Homeಕರ್ನಾಟಕದಿಢೀರ್‌ ಕುಸಿದ ಈರುಳ್ಳಿ ಬೆಲೆ, ಕ್ವಿಂಟಾಲ್‌ ಕೇವಲ 150ರೂ : ಆಕ್ರೋಶಗೊಂಡು ದಲ್ಲಾಳಿಗಳನ್ನು ಅಟ್ಟಾಡಿಸಿದ ರೈತರು…

ದಿಢೀರ್‌ ಕುಸಿದ ಈರುಳ್ಳಿ ಬೆಲೆ, ಕ್ವಿಂಟಾಲ್‌ ಕೇವಲ 150ರೂ : ಆಕ್ರೋಶಗೊಂಡು ದಲ್ಲಾಳಿಗಳನ್ನು ಅಟ್ಟಾಡಿಸಿದ ರೈತರು…

- Advertisement -
- Advertisement -

ಮಂಗಳವಾರ ಮುಂಜಾನೆ ಈರುಳ್ಳಿ ಬೆಲೆ ದಿಢೀರ್ ಕುಸಿದ ಹಿನ್ನೆಲೆಯಲ್ಲಿ ದಲ್ಲಾಳಿ ಅಂಗಡಿಗಳ ಗ್ಲಾಸ್‌ಗಳನ್ನು ರೈತರು ಒಡೆದು ಪುಡಿಪುಡಿ ಮಾಡಿದ ಘಟನೆ ಗದಗ ಎಪಿಎಂಸಿಯಲ್ಲಿ ನಡೆದಿದೆ. ರೈತರ ಆಕ್ರೋಶಕ್ಕೆ ದಲ್ಲಾಳಿಗಳು ಅಂಗಡಿಗಳನ್ನು ಬಿಟ್ಟು ಪರಾರಿಯಾದರು.

ಆಕ್ರೋಶಗೊಂಡ ರೈತರು ಗದಗ ಎಪಿಎಂಸಿಯಿಂದ ಜನರಲ್ ಕಾರ್ಯಪ್ಪ ಸರ್ಕಲ್‌ವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿ ರಾಜ್ಯ ಹೆದ್ದಾರಿ ತಡೆದರು. ಇದರಿಂದ ವಾಹನ ಸವಾರರು ಪರದಾಡುವಂತಾಯಿತು.
ಸ್ಥಳಕ್ಕೆ ಗದಗ ಎಸ್ಪಿ ಶ್ರೀನಾಥ್ ಜೋಷಿ, ಎಸಿ ಭೇಟಿ ನೀಡಿ ರೈತರ ಮನವೊಲಿಸಿದರು. ದಲ್ಲಾಳಿಗಳ ಜೊತೆ ಮಾತನಾಡಿ ಸೂಕ್ತ ಬೆಲೆ ಒದಗಿಸೋ ಪ್ರಯತ್ನ ಮಾಡೋ ಭರವಸೆ ಸಿಕ್ಕ ನಂತರ ರೈತರು ತಮ್ಮ ಪ್ರತಿಭಟನೆ ಹಿಂಪಡೆದರು. ಕ್ವಿಂಟಲ್ ಗೆ 4-5 ಸಾವಿರ ಇದ್ದ ಈರುಳ್ಳಿ ಬೆಲೆ ಈಗ ಏಕಾಏಕಿ ರೂ. 150 ಕ್ಕೆ ಕುಸಿದಿದ್ದು ರೈತರ ಆಕ್ರೋಶಕ್ಕೆ ಕಾರಣವಾಯಿತು.

ಗದಗ ಇಡೀ ರಾಜ್ಯಕ್ಕೆ ಉಳ್ಳಾಗಡ್ಡಿಯ ದೊಡ್ಡ ಮಾರುಕಟ್ಟೆ. ಗದಗಿನ ಎಲ್ಲಾ ತಾಲ್ಲೂಕುಗಳಲ್ಲೂ ಅಪಾರ ಪ್ರಮಾಣದಲ್ಲಿ ಪ್ರತಿವರ್ಷ ಉಳ್ಳಾಗಡ್ಡಿ ಬೆಳೆಯುತ್ತಾರೆ. ಕೆಲವೊಮ್ಮೆ ಬೆಳೆಯನ್ನು ಬೆಂಗಳೂರಿನ ಯಶವಂತಪುರ ಮಾರುಕಟ್ಟೆಗೆ, ಮುಂಬೈನ ನಾಸಿಕಕ್ಕೂ ಕಳಿಸಿ ಮಾರುತ್ತಾರೆ. ಇಲ್ಲಿನ ಈರುಳ್ಳಿಗೆ ಒಳ್ಳೆ ಬೆಲೆಯೂ ಇದೆ. ಈ ಸಲ ವಿಪರೀತ ಮಳೆಯಿಂದ ಸಾಕಷ್ಟು ಪ್ರಮಾಣದಲ್ಲಿ ಈರುಳ್ಳಿ ನಾಶವಾಗಿದೆ. ಕೊಳೆರೋಗದಿಂದಲೂ ಇಳುವರಿ ಕಡಿಮೆಯಾಗಿದೆ. ಆದರೆ, ಚೆನ್ನಾಗಿ ಬಂದ ಬೆಳೆಗೂ ಸರಿಯಾದ ಬೆಲೆ ಸಿಕ್ಕಿಲ್ಲ.

ಮೊದಲಿಗೆ ಕೇಂದ್ರ ಸರ್ಕಾರ ರಫ್ತು ನಿಷೇಧ ಹೇರಿದ್ದರಿಂದ ಧಾರಣೆ ಕುಸಿದಿತ್ತು. ನಂತರ ರಫ್ತು ನಿಷೇಧ ತೆಗೆದ ಮೇಲೂ ಧಾರಣೆಯೇನೂ ಏರಲಿಲ್ಲ. ಕಳೆದ ವರ್ಷ 7-8 ಸಾವಿರವಿದ್ದ ದರ ಈ ವರ್ಷ 4 ಸಾವಿರಕ್ಕೆ ಇಳಿಯಿತು. ಆದರೆ ಇಂದು ಮುಂಜಾನೆ ರೈತರಿಗೆ ದೊಡ್ಡ ಆಘಾತ ಕಾದಿತ್ತು. ಈರುಳ್ಳಿ ದರ ಏಕಾಏಕಿ ಕ್ವಿಂಟಾಲ್‌ಗೆ 150 ರೂಪಾಯಿಗೆ ಕುಸಿಯಿತು.

ಕ್ಷಣಕಾಲ ಕುಸಿದೇ ಹೋದ ರೈತ ಸಮೂಹ ನಂತರ ಈ ಮಾರುಕಟ್ಟೆ ವ್ಯವಸ್ಥೆಯ ವಿರುದ್ಧ ತಿರುಗಿ ಬಿದ್ದರು. ಅದರ ಪರಿಣಾಮವಾಗಿ ತಂದಿದ್ದ ಈರುಳ್ಳಿಯನ್ನು ಎಪಿಎಂಸಿ ಆವರಣ, ರಸ್ತೆಗಳಲ್ಲಿ ಚೆಲ್ಲಾಡಿದರು. ದಲ್ಲಾಳಿ ಅಂಗಡಿಗಳ ಗಾಜುಗಳನ್ನು ಈರುಳ್ಳಿ ಎಸೆದೇ ಪುಡಿಪುಡಿ ಮಾಡಿದರು. ಕುರ್ಚಿ ಟೇಬಲ್ಲುಗಳನ್ನು ಜಖಂಗೊಳಿಸಿದರು. ಭಯಭಿತರಾದ ದಲ್ಲಾಳಿ ಅಂಗಡಿಯ ವ್ಯಾಪಾರಸ್ಥರು ಎದ್ದು ಬಿದ್ದ್ದು ಓಡಿ ಹೋದರು.

ಈ ಪರಿಸ್ಥಿತಿಗೆ ಕಾರಣರಾದ ದಲ್ಲಾಳಿ ಅಂಗಡಿಯ ವಂಚಕ ವ್ಯಾಪಾರಿಗಳನ್ನು ಅಟ್ಟಾಡಿಸಿಕೊಂಡು ಹೋದರು. ತಮ್ಮ ಬೆಳೆಗೆ ಸೂಕ್ತ ಬೆಲೆ ಕೊಡಬೇಕು ಅಂತ ಆಗ್ರಹಿಸಿ ಎಪಿಎಂಸಿಯಿಂದ ಪ್ರತಿಭಟನೆ ಮಾಡ್ತಾ, ನಗರದ ಜನರಲ್ ಕಾರ್ಯಪ್ಪ ಸರ್ಕಲ್ ವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿ, ರಾಜ್ಯ ಹೆದ್ದಾರಿ ಬಂದ್ ಮಾಡಿದರು.
ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ರೈತ ವಿರೋಧಿ ಧೋರಣೆಗೆ ಉಳ್ಳಾಗಡ್ಡಿ ಇಂದು ಸಾಕ್ಷಿಯಾಗಿ ನಿಂತಿದೆ. ಈರುಳ್ಳಿ ಬೆಳೆದ ರೈತನ ಕಣ್ಣಲ್ಲಿ ಕಣ್ಣೀರು ಮಾತ್ರವಲ್ಲ, ಆಕ್ರೋಶವೂ ಇದೆ.

ಸಾಕು ಸಾಕಾಗಿದೆ : ಗಂಗಾಧರಯ್ಯ, ರೈತ.

ಗದಗ ಜಿಲ್ಲೆ ಈ ಬಾರಿಯ ಪ್ರವಾಹದಿಂದ ನಲುಗಿಹೋಗಿದೆ. ರೈತರು ಬೆಳೆದಿದ್ದ ಈರುಳ್ಳಿಯೆಲ್ಲಾ ನೀರು ಪಾಲಾಗಿತ್ತು. ಅಷ್ಟೋ ಇಷ್ಟೋ ಉಳಿದ ಬೆಳೆಯನ್ನು ಮಾರುಕಟ್ಟೆಗೆ ತಂದ್ರೆ ಕ್ವಿಂಟಲ್ ಈರುಳ್ಳಿಗೆ 100 ರಿಂದ 150 ರೂಪಾಯಿ ಮಾತ್ರ ಹರಾಜು ಕೂಗಲಾಗ್ತಿದೆ. ಇದು ನಮ್ಮ ಆಕ್ರೋಶಕ್ಕೆ ಕಾರಣವಾಗಿದೆ. ಹೀಗಾಗಿ ಬೆಲೆಯ ಕಣ್ಣಾ ಮುಚ್ಚಾಲೆ ಆಟದಿಂದ ಇಂದು ರೈತರ ಆಕ್ರೋಶದ ಕಟ್ಟೆ ಇಂದು ಒಡೆದು ಹೋಯಿತು ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...

ಇಂಡಿಯಾ ಮೈತ್ರಿಕೂಟದ ಸಭೆ: ಎಸ್‌ಐಆರ್, ಬೆಲೆ ಏರಿಕೆ, ನಿರುದ್ಯೋಗದ ಕುರಿತು ಖರ್ಗೆ ಕಳವಳ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ವಿದೇಶಾಂಗ ನೀತಿ ರಂಗಗಳಲ್ಲಿ ಮೋದಿ ಸರ್ಕಾರದ ವೈಫಲ್ಯಗಳನ್ನು ಎದುರಿಸಲು ತನ್ನ ಒಗ್ಗಟ್ಟನ್ನು ಬಲಪಡಿಸಿಕೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ (ಜೂ.8) ಇಂಡಿಯಾ ಮೈತ್ರಿಕೂಟಕ್ಕೆ ಕರೆ...

ಟೆಹ್ರಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಕ್ಷಿಪಣಿ ಹಾರಿಸಿದ ಇರಾನ್

ಟೆಹ್ರಾನ್, ತಬ್ರಿಜ್ ಮತ್ತು ಇಸ್ಫಹಾನ್‌ ಮೇಲಿನ ದಾಲಿಗಳಿಗೆ ಪ್ರತೀಕಾರವಾಗಿ, ಇರಾನ್ ಸೇನೆಯು ಇಸ್ರೇಲ್‌ ಮೇಲೆ ಎರಡನೇ ತರಂಗದ ಕ್ಷಿಪಣಿಗಳನ್ನು ಹಾರಿಸಿದೆ. ದೇಶಾದ್ಯಂತ ಸೈರನ್‌ಗಳು ಮೊಳಗುತ್ತಿವೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ ಎಂದು ಅಂತರಾಷ್ಟ್ರೀಯ...

ಭಾರತದಲ್ಲಿ ಬೆಂಕಿ ದುರಂತ ‘ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು’ NCRB ವರದಿ

ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ಹೋಟೆಲ್‌ ಒಂದರಲ್ಲಿ ನಡೆದ ಭೀಕರ ಬೆಂಕಿ ದುರಂತ (ಇದರಲ್ಲಿ 22 ಜನರು ಸಜೀವ ದಹನವಾಗಿದ್ದರು) ಇಡೀ ದೇಶವನ್ನೇ ನಡುಗಿಸಿದೆ. ಈ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ವಾಣಿಜ್ಯ ಮತ್ತು...

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...