Homeಕರ್ನಾಟಕದಿಢೀರ್‌ ಕುಸಿದ ಈರುಳ್ಳಿ ಬೆಲೆ, ಕ್ವಿಂಟಾಲ್‌ ಕೇವಲ 150ರೂ : ಆಕ್ರೋಶಗೊಂಡು ದಲ್ಲಾಳಿಗಳನ್ನು ಅಟ್ಟಾಡಿಸಿದ ರೈತರು…

ದಿಢೀರ್‌ ಕುಸಿದ ಈರುಳ್ಳಿ ಬೆಲೆ, ಕ್ವಿಂಟಾಲ್‌ ಕೇವಲ 150ರೂ : ಆಕ್ರೋಶಗೊಂಡು ದಲ್ಲಾಳಿಗಳನ್ನು ಅಟ್ಟಾಡಿಸಿದ ರೈತರು…

- Advertisement -
- Advertisement -

ಮಂಗಳವಾರ ಮುಂಜಾನೆ ಈರುಳ್ಳಿ ಬೆಲೆ ದಿಢೀರ್ ಕುಸಿದ ಹಿನ್ನೆಲೆಯಲ್ಲಿ ದಲ್ಲಾಳಿ ಅಂಗಡಿಗಳ ಗ್ಲಾಸ್‌ಗಳನ್ನು ರೈತರು ಒಡೆದು ಪುಡಿಪುಡಿ ಮಾಡಿದ ಘಟನೆ ಗದಗ ಎಪಿಎಂಸಿಯಲ್ಲಿ ನಡೆದಿದೆ. ರೈತರ ಆಕ್ರೋಶಕ್ಕೆ ದಲ್ಲಾಳಿಗಳು ಅಂಗಡಿಗಳನ್ನು ಬಿಟ್ಟು ಪರಾರಿಯಾದರು.

ಆಕ್ರೋಶಗೊಂಡ ರೈತರು ಗದಗ ಎಪಿಎಂಸಿಯಿಂದ ಜನರಲ್ ಕಾರ್ಯಪ್ಪ ಸರ್ಕಲ್‌ವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿ ರಾಜ್ಯ ಹೆದ್ದಾರಿ ತಡೆದರು. ಇದರಿಂದ ವಾಹನ ಸವಾರರು ಪರದಾಡುವಂತಾಯಿತು.
ಸ್ಥಳಕ್ಕೆ ಗದಗ ಎಸ್ಪಿ ಶ್ರೀನಾಥ್ ಜೋಷಿ, ಎಸಿ ಭೇಟಿ ನೀಡಿ ರೈತರ ಮನವೊಲಿಸಿದರು. ದಲ್ಲಾಳಿಗಳ ಜೊತೆ ಮಾತನಾಡಿ ಸೂಕ್ತ ಬೆಲೆ ಒದಗಿಸೋ ಪ್ರಯತ್ನ ಮಾಡೋ ಭರವಸೆ ಸಿಕ್ಕ ನಂತರ ರೈತರು ತಮ್ಮ ಪ್ರತಿಭಟನೆ ಹಿಂಪಡೆದರು. ಕ್ವಿಂಟಲ್ ಗೆ 4-5 ಸಾವಿರ ಇದ್ದ ಈರುಳ್ಳಿ ಬೆಲೆ ಈಗ ಏಕಾಏಕಿ ರೂ. 150 ಕ್ಕೆ ಕುಸಿದಿದ್ದು ರೈತರ ಆಕ್ರೋಶಕ್ಕೆ ಕಾರಣವಾಯಿತು.

ಗದಗ ಇಡೀ ರಾಜ್ಯಕ್ಕೆ ಉಳ್ಳಾಗಡ್ಡಿಯ ದೊಡ್ಡ ಮಾರುಕಟ್ಟೆ. ಗದಗಿನ ಎಲ್ಲಾ ತಾಲ್ಲೂಕುಗಳಲ್ಲೂ ಅಪಾರ ಪ್ರಮಾಣದಲ್ಲಿ ಪ್ರತಿವರ್ಷ ಉಳ್ಳಾಗಡ್ಡಿ ಬೆಳೆಯುತ್ತಾರೆ. ಕೆಲವೊಮ್ಮೆ ಬೆಳೆಯನ್ನು ಬೆಂಗಳೂರಿನ ಯಶವಂತಪುರ ಮಾರುಕಟ್ಟೆಗೆ, ಮುಂಬೈನ ನಾಸಿಕಕ್ಕೂ ಕಳಿಸಿ ಮಾರುತ್ತಾರೆ. ಇಲ್ಲಿನ ಈರುಳ್ಳಿಗೆ ಒಳ್ಳೆ ಬೆಲೆಯೂ ಇದೆ. ಈ ಸಲ ವಿಪರೀತ ಮಳೆಯಿಂದ ಸಾಕಷ್ಟು ಪ್ರಮಾಣದಲ್ಲಿ ಈರುಳ್ಳಿ ನಾಶವಾಗಿದೆ. ಕೊಳೆರೋಗದಿಂದಲೂ ಇಳುವರಿ ಕಡಿಮೆಯಾಗಿದೆ. ಆದರೆ, ಚೆನ್ನಾಗಿ ಬಂದ ಬೆಳೆಗೂ ಸರಿಯಾದ ಬೆಲೆ ಸಿಕ್ಕಿಲ್ಲ.

ಮೊದಲಿಗೆ ಕೇಂದ್ರ ಸರ್ಕಾರ ರಫ್ತು ನಿಷೇಧ ಹೇರಿದ್ದರಿಂದ ಧಾರಣೆ ಕುಸಿದಿತ್ತು. ನಂತರ ರಫ್ತು ನಿಷೇಧ ತೆಗೆದ ಮೇಲೂ ಧಾರಣೆಯೇನೂ ಏರಲಿಲ್ಲ. ಕಳೆದ ವರ್ಷ 7-8 ಸಾವಿರವಿದ್ದ ದರ ಈ ವರ್ಷ 4 ಸಾವಿರಕ್ಕೆ ಇಳಿಯಿತು. ಆದರೆ ಇಂದು ಮುಂಜಾನೆ ರೈತರಿಗೆ ದೊಡ್ಡ ಆಘಾತ ಕಾದಿತ್ತು. ಈರುಳ್ಳಿ ದರ ಏಕಾಏಕಿ ಕ್ವಿಂಟಾಲ್‌ಗೆ 150 ರೂಪಾಯಿಗೆ ಕುಸಿಯಿತು.

ಕ್ಷಣಕಾಲ ಕುಸಿದೇ ಹೋದ ರೈತ ಸಮೂಹ ನಂತರ ಈ ಮಾರುಕಟ್ಟೆ ವ್ಯವಸ್ಥೆಯ ವಿರುದ್ಧ ತಿರುಗಿ ಬಿದ್ದರು. ಅದರ ಪರಿಣಾಮವಾಗಿ ತಂದಿದ್ದ ಈರುಳ್ಳಿಯನ್ನು ಎಪಿಎಂಸಿ ಆವರಣ, ರಸ್ತೆಗಳಲ್ಲಿ ಚೆಲ್ಲಾಡಿದರು. ದಲ್ಲಾಳಿ ಅಂಗಡಿಗಳ ಗಾಜುಗಳನ್ನು ಈರುಳ್ಳಿ ಎಸೆದೇ ಪುಡಿಪುಡಿ ಮಾಡಿದರು. ಕುರ್ಚಿ ಟೇಬಲ್ಲುಗಳನ್ನು ಜಖಂಗೊಳಿಸಿದರು. ಭಯಭಿತರಾದ ದಲ್ಲಾಳಿ ಅಂಗಡಿಯ ವ್ಯಾಪಾರಸ್ಥರು ಎದ್ದು ಬಿದ್ದ್ದು ಓಡಿ ಹೋದರು.

ಈ ಪರಿಸ್ಥಿತಿಗೆ ಕಾರಣರಾದ ದಲ್ಲಾಳಿ ಅಂಗಡಿಯ ವಂಚಕ ವ್ಯಾಪಾರಿಗಳನ್ನು ಅಟ್ಟಾಡಿಸಿಕೊಂಡು ಹೋದರು. ತಮ್ಮ ಬೆಳೆಗೆ ಸೂಕ್ತ ಬೆಲೆ ಕೊಡಬೇಕು ಅಂತ ಆಗ್ರಹಿಸಿ ಎಪಿಎಂಸಿಯಿಂದ ಪ್ರತಿಭಟನೆ ಮಾಡ್ತಾ, ನಗರದ ಜನರಲ್ ಕಾರ್ಯಪ್ಪ ಸರ್ಕಲ್ ವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿ, ರಾಜ್ಯ ಹೆದ್ದಾರಿ ಬಂದ್ ಮಾಡಿದರು.
ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ರೈತ ವಿರೋಧಿ ಧೋರಣೆಗೆ ಉಳ್ಳಾಗಡ್ಡಿ ಇಂದು ಸಾಕ್ಷಿಯಾಗಿ ನಿಂತಿದೆ. ಈರುಳ್ಳಿ ಬೆಳೆದ ರೈತನ ಕಣ್ಣಲ್ಲಿ ಕಣ್ಣೀರು ಮಾತ್ರವಲ್ಲ, ಆಕ್ರೋಶವೂ ಇದೆ.

ಸಾಕು ಸಾಕಾಗಿದೆ : ಗಂಗಾಧರಯ್ಯ, ರೈತ.

ಗದಗ ಜಿಲ್ಲೆ ಈ ಬಾರಿಯ ಪ್ರವಾಹದಿಂದ ನಲುಗಿಹೋಗಿದೆ. ರೈತರು ಬೆಳೆದಿದ್ದ ಈರುಳ್ಳಿಯೆಲ್ಲಾ ನೀರು ಪಾಲಾಗಿತ್ತು. ಅಷ್ಟೋ ಇಷ್ಟೋ ಉಳಿದ ಬೆಳೆಯನ್ನು ಮಾರುಕಟ್ಟೆಗೆ ತಂದ್ರೆ ಕ್ವಿಂಟಲ್ ಈರುಳ್ಳಿಗೆ 100 ರಿಂದ 150 ರೂಪಾಯಿ ಮಾತ್ರ ಹರಾಜು ಕೂಗಲಾಗ್ತಿದೆ. ಇದು ನಮ್ಮ ಆಕ್ರೋಶಕ್ಕೆ ಕಾರಣವಾಗಿದೆ. ಹೀಗಾಗಿ ಬೆಲೆಯ ಕಣ್ಣಾ ಮುಚ್ಚಾಲೆ ಆಟದಿಂದ ಇಂದು ರೈತರ ಆಕ್ರೋಶದ ಕಟ್ಟೆ ಇಂದು ಒಡೆದು ಹೋಯಿತು ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...