಪಿಎಂಸಿ ಆವರಣ, ರಸ್ತೆಗಳಲ್ಲಿ ಚೆಲ್ಲಾಡಿದರು. ದಲ್ಲಾಳಿ ಅಂಗಡಿಗಳ ಗಾಜುಗಳನ್ನು ಈರುಳ್ಳಿ ಎಸೆದೇ ಪುಡಿಪುಡಿ ಮಾಡಿದರು. ಕುರ್ಚಿ ಟೇಬಲ್ಲುಗಳನ್ನು ಜಖಂಗೊಳಿಸಿದರು. ಭಯಭಿತರಾದ ದಲ್ಲಾಳಿ ಅಂಗಡಿಯ ವ್ಯಾಪಾರಸ್ಥರು ಎದ್ದು ಬಿದ್ದ್ದು ಓಡಿ ಹೋದರು.

ಈ ಪರಿಸ್ಥಿತಿಗೆ ಕಾರಣರಾದ ದಲ್ಲಾಳಿ ಅಂಗಡಿಯ ವಂಚಕ ವ್ಯಾಪಾರಿಗಳನ್ನು ಅಟ್ಟಾಡಿಸಿಕೊಂಡು ಹೋದರು. ತಮ್ಮ ಬೆಳೆಗೆ ಸೂಕ್ತ ಬೆಲೆ ಕೊಡಬೇಕು ಅಂತ ಆಗ್ರಹಿಸಿ ಎಪಿಎಂಸಿಯಿಂದ ಪ್ರತಿಭಟನೆ ಮಾಡ್ತಾ, ನಗರದ ಜನರಲ್ ಕಾರ್ಯಪ್ಪ ಸರ್ಕಲ್ ವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿ, ರಾಜ್ಯ ಹೆದ್ದಾರಿ ಬಂದ್ ಮಾಡಿದರು.
ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ರೈತ ವಿರೋಧಿ ಧೋರಣೆಗೆ ಉಳ್ಳಾಗಡ್ಡಿ ಇಂದು ಸಾಕ್ಷಿಯಾಗಿ ನಿಂತಿದೆ. ಈರುಳ್ಳಿ ಬೆಳೆದ ರೈತನ ಕಣ್ಣಲ್ಲಿ ಕಣ್ಣೀರು ಮಾತ್ರವಲ್ಲ, ಆಕ್ರೋಶವೂ ಇದೆ.

ಸಾಕು ಸಾಕಾಗಿದೆ : ಗಂಗಾಧರಯ್ಯ, ರೈತ.

ಗದಗ ಜಿಲ್ಲೆ ಈ ಬಾರಿಯ ಪ್ರವಾಹದಿಂದ ನಲುಗಿಹೋಗಿದೆ. ರೈತರು ಬೆಳೆದಿದ್ದ ಈರುಳ್ಳಿಯೆಲ್ಲಾ ನೀರು ಪಾಲಾಗಿತ್ತು. ಅಷ್ಟೋ ಇಷ್ಟೋ ಉಳಿದ ಬೆಳೆಯನ್ನು ಮಾರುಕಟ್ಟೆಗೆ ತಂದ್ರೆ ಕ್ವಿಂಟಲ್ ಈರುಳ್ಳಿಗೆ 100 ರಿಂದ 150 ರೂಪಾಯಿ ಮಾತ್ರ ಹರಾಜು ಕೂಗಲಾಗ್ತಿದೆ. ಇದು ನಮ್ಮ ಆಕ್ರೋಶಕ್ಕೆ ಕಾರಣವಾಗಿದೆ. ಹೀಗಾಗಿ ಬೆಲೆಯ ಕಣ್ಣಾ ಮುಚ್ಚಾಲೆ ಆಟದಿಂದ ಇಂದು ರೈತರ ಆಕ್ರೋಶದ ಕಟ್ಟೆ ಇಂದು ಒಡೆದು ಹೋಯಿತು ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...