Homeಕರ್ನಾಟಕದಿಢೀರ್‌ ಕುಸಿದ ಈರುಳ್ಳಿ ಬೆಲೆ, ಕ್ವಿಂಟಾಲ್‌ ಕೇವಲ 150ರೂ : ಆಕ್ರೋಶಗೊಂಡು ದಲ್ಲಾಳಿಗಳನ್ನು ಅಟ್ಟಾಡಿಸಿದ ರೈತರು…

ದಿಢೀರ್‌ ಕುಸಿದ ಈರುಳ್ಳಿ ಬೆಲೆ, ಕ್ವಿಂಟಾಲ್‌ ಕೇವಲ 150ರೂ : ಆಕ್ರೋಶಗೊಂಡು ದಲ್ಲಾಳಿಗಳನ್ನು ಅಟ್ಟಾಡಿಸಿದ ರೈತರು…

- Advertisement -
- Advertisement -

ಮಂಗಳವಾರ ಮುಂಜಾನೆ ಈರುಳ್ಳಿ ಬೆಲೆ ದಿಢೀರ್ ಕುಸಿದ ಹಿನ್ನೆಲೆಯಲ್ಲಿ ದಲ್ಲಾಳಿ ಅಂಗಡಿಗಳ ಗ್ಲಾಸ್‌ಗಳನ್ನು ರೈತರು ಒಡೆದು ಪುಡಿಪುಡಿ ಮಾಡಿದ ಘಟನೆ ಗದಗ ಎಪಿಎಂಸಿಯಲ್ಲಿ ನಡೆದಿದೆ. ರೈತರ ಆಕ್ರೋಶಕ್ಕೆ ದಲ್ಲಾಳಿಗಳು ಅಂಗಡಿಗಳನ್ನು ಬಿಟ್ಟು ಪರಾರಿಯಾದರು.

ಆಕ್ರೋಶಗೊಂಡ ರೈತರು ಗದಗ ಎಪಿಎಂಸಿಯಿಂದ ಜನರಲ್ ಕಾರ್ಯಪ್ಪ ಸರ್ಕಲ್‌ವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿ ರಾಜ್ಯ ಹೆದ್ದಾರಿ ತಡೆದರು. ಇದರಿಂದ ವಾಹನ ಸವಾರರು ಪರದಾಡುವಂತಾಯಿತು.
ಸ್ಥಳಕ್ಕೆ ಗದಗ ಎಸ್ಪಿ ಶ್ರೀನಾಥ್ ಜೋಷಿ, ಎಸಿ ಭೇಟಿ ನೀಡಿ ರೈತರ ಮನವೊಲಿಸಿದರು. ದಲ್ಲಾಳಿಗಳ ಜೊತೆ ಮಾತನಾಡಿ ಸೂಕ್ತ ಬೆಲೆ ಒದಗಿಸೋ ಪ್ರಯತ್ನ ಮಾಡೋ ಭರವಸೆ ಸಿಕ್ಕ ನಂತರ ರೈತರು ತಮ್ಮ ಪ್ರತಿಭಟನೆ ಹಿಂಪಡೆದರು. ಕ್ವಿಂಟಲ್ ಗೆ 4-5 ಸಾವಿರ ಇದ್ದ ಈರುಳ್ಳಿ ಬೆಲೆ ಈಗ ಏಕಾಏಕಿ ರೂ. 150 ಕ್ಕೆ ಕುಸಿದಿದ್ದು ರೈತರ ಆಕ್ರೋಶಕ್ಕೆ ಕಾರಣವಾಯಿತು.

ಗದಗ ಇಡೀ ರಾಜ್ಯಕ್ಕೆ ಉಳ್ಳಾಗಡ್ಡಿಯ ದೊಡ್ಡ ಮಾರುಕಟ್ಟೆ. ಗದಗಿನ ಎಲ್ಲಾ ತಾಲ್ಲೂಕುಗಳಲ್ಲೂ ಅಪಾರ ಪ್ರಮಾಣದಲ್ಲಿ ಪ್ರತಿವರ್ಷ ಉಳ್ಳಾಗಡ್ಡಿ ಬೆಳೆಯುತ್ತಾರೆ. ಕೆಲವೊಮ್ಮೆ ಬೆಳೆಯನ್ನು ಬೆಂಗಳೂರಿನ ಯಶವಂತಪುರ ಮಾರುಕಟ್ಟೆಗೆ, ಮುಂಬೈನ ನಾಸಿಕಕ್ಕೂ ಕಳಿಸಿ ಮಾರುತ್ತಾರೆ. ಇಲ್ಲಿನ ಈರುಳ್ಳಿಗೆ ಒಳ್ಳೆ ಬೆಲೆಯೂ ಇದೆ. ಈ ಸಲ ವಿಪರೀತ ಮಳೆಯಿಂದ ಸಾಕಷ್ಟು ಪ್ರಮಾಣದಲ್ಲಿ ಈರುಳ್ಳಿ ನಾಶವಾಗಿದೆ. ಕೊಳೆರೋಗದಿಂದಲೂ ಇಳುವರಿ ಕಡಿಮೆಯಾಗಿದೆ. ಆದರೆ, ಚೆನ್ನಾಗಿ ಬಂದ ಬೆಳೆಗೂ ಸರಿಯಾದ ಬೆಲೆ ಸಿಕ್ಕಿಲ್ಲ.

ಮೊದಲಿಗೆ ಕೇಂದ್ರ ಸರ್ಕಾರ ರಫ್ತು ನಿಷೇಧ ಹೇರಿದ್ದರಿಂದ ಧಾರಣೆ ಕುಸಿದಿತ್ತು. ನಂತರ ರಫ್ತು ನಿಷೇಧ ತೆಗೆದ ಮೇಲೂ ಧಾರಣೆಯೇನೂ ಏರಲಿಲ್ಲ. ಕಳೆದ ವರ್ಷ 7-8 ಸಾವಿರವಿದ್ದ ದರ ಈ ವರ್ಷ 4 ಸಾವಿರಕ್ಕೆ ಇಳಿಯಿತು. ಆದರೆ ಇಂದು ಮುಂಜಾನೆ ರೈತರಿಗೆ ದೊಡ್ಡ ಆಘಾತ ಕಾದಿತ್ತು. ಈರುಳ್ಳಿ ದರ ಏಕಾಏಕಿ ಕ್ವಿಂಟಾಲ್‌ಗೆ 150 ರೂಪಾಯಿಗೆ ಕುಸಿಯಿತು.

ಕ್ಷಣಕಾಲ ಕುಸಿದೇ ಹೋದ ರೈತ ಸಮೂಹ ನಂತರ ಈ ಮಾರುಕಟ್ಟೆ ವ್ಯವಸ್ಥೆಯ ವಿರುದ್ಧ ತಿರುಗಿ ಬಿದ್ದರು. ಅದರ ಪರಿಣಾಮವಾಗಿ ತಂದಿದ್ದ ಈರುಳ್ಳಿಯನ್ನು ಎಪಿಎಂಸಿ ಆವರಣ, ರಸ್ತೆಗಳಲ್ಲಿ ಚೆಲ್ಲಾಡಿದರು. ದಲ್ಲಾಳಿ ಅಂಗಡಿಗಳ ಗಾಜುಗಳನ್ನು ಈರುಳ್ಳಿ ಎಸೆದೇ ಪುಡಿಪುಡಿ ಮಾಡಿದರು. ಕುರ್ಚಿ ಟೇಬಲ್ಲುಗಳನ್ನು ಜಖಂಗೊಳಿಸಿದರು. ಭಯಭಿತರಾದ ದಲ್ಲಾಳಿ ಅಂಗಡಿಯ ವ್ಯಾಪಾರಸ್ಥರು ಎದ್ದು ಬಿದ್ದ್ದು ಓಡಿ ಹೋದರು.

ಈ ಪರಿಸ್ಥಿತಿಗೆ ಕಾರಣರಾದ ದಲ್ಲಾಳಿ ಅಂಗಡಿಯ ವಂಚಕ ವ್ಯಾಪಾರಿಗಳನ್ನು ಅಟ್ಟಾಡಿಸಿಕೊಂಡು ಹೋದರು. ತಮ್ಮ ಬೆಳೆಗೆ ಸೂಕ್ತ ಬೆಲೆ ಕೊಡಬೇಕು ಅಂತ ಆಗ್ರಹಿಸಿ ಎಪಿಎಂಸಿಯಿಂದ ಪ್ರತಿಭಟನೆ ಮಾಡ್ತಾ, ನಗರದ ಜನರಲ್ ಕಾರ್ಯಪ್ಪ ಸರ್ಕಲ್ ವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿ, ರಾಜ್ಯ ಹೆದ್ದಾರಿ ಬಂದ್ ಮಾಡಿದರು.
ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ರೈತ ವಿರೋಧಿ ಧೋರಣೆಗೆ ಉಳ್ಳಾಗಡ್ಡಿ ಇಂದು ಸಾಕ್ಷಿಯಾಗಿ ನಿಂತಿದೆ. ಈರುಳ್ಳಿ ಬೆಳೆದ ರೈತನ ಕಣ್ಣಲ್ಲಿ ಕಣ್ಣೀರು ಮಾತ್ರವಲ್ಲ, ಆಕ್ರೋಶವೂ ಇದೆ.

ಸಾಕು ಸಾಕಾಗಿದೆ : ಗಂಗಾಧರಯ್ಯ, ರೈತ.

ಗದಗ ಜಿಲ್ಲೆ ಈ ಬಾರಿಯ ಪ್ರವಾಹದಿಂದ ನಲುಗಿಹೋಗಿದೆ. ರೈತರು ಬೆಳೆದಿದ್ದ ಈರುಳ್ಳಿಯೆಲ್ಲಾ ನೀರು ಪಾಲಾಗಿತ್ತು. ಅಷ್ಟೋ ಇಷ್ಟೋ ಉಳಿದ ಬೆಳೆಯನ್ನು ಮಾರುಕಟ್ಟೆಗೆ ತಂದ್ರೆ ಕ್ವಿಂಟಲ್ ಈರುಳ್ಳಿಗೆ 100 ರಿಂದ 150 ರೂಪಾಯಿ ಮಾತ್ರ ಹರಾಜು ಕೂಗಲಾಗ್ತಿದೆ. ಇದು ನಮ್ಮ ಆಕ್ರೋಶಕ್ಕೆ ಕಾರಣವಾಗಿದೆ. ಹೀಗಾಗಿ ಬೆಲೆಯ ಕಣ್ಣಾ ಮುಚ್ಚಾಲೆ ಆಟದಿಂದ ಇಂದು ರೈತರ ಆಕ್ರೋಶದ ಕಟ್ಟೆ ಇಂದು ಒಡೆದು ಹೋಯಿತು ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...